ಹೊಸ ಶಿಕ್ಷಣ ನೀತಿ

ಹೊಸ ಶಿಕ್ಷಣ ನೀತಿ

ಅನುಷ್ಠಾನವಾದೀತೇ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦? ಗಣೇಶ್ ಭಟ್ ಶಿರಸಿ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ ಕ್ಕೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದ ಬೆನ್ನಲ್ಲೇ ಈ ನೀತಿಯ ಪರ ಮತ್ತು ವಿರೋಧಿ ಹೇಳಿಕೆಗಳು, ಲೇಖನಗಳು ಪ್ರಕಟವಾಗುತ್ತಿವೆ. ಹೊಸ ಶಿಕ್ಷಣ ನೀತಿಯು ಇಂದಿನ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುವುದರ ಜೊತೆಗೆ ಇಡೀ ರಾಷ್ಟ್ರವನ್ನು ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿದೆಯೆಂದು ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಿದೆ.ಈ ಶಿಕ್ಷಣ ನೀತಿಯನ್ನು ಹೊಸ ಅವಿಷ್ಕಾರ, ಹೊಸ ಮನ್ವಂತರದ ಹರಿಕಾರ ನೀತಿ ಮುಂತಾಗಿ ಬಿಂಬಿಸಲಾಗುತ್ತಿದೆ. ಲಭ್ಯತೆ, ಸಮಾನತೆ, ಗುಣಮಟ್ಟ, […]

ಕೈ ಚೀಲ

ಕೈ ಚೀಲ ಬಿ.ಶ್ರೀನಿವಾಸ ಆ ಹುಡುಗನ ಹೆಸರಿಡಿದು ಯಾರೂ ಕರೆಯುವುದಿಲ್ಲ.ಎಲ್ಲರೂ ಕರೆಯುವುದೇ ‘ಕೈಚೀಲ’ ಎಂದೆ.ತನ್ನ ಕುಂಟುಗಾಲಿನಲಿ ಹೋಗುವಾಗ ಯಾರಾದರೂ “ಕೈ ಚೀಲಾ…”ಕೂಗಿದರೆ ಸಾಕು ತಕ್ಷಣ ನೋಡುತ್ತಾನೆ.ಅವನಿಗೆ ಬಹಳವೆಂದರೆ ಐದೋ ಆರೋ ವರುಷವಿದ್ದೀತು. ಅವ್ವನ ಬಿಟ್ಟರೆ ಅವನಿಗೆ ಬೇರೆ ಜಗತ್ತು ಇಲ್ಲ. ಬಣ್ಣದ ಸಂಜೆಗಳೆಂದರೆ ಅವನಿಗಿಷ್ಟ. ಯಾಕೆಂದರೆ ಅವನವ್ವ ಸಂಜೆಯಾದಂತೆಲ್ಲ ಸುಂದರವಾಗಿ ಕಾಣುವಂತೆ ಅಲಂಕರಿಸಿಕೊಳ್ಳುತ್ತಾಳೆ. ಆ ಪಾಂಡ್ಸ ಪೌಡರಿನ ಪರಿಮಳ ಸಂಜೆಗಳನ್ನು ಅರಳಿಸುತ್ತದೆ. ಸಲೀಸಾಗಿ ಅವ್ವನ ಕೈ ಹಿಡಿದು ನಡೆಯುತ್ತಾನೆ. ಅಷ್ಟರಲ್ಲಿ ಯಾರಾದರೂ ಕೈ..ಚೀ..ಲಾ..!ಪಿಸುಗುಟ್ಟಿದರೂ ಸಾಕು ಅವನು ಅಲ್ಲಿಗೆ […]

ಅಂಗಳದ ಚಿಗುರು

ಕವಿತೆ ಅಂಗಳದ ಚಿಗುರು ಬಿರುಕು ಬಿಟ್ಟ ಗೋಡೆಯ ಮೌನದಲಿಅಜ್ಞಾತ ಹಕ್ಕಿಯ ಗೂಡೊಂದು ಮುಗಿಲ ಕೂಗುತಿತ್ತು ಅಂಗಳ ತುಂಬಿದ ನೀರಿನ ದಡದಲಿಮರಿಗಳ ಹಿಂಡು ಕಣ್ಣಾಮುಚ್ಚಾಲೆ ಆಡುತಪೇಪರ ಬೋಟಿನ ಕಣ್ಣೊಳಗೆಅಲೆಗಳ ಲೆಕ್ಕದಲಿ ಮೈಮರೆತವು ಅವಳು ಬಿಡುಗಣ್ಣಲಿಪಾದಕ್ಕೆರಗಿದ ಗಾಯದ ಸಲಾಕೆ ಜಾಡಿಸುತ್ತಗೋಗರಿವ ಮುಳ್ಳುಗಳ ಹೃದಯದಲಿಕಸಿ ತುಂಬೊ ರಸದ ಮುಲಾಮಾದಳು ಬಿರುಕ ಗೋಡೆಗಳ ನಡುವೆಬೆಸುಗೆಯ ಚಿತ್ತ ಬೆನ್ನೊಳಗ ಬಿಗಿದುಕೊಂಡುಹರಿವ ತೊರೆಯಲಿ ತೇಲಿ ಬರೋ ನಾವೆಯಾದಳು ಉರಿವ ಒಲೆಗಳಲಿ ಗುಪ್ತ ಬೂದಿಯಾಗಿತೇದು ತೇಗಿ ನಕ್ಷತ್ರಗಳ ನೆಲಕ್ಕಿಳಿಸಿಗುಡಿಸಲು ಕಣ್ಣೊಳಗೆಸದಾ ಹುಣ್ಣಿಮೆಯ ಚಂದಿರ ಚಿತ್ರಿಸಿಬೆಳದಿಂಗಳ ನಕ್ಷೆಯಾದಳು ಅಂಗಳದ […]

ನನ್ನ ಇಷ್ಟದ ಕವಿತೆ

ನನ್ನ ಇಷ್ಟದ ಕವಿತೆ ಡಾ.ಎಂ.ಗೋಪಾಲಕೃಷ್ಣ ಅಡಿಗ ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನುಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ಹೂವು ಹಾಸಿಗೆ ಚಂದ್ರ ಚಂದನ ಬಾಹುಬಂಧನ ಚುಂಬನಬಯಕೆ ತೋಟದ ಬೇಲಿಯೊಳಗೆ ಕರಣ ಗಣದೀ ರಿಂಗಣಒಲಿದ ಮಿದುವೆದೆ , ರಕ್ತ ಮಾಂಸದ ಬಿಸಿದು ಸೋಂಕಿನ ಪಂಜರಇಷ್ಟೇ ಸಾಕೆಂದಿದ್ದೆಯಲ್ಲೋ ? ಇಂದು ಏನಿದು ಬೇಸರ?ಸಪ್ತ ಸಾಗರದಾಚೆಯೆಲ್ಲೊಸುಪ್ತ ಸಾಗರ ಕಾದಿದೆಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೇ?ಏನಿದೇನಿದು ಹೊರಳುಗಣ್ಣಿನ ತೇಲುನೋಟದ ಸೂಚನೆ?ಯಾವ ಸುಮಧುರ ಯಾತನೆ?ಯಾವ ದಿವ್ಯ ಯಾಚನೆ?ಮರದೊಳಡಗಿದ […]

“ಭವ”ದ ಬಂಧಗಳಲ್ಲೇ ಅರಳಿದ ಸಾರ್ಥಕ ಸಾಲುಗಳು

“ಭವ”ದ ಬಂಧಗಳಲ್ಲೇ ಅರಳಿದ ಸಾರ್ಥಕ ಸಾಲುಗಳು ಫೇಸ್ಬುಕ್ಕಿನ ತುಂಬ ಹರಡುವ ಪದ್ಯದ ಘಮಲಿಗೆ ತಮ್ಮ ದನಿಯನ್ನೂ ಸೇರಿಸಲು ಹಾತೊರೆಯುತ್ತಿರುವ ಅಸಂಖ್ಯ ಕವಿ ಮನಸ್ಸುಗಳ ನಡುವೆ ಕೊಟ್ರೇಶ್ ತಂಬ್ರಳ್ಳಿ ಅಮರಗೋಳಮಠ ಅವರದು ಗಮನಿಸಲೇಬೇಕಾದ ಹೆಸರು. ಸ್ವಲ್ಪ ಹದವೆನ್ನಿಸುವ ಯಾರದೇ ಕವಿತೆಗಳಿಗೆ ತಕ್ಷಣದ ಪ್ರತಿಕ್ರಿಯೆ ನೀಡುವ ಕೊಟ್ರೇಶ್ ಆಗೀಗ ತಮ್ಮ ರಚನೆಗಳನ್ನೂ ಈ ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟು ಪ್ರತಿಕ್ರಿಯೆಗೆ ಕಾಯುತ್ತಾರೆ. ನಿಜಕ್ಕೂ ಚಂದ ಇರುವ ಅವರ ನಿಜದ ರಚನೆಗಳಿಗಿಂತ ತಕ್ಷಣಕ್ಕೆ ಕೋಪ ತರಿಸುವ, ಸ್ವಲ್ಪ ಒರಟೇ ಎನ್ನಿಸುವ […]

ನನ್ನ ಇಷ್ಟದ ಕವಿತೆ

ಮುಂಬೈ ಜಾತಕ ರಚನೆ —– ಜಿ.ಎಸ್.ಶಿವರುದ್ರಪ್ಪ ಹುಟ್ಟಿದ್ದು: ಆಸ್ಪತ್ರೆಯಲ್ಲಿ ಬೆಳೆದದ್ದು: ಬಸ್ಸು ಟ್ರಾಂ ಕಾರು ಟ್ಯಾಕ್ಸಿ ಎಲೆಕ್ಟ್ರಿಕ್ ಟ್ರೇನುಗಳಲ್ಲಿ ಕುಡಿದದ್ದು: ಕಾಣದೆಮ್ಮೆಯ ಕೆಚ್ಚಲು ಕರೆದು ಕಳುಹಿಸಿದ ಬಾಟ್ಲಿ ಹಾಲು, ಗ್ರೈಪ್ ಸಿರಪ್ ಹಾರ್ಲಿಕ್ಸ್ ಇತ್ಯಾದಿ ಕಂಡಿದ್ದು :ಬೆಳಗಿನಿಂದ ಸಂಜೆಯ ತನಕ ಲಕ್ಷ ಚಕ್ರದ ಉರುಳು ಅವಸರದ ಹೆಜ್ಜೆ ಯ ಮೇಲೆ ಸರಿವ ನೂರಾರು ಕೊರಳು ಕಲಿತದ್ದು: ಕ್ಯೂ ನಿಲ್ಲು:ಪುಟ್ಪಾತಿನಲ್ಲೇ ಸಂಚರಿಸು; ರಸ್ತೆವದಾಟುವಾಗೆಚ್ಚರಿಕೆ; ಓಡು, ಎಲ್ಲಿಯೂ ನಿಲ್ಲದಿರು; ಹೇಗೋ ಅವರಿವರ ತಳ್ಳಿ ಮುನ್ನುಗ್ಗು; ಎಲ್ಲಾದರೂ ಸರಿಯೆ, ಬೇರೂರು,ಹೀರು. ತಾಯಿ:  […]

ವಿಧಾಯ ಹೇಳುತ್ತಿದ್ದೇವೆ

ಕವಿತೆ ದೇವು ಮಾಕೊಂಡ ಮಧುರ ಸ್ಪರ್ಷವಿತ್ತನೆನಪುಗಳು ಮುಳುಗುತ್ತಿವೆಕಣ್ಣುಗಳ ಮುಂದೆ ಹಾದು ಹೋಗುತ್ತಿವೆದಿನ ದಿನ ಕಳೆದ ಘಟನೆಗಳುಭಯವಿದೆ ನನಗೀಗನೂರಾರು ವರುಷಗಳಿಂದ ಪಕ್ಕೆಲುಬುಗಳಲಿಬಚ್ಚಿಟ್ಟಿದ್ದ ನೆನಪುಗಳು ಅಭದ್ರಗೊಳ್ಳುತ್ತಿವೆ ಎಂದುಹೇರಳವಾಗಿರುವ ಸಿಡಿಲು ಮಳೆ ಹನಿಗಳಿಂದ ನಾನು ಏಕಾಂಗಿಯಾಗಿದ್ದೇನೆಸ್ವರ್ಗದ ಹಾದೀಲಿದುಃಖಗಳ ಗುರುತ್ವಾಕರ್ಷಣೆಯ ತುದಿಗೆ ಒರಗಿಕೊಂಡು ನಾನೀಗಕಳೆದು ಹೋದ ಜೋತಿರ್ವರ್ಷಗಳಮೆಲಕು ಹಾಕುತ್ತ ನಿಂತಿರುವೆಲಿಖಿತ ಡೈರಿಗಳುಶೀರ್ಷಿಕೆ ರಹಿತ ಪದ್ಯಗಳುರಾತ್ರಿ ಮಂಡಿಸಿದ ಕನಸುಗಳು ಕಳೆದುಕೊಂಡುಬರಿಅರೆಬರೆ ತಿದ್ದಿದ ನಂಬಿಕೆ ಹದೀಸ್ ಪುರಾಣಗಳನಡುವೆ ನಿಂತಿದ್ದೇನೆ ನೋಡಿವರ್ಷಕ್ಕೊಂದೆರಡು ಸಲತ್ರಿವರ್ಣದ ಧ್ವಜದ ಕೆಳಗೆಮಸುಕಾದ ಹೆಜ್ಜೆಗುರುತುಗಳುಉಸಿರು ಕಟ್ಟಿದ ಗಂಟಲಿಂದ ಬರುವಶುಭಾಶಯ ಸಹಾನುಭೂತಿಗಳುಮಿನುಗುತ್ತಿವೆಮರುದಿನ ಮತ್ತೆಅಸಮ ಉಸಿರುಎದೆಬಡಿತ ! […]

ಅನುವಾದಿತ ಕವಿತೆ

ರಾಹತ್ ಇಂದೋರಿ ಕನ್ನಡಕ್ಕೆ:ರುಕ್ಮಿಣಿ ನಾಗಣ್ಣವರ ವಿರೋಧವಿದ್ದರೆ ಇರಲಿ ಅದು ಪ್ರಾಣ ಅಲ್ಲವಲ್ಲಇದೆಲ್ಲವೂ ಮುಸುಕು ಹೊಗೆ ಆಕಾಶ ಅಲ್ಲವಲ್ಲ ಬೆಂಕಿ ಹೊತ್ತಿದರೆ ಆಹುತಿ ಆಗುವವು ಬಹಳ ಮನೆಇಲ್ಲಿರುವುದು ಕೇವಲ‌ ನನ್ನ ಮನೆ ಮಾತ್ರ ಅಲ್ಲವಲ್ಲ ನಾನು ಹೇಳಿರುವುದೇ ಇಲ್ಲಿ ಅಂತಿಮಬಾಯೊಳಗೆ ಇರುವುದು ನಿನ್ನ ನಾಲಗೆ ಅಲ್ಲವಲ್ಲ ನನಗೆ ಗೊತ್ತಿದೆ ಅಸಂಖ್ಯ ವೈರಿಗಳು ಇರುವರುನನ್ನ ಹಾಗೆ ಜೀವ ಕೈಯಲ್ಲಿ ಹಿಡಿದವರು ಅಲ್ಲವಲ್ಲ ಇಂದಿನ ಈ ಪಾಳೆಗಾರಿಕೆ ನಾಳೆ ಇರುವುದಿಲ್ಲಅವರು ಬಾಡಿಗೆದಾರರು, ಸ್ವಂತದ ಮನೆ ಅಲ್ಲವಲ್ಲ ಇಲ್ಲಿನ ಮಣ್ಣಲ್ಲಿ ಎಲ್ಲರ ನೆತ್ತರ […]

ಅಂಕಣ

ಆಗದು ಎಂದು ಹೇಳಲು ಕಲಿಯಿರಿ ಕಲಿಸಿರಿ ಎಲ್ಲದಕ್ಕೂ ಹೂಂ ಎನ್ನುವ ಸ್ವಭಾವ ಬಹಳ ಜನರಲ್ಲಿ ಬೇ ರೂರಿದೆ. ಹೀಗಾಗಿ ಅವರೆಲ್ಲ ಹೌದಪ್ಪಗಳಾಗಿದ್ದಾರೆ.ಪ್ರತಿ ಯೊಂದು ಕೆಲಸಕ್ಕೂ ಹೂಂ ಎಂದು ಒತ್ತಡ ಆತಂಕವನ್ನು ಅನಾಯಾಸವಾಗಿ ತಾವೇ ಮೈ ಮೇಲೆ ಎಳೆದು ಕೊಳ್ಳುತ್ತಾ ರೆ.ಯಾವುದಕ್ಕೂ ಇಲ್ಲ ಎಂದು ಹೇಳಿ ರೂಢಿಯೇ ಇಲ್ಲ. ಇಲ್ಲ ಎಂದು ಹೇಳುವುದು ಅಗೌರವ ಎಂದೇ ಭಾವಿಸಿದ್ದೇ ವೆ.ನನಗೀಗ ತಾವು ಹೇಳಿದ ಕೆಲಸ ಮಾಡಲಾಗುವುದಿಲ್ಲ. ನಾನು ಬೇರೊಂದು ಕಾರ್ಯದಲ್ಲಿ ಮಗ್ನನಾಗಿದ್ದೇನೆ ಎಂದು ಎದುರಿಗಿನವರು ನಮ್ಮನ್ನು ತಪ್ಪಾಗಿ ತಿಳಿಯುತ್ತಾರೆಂದು ನಾವೇ […]

ಮುಖಾಮುಖಿ

ಅಂಕಣ ಬರಹ ಮುಖಾಮುಖಿಯಲ್ಲಿ ರೇಖಾಭಟ್ ನಮ್ಮೊಳಗಿನ ಪ್ರೀತಿ, ಕರುಣೆ, ಮಮತೆಗಳೇ ದೇವರು ರೇಖಾ ಗಜಾನನ ಭಟ್ಟ ವಜ್ರಳ್ಳಿ ಹತ್ತಿರದ ಹೊನ್ನಗದ್ದೆಯವರು. ಯಲ್ಲಾಪುರದ ಕುಂದೂರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಇವರ ಪತಿ ಹೈಸ್ಕೂಲ್ ಶಿಕ್ಷಕರು. ಗಾಯನ ಮತ್ತು ಬರವಣಿಗೆ ಇವರ ಹವ್ಯಾಸಗಳು. ಗಜಲ್ ಬರೆಯುವುದರ ಮೂಲಕ ಕನ್ನಡ ಸಾಹಿತ್ಯವನ್ನು ಪ್ರವೇಶಿಸಿದ್ದಾರೆ. ಇವರ ಚೊಚ್ಚಿಲ ಕೃತಿಯನ್ನು ಮಡಿಲ ನಕ್ಷತ್ರವನ್ನು ಅದಿತಿ ಪ್ರಕಾಶನ ಪ್ರಕಟಿಸಿದೆ. ಈ ಕೃತಿಯ ಪ್ರಕಟಣೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಧನ ಸಹಾಯ ಮಾಡಿದೆ. ಕನ್ನಡದಲ್ಲಿ ಯುವ ಬರಹಗಾರರನ್ನು […]

Back To Top