ಪಿಂಜರ್ ಶೋಷಣೆಗೊಳಗಾಗಿ ಅಸ್ಥಿಪಂಜರಗಳಾಗುವ ಹೆಣ್ಣುಮಕ್ಕಳ ಕಥೆ ಅಮೃತಾ ಪ್ರೀತಮ್ ಪಿಂಜರ್ಮೂಲ : ಅಮೃತಾ ಪ್ರೀತಮ್ಕನ್ನಡಕ್ಕೆ : ಎಲ್.ಸಿ.ಸುಮಿತ್ರಾಪ್ರ : ಅಂಕಿತ ಪುಸ್ತಕಪ್ರ.ವರ್ಷ :೨೦೦೬ಬೆಲೆ : ರೂ.೬೦ಪುಟಗಳು : ೧೦೪          ದೇಶ ವಿಭಜನೆಯ ಕಾಲದಲ್ಲಿ  ಶೋಷಣೆಗೊಳಗಾದ ಅಮಾಯಕ ಹೆಣ್ಣು ಮಕ್ಕಳ ಕರುಣ ಕಥೆಯಿದು. ಪೂರೋ ಎನ್ನುವವಳು ಇಲ್ಲಿ ಕಥಾ ನಾಯಕಿ.       ತನ್ನ ಇಬ್ಬರು ಸಹೋದರಿಯರು ಮತ್ತು ಒಬ್ಬ ಸಹೋದರನಿರುವ ಒಂದು ಸುಖಿ ಕುಟುಂಬದಲ್ಲಿ ಹಾಯಾಗಿ ಬೆಳೆದ ಹುಡುಗಿ ಪೂರೊ. ಸೌಮ್ಯ ಸ್ವಭಾವದವಳೂ ವಿಧೇಯಳೂ ಆದ ಅವಳು […]

ಲೆಕ್ಕಕ್ಕೊಂದು ಸೇರ್ಪಡೆ

ಲೇಖನ ಲೆಕ್ಕಕ್ಕೊಂದು ಸೇರ್ಪಡೆ ಶಾಂತಿ ವಾಸು ಚೀನಿಯರ ಕೆಟ್ಟ ಮನಸ್ಥಿತಿಯ ಕನ್ನಡಿ ಕೊರೊನ, ಭಾರತವನ್ನು ಪ್ರವೇಶಿಸುವ ಮೊದಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ, ಸಂಪೂರ್ಣ ದೇಹವನ್ನು ಅದೇನೋ ಹೊಸತರಹದ ದಿರಿಸಿನಿಂದ ಮುಖಸಹಿತ ಮುಚ್ಚಿಕೊಂಡ ಜನರು ಪ್ಲಾಸ್ಟಿಕ್ ಚೀಲದಲ್ಲಿ ಬಿಗಿಯಾಗಿ ಸುತ್ತಿದ ನೂರಾರು ಜನರ ಮೃತದೇಹಗಳನ್ನು ಒಟ್ಟೊಟ್ಟಿಗೇ, ಆಳವಾದ ಒಂದೇ ಹಳ್ಳದಲ್ಲಿ ಹಾಕಿ ಮಣ್ಣು ಮುಚ್ಚುವುದು ಹಾಗೂ ಪೆಟ್ರೋಲ್ ಸುರಿದು ಸಾಮೂಹಿಕವಾಗಿ ಸುಡುವುದನ್ನು ನೋಡಿಯೇ ಪ್ರಪಂಚವು ನಡುಗಿಹೋಗಿತ್ತು. ಇದೇನು?? ಹೊಸದಾಗಿ ನಡೆದದ್ದೇ? ಅಥವಾ ಯಾವುದಾದರೂ ಸಿನಿಮಾಗಾಗಿ ಇರಬಹುದೇನೋ ಎಂದು ಗೊಂದಲಗೊಂಡ ಕೋಟ್ಯಂತರ […]

ಬೊಗಸೆ ತುಂಬಾ ಕನಸು

ಪುಸ್ತಕ ಪರಿಚಯ ಬೊಗಸೆ ತುಂಬಾ ಕನಸು ಬೊಗಸೆ ತುಂಬಾ ಕನಸುಲೇಖಕರು: ಡಾ. ಬಿ. ಪ್ರಭಾಕರ ಶಿಶಿಲ ಸುಳ್ಯ)ಪ್ರಕಾಶಕರು: ರಾಜ್ ಪ್ರಕಾಶನ, ಮೈಸೂರುಪುಟಗಳು: 688ಬೆಲೆ: 650 ರೂಪಾಯಿಗಳು ಸ್ವಾತಂತ್ರ್ಯ ಎಂಬುದು ದೇವರಿಗಿಂತ ದೊಡ್ಡ ಮೌಲ್ಯ! –  ಡಾ| ಪ್ರಭಾಕರ ಶಿಶಿಲ ಒಂದಾನೊಂದು ಕಾಲದಲ್ಲಿ ಚಂದ್ರಾವತಿ. ಬಿ ಆಗಿ ಬದುಕುತ್ತಿದ್ದ ನನ್ನನ್ನು ಚಂದ್ರಾವತಿ ಬಡ್ಡಡ್ಕ ಆಗಿಸಿದ್ದು ನಮ್ಮ ಅರ್ಥಶಾಸ್ತ್ರ ಉಪನ್ಯಾಸಕರಾದ ಮಾನ್ಯ ಡಾ| ಪ್ರಭಾಕರ ಶಿಶಿಲ ಸರ್. ನಮ್ಮ ಕಾಲೇಜು ದಿನಗಳ ವೇಳೆಯಲ್ಲಿ, ಸ್ವಂತಿಕಾ ಪ್ರಕಾಶನದಿಂದ ಪುಸ್ತಕ ಪ್ರಕಟವಾಗುವ ವೇಳೆ, […]

ನಂಬಿಕೆ

ಕವಿತೆ ನಂಬಿಕೆ ರೇಷ್ಮಾ ಕಂದಕೂರು ಮನುಜತೆಯ ಸಾಕಾರ ರೂಪಅರಿವಿನ ಮಹಾಪೂರಅವಿನಾಭಾವದ ಸರದಿ ಶುದ್ಧ ಮನದ ರಿಂಗಣಅಭಿಮಾನದ ಗೂಡುಒಲುಮೆಯ ಹರಕೆ ಕಾರುಣ್ಯದ ಬದುಕುಸತ್ವರಜದ ತೇಜಸ್ಸುಪರಿಪೂರ್ಣ ಬಂಧುತ್ವ ವಿಶ್ವಾಸದ ಹೊನಲುಆಸರೆಯ ತೋರಣನೆರಳು ಬೆಳಕಿಗೆ ಸಮಸ್ಥಿತಿ ***************************

ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು….

ಗಾಂಧಿ ವಿಶೇಷ  ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ  ಗಾಂಧಿ  ಬಂದು ಹೋಗಿದ್ದರು…. ಗಾಂಧಿಜೀ ಉತ್ತರ ಕನ್ನಡ ಜಿಲ್ಲೆಯ ಪ್ರವಾದ ನನಗೆ  ಮುಖ್ಯವಾಗುವುದು ಮೂರು ಕಾರಣಗಳಿಗೆ. ಒಂದನೇ ಕಾರಣ ಗಾಂಧಿಜೀ ಅಸ್ಪೃಶ್ಯತೆಯನ್ನು ಜನರ ಮನದಿಂದ ಕಿತ್ತೊಗೆಯಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಎರಡನೇ ಕಾರಣ ದೇವಸ್ಥಾನದಲ್ಲಿನ ಪ್ರಾಣಿ ಬಲಿ ನಿಲ್ಲಿಸಲು ಯತ್ನಿಸಿದರು ಹಾಗೂ ಇದರಲ್ಲಿ ಯಶಸ್ವಿಯಾದರು. ಮೂರನೇ ಕಾರಣ  ಬಾಲವಿಧವೆಯರ ಕೇಶ ಮುಂಡನೆಯಂಥ ಸಂಪ್ರದಾಯವನ್ನು ನಿಲ್ಲಿಸಿದರು. ವಿಶೇಷವೆಂದರೆ ಈ ಮೂರು ಘಟನೆಗಳು ನಡೆದದ್ದು ೧೯೩೪ ರಲ್ಲಿ ಉತ್ತರ ಕನ್ನಡ ಜಿಲ್ಲೆಯ […]

ಅಸಹನೆ

ಕವಿತೆ ಅಸಹನೆ ಭಾಗ್ಯ ಸಿ. ಯಾರೊಂದಿಗೆ ಅಸಹನೆ ಏತಕ್ಕಾಗಿಬೂದಿ ಮುಚ್ಚಿದ ಕೆಡದಂತೆ ಕೋಪಸ್ಥಾನಪಲ್ಲಟವಾಗಿವೆ ಜಡ ವಸ್ತುಗಳುಮನಸ್ಸಿನ ತುಂಬೆಲ್ಲ ಅಶಾಂತತೆಯ ಛಾಯೆ ಸಾಗುತ್ತಿರುವ ದಾರಿ‌ ಮುಟ್ಟುವುದೆಲ್ಲಿಗೆಪರಿಶ್ರಮವಿಲ್ಲದೆ ಯಶಸ್ಸಿನ ಬಯಕೆ ಏಕೆ?ಅಂಧರೇನಲ್ಲ ಬಿದ್ದರು ಮೇಲೆಳಬಹುದುಸ್ವಚ್ಛಂದವಾಗಬೇಕು ಜಿಗುಟುತನ ತೊರೆದು ಬಿರುಗಾಳಿ ಯಿಂದ ಅಸ್ತವ್ಯಸ್ತ ಜೀವನವಿವೇಚನೆಯಿಲ್ಲದ ಹುಚ್ಚು ನಿರ್ಧಾರವೈರುಧ್ಯಗಳ ನಡುವೆ ಋಣಾತ್ಮಕತೆಜಂಟಿ ಹೋರಾಟ, ಹೊರನಡೆ ಶೀಘ್ರದಲಿ ತಲೆಹರಟೆ ಪ್ರಕ್ರಿಯೆಗಳ ತೊರೆದುಭ್ರಮಾ ಲೋಕ ಬಿಟ್ಟು ವಾಸ್ತವದೆಡೆಗೆನಡೆ ತನ್ನ ಉಳಿವಿನ ಬೆಳಕಿನೆಡೆಗೆಅಸಹನೆ ತೊರೆದು ಮಿನುಗುವ ನಕ್ಷತ್ರವಾಗಿ **********************************************

ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್:

ಪುಸ್ತಕ ಪರಿಚಯ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್: ಒಂದು ಅವಲೋಕನ (ಅಂಕಿತ ಪುಸ್ತಕ, ಬೆಂಗಳೂರು: ೨೦೨೦; ಪು.೧೬೦  ಬೆಲೆ: ರೂ.೧೫೦/-) ಭಾರತೀಯ ಕಾನೂನುಗಳ – ಅದರಲ್ಲೂ ವಿಶೇಷವಾಗಿ ‘ಭಾರತೀಯ ದಂಡ ಸಂಹಿತೆ’ – ಕುರಿತು ಮಾತನಾಡುವಾಗ “ಮಹಿಳೆ” ಎನ್ನುವುದನ್ನು ಒತ್ತಿ ಹೇಳಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರವಾದರೂ ಅದೊಂದು ನಿಷ್ಠುರ ಸಾಮಾಜಿಕ ಸತ್ಯ ಎಂಬುದನ್ನು ಒಪ್ಪಿಕೊಳ್ಳಲೇ ಬೇಕು. ‘ಸರ್ವರ ಸಮಾನತೆ’ಯನ್ನು ನಮ್ಮ ಸಂವಿಧಾನ ಎತ್ತಿ ಹಿಡಿದಿದೆಯಾದರೂ […]

ಗಝಲ್

ಗಝಲ್ ಶ್ರೀದೇವಿ ಕೆರೆಮನೆ ನೀನು ಮತ್ತೆ ಬರುವುದಿಲ್ಲವೆಂದು ಬುದ್ಧಿಗೆ ಅರ್ಥವಾಗಿದೆಹಾಳಾದ ಮನಸ್ಸು ಇನ್ನೂ ನಿನಗಾಗಿ ಕಾತರಿಸುತ್ತಿದೆ ಹೀಗೆ ಬಂದು ಹಾಗೆ ಹೋಗಲು ನಾನೇಕೆ ಬೇಕಿತ್ತು ಹೇಳುನನ್ನ ಮನೆಯಂಗಳದ ಮಲ್ಲಿಗೆ ನಿನಗೀಗ ಮರೆತು ಹೋಗಿದೆ ಅಗಲುವ ಮಾತಾಡಿದ್ದು ಇಂದು, ನಿರ್ಧಾರ ಎಂದಾಗಿತ್ತು?ಮಾಮರದ ಕೋಗಿಲೆಯೇಕೆ ಹೀಗೆ ಕರ್ಕಶವಾಗಿ ಅಳುತಿದೆ ಕೊನೆಯ ಕ್ಷಣದವರೆಗೂ ಗುಟ್ಟು ಬಿಡದ ಮಹಾ ಚತುರ ನೀನುನೆತ್ತರಿಲ್ಲದೇ ಇರಿಯುವುದನು ನಿನ್ನಿಂದ ಕಲಿಯಬೇಕಿದೆ ನಾಟಕದ ಮಂದಿರದಲ್ಲೀಗ ಕಣ್ಣು ಕುಕ್ಕುವ ಬೆಳಕಿಲ್ಲಮನಸನು ಬಲಿ‌ಪಡೆದ ಪ್ರಹಸನವು ಜಗಜ್ಜಾಹೀರಾಗಿದೆ ನಿನ್ನವಳೆಂಬ ಹೆಮ್ಮೆ ಎದೆಯೊಳಗೆ ಮೊರೆದು […]

ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..!

ಲೇಖನ ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕೆ.ಶಿವು ಲಕ್ಕಣ್ಣವರ ಹಿಂದಿ ಹೇರಿಕೆಯು ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕರ್ನಾಟಕದಲ್ಲಿ ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಅಣತಿ ಮೇರಗೆ ಬೆಂಗಳೂರು ಮೆಟ್ರೋ ಆಡಳಿತ ಮಂಡಳಿ ಇಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆಯಲ್ಲಿ ಫಲಕಗಳನ್ನು ಹಾಕಿದಾಗಲೇ ಸ್ಥಳೀಯ ಕನ್ನಡಪರ ಹೋರಾಟಗಾರರು ಹಿಂದಿ ಫಲಕಗಳಿಗೆ ಬಣ್ಣ ಬಳಿದು ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಸಂವಿಧಾನದಲ್ಲಿ ಯಾವ ಭಾಷೆಗೂ ರಾಷ್ಟ್ರಭಾಷೆ ಎಂಬ ವಿಶೇಷ ಸ್ಥಾನಮಾನ ನೀಡಲಾಗಿಲ್ಲ ಎಂಬುದನ್ನು […]

ಸಿಂ(ಹ)ಪತಿ

ಕವಿತೆ ಸಿಂ(ಹ)ಪತಿ ವಿಶಾಲಾ ಆರಾಧ್ಯ ಮನದ ಮೆಟ್ಟಿಲುಗಳನೀ ಒಂದೊಂದಾಗಿಎಷ್ಟೇ ಬಾರಿ ಇಳಿದುಹೋದರೇನು ಗೆಳೆಯ ?ಮತ್ತೆ ಮತ್ತೆ ನೀ ಕೂರುವೆಬಂದು ಅಧಿಪತಿಯಾಗಿ …// ಒಡಲ ಕಣದಲಿನೀ ಅಂಗಾಂಗುಲವೂಎಷ್ಟೇ ಗಾಯಗೊಳಿಸಿಕೊರಗಿಸಿದರೇನು ಗೆಳೆಯ ?ಮತ್ತೆ ಮತ್ತೆ ನೀನೇ ಬರುವೆನನ್ನ ಭೂಪತಿಯಾಗಿ…// ಮೋಹಕ ನೋಟದಕಣ್ಣ ಕಂಬನಿಗೆನೀ ಕಾರಣವಾಗಿಎಷ್ಟೇ ಕಾಡಿದರೇನು ಗೆಳೆಯ ?ಆ ಕಣ್ಣ ಕನಸಲಿಮತ್ತೆ ಮತ್ತೆ ನೀನೇ ಬರುವೆನನ್ನ ಪತಿಯಾಗಿ…!!ಅದಕ್ಕೆ ನಾವಾಗಿರುವೆವುದಂಪತಿಯಾಗಿ …// ***************************

Back To Top