ಕಾವ್ಯಯಾನ

ಕಾವ್ಯಯಾನ

ಮಬ್ಯಾನ್ ಮಾತು! ರುದ್ರಸ್ವಾಮಿ ಹರ್ತಿಕೋಟೆ ಮಬ್ಯಾನ್ ಮಾತು! ೧) ಧ್ಯಾನಕ್ಕೆ ಕುಳಿತವರನ್ನು ಹೆಚ್ಚು ಕಾಡುವುದು ಅವಳು ಮತ್ತು ಅವಳು ಮಾತ್ರ! ೨) ಅವಳು ಪತಿವ್ರತೆ ಎಂದು ಮಾತಾನಾಡುವವರು ಅವಳ ಬೆತ್ತಲೆ ಕನಸ ಕಾಣದೆ ಇರರು! ೩) ಅವನು ಎಷ್ಟು ರಸಿಕನೆಂಬುದು ಅವನ ಹೆಂಡತಿಗಿಂತ ಅವನ ಸೆಕ್ರೆಟರಿಗೆ ಗೊತ್ತು! ೪) ಕವಿ ಬರೆದದ್ದನ್ನು ಕವಿಯೇ ಅರ್ಥೈಸಿದರೆ ರಸಭಂಗವಾಗುತ್ತದೆ! ೫) ಇಲ್ಲಿ ಹೆಚ್ಚು ಪ್ರೀತಿಸುವವರು ಹುಚ್ಚರಾಗುತ್ತಾರೆ ಇಲ್ಲವೇ ಹುತಾತ್ಮರಾಗುತ್ತಾರೆ! ೬) ಗಂಡಿಗಿಂತ ಹೆಣ್ಣು ಮೊದಲ ರಾತ್ರಿ ಏನೂ ಗೊತ್ತಿಲ್ಲದಂತೆ ನಟಿಸುತ್ತಾಳೆ! […]

ನಾನು ಓದಿದ ಪುಸ್ತಕ

ಮೌನ ಮಂದಾರ ಕವಿ: ವಾಣಿ ಮಹೇಶ್ ಕವಯಿತ್ರಿ ವಾಣಿ ಮಹೇಶ್ ರವರ “ಮೌನಮಂದಾರ” ಪುಸ್ತಕ *ಎಪ್ಪತ್ತು ಕವನಗಳ ಮುಪ್ಪುಬರುವವರೆಗೂ ಓದಬೇಕು ಬೆಪ್ಪ* ಎನ್ನುವ *ಮೌನ ಮಂದಾರ*         ಮನದಲ್ಲಿ ಮತ್ತೇರಿ ಮಿಡಿದ ಭಾವನಾತ್ಮಕತೆ ಗೆ ಕೊನೆಯಿಲ್ಲ, ಎತ್ತೆತ್ತ ಸುತ್ತಿದರು ಅಂತ್ಯವಿಲ್ಲ, ಹೊತ್ತು ಮುಳುಗಿದರೂ ಪತ್ತೆ ಮಾಡುವ ಅವಕಾಶವನ್ನು ಕೊಡುವುದಿಲ್ಲ, ಅತ್ತುಅತ್ತು ಉತ್ತರಗಳು ಕಣ್ಣೀರ ಹಾಕದಿದ್ದರೆ ಮತ್ತೇರಿದ ನುಡಿಗಳು ಮೌನಿಯಾಗಿಸಿ ಸುತ್ತುವರಿಯುತ್ತವೆ. ನುಡಿಯದೇ ಭಾವನಾಕ್ಷರಗಳ ಪೋಣಿಸಿ ಗೀಚುತ್ತಿದ್ದರೆ, ಆ “ಮೌನ ಮಂದಾರ ಪುಷ್ಪ ವಾಗಿ ತನ್ನ ಸಕಲ ಶ್ರೇಷ್ಠ […]

ಕಾವ್ಯಯಾನ

ನಿವೇಧನ ಬಿ ಅರುಣ್ ಕುಮಾರ್ ಮಧುರ ಭಾವಗಳ ಸಂಕ್ರಮಣ ಪ್ರೇಮಾಮೃತದ ಹೊಂಗಿರಣ ಬಂಧು ಬಾಂಧವರ ತೋರಣ ಸಪ್ತಪದಿ ಮಾಂಗಲ್ಯಧಾರಣ ಓಲಗ ಅಕ್ಷತೆಯ ಸಂಗಮ ಭಾವ ಭಾವಮೈದುನ ಬಾಂಧವ್ಯ ಕುಟುಂಬಗಳೆರಡರ ಕಲ್ಯಾಣ ಗಟ್ಟಿಮೇಳದ ಪರಿಣಯ ರತಿ ಪತಿ ದಾಂಪತ್ಯ ಸ್ಫೂರ್ತಿ ಮಂದ ಪ್ರಕಾಶ ಅರುಂಧತಿ ದೇಹವೆರಡು ಸೀತಾರಾಮ ದಾರಿಯೊಂದು ಅರ್ಧನಾರೀಶ್ವರ ಅನುರಾಗದ ಮಧು ಚಂದ್ರ ಮಿಥುನ ಹಕ್ಕಿಗಳ ಸಮ್ಮಿಲನ ಹಸಿರುಮಲೆಗೆ ಗರ್ಭಧಾರಣ ಶುಭ ಕಾಮನೆಯ ಹೂರಣ ಸರಸ ವಿರಸಗಳ ಆಲಿಂಗನ ಸಹಬಾಳ್ವೆಯಲಿ ಸಂತಾನ ರಂಗಿನ ರಂಗೋಲಿ ಅಂಗಳ ಮನ […]

ಕಾವ್ಯಯಾನ

ಬದುಕು ಎನ್. ಆರ್. ರೂಪಶ್ರೀ ಬೀಸುವ ಗಾಳಿ ಹಾರುವ ಮುಂಗುರುಳು ಮತ್ತೆ ನೀಡಬಹುದು ಹೊಸ ಸಂತೋಷ. ಬಾನ ಚುಕ್ಕಿ ಹೊಳೆಯುವ ಚಂದಿರ ಮತ್ತೆ ಬರಬಹುದು ಆನಂದ. ಹಕ್ಕಿಯ ಗಾನ ಮರಗಳ ಕಲರವ ಮತ್ತೆ ತರಬಹುದು ಚೇತನ. ತಿಳಿ ನೀರ ಅಲೆಗಳಲ್ಲಿ ತೇಲುತ್ತಾ ಸಾಗುವ ಗುಳ್ಳೆಗಳ ನಡುವೆ ಮತ್ತೊಮ್ಮೆ ಚಿಮ್ಮಬಹುದು ಚಿಲುಮೆ. ಇಂತಹ ಎಲ್ಲಾ ಆಶಾ ಭಾವನೆಗಳ ನಡುವೆ ಜೀವಿಸಲೇಬೇಕಾದ ಅನಿವಾರ್ಯತೆ. ಇದ್ಯಾವುದೂ ಆಗದಿದ್ದರೂ ಆಗುತ್ತದೆ ಎನ್ನುವ ನಂಬಿಕೆ ಬಹುಶ: ಇದೇ ಇರಬಹುದು ಬದುಕು. ********

ಪ್ರಸ್ತುತ

ಪ್ರಕೃತಿ ಹೇಳಿದ ಪಾಠ ಗಣೇಶ್ ಭಟ್ ಕೊರೊನಾ ಮುಖಾಂತರ ಪ್ರಕೃತಿ ಹೇಳಿದ ಪಾಠ ವ್ಯಕ್ತಿ ಅಥವಾ ಸಮುದಾಯದ ಬದುಕಿನಲ್ಲಿ ನಡೆಯುವ ಯಾವ ಘಟನೆಯೂ ಆಕಸ್ಮಿಕವಲ್ಲ. ಪ್ರತಿಯೊಂದಕ್ಕೂ ಒಂದು ಕಾರಣವಿರುತ್ತದೆ; ಅದು ತಿಳಿಯದಾಗ ನಾವು ಆಕಸ್ಮಿಕ ಎಂದು ಹೇಳುತ್ತೇವೆ ಅಥವಾ ಹಾಗೆ ಭಾವಿಸುತ್ತೇವೆ. ಇಡೀ ಮಾನವ ಕುಲವನ್ನು ನಡುಗಿಸುತ್ತಿರುವ ಕೊರೊನಾ ಸಾಂಕ್ರಾಮಿಕ ಪಿಡುಗೂ ಕೂಡಾ ಆಕಸ್ಮಿಕವಲ್ಲ. ಪ್ರಕೃತಿಯ ಮೇಲೆ ಮಾನವ ನಡೆಸಿದ, ನಡೆಸುತ್ತಿರುವ ದೌರ್ಜನ್ಯದ ಪ್ರತಿಕ್ರಿಯೆ ಅಷ್ಟೇ. ಕಳೆದ ಮೂರು ಶತಮಾನಗಳಿಂದ ಮಾನವ ನಿರ್ಮಿಸಿಕೊಂಡಿದ್ದ ಆರೋಗ್ಯ ಸೌಲಭ್ಯಗಳು, ಆಧುನಿಕ […]

ಕಾವ್ಯಯಾನ

ಬದುಕು ಬೀಸುವ ಗಾಳಿ ಹಾರುವ ಮುಂಗುರುಳು ಮತ್ತೆ ನೀಡಬಹುದು ಹೊಸ ಸಂತೋಷ. ಬಾನ ಚುಕ್ಕಿ ಹೊಳೆಯುವ ಚಂದಿರ ಮತ್ತೆ ಬರಬಹುದು ಆನಂದ. ಹಕ್ಕಿಯ ಗಾನ ಮರಗಳ ಕಲರವ ಮತ್ತೆ ತರಬಹುದು ಚೇತನ. ತಿಳಿ ನೀರ ಅಲೆಗಳಲ್ಲಿ ತೇಲುತ್ತಾ ಸಾಗುವ ಗುಳ್ಳೆಗಳ ನಡುವೆ ಮತ್ತೊಮ್ಮೆ ಚಿಮ್ಮಬಹುದು ಚಿಲುಮೆ. ಇಂತಹ ಎಲ್ಲಾ ಆಶಾ ಭಾವನೆಗಳ ನಡುವೆ ಜೀವಿಸಲೇಬೇಕಾದ ಅನಿವಾರ್ಯತೆ. ಇದ್ಯಾವುದೂ ಆಗದಿದ್ದರೂ ಆಗುತ್ತದೆ ಎನ್ನುವ ನಂಬಿಕೆ ಬಹುಶ: ಇದೇ ಇರಬಹುದು ಬದುಕು. ******

ಕಾವ್ಯಯಾನ

ಕೊನೆಯ ಸತ್ಯ 6 ಶಾಲಿನಿ ಆರ್. ಮುಳ್ಳು ಗಿಡಗಂಟಿಗಳ ಜಾಡು ಮುಗಿಯದ ದಾರಿಯಿದು ಬರಿ ಕಾಡು, ಪಾಚಿ ಗಟ್ಟಿದ ನೆಲಕೆ ಆರದ ನೋವ ಜಾರುತಿರುವ ಸಂಬಂಧಗಳ  ಅವಯವ, ಅಂತರಂಗಕಿದು ಆಳದ ಅರಿವಿಲ್ಲ ಬರಿ ಹೂಳು ತುಂಬಿದೆ ಆಳದೆಲ್ಲೆಲ್ಲ, ಬೆಚ್ಚಗಿನ ನೆನಪಿಗು ಚಳಿಯ ಜಾಡು ಸದ್ದಿಲದೆ ಮುರಿಯುತಿದೆ ಮನದ ಎಲುಬಿನ ಗೂಡು, ತರ ತರದ ಪ್ರೀತಿಗು ಮುಖವಾಡದ  ತುತ್ತು, ಬಿಂಕದಲಿ ಬೀಗುತಿದೆ ಭ್ರಮೆ’ ನನ್ನ ಸೊತ್ತು, ಹೂಳ ತೆಗೆಯದ ಹೊರತು ಕೇಳ, ತಿಳಿಯದು ಅಂತರಾಳದ ಮೇಳ, ಅರಿಯಲಾರದ ನಿಜತನ […]

ಅನುವಾದ ಸಂಗಾತಿ

ಮೂಲ: ಆಕ್ತೇವಿಯೋ ಪಾಜ಼್ (ಮೆಕ್ಸಿಕನ್ ಕವಿ) ಹೋಗಿ ಬರುವ ನಡುವೆ ಮೇಗರವಳ್ಳಿ ರಮೇಶ್ ಹೋಗುವ ಮತ್ತು ಉಳಿಯುವ ನಡುವೆಹೊಯ್ದಾಡುತ್ತದೆ ದಿನತನ್ನದೇ ಪಾರದರ್ಶಕತೆಯ ಮೇಲಿನ ಪ್ರೀತಿಯಲ್ಲಿಶೂನ್ಯ ಮಧ್ಯಾಹ್ನ ಈಗೊ೦ದು ಕೊಲ್ಲಿ.ಸ್ತಬ್ದ ಜಗತ್ತು ಅಪ್ಪಳಿಸುವುದಲ್ಲಿ. ಎಲ್ಲವೂ ಸ್ಪಷ್ಟ ಮತ್ತು ಎಲ್ಲವೂ ಗ್ರಹಿಕೆಗೆ ದೂರಎಲ್ಲವೂ ಹತ್ತಿರ ಮತ್ತು ನಿಲುಕಿಗೆ ದೂರ. ಕಾಗದ, ಪುಸ್ತಕ, ಪೆನ್ಸಿಲ್ಲು, ಗಾಜಿನ ಲೋಟತಮ್ಮ ತಮ್ಮ ಹೆಸರಿನ ನೆರಳಲ್ಲಿ ವಿಶ್ರಮಿಸಿವೆ. ನನ್ನಕಪೋಲಗಳಲ್ಲಿ ಮಿಡಿವಕಾಲ ಪುನರುಚ್ಛರಿಸುತ್ತದೆಬದಲಾಗದ ರಕ್ತದ ಅದೇ ಪದವನ್ನ. ಬೆಳಕು ನಿರ್ಲಕ್ಷ್ಯ ಗೋಡೆಯನ್ನು ಬದಲಿಸುವುದುಪ್ರತಿಫಲನಗಳ ಭಯ೦ಕರ ರ೦ಗವನ್ನಾಗಿ. ಕಣ್ಣೊ೦ದರ […]

ಕಾವ್ಯಯಾನ

ಗಝಲ್ ಈರಪ್ಪ ಬಿಜಲಿ ಮನದ ಕತ್ತಲು ಕಳೆದು ಜ್ಯೋತಿ ಬೆಳಗುವದು ಪುಸ್ತಕ ನಿಜ ಸಂಗಾತಿ ಜೀವದ ಭಾವನೆಗಳ ಭಾವನಾಲೋಕದಲಿ ತೇಲಿಸುವದು ಪುಸ್ತಕ ನಿಜ ಸಂಗಾತಿ।। ವ್ಯಕ್ತಿಯ ವ್ಯಕ್ತಿತ್ವದ ನಿರ್ಮಾಣವನು ಚೆಂದದಿ ಮಾಡುವುದು, ಯುಕ್ತಿಯ ಬಳಕೆಮಹತ್ವ ಸಾರುವ ಸಾಧನವಿದು ಪುಸ್ತಕ ನಿಜ ಸಂಗಾತಿ ।। ಮನುಜನನ್ನು ಸುಸಂಸ್ಕೃತನಾಗಿ ಪರಿವರ್ತನೆಗೊಳಿಸುವದು, ನಾಗರಿಕತೆ ಬೆಳೆಸಿ ಅನಾಗರಿಕತೆ ತೊಲಗಿಸುವದು ಪುಸ್ತಕ ನಿಜ ಸಂಗಾತಿ ।। ಜ್ಞಾನಕೋಶವನು ನಿತ್ಯ ತುಂಬಿಸಿ ಜ್ಞಾನಭಂಡಾರ ವೃದ್ಧಿಸುವದು, ಅಜ್ಞಾನದಿಂದ ಸುಜ್ಞಾನದ ಕಡೆಗೆ ಸಾಗಿಸುವದು ಪುಸ್ತಕ ನಿಜ ಸಂಗಾತಿ ।। […]

ಕಾವ್ಯಯಾನ

ಕವಿತೆಗೀಗ ಪುರುಸೊತ್ತಿಲ್ಲ! ವೈ.ಎಂ. ಯಾಕೋಳ್ಳಿ ಮತ್ತೆ ಮತ್ತೆ ಹರಿದು ಬರುವ ಕೆನ್ನೆತ್ತರ ಕಾವಲಿಯಲ್ಲಿ ಬಲಿಯಾದ ತನ್ನ ಕರುಳ ಕುಡಿಯ ಅರಸುತ್ತಿದೆ ಕವಿತೆ ಅದಕ್ಕೀಗ ಪದ ವಾಗಲು ಪುರುಸೊತ್ತಿಲ್ಲ ಅಪ್ಪನ ಬೆವರ ಹನಿ ಅವ್ವನ ಕೈತುತ್ತು ತಿಂದು ,ಪಾಠಶಾಲೆಯ ಪುಸ್ತಕದ ನಡುವೆ ಓದಿದ ಆದರ್ಶಗಳ ನೆಟ್ಟ ದಾರಿಯಲಿ ನಡೆದ ಕವಿತೆಗೆ ಎರಡು ಹೊತ್ತಿನ ಕೂಳು ಸಿಗದೆ ಪರದಾ ಡು ತ್ತಿದೆ ಅದಕ್ಕೀಗ ಪದ ವಾಗಲೂ ಪುರುಸೊತ್ತಿಲ್ಲ ತನ್ನದೇ ಓನಿಯ ಎಳೆಯ ಎದೆಗಳು ಎಲ್ಲಿಯೋ ಜೈಕಾರ ಹಾಕಿ,ಎಲ್ಲಿಯೋ ಮಲಗಿ ಯಾರದೋ […]

Back To Top