ಮುಗಿಯದ ಪಯಣ

ಮುಗಿಯದ ಪಯಣ

ಕವಿತೆ ಮುಗಿಯದ ಪಯಣ ವೀಣಾರಮೇಶ್ ಸಾವೇ ಕಾಡದಿರು ನನ್ನಮುಗಿದಿಲ್ಲ ಇನ್ನೂ ಬದುಕುವ ಹಲವುಕಾರಣ ಮನಸ್ಸಿಗಿದೆ ಇನ್ನೂ ದ್ವಂದ್ವಅರ್ಥ ಆಗದಮುಗ್ದ ಮನಸ್ಸುಗಳ ಜೊತೆ ಯುದ್ಧ ,.ಆಸೆ ಆಮಿಷಗಳಕತ್ತು ಹಿಸುಕಿ ಕಟ್ಟಬೇಕಿದೆನನ್ನ ಸೌಧಹೇಗೆ ಮುಗಿಯುವುದುನನ್ನ ಪಯಣನನ್ನ ಜೇಬಿನ್ನೂ ಭಣ ಭಣ ತಡಕಾಡಿದರೂ ಸಿಗದು ಕಾಂಚಾಣ ಪಾಪ ಪ್ರಜ್ಞೆಗಳು ಸುತ್ತುವರಿದು,ಮೋಸ,ಭ್ರಷ್ಟಾಚಾರ ದಿಕ್ಕು ತಪ್ಪಿಸಿಭಾವನೆಗಳೆಲ್ಲ ಸತ್ತು ಹೆಣವಾಗಿದೆ ನೀನು ಮತ್ತೆ ಕಾಡದಿರುಸಾವೇ, ನಾನಿಲ್ಲಿ ಸುಟ್ಟುಕರಕಲಾಗಿದ್ದೀನಿನನ್ನ ದಾರಿಗೆ ಅಡ್ಡ ಬರಬೇಡ ಎಲ್ಲದಕ್ಕೂಹೇಳುವೆ ಸಕಾರಣ

ಪ್ರತಿಭಾ ಪಲಾಯನ ನಿಲ್ಲಲಿ

ಲೇಖನ ಪ್ರತಿಭಾ ಪಲಾಯನ ನಿಲ್ಲಲಿ ಭಾರತ ದೇಶವು ಇಡೀ ಜಗತ್ತಿನ ಭೂಪಟದಲ್ಲಿಯೇ ರಾರಾಜಮಾನವಾಗಿರಲು ಕಾರಣ ನಮ್ಮ ದೇಶದ  ಕಲೆ,ಸಾಹಿತ್ಯ,ಸಂಸ್ಕೃತಿ,ನಾಗರಿಕತೆ,ಸಹಬಾಳ್ವೆ, ಸಹಮತ, ಸಿರಿ ಸಂಪತ್ತು, ವಾಯುಗುಣ, ಅನೇಕಾನೇಕ ಸಂಪನ್ಮೂಲಗಳ ಆಗರವಾಗಿದ್ದರಿಂದಲೇ ಭಾರತ ಹೆಮ್ಮೆಯ ರಾಷ್ಟ್ರವಾಗಿ ಕಂಗೊಳಿಸುತ್ತಿದೆ.ಅದೆಲ್ಲಕ್ಕಿಂತ ಹೆಚ್ಚಾಗಿ ಭಾರತದಲ್ಲಿರುವ ಶ್ರೇಷ್ಠ ಪ್ರತಿಭೆಗಳಿಂದ ದೇಶವು ಅನಾದಿಕಾಲದಿಂದಲೂ ಜಗದ್ವಿಖ್ಯಾತಿ ಪಡೆಯುತ್ತಾ ಬಂದಿದೆ.ಆರ್ಯಭಟ, ಶ್ರೀನಿವಾಸ ರಾಮಾನುಜನ್, ಸಿ.ವಿ.ರಾಮನ್,ವಿಶ್ವೇಶ್ವರಯ್ಯ, ಅಬ್ದುಲ್ ಕಲಾಂ ರಂತಹ ಅನೇಕಾನೇಕ ಅಪ್ರತಿಮ ಪ್ರತಿಭೆಗಳು ಈ ದೇಶದ ಮಣ್ಣಿನ ಹೆಮ್ಮೆ.ಇವರಂತಹ ಲಕ್ಷಾಂತರ ಪ್ರತಿಭೆಗಳಿಗೆ ಭಾರತಮಾತೆ ದಿನೇ ದಿನೇ ಜನ್ಮಕೊಡುತ್ತಿದ್ದಾಳೆ.ಆದರೆ ಆ ಪ್ರತಿಭೆಗಳ […]

ವಾರದ ಕವಿತೆ

ಕವಿತೆ ನಿದ್ದೆ ಬರುತ್ತಿಲ್ಲ! ಕಾತ್ಯಾಯಿನಿ ಕುಂಜಿಬೆಟ್ಟು ನಿದ್ದೆ ಬರುತ್ತಿಲ್ಲ!ಆದರೆ…ನಿದ್ದೆ ಮಾಡದಿದ್ದರೆಒಳಗಿರುವ ಆತ್ಮಿಣಿ ಅಲಂಕರಿಸಿಕೊಂಡುಶತಪಥ ಸುತ್ತುತ್ತಾಳೆ ಪಂಜರದ ಗಿಳಿಯಂತೆಹೊರಹಾದಿ ಅರಸುತ್ತ! ಆಗ…ಪಕ್ಕದಲ್ಲಿರುವ ಪುರುಷಾಕಾರಲಂಘಿಸಿ ರಾವಣನಾಗುತ್ತದೆನನ್ನನ್ನು ಅಪಹರಿಸಿ ಅಶೋಕವನದಲ್ಲಿಡಲು!ಅಥವಾ…ಗುಟುರು ಹಾಕುತ್ತ ರಕ್ಕಸನಾಗುತ್ತದೆಹೊತ್ತೊಯ್ದು ಏಳುಕೋಟೆಯೊಳಗೆಬಂಧಿಸಿಡಲು! ನಿದ್ದೆಯೇ ಬಾರದಿದ್ದರೆನಾನು ಸೀತೆಯಾಗಬೇಕಾಗುತ್ತದೆ!ಆಗ…ಕನಸುಗಳನ್ನು ಹತ್ತುತಲೆಗಳಇಪ್ಪತ್ತು ಕಣ್ಣುಗಳುನೋಟದಲ್ಲೇ ಬೂದಿ ಮಾಡುತ್ತವೆಹತ್ತು ಮೂಗುಗಳು ಇಪ್ಪತ್ತು ಕಿವಿಗಳುಕಿಟಕಿ ಕಿಂಡಿಗಳಾಗಿಹೋದೆಯ ಪಿಶಾಚಿ ಎಂದರೆಬಂದೆ ನಾ ಗವಾಕ್ಷಿಯಲ್ಲಿ! ಎಂದರಚುತ್ತಹತ್ತು ದಳಬಾಯಿಗಳುಕೋಟೆಯ ಮಹಾದ್ವಾರಗಳಾಗಿಅಶೋಕವನದ ಮರಗಳನ್ನುಹೊರದೂಡುತ್ತವೆಅವು ಎಲೆಗಳ ಕಣ್ಣುಗಳನ್ನುಗಾಳಿಗೆ ಮುಚ್ಚಿ ತೆರೆಯುತ್ತಕಣ್ಸನ್ನೆಯಲ್ಲೇಕೋಟೆಯ ಹೊರಗಿಂದಲೇಬಾ ಬಾ ಎಂದು ಬಳಿಕರೆಯುತ್ತವೆ ಶೋಕಿಸಲು ಅಶೋಕವನದಆ ಮರ ಇಲ್ಲವಾದರೆಸೀತೆ ಸೀತೆಯೇ ಅಲ್ಲ!ರಾಮರಾಮರಾಮರಾ… […]

ಸ್ಮಿತಾಭಟ್ ಕಾವ್ಯಗುಚ್ಛ

ಸ್ಮಿತಾಭಟ್ ಕಾವ್ಯಗುಚ್ಛ ನಿರಂತರ ಈಗೀಗ ಒಲವಾಗುವದಿಲ್ಲಅವನ ಮೇಲೆಮುನಿಸು ಕೂಡಾ,, ಹೇಗಿದ್ದೀ ಎಂದು ಕೇಳದಿರೂಕೇಳದೇ ಹೋದರೂಅಂತಹ ವ್ಯತ್ಯಾಸವೇನಿಲ್ಲ, ಸಿಡಿಮಿಡಿ ಬಹಳ-ದಿನ ಉಳಿಯುವುದಿಲ್ಲಪ್ರೀತಿ ಆಗಾಗ-ಹುಟ್ಟಿದ್ದು ಗೊತ್ತೇ ಆಗುವದಿಲ್ಲ. ಇಣುಕಿಣುಕಿ ನೋಡುವ ರಸಿಕತೆಯಿಲ್ಲತಿರುಗಿ ನೋಡುವ ಆತುರವೂ ಇಲ್ಲಉಪಸ್ಥಿತಿ ಅನುಪಸ್ಥಿತಿಯಲ್ಲಿಬದಲಾವಣೆ ಇಲ್ಲ. ಎತ್ತಿಟ್ಟ ಸಾಲೊಂದುಓದದೇ ಹೋಗುತ್ತಾನವ,ಬರೆಯದೇ ಇಟ್ಟ ಹಾಡಿಗೆರಾಗ ಹುಡುಕಿ ಗುನುಗಿಕೊಳ್ಳುವಾಗಕದ್ದು ಕೇಳುವ ನವಿರುಅರಿತೂ ಅರಿಯದೇ ಆತುಕೊಳ್ಳುವ ಬೆರಗು ನೀ ನನ್ನೊಳಗಿರುವದಕ್ಕೆನಾ ನಿನ್ನೊಳಗಿರುವದಕ್ಕೆಸಾಕ್ಷಿ ಆಗಾಗ ಸಿಗುತ್ತದೆಮತ್ತದು ಅಧಿಕಾರವೂಮಾತೊಗೆದು ಹೋಗುವಾಗ ಸಣ್ಣ ಮೌನಮರಳಿ ಬರುವಾಗ ಎಲ್ಲ ದಮನ ಸವೆದ ದಾರಿಯಲೂ ಗರಿಕೆತಲೆಯೆತ್ತುತ್ತಲೇ ಇರುತ್ತದೆ.ಸಂಪೂರ್ಣ ಸಮ್ಮೋಹನಗೊಂಡ […]

ತೇಜಾವತಿ ಕಾವ್ಯಗುಚ್ಚ

ತೇಜಾವತಿ ಕಾವ್ಯಗುಚ್ಚ ಕಾರಣ ಕೇಳದಿರಿ ನೀವು.. ! ಸಪ್ಪೆ ಮೊಗದ ಹಿಂದಿನ ಕಾರಣ ಕೆಳದಿರಿ ನೀವುದುಃಖದ ಕಟ್ಟೆಯೊಡೆದುನೋವಿನ ಕೋಡಿಹರಿದುಕಂಬನಿಯ ಪ್ರವಾಹ ಹರಿದೀತು….! ಕ್ಷೇಮ ಕುಶಲೋಪರಿಯ ವಿಚಾರಿಸದಿರಿ ನೀವುಮುಳ್ಳುಹಾಸಿನ ಮೇಲೆ ನಡೆದುಬೆಂಕಿಯ ಕೆನ್ನಾಲಿಗೆಯಲಿ ಸಿಲುಕಿಅರೆಬೆಂದಿರುವ ಪಾದಗಳಲಿ ನೆತ್ತರು ತುಳುಕಾಡೀತು…! ಭವಿಷ್ಯದ ಗುರಿಯೇನೆಂದು ಪ್ರಶ್ನಿಸದಿರಿ ನೀವುತಮದ ಕೂಪದಲಿ ಮಿಂದುಕಣ್ಣೆದುರು ಹರಿದಾಡಿದ ನೆರಳು ಕಂಡುಮನಸು ಮತಿಭ್ರಮಣೆಗೆ ಒಳಗಾದೀತು.. ! ಕಲ್ಪನೆಯಾಚೆಗಿನ ವಾಸ್ತವವ ನೆನಪಿಸದಿರಿ ನೀವುಭರವಸೆಯ ಬೆಟ್ಟ ಕುಸಿದುನೆಮ್ಮದಿಯ ಕಣಿವೆ ಸವೆದುಕಂಡ ಕನಸುಗಳು ಕೊಚ್ಚಿ ಹೋದಾವು…! ಎಷ್ಟು ದಿನ ಅಂತ ಉಪ್ಪಿನಕಾಯಿ ಆಗಿರಲಿ […]

ನಿನ್ನ ನಿರೀಕ್ಷೆಯಲ್ಲೇ..

ಕವಿತೆ ನಿನ್ನ ನಿರೀಕ್ಷೆಯಲ್ಲೇ.. ನೀ.ಶ್ರೀಶೈಲ ಹುಲ್ಲೂರು ಜೊತೆಯಿದ್ದವರೆಲ್ಲಹೋದರು ಮುಂದೆ ಮುಂದೆನಾನುಳಿದೆ ನಿನ್ನ ನಿರೀಕ್ಷೆಯಲ್ಲೇ…ನೀನು ಬಂದೇ ಬರುವೆ ಎಂಬಭಾಷೆ ಇತ್ತಲ್ಲ ಹೇಗೂ.. ನಿರ್ಗಮಿಸಿದ ದಿನಕರಇಣುಕಿದ ಚಂದ್ರ ನೀಲಾಗಸದಿನಕ್ಷತ್ರಗಳೆಲ್ಲ ಸಾಕ್ಷಿಯಾದವುಮಿನುಗಿತು ಬೆಳ್ಳಿಚುಕ್ಕಿಯೂಹುಂಜಗಳೆಲ್ಲ ಕೂಗು ಹೊಡೆದವುಕೋಗಿಲೆಯ ಕುಹೂ ಕುಹೂಆಗಲೂ ನಾ ನಿನ್ನ ನಿರೀಕ್ಷೆಯಲ್ಲೇ.. ದೇವ , ದೇವಲೋಕದಯೆ ತೋರಲಿಲ್ಲನಿಜಕ್ಕೂ ನೀ ಬರಲೇ ಇಲ್ಲಇಳೆಯಲಿ ಮೈದಳೆಯಿತುಹೊಸತು ಹೊಂಬೆಳಕುನಿನ್ನ ನೆನಪಲಿ ಮೊಳೆತುಕುಡಿಯೊಡೆದವು ಕಂಬನಿ ತುಂಬಿದೆದೆಯ ಶಿಖರಾಗ್ರದ ಮೇಲಿಂದಿಳಿದ ಕಣ್ಣಹನಿ ಕಣಿವೆಯ ದಾಟಿನೆಲವನಪ್ಪಿತು ಥಟ್ಟನೆಎದೆ ಮೇಲೊರಗಿದಸೆರಗಿಗೂ ತೇವ ಭಾಗ್ಯಆಗಲೂ ನೀನು ಬರಲಿಲ್ಲ ಆಗಸದಿ ಹೊಳೆಯತೊಡಗಿತು ಮಿಂಚು […]

ಅಂಕಣ ಬರಹ ಸರಳತೆಯ ಘನತೆ ನಾನು ಭೇಟಿಮಾಡಿದ ಅಪರೂಪದ ವ್ಯಕ್ತಿಗಳಲ್ಲಿ ಬನ್ನೂರು ನಿವಾಸಿ ಅದೀಬ್ ಅಖ್ತರ್ ಅವರೂ ಒಬ್ಬರು. ಅದೀಬರ ಲಘು ಬರೆಹಗಳನ್ನು ಪತ್ರಿಕೆಗಳಲ್ಲಿ ಓದಿದ್ದೆ. ಒಂದು ಲೇಖನದಲ್ಲಿ ಅವರು ತಾನೊಬ್ಬ ಉರ್ದು ಮಾಧ್ಯಮದ ವಿದ್ಯಾರ್ಥಿಯೆಂದೂ, ನಡುಪ್ರಾಯದಲ್ಲಿ ಕನ್ನಡ ಕಲಿತು ಬರೆಯಲು ಆರಂಭಿಸಿದವನೆಂದೂ ಹೇಳಿಕೊಂಡಿದ್ದರು. ಇದು ಕುತೂಹಲ ಹುಟ್ಟಿಸಿತು. ಅವರೂ ನನ್ನನ್ನು ನೋಡಬಯಸಿ ಪತ್ರ ಬರೆದರು. ಅಂಗಡಿ ಬಿಟ್ಟು ಹೋಗಲು ಸಾಧ್ಯವಾಗದೆ ಇರುವುದರಿಂದ ನಾನೇ ಬರಬೇಕೆಂದು ತಿಳಿಸಿದ್ದರು. ಬನ್ನೂರಿಗೆ ಹೋದೆ. ಅದೀಬರ ವಿಳಾಸ ಬಹಳ ಸುಲಭ- ಬಸ್ಸುನಿಲ್ದಾಣ […]

ಕವಿತೆಯೆಂದರೆ…

ಕವಿತೆ ಕವಿತೆಯೆಂದರೆ… ವಿದ್ಯಾಶ್ರೀ ಎಸ್ ಅಡೂರ್ ಕವಿತೆಯೆಂದರೆ ಮನದೊಳಗೊಂದುಚುಚ್ಚುವ ನೋವು….ಕವಿತೆಯೆಂದರೆ ಉಕ್ಕಿಹರಿವಮನಸಿನ ನಲಿವು…. ಕವಿತೆಯೆಂದರೆ ಮೌನಮನಸಿನಸ್ವಚ್ಚಂದ ಆಕಾಶಕವಿತೆಯೆಂದರೆ ಗಿಜಿಗುಡುವಏಕತಾನತೆಯ ಆಕ್ರೋಶ ಕವಿತೆಯೆಂದರೆ ಸುಮ್ಮನೆನಿಡುಸುಯ್ದ ನಿಟ್ಟುಸಿರುಕವಿತೆಯೆಂದರೆ ನೀರು-ಗೊಬ್ಬರಹಾಕಿ ಬೆಳೆಸಿದ ಹಸಿರು ಕವಿತೆಯೆಂದರೆ ರಂಗುರಂಗಿನಬಣ್ಣ ಬಣ್ಣದ ಕಾಮನಬಿಲ್ಲುಕವಿತೆಯೆಂದರೆ ಗಾಢಾಂಧಕಾರದಿಬಿಡುಗಡೆಯ ಸೊಲ್ಲು ಕವಿತೆಯೆಂದರೆ ಮೌನಮನಸ್ಸಿನ ಟಿಪ್ಪಣಿಕವಿತೆಯೆಂದರೆ ಕೂಗಿ ಕರೆಯುವಹಾರಿ ಸಾರುವ ಪುರವಣಿ ಕವಿತೆಯೆಂದರೆ ಜಗಕ್ಕೆ ಬೆನ್ನು ಮಾಡಿಉಪ್ಪಿ ಅಪ್ಪಿದ ಮೌನಕವಿತೆಯೆಂದರೆ ಅಂಗೈಯಲ್ಲಿಮೊಗೆಮೊಗೆದು ಅನುಭವಿಸುವ ಜೀವನ ಕವಿತೆಯೆಂದರೆ ಹೆಪ್ಪುಗಟ್ಟಿದಭಾವಗಳ ಕಾರ್ಮುಗಿಲುಕವಿತೆಯೆಂದರೆ ಧುಮ್ಮಿಕ್ಕಿ ಸುರಿಯುವಮನಸಿನ ದಿಗಿಲು ಕವಿತೆಯೆಂದರೆ ಬಿದ್ದಾಗಆಸರೆ ಕೊಡುವ ನೆಲಕವಿತೆಯೆಂದರೆ ಸದಾ ಹಸಿರುತೆನೆಗಳಿಂದ […]

ಕಾಡ ಸೆರಗಿನ ಸೂಡಿ

ಪುಸ್ತಕ ಪರಿಚಯ ಕಾಡ ಸೆರಗಿನ ಸೂಡಿ ಕಾಡ ಸೆರಗಿನ ಸೂಡಿಕಾದಂಬರಿಮಂಜುನಾಥ್ ಚಾಂದ್ಅಕ್ಷರ ಮಂಡಲ ಪ್ರಕಾಶನ ಮಂಜುನಾಥ್ ಚಾಂದ್ ಅವರು ಪತ್ರಕರ್ತರು. ನಾಡಿನ ಹಲವು ಪತ್ರಿಕೆಗಳ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿರುವ ಚಾಂದ್ ‘ ಓ ಮನಸೇ’ ಪಾಕ್ಷಿಕದಲ್ಲಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮೂಲತಃ ಕುಂದಾಪುರ ಸಮೀಪದ ಮರವಂತೆಯ ಮಗ್ಗುಲಲ್ಲಿ ಇರುವ ತ್ರಾಸಿ ಎಂಬ ಪುಟ್ಟ ಹಳ್ಳಿಯವರು. ‘ಅಮ್ಮ ಕೊಟ್ಟ ಜಾಜಿ ದಂಡೆ, ಕದ ತೆರೆದ ಆಕಾಶ’ ಅವರ ಪ್ರಮುಖ ಕೃತಿಗಳು. ‘ಕಾಡ ಸೆರಗಿನ ಸೂಡಿ’ ಅವರ ಪ್ರಥಮ […]

‘ಕಾಗೆ ಮುಟ್ಟಿದ ನೀರು’

ಪುಸ್ತಕ ಪರಿಚಯ ನಾನುಕಂಡಂತೆ– ‘ಕಾಗೆಮುಟ್ಟಿದನೀರು’         ಆಫೀಸಿನ ಕೆಲಸ ಮುಗಿಸಿ, ಬರುತ್ತಾ ದಾರಿಯ ನಡುವೆ ಸಿಗುವ ‘ನವಕರ್ನಾಟಕ’ದಲ್ಲಿ ಪುಸ್ತಕ ಖರೀದಿಸಿದವಳೇ ಮನೆಗೆ ಬಂದೆ. ಮನೆವಾರ್ತೆ, ಮಕ್ಕಳ ಉಸಾಬರಿ, ಊಟ ಮತ್ತೆಲ್ಲಾ ಮುಗಿಸಿ ಪುಸ್ತಕ ಕೈಯಲ್ಲಿ ಹಿಡಿದೆ.        ಅದೇನು ಪುಸ್ತಕ ಓದಿದೆನಾ ಅಥವಾ ‘ಬೆಟ್ಟದ ಹೂ’ ಸಿನೆಮಾ ಪುನಃ ಕಂಡೆನಾ ಗೊತ್ತಾಗದಂತಹ ಭಾವ! ಪುಸ್ತಕದ ಆರಂಭ ಇರುವುದೇ ಹಾಗೆ. ಬಹಳ ಆಪ್ತವಾಗುವಂತೆ. ಕಾಡು, ಮನೆ, ಇಲಿ-ಹಾವು, ಅಪ್ಪ-ಅಮ್ಮ, ಶಾಲೆ, ಗುರುಗಳು, […]

Back To Top