ಸೃಜನಶೀಲರಾಗಿ ಯಶಸ್ವಿ ವ್ಯಕ್ತಿಗಳಾಗಿ ಸಾಮಾನ್ಯವಾಗಿ ನಾವು ಮಾಮೂಲಿ ಕೆಲಸಗಳನ್ನು ಮಾಮೂಲಿ ರೀತಿಯಲ್ಲಿ ಮಾಡಿ ಅತ್ಯದ್ಭುತ ಫಲಿತಾಂಶ ಬಯಸುತ್ತೇವೆ. ನಾವು ಮಾಡುತ್ತಿರುವ ಕೆಲಸವನ್ನು ಎಂದಿನಂತೆ ಮಾಡುವ ರೀತಿಯಲ್ಲಿಯೇ ಮುಂದುವರೆಸಿದರೆ ಹಿಂದೆ ಬಂದ ಫಲಿತಾಂಶವೇ ಬರುವುದು ಸಹಜ. ಕೆಲವರು ನಾವು ಮಾಡುತ್ತಿರುವ ಕೆಲಸವನ್ನೇ ಮಾಡಿ ನೋಡ ನೋಡುತ್ತಿದ್ದಂತೆ ಗೆಲುವು  ಪಡೆಯುತ್ತಾರೆ. ಎಲ್ಲರ ನೆದರಿನಲ್ಲಿಯೂ ಮಿಂಚುತ್ತಾರೆ.ತಾವೂ ಹಿಗ್ಗಿ ಹಲಸಿನಕಾಯಿಯಾಗುತ್ತಾರೆ.  ಅದನ್ನು ನಾವು ಬೆರಗುಗಣ್ಣುಗಳಿಂದ ನೋಡುತ್ತಲೇ ಇದ್ದು ಬಿಡುತ್ತೇವೆ. ಅವರು ಅದೃಷ್ಟವಂತರು ಎಂಬ ಹಣೆಪಟ್ಟಿ ಕಟ್ಟುತ್ತೇವೆ. “ಮನುಷ್ಯನು ತನ್ನ ಕುರಿತು ತಾನೇನು ಅಂದುಕೊಳ್ಳುತ್ತಾನೋ […]

ಮಕ್ಕಳು ಮತ್ತು ನಿಸರ್ಗ ನನ್ನನ್ನು ಮತ್ತೆ ಮತ್ತೆ ಹಿಡಿದಿಡುತ್ತವೆ ತಮ್ಮಣ್ಣ ಬೀಗಾರ ಮಕ್ಕಳ ಸಾಹಿತಿ ತಮ್ಮಣ್ಣ ಅವರ ಕುರಿತು… ತಮ್ಮಣ್ಣ ಬೀಗಾರ ಅವರು ಯಲ್ಲಾಪುರದ ಬೀಗಾರದವರು.‌1959 ನವ್ಹೆಂಬರ್ 22 ರಂದು ಜನಿಸಿದರು. ಸ್ನಾತಕೋತ್ತರ ಪದವೀಧರ , ಸಿದ್ದಾಪುರದ ಬಿದ್ರಕಾನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕಳೆದ 37 ವರ್ಷಗಳಿಂದ ಮಕ್ಕಳ ಜೊತೆ ಮಕ್ಕಳಾಗಿದ್ದರು. ಮಕ್ಕಳ ಸಾಹಿತ್ಯದ ಬಗ್ಗೆ ಬರೆಯುವವರು ವಿರಾಳತೀ ವಿರಳ. ಅದರೆ ತಮ್ಮಣ್ಣ ಮಕ್ಕಳ ಸಾಹಿತ್ಯವನ್ನು ತಮ್ಮ ಅಭಿವ್ಯಕ್ತಿಯಾಗಿ ಆಯ್ಕೆ […]

ಕಾವ್ಯಯಾನ

ಸ್ವಾತಿ ಹನಿ ಅನಿತಾ ಕೃಷ್ಣಮೂರ್ತಿ ಕಂಡಿಲ್ಲ ನೇರವಾಗಿ ನಾನೆಂದು ನಿನ್ನಕಂಡಿದ್ದು ಆ ಬಾನಿನ ಮೇಘಗಳಲಿ.ಈ ತಂಪೆರೆವ ತಂಗಾಳಿಯಲಿನಗುತಿರುವ ಗುಲಾಬಿಯ ಪಕಳೆಯಲಿ. ಕಂಡಿಲ್ಲ ನೇರವಾಗಿ ನಾನೆಂದು ನಿನ್ಜಕಂಡಿದ್ದು ಇಬ್ಬನಿಯ ಪಾರದರ್ಶಕತೆಯ ನುಣುಪಿನಲಿ,ಆ ಆಗಸದ ಬಾನಾಡಿಯ ಹಾರಾಟದಲಿಕಪ್ಪೆಚಿಪ್ಪಲಿ ಅಡಗಿ ಸ್ವಾತಿಹನಿಯ ಮುತ್ತಿನಲಿ. ಕಂಡಿಲ್ಲ ನೇರವಾಗಿ ನಾನೆಂದು ನಿನ್ನಕಂಡಿದ್ದು ನಾ ಬರೆವ ಪದಗಳ ಭಾವದಲಿ,ಮಿಂಚಾಗಿ ಮಿಂಚಿ, ಸಂಚನು ತರುವ ಆಲೋಚನೆಯಲಿ,ಎದೆಯ ಏರಿಳಿತದ ಬಡಿತದಲಿ. ************************

ಪುಸ್ತಕ ಸಂಗಾತಿ

ಚರಿತ್ರೆಯ ಪುಟಗಳ ಕಟ್ಟ ಹೊತ್ತ ಪರಿಸರದ ಕಥಾ ಮಾಲೆ. ಮಧ್ಯಘಟ್ಟ – ಕಾದಂಬರಿಶಿವಾನಂದ ಕಳವೆಸಾಹಿತ್ಯ ಪ್ರಕಾಶನ, ಹುಬ್ಬಳ್ಳಿ. ಪರಿಸರದ ಬಗೆಗಿನ ಕಾಳಜಿ ಮತ್ತು ಜ್ಞಾನ, ಅಪಾರ ತಿರುಗಾಟ, ಗ್ರಾಮೀಣರ ಒಡನಾಟ ಮತ್ತು ಅಧ್ಯಯನಪೂರ್ಣ ಬರಹಗಳ ಮೂಲಕ ಹೆಸರಾದವರು ಪತ್ರಕರ್ತ ಶಿವಾನಂದ ಕಳವೆ. ಶಿರಸಿಯ ಬಳಿಯ ಕಳವೆಯಲ್ಲಿ ಅವರ ನೇತೃತ್ವದ ಮಾಧ್ಯಮ ಸಂಸ್ಕೃತಿ ಅಭಿವೃದ್ಧಿ ಕೇಂದ್ರ, ಕಾನ್ಮನೆ – ಪರಿಸರಾಸಕ್ತರ, ಪತ್ರಿಕೋದ್ಯಮ ವಿದ್ಯಾರ್ಥಿಗಳ ಆಸಕ್ತಿಯ ಕೇಂದ್ರವಾಗಿದೆ. ಅವರು ಈ ಹೊತ್ತಿಗೆಯಲ್ಲಿ ಮತ್ತಿಘಟ್ಟ ಎಂಬ ಕಾನನದ ನಡುವಿನ ಪ್ರದೇಶದ ಕಥನವನ್ನು […]

ನೆಲೆ ಸಂಭ್ರಮ – 2020

ನೆಲೆ ಸಂಭ್ರಮ – 2020 ಫೇಸ್ಬುಕ್ ನಲ್ಲಿ ಕಾವ್ಯ ಓದುವುದರ ಮೂಲಕ ಕತೆ ಕೇಳುತ್ತಲೇ ಚಿಂತನೆಗಳನ್ನು ಮೆಲುಕು ಹಾಕುವುದರ ಜೊತೆಗೆ ನೆಲೆ ಸಂಭ್ರಮವನ್ನು ಆಚರಿಸೋಣ ಬನ್ನಿ…… ಎನ್ನುತ್ತಲೇ ಆರಂಭವಾದ ಸಿಂದಗಿಯ ನೆಲೆ ಪ್ರಕಾಶನ ಸಂಸ್ಥೆಗೆ ಇದೀಗ ನಾಲ್ಕು ದಶಕಗಳನ್ನು ಪೂರೈಸುತ್ತಿದೆ. ಇದರ ಹುಟ್ಟಿಗೆ ಪ್ರಮುಖ ಕಾರಣರು ಇದರ ಜೋಡಿ ಸ್ಥoಭದಂತಿರುವ ಡಾ. ಎಂ ಎಂ ಪಡಶೆಟ್ಟಿ ಹಾಗೂ ಡಾ. ಚನ್ನಪ್ಪ ಕಟ್ಟಿಯವರು. ಹವ್ಯಾಸಕ್ಕಾಗಿ ಹುಟ್ಟಿಕೊಂಡ ಸಂಸ್ಥೆ ಸ್ಥಳೀಯ ಲೇಖಕರ ಹಾಗೂ ಮಹಿಳೆಯರ ಕೃತಿಗಳ ಪ್ರಕಟಣೆಗೆ ಆದ್ಯತೆ ನೀಡುವುದರ […]

ಅನುವಾದ ಸಂಗಾತಿ

ಚಿತ್ರಗಳು ಕನ್ನಡ ಮೂಲ: – ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಇಂಗ್ಲೀಷಿಗೆ:ಪಂ. ರವಿಕಿರಣ್ ಮಣಿಪಾಲ ಚಿತ್ರಗಳು ನನ್ನ  ಮನದಲ್ಲೆಷ್ಟೋ ಚಿತ್ರಗಳಿವೆ ಬಿಡಿಸ ಹೋದರೆ ಅವು ಹಾಳೆಗಳಲ್ಲಿ ನಿರ್ಜೀವ ಹೆಣಗಳಂತೆ ಬೋರಲು ಬೀಳುತ್ತವೆ ಇನ್ನು ಕೆಲವು ಬೆನ್ನಡಿಯಾಗಿ ಬಿದ್ದ ಜಿರಳೆಗಳಂತೆ ಅಸಹಾಯಕವಾಗಿಕೈಕಾಲಾಡಿಸುತ್ತ ಕಪ್ಪು ಕಂಗಳಲ್ಲಿ ಚಂದ್ರನನ್ನೇ ನೋಡುತ್ತಿರುತ್ತವೆ. ನನ್ನ ಮನದ ಚಿತ್ರಗಳು ತಮ್ಮದಲ್ಲದ ಇನ್ನಾರದ್ದೋ ಬದುಕನ್ನು ಬದುಕುತ್ತ  ಕೆಂಪು ಕೆಂಪಾದ ಹಸಿಗಾಯದ ಮೇಲೆ ಯಾರ್ಯಾರೋ ಗೀರಿದಂತೆ ನೆತ್ತರಲ್ಲಿತೊಯ್ದಿರುತ್ತವೆ. ನನ್ನ ಮನದ ಚಿತ್ರಗಳು ಬದುಕಿನತಿಪ್ಪೆಯಲ್ಲಿ ಅವನು ಬಿಸಾಕಿದ ಎಂಜಲು ಅನ್ನಕ್ಕಾಗಿ ಕಚ್ಚಾಡುತ್ತಿರುತ್ತವೆ ಹಸಿವಲ್ಲಿ […]

ಕಾವ್ಯಯಾನ

ಗಝಲ್ ಸುಜಾತ ಲಕ್ಷ್ಮೀಪುರ ಮಾತು ಮಾತಿಗೆ ಕಿಡಿ ತಾಗಿಸಿ ಸುಡುವುದು ಸಹಜ ಧರ್ಮವಲ್ಲಸುಮ್ಮನೇ ಮೌನದ ಅಗಾಧ ಕೂಪಕೆ ದೂಡುವುದು ಸರಿಯಲ್ಲ. ಮೌನವೂ ಮಣಭಾರವಾಗಿ ಕಾಡುವುದಿಲ್ಲವೆ ಏಕಾಂತದಿಕಣ್ಣಿನಲ್ಲೇ ಒಲವನು ಸೂಸಬಹುದು ಕೊಲ್ಲುವುದು ತರವಲ್ಲ ತಪ್ಪು ಮಾಡಿ ಕ್ಷಮೆ ಕೇಳುವುದೇ ದೊಡ್ಡ ವಿಚಾರವಲ್ಲಾಪ್ರೀತಿಗೆ ಶರಣಾಗಲು ಅಹಂ‌ಕಾರ ಸರಿಸುವುದು ಸೋಲಲ್ಲ ಬೆಳಕು ಮೂಡಲು ತಮವು ಅಳಿದೂ ಜಗವೆಲ್ಲಾ ಬೆಳಗುತ್ತದೆಮೈಮನವೆಲ್ಲ ಆವರಿಸಲು ಒಲವಲ್ಲದೆ ಬೇರೆ ಪಥವಿಲ್ಲ ಶಿವೆ,ಕಾಡುವ ಬಳ್ಳಿ ಬಿಡಿಸಿಕೊಳ್ಳುವುದು ಸಾಧ್ಯವೆ ನಿನ್ನಂತೆಎರಡಳಿದು ಒಂದಾಗಲು ಸವಿ ಪ್ರೇಮವಲ್ಲದೆ ಜಗವಿಲ್ಲ *******************************.

ಕಾವ್ಯಯಾನ

ನಿನ್ನ ಸೇರೋ ತವಕ ಪ್ಯಾರಿಸುತ ನಿನ್ನೂರು ದಾರಿಯು ಸವಿದಷ್ಟುದೂರಹವೆ ತುಂಬಿದ ಗಾಲಿಗಳು ಉರುಳಿದಷ್ಟುಮತ್ತಷ್ಟು ದೂರಉರುಳಿ ಹೊರಟ ಗಾಲಿಯಲ್ಲಿ ಹವೆಯಿತ್ತುನಿನ್ನ ನೆನೆದು ಬರುತ್ತಿರುವ ನನ್ನಲ್ಲಿ ಚಲವಿತ್ತುಪ್ರಯಾಸಗೊಂಡೆ,ಅನಾಯಾಸಗೊಂಡೆಕತ್ತಲು ಆವರಿಸಿದ ಕಪ್ಪು ಹೊಲದ ನಟ್ಟ ನಡುವೆಬೆಳೆದಿದ್ದ ಒಂಟಿ ಬೇವಿನಮರದಬುಡದಲ್ಲಿ ಮಗ್ಗಲು ಭುವಿಗೆ ಹೊಂದಿಸಿಮಲಗಿಕೊಂಡುನಿನ್ನ ಸೇರೋ ಕನಸು ಕಾಣುತ್ತಿದ್ದೆಕನಸನ್ನು ಭಗ್ನ ಮಾಡಿ,ಮತ್ತೆನಿನ್ನೂರು ದಾರಿ ಹಿಡಿಯಲುಪ್ರೇರೇಪಿಸಿದ್ದು ಅದೇ ಸೊಳ್ಳೆಅದು ನೀನೋ ಅಥವಾ ನಿಜವಾಗಿಯೂ ಸೊಳ್ಳೆಯೂತರ್ಕಕ್ಕೆ ಇಳಿಯುದಿಲ್ಲಅದು ಕಚ್ಚಿ ಹೋದ ಜಾಗದಲ್ಲಿ ನೀ ಕಚ್ಚಿದ ಹೋಲಿಕೆಯಿದೆದಾರಿಯುದ್ದಕ್ಕೂ ಮೈಲುಗಲ್ಲಿನ ಮೇಲೂ ನಿನ್ನದೇಸ್ವಾಗತಗೀತೆ,ಅದೆಷ್ಟು ಚಂದ ಅನ್ನುತ್ತಿಯಾ…?ನೋಡುತ್ತಾ,ಕೇಳುತ್ತಾ ಅಲ್ಲೇ ನಿಂತುಬಿಡಬೇಕುಇಲ್ಲ,ನಿನ್ನ […]

ಅನುವಾದ ಸಂಗಾತಿ

ಧಗೆ ಕನ್ನಡ ಮೂಲ; ಸುನೀತಾ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್ ಅದು ನಾಲ್ಕನೆಯ ಪಂಚಾಯತಿ ಬಾವಿ ಇನ್ನೂನೀರಿತ್ತೆನ್ನುವ ಕುರುಹೆಲ್ಲಿ ?ಹುಡುಕುವ ಕಣ್ಣೆವೆಗಳಿಗೆ ಯುದ್ಧಮುಂದೆ ಸಾಗಿ ಪ್ರಯೋಜನವಾದರೂ ಏನುಬಿಸಿಲ ಧಗೆಗೆ ರಿವರ್ಸ್‌ಗೇರ್ ಹಾಕಿದಭಯದ ಬೆವರ ಹನಿಕಣ್ಣುಗಳಿಗೆ ಬೀಗ ಜಡಿದುಕಂಡಿದ್ದ ಜಲರಾಶಿ ಮತ್ತೆ ಕಂಡೆಕಣ್ಣ ಹನಿ, ಬೆವರ ಹನಿಜೊತೆಗೂಡಿ ಬಿಟ್ಟ ಕಣ್ಣುಆಲಿಕಲ್ಲು ಅರಸಿಎಡವಿದ ಕಲ್ಲಿಗೆ ರಕ್ತದೋಕುಳಿಆಕಾಶದ ಹೃದಯ ಕಲ್ಲಾಗಿದೆಪಾದಪಗಳೂ ಚಲನ ಹೀನನದಿಯ ಬೆಸುಗೆಯಲ್ಲೂ ವಿರಸ‌ನರರ ವಿಲಾಸಿ ಜೀವನಈಗ ಸಣಕಲಾದ ಇಳೆಒಗಟು ಮಾತ್ರಬಾವಿಯ ಎಡಭಾಗದ ಮೂರನೆಯಒಣಗಿದ ಗದ್ದೆ ನಕ್ಕು ಹೇಳಿದೆ That is […]

ನನ್ನ ಇಷ್ಟದ ಕವಿತೆ

ಪೂಜಾ ನಾಯಕ್ ಬೆಳಗು ಜಾವ ರಚನೆ :ದ. ರಾ. ಬೇಂದ್ರೆ ಏಳು ಚಿನ್ನ, ಬೆಳಗಾಯ್ತು ಅಣ್ಣ, ಮೂಡಲವು ತೆರೆಯೆ ಕಣ್ಣ, ನಕ್ಷತ್ರ ಜಾರಿ, ತಮವೆಲ್ಲ ಸೋರಿ, ಮಿಗಿಲಹುದು ಬಾನ ಬಣ್ಣ ಜೇನ್ನೊಣದ ಹೆದೆಗೆ, ಹೂಬಾಣ ಹೂಡಿ, ಜುಮ್ಮೆಂದು ಬಿಟ್ಟ ಮಾರ ಗುಡಿಗೋಪುರಕ್ಕು, ಬಲೆ ಬೀಸಿ ಬಂದ, ಅಗೋ ಬೆಳಕು-ಬೇಟೆಗಾರ. ನಿಶೆಯಿಳಿದ ಉಷೆಯ, ಎಳನಗೆಯ ಬಗೆಗೆ, ಸೋತಿರಲು ಜಗವು ಸವಿಗೆ ಕಣ್ಣಿದಿರು ಒಂದು, ಕಟ್ಟಿತ್ತು ಕನಸು; ಕೂಗೊಂದು ಬಂತು ಕಿವಿಗೆ. ಮಕ್ಕಳಿರ ಕೇಳಿ, ರಸ ಕುಡಿಯಲೇಳಿ, ಹುಸಿನಿದ್ದೆಗಿದ್ದೆ ಸಾಕು […]

Back To Top