ಕಥಾಯಾನ

ಕಥಾಯಾನ

‘ಬಾಳ ಬಣ್ಣ’  ವಸುಂಧರಾ ಕದಲೂರು       ಕುಸುಮಳಿಗೆ ವಿವಾಹದ ಏಳು ವರ್ಷದ ಅನಂತರ ಹುಟ್ಟಿದವನೇ ‘ಅಮರಕಿಶೋರ’. ಕುಸುಮಾಳದ್ದು ಮೂವತ್ತರ ಹರಯದಲ್ಲಾದ ವಿವಾಹ.    ತಡವಾದ ವಿವಾಹ ಜೊತೆಗೆ ತಡವಾಗಿಯೇ ಮಗು ಹುಟ್ಟಿದ್ದು. ಈ ಕಾರಣಕ್ಕೋ ಏನೋ ಮಗುವನ್ನು ಐದು ವರ್ಷ ಆಗೋವರೆಗೂ ನೆಲಕ್ಕೆ ಬಿಟ್ಟರೆಎಲ್ಲಿ ನವೆದು ಹೋಗುವುದೋ ಎಂದುಕೊಂಡು ಕೆಳಕ್ಕೆ ಬಿಡದೇ ಕಂಕುಳಲ್ಲಿಟ್ಟುಕೊಂಡು ಸಾಕಿದಳು. ಕಣ್ಣನ್ನು ರೆಪ್ಪೆಗಳು ಹೇಗೆ ಮುಚ್ಚಟೆಯಿಂದ ರಕ್ಷಿಸುತ್ತವೆಯೋ ಹಾಗೆ ಮಗನನ್ನು ನೋಡಿಕೊಳ್ಳುತ್ತಿದ್ದಳು.         ಮಗುವಿಗೆ ಹಸಿವಾಗಿ ಅದು […]

ಕಬ್ಬಿಗರ ಅಬ್ಬಿ -8 ನಿಸರ್ಗಕ್ಕೂ ಬೇಕು ಸ್ವಾತಂತ್ರ್ಯ ಈ ನೆಲ, ಈ ಜಲ ಈ ಆಕಾಶಈ ಜೀವ ಈ ಭಾವ ಅನಂತಾವಕಾಶಈ ಕಲ್ಲು ಪರಮಾಣು ಒಳದೇವರ ಕಣ್ಣುಈ ಸ್ಥಾವರ ಈ ಜಂಗಮ ಪ್ರಾಣ ವಿಹಂಗಮಈ ವಾತ ನಿರ್ವಾತ ಆತ್ಮನೇ ಆತ್ಮೀಯಈ ಅಂಡ ಬ್ರಹ್ಮಾಂಡ ಉಸಿರಾಡುವ ಕಾಯ ಕಾವ್ಯದೊಳಗೆ ಜೀವರಸವಿದೆ.ರಸದ ಸೆಲೆಯಿದೆ.ಕುದಿಸಮಯವನ್ನೂ ತಣಿಸುವ ಪ್ರೀತಿಯಿದೆ.ಕಲ್ಲ ಮೊಟ್ಟೆಯನ್ನೂ ಕಾವು ಕೊಟ್ಟು ಮರಿ ಮಾಡುವ ಸೃಷ್ಟಿ ತಂತುವಿನ ತರಂಗವಿದೆ.ಕವಿಯ ಕಣ್ಣೊಳಗೆ ಮೂಡಿದ ಪ್ರತೀ ವಸ್ತುವಿನ ಬಿಂಬ ಜೀವಾತ್ಮವಾಗಿ ಕಾವ್ಯದೇಹ ತೊಟ್ಟು ಹೊರ […]

ಮಕ್ಕಳ ಕವಿತೆ

ಇರುವೆ-ಆನೆ ಗಣಪ ಮತ್ತು ಪುಟ್ಟಿ ವಿಜಯಶ್ರೀ ಹಾಲಾಡಿ ಗಣಪನ ತಿಂಡಿ ಇರುವೆ ತಿಂದರೆತಪ್ಪು ಏನಮ್ಮಆನೆಮರಿಯೇ ಗಣಪ ಎಂದುಅಜ್ಜಿ ಅಂದಿಲ್ವ? ಆನೆಗೆ ಇರುವೆ ಗೆಳೆಯನು ತಾನೇನಾನೇ ನೋಡಿಲ್ವಕಾಡಿನ ಬಿಲದಲಿ ಹುಲ್ಲಿನ ಬೀಜಕೂಡಿ ಹಾಕಿಲ್ವ? ಹುಲ್ಲು ಮೊಳೆತು ಮಳೆಯ ಬೆರೆತುಆನೆಯು ತಿಂದಿಲ್ವಆನೆಗು ಇರುವೆಗು ಭೇದವೆ ಇಲ್ಲಬೆಲ್ಲ ಕದ್ದಿಲ್ವ? ಪುಟ್ಟಿಯ ಮಾತು ಸಿಡಿಯೋ ಅರಳುತಲೆಯು ಕೆಟ್ಟಿಲ್ವ!!ಅಮ್ಮ ಅಪ್ಪ ಅಜ್ಜಿ ಅಜ್ಜಬಿದ್ದು ನಕ್ಕಿಲ್ವ? ******************************

ಬೆಳಕಿನ ರೋಚಕತೆ ನೀಡುವ ಬೆಳದಿಂಗಳು. ಪುಸ್ತಕ- ಬೆಳದಿಂಗಳು ಕವಿ- ಗುರು ಹಿರೇಮಠ ವಿಶ್ವೃಷಿ ಪ್ರಕಾಶನ ಬೆಲೆ-೧೨೦/- ಗುರು ಹಿರೇಮಠ ತುಮಕೂರು ಟು ಹೊಸ್ಪೇಟ್ ಎಂದೇ ನನಗೆ ಪರಿಚಯವಾದವರು. ಮೃದು ಮಾತಿನ ಅಷ್ಟೇ ನಾಚಿಕೆ ಸ್ವಭಾವದ ಹುಡುಗ. ಯಾವಾಗ ಎದುರಿಗೆ ಸಿಕ್ಕರೂ ಒಂದು ನಗೆಯ ಹೊರತಾಗಿ ಬೇರೆ ಮಾತು ಆಡಲು ಬರುವುದೇ ಇಲ್ಲವೇನೋ ಎಂಬಷ್ಟು ಮೌನಿ. ಅವರ ಚುಟುಕುಗಳ ಸಂಕಲನ ಬೆಳದಿಂಗಳು ಓದಿದಾಗ ಅವರ ಮೌನಕ್ಕೊಂದು ಅರ್ಥ ದೊರಕಿತು ನನಗೆ. ಹೇಳಬೇಕಾದುದ್ದನ್ನೆಲ್ಲ ಚುಟುಕಾಗಿ ಮೂರು ನಾಲ್ಕು ಸಾಲುಗಳಲ್ಲಿ ಹೇಳಿ […]

ಬಾಗಿಲುಗಳ ಆಚೀಚೆ ಬಾಗಿಲುಗಳ ಆಚೀಚೆ ಏನೆಲ್ಲ ಇರಬಹುದು! ಹುಟ್ಟಿದ ಭಾವನೆಗಳನ್ನೆಲ್ಲ ಹುಷಾರಾಗಿ ನಿರ್ವಹಿಸುವ ಮನಸ್ಸಿನಂತೆಯೇ ಬಾಗಿಲುಗಳು ಕೂಡಾ. ಅಗತ್ಯಕ್ಕೆ, ಅವಶ್ಯಕತೆಗೆ ಅನುಗುಣವಾಗಿ ತೆರೆದುಕೊಳ್ಳುವ ಒಂದೊಂದು ಬಾಗಿಲಿಗೂ ಅದರದೇ ಆದ ಪುಟ್ಟ ಹೃದಯವೊಂದು ಇರಬಹುದು; ಆ ಹೃದಯದ ಬಡಿತಗಳೆಲ್ಲವೂ ಮನೆಯೊಳಗಿನ ಮೌನವನ್ನೋ, ಅಂಗಡಿಗಳ ವ್ಯವಹಾರವನ್ನೋ, ಸಿನೆಮಾ ಹಾಲ್ ನ ಕತ್ತಲೆಯನ್ನೋ, ರಸ್ತೆಯೊಂದರ ವಾಹನಗಳ ವೇಗವನ್ನೋ ತಮ್ಮದಾಗಿಸಿಕೊಳ್ಳುತ್ತ ಏರಿಳಿಯುತ್ತಿರಬಹುದು. ಹೀಗೆ ಎಲ್ಲ ಪ್ರಾಪಂಚಿಕ ನೋಟ-ಅನುಭವಗಳನ್ನು ತಮ್ಮದಾಗಿಸಿಕೊಳ್ಳುವ ಬಾಗಿಲುಗಳಿಗೆ ಒಮ್ಮೊಮ್ಮೆ ಕೃಷ್ಣ-ರಾಧೆಯರ, ಶಿವ-ಪಾರ್ವತಿಯರ ಹೃದಯಗಳೂ ಅಂಟಿಕೊಂಡು ಈ ಬಾಗಿಲು ಎನ್ನುವ ವಿಸ್ಮಯದ […]

ಗಝಲ್

ಗಝಲ್ ಭಾಗೆಪಲ್ಲಿ ಕೃಷ್ಣಮೂರ್ತಿ ನೀ ದರ್ಷನಕೆ ಸಿಗದೆ ಕಾಡಿ ಕಾಡಿ ನೋಯಿಸುವೆನಿನ್ನ ಭಾವ ಚಿತ್ರವ ನೀಡದೆ ಕಾಡಿ ನೋಯಿಸುವೆ ನಮ್ಮ ಅಗಲಿಕೆ ಇಷ್ಟು ಧೀರ್ಘ ಕಾಲ ಆಗಿರುವಾಗಕನಸಲೂ ಅಪ್ಪಲು ಸಿಗದೆ ಹಿಂಸಿಸಿ ನೋಯಿಸುವೆ ನಮ್ಮ ಪ್ರೀತಿಯ ವಿಷಯ ಎಷ್ಟು ಗೋಪ್ಯ ವೆನೆನನ್ನ ಅಂತಿಮ ಕ್ಷಣವೂ ಅರಿಯದೆ ಬಹಳ ನೋಯಿಸುವೆ ಬೇರ್ಪಡಿಕೆಯಲಿ ನಮ್ಮ ಪ್ರೀತಿ ಇಷ್ಟು ಗಾಢವಾಗಿರೆಸೇರ್ಪಡಿಕಯ ಊಹೆ ಇದ್ದೂ ಹೀಗೇಕೆ ನೋಯಿಸುವೆ ಯಾವುದಾದರೂ ಬಹನೇ ಹುಡುಕಿ ಭೇಟಿಯಾಗು ಬಾಸುಮ್ಮನೆ ಹೆದರಿ ನೀನೂ ನೊಂದು ನನ್ನನೂ ನೋಯಿಸುವೆ ಕಾಲಕೂಡಿ […]

ಗಮ್ಯದಾಚೆ

ಕವಿತೆ ಗಮ್ಯದಾಚೆ ವಿಜಯಶ್ರೀ ಹಾಲಾಡಿ ಧೂಪ. ಹಿಡಿದು ಊರಿಡೀಘಮಲು ಹತ್ತಿಸುತ್ತಅಲೆವ ಅವಳಕೋಮಲ ಪಾದಕ್ಕೆತುಂಬು ಹೆರಳ ಗಂಧಕ್ಕೆಜೀವವಿದೆ. ….ಮಣ್ಣಿನಂತೆ ನೀರಿನಂತೆಕಡಲು -ಗಾಳಿಯಂತೆ ನಾರಿನ ಬೇರು ಅರೆಯುತ್ತಅರೆಮುಚ್ಚಿದ ಕಣ್ಣೆವೆಆಳದ ಹೊಳಪಿನೊಂದಿಗೆಮಾತಿಗಿಳಿಯುತ್ತಾಳೆತುಟಿ ಲಘು ಕಂಪಿಸುತ್ತವೆಅವಳ ಮೈಮಾಟಕ್ಕೆಚಿರ ಯೌವನಕ್ಕೆಮಿಂಚುಹುಳುಗಳ ಮಾಲೆ-ಯೇ ಕಾಣ್ಕೆಯಾಗುತ್ತದೆ. ಸಂಜೆಸೂರ್ಯನ ಬೆವರೊರೆಸಿಮನೆಗೆ ಹೆಜ್ಜೆಹಾಕುವ ನನ್ನಕಂಡು ಅವಳ ಕಾಲ್ಗೆಜ್ಜೆನಸು ಬಿರಿಯುತ್ತವೆಗುಡಾರದೊಳಗಿಂದ ತುಸುಬಾಗಿದ ಅವಳ ಸ್ಪರ್ಶಕ್ಕೆದಿನವೂ ಹಾತೊರೆಯುತ್ತೇನೆಗುನುಗಿಕೊಳ್ಳುವ ಹಾಡೆಂಬನೀರವಕ್ಕೆ ಪದವಾಗುತ್ತೇನೆ‘ಲಾಟೀನು ಬೆಳಗುವುದೇಕೆಇವಳೇ ಇಲ್ಲವೇ ‘ ಎಂದುಫಕ್ಕನೆ ತಿರುಗುವಾಗೊಮ್ಮೆಗುಡುಗುಡಿಯ ಸೇದಿನಿರುಮ್ಮಳ ಹೀರುತ್ತಾಳೆಒದ್ದೆಮಳೆಯಾದ ನಾನುಛತ್ರಿ ಕೊಡವುತ್ತ ಕೈಚಾಚಿದರೆ ತುಸುವೇನಕ್ಕುಬಿಡುತ್ತಾಳೆ.ಡೇರೆಯೊಳಗಿನ ಮಿಶ್ರಘಮಕ್ಕೆ ಸೋತು ಅವಳಅಲೆ ಅಲೆ ಸೆರಗ […]

ಶಿಶುತನದ ಹದನದೊಳು ಬದುಕಲೆಳಸಿ

ಪ್ರಬಂಧ ಶಿಶುತನದ ಹದನದೊಳು ಬದುಕಲೆಳಸಿ ಡಾ.ಲಕ್ಷ್ಮಿನಾರಾಯಣ ಭಟ್ ಈ ಸುಂದರ ಮುಂಜಾನೆ ನನಗೆ ತುಂಬಾ ಪ್ರಿಯವಾದ ಹಾಡೊಂದರ ಸಾಲುಗಳು ನನ್ನ ಮನ:ಪಟಲದಲ್ಲಿ ಭಾವ ತರಂಗಗಳನ್ನು ಎಬ್ಬಿಸುತ್ತಿವೆ. ನಾನು ಹಾಡುಗಾರನಲ್ಲದಿದ್ದರೂ, ಈ ಸಾಲುಗಳಿಗೆ ದಯವಿಟ್ಟು ಕಿವಿಗೊಡಿ. ನೆನಪಿದೆಯೇ ನಿನಗೆ? ನಾವಿಬ್ಬರೂ ಅಂದು ಹೊಳೆಯ ದಡದಲ್ಲಿ ನಿಂದು ಮರಳು ಮನೆಗಳ ಕಟ್ಟಿ ಆಟವಾಡಿದ್ದು ನಿನಗೆ ನೆನಪಿದೆಯೇ ನಿನಗೆ? ಬಾ ಗೆಳೆಯ ಬಾರಯ್ಯಾ, ಆಟವಾಡೋಣ ಬಾಲ್ಯದ ನೆನಪನು ಮರಳಿ ಕಟ್ಟೋಣ. ನೆನಪಿದೆಯೇ ನಿನಗೆ? ನನಗೆ ಬೇಜಾರಾದಾಗಲೆಲ್ಲಾ ಈ ಸಾಲುಗಳನ್ನು ಗುಣುಗುಣಿಸುತ್ತೇನೆ. ಆಗ […]

ಕಾವ್ಯಯಾನ

ಅಳುತ್ತಿರಬೇಕು ಅವನು! ಪುರುಷೋತ್ತಮ ಭಟ್ ಕೆ ನಿಯಾಮಕನೆಲ್ಲಿದ್ದಾನೆ,ತಿರುಗಿನಿಂತಿದ್ದಾನೆಬೆನ್ನು ತೋರಿಸಿದ್ದಾನೆತನ್ನದೇ ಸೃಷ್ಟಿಯ ದುರಂತ ಕಾಣಲಾಗದೆಅಳುತ್ತಿರಬೇಕು ಪಾಪ ತುಂಬಿದ ಕೊಡವ ಏನುಮಾಡೋಣವೆಂದು/ ಆಲಯಗಳ ಕಲ್ಲು-ಸಂದುಗಳಲ್ಲಿಕೆತ್ತಿದ ಕೆಡವಿದ ಹೆಸರುಗಳೆಷ್ಟುಹಾಸಿಗೆಗೆಳೆದು ಚೀರಾಡಿಸಿ ಗೋಳಾಡಿಸಿದ ಕಥೆಗಳೆಷ್ಟುಪರರ ಕಿಸೆಯೊಳಗಿನ ದ್ರವ್ಯದಾಸೆಗೆ ಧಮನಿಯ ಕೊಯ್ದವರೆಷ್ಟುಅಳುತ್ತಿರಬೇಕು ಬೆನ್ನು ಕಾಣಿಸುತ್ತಿದೆ ಬೆಣ್ಣೆಯಲಾಡಿದವನ/ ಕವಾಟುಗಳೊಳಗೆ ಪೇರಿಸಿಟ್ಟ ಹೊತ್ತಗೆಗಳಿಗೆ ತುಂಬಿದೆ ಧೂಳುತುಳುಕುವ ಮಾನಪತ್ರಗಳನ್ನು ಆಪೋಶನಗೈಯ್ಯುತ್ತಿವೆ ಗೆದ್ದಲುವಿದ್ಯಯಾಚೆಯ ಬುದ್ದಿ, ವಿವೇಕ ಪಾತಾಳಕೆಹೆಣ್ಣು-ಹೆಸರುಗಳ ಬಾಂಡಲೆಯ ಹೊತ್ತು ಸಾಗುತ್ತೇವೆಅಳುತ್ತಿರಬೇಕು ಬೆನ್ನಷ್ಟೇ ಕಾಣಿಸುತ್ತಿದೆನವಿಲಗರಿ ಮುರಿದು ಮುಪ್ಪಾಗಿದೆ/ ಪೂಜೆ-ಪ್ರಾರ್ಥನೆ ಆಡಂಬರಒಳಗೆಲ್ಲ ಕೊಳಕು-ದಿಗಂಬರಪ್ರಚಾರದ ಪ್ರವಚನಹುಡುಕುತ್ತಿದ್ದಾನೆ ತನ್ನಸೃಷ್ಟಿಯಊನ ಕಳೆಯಲು ದಾರಿ ಮಹಾಮಳೆ, ಕೇಳರಿದ […]

Back To Top