ಬದುಕು- ಬವಣೆ

ಬದುಕು- ಬವಣೆ

ಕವಿತೆ ಬದುಕು- ಬವಣೆ ಸಹನಾ ಪ್ರಸಾದ್ ಗಂಡ ಹೆಂಡಿರ ಸಂಬಂಧಸಂಸಾರಕ್ಕೆ ಇದೇ ಮೆರಗುಉಫ಼್ಫ಼್ ಹೇಳಲಾಗದು ಅನುಬಂಧಜತೆಗಿರುವರು ಸಾಯುವವರೆಗೂ ಆದರೆ ಇರಲೇಬೇಕಿಲ್ಲ ಪ್ರೀತಿವ್ಯಾವಹಾರಿಕವಾದರೂ ನಡೆದೀತುಇದ್ದರೆ ಸಮಾಜದ ಭೀತಿಪ್ರೀತಿಯೂ ಗಿಲೀಟು ಬತ್ತಿ ಹೋದ ಮೇಲೆ ಪ್ರೀತಿಯ ಚಿಲುಮೆಜತೆಗಿರುವುದೂ ಅನಿವಾರ್ಯವಾದಾಗಮುದುಡಿದ ಮನಸ್ಸುಗಳಿಗೆ ಎಲ್ಲಿದೆ ಒಲುಮೆಕಿತ್ತೇ ಹೋಯಿತೇನೋ ಅನಿಸುತ್ತೆ ಹೃದಯದ ಭಾಗ ನಮ್ಮ ಸಮಾಜದಲ್ಲಿ ಇಲ್ಲ ವಿಚ್ಚೇದನಒಮ್ಮೆ ಜತೆಗೂಡಿದರೆ ಮುಗಿಯಿತು ಬದುಕುಒಳ್ಳೆ ಜನ ಸಿಗದಿದ್ದರೆ ಬದುಕೇ ವೇದನಸಹಿಸಿಕೊಳ್ಳಬೇಕು ಖಾಲಿಯಾಗುವವರೆಗೂ ಸರಕು! *************************

ಬದಲಾದ ಕಾಲಕ್ಕೆ ಹಳ್ಳಿಯ ಬದುಕು

ಲೇಖನ ಬದಲಾದ ಕಾಲಕ್ಕೆ ಹಳ್ಳಿಯ ಬದುಕು ಸರಿತಾ ಮಧು ಹಳ್ಳಿಗಳ ದೇಶವೇ ನಮ್ಮದು. ಮೊದಲಾದರೆ ಸುಂದರ ಸ್ವರ್ಗದಂತೆ ಇದ್ದವು. ಕೂಡು ಕುಟುಂಬ, ಅದಕ್ಕೆ ಹೊಂದಿಕೊಂಡಂತೆ ಗದ್ದೆ- ತೋಟಗಳು, ರಕ್ತ ಸಂಬಂಧಗಳು ಹಾಗೂ ಮಾನವೀಯ ನೆಲೆಯಲ್ಲಿ ಒಟ್ಟಿಗೆ ಸೇರಿ ನಲಿಯುತ್ತಿದ್ದ ಸಂದರ್ಭಗಳು. ಮೂರು – ನಾಲ್ಕು ತಲೆಮಾರಿನ ಅನುಭವಗಳ ಬೆರೆತ ಸಂಸಾರ. ಮನೆಗಳಲ್ಲಿ ಆಡಂಬರವಿರಲಿಲ್ಲ ಮನಸಿನಲ್ಲಿ ಆತ್ಮೀಯತೆ ಇತ್ತು. ಅವಿಭಕ್ತ ಭಾವ ರಕ್ತಗತವಾಗಿ ಮುಂದುವರೆಯುತ್ತಿತ್ತು. ಹಣಕಾಸಿಗೆ ಅಡಚಣೆಯಿತ್ತು ಅದರ ಹೊರತು ಪರಿಶುದ್ಧವಾದ  ಬದುಕಿಗಲ್ಲ. ನಗರ ಜೀವನಕ್ಕೆ ಮನಸೋತ ಕೆಲವು […]

ರಚ್ಚೆ ಹಿಡಿದ ಮನ

ಕವಿತೆ ರಚ್ಚೆ ಹಿಡಿದ ಮನ ಸ್ವಭಾವ ಕೋಳಗುಂದ ಮಳೆ ನಿಂತ ನೆಲದಲ್ಲಿನಡೆಯುತ್ತಲೇ ಇದ್ದಳುಗುರುತು ಮಾಡಿ ಗುರಿಯೆಡೆಗೆ ಹಸಿಟ್ಟಿಗೆ ಬಿಸಿ ನೀರು ಸುರುವಿತಟ್ಟಿ ಬೆಳರ ಚಿತ್ರದ ಹಚ್ಚೆಬೆಂದ ರೊಟ್ಟಿ ಹಸಿದ ಹೊಟ್ಟಗೆ ಹರಗಿದ ಹೊಲಕ್ಕೆ ಬೀಜ ಬಿತ್ತಿನೀರು ಹಾಯಿಸಿ ಕಳೆ ಕಿತ್ತುಕೊಯ್ಲಿಗೆ ಕಾದು ರಾಶಿ ಪೈರಾಗಿಸಿದ್ದ ರಚ್ಚೆ ಹಿಡಿದ ಕೂಸುನೆಟಿಗೆ ತೆಗೆದು ನೀವಾಳಿಸಿರಂಚು ಬೂದಿಯ ತಿಲಕದ ಕೈಚಳಕ ಗುಡಿಯ ಗಂಟೆಯ ನಾದಕ್ಕೆತಲೆದೂಗಿದ ಎಳೆ ಜೋಳದ ತೆನೆನೊರೆ ಉಕ್ಕಿ ಕೆಚ್ಚಲ ತಂಬಿಗೆ ಸೋರಿತ್ತು ಕೊಟ್ಟಗೆಯ ಕರು ಚಂಗನೆ ಎಗರಿಅಂಗಳದ ರಂಗೋಲಿ […]

ಗಝಲ್

ಗಝಲ್ ಸ್ಮಿತಾ ಭಟ್ ಒಲವಿನ ನಿರೀಕ್ಷೆಯ ಬದುಕ ಮುಗಿಸಿದ್ದೇನೆನಲಿವಿನ ದೀಪದೆದುರು ಕಣ್ಮುಚ್ಚಿ ಕುಳಿತಿದ್ದೇನೆ/ ಯಾರಿಗೆ ಯಾರೂ ಆಸರೆಯಲ್ಲ ಇಲ್ಲಿಸೆರೆಯಾದ ಉಸಿರಿನ ಕೀಲಿ ತೆಗೆದಿದ್ದೇನೆ / ಕ್ಷಮಿಸು ಕಣ್ಣತೇವಕ್ಕೆ ನನ್ನ ಹೊಣೆ ಮಾಡದಿರುಕರವಸ್ತ್ರ ಇರಿಸಿಕೊಳ್ಳುವ ರೂಢಿ ಮರೆತಿದ್ದೇನೆ/ ಮೊಗಕೆ ಒಳಗುದಿಯ ತೋರುವ ಇರಾದೆ ಇಲ್ಲಬರಿದೇ ತರತರದ ಮಾತಾಗಿ ನಗುತ್ತಿದ್ದೇನೆ/ ಬಲಹೀನ ಮನಸು ಏನೂ ಸಾಧಿಸದು ಮಾಧವಾಭವಿತವ್ಯದ ಬಾಗಿಲಿಗೆ ತೋರಣವ ಕಟ್ಟಿದ್ದೇನೆ/ *********************************

ಆಯ್ಕೆ ನಿನ್ನದು

ಕವಿತೆ ಆಯ್ಕೆ ನಿನ್ನದು ಸುಮಾ ಆನಂದರಾವ್ ಜುಳುಜುಳು ಹರಿವ ಝರಿ ತೊರೆಗಳುನಯನ ಮನೋಹರ ಪರ್ವತ ಶಿಖರಗಳುಬಣ್ಣ ಬಣ್ಣದ ಹೂ ಗೊಂಚಲುಗಳುಹೀರಿದ ಮಕರಂದದಿ ಮಧು ಪಾತ್ರೆಯಸಿಹಿ ತುಂಬಿಸಿ ಝೇಂಕರಿಪ ದುಂಬಿಗಳುಕಣ್ಮನ ಸೂರೆಗೊಳ್ಳುವ ಹಚ್ಚ ಹರಿದ್ವರ್ಣಒಳನುಸುಳಲು ಹೊಂಚುಹಾಕುತಿಹ ಸೂರ್ಯಕಿರಣಒಂದೇ ಎರೆಡೇ ಗೋವರ್ಧನ ಗಿರಿ ಸಂಪತ್ತು ಶ್ಯಾಮನೇಕೆಭಾರದ ಗಿರಿಯ ಒಂದೇ ಬೆರಳಲಿ ಹಿಡಿದ ?ಹಗುರಾದ ಕೊಳಲನೇಕೆ ಎರಡು ಕೈಯಲಿ ಪಿಡಿದ!ಅಚ್ಚರಿಯೊಡನೆ ದಿವ್ಯ ಸತ್ಯವೊಂದಿಹುದುಗಿರಿಯಲಿ ಸೌಂದರ್ಯ ತುಂಬಿಕೊಂಡರೂಗಾಢ ಕತ್ತಲು, ಭಯಂಕರ ಮೃಗಗಳು, ಸರೀಸೃಪಗಳುಓಡಲಾಳದಿ ಇವೆಯಲ್ಲವೇ?ಕೊಳಲಾದರೋ ತನ್ನೊಳಗೆ ನುಗ್ಗಿದ ಶ್ವಾಸವನ್ನು ಸಹ ಹಿಡಿದಿಡದೆಸುಶ್ರಾವ್ಯವಾಗಿ ಕಿವಿಗೆ […]

ಒಂದು ಲಸಿಕೆ ಹನಿ

ಕವಿತೆ ಒಂದು ಲಸಿಕೆ ಹನಿ ಕೊಟ್ರೇಶ್ ಅರಸೀಕೆರೆ ತಮ್ಮದಲ್ಲದ ತಪ್ಪಿಗೆ ಜೀವ ತೆತ್ತವರಿಗಾಗಿಬೂದಿ ಮುಚ್ಚಿದ ಕೆಂಡದ ಬದುಕುಒಡಲಲಿಟ್ಟುಕೊಂಡವರಿಗಾಗಿಬರಿಗಾಲಲ್ಲಿ ನಡೆದ ಪುಟ್ಟ ಕಂದಮ್ಮಗಳಿಗೆನನ್ನ ಆತ್ಮಗೌರವ ಬಿಟ್ಟು ಕೇಳಿಕೊಳ್ಳತ್ತೇನೆಒಂದು ಲಸಿಕೆ ಹನಿಯನ್ನು ಚುಮುಕಿಸಿನಿಮಗಾಗಿಯೇ ಓಟು ಒತ್ತುತ್ತೇನೆ! ರಾತ್ರಿಯೆಲ್ಲ ಕೆಮ್ಮಿ ಉಸಿರಿಗಾಗಿ ಹೋರಾಡಿಪ್ರಾಣ ಬಿಟ್ಟವರಿಗಾಗಿಮಕ್ಕಳನ್ನು ಮನೆಯಲ್ಲಿರಿಸಿ ಸೇವೆಗೈದ ವೈದ್ಯದಾದಿಯರಿಗಾಗಿಸೇವೆ ಮಾಡುತ್ತಲೇ ಪ್ರಾಣ ಬಿಟ್ಟವರ ಪರವಾಗಿಮಂಡಿಯೂರಿ ಕೇಳಿಕೊಳ್ಳುತ್ತೇನೆ ಒಂದು ಹನಿಲಸಿಕೆ ಚುಮುಕಿಸಿ ನಿಮಗಾಗಿ ಓಟು ಒತ್ತುತ್ತೇನೆ! ನಾನು ಯಾರಲ್ಲೂ ಹೇಳುವುದಿಲ್ಲ ನೀವು ಪರಮ ದ್ರೋಹಿಗಳೆಂದುನಾನು ಯಾರಲ್ಲೂ ಹೇಳುವುದಿಲ್ಲ ನೀವುಠಕ್ಕ ದೇಶಭಕ್ತರೆಂದುನಾನು ಯಾರಲ್ಲೂ ಹೇಳುವುದಿಲ್ಲ […]

ಈ ರೋಗ…

ಕವಿತೆ ಈ ರೋಗ… ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೊರಗೆ ಕಾಯುತ್ತ ಇದ್ದಾನೆನನಗಾಗಿಕ್ಲಿನಿಕ್ ರಷ್ ಆಗಿದೆಹೇಳಿ ಕೇಳಿಕೋವಿಡ್ ಕಾಲ!ಆತನ ಮನೆಗೆ ಹೋಗಿಬರಬೇಕಿದೆ… ಬೈಕ್ ಹತ್ತಿ ಹೊರಟಾಗಹೊರಟಾಗ ಗಾಢ ಸಂಜೆನಾ ಮುಂದು ಆತ ಹಿಂದೆಯಾರದೋ ಜಮಾನಿನಕಾಲುದಾರಿ ಹಿಡಿದುಹಳ್ಳಿಯಕಡೆ… ಝಗಮಗವಿಲ್ಲದ ಊರಲ್ಲಿಎಲ್ಲೆಲ್ಲೂ ಮಬ್ಬುಗತ್ತಲೆಇಲ್ಲಿ ಈ ಹೆಂಚಿನಮನೆಯೊಳಗೂ ಅರೆಜೀವದಮಿಣುಕುದೀಪಅದೇ ಅವಸ್ಥೆಯಲಿನರಳುತ್ತಮೂಲೆಯ ಮಂಚವೊಂದರಮೇಲುರುಳಿದ್ದವಯೋವೃದ್ಧಆಗಲೇ ಅರೆಜೀವದ ಸೊಪ್ಪು…ಮೂಳೆ ಚಕ್ಕಳ!ಜೊತೆಗೆ ಬಿಡುವಿಲ್ಲದ ಕೆಮ್ಮಿಗೆಉಬ್ಬಿಳಿವ ಹೊಕ್ಕುಳ…ಮೈ ಕೆಂಪಾದ ಜ್ವರದ ತಾಪಉಲ್ಬಣಿಸಿತ್ತುಅಷ್ಟರಲ್ಲಿ ಕ್ಷಯ ಆಸ್ಥಿತಿಗೆ!ಎಂಥ ರೋಗ ಈಜನದ ನಡುವೆ!ಎಲ್ಲಿ ಕೊಡಲಿ ಮದ್ದುಇಲ್ಲಿ ಇಂಥ ಮನೆಯಲ್ಲಿಇಂಥ ರೋಗಿಗೆತೊಟ್ಟಿಮನೆಯಂಥಈ ಕುಟುಂಬದಲ್ಲಿ!ಸಾವಿಗೆ ಒಂದೇ […]

ಅಂಕಣ ಬರಹ ಪಡುವಣ ನಾಡಿನ ಪ್ರೇಮವೀರ ಪಡುವಣ ನಾಡಿನ ಪ್ರೇಮವೀರಇಂಗ್ಲಿಷ್ ಮೂಲ : ಜೆ.ಎಂ. ಸಿಂಜ್ ಕನ್ನಡಕ್ಕೆ : ಡಾ.ಬಸವರಾಜ ನಾಯ್ಕರ್ಗೀತಾಂಜಲಿ ಪಬ್ಲಿಕೇಷನ್ಸ್ಪ್ರಕಟಣಾ ವರ್ಷ : ೨೦೦೮ಬೆಲೆ : ರೂ.೧೨೫ಪುಟಗಳು : ೨೪೦ ಐರ್‌ಲ್ಯಾಂಡಿನ ಪ್ರಸಿದ್ಧ ನಾಟಕಕಾರ ಜೆ.ಎಂ.ಸಿಂಜ್‌ನ ಐದು ನಾಟಕಗಳು ಇಲ್ಲಿವೆ. ಸುಸಂಸ್ಕೃತ ಮನೆತನದಲ್ಲಿ ಹುಟ್ಟಿ ಬೆಳೆದ ಸಿಂಜ್ ತನ್ನ ಬಾಲ್ಯವನ್ನು ದಕ್ಷಿಣ ಡಬ್ಲಿನ್‌ನ ಗುಡ್ಡಗಾಡು ಪ್ರದೇಶದಲ್ಲಿ ಕಳೆದಿದ್ದ. ಆದ್ದರಿಂದಲೇ ನಿಸರ್ಗ ಸೌಂದರ್ಯದ ಬಗ್ಗೆ ಅಪಾರ ಒಲವನ್ನು ಅವನು ಬೆಳೆಸಿಕೊಂಡ. ಅವನ ನಾಟಕಗಳಲ್ಲಿ ಹಳ್ಳಿಯ ಬದುಕಿನ […]

ಬದುಕಲಿ ಅವಳು

ಕವಿತೆ ಬದುಕಲಿ ಅವಳು ತಿಲಕ ನಾಗರಾಜ್ ಬಿಟ್ಟು ಬಿಡಿ ಅವಳನುಅವಳ ಪಾಡಿಗೆಬದುಕಲಿ ಅವಳು…. ನಿಮ್ಮ ನಿರ್ಧಾರಗಳೇಸುಟ್ಟಿರುವಾಗಅವಳ ಬದುಕಅಳಿದುಳಿದವುಗಳನೇಜೋಡಿಸಿ ಮುನ್ನಡೆಯಲಿ ಬಿಡಿ ಕಣ್ಮುಂದೆ ಕುಣಿದುಅಣಕಿಸುತಿರುವಾಗ ಅವಳುಕಂಡ ಕನಸುಗಳುಈಡೇರದ ಆಸೆಗಳು ಚಾಟಿಯೇಟಿನಂತೆ ಮೈಮನದ ತುಂಬೆಲ್ಲಾ ನೋವಬರೆಗಳ ಎಳೆಯುತಿರಲುಕೆನ್ನೆಯ ತುಂಬೆಲ್ಲಾ..ಕಂಬನಿಯ ಬಿಂದುಗಳು ಬಿಟ್ಟುಬಿಡಿ ಅವಳನುಅವಳ ಪಾಡಿಗೆಆಗಲೇ ದಾಟಿತಲ್ಲ ಮೂವತ್ತು ಎಲ್ಲದಕೂ ಆಕ್ಷೇಪಿಸುವ ನೀವುಗಳುಕೊಟ್ಟಿರೇ ಒಂದೊಳ್ಳೆ ಬದುಕನು?ಇನ್ನಾದರೂ ಬಿಟ್ಟು ಬಿಡಿ ಅವಳನುನಿಮ್ಮ ಬಂಧನದ ಕಟ್ಟಳೆಗಳಿಂದ ಕಟ್ಟಿಕೊಳ್ಳಲಿ ಒಂದೊಳ್ಳೆ ಬದುಕನು ***********************************

ಬದಲಾಗುವ ಸತ್ಯ

ಕವಿತೆ ಬದಲಾಗುವ ಸತ್ಯ ನೂತನ ದೋಶೆಟ್ಟಿ ನಿನ್ನೆಗಳ ಬಾನಲ್ಲಿ ನಿನ್ನ ನಗುವಿನ ನಕ್ಷತ್ರ‘ ಶೂಟಿಂಗ್ ಸ್ಟಾರ್ ‘ ಎಂದ ಗೆಳತಿಯ ಪುಳಕಮರೆತ ಜಿಜ್ಞಾಸೆಎದುರಲ್ಲಿ ನಿನ್ನ ಗುರಿಗಳು ಅವಳ ಪಿಟಿಪಿಟಿಸುವ ಬಾಯಲ್ಲಿಅವಸರದ ಬೇಡಿಕೆಗಳುನನ್ನ ಮುಚ್ಚಿದ ಕಂಗಳಲ್ಲಿನಿನ್ನ ಕನಸುಗಳ ಹಾರೈಕೆನಿನ್ನೆಯವರೆಗೆ ಇದೆಲ್ಲ ಸತ್ಯ ಇಂದುನೀನು, ನಕ್ಷತ್ರ , ಕನಸು ನನ್ನ ಮುಖದಲೊಂದು ಮುಗುಳ್ನಗೆತುಟಿಯಂಚಿನ ಅಚ್ಚರಿಗಲ್ಲದಲ್ಲೂರಿ ಕುಳಿತ ವಾಸ್ತವಶೂಟಿಂಗ್ ಸ್ಟಾರಿನತ್ತ ಹರಿದು ನೋಟನಾಳಿನ ಸತ್ಯಕ್ಕೆ ಸಿದ್ಧವಾಗಿತ್ತು. **********************

Back To Top