ಗಝಲ್ ಲೋಕ

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಗಝಲ್ ಲೋಕ ಐದನೇ ಅದ್ಯಾಯ ಮನಸೂರೆಗೊಳ್ಳುವ ಗಜಲ್ ಗಜಲ್ ಗದ್ಯ ಮಿಶ್ರಿತ ಪದ್ಯವೇ ಗಜಲ್ ಗದ್ಯವೇ, ಪದ್ಯವೇ ಅಥವಾ ಗದ್ಯ ಮಿಶ್ರಿತ ಪದ್ಯವೇ ಎಂಬುದು ಇತ್ತೀಚಿನ ಕನ್ನಡ ಗಜಲಗಳನ್ನು ನೋಡಿದಾಗ ಸಾಕಷ್ಟು ಗೊಂದಲವಾಗುತ್ತದೆ. ಯಾಕೆಂದರೆ ಹೆಚ್ಚಿನ ಗಜಲಗಳು ಗದ್ಯ ಮಿಶ್ರಿತ ಪದ್ಯಗಳಾಗಿ ಕಂಡು ಬರುತ್ತವೆ. ಆದರೆ ಮೂಲತಃ ಗಜಲ್ ಎನ್ನುವುದು ಲಯಬದ್ಧವಾಗಿದ್ದೂ ಗೇಯತೆಯನ್ನು […]

ಕಾವ್ಯಯಾನ

ನಿಲ್ಲದ ಆಳಲು ಕವಿತಾ ಮಳಗಿ ಎನು ಮಾಡುವುದು.. ನಮ್ಮ್ದು ಬಾಳೆ ಹೀಗೇ ಹೇಗೆ ಸಾಧ್ಯ ನಿಮ್ಮಂತೆ ಇರಲೂ… ಬಿಸಿಲಿರಲಿ ಮಳೆಯಿರಲಿ ಅನುದಿನವು ಹೋರಾಟ ಬಾಳಿಗೆ ಅದುವೇ ಅಭ್ಯಾಸವು.. ಸುಖ ಇಲ್ಲ ಎನ್ನುವ ಮಾತು ನೋವಿನ ಸಂಗತಿ ಇದು ಸತ್ಯ ಎನು ಮಾಡಲು ಸಾಧ್ಯವಿಲ್ಲ…. ನೆಮ್ಮದಿ ಇಲ್ಲ ಕಟಿಬಿಟಿ ಜೀವನ ಕೊನೆ ಇಲ್ಲದ ಭವಣೆಗಳು ಹೇಳಲಿಲ್ಲ ಯಾರಿಗೂ….. ಧನಿಕ ನೀವೆಲ್ಲರೂ ಬದುಕಲ್ಲಿ ಶ್ರೀಮಂತ ನನ್ನ ರಾಜ್ಯದಲ್ಲಿ ನಾನು ನಾವಿಲ್ಲದೆ ಏನೂ ಇಲ್ಲ… ನಮ್ಮಿಂದ ಗುಡಿಗೋಪುರ ನಮ್ಮಿಂದ ಮನೆಮಠ.. ಆದ್ರೂ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-10 ಅನ್ನದಾತಾ ಸುಖಿಭವ.. ಮನೆಯ ಬಾಗಿಲು ಕಿಟಕಿಗಳನ್ನು ಸದಾ ಮುಚ್ಚಿಟ್ಟರೂ ಅಡುಗೆ ಮನೆಯಲ್ಲಿ ತುಂಬಿಟ್ಟ ಡಬ್ಬಿಗಳು ಖಾಲಿಯಾದಾಗ ಬಾಗಿಲು ತೆಗೆದು ಕಿರಾಣಿ ಅಂಗಡಿಗೆ ಧಾವಿಸುತ್ತೇವೆ. ಸೊಪ್ಪು ತರಕಾರಿ ಎಂಬ ವ್ಯಾಪಾರಿಗಳ ಕೂಗು ಕೇಳುದಾಗ ಕಿಟಕಿ ಬಾಗಿಲನ್ನು ಕೊಂಚ ತೆಗೆದು ಅವರು ತಂದಿರುವ ತರಕಾರಿಯಲ್ಲಿ ನಮಗೆ ಬೇಕಾದದ್ದೇನಾದರೂ ಇದೆಯೇ ನೋಡುತ್ತೇವೆ. ಬೇಕಾದ್ದನ್ನೆಲ್ಲ ಖರೀದಿಸಿ ರುಚಿಕಟ್ಟಾಗಿ ಅಡುಗೆ ಮಾಡಿ ಉಣ್ಣುವಾಗ ನಾವು ಇವುಗಳನ್ನೆಲ್ಲ ಬೆಳೆದ ರೈತರ ಬಾಳು ತಣ್ಣಗಿರಲೆಂದು […]

ಕಾವ್ಯಯಾನ

ಗಝಲ್ ಎ.ಹೇಮಗಂಗಾ ನಡುರಾತ್ರಿ ಎದ್ದು ಹೋಗುವ ಮುನ್ನ ಒಮ್ಮೆ ಹಿಂತಿರುಗಿ ನೋಡಬೇಕಿತ್ತು ಯಶೋಧರೆಯ ಅಳಲ ಕೊನೆಯ ಬಾರಿಗಾದರೂ ಕೇಳಬೇಕಿತ್ತು ನೀನೇನೋ ಕಷ್ಟ, ಕೋಟಲೆಯ ಸಂಕಟ ಕಳೆಯಲು ಹೊರಟವನು ಸಂಗಾತಿಯಿರದ ಒಂಟಿ ಜೀವದ ನೋವಿಗೆ ಮಿಡಿಯಬೇಕಿತ್ತು ಸಿರಿ ಸಂಕೋಲೆ ಕಳಚಿ ಯಾರ ಗೊಡವೆಯಿರದೇ ನಡೆದುಹೋದೆ ನೀನೇ ಎಲ್ಲವೂ ಎಂದುಕೊಂಡವಳ ಬಾಳು ಬರಡು ಮಾಡಬಾರದಿತ್ತು ಧ್ಯಾನ,. ಚಿಂತನೆಗಳಲ್ಲಿ ತೊಡಗಿದವನಿಗೆ ಸಂಸಾರದ ಬಂಧವೆಲ್ಲಿ ? ನಿನ್ನನೇ ನಂಬಿದ ಜೀವವ ಧಿಕ್ಕರಿಸಿದ ಯಾತನೆ ಅರಿವಾಗಬೇಕಿತ್ತು ಗೌತಮ ಬುದ್ಧನಾಗಿ ಅರಿವಿನ ಗುರುವಾಗಿ ನಂಬಿದವರ ಉದ್ಧರಿಸಿದೆ […]

ಕಾವ್ಯಯಾನ

ಇಷ್ಟೇ ಸಾಕು! ಮಮತ ಕೆಂಕೆರೆ ಮನೆಯಲ್ಲಿ ಇಲ್ಲದಿದ್ದರೂ ಮನಸಲ್ಲಿ ಇದ್ದರೆ ಸಾಕು ನನಸಲ್ಲಿ ಸಿಗದಿದ್ದರೂ ಕನಸಲ್ಲಿ ಬಂದರೆ ಸಾಕು ಹೆಸರಲ್ಲಿ ಸೇರದಿದ್ದರೂ ಉಸಿರು ಮಿಡಿದರೆ ಸಾಕು ಗಳಿಸಿ ಗೌರವ ತರದಿದ್ದರೂ ಗೆಳೆಯನಾಗಿದ್ದರೆ ಸಾಕು ಇಷ್ಟವೆ ಇಲ್ಲವೆಂದಾದರೂ ಕಷ್ಟ ಕೊಡದಿದ್ದರೆ ಸಾಕು ಅಪ್ಪಿ ಮುದ್ದಾಡದಿದ್ದರೂ ಬೆಪ್ಪಳನ್ನಾಗಿಸದಿದ್ದರೆ ಸಾಕು ಜೊತೆಜೊತೆ ಸಾಗದಿದ್ದರೂ ಹಿತವ ಬಯಸಿದರೆ ಸಾಕು ಹೂನಗೆಯ ತುಳುಕಿಸದಿದ್ದರೂ ಹಗೆಯಾಗದಿದ್ದರೆ ಸಾಕು ದೇಹ-ಮೋಹ ಬೆಸೆಯದಿದ್ದರೂ ಜೀವ-ಭಾವ ಬೆಸೆದರೆ ಸಾಕು ದೂರದಲ್ಲಿ ಎಲ್ಲೋ ನೆಲೆಸಿದರೂ ಎದುರಾದಾಗ ವಾರೆನೋಟ ಸಾಕು ********

ಕಾವ್ಯಯಾನ

ಗಝಲ್ ತೇಜಾವತಿ.ಹೆಚ್.ಡಿ ಗರ್ಭದ ಕೊರಳ ಹಿಂಡಿ ಬಸಿದ ದ್ರವದಲ್ಲಿ ತೇಲುತ್ತಾ ಬಂದೆಯಲ್ಲ ನವಮಾಸದ ನೋವ ಒಂದೇ ಅಳುವಲ್ಲಿ ಮಾಯ ಮಾಡಿದೆಯಲ್ಲ ತಾಯ್ತನದ ಸುಖವ ಕ್ಷಣಕ್ಷಣವೂ ಸವಿದು ಪುಳಕಿತಗೊಂಡಿದ್ದೆ ಬಯಸಿದವಳು ಬಗಲಿಗೆ ಬಂದೊಡನೆ ಅಮ್ಮನ ಮಡಿಲು ಮರೆತೆಯಲ್ಲ ವೃದ್ಧಾಪ್ಯದಲಿ ನೆರಳಾಗುವೆಯೆಂದು ನೂರಾರು ಭವಿಷ್ಯದಕನಸು ಕಂಡಿದ್ದೆ ರೆಕ್ಕೆ ಬಲಿತೊಡನೆ ಗುಟುಕುಕೊಟ್ಟ ಗೂಡುತೊರೆದು ಹಾರಿಹೋದೆಯಲ್ಲ ತಾಯ ಹಾಲುಂಡ ಕೂಸಿದು ವಾತ್ಸಲ್ಯದ ಪರ್ವತವೆಂದುಕೊಂಡಿದ್ದೆ ಕರುಳಬಳ್ಳಿ ಹರಿದು ಕಿಂಚಿತ್ತು ಕರುಣೆಯೂ ಇಲ್ಲದಾಯಿತಲ್ಲ ನಿನ್ನ ಪಡೆದ ಈ ಜೀವ ಏಳೇಳು ಜನ್ಮದ ಪುಣ್ಯವೆಂದುಕೊಂಡಿದ್ದೆ ನಿತ್ಯವೂ ಮಾತೃಹೃದಯ […]

ಕಥಾಯಾನ

ಈಗೊಂದು ಉತ್ತರ ಸಿಗದಾ ಪ್ರಶ್ನೆ ಸುಮಂತ್ ಎಸ್ ಅದೊಂದು ಸಂಜೆ, ನನ್ನ ಕೈಯಲ್ಲಿ ಆಕೆಯ ಕೈ ಇತ್ತು. ಕಣ್ ಮಿಟುಕಿಸದೆ, ಚಂದ್ರ ನಕ್ಷತ್ರಗಳನು ಎಣಿಸುವ ಹಾಗೆ ಆಕೆ ನನ್ನನ್ನೇ ನೋಡುತ್ತಿದ್ದಳು, ನಾನು ಆಕೆಯನ್ನು.ಸೂರ್ಯಾಸ್ತಮಾನದ  ಮೋಡಗಳಂತಾಗಿದ್ದ ಕಣ್ಣುಗಳು ನನಗೆ ಏನನ್ನೊ ಹೆಳಬೇಕೆಂದು ಚಟಪಡಿಸುತಿದ್ದನ್ನು ಕಂಡೆ. ಇದೇನು ಮೊದಲಬಾರಿಯಲ್ಲ, ಅದೆಷ್ಟೋ ಬಾರಿ ಹೀಗೆ ಏನನ್ನೊ ಹೇಳಬೇಕೆಂದು ಪ್ರಯತ್ನಿಸಿ ಸೂತಿದ್ದು ಗೂತ್ತಿದೆ ನನಗೆ,  ಅದೇ, ಅನಿಶ್ಚಿತತೆ, ನಾಚಿಕೆ,ಭಯ,ಗೂಂದಲ ಇಂದಿಗೂ ಅವಳ ಕಣ್ಣಾ ಪರದೆ ಹಿಂದಿನಿಂದ ಇಣುಕುತ್ತಲೇಯಿತ್ತು. ಎಲ್ಲಾ ನದಿಗಳು ಸೇರಿದರೂ ಒಂದೇತರನಾಗಿರುವ […]

ಕಾವ್ಯಯಾನ

ನೀರಿಗೇತಕೆ ಬಣ್ಣವಿಲ್ಲ? ಮಹಾಂತೇಶ ಮಾಗನೂರ ಅರೆ ಯಾರು ಹೇಳಿದರು ನೀರಿಗೆ ಬಣ್ಣವಿಲ್ಲವೆಂದು… ನೋಡಿಲ್ಲಿ ಕವಿತೆ ಸಾರಿ ಹೇಳುತಿದೆ ನೀರಿಗೂ ತರತರದ ಬಣ್ಣಗಳುಂಟು ಎಂದು ನೀರಿಗೇತಕೆ ಬಣ್ಣವಿಲ್ಲ? ಧುಮ್ಮಿಕ್ಕುವ ಜಲಪಾತದಿ ಹಾಲಿನಂತಹ ಬಿಳುಪು ಸೂರ್ಯಾಸ್ತದ ಸಮಯದಲ್ಲಿ ಸಾಗರದಿ ನಸುಗೆಂಪು ನೀರಿಗೇತಕೆ ಬಣ್ಣವಿಲ್ಲ? ಆಗಸದಿಂದ ನೋಡಿದೊಡೆ ನೀರೆಲ್ಲ ತಿಳಿನೀಲಿ ಕಾನನದಿ ಹರಿಯುವ ಜುಳು ಜುಳು ನೀರು ಪ್ರಕೃತಿಯ ಬಣ್ಣದಲಿ ನೀರಿಗೇತಕೆ ಬಣ್ಣವಿಲ್ಲ? ಬೆಟ್ಟಗಳಲಿ ಸುಳಿ ಸುಳಿದಾಡಿ ಹರಿಯುವುದು ಝರಿಯಾಗಿ,ಗಿಡ ಮರಗಳಿಗೆ ನೀಡುತ ಉಸಿರು ಕಾಣುವದು ಹಸಿರು ಹಸಿರು! ನೀರಿಗೇತಕೆ ಬಣ್ಣವಿಲ್ಲ? […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-9 ಸೇವಾನಿರತರ ಕೈ ಬಲಪಡಿಸಿ ‘ಧಿಡೀರ್ ಲಾಕ್ ಡೌನ್ ಕಾರ್ಮಿಕರ ಬದುಕನ್ನು ಮೂರಾಬಟ್ಟೆ ಮಾಡಿಬಿಟ್ಟಿತು’ ಎಂದು ಕೆಲವರು ಹಳಿಯುತ್ತಾ, ಮರುಗುತ್ತಾ ಕುಳಿತಿದ್ದಾರೆ. ಸರಕಾರ ಅವರಿಗೆ ಇದ್ದಲ್ಲಿಯೇ ಅನ್ನಾಹಾರ ನೀಡಲು ಹಲವು ಕ್ರಮ ಕೈಗೊಂಡಿದೆ. ಇಸ್ಕಾನ್, ಅದಮ್ಯಚೇತನ, ಇಂಪೋಸಿಸ್, ರಾಷ್ಟ್ರೀಯ ಸ್ವಯಂಸೇವಕ ಸಂಘ( ನನ್ನ ಅರಿವಿಗೆ ಬಂದಷ್ಟನ್ನೇ ಉಲ್ಲೇಖಿಸಿದ್ದೇನೆ)… ಅನೇಕ ಸಹೃದಯಿಗಳು ಸರಕಾರದ ಕೆಲಸಕ್ಕೆ ಪೂರಕವಾಗಿ ಕಾರ್ಮಿಕರ, ನಿರ್ಗತಿಕರ ನೆರವಿಗೆ ಶ್ರಮಿಸುತ್ತಿವೆ. ಇಂತಹ ಸೇವಾಕಾರ್ಯದಲ್ಲಿ ತೊಡಗಿರುವ ಮೈಸೂರಿನ […]

ಕಾವ್ಯಯಾನ

ತವರಿನ ಮುತ್ತು ರೇಮಾಸಂ ಡಾ.ರೇಣುಕಾತಾಯಿ.ಸಂತಬಾ ಮರೀಯಲಿ ಹ್ಯಾಂಗ ಮರೀ ಅಂದರ ಅವ್ವನ ಅರಮನೆಯ ಅಂತಃಪುರವ ತವರಿನ ಗಂಜಿಯು ಅಮೃತದ ಕಲಶವು ಅಕ್ಕರೆಯು ಅಚ್ಚಿನ ಬೆಲ್ಲವ ಮೆಲ್ಲದಂಗ// ತವರಿನ ಉಡುಗೊರೆ ಆಗೇನಿ ನಾನು ಅತ್ತೆಯ ಮನೆಗೆ ಮುತ್ತಾಗಿ ಬಂದೇನಿ ಕಟ್ಟ್ಯಾರ ಕಂಕಣವ ಕೂಡು ಬಾಳ್ವೆಗೆ ಹಾದಿಗೆ ಹರವ್ಯಾರ ಹವಳದ ಹೂವ// ತಾಯಂಗ ತಡದೇನ ಕಂಟಕದ ಕದನವ ಅಪ್ಪನಂಗ ತಪ್ಪಿಲ್ಲದ ಹೆಜ್ಜೆನ ಇಟ್ಟೇನಿ ನುಡಿದಂಗ ನೇರ ನಡೆ ನಡದೇನಿ ಮಾತನ್ಯಾಗ ಮಂದ್ಯಾಗೆಲ್ಲ ಹೌದಾಗೇನಿ// ಬಂಗಾರದಂತ ನನ್ನ ಅಣ್ಣರ ತಮ್ಮರ ಬಳುವಳಿಯಾಗಿ […]

Back To Top