ಗಜಲ್

ಗಜಲ್

ಗಜಲ್ ರತ್ನರಾಯ ಮಲ್ಲ ಇಲ್ಲಿ ಚುನಾವಣೆಯ ಹಸಿವು ಹೆಚ್ಚಾಗುತಿದೆಮುಖಂಡರುಗಳ ಓಡಾಟವು ಹೆಚ್ಚಾಗುತಿದೆ ಗಲ್ಲಿ-ಗಲ್ಲಿಗಳಲ್ಲಿ ಓಟು-ನೋಟಿನದ್ದೆ ಮಾತುಮನೆ-ಮನಗಳಲ್ಲಿ ಮತ್ಸರವು ಹೆಚ್ಚಾಗುತಿದೆ ಶಾಂತಿಗಾಗಿ ಅವಿರೋಧವೆ ಚಂದ ಎನ್ನುವರುಕೋಟಿ ಕಬಳಿಸುವ ದಾಹವು ಹೆಚ್ಚಾಗುತಿದೆ ಊರು ಉದ್ಧಾರದ ಮಾತುಗಳು ಕೇಳುತಿವೆದೊಡ್ಡವರಲ್ಲಿ ತಿನ್ನುವ ಗುಣವು ಹೆಚ್ಚಾಗುತ್ತಿದೆ ಬೇಲಿಯೇ ಎದ್ದು ಹೊಲ ಮೇಯುತಿದೆ ‘ಮಲ್ಲಿ’ಜನರ ಮನಸುಗಳಲ್ಲಿ ಕ್ರೋಧವು ಹೆಚ್ಚಾಗುತಿದೆ ******************************

ಗಜಲ್

ಗಜಲ್ ಶುಭಲಕ್ಷ್ಮಿ ಆರ್ ನಾಯಕ ಇತರರ ಅಲ್ಲ ಸಲ್ಲದ ನುಡಿಗೆ ನೋಯದಿರು ಗೆಳತಿಪರರು ಆಡುವ ಬಿರುನುಡಿಗಳಿಗೆ ಅಂಜದಿರು ಗೆಳತಿ ನಿನ್ನಾತ್ಮ ಸಾಕ್ಷಿಯದು ನಿಜವನ್ನೇ ನುಡಿಯುವಾಗಕುಹಕಿಗಳ ಕುಹಕಕ್ಕೆ ಮನಕೆಡಿಸಿಕೊಳದಿರು ಗೆಳತಿ ಧರಣಿಯ ಮನುಜರಲ್ಲಿ ಮಾನವೀಯತೆಯ ತುಂಬಲುವ್ಯರ್ಥವಾಗಿ ಎಂದಿಗೂ ನೀನು ಹೆಣಗದಿರು ಗೆಳತಿ ಕೊಡುವ ದಾನ ಧರ್ಮಗಳಲಿ ಪುಣ್ಯವಿದೆ ಎಂದರಿತುಅಪಾತ್ರರಿಗೆ ದಾನ ಧರ್ಮವನು ಮಾಡದಿರು ಗೆಳತಿ ಸಾಂತ್ವನವ ನಯದಿ ಹೇಳುತ ಧೈರ್ಯ ನೀಡುವೆಯೆಂದುಸಂಕುಚಿತಮನದವರಿಗೆ ಉಪದೇಶಿಸದಿರು ಗೆಳತಿ ನಂಬಿಕೆ ವಿಶ್ವಾಸದಲಿ ಧೈರ್ಯ ತುಂಬುವ ಜನರನುನಿನ್ನ ಕಠೋರತೆಯಿಂದ ದೂರ ತಳ್ಳದಿರು ಗೆಳತಿ ಎಲ್ಲರೂ […]

ಅಪ್ಪನ ಕೊನೇ ಪತ್ರ.!

ಕವಿತೆ ಅಪ್ಪನ ಕೊನೇ ಪತ್ರ.! ಅಲ್ಲಾಗಿರಿರಾಜ್ ಕನಕಗಿರಿ ಬರುವ ಹೊಸ್ತಿಲು ಹುಣ್ಣಿಮೆಗೆರಕ್ತ ಹೆಪ್ಪುಗಟ್ಟುವ ಚಳಿ ಗಾಳಿ. ಒಂದು ವೇಳೆ ನಾನು ಕೊರೆಯುವ ಚಳಿಗೆಬೀಸುವ ವಿಷ ಗಾಳಿಗೆ ದಿಲ್ಲಿ ಗಡಿಯಲ್ಲಿಹೆಣವಾದರೆ ಯಾರೂ ಹೆದರಬೇಡಿ. ನನ್ನ ಹೆಣಕ್ಕೆ ಗೋರಿ ಕಟ್ಟುವ ಬದಲುಕೊರೆಯುವ ಚಳಿಯಲ್ಲಿ ನನ್ನ ಹೆಣ ಸುಟ್ಟು ಮೈ ಬಿಸಿ ಮಾಡಿಕೊಳ್ಳಿ.ಮುಂದಿನ ದಿನಗಳ ಹೋರಾಟಕ್ಕೆ ಅಣಿಯಾಗಿ. ನನ್ಹೆಣ ಸುಟ್ಟ ಬೂದಿ ಮನೆಗೆ ಬಂದರೆ ನಿನ್ನವ್ವನ ಹಣೆಗೆ ಹಚ್ಚಿ.ಕಣ್ಣೀರು ಬಂದರೆ ಬೆಳೆಗೆ ಹರಿಸಿಬಿಡಿ.ನಾ ಇಲ್ಲವೆಂದು ಒಕ್ಕಲುತನ ಜೊತೆಗೆ ಹೋರಾಟಎಂದೂ ನಿಲ್ಲದಿರಲಿ ಮಗನೆ. […]

ಮಲೆನಾಡಿಗರ ತುಮುಲ

ಅನಿಸಿಕೆ ಮಲೆನಾಡಿಗರ ತುಮುಲ ಗಣೇಶಭಟ್ ಶಿರಸಿ ಪಶ್ಚಿಮ ಘಟ್ಟಗಳ ಹಾಗೂ ಅಲ್ಲಿನ ಜೀವವೈವಿದ್ಯ ರಕ್ಷಣೆಯ ಉದ್ದೇಶದಿಂದ ೨೦೧೧ರಲ್ಲಿ ಡಾ. ಮಾಧವ ಗಾಡ್ಗೀಲ್ ಸಮಿತಿ ನೀಡಿದ ವರದಿಯನ್ನು ತಿರಸ್ಕರಿಸಿದನಂತರ ವಿಜ್ಞಾನಿ ಕಸ್ತೂರಿರಂಗನ್ ನೇತೃತ್ವ ಸಮಿತಿ ರಚಿಸಲಾಗಿತ್ತು. ಪಶ್ಚಿಮ ಘಟ್ಟದಲ್ಲಿ ಮಾನವನ ಹಸ್ತಕ್ಷೇಪವನ್ನು ಸೀಮಿತಗೊಳಿಸಬೇಕೆಂದು ಸೂಚಿಸಿರುವ ಎರಡನೇ ವರದಿಯ ಅನುಷ್ಠಾನಕ್ಕೂ ಹಿಂಜರಿಯುತ್ತಿರುವ ಕರ್ನಾಟಕದ ಸರ್ಕಾರ ಹಸಿರು ನ್ಯಾಯಾಲಯದ ಮೆಟ್ತಲೇರುವ ಪ್ರಯತ್ನ ನಡೆಸಿದೆ. ಈ ಎರಡೂ ವರದಿಗಳು ಪರಿಸರ ಪೂರಕ ಅಭಿವೃದ್ಧಿಯನ್ನು ಪ್ರತಿಪಾದಿಸುತ್ತವೆಯಾದರೂ, ಡಾ. ಮಾಧವ ಗಾಡ್ಗೀಳ್ ವರದಿ ಹೆಚ್ಚು ಜನಪರವಾಗಿದೆ. […]

ನೀಳ್ಗೆರೆ

ಕವಿತೆ ನೀಳ್ಗೆರೆ ಅಕ್ಷತಾ ರಾಜ್ ಯಾಕೆ ಹೀಗೆ ನಮ್ಮ ನಡುವೆ ಕಾಣದಿಹ ತೆಳ್ಗೊಡೆನಾನೋ !ನೀನೋ! ಉಸುರುತಿಹುದು ನೀಳ್ಗೆರೆ || ಊರು ಕೇರಿ ಸುತ್ತಿ ಸವೆದ ಪಾದ ತಿರುಗಿ ಸೋಲಲುಅಲ್ಲೇ ಮಂಡಿಯೊಳಗೆ ನಿಂತ ಕಾಲ್ಗಳವು ನಕ್ಕವುಮುಸುಕಿನೊಳಗೆ ಜಟ್ಟಿಗುದ್ದು ಕಂಡವನಾರೋ ಅರಿಯರುಮೊದಲು ಯಾರು ಎಂಬ ಈರ್ಷ್ಯೆ ಸುತ್ತಲಿದ್ದ ಜಗದೊಳು ಹಲವು ಬಣ್ಣ ಇಹುದು ಅಲ್ಲಿ ಕಾಣದಿಹ ಕತ್ತಲುನೂರು ರುಚಿಯು ಸೇರಿ ನಡೆಯುತಿಹುದು ಹಿಮನದಿಬೀಸುಗಾಳಿಯೆಲ್ಲಿ ಒಂಟಿ? ಸುತ್ತಲಿಹರು ಬೇಡರುಆದರೊಂದು ಪ್ರಶ್ನೆಯಿಹುದು ಯಾರು ಮುಂದೆ ನಡೆಯೊಳು ಅರಳಿ ನಿಂತ ಕಿರಣದೆದುರು ‘ನಾನು’ ಮಂಜುಬಿಂದುಕರಗಲೇನೋ! […]

ಆತ್ಮ ನಿವೇದನೆಯಲ್ಲಿ ಅಕ್ಕನ ಹೆಜ್ಜೆಗಳು

ಲೇಖನ ಆತ್ಮ ನಿವೇದನೆಯಲ್ಲಿ ಅಕ್ಕನ ಹೆಜ್ಜೆಗಳು  ಡಾ.ರೇಣುಕಾ. ಅ. ಕಠಾರಿ ಕನ್ನಡ ನಾಡಿನ ಚರಿತ್ರೆಯಲ್ಲಿ ‘ವಚನ ಸಾಹಿತ್ಯ’ ಹೊಸ ಮೈಲುಗಲ್ಲನ್ನೇ ಸೃಷ್ಠಿಸಿತ್ತು. ಕುಟುಂಬದಲ್ಲಿ ಹೆಣ್ಣು ಸ್ವಾತಂತ್ರ್ಯ   ಕಳೆದುಕೊಂಡ ಕಾಲದಲ್ಲಿ ಶರಣ ಪರಂಪರೆಯು ಆಕೆಗೆ ಸ್ಥಾನವನ್ನು ಒದಗಿಸಿಕೊಟ್ಟಿತು. ಈ ಮೊದಲು ಹೆಣ್ಣನ್ನು ಶೂದ್ರ ಸಮಳೆಂಬ ಅಪವಾದವನ್ನು ಹೊತ್ತುಕೊಂಡು ಬದುಕಬೇಕಾಗಬೇಕಿತ್ತು. ಹಾಗೆ ಅವಳನ್ನು  ಅಜ್ಞಾನಿಯನ್ನಾಗಿ ಮಾಡಿದ್ದರು. ಮಹಿಳೆಯರಿಗೆ ಮೋಕ್ಷ ಬೇಕಾದರೆ ಪತಿಯ ಸೇವೆಯ ಮೂಲಕವೇ ಸಾಧ್ಯವೆಂಬ ಕಲ್ಪನೆಯನ್ನು ಬಲವಂತವಾಗಿ ಆಕೆಯ ಮೇಲೆ ಹೊರಿಸುತ್ತಿದ್ದರು. ಈ ಮೊದಲು ನಡೆಯುತ್ತಿದ್ದ ಎಲ್ಲ ಹಿಂಸಾ […]

ಚಿಟ್ಟೆ

ಲೇಖನ ಚಿಟ್ಟೆ ಆಶಾ ಸಿದ್ದಲಿಂಗಯ್ಯ ಚಿಟ್ಟೆ ಲೆಪಿಡೊಪ್ಟೆರಾ ಆರ್ಡರ್ ಗೆ ಸೇರಿದ ಕೀಟ. ಇದು ಹೆಸ್ಪರಾಯ್ಡಿಯಾ (the skippers) ಹಾಗೂ ಪೆಪಿಲಿಯನಾಯ್ಡಿಯಾ (ಉಳಿದೆಲ್ಲ ಚಿಟ್ಟೆಗಳ) ಜಾತಿಗಳಿಗೆ ಸೇರಿದ್ದು ಹಲವು ಬಣ್ಣಗಳು ಹಾಗೂ ವಿವಿಧ ಆಕಾರಗಳಲ್ಲಿ ಕಾಣಸಿಗುತ್ತವೆ. ಕಾಯ್ರ್ನ್ಸ್ ಬರ್ಡ್ವಿಂಗ್ ಎನ್ನುವುದು ಆಸ್ಟ್ರೇಲಿಯಾದಲ್ಲಿನ ಅತಿ ದೊಡ್ಡ ಚಿಟ್ಟೆ ಚಿಟ್ಟೆಗಳ ಮೇಲೆ ಅಧ್ಯಯನ ನಡೆಸುವವರನ್ನು ಆಂಗ್ಲ ಭಾಷೆಯಲ್ಲಿ ‘ಲೆಪಿಡಾಪ್ಟರಿಸ್ಟ್’ಗಳೆಂದು ಕರೆಯುತ್ತಾರೆ. ಚಿಟ್ಟೆಗಳ ವೀಕ್ಷಣೆ ಜನರಲ್ಲಿ ಒಂದು ಹವ್ಯಾಸವಾಗಿ ಬೆಳೆದಿದೆ. ಜೀವನ ಚಕ್ರ ಒಂದು ಜೀವನ ಚಕ್ರವು ಜೀವಂತ ಜೀವಿಯು ತನ್ನ […]

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….4 ” ಪರಾವಲಂಬನೆಯ ಕಠಿಣ ದಿನಗಳು…” “ಆತ್ಮಾನುಸಂಧಾನ “             ಸಾಣೆಕಟ್ಟೆಯಲ್ಲಿ ದೊಡ್ಡಮ್ಮನ ಆಶ್ರಯ ಗಣಪುವಿನ ಎರಡು ಹೊತ್ತಿನ ಊಟ ತಿಂಡಿಯ ಚಿಂತೆ ಬಗೆಹರಿಸಿತು. ಆದರೆ ಗಣಪು ಬಯಸಿದ್ದು ಅಕ್ಷರಾಭ್ಯಾಸ. ಆಕಸ್ಮಿಕವಾಗಿ ಸಾಣೆಕಟ್ಟೆಗೆ ಬಂದ ನಾಡುಮಾಸ್ಕೇರಿಯ ಬೇಲೆ ಹಿತ್ತಲ ರಾಕು ಎಂಬ ತರುಣ ಹಮ್ಮಜ್ಜಿಯ ಮನೆಯಲ್ಲಿದ್ದ ಗಣಪುವಿನ ಯೋಗಕ್ಷೇಮ ವಿಚಾರಿಸುತ್ತ ಆತನ ಕಲಿಯುವ ಆಸೆಯನ್ನು ಗ್ರಹಿಸಿದ. ಊರಿಗೆ ಮರಳಿದವನು ಗಣಪುವಿಗೆ ಮತ್ತೆ ಹನೇಹಳ್ಳಿ ಹಾಸ್ಟೇಲಿನಲ್ಲಿ ಅವಕಾಶ ದೊರೆಯುವಂತೆ […]

ಅಂಕಣ ಬರಹ ರಂಗ ರಂಗೋಲಿ – ೪ ಚಾವಡಿಯಲ್ಲಿ ರಂಗ ಗೀತೆ ಎಂಟನೇ ತರಗತಿಯ ಕ್ಲಾಸಿನಲ್ಲಿ ಪುಟ್ಟ ಗುಬ್ಬಚ್ಚಿ ದೇಹದ ನಾನು ಮೊದಲನೇ ಬೆಂಚಿನಲ್ಲಿ ಮುದುಡಿ ಕುಳಿತಿದ್ದೆ. ” ದೇವದಾಸಿ ಪದ್ದತಿ,ಬಸವಿ ಪದ್ದತಿ,ಗೆಜ್ಜೆಪೂಜೆ ನಿಷೇಧಿಸಿದರು” ತರಗತಿಯಲ್ಲಿ ಕನ್ನಡದ  ಬಾಲಕೃಷ್ಣ  ಮೇಷ್ಟ್ರು ಕರ್ನಾಟಕದ ಇತಿಹಾಸದ ಬಗ್ಗೆ ಬಿಡುವಿನಲ್ಲಿ ಕಥೆಯ ರೂಪದಲ್ಲಿ ಹೇಳುತ್ತಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ಮೈಸೂರಿನ ಕರ್ತೃ. ಜಾರಿಗೆ ತಂದ ಈ ಕಾನೂನುಗಳು ಹೊಸದಾದ ಮನ್ವಂತರಕ್ಕೆ ನಾಂದಿ ಹಾಡಿತ್ತು. ಥಟ್ಟನೆ ನನ್ನ ಕಣ್ಣೆದುರು, ಆ ದೊಡ್ಡ […]

ಗಜಲ್

ಗಜಲ್ ವಿನುತಾ ಹಂಚಿನಮನಿ ಹುಟ್ಟಿನಿಂದ ಚಟ್ಟದ ವರೆಗೆ ಹೆಣ್ಣಿಗೆ ಅಸ್ತಿತ್ವಕ್ಕಾಗಿ ಹೋರಾಟಸಿಕ್ಕ ಬದುಕ ಭವಸಾಗರದಲಿ ಈಜಿ ದಾಟುವದಕ್ಕಾಗಿ ಹೋರಾಟ ತಾಯಿಯ ಗರ್ಭದಲ್ಲಿರುವ ಹೆಣ್ಣುಭ್ರೂಣ ನೇಣು ತಪ್ಪಿಸಲು ಸೆಣಸಾಟಪುರುಷಪ್ರಧಾನ ಲೋಕದಲಿ ಪ್ರಾಣಸಹಿತ ಬರುವದಕ್ಕಾಗಿ ಹೋರಾಟ ಒಡಹುಟ್ಟಿರುವ ಅಣ್ಣ ತಮ್ಮಂದಿರೊಂದಿಗೆ ಹಕ್ಕಿಗಾಗಿ ಪರದಾಟಕನಿಷ್ಠ ವಿದ್ಯೆ ಅನ್ನ ಬಟ್ಟೆಯ ಪಾಲು ಪಡೆಯುವದಕಾಗಿ ಹೋರಾಟ ಯೌವನಾವಸ್ಥೆಯಲ್ಲಿ ಕಾಮುಕರಿಂದ ಅತ್ಯಾಚಾರದ ಕೆಣಕಾಟಕನ್ಯೆಗೆ ಬಹುಮೂಲ್ಯ ಶೀಲ ಕಾಯ್ದುಕೊಳ್ಳುವದಕ್ಕಾಗಿ ಹೋರಾಟ ಪತ್ನಿಯ ಬೇಕು ಬೇಡಗಳ ಹತ್ತಿಕ್ಕುತ ಬಾಳ ಬಂಡಿಯ ಎಳೆದಾಟಅವಲಂಬಿತರ ಅವಶ್ಯಕತೆಗಳ ಪೂರೈಸುವದಕ್ಕಾಗಿ ಹೋರಾಟ ಇಳಿವಯಸ್ಸಿನಲಿ ಪರಾಧೀನತೆ […]

Back To Top