ಗುರುವಿನ ಋಣ

ಗುರುವಿನ ಋಣ

ಗುರುವಿನ ಋಣ ಜಯಶ್ರೀ ಜೆ.ಅಬ್ಬಿಗೇರಿ         ಆಗ ನಾನಿನ್ನೂ ಪುಟ್ಟ ಫ್ರಾಕು  ಧರಿಸಿ ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿದ್ದ ಕಾಲ. ಸದಾ ನನ್ನ ಕೈಯಲ್ಲಿ ಬಿಳಿ ಚೌಕಟ್ಟಿನ ಕರಿ ಪಾಟಿ ಹಿಡಿದು, ಬೆರಳಲ್ಲಿ ಪೆನ್ಸಿಲ್ ಸಿಕ್ಕಿಸಿಕೊಂಡು ದೊಡ್ಡ ಪಂಡಿತರಂತೆ ಗಂಭಿರವಾಗಿ ಬರೆಯುವದನ್ನು ಕಂಡು ನನ್ನಪ್ಪ, ನಮ್ಮವ್ವ ಎಷ್ಟು ಶ್ಯಾನೆ ಅದಾಳ ನೋಡು ಎನ್ನುತ್ತ ಪ್ರೀತಿಯಿಂದ ಹಣೆಗೆ ಹೂ ಮುತ್ತನ್ನಿಕ್ಕಿ ಅಕ್ಷರವನ್ನು ತೀಡಿಸುತ್ತಿದ್ದರು.ಆಗಿನಿಂದ ನನ್ನ  ಅಕ್ಷರದ ಹುಚ್ಚು ಮತ್ತಷ್ಟು ಹೆಚ್ಚಿತು. ಅಣ್ಣನ ಜೊತೆ ನಾನೂ ಶಾಲೆಗೆ ಹೋಗಲೇಬೇಕು ಎಂಬ […]

ಓ ನಮ್ಮ ಶಿಕ್ಷಕ ನೀ ನಮ್ಮ ರಕ್ಷಕ

ಓ ನಮ್ಮ ಶಿಕ್ಷಕ ನೀ ನಮ್ಮ ರಕ್ಷಕ ವಿಭಾ ಪುರೋಹಿತ್ ಓ ನಮ್ಮ ಶಿಕ್ಷಕನೀ ನಮ್ಮ ರಕ್ಷಕ ಮರೆಯಲೆಂತು ನಿನ್ನ ಸೇವೆಕರೆವ ಜ್ಞಾನ ಹಾಲ ಗೋವೆನಿನಗೆ ನಮ್ಮ ನಮನವುನಿನ್ನ ಅಡಿಗೆ ಸುಮನವು————ಧಾರವಾಡದ ಜಿ. ಎಸ್. ಕುಲಕರ್ಣಿ ಧಾರವಾಡದ ಜಿ.ಎಸ್ . ಕುಲಕರ್ಣಿ ಅವರ ಸಾಲುಗಳು ಇಲ್ಲಿ ನೆನೆಯಬಹುದು ಮನಃಪಟಲಕ್ಕೆ ಬಂದು ಅಚ್ಚೊತ್ತಿದ ಕೆಲವು ಘಟನೆಗಳನ್ನು ಬರೆಯದೇ ಇರಲಾಗುವುದಿಲ್ಲ.ಎಲ್ಲಿಂದಲೋ ಬಂದ ದಿವ್ಯ ಚೇತನ ಬೆನ್ನುತಟ್ಟಿ ಬರೆಯಲಾರಂಭಿಸಿತು.ಮೂವತ್ತು ವ ರ್ಷಗಳ ಹಿಂದೆ ಓಡಾಡಿದ ಜಾಗ,ಆಟವಾಡಿದ ಸ್ಥಳ,ಮಣ್ಣಿ ಗೆ,ಕಲ್ಲಿಗೆ ಅಕ್ಕರೆಯಿಂದ ಮುತ್ತಿಟ್ಟು […]

ಅಂಕಪಟ್ಟಿ ಬಾಲ್ಯ ಪುಸ್ತಕ-ಅಂಕಪಟ್ಟಿ ಬಾಲ್ಯಕವಿ- ರವಿರಾಜ ಸಾಗರಪ್ರಕಾಶನ- ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಟಾನ, ಕಮಲಾಪುರಬೆಲೆ-೧೩೦/- ಸ್ಪರ್ಧಾಲೋಕದಿ ಬೇಕೇ ಬೇಕಂತೆತರತರ ಪ್ರಮಾಣ ಪತ್ರಗಳುಕಷ್ಟವಾದರೂ ಮಾಡಲೇ ಬೇಕಂತೆನಾವು ಬಯಸದ ಪಾತ್ರಗಳು    ಇದು ಇಂದಿನ ದಿನಮಾನದ ಎಲ್ಲಾ ಮಕ್ಕಳ ಸಮಸ್ಯೆ. ಮಕ್ಕಳ ಮನಸ್ಸನ್ನು ಯಾರು ಅರ್ಥ ಮಾಡಿಕೊಳ್ಳುತ್ತಾರೆ ಹೇಳಿ? ನಮಗೆ ಹೆಚ್ಚು ಅಂಕಕೊಡುವ ರೋಬೋಟ್ ಬೇಕಿದೆಯೇ ಹೊರತು, ನಮ್ಮಿಂದ ಮುದ್ದಿಸಲ್ಪಟ್ಟು, ನಮ್ಮನ್ನೂ ಪ್ರೀತಿಸುವ ಮಗು ಬೇಕಾಗಿಲ್ಲ. ಎಲ್ಲ ಅಪ್ಪ ಅಮ್ಮಂದಿರಿಂದ ಹಿಡಿದು, ಶಿಕ್ಷಣ ಇಲಾಖೆಯಿಂದ ಹಿಡಿದು ಸಮಾಜದ ಎಲ್ಲರಿಗೂ ಮಗುವಿನ […]

ಅಶ್ವತ್ಥಮರದ ಮೇಲೊಂದು ಗುಬ್ಬಿಗೂಡು ಈ ಮರ-ಗಿಡಗಳದ್ದು ಒಂದು ವಿಸ್ಮಯದ ಲೋಕ. ಒಂದಿಂಚು ಕತ್ತರಿಸಿದರೆ ನಾಲ್ಕಾರು ಟಿಸಿಲೊಡೆದು ಚಿಗುರಿಕೊಳ್ಳುವ ಗಿಡ ಕಣ್ಣೆದುರೇ ಮರವಾಗಿ ಬೆಳೆದುಬಿಡುವ ಪ್ರಕ್ರಿಯೆಯೊಂದು ಅಚ್ಚರಿ ಮೂಡಿಸುತ್ತದೆ. ಆ ಬೆಳವಣಿಗೆಯ ಬೆರಗಿನ ಲೋಕದಲ್ಲಿ ದಿನಕ್ಕೊಂದು ಹೊಸ ನೋಟ, ನೋಟದಲೊಂದಿಷ್ಟು ಹೊಸ ಅನುಭವಗಳು ಅವಿತು ಕುಳಿತಿರುತ್ತವೆ. ಹಾಗೆ ಅಡಗಿ ಕುಳಿತ ಅನುಭವಗಳೆಲ್ಲ ಸಮಯ ಸಿಕ್ಕಾಗ ಗಾಳಿ-ಬೆಳಕು-ನೆರಳುಗಳೊಂದಿಗೆ ಮಾತುಕತೆ ನಡೆಸುತ್ತ, ಮಳೆಗೊಂದು ಕೊಡೆ ಹಿಡಿದು ಚಲಿಸುತ್ತ ತಮ್ಮ ಇರುವಿಕೆಯನ್ನು ಗಟ್ಟಿಗೊಳಿಸಿಕೊಳ್ಳುತ್ತವೆ. ಗಾಳಿಯೊಂದಿಗೆ ಹಾರಿಬಂದ ಧೂಳಿನ ಕಣವೊಂದು ಎಲೆಯನ್ನಾಶ್ರಯಿಸಿದರೆ, ಬೆಳಕಿನೊಂದಿಗೆ ಬಿಚ್ಚಿಕೊಳ್ಳುವ […]

ಟೈಂ ಮುಗಿಸಿದ ಸಮಯ…..

ಕವಿತೆ ಡಾ.ಪ್ರೇಮಲತ ಬಿ ಕೆಲವರಿಗೆ ಸಮಯವಿರುವುದಿಲ್ಲಸಮಯ ಮಾಡಿಕೊಳ್ಳಲು ಸಮಯ ಸಾಕಾಗುವುದಿಲ್ಲನನ್ನ ಬಳಿ ಬಹಳ ಸಮಯವಿದೆಆಳ ಗೆರೆಗಳ ನನ್ನ ಕೈ ಖಾಲಿಯಿದೆ ಹಾಗೆಂದೇ ಸಮಯವನ್ನು ಕೊಲ್ಲಲು ನನ್ನ ಬಳಿಅಸಾಧ್ಯ ಸಾಧ್ಯತೆಗಳಿವೆ ಆದರೆಹಾಗೊಮ್ಮೆ, ಹೀಗೊಮ್ಮೆ ತೂಗುವ ಲೋಲಕದನನ್ನ ಗಡಿಯಾರಕ್ಕೆ ಮುಳ್ಳುಗಳಿಲ್ಲ ಅನಂತ ಚಲನೆಗಳ ಸಂವೇದನೆಯಿಲ್ಲಕೊಂದದ್ದೇನು ತಿಳಿಯುವುದಿಲ್ಲಟಿಕ್-ಟಿಕ ನೆಂದು ಉಲಿದು ಹೇಳಲುನನ್ನೆದೆ ಗಡಿಯಾರಕ್ಕೆ ಧ್ವನಿಯಿಲ್ಲ ರಸ್ತೆಯಲಿ ನಿಂತ ಒಂಟಿ ಜೀವಸಂತೆಯಲ್ಲಿದ್ದರೂ ಕೇಳುವ ನಿರಂತರ ಮೌನಸಮಯದ್ದೇನು ನನಗೆ ಮುಲಾಜುಸಮಯ ಪ್ರಜ್ಞೆಆಳುವುದಿಲ್ಲ ಅವಸರ ಬದುಕ ಕಾಡುವುದಿಲ್ಲಸಮಯ ಕೊಂದ ಪಾಪಪ್ರಜ್ಞೆಯಿಲ್ಲಅರ್ಥಗಳ ಟೈಂ ಮುಗಿಸಿದ ಸಮಯ ನನ್ನೆದುರು […]

ನೈವೇದ್ಯ

ಕವಿತೆ ನೈವೇದ್ಯ ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಮೂರು ಕಲ್ಲುಗಳ ಒಲೆನನ್ನ ಮನಸ್ಸು!ಹಳದಿ ಮೈಯ ಕೆಂಪು ನಾಲಗೆಯನ್ನುಊರ್ಧ್ವಕ್ಕೆ ಕೊರಳುದ್ದಕ್ಕೂ ಚಾಚಿ ಚಾಚಿಕಾಯಮಡಕೆಯನ್ನು ನೆಕ್ಕುತ್ತಿರುತ್ತದೆಬೆಂಕಿಬಾಳು! ಒಂದು ದೀರ್ಘ ಕಾಯುವಿಕೆಯಲ್ಲಿಪ್ಲುತಕಾಲಗಳ ಬೇಯುವಿಕೆ…ಅಕ್ಕಿ ಗುಳುಗುಳು ಕುದಿಯುತ್ತ ಅಂಗುಳಅಗುಳು ಅಗುಳೂ ಅನ್ನವಾಗುತ್ತದೆಆಹಾ! ಉದುರುದುರು ಮಲ್ಲಿಗೆ ಹೂವು!ಬಟ್ಟಲು ತುಂಬ ಹರಿದಾಡುವ ಮುತ್ತು!ಅನ್ನ ಜೀವವಾಗುತ್ತದೆ… ಪರಮ ಅನ್ನ! ಬ್ರಹ್ಮ ವಿಷ್ಣು ಮಹೇಶ್ವರ ಪುಟುಪುಟುಅಂಬೆಗಾಲಿಡುತ್ತಿದ್ದಾರೆ…ಚಿಗುರು ಬೆರಳ ಚುಂಚದಲ್ಲಿ ಹೆಕ್ಕಿ ಹೆಕ್ಕಿಬಾಯಿ ಬ್ರಹ್ಮಾಂಡದಲ್ಲಿ ತುಂಬಿಕೊಳ್ಳಲು!ಒಬ್ಬನ ಕೈಯ ಕೆಂದಾವರೆಗೆಮತ್ತೊಬ್ಬನ ಹೊಕ್ಕುಳ ಕುಂಡದ ದಂಟಲ್ಲಿ ನಗುಹುಟ್ಟಿಗೆ ಬದುಕಿನ ನಂಟು!ಹೊಕ್ಕುಳಬಳ್ಳಿ… ಅಮೃತಬಳ್ಳಿ! ಮಗದೊಬ್ಬನ ನೊಸಲಲಿ ಒಲೆಯಬೂದಿಯೆ […]

ಪುಸ್ತಕ ಪರಿಚಯ

ನಾದಾನುಸಂಧಾನ (ಅಂಕಣ ಬರಹಗಳ ಸಂಗ್ರಹ) ಪುಸ್ತಕದ ಹೆಸರು: ನಾದಾನುಸಂಧಾನ (ಅಂಕಣ ಬರಹಗಳ ಸಂಗ್ರಹ)ಲೇಖಕರು: ಆಶಾಜಗದೀಶ್ಪುಟಗಳು: 200ಬೆಲೆ: 220/-ಪ್ರಕಾಶನ: ಸಾಹಿತ್ಯ ಲೋಕ ಪ್ರಕಾಶನ, ಬೆಂಗಳೂರುಪ್ರಕಾಶಕರ ಹೆಸರು ಮತ್ತು ದೂರವಾಣಿ: ರಘುವೀರ್, 9945939436 ಕವಯಿತ್ರಿ, ಅಂಕಣಕಾರ್ತಿ ದೀಪಾ ಹಿರೇಗುತ್ತಿ ಯವರು ಹೀಗೆ ಬರೆಯುತ್ತಾರೆ: ಆಶಾ ನಮ್ಮ ನಡುವಿನ ಪ್ರತಿಭಾವಂತ ಲೇಖಕಿ. ಕಥೆ, ಕವನ, ಅಂಕಣ ಈ ಮೂರೂ ಪ್ರಕಾರಗಳಲ್ಲಿ ಯಶಸ್ವಿಯಾಗಿ ಬರೆಯುತ್ತಿದ್ದಾರೆ. ತಮ್ಮ ಶಾಲೆ ಮತ್ತು ಕೌಟುಂಬಿಕ ಜವಾಬ್ದಾರಿಗಳ ನಡುವೆ ನಿರಂತರವಾಗಿ ಬರೆಯುತ್ತಿರುವ ಆಶಾ ಅಚ್ಚರಿ ಹುಟ್ಟಿಸುತ್ತಾರೆ. “ನಾದಾನುಸಂಧಾನ” ಎಂಬ […]

ಕಸಾಪಗೆ ಮಹಿಳಾ ಅಧ್ಯಕ್ಷರು

ಚರ್ಚೆ ಕಸಾಪಗೆ ಮಹಿಳಾ ಅಧ್ಯಕ್ಷರು ಒಂದು ಚರ್ಚೆ ಮೆಲ್ಕಂಡವಿಷಯವಾಗಿ ಸಂಗಾತಿ ಪತ್ರಿಕೆ ಕನ್ನಡದ ಬರಹಗಾರರಿಗೆ ಕೆಲವು ಪ್ರಶ್ನೆಗಳನ್ನು ಹಾಕಿತ್ತು ಅದಕ್ಕೆ ಬಂದ ಉತ್ತರಗಳನ್ನು ಇಲ್ಲಿ ಒಂದೊಂದಾಗಿಪ್ರಕಟಿಸಲಾಗುತ್ತಿದೆ. ಸಂಗಾತಿ ಕೇಳಿದ ಪ್ರಶ್ನೆಗಳು ಪ್ರಶ್ನೆ ಒಂದು,ಇದಕ್ಕಿರುವ ಕಾರಣಗಳೇನು?ಇದನ್ನು ಹೇಗೆ ವಿಶ್ಲೇಷಿಸುತ್ತೀರಿ? ಪ್ರಶ್ನೆ ಎರಡು,ಸಮಾನತೆಯ ಈ ಯುಗದಲ್ಲಿ ಮಹಿಳೆಯೊಬ್ಬರು ಅಧ್ಯಕ್ಷರಾಗುವುದು ಸಾದ್ಯವೆಂದು ನಂಬುವಿರಾ?ಸಾದ್ಯವೆಂದಾದರೆ ಹೇಗೆ? ಪ್ರಶ್ನೆ ಮೂರು,ಮಹಿಳೆಯೊಬ್ಬರು ಅಧ್ಯಕ್ಷರಾಗದಂತೆ ತಡೆಯುವ ಶಕ್ತಿಗಳನ್ನು ಹೇaaಗೆ ಎದುರಿಸಬಹುದು? ಪ್ರಶ್ನೆ ನಾಲ್ಕು, ಮಹಿಳೆಗೆ ಈ ಅಧ್ಯಕ್ಷಸ್ಥಾನ ಮೀಸಲಾತಿ ರೂಪದಲ್ಲಿ ಸಿಗಬೇಕೆಂದು ಬಯಸುವಿರಾ ಇಲ್ಲ ಚುನಾವಣೆಯ ಮೂಲಕವೇ […]

ಸೆರೆಹಕ್ಕಿ ಹಾಡುವುದು ಏಕೆಂದು ಬಲ್ಲೆ ಇಂಗ್ಲಿಷ್ ಮೂಲ : ಮಾಯಾ ಏಂಜೆಲೋ ಕನ್ನಡಕ್ಕೆ : ಎಂ.ಆರ್.ಕಮಲ‘ಐ ನೋ ವೈ ದ ಕೇಜ್ಡ್ ಬರ್ಡ್ ಸಿಂಗ್ಸ್’ ಎಂಬ ಮೂಲ ಶೀರ್ಷಿಕೆಯನ್ನು ‘ಸೆರೆಹಕ್ಕಿ ಹಾಡುವುದು ಏಕೆಂದು ಬಲ್ಲೆ’ ಎಂಬ ಸುಂದರ ಶೀರ್ಷಿಕೆಯೊಂದಿಗೆ ಅನುವಾದಿಸಿದ್ದಾರೆ.ಇದು ಜಗತ್ಪ್ರಸಿದ್ಧ ಕಪ್ಪು ಲೇಖಕಿ ಮಾಯಾ ಎಂಜೆಲೋ ಅವರ ಆರು ಆತ್ಮಕತೆಗಳಲ್ಲಿ ಮೊದಲನೆಯದು. ಆಕೆ ತನ್ನ ಮೂರನೆಯ ವಯಸ್ಸಿನಿಂದ ಹದಿನೇಳು ವರ್ಷ ವಯಸ್ಸಿನ ವಳಾಗುವ ತನಕ ತನ್ನ ಅಣ್ಣ ಮತ್ತು ತಂದೆಯ ತಾಯಿ ಅಜ್ಜಿಯ ಜತೆಗೆ ವಾಸಿಸಿದಳು.ತಾನು […]

ಫ್ಲೈಟ್ ತಪ್ಪಿಸಿದ ಮೆಹೆಂದಿ

ಪ್ರಬಂಧ    ಫ್ಲೈಟ್ ತಪ್ಪಿಸಿದ  ಮೆಹೆಂದಿ ಸುಮಾ ವೀಣಾ                                         ಫ್ಲೈಟ್  ರಾತ್ರಿ ಹತ್ತು ಗಂಟೆಗೆ ಅಂದುಕೊಂಡು ಬೆಳಗ್ಗೆ 6 ಗಂಟೆಗೆಎದ್ದು  ವಿದೇಶೀ ಲಲನೆಯರಿಗಿಂತ ನಾವೇನು ಕಡಿಮೆ ನಾವೂ ಹೇರ್ ಕಲರ್ ಮಾಡಿಕೊಳ್ಳೋಣ  ಎನ್ನುತ್ತಲೇ ನಾನು ನನ್ನ ತಮ್ಮನ ಹೆಂಡತಿ ಶಾಲಿನಿ ಇಬ್ಬರೂ ಮೆಹೆಂದಿ ಕಲೆಸಿ ತಲೆಗೆ ಮೆತ್ತಿಕೊಂಡೆವು.  ಫಿಲ್ಟರ್ ಕಾಫಿ ಹೀರುತ್ತಾ   ಹರಟುತ್ತಿರಬೇಕಾದರೆ ನಮ್ಮ ಮೊಬೈಲಿಗೆ ಮೆಸೇಜ್  ಮಹಾಶಯ ಬಂದು “ನನ್ನನ್ನು ಒಮ್ಮೆ ನೋಡುವಿರಾ! ನೋಡುವಿರಾ!” ಎಂದು ವಿನಂತಿಸಿಕೊಳ್ಳಲಾರಂಭಿಸಿದ. ಹಾಗೆ  ತಲೆಯನ್ನೊಮ್ಮೆ ನೇವರಿಸಿಕೊಂಡರೆ ಮೆಹೆಂದಿ ಕೈಗೆಲ್ಲಾ […]

Back To Top