ಗಝಲ್

ಗಝಲ್

ಗಝಲ್ ಪ್ರತಿಮಾ ಕೋಮಾರ ನೆನಪುಗಳನ್ನೆಲ್ಲ ಕಣ್ರೆಪ್ಪೆಯಲಿ ಸೆರೆಯಾಗಿಸಿದ್ದೇನೆ ಕುಕ್ಕಬೇಡ ನೋಡುನಿರೀಕ್ಷೆಗಳನ್ನೆಲ್ಲ ಅಟ್ಟ ಏರಿಸಿದ್ದೇನೆ ಇಳಿಸಬೇಡ ನೋಡು ಒಳಗುದಿಯ ಒಳಗೇ ಇಟ್ಟು ಕುದಿಯುವುದೇಕೆ? ಹೇಳಿಬಿಡುಕೇಳಲೆಂದೆ ಎದೆಗಿವಿಯನ್ನು ತೆರೆದಿದ್ದೇನೆ ಮುಚ್ಚಿಡಬೇಡ ನೋಡು ಎನ್ನೆಲ್ಲ ಭಾವಗಳ ಚಿತ್ರ ಶಾಲೆಗೆ ಚಿತ್ತಾರಿಗನಾದವನು ನೀನುನಿನ್ನಾಸರೆಯಲಿ ನಲಿವ ರಾಶಿ ಹಾಕಿದ್ದೇನೆ ತೂರಬೇಡ ನೋಡು ತಪ್ಪನ್ನು ಕ್ಷಮಿಸಿ ಮುಂದಡಿ ಇಟ್ಟಾಗಲೇ ಸಾಗುವುದು ಪಯಣಘಾತದ ಭೂತವನ್ನೆಲ್ಲ ಮರೆತು ಬಿಟ್ಟಿದ್ದೇನೆ ಕೆದಕಬೇಡ ನೋಡು “ಪ್ರತಿ” ಯ ನಿಗ೯೦ಧ ಬಾಳು ಬಂಜರು ಭೂಮಿಗೆ ಸಮಾನಕನಸಗನ್ನಡಿಯ ಜೋಪಾನ ಮಾಡಿದ್ದೇನೆ ಒಡೆಯಬೇಡ ನೋಡು ********************************

ಕಾದಂಬರಿ ಕುರಿತು ಮಲೆಗಳಲ್ಲಿ ಮದುಮಗಳು ಕುವೆಂಪು ಶತಮಾನದ ಶ್ರೇಷ್ಠ ಸಾಹಿತಿ ಎಂದು ಕುವೆಂಪು ಅವರನ್ನು ಕರೆದರೂ ಯಾಕೋ ಅವರ  ಬಗ್ಗೆ ತೀರ ಕಡಿಮೆಯಾಯ್ತು ಅನ್ನಿಸುತ್ತದೆ . ಯಾಕಂದ್ರೆ ಅವರ ಮಹದ್ ಬೃಹತ್ ಗ್ರಂಥ “ಮಲೆಗಳಲ್ಲಿ ಮದುಮಗಳು” ಇಂದು ನನ್ನ ಕೈಯಲ್ಲಿದ್ದು ತನ್ನನ್ನು ತಾನೇ ಓದಿಸಿಕೊಳ್ಳುತ್ತಿದೆ. ಹೆಸರಾಂತ ಸಾಹಿತಿ ದೇವನೂರು ಮಹಾದೇವ ಅವರ ಎದೆಯಾಳದ ಪ್ರಶ್ನೆಯೊಂದನ್ನು ಇಲ್ಲಿ ಇಡುವ ಮನಸ್ಸಾಗುತ್ತದೆ “ಕನ್ನಡದಲ್ಲಿ ಅತ್ಯುತ್ತಮ ಎನ್ನಿಸಿಕೊಂಡ ನಾಲ್ಕಾರು ಕೃತಿಗಳನ್ನು ತಕ್ಕಡಿಯ ಒಂದು ತಟ್ಟೆಯಲ್ಲಿಟ್ಟು ಕುವೆಂಪುರವರ  ಮದುಮಗಳನ್ನು ಇನ್ನೊಂದರಲ್ಲಿಟ್ಟರೆ ಗುಣದಲ್ಲೂ ಗಾತ್ರದಲ್ಲೂ […]

ವಿರಹಿ ದಂಡೆ

ಪುಸ್ತಕ ಪರಿಚಯ ವಿರಹಿ ದಂಡೆ ವಿಪ್ರಯೋಗದಲ್ಲಿ ಅರಳಿದ ಶೃಂಗಾರ ಕವಿತೆಗಳು ವಿರಹಿ ದಂಡೆಕವನ ಸಂಕಲನಲೇಖಕ : ನಾಗರಾಜ ಹರಪನಹಳ್ಳಿಪ್ರಕಾಶನ: ನೌಟಂಕಿ. ರಾಜಾಜಿ ನಗರ, ಬೆಂಗಳೂರು.ಬೆಲೆ : ೮೦/- ನಾಗರಾಜ್ ಹರಪನಹಳ್ಳಿ ಎಂಬ ಮಹೋದಕ ಪ್ರತಿಭೆ ಪ್ರೀತಿ, ಪ್ರೇಮ, ಪ್ರಣಯದ ಪರಾಕಾಷ್ಠೆಯನ್ನು ತಲುಪಿ ಸದಾ ಯಯಾತಿಯ ಧಿರಸನ್ನು ತೊಟ್ಟು ಎದೆ ತೆರೆದು ನಿಂತ ಅಪ್ಪೆ ಹುಳಿ, ಒಗರನ್ನು ಮೈಗೂಡಿಸಿಕೊಂಡಿರುವ ಬಯಲು ಸೀಮೆಯಿಂದ ದಂಡೆಗೆ ಬಂದ ಪ್ರೀತಿಯ ಕಡುಮೋಹಿ. ಈ ಕವಿ ಹುಟ್ಟಿದ್ದೇ ಗಾಢ ಆಲಿಂಗನದ ಆರ್ದ್ರ ಉಸಿರಿನ, ಅದುರುವ […]

ಕಾದಂಬರಿ ಕುರಿತು ಮರಳಿಮಣ್ಣಿಗೆ ಡಾ.ಶಿವರಾಮ ಕಾರಂತ ಸುಮಾವೀಣಾ ಮರಳಿಮಣ್ಣಿಗೆ’ಯ ರಾಮನನ್ನು ನೆನಪಿಸಿದ ಕೊರೊನಾ ಕಾಲಾಳುಗಳು   ‘ಮರಳಿ ಊರಿಗೆ”, “ಮರಳಿ ಗೂಡಿಗೆ’, ‘ಮರಳಿ ಮನೆಗೆ’, ‘ಮರಳಿ ನಾಡಿಗೆ’ ಇವೆ ಪದಗಳು ಕೊರೊನಾ ಎಮರ್ಜನ್ಸಿಯಾದಾಗಿನಿಂದ ಕೇಳುತ್ತಿರುವ ಪದಗಳು.ಆದರೆ ಇವುಗಳ ಕಲ್ಪನೆ, ಯೋಚನೆ ನಮ್ಮ ‘ಕಡಲ ತಡಿಯ ಭಾರ್ಗವ’ನಿಗೆ ಅಂದೇ ಹೊಳೆದಿತ್ತು  ಹಾಗಾಗಿ ಕನ್ನಡದ ಶ್ರೇಷ್ಠ ಕಾದಂಬರಿಗಳಲ್ಲಿ ಒಂದಾದ ‘ಮರಳಿ ಮಣ್ಣಿಗೆ’ ಕಾದಂಬರಿಯನ್ನು ನಮ್ಮ  ಕೈಗಿತ್ತಿದ್ದಾರೆ. ಹ್ಯಾಟ್ಸ ಆಫ್ ಟು ಕಾರಂತಜ್ಜ  ಎನ್ನಬೇಕು. ‘ಮರಳಿ ಮಣ್ಣಿಗೆ’ ಕಾದಂಬರಿಯಲ್ಲಿ ರಾಮ, ಐತಾಳರು, […]

ಬದುಕುವೆ ರಾಜಹಕ್ಕಿಯಾಗಿ

ಕವಿತೆ ಬದುಕುವೆ ರಾಜಹಕ್ಕಿಯಾಗಿ ರಾಘವೇಂದ್ರ ದೇಶಪಾಂಡೆ ಈಡೇರುವವು ಆಸೆಗಳು ಸಾವಿರಾರುಈ ಭವದಲಿ…ಗಟ್ಟಿತನದ ಅಪೇಕ್ಷೆಯ ಆಶಯದಲಿನನ್ನೀ ಭಾವಪರವಶದಲಿ… ಹೊರಹೊಮ್ಮಿದವು ನಿರೀಕ್ಷೆಗಳುಕಮ್ಮಿಯೆನಿಸಿತಾದರೂ…ಪ್ರೀತಿಯ ಹುಟ್ಟು ಮತ್ತು ಸಾವಿನಲಿಕಾಣಸಿಗದಿಲ್ಲಿ ವ್ಯತ್ಯಾಸ… ಜೀವಿಸುತಿರುವೆ ಅಸದೃಶವಾಗಿಕತ್ತಲ ಗರ್ಭದಲಿ…ಕಟ್ಟಿಕೊಂಡ ಹಾಳೆಯ ಕೋಟೆ ಮಧ್ಯೆತೂರಿಬರುವ ಪ್ರೇಮಗಾಳಿಯಲಿ… ಇದೆ ಎನಗೆ ತಾಳ್ಮೆ ಕಾಯುವಲಿಅದೇ ತೃಪ್ತಭಾವದಲಿ…ಬದುಕುವೆ ಖಂಡಿತ ಆಸೆಗೂಡಿನಲಿಸ್ವಚ್ಛಂದದ ರಾಜಹಕ್ಕಿಯಾಗಿ… **************************************

ಅಂಕಣ ಬರಹ ಹಾಡು ಹಳೆಯದಾದರೇನು ಹಳೆಯ ಹಾಡುಗಳನ್ನು ಕೇಳುವಾಗಲೆಲ್ಲಾ ಎಂಥದೋ ಭಾವುಕತೆಗೆ ಒಳಗಾಗುವುದು, ಏನೋ ಒಂದು ರೀತಿ ಹೊಟ್ಟೆ ಚುಳ್ ಎನ್ನುವುದು, ಆ ಹಳೇ ದಿನಗಳ ನೆನಪುಗಳೆಲ್ಲಾ ಹಿಂದಿನ ಜನ್ಮದ ನೆನಪುಗಳೇನೋ ಎನ್ನುವಂತೆ ಕಾಡುವುದು… ಹೀಗೆಲ್ಲಾ ನನಗೆ ಮಾತ್ರ ಅನಿಸುತ್ತದಾ? ಬೇರೆಯವರಿಗೂ ಹೀಗೆಲ್ಲಾ ಆಗುತ್ತದಾ? ಗೊತ್ತಿಲ್ಲ. ಆದರೆ ನನಗೆ ಇದರ ಜೊತೆಗೆ ಇನ್ನೂ ವಿಚ್ ವಿಚಿತ್ರವಾಗೆಲ್ಲ ಏನೇನೋ ಅನ್ನಿಸುವುದಿದೆ. ಹಳೇ ಫೋಟೋಗಳನ್ನು ನೋಡುವಾಗ ಅದರಲ್ಲಿನ ಅಪರಿಚಿತರ ಬಗ್ಗೆ ಏನೇನೋ ಅನಿಸುತ್ತದೆ. ಅವರನ್ನು ನಾನೆಲ್ಲೋ ಭೇಟಿ ಮಾಡಿರುವೆ, ಮಾತಾಡಿಸಿರುವೆ, […]

ಅಂಕಣ ಬರಹ ಹೊಸ ದನಿ – ಹೊಸ ಬನಿ-೧೩. ಸಿದ್ಧಾಂತದ ಚೌಕಟ್ಟಿನಲ್ಲೇ ಉಳಿದೂ ಬೆಳಕಿಗೆ ತಡಕುವ ವಸಂತ ಬನ್ನಾಡಿ ಕವಿತೆಗಳು ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ವಾಣಿಜ್ಯ ಪಾಠ ಕಲಿಸುತ್ತಿದ್ದ ಶ್ರೀ ವಸಂತ ಬನ್ನಾಡಿ ಅಲ್ಲಿನ ರಂಗ ಅಧ್ಯಯನ ಕೇಂದ್ರದ ಸಂಚಾಲಕರಾಗಿಯೂ ಪ್ರಸಿದ್ಧರು. ಶಬ್ದಗುಣ ಹೆಸರಿನ ಅರ್ಧವಾರ್ಷಿಕ ಸಾಹಿತ್ಯ ಪತ್ರಿಕೆಯನ್ನು ಅತ್ಯಂತ ಶ್ರೀಮಂತವಾಗಿ ಸಂಪಾದಿಸುತ್ತಿದ್ದವರು ಅವರು. ಶಬ್ದಗುಣ ಕೂಡ ಉಳಿದೆಲ್ಲ ಹಲವು ಸಾಹಿತ್ಯ ಪತ್ರಿಕೆಗಳ ಹಾಗೇ ಪ್ರಾರಂಭದಲ್ಲಿ ಅತಿ ಉತ್ಸಾಹ ತೋರುತ್ತಲೇ ಮೂರು ಸಂಚಿಕೆಗಳನ್ನು ಸಂಪಾದಿಸುವಷ್ಟರಲ್ಲೇ ಅಕಾಲಿಕ ಮರಣಕ್ಕೆ […]

ಸೋಜಿಗವಲ್ಲ ಈ ಜಗವು

ಕವಿತೆ ಸೋಜಿಗವಲ್ಲ ಈ ಜಗವು ರೇಷ್ಮಾ ಕಂದಕೂರ. ಸೋಜಿಗವಲ್ಲ ಈ ಜಗವುಪೇಚಿಗೆ ಸಿಲುಕದಿರಿ ನಿರ್ಲಕ್ಷ್ಯ ತನದಿಉನ್ನತ ವಿಚಾರ ಧಾರೆ ಅನುಕರಿಸಿ ಭಾಜನಾರಾಗುವೆವು ಸುಕೃತಿಗಳ ಔತಣಕೆಶೂದ್ರತನವು ಏಕೆ ತೃಣಮಾತ್ರಕೆಭದ್ರವಾಗಿರಿಸಿ ಕಾಮನೆಗಳ ಕೀಲಿಕೈ ತದ್ರೂಪ ಮೋಹಕೆ ಬಲಿಯಾಗದೇಬದ್ಧತೆಯಲಿರಲಿ ಜೀವಯಾನದ ನೌಕೆಅರಳಲು ಬಿಡಿ ಸುಕೋಮಲ ಮನ ಪುಷ್ಪವ ವ್ಯವಹಾರದಲಿ ವ್ಯವಧಾನದ ನಂಟಿರಲಿಬಿದ್ದವನು ಮರುಘಳಿಗೆ ಏಳಲೇಬೇಕುಕದ್ದ ಮನೋಭಾವ ನರಳುವುದು ಶುದ್ಧ ಸರಳತನಕೆ ಬೆಲೆ ಕೊಡಿಅರಿಯಿರಿ ವಿರಳವಾದುದು ಮಾನವ ಜನ್ಮಕಲಹ ಕೋಲಾಹಲದಲಿ ಬೇಡ ಕಾಲಹರಣದ ಕುರೂಪತೆ ನಡೆಬಡಿವಾರದ ಕೂಗು ಬೇಕೆಹಗೆತನದ ಮತ್ತಿನ ಸುತ್ತ ಚರ್ಮದ […]

ಗಝಲ್

ಮಕ್ಕಳಿಗಾಗಿ ಗಝಲ್ ಲಕ್ಷ್ಮೀದೇವಿ ಪತ್ತಾರ ಜೇಡ ತುಂಬಿದ ನಿಮ್ಮ ಮನದ ಮನೆಯ ಜಾಡಿಸಿ ಶುಭ್ರವಾಗಿಸುವ ಜಾಡು ನಾನಾಗುವೆ ಮಕ್ಕಳೆಪದೇಪದೇ ದೂಳು ತುಂಬಿದ ಜೀವನ ನಿಮ್ಮದಾಗಿಸಿ ಕೊಳ್ಳಬೇಡಿ ಮಕ್ಕಳೆ ನಿಮ್ಮ ಮಬ್ಬಾದ ಬಾಳ ಬಾನಿನಲ್ಲಿ ಬಣ್ಣ ಬಣ್ಣದ ತಾರೆಗಳನ್ನು ಇರಿಸಿ ಬೆಳಗಿಸುವೆ ಮತ್ತೆ ಮತ್ತೆ ಕಾರ್ಮೋಡಗಳ ಮುಂದಿರಿಸಿ ಕತ್ತಲಲ್ಲಿ ಮೂಳಗಬೇಡಿ ಮಕ್ಕಳೇ ನಿಂತ ನೀರಾಗಿ ಕೊಳೆಯುತ್ತಿರುವ ನಿಮ್ಮ ಬಾಳ ಹೊಳೆಗೆ ಮಳೆ ನಾನಾಗಿ ಚೈತನ್ಯ ಚಿಲುಮೆಯಾಗಿ ಹರಿವಂತೆ ಮಾಡುವೆಮತ್ತೆ ಜಡತೆಯ ಬಂಡೆ ಅಡ್ಡವಿರಿಸಿ ನಿಸ್ತೇಜರಾಗಿ ಕೂಡಬೇಡ ಮಕ್ಕಳೆ ಹಸಿರಾಡದ […]

ನಮ್ಮೂರ ಕೆರೆಯ ವೃತ್ತಾಂತ

ಪದ್ಯ/ಗದ್ಯ ನಮ್ಮೂರ ಕೆರೆಯ ವೃತ್ತಾಂತ ಡಾ. ಅರಕಲಗೂಡು ನೀಲಕಂಠ ಮೂರ್ತಿ ನಮ್ಮೂರ ವಿಶಾಲ ತಬ್ಬಿಅಲೆಯಲೆಯಾಗಿ ಹಬ್ಬಿಹರಿದಿದ್ದ ಸಾಗರದಂಥ ಕೆರೆಈಗ ಬಸ್ ನಿಲ್ದಾಣ! ಹೇಮಾವತಿಯ ಚಿತ್ತಹರಿಯುವ ಮುನ್ನನಮ್ಮೂರಿನತ್ತಆ ‘ದೊಡ್ಡ ಕೆರೆ’ಯೇಕೋಟೆ ಪೇಟೆಯಬಂಗಾರ ಜೀವಜಲ!ಅದೀಗ ನಮ್ಮೂರ ‘ಹೆಮ್ಮ’ಯಬಸ್ ಸ್ಟ್ಯಾಂಡ್! ಒಂದೊಮ್ಮೆ ಮೊಗೆಮೊಗೆದಷ್ಟೂಉಗ್ಗಿದ್ದ ನೀರು…ಎಂದೆಂದೂ ಬತ್ತಿ ಬರಡಾಗದೆನಿತ್ಯ ಹರಿದಿದ್ದ ತೇರು!ಶತಮಾನಗಳ ತಲೆಮಾರುಗಳಮೈ-ಮನ ತೊಳೆದಿದ್ದನೀರಡಿಕೆ ನಿರಂತರ ನೀಗಿದ್ದವರುಷ ವರುಷ ಗಜಗಾತ್ರಗಣೇಶ ಮೂರ್ತಿಗಳನೆಆಪೋಶಿಸಿದ್ದಆ ನೀರ ಮಹಾರಾಶಿಈಗಸೆಲೆಯೂ ಇಲ್ಲದ ಅಪರಂಜಿ –ಬರಡು!ಯಾರ ಚಿಂತನೆಯಅದೆಂಥ ಬೆರಗು!ಆ ನೀರ ಜೊತೆಜೊತೆಗೆಪ್ರತಿಫಲಿಸಿದ್ದಇನ್ನುಳಿದ ಕೆರೆಗಳೂ ಕೂಡಈಗ ನೆಲಸಮ…ಬರೀ ನೆನಪು! ಅಂದಿನ ಆ […]

Back To Top