ದೀಪಾವಳಿ

ದೀಪಾವಳಿ

ಕವಿತೆ ದೀಪಾವಳಿ ವಿದ್ಯಾಶ್ರೀ ಅಡೂರ್ ಮನಗಳ ನಡುವಿನ ತಮಗಳ ಕಳೆಯಲಿಬೆಳಕಿನ ಹಬ್ಬ ದೀಪಾವಳಿನೀಗದ ಬೆಳಕು ತುಂಬುತ ಬದುಕಲಿಕಳೆಯಲಿ ಕತ್ತಲ ಅಸುರನ ಧಾಳಿ ಬಗೆಬಗೆ ಖಾದ್ಯದ ಚಪಲವ ಮನದಲಿಹುಟ್ಟಿಸುವಂತ ಖಾನಾವಳಿಸುಡುಮದ್ದಿನಲಿ ಪರಿಸರ ಕೆಡಿಸದೆಮಾಡದೆ ಇರೋಣ ಹಾವಳಿ ಹಿಂದಿನ ದಿನಗಳ ಹಬ್ಬದ ನೆನಪುಬಿಟ್ಟಿದೆ ಮನದಲಿ ಕಚಗುಳಿಹಿಂದೆಗೂ ಮುಂದೆಗೂ ಕೊಂಡಿಗಳಾಗುತಹರಡುವ ಹಬ್ಬದ ಬಳುವಳಿ. ****************************

ಶ್ರೀಗಂಧದ ಕೊರಡು

ಕಥೆ ಶ್ರೀಗಂಧದ ಕೊರಡು  ಸುಧಾ ಭಂಡಾರಿ‌ ಪಾರು ಎಂದಿನಂತೆ ಊಟದ ನಂತರ ಒಬ್ಬಳೆ ಟಿವಿ ಹಚ್ಗಂಡು ಕೂತಿದ್ಲು.ತುಂಬಾ ದಿನಗಳ ನಂತ್ರ ರಾಜ್ ಕುಮಾರ ನ ‘ ಜೀವನ ಚೈತ್ರ’ ತಾಗಿತ್ತು.ಪಾರುಗೆ ರಾಜ್ ಕುಮಾರ ಸಿನಿಮಾ ಅಂದ್ರೆ ಪಂಚಪ್ರಾಣ. ಸಿನಿಮಾದಲ್ಲಿ ರಾಜ್‍ಕುಮಾರ್ ಹೆಂಡತಿ ಬಸುರಿ ಎಂದು ಗೊತ್ತಾದಾಗ ಅವಳನ್ನ ಎತ್ಗಂಡು ‘ ಲೇ ನೀನು ನನ್ ಮಗೂನ ತಾಯಿ ಆಗ್ತಿದ್ದೀಯಾ’ ಅಂತ ಮುದ್ದಾಡಿ ಒಂದು ಹಾಡು ಇರೋ ಸೀನ್ ಬರ್ತದೆ..ನೋಡ್ತಾ ನೋಡ್ತಾ ಪಾರೂನ ಅಂತರಂಗದ ಆಸೆ ಮತ್ತೆ ಧುಸ್ಸೆಂದು […]

ಆರದಿರಲೀ ದೀಪ

ಕವಿತೆ ಆರದಿರಲೀ ದೀಪ ಶಾಂತಲಾ ಮಧು ಆರದಿರಲೀ ದೀಪಉತ್ಸಾಹದೀ ದೀಪಆರದಿರಲಿ ಕ್ಷಣಿಕ ಬದುಕಿನಸುಡುವ ಗಾಳಿಯಕನಸ ಮಾತಿನಭ್ರಮೆಯ ಬೆಂಕಿಗೆಆರದಿರಲಿ ದೀಪ ಮುಗಿಲ ಮೋಡದನಡುವೆ ಇಣುಕುವತಮವ ಕಳೆಯುವರವಿಯ ತೆರದಲಿ ಸ್ನೇಹ ಸಿಂಚನ ರಕ್ಷೆ ಇರಲಿಹರಿವ ನದಿಯ ಹರಿತವಿರಲಿಆರದಿರಲಿ ಉತ್ಸಾಹದೀ ದೀಪಆರದಿರಲಿ ಪ್ರೀತಿಉಸಿರ ಹಸಿರು ಉಳಿಯಲಿಮನಸು ಮನಸಿಗೆದೀಪವಾಗಲಿಆರದಿರಲಿ ದೀಪಉತ್ಸಾಹದೀ ದೀಪಆರದಿರಲಿ *******************

ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ

ಕವಿತೆ ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ ನಾಗರಾಜ್ ಹರಪನಹಳ್ಳಿ ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ ; ಅದಕೆ ನಾಮಗುವಿನಂತೆ ‌ನಿನ್ನ ಎದೆಗೊತ್ತಿಕೊಂಡೇ ಇರುವೆ ಜಗದ ತುಂಬಾ ಮುಗಿಲ ಬೆಳಕ ಯಾಕೆ ತುಂಬಿದೆ ಒಲವೇಅದಕೆ ನಾಅವಳ ಜಗದ ಕತ್ತಲೆಯಲ್ಲೂ ದೂರ ಇರುವ ಅವಳಹುಡುಕುತಿರುವೆ ನೂರಾರು ಬಣ್ಣಬಣ್ಣದ ಹೂಗಳ ಯಾಕೆ ಈ ಭೂಮಿಗೆ ಕಳಿಸಿದೆ ಒಲವೇಅದಕೆ ನಾ ; ಅವಳ ಕನಸುಗಳಿಗೆ ಬಣ್ಣ ತುಂಬಿದೆ ಯಾಕೆ ಪ್ರತಿ ಉಸಿರಿಗೂ ನಿನ್ನ ಹೆಸರ ಬರೆದೆ ಒಲವೇಅದಕೆ ನಾನಿನ್ನ ಧ್ಯಾನಿಸುವೆ […]

ಶುಭ ದೀಪಾವಳಿ

ಕವಿತೆ ಶುಭ ದೀಪಾವಳಿ ಮುರಳಿ ಹತ್ವಾರ್ ಒಣಗುವ ಮುನ್ನವೇ ಉದುರಿದ ಹಸಿ-ಹಸಿಯ ಎಲೆಗಳ ರಾಶಿ ಇಬ್ಬನಿಯ ತಬ್ಬಿದ ನೆಲವ ತುಂಬಿದೆ ಯಾವ ಹಸಿವಿನ ಹೊಟ್ಟೆಯ ಹೊಂಚೋ? ನಡುಗುತ ಸೊರಗಿವೆ ಬೋಳು ಮರಗಳು ಆಳದ ಬೇರಿಗೂ ಕರಗಿ ಹೋಗುವ ಚಿಂತೆಯಾವ ಕಾರಿರುಳ ರಕ್ಕಸ ಸಂಚೋ ? ಹಣತೆ ಹಣತೆಗಳ ಕಿರಣಗಳ ಬಾಣ ಬಂಧಿಸಲಿ ಭಯದ ಎಲ್ಲ ನೆರಳುಗಳ, ಹೊಸೆದ ಬೆಳಕಿನ ಶರ ಪಂಜರದಲಿ  ಒಲುಮೆಯ ಅಭಯದ ಆ ಬಯಲಲಿ ಮತ್ತೆ ಚಿಗುರಲಿ ಬಯಕೆಯ ಹಸಿರು ಹೊಸ ನಗೆಯ ತುಂಬಿ ಮುಖ ಪಂಕಜದಲಿ *******************

ವಿರಹ ತಾಪ

ಕವಿತೆ ವಿರಹ ತಾಪ ನಿ.ಶ್ರೀಶೈಲ ಹುಲ್ಲೂರು ತಿರುತಿರುಗಿ ಒರಗುತಿದೆಭಾವಲಹರಿಯ ಬುಗುರಿನಲಿವಿನಲು ಹಸಿಗಾಯಹೀಗೇಕೆ ಎದೆ ನಗರಿ ? ಎನಿತೆನಿತೊ ಆಸೆಗಳಹೊತ್ತ ಒಡಲಿನ ತುಡಿತನಿನ್ನೊಲವಿನಮಲಿನಲೆತೊಪ್ಪೆಯಾಗಿದೆ ಮಿಡಿತ ಬಾನು ರಂಗೇರಿದರುಬಿಡದು ಕಡಲಿನ ಮೊರೆತಕತ್ತಲೆಯನಪ್ಪಿದ ಕಣ್ಬೆಳಕಲು ನೆನಪಿನದೆ ಇರಿತ ಹಿಡಿದಷ್ಟು ಉಕ್ಕುವುದುಹಾಲ ನೊರೆಯಂತೆನೀನಿರದ ಈ ಬದುಕುನೀರಿರದ ಕೆರೆಯಂತೆ ಬಳಲಿದರು ತೆವಳುತಿದೆನಿನ್ನೆಡೆಗೆ ಈ ದೇಹಅದಾವ ಪರಿ ಸೆಳೆದೆ ನೀನರಳುತಿದೆ ಮೋಹ ಸುಖದ ಸುಗ್ಗಿಯನೆಲ್ಲಮಾಡುತಿಹೆ ಕನಸಿನಲಿಹುರಿದು ಮುಕ್ಕುವೆ ಏಕೆಸೊಗಸಿರದ ಮನಸಿನಲಿ ಕಂಕಣಬಲವಿಲ್ಲೆನಗೆ ನೀನೋಡಿ ಬಂದು ಬಿಡುಬರದಿದ್ದರೆ ಬೇಗ ಕೈಯಾರೆ ಕೊಂದು ಬಿಡು **********************************

ಭಾವಪೂರ್ಣ ಅಂತಿಮ ನಮನ.

ಭಾವಪೂರ್ಣ ಅಂತಿಮ ನಮನ. ಹುಬ್ಬಳ್ಳಿ ಯ ಕರ್ಮವೀರ ಕಾಲದಿಂದಲೂ ನಿನ್ನೆ ಮೊನ್ನೆಯವರಿಗೂ ಸುಮಾರು ಇಪ್ಪತ್ತು ವರ್ಷಗಳ ಆತ್ಮೀಯ ಒಡನಾಟ ಹೊಂದಿದ್ದ ನಾಡಿನ ದೈತ್ಯ ಬರಹಗಾರ ಆತ್ಮೀಯ ರವಿ ಬೆಳಗೆರೆ ಅವರ ಸಾವು ತುಂಬಾ ನೋವು ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುವೆ.ನನ್ನ ನೂರಾರು ಹನಿಗವನ ,ಕವನ, ಗಜಲ್, ಕಥೆ,ಬರಹ ಪ್ರಕಟಿಸಿ ನನಗೆ ಒಂದು ಶಕ್ತಿಯಾಗಿದ್ದ ಈ ಓದುಗರ ದೊರೆ ನನಗೆ ಸ್ನೇಹಿತನಾಗಿದ್ದ ಎಂಬ ಹೆಮ್ಮೆ.ಈ ಕೊಂಡಿ ಇಷ್ಟು ಬೇಗ ಕಳಚಬಾರದಿತ್ತು. ಹುಬ್ಬಳ್ಳಿ ಯ ಕಸ್ತೂರಿ, ಸಂಯುಕ್ತ ಕರ್ನಾಟಕ […]

ದೇಗುಲದಲ್ಲಿ ದೆವ್ವ
ಮೂಲ : ಗೂಗಿ ವಾ ಥಿಯಾಂಗೋ ಕನ್ನಡಕ್ಕೆ : ಬಂಜಗೆರೆ ಜಯಪ್ರಕಾಶ್

ಅನುಬಂಧ

ಕವಿತೆ ಅನುಬಂಧ ಅಕ್ಷತಾ ಜಗದೀಶ ಆ ನೀಲಿ ‌ಆಗಸದಿ ಚಿತ್ತಾರ ಮೂಡಿಸಲೇನು…..ಮೌನದಲಿ ಅಡಗಿದ ಭಾವನೆಗಳಮಾತಿನಲ್ಲಿ ಬಹಿರಂಗ‌ ಪಡಿಸಲೇನು…. ಎಲ್ಲಾ ಆಸೆಗಳ , ಎಲ್ಲಾ ಕನಸುಗಳಎಲ್ಲೆಲ್ಲೂ ಓಡುವ ಮನದೊಳಗೆಬಂಧಿಸಿರುವೇ ಈಗ…… ಬರೆವ ಕವಿತೆಯೋಳಗೆಮನದ ಮಾತು ಕುಣಿದಾಡಿ…ಪದಗಳೊಡನೆ‌ ಪುಟಿದೆದ್ದುರಾಗದಲಿ‌ ಬೆರೆತು ಅರಳಿದಾಗ..ಆಹಾ ಸಂತೋಷವೇ…!ಎಂಥಹ ಆಹ್ಲಾದವು.. ಚೂರು ಪ್ರೀತಿ ಭಾವದೊಳು ಬೆರೆತಾಗಸುಂದರ ಬಾಳಿನ ಪ್ರಾರಂಭ ಆಗ..ಇರಲೀ ಹೀಗೆ ಈ ಬಂಧ..ಮರೆಯಲಾರದ ಅನುಬಂಧ. *************************

ಶೋಭಾ ನಾಯ್ಕರ ಅವ್ವ ಮತ್ತು ಅಬ್ಬಲಿಗೆ ಕೃತಿಗೆ `ಸರಳಾ ರಂಗನಾಥರಾವ್ ಪ್ರಶಸ್ತಿ

ಪ್ರಶಸ್ತಿ ಶೋಭಾ ನಾಯ್ಕರ ಅವ್ವ ಮತ್ತು ಅಬ್ಬಲಿಗೆ ಕೃತಿಗೆ `ಸರಳಾ ರಂಗನಾಥರಾವ್ ಪ್ರಶಸ್ತಿ ಸರಳಾ ರಂಗನಾಥರಾವ್ ಸ್ಮಾರಕ ಪ್ರತಿಷ್ಠಾನವು ಕೊಡುವ ೨೦೧೯ನೇ ಸಾಲಿನ ಸರಳಾ ರಂಗನಾಥರಾವ್ ಪ್ರಶಸ್ತಿಗೆ ಶಿರಸಿಯ ಕವಯಿತ್ರಿ ಶೋಭಾ ಹಿರೇಕೈ ಕೊಂಡ್ರಾಜಿ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಲೇಖಕಿಯರ ಚೊಚ್ಚಲ ಕೃತಿಗೆ ಕೊಡಲಾಗುತ್ತಿದ್ದು, ಶೋಭಾ ಅವರ ಅವ್ವ ಮತ್ತು ಅಬ್ಬಲಿಗೆ ಕವನ ಸಂಕಲನ  ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಶೋಭಾ ಹಿರೇಕೈ ಕೊಂಡ್ರಾಜಿ ಅವರು  ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಂಡ್ರಾಜಿಯವರು. ಪ್ರಸ್ತುತ ಸಿದ್ದಾಪುರ […]

Back To Top