ಎರಡು ಕವಿತೆಗಳು

ಎರಡು ಕವಿತೆಗಳು

ಶೋಭಾ ನಾಯ್ಕ ಹಿರೇಕೈ ಅವರ ಎರಡು ಕವಿತೆಗಳು ಶೋಭಾ ನಾಯ್ಕ ಹಿರೇಕೈ ಕವಿತೆ – ೧…ಹೆಚ್ಚೆಂದರೇನು ಮಾಡಿಯೇನು? ಅವರಂತೆ ತಣ್ಣೀರಲ್ಲಿ ಮಿಂದುನಲವತ್ತೆಂಟನೆಯ ದಿನದವ್ರತ ಮುಗಿಸಿ,ಆ ಕೋಟೆ ಕೊತ್ತಲಗಳ ದಾಟಿಬೆಟ್ಟವೇರಿ ಗುಡ್ಡವಿಳಿದು, ಕಣ್ಗಾವಲ ತಪ್ಪಿಸಿನಿನ್ನ ಬಳಿ ನಡೆದೇ….ಬಂದೆನೆಂದು ಇಟ್ಟುಕೋಹೆಚ್ಚೆಂದರೆ ನಾನಲ್ಲಿಏನು ಮಾಡಿಯೇನು? ‘ಬಾಲಕನಾಗಿಹೆ ಅಯ್ಯಪ್ಪ’ ಈಹಾಡು ಹಾಡು ಕೇಳಿ ಕೇಳಿಇತ್ತೀಚೆಗೆ ನಿನ್ನ ಹಳೆಯದೊಂದುಪಟ ನೋಡಿದ ಮೇಲೆನನ್ನ ಮಗನಿಗೂ..ನಿನಗೂ..ಯಾವ ಪರಕ್ಕೂ ..ಉಳಿದಿಲ್ಲ ನೋಡು ಎಷ್ಟೋ ವರ್ಷ ನಿಂತೇ ಇರುವೆಬಾ ಮಲಗಿಕೋ ಎಂದುಮಡಿಲ ಚೆಲ್ಲಿನನ್ನ ಮುಟ್ಟಿನ ಕಥೆಯನಡೆಯುತ್ತಿರುವ ಒಳ ಯುದ್ಧಗಳ ವ್ಯಥೆಯನಿನಗೆ […]

ಉತ್ತಮರ ಸಂಗ ಎನಗಿತ್ತು ಸಲಹೊ

ಸಂಬಂಧಗಳು ಹುಟ್ಟಿಕೊಳ್ಳುವುದು ಅಂಥ ವಿಶೇಷವಾದ ಸಂಗತಿಯೇನಲ್ಲ. ಹುಟ್ಟಿಕೊಂಡ ಸಂಬಂಧಗಳು ಎಲ್ಲಿಯವರೆಗೆ ಬಾಳುತ್ತವೆ, ನಮ್ಮ ಬದುಕಿನ ಚಲನೆಯಲ್ಲಿ ಅವುಗಳ ಮಹತ್ವವೇನು, ಅವು ಯಾವ ಬಗೆಯ ಹೊಸತನವನ್ನು ನಮ್ಮ ಯೋಚನೆಗಳಿಗೆ ಒದಗಿಸಬಲ್ಲವು ಎನ್ನುವ ಆಧಾರದ ಮೇಲೆ ಸಂಬಂಧಗಳ ಗುಣಮಟ್ಟದ ನಿರ್ಧಾರವಾಗುತ್ತದೆ. ಈ ಗುಣಮಟ್ಟದ ಮೌಲ್ಯಮಾಪನ ಯಾವುದೇ ರೂಪ, ಆಕಾರ ಅಥವಾ ಹೆಸರುಗಳ ಪ್ರಾಪಂಚಿಕ ಚೌಕಟ್ಟಿನೊಳಗೆ ನಡೆಯುವಂಥದ್ದಲ್ಲ. ತಲೆದಿಂಬಿನ ಪಕ್ಕದಲ್ಲಿ ನೆಮ್ಮದಿಯಿಂದ ನಿದ್ರಿಸಿರುವ ಮೊಬೈಲ್ ನಲ್ಲಿ ಪಾಪ್ ಅಪ್ ಆಗುವ ಗುಡ್ ಮಾರ್ನಿಂಗ್ ಮೆಸೇಜುಗಳಲ್ಲಿ ಹದಿನೈದು ವರ್ಷಗಳ ನಂತರ ಮತ್ತೆ ಜೊತೆಯಾದ […]

ಕೊಡುವುದಾದರೂ ಯಾರಿಗೆ ?

ಚಿತ್ರ ಮತ್ತು ಕವಿತೆ : ವಿಜಯಶ್ರೀ ಹಾಲಾಡಿ. ಹೌದುಈ ಪ್ರೀತಿಯನ್ನುಮೊಗೆಮೊಗೆದುಕೊಡುವುದಾದರೂ ಯಾರಿಗೆ ? ನೇರಳೆಮರಕ್ಕೆ ಅಳಿಲಿಗೆಬೆಚ್ಚನೆ ಗೂಡಿನ ಹಕ್ಕಿಗೆ ? ಹೆಣ್ತನದ ಪರಿಧಿಗೆ ಎಂದೂ ದಕ್ಕದಮುಖ –ಮುಖವಾಡಗಳು …ರಾತ್ರಿ -ಹಗಲುಗಳನ್ನುಗೆಜ್ಜೆಕಾಲಿನಲ್ಲಿ ನೋಯಿಸಲೆ …ಯಾತನೆಯನ್ನು ನುಂಗುತ್ತಿರುವೆಸಂಜೆಯ ಏಕಾಂತಗಳಲ್ಲಿಹೆಪ್ಪುಗಟ್ಟಿದ ಇರುಳುಗಳಲ್ಲಿ .. ಬೊಗಸೆಯೊಡ್ಡಿದ್ದೇನೆಮಂಡಿಯೂರಿದ್ದೇನೆಹಟಮಾರಿ ಕಡಲಾಗಿದ್ದೇನೆ..ತರ್ಕಕ್ಕೆ ನಿಲುಕದ ಗಳಿಗೆ-ಗಳಲ್ಲಿ ಒಂಟಿಹೂವಂತೆನಿಂತುಬಿಟ್ಟಿದ್ದೇನೆ .. ಲೆಕ್ಕವಿಟ್ಟಿಲ್ಲ ಕೋಗಿಲೆಹಾಡಿದ ಹಾಡುಗಳನ್ನು… ಉದುರಿಬಿದ್ದ ಗರಿಗಳನ್ನುಮತ್ತೆ ಹುಟ್ಟಿಸಿಕೊಳ್ಳಲುಸಾಧ್ಯವಾಗುವುದಾದರೆಪ್ರೀತಿಯಿಂದ ಆರ್ತಳಾಗಿದ್ದೇನೆ.

ನಾವೀಗ ಹೊರಟಿದ್ದೇವೆ

ಕವಿತೆ ಶೀಲಾ ಭಂಡಾರ್ಕರ್ ನಾವೀಗ ಹೊರಟಿದ್ದೇವೆಒಂದೊಮ್ಮೆ ನಮ್ಮದಾಗಿದ್ದನಮ್ಮ ಊರಿಗೆ. ಯಾರೊಬ್ಬರಾದರೂತಡೆಯುವವರಿಲ್ಲವೇ!! ನಮ್ಮನ್ನುಹೋಗಬೇಡಿರೆಂದು ಕೈ ಹಿಡಿದು.ಈ ಪಟ್ಟಣ ನಿಮ್ಮದೂ ಕೂಡ ಎಂದು. ಇಟ್ಟಿಗೆ ಮರಳು ಹೊತ್ತ ತೋಳುಗಳುಸುತ್ತಿಗೆ ಉಳಿ ಹಿಡಿದ ಕೈಗಳುಗಂಟು ಮೂಟೆಗಳನ್ನುಹೊತ್ತು ಕೊಂಡು ಹೊರಟಿವೆ,ಭಾರವಾದ ಮನಸ್ಸನ್ನುಎದೆಯೊಳಗೆ ಮುಚ್ಚಿಟ್ಟು. ಯಾರಿಗೂ ನೆನಪಾಗಲಿಲ್ಲವೇ..ತಮ್ಮ ಮನೆಗಳಿಗೆಗಾರೆ ಮೆತ್ತಿದ, ಬಣ್ಣ ಹಚ್ಚಿದಕೈಗಳ ಹಿಂದೆ ಒಂದು ಉಸಿರುಹೊತ್ತ ಜೀವವಿದೆ.ನಮಗಾಗಿ ದುಡಿದ ಚೇತನವಿದೆ.ಅನಿಸಲಿಲ್ಲವೇ ಒಮ್ಮೆಯೂ. ಕಾಲೆಳೆದು ನಡೆದಿದ್ದೇವೆ.ದೇಹಕ್ಕಿಂತ ಭಾರವಾದಉಸಿರನ್ನು ಹೊತ್ತುಕೊಂಡು.ಊರು ತಲುಪುವ ಆಸೆಯಿಂದ.ನಮ್ಮದೇನಾದರೂ ಜಾಗ,ಒಂದಾದರೂ ಕುರುಹು..ಅಲ್ಲಿಯಾದರೂ..ಉಳಿದಿರಬಹುದೆಂಬ ನಿರೀಕ್ಷೆಯಿಂದ. ಹೊರಟಿದ್ದೇವೆ ಒಂದೊಮ್ಮೆನಮ್ಮದಾಗಿದ್ದ ನಮ್ಮ ಊರಿಗೆ. *******************

ಮಗಳು ಹುಟ್ಟಿದ್ದಾಳೆ

ಕವಿತೆ ನಿನ್ನೆ ಯಾವನೋ ಪಾಪಿ ತ್ರಿಪುರದಲ್ಲಿ ಹೆಣ್ಣು ಹುಟ್ಟಿದೆ ಅಂತ ತಾನು ಆತ್ಮಹತ್ಯೆ ಮಾಡಿಕೊಂಡನಂತೆ ಮತ್ತು ಅವನ ಮಡದಿ ಹೃದಯಾಘಾತವಾಗಿ ಸತ್ತಳು.ಅದಕ್ಕೆ ಇದನ್ನು ನಿಮಗೆ ಒಪ್ಪಿಸಬೇಕು ಅನಿಸಿತು. ಪ್ಯಾರಿಸುತ ಮಗಳು ಹುಟ್ಟಿದ್ದಾಳೆ…ಪದಗಳಿಗೆ ಸಿಗದ ದನಿಯೊಂದುಕಿವಿಗೆ ಬಿದ್ದು ನನ್ನ ಮನವು ಹಿಗ್ಗಿದೆಮುದ್ದು ಮುದ್ದು ಮುಖವ ಹೊತ್ತುಬೆಳಗು ಮುಂಜಾನೆ ಬೆಳಕು ಚಿಮ್ಮಿಸಿಬೆಚ್ಚನೆ ಹಾಸಿಗೆಯಲ್ಲಿ ಗೊಂಬೆಯಂತೆ ಮಲಗಿದ್ದಾಳೆಅವಳ ಮುಷ್ಟಿಯಲ್ಲಿ ಅನ್ನದ,ಆಯುಷ್ಯದ,ವಿದ್ಯಾರೇಖೆಗಳುಅಡ್ಡವಾಗಿ ನದಿಯು ಹರಿಯುವ ದಾರಿಯಂತೆಗುರುತು ಮಾಡಿಕೊಂಡಿವೆಬೆಳ್ಳಿ ಮುಖದಲ್ಲಿ ಹೊಮ್ಮುವ ಪ್ರಕಾಶತೆಗೆಸುತ್ತಲೂ ಎಲ್ಲರಿಗೂ ನಗುವು ಹಂಚಿ ಹೋಗಿದೆಅವಳು ಗೊಂಬೆ,ಹೆಮ್ಮರದ ಕೊಂಬೆ ಮಗಳು ಹುಟ್ಟಿದ್ದಾಳೆ….ನನಗೂ […]

ಸಂಜೆಯಾಗುತಿದೆ

ಕವಿತೆ ಶಾಂತಲಾ ಮಧು ಸಂಜೆಯಾಗುತಿದೆಆರಾಗಲಿಲ್ಲ ಸಂಜೆಯಾಗುತಿದೆಬೆಳದಿಂಗಳಾಸೆ ಚಂದ್ರನಿಗೆಕಸ್ತೂರಿ ತಿಲಕವನಿಡುವೆನೆನುತಹಾಡಿ ಓಡಿದರೆ,ಸಂಜೆಯಾಗುತಿದೆ ಬೆಟ್ಟಗಳ ತುದಿ ಏರಿಮೋಡದಲಿ ಈಜಾಡಿ..ಹಕ್ಕಿ ಜೊತೆ ಚಿಲಿಪಿಲಿಮಾತಾಡ ಹವಣಿಸಲುಹಾರಿ ಹೋಯಿತು ಹಕ್ಕಿಸಂಜೆಯಾಗುತಿದೆ ಮೊಟ್ಟೆ ಮರಿಗಳ ಸಲಹಿರೆಕ್ಕೆ ಪುಕ್ಕಗಳು ಬಲಿತುಹಾರ ಬಯಸಲು ಮುನ್ನಸಂಜೆಯಾಗುತಿದೆ ಹುಲ್ಲು ಗರಿಕೆಯ ತಂದುಎಣಿಸಿ ಪೋಣಿಸಿ ಗೂಡು ಕಟ್ಟಿಮೆರೆಯುವ ತವಕಸಂಜೆಯಾಗುತಿದೆ ಚಲಿಸುತಿದೆ ಚಿತ್ರವದುಮನಃ ಪಟಲ ಕೆದಕುತಿದೆಕೆಂಪನೆಯ ಆಗಸದಿಮರೆಯಾಗುತಿಹನವನುಸಂಜೆಯಾಗುತಿದೆ *****

ಊರುಗೋಲು

ಅನುವಾದಿತ ಕವಿತೆ ಮೂಲ: ಬರ್ಟೋಲ್ಡ್ ಬ್ರೆಕ್ಟ್ ಕನ್ನಡಕ್ಕೆ: ವಿ.ಗಣೇಶ್ ಹತ್ತು ವರುಷಗಳ ಕಾಲ ಹೆಜ್ಜೆಯಿಡಲಾರದಲೆ ವೈದ್ಯನ ಸಲಹೆ ಪಡೆಯಲಂದು ನಾ ಬಂದೆ ‘ನಿಮಗೆ ಊರುಗೋಲೇಕೆ?’ ಎಂದವನು ಕೇಳಲು ನಾ ಹೆಳವ ಎನುತ ವಾದಿಸಿದೆನು. ಮುಗುಳು ನಗೆ ಸೂಸುತ ಆ ಹಿರಿಯ ವೈದ್ಯನು ‘ಮರಳಿ ಯತ್ನವ ಮಾಡು, ಮರಳಿ ಯತ್ನವ ಮಾಡು, ಊರುಗೋಲಿಂದಲೆ ನೀ ಹೆಳವನಾಗಿರುವೆ ತೆವಳುತ್ತ ತೆವಳುತ್ತ ನಡೆ ಮುಂದೆ’ ಎಂದ. ನನ್ನ ಪ್ರಿಯ ಸಾಧನವ ಕಸಿಯುತ್ತಲವನು ಸೈತಾನ ನೋಟವನು ಬೀರುತ್ತಲದರೆಡೆಗೆ ಆ ಪ್ರಿಯ ಸಾಧನವ ಮೆಟ್ಟಿ […]

ಕಾದ್ರಿಯಾಕ ಮತ್ತು ನಾಡ ದೋಣಿ

ಕಿರು ಕಥೆ ಕೆ.ಎ. ಎಂ. ಅನ್ಸಾರಿ ಪಕ್ಕದ  ಮಸೀದಿಯ ಬಾಂಗು(ಅಜಾನ್) ಕೇಳಿದಾಗ ಎದ್ದೇಳುವ ಕಾದ್ರಿಯಾಕನ ದಿನಚರಿ ಮಗ್ರಿಬ್ (ಮುಸ್ಸಂಜೆ) ವರೆಗೂ ಮುಂದುವರಿಯುತ್ತಿತ್ತು. ಬೆಳಗ್ಗೆ ಎದ್ದಕೂಡಲೇ ದೋಣಿಯ ಹತ್ತಿರ ಹೋಗಿ ದೋಣಿಯ ಸುತ್ತ ಒಂದು ಪ್ರದಕ್ಷಿಣೆ ಹಾಕಿ ಅದರ ಪ್ರತಿ  ಭಾಗಕ್ಕೆ ಒಂದು ಚಿಕ್ಕ ಏಟು. ನಂತರ ದೋಣಿಯ ಒಳಗಡೆ  ಕುಳಿತುಕೊಳ್ಳುವ ಆಸನದ ಪರಿಶೀಲನೆ… ಎಲ್ಲೂ ಹಲಗೆ ಅಲುಗಾಡುತ್ತಿಲ್ಲ… ಎಂಬುದನ್ನು ಖಾತ್ರಿಪಡಿಸುವಿಕೆ. ನಂತರ ಕಂಗಿನ ಹಾಳೆಯಿಂದ ಮಾಡಿದ ಚಿಳ್ಳಿ (ನೀರೆತ್ತಲು ಮಾಡಿದ ದೇಸಿ ಪರಿಕರ)ಯಿಂದ ದೋಣಿಯೊಳಗಿನ ನೀರನ್ನು ಹೊರಚೆಲ್ಲುವುದು. […]

ಗಝಲ್ ಜುಗಲ್

ಗಝಲ್ ಜುಗಲ್ ಮೊಟ್ಟಮೊದಲಬಾರಿಗೆ ಗಝಲ್ ಕವಿಗಳವಿವರಣೆಗಳೊಂದಿಗೆ ಶ್ರೀದೇವಿ ಕೆರೆಮನೆ ಗಿರೀಶ್ ಜಕಾಪುರೆ ನನ್ನ ದನಿಗೆ ನಿನ್ನ ದನಿಯು (ಶ್ರೀದೇವಿ ಕೆರೆಮನೆ) ಜಗದ ಜೀವನಾಡಿಯಲ್ಲಿ ಅಮೃತದ ಕಳಶ ಜೊತೆಯಾದಂತೆ ನನ್ನ ದನಿಗೆ ನಿನ್ನ ದನಿಯುಜೀವ ಕರುಣೆಯ ಪೊರೆವ ಜಗನ್ಮಾತೆಯ ಸುದೀರ್ಘ ಉಸಿರಂತೆ ನನ್ನ ದನಿಗೆ ನಿನ್ನ ದನಿಯು ಸೆರಗಿನ ಮರೆಯಿಂದ ಇಣುಕಿದ ಕೂಸಿನ ಹವಳದ ತುಟಿಯ ಕಟವಾಯಿಯಲ್ಲಿದೆ ನೊರೆವಾಲುಹಾಲುಗಲ್ಲದ ಮುಗ್ಧ ಮುಖದ ಮಗುವಿನ ಕಿಲಕಿಲ ನಗುವಂತೆ ನನ್ನ ದನಿಗೆ ನಿನ್ನ ದನಿಯು ಕನಸುಗಳೇ ಇರದ ಬರಡು ಎದೆಯೊಳಗೆ ಮೊಳೆತಿದೆ […]

ನಿವೇದನೆ…

ಕವಿತೆ ಹರೀಶ ಕೋಳಗುಂದ ಹೌದು…ನನಗೆ ಗೊತ್ತುನೀ ನನ್ನ ಪಕ್ಕದಲ್ಲೇ ಕುಳಿತಿರುವೆಸುಳ್ಳು ಹೇಳುವುದಿಲ್ಲ ನಾನುಈ ಕಡುಗತ್ತಲಲ್ಲೂ ನಿನ್ನ ಮುಖತಿಳಿನೀರ ಬಾವಿಯಲ್ಲಿ ಬಿದ್ದಚಂದಿರನ ಬಿಂಬವೆಂದು ಎಡತಾಕುತ್ತಿದೆ ನನ್ನೆದೆಗೆನಿನ್ನುಸಿರ ಬಿಸಿನಿನ್ನೆದೆಬಡಿತದ ಸದ್ದುನೀ ತೊಟ್ಟ ಕೈ ಬಳೆಯ ಘಲುಗುಮುಡಿದ ಮಲ್ಲಿಗೆಯ ಘಮಲು ಹೊತ್ತು ಉರುಳುತ್ತಿದೆಅರಿವೇ ಇಲ್ಲಏನೋ ಹೇಳುವ ಬಯಕೆತುಟಿ ಎರಡಾಗಿಸುವ ಧೈರ್ಯ ಸಾಲದುಕೈ ನಡುಗುತ್ತಿವೆಮೈ ಬೆವರುತ್ತಿದೆಎದೆಯೊಳಗೆ ಅಸ್ಪಷ್ಟ ಆತಂಕ ನೆನಪಿರಬಹುದು ನಿನಗೆನಾ ನಿನ್ನ ಮೊದಮೊದಲು ಕಂಡಾಗನೀ ನನ್ನ ಕಂಡೂ ಕಾಣದಂತೆನೋಡಿಯೂ ನೋಡದಂತೆಕಣ್ಣು ಹಾಯಸಿದಷ್ಟೂದೂರ ಕಾಣುವ ಮರೀಚಿಕೆಯಂತೆಕಣ್ಣಿಗೆ ಬಿದ್ದುಕೈಗೆ ಸಿಗದ ಮಾಯಾಜಿಂಕೆಯಂತೆಮರೆಯಾದದ್ದು ಮತ್ತೆಲ್ಲೋ ನಿನ್ನ […]

Back To Top