ಅರಿವೇ ಗುರು

ಅರಿವೇ ಗುರು

ಕವಿತೆ  ಅರಿವೇ ಗುರು ವಸುಂಧರಾ ಕದಲೂರು ದೀಪ ಆರಿಸಿಬಿಟ್ಟೆ; ಸೂರ್ಯನೂಮುಳುಗಿದ. ಕತ್ತಲೆಂದರೆ- ಕತ್ತಲೀಗಒಳಹೊರಗೂ.. ಮೌನಕ್ಕೆ ಶರಣಾದೆ, ಕಿವುಡುತನದಲಿ.ಶಾಂತಿಯೆಂದರೆ ಶಾಂತಿಯೀಗ ಒಳಹೊರಗೂ.. ಇತಿಮಿತಿಗಳ ಅರಿವಾಯ್ತು,ನನ್ನದೂ ಮತ್ತವರಿವರದು.ಜಾಗರೆಂದರೆ ಜಾಗರೂಕಳೀಗ.ಒಳಹೊರಗೂ.. ಮಮತೆಯ ಕಣ್ತೆರೆದು, ಒಲವಿನಲಿನೋಡಿ ನುಡಿದೆ. ಹರುಷವೆಂದರೆಹರುಷವೀಗ. ಒಳಹೊರಗೂ.. ದೀಪ ಹಚ್ಚಿಟ್ಟೆ, ಬೆಳಕ ಹಂಬಲದಲಿ. ಇರುಳಿನಿಂದ ಸೂರ್ಯನೆದ್ದುಬಂದ. ಬೆಳಕೆಂದರೆ ಬೆಳಕೀಗಒಳಹೊರಗೂ.. ************

ವಾರದ ಕವಿತೆ ಜೋಕಾಲಿ ಚೈತ್ರಾ ಶಿವಯೋಗಿಮಠ ಮೇಲೆ ಮೇಲೆ ಮ್ಯಾಗಜೂರಿ ಜೀಕಬೇಕು ನಾನುಹಳ್ಳ ಹೊಳಿ ಕಡಲು ಕಾಣಬೇಕಹಸುರ ಹೊದ್ದ ಕಾನು ಮಗುವಿನ್ಹಾಂಗ ಕ್ಯಾಕಿ ಹಾಕಿಹಾರಬೇಕ ಮ್ಯಾಲೆಕಾಣಬೇಕ ಮನಿ ಮಾಳಿಗಿಹಬ್ಬಿದ ಹೂ ಬಳ್ಳಿ ಅಲ್ಲೆ ಜೋಕಾಲಿ ಕಟ್ಟಿ ಜೀಕಿದರರೆಕ್ಕಿ ಬ್ಯಾಡ ಪುಕ್ಕಾ ಬ್ಯಾಡಬೆಳ್ಳಿ ಮುಗಲ ಅನಾಯಾಸಹಂಗ ಮುಟ್ಟಬೋದು ನೋಡ ಬರ್ರಿ, ಬೆಟ್ಟ ಕಣವಿ ಗುಡಿ ಬಯಲದಾಟಿ ಮುಂದಕ ಜೀಕೋಣುಸ್ವಚ್ಛಂದ ಆಕಾಶದಾಗ ಹಕ್ಕಿಹಂಗಹಾಡಾ ಹಾಡಿ ಸಿಳ್ಳಿ ಹಾಕೋಣು ಹಾರಿದ್ಹಂಗ ಏರಿದ್ಹಂಗ ಚಂದಗಾಳಿ ಜೋಡಿ ಮುಂಗುರುಳ ಸರಸಚಂದವದು, ಸ್ವರ್ಗದ ಬಾಗಿಲು ತಟ್ಟಿಮತ್ತ […]

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….8 ನಾನೂ ಶಾಲೆಗೆ ಸೇರಿದೆ… ಅಪ್ಪನಿಗೆ ಅಲಗೇರಿಯಿಂದ ಕುಮಟಾ ತಾಲೂಕಿನ ಹನೇಹಳ್ಳಿ ಶಾಲೆಗೆ ವರ್ಗವಾಯಿತು. ಮತ್ತೆ ನಾವು ನಮ್ಮ ತಾಯಿಯ ತೌರೂರು ನಾಡುಮಾಸ್ಕೇರಿಗೆ ಬಂದು ನೆಲೆಸಬೇಕಾಯಿತು. ನಾಡು ಮಾಸ್ಕೇರಿಯಲ್ಲಿ ಆಗ ನಮ್ಮ ಜಾತಿಯ ಜನಕ್ಕೆ ಸ್ವಂತ ಭೂಮಿಯೆಂಬುದೇ ಇರಲಿಲ್ಲ. ಕೆಲವು ಕುಟುಂಬಗಳು ನಾಡವರ ಜಮೀನಿನ ಒಂದು ಮೂಲೆಯಲ್ಲಿ ಆಶ್ರಯ ಪಡೆದು ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದರು. ನಾಡುಮಾಸ್ಕೇರಿಯಲ್ಲಿ ನಾಡವರು ಇದ್ದುದರಲ್ಲಿಯೇ ಸ್ಥಿತಿವಂತರಾಗಿದ್ದರು. ಎಲ್ಲ ಕುಟುಂಬಗಳಿಗೂ ಅಲ್ಪಸ್ವಲ್ಪ ಬೇಸಾಯದ ಭೂಮಿಯೂ […]

ಶಿಶಿರ

ಕವಿತೆ ಶಿಶಿರ ಎಂ.ಆರ್. ಅನಸೂಯ ನೆನಪಿಸುತ್ತಿಲ್ಲಶಿಶಿರದಇಬ್ಬನಿ ಹನಿಮುತ್ತಿನ ಮಣಿಯಕಾಡುತ್ತಿದೆಯಲ್ಲಇಬ್ಬನಿಯಹಿಮ ಕೊರೆವ ಚಳಿಯಲ್ಲೇರಾಜಧಾನಿಯ ಬಯಲಲ್ಲೇಕೂತ ರೈತನ ಪಾಡು !ಜತೆಯಲ್ಲೇಕಲ್ಲು ಮನದ ರಾಜನೂ ! ನೆನಪಿಸುತ್ತವೆಶಿಶಿರದಬೋಳು ಮರಗಳುಭರವಸೆ ಕಾಣದಕೃಷಿಕನ ಬವಣೆಯ ಬದುಕುಲಾಠಿ ಎತ್ತಿದ ಕೈಗೂರೊಟ್ಟಿಯಿತ್ತ ಅನ್ನದಾತನ ಕೂಗುಕೇಳಿಸದುಜಾಣ ಕಿವುಡಿನ ದೊರೆಗೆ ************************

ಸಂ ‘ಕ್ರಾಂತಿ’

ಕವಿತೆ ಸಂ ‘ಕ್ರಾಂತಿ’ ತೇಜಾವತಿ ಹೆ್ಚ್.ಡಿ. ಪುರಾಣದ ನೋಟದಲಿ,ವಿಜ್ಞಾನವು ಇಣುಕಿಸಂಪ್ರದಾಯ ಮಾತನಾಡಿ,ಕೃತಜ್ಞತೆ ಕೈಹಿಡಿದನವ ಬದುಕಿನ ಸಂ’ಕ್ರಾಂತಿ’ಎಳ್ಳು-ಬೆಲ್ಲದೊಂದಿಗೆ ಕರಣದಲಿ ಕಳೆದುಹೋದಹೊಸ ಹುರುಪಿನ ಶ್ರವಣ ಪುಷ್ಯ ವೇಷ ಧರಿಸಿ ಹೊರಬರುತಿದೆ ನವಕ್ರಾಂತಿ ಧರೆ ಪರಿಭ್ರಮಿಸುವ ಗಳಿಗೆದಿನ ರಾತ್ರಿಹಗಲು ಇರುಳುಬೆಳಗು ಕತ್ತಲುಹೀಗೆ ಮಾಸ ಅಯನಗಳ ವರ್ತನೆಉತ್ತರಾಯಣ ತಿರುಗಿ ಸಂಕ್ರಮಣ ಮೂಡಿಬೆಳೆಯ ತಲೆಯ ಇಳೆಗೆ ಬಾಗಿಸುತಸೂರ್ಯರಶ್ಮಿ ಹೊಳಪು ನವಭಾವದ ಕಂಪು ಎಲ್ಲವುಗಳಂತಲ್ಲ ಈ ಹಬ್ಬ!ವರ್ಷವಿಡೀ ತನ್ನೊಡೆಯನಿಗಾಗಿ ದುಡಿದು ದಣಿದಜಾನುವಾರುಗಳ ಅಲಂಕರಿಸಿ,ಪೂಜಿಸಿಮೆರವಣಿಗೆ ಮಾಡಿ,ಕಿಚ್ಚು ಹಾಯಿಸಿಗೋವಿಗೂ ಕೃತಜ್ಞತೆಯ ಅರ್ಪಿಸುವ ಕಾಯಕಬ್ಬ ಹಾಡು ಪಾಡುಎಳ್ಳು ಬೆಲ್ಲ ಹಂಚುವನವೀನ […]

ಏಕತಾರಿಯ ಸಂಚಾರಿ ಸ್ವರಗಳು

ಕಾತ್ಯಾಯಿನಿ ಕುಂಜಿಬೆಟ್ಟು ಬರೆಯುತ್ತಾರೆ
ಹೊರ ದಾರಿಯಲ್ಲಿ ನೀನು ನಡೆದು ದೂರ ಹೋಗಿ ಬಿಡು
ನಿನ್ನದೇ ಕನಸುಗಳ ಊರಿಗೆ
ಕಡಲಾಚೆಯ ಆ ದೇಶಕೆ

ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ

ಲಲಿತ ಪ್ರಬಂಧ ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ… ಟಿ.ಎಸ್.ಶ್ರವಣಕುಮಾರಿ ಇಮಾಂ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ’ ಎಂದು ಹೇಳುವಂತೆ ‘ಸಲಾಂ ಸಾಬಿಗೂ ಸಂಕ್ರಾಂತಿಗೂ ಏನು ಸಂಬಂಧ’ ಎಂದು ಹುಬ್ಬೇರಿಸುತ್ತೀರೇನೋ! ಪ್ರತಿ ಸಂಕ್ರಾಂತಿಗೂ ಸಲಾಮನನ್ನು ನೆನಸಿಕೊಳ್ಳದೆ ನನಗೆ ಸಂಕ್ರಾಂತಿ ಹಬ್ಬ ಆಗುವುದೇ ಇಲ್ಲ. ಈಗೊಂದೈವತ್ತು ವರ್ಷಗಳ ಹಿಂದೆ ಜನಸಾಮಾನ್ಯರಿಗೆ ಶಿವಮೊಗ್ಗದಲ್ಲಿ ಸಂಚಾರಕ್ಕೆ ಇದ್ದದ್ದು ಎರಡೇ ರೀತಿ. ಮೊದಲನೆಯದು ನಟರಾಜ ಸರ್ವೀಸ್ ಅಂದರೆ ಕಾಲ್ನಡಿಗೆಯಲ್ಲಿ ಹೋಗುವುದು; ಇನ್ನೊಂದು ಕುದುರೆ ಗಾಡಿ. ಕಾರೆನ್ನುವುದು ಅತಿ ಶ್ರೀಮಂತರ ಸೊತ್ತು ಬಿಡಿ; ನಮದಲ್ಲ. ಊರಲ್ಲಿ […]

Back To Top