ಗಜಲ್

ಗಜಲ್

ಗಜಲ್ ಶೈಲಜಾ.ವಿ.ಕೋಲಾರ ಊರಿಗೆ ಊರೇ ಬೆಂಕಿಯಲ್ಲಿ ಬೇಯುತ್ತಿದೆ ಕಾಯುವರಾರಿಲ್ಲಿಜಾತಿಗೆ ಜಾತಿ ಜಿದ್ದಾಜಿದ್ದಿ ಶಾಂತಿ ಸೊರಗುತ್ತಿದೆ ಕಾಯುವರಾರಿಲ್ಲಿ ಕಳೆ ಬೆಳೆದ ಹೊಲದಲ್ಲಿ ಬೆಳೆ ಬೆಳೆಯಲು ಜಾಗವುಂಟೇಕೂಳಿಲ್ಲದ ಹಸುಳೆಯ ಕೂಗು ಒಣಗುತ್ತಿದೆ ಕಾಯುವರಾರಿಲ್ಲಿ ಸ್ವಸ್ಥ ಸಂದೇಶ ಹೊತ್ತುಬಂದ ಬಿಳಿ ಪಾರಿವಾಳ ಕೆಂಪಾಗಿ ಹಾರುತ್ತಿದೆಗಾಯ ಒಸರುವ ರಕ್ತಕೆ ಗಾಳಿ ಗೋಳಾಡುತ್ತಿದೆ ಕಾಯುವರಾರಿಲ್ಲಿ ಮೇಲು ಕೀಳೆಂಬ ಬೇರು ಬಲವಾಗಿ ಮತ ಧರ್ಮ ಸಿಟಿಲೊಡೆದಿದೆಊರ ಕೆರೆ ಜಾಲಿ ಮರದ ಮುಳ್ಳು ನಂಜೇರುತ್ತಿದೆ ಕಾಯುವರಾರಿಲ್ಲಿ ಹಲವು ಹೂಗಳು ಒಂದೇ ಮಾಲೆಯಲಿ ನೋಟ ಸೆಳೆದಿವೆಕುರಬುವ ಕೈಗೆ ಮಾತಿಲ್ಲದ […]

ಪವರ್ ಲೂಮ್…!

ಪವರ್ ಲೂಮ್…!(ನೇಕಾರನ ಸ್ವಗತ) ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೊತ್ತು ಕೂಡ ಮೂಡದ ಹೊತ್ತಿಗೆಈಜುಗಾರ ತುಂಬು ಹೊಳೆ ಧುಮಿಕಿದ ಹಾಗೆ,ಮೈಮುರಿವ ಆಯಾಸದಲುಒಂದು ದಿನ ತಪ್ಪದ ಹಾಗೆಗುಂಡಿಯೊಳು ಇಳಿದರಾಯ್ತು – ಕಾಲೊದರಿ…‘ತನ್ನ ಪುಟ್ಟ ಎಳೆಯ ಹಾಸುಹೊಕ್ಕಲಿನೂಲಿಗೇ ಅರಿವೆ ನೇಯುವ ಸಿರಿಲಾಳಿಗೋ ಮುಗಿಲಂತೆ ಗುಡುಗಿಹರಿದೋಡುವ ತವಕ!’ ನೇಯುವುದುನಮಗೆ ಅಂತರಂಗದಲಿ ಒಪ್ಪಿಅಪ್ಪಿದ ಕಸುಬುಹಗಲಿರಲಿ ಇರುಳಿರಲಿಅಥವ ನಡುರಾತ್ರಿಯೇ ಇರಲಿಬೆತ್ತಲೆ ಬೆಚ್ಚಗೆ ಮುಚ್ಚುವ ಬದುಕಲಿಮನೆಯ ಒಬ್ಬೊಬ್ಬರಿಗೂ ಕೈತುಂಬ ಕೆಲಸ!ಇಷ್ಟಾದರೂ ಒಂದೆರಡು ನವೆದ ಅಂಗಿತೇಪೆಯಾದ ಪಂಚೆ ನಮ್ಮೊಡಲ ಮುಚ್ಚಲುಒಳಗಿರದು ಒಂದು ಕಾಚ ಎಂದೂ! ದಢಕ್ಕನೆ-ನಮ್ಮ ತುತ್ತಿನ […]

ಬೀದಿಯ ಪ್ರಪಂಚ….

ಲಲಿತ ಪ್ರಬಂಧ ಬೀದಿಯ ಪ್ರಪಂಚ…. ಟಿ.ಎಸ್.ಶ್ರವಣಕುಮಾರಿ ಹಾದಿ ಬೀದಿಗಳಿಗೆ ತನ್ನದೇ ಒಂದು ಆಕರ್ಷಣೆಯಿದೆ. ಅದರದ್ದೇ ಒಂದು ಪ್ರಪಂಚ. ಎಂಥ ಅಳುತ್ತಿರುವ ಪುಟ್ಟ ಮಕ್ಕಳನ್ನೂ ಎತ್ತಿಕೊಂಡು ಬೀದಿಗೆ ಕರೆದುಕೊಂಡು ಬಂದರೆ ಕೆಲವೇ ಕ್ಷಣಗಳಲ್ಲಿ ಅವುಗಳ ಅಳು ಮಾಯ. ಅವುಗಳಿಗೆ ತೋರಿಸುವುದಕ್ಕೆ ಇಡಿಯ ಪ್ರಪಂಚವೇ ಅಲ್ಲಿದೆ. “ಪುಟ್ಟೂ ಅಲ್ನೋಡು ಕಾರು.. ಬಂತು ಬಂತು ಬಂತು…. ಈಗ ಸ್ಕೂಟರ್ ನೋಡೋಣ.. ಮಾಮಾ ಬಂದ್ಮೇಲೆ ಸ್ಕೂಟರ್‌ನಲ್ಲಿ ರೌಂಡ್ ಹೋಗ್ತೀಯಾ…  ಇದೇನಿದು..? ಸ್ಕೂಲು ವ್ಯಾನು.. ಮುಂದಿನ್ವರ್ಷದಿಂದ ನೀನೂ ಸ್ಕೂಲಿಗೆ ಹೋಗ್ತೀಯಾ ಅಣ್ಣಾ ತರ…. ಇಲ್ನೋಡು […]

ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ

ಲೇಖನ ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ ಶಿವರಾಜ್ ಮೋತಿ ಸಮಾಜವೆಂದರೆ ಜನ,ಗುಂಪು ಎಂದರ್ಥವಾಗುತ್ತದೆ. ವಿಧವಿಧವಾದ ಜನ,ಅನೇಕ ಗುಂಪುಗಳು ಇರುತ್ತವೆ. ಆದರೆ ಇಂದಿನ ಸಮಾಜ ಮೂಲಭೂತವಾದಿ,ಡೊಂಗಿ ರಾಜಕಾರಣಿಗಳ ಕೈಗೆ ಸಿಕ್ಕು ವಿಲ-ವಿಲವಾಗಿ ಬಿದ್ದು ನರಳಾಡುತ್ತಿದೆ. ಸಮಾಜದಲ್ಲಿದ್ದ ನೂನ್ಯತೆಗಳನ್ನು ಸರಿಪಡಿಸಲು,ಸಮ ಸಮಾಜದ ಕನಸನ್ನು ಕಟ್ಟಲು ಹಲವಾರು ಮಾರ್ಗಗಳಿವೆ. ಅದರಲ್ಲೂ ವಿಶೇಷವಾಗಿ ಸಾಹಿತ್ಯವೂ ಒಂದು.ಸಾಹಿತ್ಯದಲ್ಲಿ ಹಲವಾರು ಪ್ರಕಾರಗಳು ಜನಪದ, ಜಾನಪದ,ಪುರಾಣ,ನಾಟಕ,ಕಲೆ, ಸಂಗೀತ ಮುಂತಾದವೆಲ್ಲವೂ ಒಂದಕ್ಕೊಂದು ಸಂಬಂಧವಿದ್ದೆ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟಲು ಅನೇಕ ಮಹನೀಯರು,ಶ್ರಮಿಸಿದ್ದಾರೆ,ಶ್ರಮಿಸುತ್ತಿದ್ದಾರೆ ಕೂಡ ಹೌದು.ಸಾಹಿತ್ಯವು ಒಡೆದ ಮನಸ್ಸುಗಳನ್ನು […]

ಅಂಕಣ ಬರಹ ಎಲ್ಲಾ ಒಳ್ಳೆಯದೇ ಆಗುತ್ತೆ… ಈ ಥರದ ಮಾತುಗಳನ್ನ ನಾವು ಬಹಳಷ್ಟು ಸಾರಿ ಕೇಳಿರ್ತೇವೆ. “ಒಳ್ಳೇವ್ರಿಗೆ ಒಳ್ಳೆಯದೇ ಆಗುತ್ತೆ”, “ನಾವು ಒಬ್ರಿಗೆ ಒಳ್ಳೇದು ಮಾಡಿದ್ರೆ ದೇವರು ನಮಗೆ ಒಳ್ಳೇದು ಮಾಡ್ತಾನೆ”, “ತಾತ ಮಾಡಿದ ಪಾಪ ಮೊಮ್ನೊಗನಿಗೆ”… ಹೀಗೆ ಹಲವಾರು ಮಾತುಗಳು… ಇವೆಲ್ಲ ಬರಿಯ ಮಾತುಗಳಲ್ಲ, ಅದೊಂದು ದೈತ್ಯ ಶಕ್ತಿಯ ನಂಬಿಕೆ, ನಮ್ಮ ಬದುಕನ್ನು ಮುನ್ನಡೆಸುವ ಶಕ್ತಿ. ನನ್ನ ತಂದೆ ಒಬ್ಬ ಪ್ರಾಮಾಣಿಕ ಹೈಸ್ಕೂಲ್ ಗಣಿತದ ಮೇಷ್ಟ್ರು. ತಮ್ಮ ವಿದ್ಯಾರ್ಥಿಗಳಿಗೆ ಸ್ವಂತ ಮಕ್ಕಳ ರೀತಿಯಲ್ಲೇ ಭಾವಿಸಿ ಪಾಠ […]

ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ!

ಅನುಭವ ಕಥನ  ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ! ವಿಜಯಶ್ರೀ ಹಾಲಾಡಿ ಹೋಳಿಹಬ್ಬ ಬರುವುದು ಬೇಸಗೆಯ ವಸಂತಮಾಸದಲ್ಲಿ… ಅಂದರೆ ಮಾವು, ಗೇರು ಮತ್ತು ಕಾಡಿನ ಬಹುತೇಕ ಮರಗಳು ಚಿಗುರು, ಹೂ ಬಿಡುವಕಾಲದಲ್ಲಿ. ವಿಜಿಯ ಮನೆ ಹತ್ತಿರದ ಕಾಡುಗಳಲ್ಲಿ ಕೆಲವು ಮಾವಿನಮರಗಳಿದ್ದವಲ್ಲ, ಅವು ಚಿಗುರು ಬಿಡುವುದನ್ನು ನೋಡಬೇಕು! ಇಡಿ ಮರವೇ ಹೊಳೆಯುವ ಕೆಂಪು ಬಣ್ಣವಾಗಿಬಿಡುತ್ತಿತ್ತು. ಇದೇ ಸಂದರ್ಭದಲ್ಲಿ ಹೋಳಿಹಬ್ಬವೂ ತನ್ನ ಬಣ್ಣ ಸೇರಿಸಿ ಕೆಂಪು, ಹಳದಿ, ಹಸಿರು, ಕಿತ್ತಳೆ ವರ್ಣಗಳಲ್ಲಿ ಅವರ ಊರು ಹೊಳೆಯುತ್ತಿತ್ತು. ಅಲ್ಲಿ ಕುಡುಬಿ ಜನಾಂಗದವರ ಮನೆಗಳು ಸಾಕಷ್ಟಿದ್ದವು. […]

ಅಂಕಣ ಬರಹ ಹೊಸ ದನಿ ಹೊಸ ಬನಿ – ೧೫. ದೀರ್ಘ ಶೀರ್ಷಿಕೆಗಳ ಭಾರದಲ್ಲೂ ಸರಳ ನಡಿಗೆಯ ಮಂಜುಳ. ಡಿ  ಕವಿತೆಗಳು ಮಂಜುಳ ಡಿ ಈಗಾಗಲೇ ವಿಶ್ವವಾಣಿ ಪತ್ರಿಕೆಯ ಅಂಕಣ ಬರಹಗಾರರಾಗಿ ಕವಯತ್ರಿಯಾಗಿ ಖ್ಯಾತರಾದವರು. ಈಗಾಗಲೇ ಮೂರು ಪುಸ್ತಕಗಳನ್ನು ಪ್ರಕಟಿಸಿರುವ ಅವರು ಬೆಂಗಳೂರಿನವರು. ಅವರ ಫೇಸ್ಬುಕ್ ಬರಹಗಳಲ್ಲಿ ಗದ್ಯ ಪದ್ಯಗಳ ಮಿಶ್ರಣವನ್ನು ಕಾಣಬಹುದು. “ಆಸೆಯ ಕಂದೀಲು” ಕವನ ಸಂಕಲನಕ್ಕೆ ಕಾವ್ಯ ವ್ಯಾಮೋಹಿ ವಾಸುದೇವ ನಾಡಿಗರು ಮುನ್ನುಡಿ ಬರೆದಿರುವುದರಿಂದ ಸಂಕಲನದ ಗುಣ ನಿಷ್ಕರ್ಷೆ ಸುಲಭದ್ದೇ ಆಗಿದೆ. ಈ ಸಂಕಲನ […]

ಅಂಬರ ಫಲ!

ಕವಿತೆ ಅಂಬರ ಫಲ! ಗಣಪತಿ ಗೌಡ ಅಂಬರದಲಿ ತೂಗುತಿಹುದುಒಂದೇ ಒಂದು ಹಣ್ಣು,ಬೆಳದಿಂಗಳ ರಸವೇ ಕುಡಿದು––ತಂಪು ರಸಿಕ ಕಣ್ಣು!/ಅಂಬರದಲಿ. ……// ಕೆಲ ದಿನದಲಿ ಕರಗಿ ಬಲಿತುತುಂಬಿ ಪೂರ್ಣ ಪ್ರಾಯ!ಹೊರ ಸೂಸಿದೆ ಹೊನ್ನ ಕಿರಣಕುಡಿದು ಹೊನ್ನ ಪೇಯ!/ಅಂಬರದಲಿ……….// ಹೊಂಬೆಳಕದು ಸುರಿವ ಜೇನು!ಚಪ್ಪರಿಸುತ ಜಿಹ್ವೆ,ಮುಳುಗೇಳುತ ಆನಂದದಿ,ಮರೆತು ಎಲ್ಲ ನೋವೇ!/ಅಂಬರದಲಿ……….// ತಂಪು ಬೆಳಕ ಬೆರಳಿನಲ್ಲಿನೇವರಿಸುತ ಎಲ್ಲ,‘ಶಾಂತಗೊಳ್ಳಿ’ ಎನುವ ತೆರದಿಸವರುತೆಲ್ಲ ಗಲ್ಲ! /ಅಂಬರದಲಿ………..// *****************************************

“ಉಳ್ಳವರು ಶಿವಾಲಯವ ಮಾಡುವರು”

ಅನಿಸಿಕೆ “ಉಳ್ಳವರು ಶಿವಾಲಯವ ಮಾಡುವರು” ವೀಣಾ ದೇವರಾಜ್           ನಿಜಕ್ಕೂ ಅಣ್ಣನ ಈ ವಚನವು ಬರಿಯ ಪುಸ್ತಕಗಳಿಗೆ ಮತ್ತು ಹಾಡುಗಾರರಿಗೇ ಸೀಮಿತವಾಗಿವೆ. ಕಾರ್ಯರೂಪಕ್ಕೆ ಬರುವುದೆಂದೊ. ಹಿರಿಯರು ‘ಉಳ್ಳವರು ಶಿವಾಲಯವ ಮಾಡುವರು ‘ ಎಂದರು, ಆದರೆ ಇಂದಿನ ಉಳ್ಳವರು ತಮಗಾಗಿ ತಮ್ಮ ಕುಟುಂಬಕ್ಕಾಗಿ ಮಾತ್ರ ಆಲಯ ಮಾಡಿಕೊಳ್ಳುವರೇ ಹೊರತು ಸಮಾಜಕ್ಕಾಗಿ ಯಾವ ಉಪಯೋಗಕ್ಕೂ ಬಾರದು. ಇಂಥಹವರಿಂದ ಪರಿವರ್ತನೆ ಬಯಸುವುದು ಸಾಧ್ಯವೇ?        ಆಯ್ದಕ್ಕಿ ಲಕ್ಕಮ್ಮ, ಮಾರಯ್ಯ ದಂಪತಿಗಳು, ದಾಸೋಹ ಮಾಡುವ ಶಕ್ತಿ ಇರದಿದ್ದರೂ ಅಂತಹ ಮನಸ್ಸಿತ್ತು. ಲಕ್ಕಮ್ಮತನ್ನ ಬಿಡುವಿನ […]

ಮಿಸ್ಟರ್ ಅನ್ ಫ್ರೆಂಡ್

ತೆಲುಗಿನಿಂದ ಅನುವಾದವಾದ ಕಥೆ ತೆಲುಗು ಮೂಲಃ ಶ್ರೀ ರಾಮದುರ್ಗಂ ಮಧುಸೂದನ ರಾವು                   ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಈಗೇನು ಮಾಡೋದು…..? ಗೇಟಿನಿಂದಲೇ ಹೊರಗೋಡಿಸಿದ್ದರೆ ಚೆನ್ನಾಗಿರೋದಾ….. ಈಗಂತೂ ಆ ಛಾನ್ಸ್ ಇಲ್ಲ. ಬಂದು ಕೂತಿದ್ದಾನೆ. ಬರೀ ಪರರ ಜೀವನಗಳಲ್ಲಿ ಇಣುಕಿ ನೋಡುವುದು ಬಿಟ್ಟರೆ ಇಷ್ಟು ವರ್ಷಗಳ ತನ್ನ ಜೀವನದಲ್ಲಿ ಮಾಡಿದ್ದು ಬೇರೇ ಏನಾದರೂ ಇದೆಯಾ ? ಎಲ್ಲಿ ಸಿಕ್ಕರೆ ಅಲ್ಲಿ…. ಯಾವಗ ಸಿಕ್ಕರೆ ಅವಾಗ…. ಹೇಗೆ ಸಿಕ್ಕರೆ ಹಾಗೆ ತೂರಿಬಿಡೋದೇ! ********** ಉಂಡಾಡಿ….. ಗಾಳಿ ಜೀವ…. ಶಿವಕುಮಾರನ […]

Back To Top