ವರ್ತಮಾನ

ವರ್ತಮಾನ

ಕವಿತೆ ವರ್ತಮಾನ ರೇಶ್ಮಾಗುಳೇದಗುಡ್ಡಾಕರ್ ಮನದ ಉದ್ವೇಗ ಕ್ಕೆ ಬೇಕುಒಲವು ,ಛಲವುಇವುಗಳಸೆಳವಿಗೆ ಖುಷಿ ಇರುವದುಅಶ್ರುತರ್ಪಣಧರೆಗುರುಳುವದು ಯಾವ ಸಾಗರಕೂ ಹೊಲಿಕೆಯಾಗದಬದುಕಿನ ಅಲೆಗಳ ಓಟ …..ಮೆಲ್ಲನೆ ದಡಕ್ಕೆ ಮುತ್ತಿಡುವವುಕೆಲವೊಮ್ಮೆ ಕೊಚ್ವಿಕೊಂಡ್ಯೊಯುವವುದಡವನ್ನೇ …. ಏನು ಆಟವಿದು ?ಕಾಣದ ಕೈ ಸೂತ್ರವದುತಲ್ಲಣ ತಂಪಾಗಿ ,ಸುಧೆ ವಿಷವಾಗಿ ಕೆರಳಿಮುರಿದು ಬೀಳುವುದುಕನಸಿನ ಮನೆ ವರವೊ,ಬರವೂ ತಿಳಿಯದಕಾಲವಿದುಮತ್ತೆ ಸಿಲುಕುವದುಉದ್ವೇಗದಚಕ್ರ ವೇಗ ಪಡೆದು ಓಡುವುದುಸ್ವಾರ್ಥ ಸೆಳವಿಗೆ ಸೆರೆಯಾಗಿ ದಿನಗಳು ಉರುಳಿದಂತೆಮಣ್ಣಲ್ಲಿ ಮಣ್ಣಾಗಿನಿರ್ಮಿಸಿದ ಮೂಕಅವಶೇಷಗಳು ಹುಡುಕುವವುಸ್ನೇಹ ,ಪ್ರೀತಿಗಾಗಿ ಹಂಬಲಿಸುತ ***************************************

ಕಬ್ಬಿಗರ ಅಬ್ಬಿ ೧೧.  ಹಸಿವಿನಿಂದ ಹಸಿರಿನತ್ತ  ಹಸಿವಿನಿಂದ ಹಸಿರಿನತ್ತ “Generations to come will scarce believe that such a one as this ever in flesh and blood walked upon this earth” .(Albert Einstein, About Mahatma Gandhi) ” ಮುಂದಿನ ಪೀಳಿಗೆಯ ಮಕ್ಕಳು ಆಶ್ಚರ್ಯ ಪಡುವ ದಿನ ಬರಲಿದೆ, ಇಂತಹಾ  ಮನುಷ್ಯ ದೇಹ, ಈ ಭೂಮಿಯ ಮೇಲೆ ನಡೆದಾಡಿರಬಹುದೇ?” ( ಆಲ್ಬರ್ಟ್ ಐನ್ ಸ್ಟೈನ್ ,ಮಹಾತ್ಮಾ ಗಾಂಧಿ ಅವರ […]

ಅನುವಾದ ಸಂಗಾತಿ

ಕಿಟಕಿ — ಗೋಡೆ ಕನ್ನಡ ಮೂಲ:ವಸುಂಧರಾಕದಲೂರು ಇಂಗ್ಲೀಷಿಗೆ: ಸಮತಾ ಆರ್ ಕಿಟಕಿ — ಗೋಡೆ ನಾನೊಂದು ಕಿಟಕಿ; ಮುಚ್ಚಿಯೇಇದ್ದೇನೆ ಶತಮಾನಗಳಿಂದಗತಕಾಲದ ಗಾಳಿ ಒಳಗೆಸುಳಿದಾಡುತ್ತಾ ಕತ್ತಲ ಘಮಲಿನಅಮಲಲಿ ಉರುಳಾಡುತ್ತಾಎದ್ದೆದ್ದು ಕುಣಿಯುವಆತ್ಮಗಳೂ ಅಸ್ಥಿಪಂಜರಗಳೂನನ್ನೊಳಗಿವೆ. ವಿಶಾಲ ಬಿಳಲುಗಳ ಆಲದಮರವೊಂದು ಟಿಸಿಲೊಡೆದುತೊಗಟೆ ಕಳಚಿಕೊಳ್ಳದೆ ಬೇರೂರಿಮುಚ್ಚಿದ ಕಿಟಕಿಯಾಚೆಸ್ವಚ್ಛ ಗಾಳಿಗೆ ಚಿಗುರು ಚಿಗಿಸಿಹಕ್ಕಿ ಗೂಡಿಗೆ ಟೊಂಗೆ ಚಾಚಿದೆ.ಒಂದೊಂದು ಟೊಂಗೆಗೂಗೂಡು. ಗೂಡೊಳಗೆ ಕಾವುಕೂತ ಹಸಿ ಬಾಣಂತಿ ಹಕ್ಕಿಕಿಟಕಿ ಕುಟುಕಿದ ಸದ್ದು;ಚಾಚಿದ ಟೊಂಗೆಯೋಚೈತನ್ಯದ ಹಕ್ಕಿಯೋ ತಿಳಿಯದು.ಪ್ರತೀ ಶಬ್ದ ಮಾಡುವ ಹಕ್ಕಿಗೂಅದೇನು ರಾಗವೋಸುಮ್ಮಗೆ ಬೀಸುವ ಗಾಳಿಗೆತಲೆದೂಗುವ ಟೊಂಗೆಗಳಿಗೂಅದೇನು ಹೊಸ ರಂಗೋ […]

ಗಝಲ್

ಗಝಲ್ ಸಹದೇವ ಯರಗೊಪ್ಪ ಪ್ರೇಮದ ಹೂ ಬಾಣ ಹೃದಯದಲಿ ರುಜು ಹಾಕುವಾಗ ನಾನೇ ಇಲ್ಲದಾದೆಹದವರಿತ ಎದೆಹೊಲದಿ ಬಿತ್ತಿದ ಪ್ರೀತಿ ಫಲ ನೀಡುವಾಗ ನಾನೇ ಇಲ್ಲದಾದೆ ಅಂಗಗಳ ಸಂಗ ಬಯಸಿದ ಮನಸು ನಿದಿರೆ ಬತ್ತಿಸಿ ಕಂಗಳ ವಿಶ್ರಾಂತಿ ಕದ್ದಿದೆತುಂಬಿದ ರೂಪದ ಬಟ್ಟಲು ಕಂಡು ಗುಲಾಬಿ ರಂಗೇರಿದಾಗ ನಾನೇ ಇಲ್ಲದಾದೆ ಫಕೀರನಂತೆ ತಂಬೂರಿ ಮೀಟುತ ಅವಳ ಹಿಮ್ಮಡಿಯ ಹುಡಿಬೆಳಕಲಿ ಅಲೆದೆಬದುಕಿನ ತಿರುವಿನಲ್ಲಿ ಕಣ್ಣ ಪ್ರಣತಿ ಹೊತ್ತಿಸಿ ಕಾಯುವಾಗ ನಾನೇ ಇಲ್ಲದಾದೆ ಮೋಹ ತೃಷೆಯಲಿ ತೇಲಾಡುವ ಅಮಲಿಗೆ ಬಿಸಿಯುಸಿರ ಗುಟುಕಿಸಿದೆಒಲವ ಮಳೆಗೆ […]

ಗುರುವಿನ ಗರಿಮೆ

ಲೇಖನ ಗುರುವಿನ ಗರಿಮೆ ನೂತನ ದೋಶೆಟ್ಟಿ ಬಾಲ್ಯದಲ್ಲಿ ಶಿಕ್ಷಣವೆಂದರೆ ಶಿಕ್ಷೆ  ಯೌವನದಲ್ಲಿ ಶಿಕ್ಷಣವೆಂದರೆ ಪರೀಕ್ಷೆಗಳು ಹಾಗೂ ಮೋಜು, ಆನಂತರದಲ್ಲಿ ಅದೇ ಶಿಕ್ಷಣ ವೃತ್ತಿಗೆ ರಹದಾರಿ.ಈ ರೀತಿಯಾಗಿ ಶಿಕ್ಷಣವನ್ನು ಸರಳೀಕರಿಸಬಹುದಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹಿನ್ನೆಲೆಯಲ್ಲಿ ಎರಡು ಸರಳ ಸೂತ್ರಗಳನ್ನು ನಿಮ್ಮ ಮುಂದೆ ಇಡಬಯಸುತ್ತೇನೆ.  ಶಿಕ್ಷಣ= ಶಿಕ್ಷಣ ಸಂಸ್ಥೆ+ ವಿದ್ಯಾರ್ಥಿ ಉದ್ಯೋಗ= ಮಾರ್ಕ್ಸ+ ವಶೀಲಿ ಈ ಎರಡು ಸೂತ್ರಗಳನ್ನು ಇಟ್ಟುಕೊಂಡು ಇಂದಿನ ಶಿಕ್ಷಣದ ಬಗ್ಗೆ ನೋಡೋಣ. ಮೊದಲ ಸೂತ್ರದಲ್ಲಿ ಶಿಕ್ಷಣ ಸಂಸ್ಥೆಗಳು ಬಹು ಮುಖ್ಯವಾಗುತ್ತವೆ. ಉನ್ನತ ಶಿಕ್ಷಣದಲ್ಲಿ ಈ […]

ದೇಹದ ಹಂಗು ತೊರೆದು; ಹೊಸದನ್ನು ಹುಡುಕಿ         ಯಾರಾದರೂ ವ್ಯಾಟ್ಸ್‌ಆಪ್ ಅಥವಾ ಫೇಸ್‌ಬುಕ್‌ನ ಇನ್ ಬಾಕ್ಸ್‌ಗೆ ಬಂದು ಅಡ್ರೆಸ್ ಕೊಡಲು ಕೇಳಿದರೆ ನಾನು ಮಾತನಾಡದೇ ಕೊಟ್ಟುಬಿಡುವುದು ನನಗೆ ರೂಢಿಯಾಗಿಬಿಟ್ಟಿದೆ. ಯಾಕೆಂದರೆ ಬಹುತೇಕ ಹಾಗೆ ಕೇಳುವವರು ಸಾಹಿತಿ ಮಿತ್ರರೇ. ಅದೂ ಆಗಷ್ಟೇ ಅವರ ಪುಸ್ತಕ ಪ್ರಕಟವಾದವರು. ಹೀಗಾಗಿ ಪ್ರಕಾಶ ನಾಯಕರು ವಿಳಾಸ ತಿಳಿಸು ಎಂದು ವ್ಯಾಟ್ಸ್ ಆಪ್‌ನಲ್ಲಿ ಕೇಳಿದಾಗ ಅವರ ಅಂತೂ ಫೇಸ್‌ಬುಕ್‌ನಲ್ಲಿ ಸದ್ದು ಮಾಡ್ತಿರೋದನ್ನು ಗಮನಿಸಿದ್ದರಿಂದ ಅಷ್ಟೇನು ಗಮನವಹಿಸದೇ ಕೊಟ್ಟುಬಿಟ್ಟೆ. ಅದಾದ ನಂತರ […]

ಅಂಕಣ ಬರಹ ಅಂಜನಾ ಬರೆಯುತ್ತಾರೆ ಜಗಲಿಯೆನ್ನುವ ಮೊದಲಪ್ರೇಮ ಸೂರ್ಯ ಮೂಡುವ ಹೊತ್ತು ಬರಿಗಾಲಲ್ಲಿ ಒಮ್ಮೆ ಅಂಗಳಕ್ಕಿಳಿದು ನೋಡಿ. ಮಣ್ಣಿನೊಂದಿಗಿನ ಮೊದಲಪ್ರೇಮದ ಸ್ಪರ್ಶ ಅಂಗಾಲುಗಳನ್ನು ತಾಕಿ ಹೃದಯವನ್ನು ಸೋಕುತ್ತದೆ; ಬಾಗಿಲುಗಳಾಚೆ ಬಂದು ಸುರಿವ ಮಳೆಗೆ ಒಮ್ಮೆ ಮುಖವನ್ನೊಡ್ಡಿ ನೋಡಿ. ಮಳೆಯೊಂದಿಗಿನ ಮೊದಲಪ್ರೇಮದ ಸುಖ ಮುಂಗುರುಳನ್ನು ತೋಯಿಸಿ ಹನಿಹನಿಯಾಗಿ ನೆಲಕ್ಕಿಳಿಯುತ್ತದೆ; ಒಂದು ಏಕಾಂತದ ಸಂಜೆಯಲ್ಲಿ ಸದ್ದಿಲ್ಲದೆ ಅರಳುತ್ತಿರುವ ಜಾಜಿಯ ಮೊಗ್ಗುಗಳನ್ನು ಅಂಗೈಯಲ್ಲಿ ಹಿಡಿದು ನೋಡಿ. ಪರಿಮಳದೆಡೆಗಿನ ಮೊದಲಪ್ರೇಮದ ಭಾವ ಇಂದ್ರಿಯಗಳ ಹಂಗು ತೊರೆದು ಗಾಳಿಯೊಂದಿಗೆ ತೇಲಿ ಹಗುರಾಗುತ್ತದೆ. ಮೃದುವಾದ ಪುಟ್ಟಪುಟ್ಟ […]

ಅಭಿನಂದನೆಗಳು

ಸಂಗಾತಿ ಪತ್ರಿಕೆಗೆ ಬರೆಯುತ್ತಿರುವನಾಲ್ವರು ಲೇಖಕಿಯರಿಗೆ ಇಂದು ವಿವಿಧ ಪ್ರಶಸ್ತಿಗಳು ದೊರಕಿದ್ದು ಪತ್ರಿಕೆ ಆ ನಾಲ್ವರಿಗೂ ಈ ಮೂಲಕ ಅಭಿನಂದನೆ ಸಲ್ಲಿಸುತ್ತಿದೆ ಅಕ್ಷತಾ ಕೃಷ್ಣಮೂರ್ತಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡುವ ಮಯೂರ ವರ್ಮ ಪ್ರಶಸ್ತಿ ಪಡೆದಿದ್ದಾರೆ ಶ್ರೀದೇವಿ ಕೆರೆಮನೆ ಕನ್ನಡ ಸಾಹಿತ್ಯ ಪರಿಷತ್ ನೀಡುವಸುಮನ್ ಸೋಮಶೇಖರ ಸೋಮವಾರಪೇಟೆ ದತ್ತಿ ಪ್ರಶಸ್ತಿ ವಿಭಾ ಪುರೋಹಿತ್ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ರೂಪಶ್ರೀ ಎನ್.ಆರ್ ಕನ್ನಡ ಸಾಹಿತ್ಯ ಪರಿಷತ್ತಿನ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ ************************************************************************

ಅವಳ ಕಣ್ಣುಗಳು

ಕವಿತೆ ಅವಳ ಕಣ್ಣುಗಳು ಡಾ. ಪ್ರೇಮಲತ ಬಿ. ಅವಳ ಕಣ್ಣುಗಳು ಅವನನ್ನುನಿರುಕಿಸುವುದೇ ಹೀಗೆನಿಧಾನವಾಗಿ ಪರೀಕ್ಷಿಸುವಂತೆಯಾರೆಂದು ಯಾವತ್ತೂ ನೋಡಿರದ ಹಾಗೆಆಳವಾಗಿ ಕತ್ತರಿಸುವ ಬಗೆ ಅವಳು ಅತ್ತಿತ್ತ ಹರಿಸುವ ನೋಟದಲ್ಲಿಇಡೀ ಜೀವಿತದಿ ಕಂಡಿರದ್ದಕ್ಕಿಂತಹೆಚ್ಚು ನೋಡಿಬಿಡುತ್ತಾನೆ ಅವನುದೀಪಗಣ್ಣುಗಳು ಆಳವಾಗಿ ಯೋಚಿಸುತ್ತನಿಷ್ಯಬ್ದವಾಗಿ ಪ್ರಕಟಿಸುತ್ತವೆತಟ್ಟನೆ ಒಂದು ಕಥೆಯನ್ನು ಬರೆಯುತ್ತಹೊಸಲೋಕದ ಕವಿತೆಯೊಂದನ್ನು ಹಾಡುತ್ತಇವನು ನಿಂತ ನೆಲ ಕಂಪಿಸುವ ಹಾಗೆ ಅವಳ ಕಣ್ಣೋಟದ ಕೊಲೆಗಡುಕನಿಗೆಇವನು ಬಲಿಯಾದ್ದು ಇದೇ ಮೊದಲಲ್ಲಕೊನೆಯೂ ಇಲ್ಲಅವಳ ನೋಟವೇ ಹಾಗೆಅವನ ಹೊರಮೈ ಭಾವಗಳ ಬಟ್ಟೆಕಳಚಿ ನಗ್ನವಾಗಿಸುವ ಹಾಗೆಒಳಮೈಯ ಬೇಗುದಿಗಳಿಗೆ ತಿದಿಯನ್ನುಒತ್ತಿ ಜ್ಯೋತಿ ಬೆಳಗಿಸುವ ಹಾಗೆ […]

ಶಿಶುತನದ ಹದನದೊಳು ಬದುಕಲೆಳಸಿ…

ಪ್ರಬಂಧ ಶಿಶುತನದ ಹದನದೊಳು ಬದುಕಲೆಳಸಿ… ಲಕ್ಷ್ಮಿ ನಾರಾಯಣಭಟ್ ಈ ಸುಂದರ ಮುಂಜಾನೆ ನನಗೆ ತುಂಬಾ ಪ್ರಿಯವಾದ ಹಾಡೊಂದರ ಸಾಲುಗಳು ನನ್ನ ಮನ:ಪಟಲದಲ್ಲಿ ಭಾವ ತರಂಗಗಳನ್ನು ಎಬ್ಬಿಸುತ್ತಿವೆ. ನಾನು ಹಾಡುಗಾರನಲ್ಲದಿದ್ದರೂ, ಈ ಸಾಲುಗಳಿಗೆ ದಯವಿಟ್ಟು ಕಿವಿಗೊಡಿ. ನೆನಪಿದೆಯೇ ನಿನಗೆ? ನಾವಿಬ್ಬರೂ ಅಂದು ಹೊಳೆಯ ದಡದಲ್ಲಿ ನಿಂದು ಮರಳು ಮನೆಗಳ ಕಟ್ಟಿ ಆಟವಾಡಿದ್ದು ನಿನಗೆ ನೆನಪಿದೆಯೇ ನಿನಗೆ? ಬಾ ಗೆಳೆಯ ಬಾರಯ್ಯಾ, ಆಟವಾಡೋಣ ಬಾಲ್ಯದ ನೆನಪನು ಮರಳಿ ಕಟ್ಟೋಣ. ನೆನಪಿದೆಯೇ ನಿನಗೆ? ನನಗೆ ಬೇಜಾರಾದಾಗಲೆಲ್ಲಾ ಈ ಸಾಲುಗಳನ್ನು ಗುಣುಗುಣಿಸುತ್ತೇನೆ. ಆಗ […]

Back To Top