ಕಾವ್ಯಯಾನ

ಕಾವ್ಯಯಾನ

ನನಗಷ್ಟೆ ಗೊತ್ತು! ಲೋಕೇಶ್ ಅಷ್ಟು ಸುಲಭವಲ್ಲ ನಿನ್ನ ಉಳಿಸಿಕೊಳ್ಳುವುದು ಅಷ್ಟು ಸಲೀಸು ಅಲ್ಲ ನಿನ್ನ ಕಳೆದುಕೊಳ್ಳುವುದು ನೀನೆಂದು ಉನ್ಮಾದ ರುಚಿಗೆ ತಾಕೀದೊಡನೇ ನೀ ಕರೆದೊಯ್ಯುವ ಜಗತ್ತು ನನಗಷ್ಟೇ ಗೊತ್ತು! ನೀನೆಂದು ಭಾವನ್ಮೊದಾ ಮನಕ್ಕೆ ನೆನಪದೊಡನೇ ನೀ ಆವರಿಸಿಕೊಳ್ಳುವ ನಿಯತ್ತು ನನಗಷ್ಟೇ ಗೊತ್ತು! ನೀನೆಂದು ಸವಿ ವಿನೋದ ಮಾತಿಗೆ ಜೊತೆಯಾದೊಡನೇ ನೀ ಆಪ್ತವಾಗುವ ಅವಲತ್ತು ನನಗಷ್ಟೇ ಗೊತ್ತು! ನೀನೆಂದು ಉಸಿರ ನಾದ ಏರಿ ಇಳಿದೊಡನೇ ನನ್ನ ಎದೆಯಲ್ಲೆಳೆವ ಹೆಸರಂತು ನನಗಷ್ಟೇ ಗೊತ್ತು *************

ಕಾವ್ಯಯಾನ

ಯುಗಾದಿಯ ಆ ದಿನ ನೀ.ಶ್ರೀಶೈಲ ಹುಲ್ಲೂರು ಹೆದ್ದಾರಿಗಂಟೇ ಇರುವ ನನ್ನ ಮನೆ ಮಹಲಿನ ಮಹಡಿಯ ಬಾಲ್ಕನಿಯಲಿ ಬಂದು ನಿಂತೆ ಬಿಕೋ ಎನ್ನುವ ಸತ್ತುಬಿದ್ದ ರಸ್ತೆ! ಅಲ್ಲೊಂದು ಇಲ್ಲೊಂದು ಆಗೊಂದು ಈಗೊಂದು ಕಂಡು ಕಣ್ಮರೆಯಾಗುವ ಬೀದಿ ನಾಯಿ ಗಳು ತಮ್ಮ ವಿಸರ್ಜನಾ ವ್ಯೂಹ ದ ಕೊನೆಯ ಅಂಗದ ಅಂತಿಮ ಚಪಲವ ಲೈಟಿನ ಕಂಬಕೆ ಕಾಲೆತ್ತಿ ನೆಲಕೆ ತಳವೊತ್ತಿ ತೀರಿಸಿ ಕೊಂಡು ಕಂಬಿ ಕಿತ್ತವು! ಪ್ರಾಸಕ್ಕಂಟಿದ ‘ಕವಿತೆ ಸಾಲು’ ಇಂದು ನನ್ನನ್ನು ಪರದೇಶಿಯಾಗಿಸಿ ಕ್ರಾಸ್ ಕಂಟ್ರಿ ಓಟಕ್ಕಿಳಿದವು. ಸರಿ,ಬಂದಂತೆ ಬರೆದಿಡುವೆ […]

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ನಮ್ಮ ಪೇಲವ ನಗುವ ಕಂಡು ನಗುತಿರುವನೇ ದಿನಕರ ನಿಸ್ತೇಜ ಬದುಕನು ಕಂಡು ಮರುಗಿರುವನೇ ದಿನಕರ ವಸಂತ ಬಂದಿದ್ದಾನೆ ನಿಜ, ಎಂದಿನಂತಿಲ್ಲ ದಿನ ನಮ್ಮ ಗೋಳನು ಕಂಡು ಕರಗಿರುವನೇ ದಿನಕರ ಅವನೋ ಧಗಧಗಿಸಿದ್ದಾನೆ ಎಂದಿನ ಉಗ್ರತೆಯಲ್ಲಿ ಹೂಕರಗಳಿಂದ ಎತ್ತಿ ನಮ್ಮ ಮುದ್ದಿಸುವನೇ ದಿನಕರ ಅವನಿಂದಲೇ ನಳನಳಿಸಿದೆ ಇಳೆ, ಎಲ್ಲರ ಬಾಳು ಬಂದಿರುವ ಸಂಕಟಕೆ ಮದ್ದರೆಯುವನೇ ದಿನಕರ ಹೆಣ ಬಣಬೆ ಬಿದ್ದಿದೆ ಜಗದ ಬೀದಿಬೀದಿಗಳಲ್ಲಿ ಭರವಸೆಯ ಕಿರಣ ಸುರಿದು ಪೊರೆಯುವನೇ ದಿನಕರ ಕತ್ತಲು ಸರಿದು ಬೆಳಕು, […]

ಕಾವ್ಯಯಾನ

ನಾವೆಲ್ಲರೂ ಮನೆಯಲ್ಲೇ ಇದ್ದೇವೆ ರೇಖಾಭಟ್ ನಾವೆಲ್ಲರೂ ಮನೆಯಲ್ಲೇ ಇದ್ದೇವೆ ಒಂದೊಂದು ಖುರ್ಚಿಗೆ ಒಬ್ಬೊಬ್ಬರಂತೆ ಅಡುಗೆಮನೆ ಈಗ ಕೇಂದ್ರ ಸ್ಥಾನ ಟಿ.ವಿ ಹಾಲ್ ನಮ್ಮ ಆಸ್ಥಾನ ಬೀದಿಗಂತೂ ಹೋಗೋದಿಲ್ಲ ಅದಂತೂ ಈಗ – ಖಬರಸ್ಥಾನ! ಮಾವನ ವಾಕಿಂಗ್ ಸ್ಟಿಕ್ ಗೋಡೆ ಮೂಲೆಯಲ್ಲೆ ನಿದ್ರೆಗೆ ಜಾರಿದೆ! ಅತ್ತೆಯ ಹೂವಿನ ಚೊಬ್ಬೆ ದೇವಸ್ಥಾನ ಮರೆತು ಬೊರಲು ಬಿದ್ದಿದೆ! ಪುಟ್ಟ ಪಿಂಕ್ ಸೈಕಲ್ ಮರದ ಬುಡದಲಿ ಒರಗಿ ನಿಂತು ಇಷ್ಟಿಷ್ಟೇ ಬಣ್ಣವ ಕಳೆದುಕೊಳ್ಳುತ್ತಿದೆ! ಕೊರೊನಾ ಬೂತದ ಚಿತ್ರ ಬಿಡಿಸಿ ಅದಕ್ಕೆ ಕ್ರಾಸ್ ಮಾರ್ಕ್ […]

ಕವಿತೆ ಕಾರ್ನರ್

ರಣಹಸಿವಿನಿಂದ ಮೊನ್ನೆ ಇವರೂ ಹಲವು ಯುದ್ದಗಳ ಗೆದ್ದಿದ್ದರು ಗೆದ್ದ ರಾಜ್ಯದ ಹೆಣ್ನುಗಳ ಬೇಟೆಯಾಡಿದ್ದರು ಇದೀಗ ಸಾಂತ್ವಾನ ಕೇಂದ್ರಗಳ ತೆರೆದು ಕೂತಿದ್ದಾರೆ! ಮೊನ್ನೆ ಇವರೂ ಊರೂರುಗಳಿಗೆ ಬೆಂಕಿ ಹಚ್ಚಿದ್ದರು ಉರಿದ ಮನೆಗಳಲ್ಲಿ ಹೆಂಗಸರು ಮಕ್ಕಳೆನ್ನದೆ ತಲೆ ತರೆದಿದ್ದರು ಇದೀಗ ಆನಾಥಾಶ್ರಮಗಳ ತೆರೆದು ಕೂತಿದ್ದಾರೆ! ಮೊನ್ನೆ ಇವರೂ ಕೋವಿ ಖಡ್ಘಗಳ ಹಿಡಿದಿದ್ದರು ಇದೀಗ ಧರ್ಮ ಗ್ರಂಥಗಳ ಪಾರಾಯಣ ಮಾಡುತ್ತಿದ್ದಾರೆ! ಮೊನ್ನೆಮೊನ್ನೆಯವರೆಗೂ ನಡೆದ ಅಕಾರಣ ಯುದ್ದಗಳಿಗೀಗ ಸಕಾರಣಗಳ ಪಟ್ಟಿ ಮಾಡುತ್ತ ಕೂತಿದ್ದಾರೆ ತರಿದ ತಲೆಗಳ ಭೋಗಿಸಿದ ಯೋನಿಗಳ ಕಚ್ಚಿದ ಮೊಲೆಗಳ ಕಲಸಿಹಾಕಿದ […]

ಕವಿತೆ ಕಾರ್ನರ್

ನಾವೇನು ವ್ಯಬಿಚಾರಿಗಳಾಗಿರಲಿಲ್ಲ! ಅವಳನ್ನು ಪ್ರೀತಿಸಿದ್ದು ನಿಜಹೆಸರಲ್ಲೇನಿದೆ ಹೇಳಿಸುಶೀಲಾ, ಶಕೀಲಾ, ಶೈನಿ!ಏನಾದರು ಒಂದಂತು ಆಗಿರಲೇ ಬೇಕೆಂಬ ಹಟ ನನಗಂತು ಇರಲಿಲ್ಲ! ಹಾಗೇನೆ ನನ್ನ ಹೆಸರುಮಹೇಶ, ಮುಬಾರಕ್, ಮ್ಯಾಕ್ಹೀಗೇನೆ ಯಾವುದಾದರೊಂದು ಆಗಿರಲೇ ಬೇಕೆಂಬ ಹಟಅವಳಿಗೂ ಇದ್ದಂತೆ ಕಾಣಲಿಲ್ಲ… ನಮ್ಮ ಮಿಲನದ ಉನ್ಮತ್ತ ಕ್ಷಣದೊಳಗೂಅವಳಾಗಲಿ ನಾನಾಗಲಿ ಅಪ್ಪಿ ತಪ್ಪಿಯೂನಮ್ಮಹೆಸರುಗಳ ಪಿಸುಗುಡಲಿಲ್ಲ!ಅಷ್ಟು ಅನಾಮಧೇಯರಾಗಿ ಪ್ರೇಮಿಸಿದೆವು. ಹೊರಗಿನವರಿಗೆ ನಾವು ಗೊತ್ತಿದ್ದುದು ನಮ್ಮ ಹೆಸರುಗಳಿಂದ ಮಾತ್ರಆದರೆ ಆ ಹೆಸರುಗಳಾಚೆಯಲ್ಲಿಯೂಇರುವ ನಮ್ಮ ಐಡೆಂಟಿಟಿಯನ್ನುಹುಡುಕಿಕೊಳ್ಳುವುದು ನಮಗೆ ಅನಿವಾರ್ಯವಾಗಿತ್ತು. ಹಾಗಂತ ನಾನು ವಿಟನಾಗಿರಲಿಲ್ಲಅವಳೇನು ಜಾರಿಣಿಯಾಗಿರಲಿಲ್ಲ!************* ಕು.ಸ.ಮದುಸೂದನ

ಅನುವಾದ ಸಂಗಾತಿ

ಈ ದಿನ ಮೂಲ: ಮೆರಿ ಒಲಿವಿರ್( ಅಮೇರಿಕಾ ಕವಿಯಿತ್ರಿ) ಕನ್ನಡಕ್ಕೆ: ಕಮಲಾಕರ ಕಡವೆ ಈ ದಿನ ನನ್ನ ಹಾರಾಟ ಕಡಿಮೆ ಮಾಡಿದ್ದೇನೆಒಂದು ಮಾತನೂ ಆಡುತ್ತಿಲ್ಲ ನಾನುಹೆಬ್ಬಯಕೆಗಳ ಎಲ್ಲ ಮಾಟಮಂತ್ರಗಳ ಮಲಗಿಸಿದ್ದೇನೆ. ಜಗ ಸಾಗಿದೆ ಅದು ಸಾಗಬೇಕಾಗಿರುವಂತೆಹೂದೋಟದಲ್ಲಿ ಮೆಲ್ಲಗೆ ಜೇನಿನ ಝೇಂಕಾರಮೀನು ಕುಪ್ಪಳಿಸಿದೆ, ನೊರಜು ಯಾರದೋ ಆಹಾರವಾಗಿದೆಮುಂತಾಗಿ. ನಾನು ಮಾತ್ರ ಈ ದಿನ ರಜೆಯಲ್ಲಿದ್ದೇನೆಪುಕ್ಕದಷ್ಟು ಶಾಂತಚಲಿಸದೆಯೂ, ಅಪಾರ ದೂರವನ್ನುಕ್ರಮಿಸುತ್ತಿದ್ದೇನೆ ನಿಶ್ಚಲತೆ, ಮಂದಿರದ ಒಳಹೊಗಲುಇರುವ ಬಾಗಿಲುಗಳಲ್ಲೊಂದು. ***** Today I’m flying low and I’mnot saying a wordI’m […]

ಪ್ರಸ್ತುತ

ಗೋಲ್ಡನ್ ಟೈಮ್ ಸ್ಮಿತಾ ರಾಘವೇಂದ್ರ ಅಬ್ಬಬ್ಬಾ ಅಂದ್ರೆ ಮೂರುದಿನ ಇರಬಹುದಪ್ಪಾ ಮನೆಲಿ ಅದಕ್ಕಿಂತ ಹೆಚ್ಚಿಗೆದಿನ ಬಾಗಿಲುಹಾಕಿ ಕೂರಲು ಅಸಾಧ್ಯ..ಆದರೆ ಬರೋಬ್ಬರಿ ಇಪ್ಪತ್ತೊಂದು ದಿನಗಳಕಾಲ ಮಹಾಮಾರಿ ಕೋವಿಡ್ 19 ತೊಲಗಿಸಲು ಮನೆಯೇ ಮದ್ದು ಎಂದು,ಜನಹಿತಕ್ಕಾಗಿ ಜಾರಿಮಾಡಿದ ಸರ್ಕಾರದ ನಿಯಮ ಪಾಲಿಸದೇ ಇರಲು ಸಾಧ್ಯವಿಲ್ಲ.. ಲಕ್ಷಣರೇಖೆ ಹಾಕಿ ಬಾಗಿಲು ಹಾಕಿ ಕೊಳ್ಳುವದು ಉತ್ತಮ ಕೆಲಸ ಆದರೆ ಅದೆಷ್ಟು ಜನರಿಗೆ ಒಳಗೊಳಗೇ ಕಸಿವಿಸಿ,ದಿಗಿಲು,ಇನ್ನೇನು ಬದುಕೇ ಮುಗಿಯಿತೇ!? ಎನ್ನುವ ಭಾವ,ಬಾಗಿಲು ಹಾಕಿ ಕೂತು ಏನು ಮಾಡುವದು ಎನ್ನುವ ಗೊಣಗು. ತಲೆ ಕೆಡಿಸಿಕೊಳ್ಳಬೇಡಿ ಅಯ್ಯೋ […]

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ನೆರಳ ಕಂಡೂ ಬೆಚ್ಚ ಬೇಕಾಗಿದೆ ಜೀವ ತಲ್ಲಣಿಸಿದೆ ಮುಂದೇನು ಕಾದಿದೆ ತಿಳಿಯದೆ ಜೀವ ತಲ್ಲಣಿಸಿದೆ ಗೋಡೆ ನಾಲ್ಕರ ನಡುವೆ ಬಂದಿಯಾಗಿದೆ ಬದುಕು ಹೊರ ದಾರಿಗಳೇ ಕಾಣದೆ ಜೀವ ತಲ್ಲಣಿಸಿದೆ ಹತ್ತಾರು ತಾಸಿನ ಬಂದ್ ಈಗ ವಾರಗಳ ಲೆಕ್ಕ ಭಯ ಕತ್ತು ಹಿಸುಕುತಿದೆ ಜೀವ ತಲ್ಲಣಿಸಿದೆ ಮೂಗು ಕಣ್ಣುಗಳನ್ನೇ ಮುಟ್ಟುವಂತಿಲ್ಲ ಈಗ ಕೈ ತೊಳೆದಿದ್ದನ್ನೇ ತೊಳೆದಿದೆ ಜೀವ ತಲ್ಲಣಿಸಿದೆ ಕಾಣದ ಕ್ರಿಮಿಯ ದಾಳಿಗೆ ಆಹುತಿಯಾದವರೆಷ್ಟು ಕೊನೆಯೆಲ್ಲಿ ಯಾವಾಗ ಅರಿಯದೆ ಜೀವ ತಲ್ಲಣಿಸಿದೆ ಎಲ್ಲಿಂದಲೂ ಎಷ್ಟು […]

ಜ್ಞಾನಪೀಠ ವಿಜೇತರು

ಯು.ಆರ್.ಅನಂತಮೂರ್ತಿ..! ಜ್ಞಾನಪೀಠ ಪುರಸ್ಕೃತ ಯು.ಆರ್.ಅನಂತಮೂರ್ತಿ..! ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿ ೧೯೯೪ರಲ್ಲಿ ಬಂದಾಗ ಕನ್ನಡ ಸಾಹಿತ್ಯ ಲೋಕ ಮತ್ತೊಮ್ಮೆ ಇಡೀ ದೇಶದ ಗಮನ ಸೆಳೆಯಿತು. ಈ ಗೌರವ ಪಡೆದವರು ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ… ಎಲ್ಲರಿಗೂ ಅವರವರ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಅತ್ಯಗತ್ಯ ಎಂದು ಬಲವಾಗಿ ಪ್ರತಿಪಾದಿಸುವ ಅನಂತಮೂರ್ತಿ; ವಿದೇಶಗಳ ಹಲವಾರು ಭಾಷೆ ತಿಳಿದಿರುವ ನಮಗೆ ನಮ್ಮ ಅಕ್ಕಪಕ್ಕದ ನಾಡಿನ ಭಾಷೆಗಳು ಗೊತ್ತೇ ಇಲ್ಲದ್ದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಜಗತ್ತಿನ ಬೇರೆ ಬೇರೆ ಭಾಷೆಗಳ ಹಲವು ಮಹತ್ವದ […]

Back To Top