ಬೊಗಸೆ ತುಂಬ ಕನಸು”

ಬೊಗಸೆ ತುಂಬ ಕನಸು”

ಪುಸ್ತಕ ಪರಿಚಯ ಬೊಗಸೆ ತುಂಬ ಕನಸು ಪ್ರಪಂಚದಲ್ಲಿ ಎರಡು ರೀತಿಯ ಸಾಧಕರಿರುತ್ತಾರೆ. ಒಬ್ಬರು ಇದ್ದ ಹಾದಿಯಲ್ಲಿ ಶ್ರದ್ಧೆಯಿಂದ ಸಾಗಿ ಗುರಿ ತಲುಪುವವರು. ಮತ್ತೊಬ್ಬರು ತಾವೇ ಹಾದಿ ನಿರ್ಮಿಸಿಕೊಂಡು ಗುರಿ ಕಂಡುಕೊಳ್ಳುವವರು. ಹೀಗೆ ಎರಡನೇ ಸಾಲಿನ ಮುಂದಾಳುವಿನ ಹಾಗೆ ನಿಂತು ಯಶ ಬದುಕಿನ ಗಾಥೆ ಬರೆದವರು ಡಾ.ಪ್ರಭಾಕರ ಶಿಶಿಲರು. ಅವರ ಆತ್ಮಕತೆ “ಬೊಗಸೆ ತುಂಬ ಕನಸು” ಓದಿದ ತಕ್ಷಣಕ್ಕೆ ನನಗೆ ಅನ್ನಿಸಿದ್ದು ಹೀಗೆ. ಬಹುಶ: ಈ ಕೃತಿಯನ್ನು ಓದುವ ಎಲ್ಲರಿಗೂ ಹೀಗೊಂದು ಭಾವ ಮೂಡಿಯೇ ಮೂಡುತ್ತದೆ. ಅರ್ಥಶಾಸ್ತ್ರದ ಅಧ್ಯಾಪಕರಾಗಿ. […]

ಅಂಕಣ ಬರಹ ಹವ್ಯಾಸವೆಂಬ ಮಂದಹಾಸ… ಹವ್ಯಾಸಗಳಿಲ್ಲದ ಮನುಷ್ಯನೆಂದರೆ ಎಲೆ ಹೂವು ಹಣ್ಣು ಏನೊಂದೂ ಇಲ್ಲದ ಬೋಳು ಮರವೇ ಸರಿ. ಬದುಕು ದುರ್ಬರವೆನಿಸಿದ ಹೊತ್ತಲ್ಲೂ ಸಹನೀಯತೆ ತರುವ ಶಕ್ತಿ ಇದ್ದರೆ ಅದು ಹವ್ಯಾಸಗಳಿಗೆ ಮಾತ್ರ. ಹೊತ್ತು ಕಳೆಯಲು ವ್ಯರ್ಥ ಅಭ್ಯಾಸಗಳನ್ನು ಮಾಡಿಕೊಳ್ಳುವ ಬದಲು ಸಮಯವನ್ನು ಗೌರವಿಸುವಂತ ಅರ್ಥಪೂರ್ಣ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಹವ್ಯಾಸಗಳು ಬರಿದೆ ಮೂರ್ತಿಗೆ ಮಾಡಿದ ಅಲಂಕಾರದಂತೆ ನಮ್ಮನ್ನು ಚೆಂದಗಾಣಿಸುತ್ತದೆ. ಹವ್ಯಾಸವೆನ್ನುವ ಟಾರ್ಚು ನಮ್ಮ ಕೈಯಲ್ಲಿದ್ದರೆ ಅದು ದಟ್ಟ ಕಾಡಿನ ನಡುವೆಯೂ ಕೈಹಿಡಿದು ನಡೆಸಿ ಗುರಿ ಮುಟ್ಟಿಸಬಲ್ಲದು, ಮನಸ್ಸನ್ನು […]

ಅಂಕಣ ಬರಹ ಹೊದಬನಿ-ಹೊಸದನಿ-14 ಅಗತ್ಯಕ್ಕಿಂತ ಲಂಬಿಸಿಯೂ ಹ್ರಸ್ವವಾಗೇ ಉಳಿಯುವ ಆಸ್ಪರಿಯವರ ಕವಿತೆಗಳು ಚನ್ನಬಸವ ಆಸ್ಪರಿ . ಅವ್ವನೂ ಕಸೂತಿ ಹಾಕುತ್ತಿದ್ದಳು ಅಪ್ಪನ ತೂತುಬಿದ್ದ ಬನಿಯನ್ನಿನ ಮೇಲೆ ಉಟ್ಟರೆ ಅಂಡು ಕಾಣಿಸುವ ನನ್ನ ದೊಗಲೆ ಚಡ್ಡಿಗೆ ಅಲ್ಲಲ್ಲಿ ಹರಿದ ಪಾಟೀಚೀಲಕ್ಕೆ ಎಂದು ತನ್ನೊಳಗಿನ ಸಂಕಟಗಳನ್ನು ಕವಿತೆಯಾಗಿಸುವ ಚನ್ನಬಸವ ಆಸ್ಪರಿ ಫೇಸ್ಬುಕ್ಕಿನಲ್ಲಿ ಬರೆಯುತ್ತಿರುವ ಹಲವು ಹೆಸರುಗಳ ನಡುವೆ ಅನುಭವದ ಆಧಾರ ಪಡೆದ ಸಶಕ್ತ ಕವಿತೆಗಳನ್ನು  ಅಪರೂಪಕ್ಕೆ ಪ್ರಕಟಿಸುತ್ತಿರುತ್ತಾರೆ. ನಾವೆಲ್ಲ ಅವ್ವ ಎನ್ನುವ ಕವಿತೆಯ ಸರ್ವ ಸ್ವಾಮ್ಯವನ್ನೂ ಲಂಕೇಶರಿಗೆ ಅರ್ಪಿಸಿಬಿಟ್ಟಿರುವಾಗಲೂ ಒಬ್ಬೊಬ್ಬರಿಗೆ […]

ಸ್ವೀಕರಿಸುವೆಯಾ?

ಕವಿತೆ ಸ್ವೀಕರಿಸುವೆಯಾ? ಚಂದ್ರು ಪಿ ಹಾಸನ್ ಇಂದ್ರನ ಬನದಲ್ಲಿ ಅರಳಿದಓ ಅಂದದ ಚೆಂದದ ಹೂವೆಚಂದ್ರನ ಬರುವಿಕೆಗೆ ಕಾದಿರುವೆಯಾ? ಚಿಟ್ಟೆಗಳು ಒಟ್ಟೊಟ್ಟಾಗಿ ಒಮ್ಮೆಲೆಹಿಗ್ಗುತಲಿ ನುಗ್ಗುತಿರಲಿ ಬಗ್ಗದೆಮುಖ ಮರೆಮಾಚಿ ನಿಂತೆಯಾ? ಮುಂಜಾವ ಭಾಸ್ಕರನು ಬೆಳ್ಳಿರಥವೇರಿಚೆಲ್ಲಿಹನು ಅವನ ಹೊನ್ನ ಬೆಳಕನ್ನುಚೆಲುವ ತೋರದೆ ಹೋಗುವೆಯಾ? ರವಿ ರಶ್ಮಿಯನ್ನು ಸ್ವೀಕರಿಸದೆತಮವನ್ನೇ ತನ್ನಲ್ಲಿ ಆವರಿಸಿಕೊಂಡುಯಾರಿಗಾಗಿ ಅರಳುತ್ತಿರುವೆಯಾ? ನನಗಾಗಿ ನೀ ಕಾದಿದ್ದರೆ ಸಾಕುಬೇರೇನು ನಿನ್ನಿಂದ ಬೇಡೆನಗೆಪ್ರೀತಿಗಾಗಿ ಹುಡುಕಿದೆ ನೀಡುವೆಯಾ? ನೆಲೆಸುವೆ ಹೃದಯದಲ್ಲಿ ಸ್ವೀಕರಿಸುವೆಯಾ? ********************************

ಆಕಾಶದೀಪದ ಪ್ರಾಧಾನ್ಯತೆ

ಲೇಖನ ಆಕಾಶದೀಪದ ಪ್ರಾಧಾನ್ಯತೆ ವೀಣಾ. ಎನ್. ರಾವ್. ದೀಪಾವಳಿ ಬಂತೆಂದರೆ ಮಕ್ಕಳಿಂದ ಹಿಡಿದು ಎಲ್ಲಾ ವಯಸ್ಸಿನವರಿಗೂ ವಿನೂತನವಾದ ಸಂತಸ. ಹಾಗೆಯೇ ದೀಪಾವಳಿಯ ಸಮಯದಲ್ಲಿ ಅದರಲ್ಲೂ ವಿಶೇಷವಾಗಿ ಹಳ್ಳಿಗಳಲ್ಲಿ “ಆಕಾಶದೀಪ”ವನ್ನು ಮನೆಯ ಮುಂದೆ ತೂಗು ಹಾಕುತ್ತಾರೆ.  ಈ ‘ಆಕಾಶದೀಪ’ವು, “ಗೂಡುದೀಪ”,”ನಕ್ಷತ್ರದೀಪ”,ಎಂದು ಪರಿಚಿತವಾದರೆ, ಹಳ್ಳಿಗಳಲ್ಲಿ “ಯಮದೀಪ”,”ವ್ಯೋಮದೀಪ”  ಎಂದು ಕೂಡಾ ಕರೆಯುತ್ತಾರೆ.            ಬಿದಿರಿನ ಕಡ್ಡಿಗಳಿಂದ ಎಂಟು ಮೂಲೆಗಳಿರುವಂತೆ ಯಾವ ಆಕಾರಕ್ಕೆ ಬೇಕೊ ಆ ರೀತಿಯಾಗಿ ಕಟ್ಟಿ ಅದರ ಸುತ್ತಲೂ ಬಣ್ಣದ ಪೇಪರನ್ನು ಅಂಟಿಸಿ ಬಾಲಂಗೋಚಿಯನ್ನು ಇಳಿಬಿಟ್ಟು ಮನೆಯಲ್ಲೆ ತಯಾರಿಸುವ ಈ […]

ಕಾದಂಬರಿ ಕುರಿತು ಮರಳಿ ಮಣ್ಣಿಗೆ ಡಾ.ಶಿವರಾಮ ಕಾರಂತ ಮರಳಿ ಮಣ್ಣಿಗೆ  ಲೇಖಕರು :ಡಾ. ಕೆ‌. ಶಿವರಾಮ ಕಾರಂತ ನಾನು ಶಿವರಾಮ ಕಾರಂತರ ಎಲ್ಲಾ ಕಾದಂಬರಿಗಳನ್ನು ಓದಿಲ್ಲವಾದರೂ ಕೆಲವೊಂದನ್ನು ಓದಿದ್ದೇನೆ.  ಅದರಲ್ಲಿ ನನಗಿಷ್ಟವಾದ ಕಾದಂಬರಿ ” ಮರಳಿ ಮಣ್ಣಿಗೆ”    ಈ ಕೃತಿಯನ್ನು ಓದುವಾಗ ಓದಿ ಮುಗಿಸುವ ತನಕ ಪುಸ್ತಕ ಮುಚ್ಚಿಡಲು ಆಗದಷ್ಟು ಆಸಕ್ತಿ ನಮ್ಮನ್ನು ಓದಿಸಿ ಕೊಂಡು ಹೋಗುತ್ತದೆ. ಇಡೀ ಕಥೆಯೆ ನಮ್ಮ ಕಣ್ಮುಂದೆ ಹಾದು ಹೋಗುವ ಅನುಭವವಾಗುತ್ತದೆ. ಇದಕ್ಕೆ ಕಾರಣ ಅಲ್ಲಿನ ಘಟನೆಗಳು, ಮಾತುಕತೆಗಳು ಹಾಗು […]

ದೀಪಗಳ ಸಾಲು

ಕವಿತೆ ದೀಪಗಳ ಸಾಲು ಸುವಿಧಾ ಹಡಿನಬಾಳ ಹಚ್ಚೋಣ ಸುತ್ತೆಲ್ಲಾ ದೀಪಗಳ ಸಾಲುಹೊದೆಸೋಣ ಎಲ್ಲರಿಗೂ ಪ್ರೀತಿಯ ಶಾಲು ಬೆಳಕಿಂದೆ ಜಗವು ಬೆಳಗುತಿಹುದುಅನ್ಯಾಯ ಹಿಂಸೆಯಲಿ ದಹಿಸುತಿಹುದುಜ್ಞಾನದ ಬೆಳಕಿನಲಿ ತೆರೆಯಲಿಕಣ್ಣುವಾಸಿಯಾಗಲಿ ಮನದ ಕಲ್ಮಶದ ಹುಣ್ಣು ಜಗವ ಹಿಂಡುತಿಹ ‌ಅನಾರೋಗ್ಯ ದೂರಾಗಲಿಎಲ್ಲರೂ ತಿಂದುಂಡು ನೆಮ್ಮದಿಯಾಗಿರಲಿ ನೆಲಕಚ್ಚಿದ ಆರ್ಥಿಕತೆ ಮತ್ತೆ ಚೈತನ್ಯಗೊಳ್ಳಲಿದುಡಿಯುವ ಕೈಗಳಿಗೆ ಕೆಲಸವು ಲಭಿಸಲಿ ದಿನವೂ ಮೊರೆವ ಬಾಂಬು ಗುಂಡುಗಳ ಸದ್ದಡಗಲಿಆತಂಕವಾದಿಗಳ ಹೃದಯದ ಕತ್ತಲೆ ಕಳೆಯಲಿ ಬದುಕೆಂಬ ಅನಿಶ್ಚಿತ ಪಯಣದಲಿಸಕಲರ ಸಹಕಾರ ಋಣಭಾರವಿದೆಏಕೆ ವ್ಯಾಜ್ಯ, ಕಲಹ ಜೀವನದಲಿಪಯಣ ಸಾಗಲಿ ಹೊಂದಾಣಿಕೆ ಸಮರಸದಲಿ ಒಂದು […]

ದಿವ್ಯ ಅನಿಕೇತನ

ಕವಿತೆ ದಿವ್ಯ ಅನಿಕೇತನ ನೂತನ ದೇಹ ಆತ್ಮಗಳು ಮಾತಾಡಿಕೊಂಡವುನನ್ನೊಳಗೆ ನೀನೊನಿನ್ನೊಳಗೆ ನಾನೊ? ಯಾರೊಳಗೆ ಯಾರಿದ್ದರೇನುಇದ್ದೂ ಇರದಂತೆ ಇರುವವರೆಷ್ಟಿಲ್ಲ !ರೇಷಿಮೆಯ ಸಣ್ಣ ಅಂಚಿನ ಪತ್ತಲನಿಟ್ಟುಸಿರ ಬಿಡುವುದ ಕಾಣದಂತೆ ನಾವೀರ್ವರು ಒಂದಾದ ಕ್ಷಣಕ್ಕೆಹುಣ್ಣಿಮೆಯೇ ಸಾಕ್ಷಿಛಾಯೆ ಕನವರಿಸುತ್ತಾಳೆನೂರ್ಕಾಲದ ಬಾಳಿಗೆ ಹೊರನೋಟಕ್ಕೆ ಒಂದಾದರೆಒಳ ಹರಿವಿಗೆ ಒಂದು ನಾನು ನೀನೆಂಬಗಡಿಯಿರದ ಗೂಡಿನಲಿಜೇನು ಸವಿ ಹೀರಲುದೇಹದೊಲುಮೆಯಲಿಆತ್ಮಜ್ಯೋತಿ ಬೆಳಗಬೇಕು ಸದಾ ಆತ್ಮ ಬಿರಿದು ಕಣಕಣದಲಿ ಬೆಳೆದುಮಿಲನವ ಮೀರಿ ನಿಂತುಈಗ ಸರ್ವವ್ಯಾಪಿಬೇಧವಿರದ, ಬಂಧವೂ ಇರದದಿವ್ಯ ಅನಿಕೇತನ **************************

ಅಂಕಣ ಬರಹ ಒಮ್ಮೊಮ್ಮೆ ಪಾತ್ರೆ ತಿಕ್ಕುವಾಗಲೂ ಕವಿತೆಯ ಹೊಳಹುಗಾಣುತ್ತದೆ ಹೇಮಲತಾ ವಸ್ತ್ರದ. ಪರಿಚಯ: ಎಂಎ, ಎಂಇಡಿ, ಪಿಜಿ ಡಿಪ್ಲೋಮಾ ಇನ್ ಇಂಗ್ಲಿಷ್. ವಿಜಯಪುರ ಗ್ರಾಮೀಣ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿದ್ದಾರೆ. ಊರು: ಸಿಂದಗಿ.  ಜಿಲ್ಲೆ: ವಿಜಯಪುರ. ಕೃತಿಗಳು: ಅವ್ವನಿಗೊಂದು ಪತ್ರ (ಕವನಸಂಕಲನ). ಪೃಥ್ವಿಯೊಡಲು(ಕಥಾಸಂಕಲನ)(ಅಚ್ಚಿನಲ್ಲಿದೆ). ಗಜಲ್ ಸಂಕಲನಅಚ್ಚಿನಲ್ಲಿದೆ. ಅಕ್ಕನಾಗಮ್ಮ (ನಾಟಕ)(ಅಚ್ಚಿನಲ್ಲಿ) ಶೈಕ್ಷಣಿಕ, ಸಾಹಿತ್ಯಕ ಲೇಖನಗಳು. ಮಕ್ಕಳ ಕಥೆಗಳು, ಕವನಗಳು. ಕ್ರೀಯಾಸಂಶೋದನೆ (ಬಾಲಕಾರ್ಮಿಕಪದ್ಧತಿ). ಗುಲ್ಬರ್ಗಾ ವಿಶ್ವವಿದ್ಯಾಲಯ ದ ಎಂಎ ಮೂರನೇ ಸೆಮ್ (ಆಧುನಿಕ ಕಾವ್ಯ ಸಂಗ್ರಹ-೨೦೧೨) ಗೆ ಕನ್ನಡಗಜಲ್ಗಳು, ಕವನಗಳು ಪಠ್ಯವಾಗಿವೆ. […]

ಕವಿತೆ ಜಗ… ಸೋಜಿಗ ವಿದ್ಯಾಶ್ರೀ ಅಡೂರ್ ಯಾರು ಇಲ್ಲ ಎಂಬ ಭಾವಬಿಟ್ಟುಬಿಡಿರಿ ಎಲ್ಲ ಬೇಗದೇವನೊಬ್ಬ ಸಲಹುತಿಹನುಹೆಜ್ಜೆ ಹೆಜ್ಜೆಗೇ ಗೋಡೆ ಸಂಧಿಲಿರುವ ಜೇಡಮರಳಿ ಕಟ್ಟಿ ತನ್ನ ಗೂಡಗೊಡವೆಯಿರದೆ ಬದುಕುತಿಹುದುಹೊಟ್ಟೆಪಾಡಿಗೇ ಮೊಟ್ಟೆಯಿಟ್ಟು ಮಾಯವಾಗೋಅಟ್ಟಿಉಣುವ ಜೀವಗಳಿಗೆಹುಟ್ಟುಸಾವು ಮೂಲವರುಹೋಶಕ್ತಿಯಾವುದು ಬಾಯಿಬರದೆ ಇರುವ ಮೂಕಹಸುವು ಕೂಡ ತನ್ನ ಪ್ರಸವಹಲ್ಲುಕಚ್ಚಿ ಸಹಿಸಿ ಕರುಳಬಳ್ಳಿ ಹರಿವುದೂ ಎಷ್ಟು ಕಡಿದರೂನು ಚಿಗುರಿಮತ್ತೆ ಮತ್ತೆ ಟಿಸಿಲು ಒಡೆದುಬದುಕೋ ಭರವಸೆಯ ಗಿಡಕೆಯಾರು ಕೊಟ್ಟರೂ ಇಟ್ಟಜಾಗದಲ್ಲಿ ತನ್ನಬೇರನಿಳಿಸಿ ಗಟ್ಟಿಗೊಳುವಪುಟ್ಟಬೀಜಕಿಹರೆ ಸಾಟಿಯಾರು ದಿಟ್ಟರೂ ಅಕ್ಕಿಬೆಂದು ಅನ್ನವಾಗಿನಿನ್ನೆದಿಂದು ಹಳಸಿಹೋಗಿಭವದಬದುಕು ಇಷ್ಟೇ ಎಂದುಸಾರುತಿರುವುದು ಅರಿವ ಸೊಡರು ಹಚ್ಚಿ […]

Back To Top