ಪುಸ್ತಕ

ಪುಸ್ತಕ

‘ಗಂಗವ್ವ ಗಂಗಾಮಾಯಿ‘ ಶಂಕರ ಮೊಕಾಶಿ ಪುಣೇಕರ ಕೆ.ಶಿವು ಲಕ್ಕಣ್ಣವರ ಗಂಗವ್ವ ಗಂಗಾಮಾಯಿಯಾಗುವ ಅಪೂರ್ವ ಕಥನವೇ ಶಂಕರ ಮೊಕಾಶಿ ಪುಣೇಕರರ ‘ಗಂಗವ್ವ ಗಂಗಾಮಾಯಿ’..! ಕನ್ನಡದ ಮುಖ್ಯ ಸ್ತ್ರೀಪಾತ್ರಗಳ ಜೊತೆ ನಡೆಸುವ ಈ ಸಂವಾದಕ್ಕೆ ಹಲವು ಆಸೆಗಳು, ಉದ್ದೇಶಗಳು ಇವೆ. ಕನ್ನಡ ಮನಸ್ಸನ್ನು ಆವರಿಸಿರುವ, ಕಾಡಿರುವ ಈ ಸ್ತ್ರೀಪಾತ್ರಗಳನ್ನೆಲ್ಲ ಒಂದು ವೇದಿಕೆಗೆ ತಂದಾಗ ಸೃಷ್ಟಿಯಾಗುವ ಹೆಣ್ಣಿನ ಚಿತ್ರ ಹೇಗಿರಬಹುದು ಎನ್ನುವ ಕುತೂಹಲ, ಹೆಣ್ಣನ್ನು ನೋಡುವ, ಪರಿಭಾವಿಸುವ ನಿರ್ದಿಷ್ಟ ವಿನ್ಯಾಸಗಳು ಇವೆಯೇ ಎನ್ನುವ ಹುಡುಕಾಟವೇ ಲೇಖಕನದ ಮತ್ತು ಲೇಖಕನ ದೃಷ್ಟಿಕೋನ… ಆಯ್ಕೆ, […]

ಕಾವ್ಯಯಾನ

ಬದುಕುವ ರೀತಿಗೆ! ಲೋಕೇಶ್ ಮನ್ವಿತ್ ಬದುಕುವ ರೀತಿಗೆ ಬುದ್ದನನ್ನಿರಿಸಿಕೊಂಡರೆ ಬುದ್ದಿಯಲ್ಲಿ ಅಂಗುಲಿಮಾಲ ಹೆಜ್ಜೆ ಇರಿಸುವವನೇನು? ನಿನ್ನ ಹಾದಿಯಲ್ಲಿ. ದಯೆಯಿರಲು ದೀನನಲ್ಲಿ ದಿನವೆಲ್ಲಾ ಸಂತಸವಷ್ಟೇ ಮನಸ್ಸಿಗೆ ಬೇಕಾದರೊಮ್ಮೆ ಅಂಗೈಯನ್ನೊಮ್ಮೆ ತಿರುಗಿಸಿವುದು ರೂಡಿಯಾಗಿಸಿಕೋ ಜಾತಿ ಮತಗಳ ಚೂರಾಗಿಸಿ ಎದೆಯ ಗುಡಿಯಲ್ಲೊಮ್ಮೆ ದೀಪವಿರಿಸು ಬೆಳಕು ಚಿಕ್ಕದಿರಬಹುದು ಜೀವವಿರುವವರೆಗೂ ನೀನು ಕಾಣುವೆ ಪ್ರತಿ ಜೀವಕ್ಕೂ ಬೆಳಕಾಗಿ ಬದುಕುವುದು ಸುಲಭ ಬೇಲಿಗಿಡಗಳು ತಾಕಿದವೆಂದು, ರಕ್ತ ಹರಿಯಿತೆಂದು, ನಿಲ್ಲದೆ ಅಲ್ಲಿ, ನೋವನ್ನೇ ನೆಪವಾಗಿಸಿಕೊಂಡು ಸಾಗಿಬಿಡು ತಡೆದು. ಮುಂದೆ ಹೂಗಳು ಅರಳಿ ನಿಂತಿವೆ ಸ್ವಾಗತವ ಕೋರಿ . […]

ಕಾವ್ಯಯಾನ

ವಾಸ್ತವ ದೀಪಿಕಾ ಬಾಬು ವಾಸ್ತವ ಜೀವ ಇರುವ ಅವನನ್ನು ನಾನು ಪ್ರೀತಿಸಿದೆ, ಪ್ರೀತಿಯ ಮುಖವಾಡ ಧರಿಸಿದ ನನ್ನ ನಂಬಿಕಯೇ ಮೋಸವಾಯಿತು..! ಚಿಕ್ಕ ಪುಟ್ಟ ಹಕ್ಕಿ  ಪಕ್ಷಿಗಳ ತಂದು ನಾನು ಪ್ರೀತಿಸಿದೆ, ನಿನ್ನ ಸ್ವಾರ್ಥಕ್ಕೆ,ನನ್ನ ಬಂಧಿಸಿದೆಯಾ ಎಂದು ಹಾರಿ ಹೋಯಿತು..! ಬಾಲ್ಯದಲ್ಲೇ ಸಾವಿರಾರು ಕನಸನ್ನು ನಾನು ಪ್ರೀತಿಸಿದೆ, ನನಸಾಗದ ಬದುಕಿನ ನೈಜತೆಯ ಅರಿತು ಬಾಲ್ಯದಲ್ಲಿಯೇ ನುಚ್ಚು ನೂರಾಯಿತು…!! ಗುರು ಹಿರಿಯರನ್ನು, ಹೆತ್ತವರನ್ನು ನಾನು ಪ್ರೀತಿಸಿದೆ, ನೀನು ಹೆಣ್ಣು ಇಷ್ಟೇ ನಿನ್ನ ಬದುಕೆಂದು ಮದುವೆಯ ಬಂಧನದಲ್ಲಿಟ್ಟರು..!! ಗಂಡನನ್ನು, ಮಕ್ಕಳನ್ನು, ಮನೆಯನ್ನು […]

ಜ್ಞಾನಪೀಠ ಪ್ರಶಸ್ತಿ ವಿಜೇತರು

ದ.ರಾ.ಬೇಂದ್ರೆ ಕೆ.ಶಿವು ಲಕ್ಕಣ್ಣವರ ವರ ಕವಿ ದ. ರಾ. ಬೇಂದ್ರೆಗೆ ಅಂಬು ತಾಯಿಯೇ ಬದುಕಿನ ಮೊದಲ ಪ್ರೇರಕ ಶಕ್ತಿ..! ಈ ಅಂಬು ತಾಯಿಯ ನೆನಪಿನಲ್ಲಿ ದ.ರಾ.ಬೇಂದ್ರೆಯವರು ‘ಅಂಬಿಕಾತನಯದತ್ತ’ವಾದರು… ಈ ಅಂಬಿಕಾತನಯದತ್ತ ಕಾವ್ಯನಾಮದಿಂದ ಕನ್ನಡಿಗರ ಮನೆಮಾತಾಗಿರುವ ದತ್ತಾತ್ರೆಯ ರಾಮಚಂದ್ರ ಬೇಂದ್ರೆಯವರು 31ನೆ ಜನವರಿ 1896ರಂದು ಧಾರವಾಡದ ಪೋತನೀಸರ ಓಣಿಯಲ್ಲಿರುವ ಗುಣಾರಿಯವರ ಮನೆಯಲ್ಲಿ ಹುಟ್ಟಿದರು. ಅವರ ತಂದೆ ರಾಮಚಂದ್ರ ಪಂತರು. ತಾಯಿ ಅಂಬೂ ತಾಯಿ. ತಂದೆಯವರು ತೀರಿಕೊಂಡ ಮೇಲೆ ತನ್ನ ಇನ್ನೊಬ್ಬ ಚಿಕ್ಕಪ್ಪ ಬಂಡೋಪಂತರ ಆಶ್ರಯದಲ್ಲಿ ಬೇಂದ್ರೆಯವರ ಬಡ ಕುಟುಂಬ […]

ಅವ್ಯಕ್ತಳ ಅಂಗಳದಿಂದ

ದೌರ್ಬಲ್ಯದ ಸಾಮರ್ಥ್ಯ ಅವ್ಯಕ್ತ ದೌರ್ಬಲ್ಯದ ಸಾಮರ್ಥ್ಯ ಇವತ್ತಿನ ಕಥೆಯ ವಿಶೇಷವೇ ಹೆಚ್ಚಿನ ಮಕ್ಕಳಲ್ಲಿ ಕಂಡುಬರುವ ತಳಮಳ, ನೋವು-ನಲಿವುಗಳಿಗೆ ಕಾರಣವಾಗುವುದು. ನಾನು ಗಮನಿಸಿದ ಹಾಗೆ ಈ ಸಮಸ್ಯೆ ಎಂಟನೇ ಕ್ಲಾಸಿನ ಪ್ರೌಢ ಮಕ್ಕಳಲ್ಲಿ ಶುರುವಾದರೆ ಎಲ್ಲಿಯವರೆಗೆ ಬೇಕಿದ್ದರೂ ಹೋಗಬಹುದು. ಇವತ್ತಿನ ದಿನ ನಾನೊಂದು ಸಹಜವಾದ ಸಮಸ್ಯೆಯನ್ನು ತೆಗೆದುಕೊಂಡು ಮಕ್ಕಳಲ್ಲಿ ಮಾತನಾಡುವ ಎಂದು ಶುರುಮಾಡಿದೆ. ಅಲ್ಲಿ ಕ್ಲಾಸಲ್ಲಿದ್ದ ಎಲ್ಲ ಮಕ್ಕಳಿಗೂ ಒಂದು ಅಸೈನ್ಮೆಂಟ್ ಕೊಟ್ಟೆ.. ಎಲ್ಲರೂ ಒಂದು ಚೀಟಿ ತೆಗೆದುಕೊಂಡು ನಿಮಗೆ ಸಹಜವಾಗಿ ನೋವುಂಟುಮಾಡುವ ಬೇರೆಯವರ ಟೀಕೆ ಟಿಪ್ಪಣಿಗಳನ್ನು 4 […]

ಕಾವ್ಯಯಾನ

ಬಾಲ್ಯ ವಿವಾಹ. ಜ್ಯೋತಿ ಡಿ.ಬೊಮ್ಮಾ ಬಾಲ್ಯ ವಿವಾಹ . ಮರುಗಲಾಗದೆ ಮತ್ತೆನು ಮಾಡಲಾಗದು ಮಗು ನಿನ್ನ ವಿಧಿ ಬರಹಕ್ಕೆ ಹೆತ್ತವರ ಆಶಾಢಭೂತಿತನದಿಂದ ಬಾಲ್ಯದ ಬಾಳಿಗೆ ಮದುವೆ ಬಂಧನ ವಿಧಿಸಿದ್ದಕ್ಕೆ… ಮದುವೆ ಮಾಡಿ ಜವಾಬ್ದಾರಿಯಿಂದ ಕಳಚಿಕೊಳ್ಳುವದೊಂದೆ ಅವರ ಪರಮೋದ್ದೇಶ. ಮಗಳ ಚಿಕ್ಕ ವಯಸ್ಸು ಲೆಕ್ಕಿಸದೆ ಧಾರೆ ಎರೆದು ಕೈ ತೊಳೆದುಕೊಳ್ಳುವ ಧಾವಂತ.. ಆಡುತ್ತ ಓದುತ್ತ ನಲಿಯಬೇಕಾದ ಮಗು ಹೊತ್ತುಕೊಂಡಿತು ಸಂಸಾರದ ನೋಗ ಸರೀಕರೆಲ್ಲ ನಕ್ಕು ನಲಿವಾಗ ಆಕೆ ಧರಿಸಿದಳಾಗಲೆ ಗ್ರಹಿಣಿಯ ಗಂಭಿರ ಮೊಗ.. ವಯಸ್ಸಿಗೆ ಮೀರಿದ ಜವಾಬ್ದಾರಿಯಿಂದ ನಲುಗಿತು […]

ಕಾವ್ಯಯಾನ

ಸಗ್ಗದ ಬಾಗಿಲು ನಿರ್ಮಲ ಆರ್. ವಸಂತಕೆ ಹೊಸ ಚಿಗುರು,ಹೊಸ ಯೌವ್ವನ ನಿಸರ್ಗ ಸೌಂದರ್ಯಕೆ ಮನ ತಾಳಿತು ಮೌನ ನಭದಲಿ ನಗುತಿಹನು ರವಿ ಹಸಿರಿನಿಂದ ಕಂಗೊಳಿಸುತಿಹುದು ಭುವಿ ಅಲ್ಲಲ್ಲಿ ಹಕ್ಕಿಗಳ ಇಂಚರ ಸೃಷ್ಟಿಯೊಂದು ಬನದೇವಿಯ ಭವ್ಯ ಮಂದಿರ ಇರುಳಲಿ ಉಲ್ಲಸಿತನಾದ ಚಂದಿರ ತಾಯ ಕಂಕುಳಲಿರುವ ಕಂದನಿಗವನೇ ಸುಂದರ ಕಪ್ಪು ಮೋಡವ ಹೊತ್ತುತರುವ ಮಳೆರಾಯ ದುಯ್ ಎನ್ನುತ ತೊಳೆವ ಇಳೆಯ ಮೇಲಿನ ಕೊಳೆಯ ಮಳೆಯ ಜಿನುಗಿಗೆ ನವಿಲ ನರ್ತನ ಕಂಡೆಯ ಮನ ಅಚ್ಚರಿಗೊಂಡಿತು ಕಂಡು ಬನಸಿರಿಯ ಪ್ರಕೃತಿ ಸೌಂದರ್ಯ ನೋಡುತಿರೆ […]

ಕಾವ್ಯಯಾನ

ಆ ಗುಡಿಗಳಲ್ಲಿ ಜ್ಯೋತಿ ಡಿ.ಬೊಮ್ಮಾ. ಆ ಗುಡಿಗಳಲ್ಲಿ.. ಪರದೆ ಹಾಕಿದ ಗರ್ಭಗುಡಿಯೊಳಗೆ ಅರ್ಚಕರು ದೇವಿಯ ಮೈ ಮುಟ್ಟಿ ಬಟ್ಟೆ ಬದಲಾಯಿಸಿ ,ಬೊಟ್ಟಿಟ್ಟು,ಸಿಂಗರಿಸಿ ಹೊರಗೆ ದರ್ಶನಕ್ಕೆ ನಿಂತ ಸ್ತ್ರೀಯರನ್ನೂ ಮುಟ್ಟಿಸಿಕೊಳ್ಳದೆ ಮೆಲಿಂದಲೆ ಎಸೆದ ಪ್ರಸಾದವನ್ನೂ ಭಕ್ತಿಯಿಂದ ಸ್ವೀಕರಿಸಿ,ಕಣ್ಣಿಗೊತ್ತಿಕೊಂಡು ಪರವಶರಾಗಿ ದೇವಿಯೆಡೆ ನೋಡಿದಾಗ.. ಮೂಕಳಾಗಿ ನಿಂತ ದೇವಿಯೂ ನಿಟ್ಟುಸಿರು ಹಾಕುತಿದ್ದಳು ಒಳಗೊಳಗೆ ಬೇಯುತ್ತ ಕೇಳುವಂತಿತ್ತು ನೋಟ ನಿಮ್ಮೊಳಗಿರದ ಅದಾವ ಶಕ್ತಿ ದೇವಾಲಯದಲ್ಲಿದೆ. ಮುಟ್ಟಾದವರೂ ದೇವರನ್ನೂ ಮುಟ್ಟಬಾರದು ಎಂಬ ಸಂಪ್ರದಾಯದಿಂದ ದೇವಿಯೂ ನಡುಗುವಳು ತನ್ನೊಳಗೂ ಸ್ರವಿಸುವ ಸ್ರಾವ ಕಾಣದಂತೆ ತಡೆಗಟ್ಟುವದು ಹೇಗೆಂದು […]

ಕಾವ್ಯಯಾನ

ಕೆಂಚಬೆಕ್ಕಿಗೆ ಏನಾಯ್ತು ವಿಜಯಶ್ರೀ ಹಾಲಾಡಿ ಕೆಂಚಬೆಕ್ಕಿಗೆ ಏನಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡಗಡ ಚಳಿಗೆ ಬಿಸಿ ಬಿಸಿ ಬೋಂಡಾ ಪಾಕಂಪಪ್ಪನು ತಿಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಇರುವೆ ಸಾಲನು ಹಾ….ರಿ ನೆಗೆದು ಪುಟ್ಟಿಯ ಮನೆಗೆ ಬಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಮೀನಿನ ಮುಳ್ಳು ದೊಂಡೆಗೆ ಸಿಕ್ಕಿ ಕೆಮ್ಮಿ ಕೆಮ್ಮಿ ಸುಸ್ತಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡವ ಬೆಕ್ಕು ಹೊಯ್ ಕಯ್ ಮಾಡಿ ಕಾಲಿನ ಮೂಳೆ ಮುರಿದಾಯ್ತು […]

ಕವಿತೆ ಕಾರ್ನರ್

ನಕ್ಷತ್ರದಂತವಳನ್ನು ಪ್ರೀತಿಸಿದ ಕವಿಯ ಕಥೆ ಕು.ಸ.ಮದುಸೂದನ ನಕ್ಷತ್ರದಂತವಳನ್ನು ಪ್ರೀತಿಸಿದ ಕವಿಯ ಕಥೆ! ನಕ್ಷತ್ರದಂತವಳನ್ನು ಪ್ರೀತಿಸಿದ ಕವಿಯ ಕಥೆ! ಬರೆಸಿಕೊಳ್ಳಲು ಕವಿತೆ ಒಪ್ಪದಿದ್ದಾಗ ಗದ್ಯದತ್ತ ಮುಖ ಮಾಡಲು ಮನಸು ಒಲ್ಲೆಂದಾಗಲೆಲ್ಲ ಅವನು ಮಾಡುತ್ತಿದ್ದುದು ಒಂದೇ ಕೆಲಸ ಅವಳಿಗೆ ಪ್ರೆಮಪತ್ರಗಳನ್ನು ಬರೆಯುತ್ತಿದ್ದು. ಅವನೇನು ಆ ಪತ್ರಗಳನ್ನು ಪ್ರಿಯೆ ಎಂದೊ ಇಲ್ಲಾ ಅವಳ ಹೆಸರಿನಿದಲೋ ಶುರು ಮಾಡುತ್ತಿರಲಿಲ್ಲ ಪ್ರತಿ ಪತ್ರವೂ ಹಿಂದಿನ ಪತ್ರದ ಮುಂದುವರಿಕೆಯಂತಿರುತ್ತಿತ್ತು ಅಲ್ಲಿಯೂ ಅವನೇನು ಅವಳನ್ನು ಚಿನ್ನ ರನ್ನ ಎಂದು ಮುದ್ದಿಸುತ್ತಿರಲಿಲ್ಲ. ಕಳೆದ ರಾತ್ರಿಯ ತನ್ನ ಒಂಟಿತನದ ಬಗ್ಗೆ, […]

Back To Top