ಕಾವ್ಯಯಾನ

ಕಾವ್ಯಯಾನ

ಬೋನ್ಸಾಯ್. ಶಶಿಕಲಾ ವೀ ಹುಡೇದ. ಈ ಮಣ್ಣ ಕಣಕಣದ ಶಕ್ತಿಯೆಲ್ಲವೂ ನನ್ನ ಒಡಲಾಳದಲಿ ಮೈಮನಗಳಲಿ ವಸಂತನ ಪ್ರೀತಿಯ ಗಾಯದ ಗುರುತುಗಳು ಒನಪಿಲ್ಲದ ವೈಯ್ಯಾರದಲಿ ಒಡ್ಡು ಮುರಿಯುವ ಗಿಡ್ಡ ಮೈ ನೆತ್ತರೆಲ್ಲವೂ ಹರಿತ್ತಾಗಿ ಎಲೆಎಲೆಯೂ ಮಿಂಚು ಚಳಿಗಾಳಿಗೆ ಅದರುವ ಮೈ ನಾನು ಬದುಕಿರುವೆನೆಂಬುದಕೆ ಪುರಾವೆ ಬುಡದಡಿಯಲಿ ತಟ್ಟೆಯಲಿ ನಾಕೇ ನಾಕಿಂಚಿನ ನೆಲವೇ ಸಾಕ್ಷಿ ನಿಡುಸುಯ್ಯುವ ನನ್ನ ಪ್ರತಿ ಉಸುರಿಗೆ ನನ್ನ ಸುತ್ತಲೂ ಹೆಣೆದಿರುವ ನನ್ನದೇ ಬೇರುಗಳು ಶೋಕಿಸುವ ಬಿಳಲುಗಳು ಎಂಟ್ಹತ್ತು ಎಲೆಗಳು ಬೋನ್ಸಾಯ್ ಹೆಸರಲಿ ಕುಬ್ಜ ಬದುಕು ವರುಷಗಳುರುಳಿದರೂ […]

ಕಾವ್ಯಯಾನ

ಬಾರಯ್ಯ ಸಂಭವಿಸು ಮದ್ದೂರು ಮಧುಸೂದನ್ ಕೇಡುಗಾಲಕೆ ನಾಯಿ ಮೊಟ್ಟೆ ಇಕ್ಕಿದೆ ಮೊಟ್ಟೆ ಇಕ್ಕಿದ್ದು ದಿಟವೇ ? ಪ್ರಶ್ನಿಸುವ ಬಾಯಿಗಳಿಗೆ ಈಗಾಗಲೇ ಕರ್ಪ್ಯೂ ಜಾರಿಯಾಗಿದೆ ಹುತ್ತವೇ ಹಾವನ್ನು ನುಂಗುವ ದುರಿತ ಕಾಲವಿದು ಭುಸಗುಡುವ ಬಾಯಿಗೆ ಬಾಂಬಿಕ್ಕುವ ಭಯ ಚಾಲು ಇದೆ ಬಣ್ಣ ಬಣ್ಣದ ಪ್ರಣಾಳಿಕೆಗಳೆಂಬ ಟಿಕಳಿಗಳನ್ನು ಈಗಾಗಲೇ ಕುಂಡಿ ಮೇಲೆ ಅಂಟಿಸಿಯಾಗಿದೆ ಶಬ್ದಕೆ ನಾಚಿಕೆಯಾಗುವಷ್ಟು ಮೈಕಾಸುರ ಅಬ್ಬರಿಸುತ್ತಿದ್ದಾನೆ ಕಾಶ್ಮೀರದೀ ಕನ್ಯಾಕುಮಾರಿವರೆಗೆ ಚಾಲ್ತಿಯಲ್ಲಿದೆ. ಸಗಣಿ ತಿಂದವರ ಭಕ್ತಿಯ ಮಾರಾಟ ಜೋರಿದೆ ಕಾವಿ ಮರೆಯಲಿ ತ್ರಿಶೂಲಗಳಿಗೂ ನಾಚಿಕೆ ಸಂಭವಿಸಿದೆ ಪ್ರಜಾಪ್ರಭುತ್ವದ ಸಿಂಹಾಸನಕೆ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ (ಭಾಗ-1) ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಕಾಣಿಸದೇ ಕಾಡುತಿದೆ ವೈರಾಣು ಕರೋನಾ… ಕಳವಳದಿ ಕಂಗಾಲು ಮನುಜಕುಲ ಸಂಪೂರ್ಣ.. ‍ ಮಾರ್ಚ ತಿಂಗಳಿಂದ ಕರೋನಾ ಎನ್ನುವ ಪದವೇ ಎಲ್ಲರ ಸ್ಥಾಯಿ ಭಾವವಾಗಿದೆ. ಎಲ್ಲಾ ಮುಗಿತು. ಕಲಿತಾಯ್ತು ಮದುವೆಯಾಯ್ತು ಮಕ್ಕಳನ್ನು ಓದಿಸಿ, ಉದ್ಯೋಗಕ್ಕೆ ಸೇರಿಸಿ, ಮದುವೆ ಮಾಡಿ ಸೆಟಲ್ ಮಾಡಿದ್ದಾಯ್ತು ಇನ್ಯಾವಾಗ ದೇವರು ಕರೆಸಿಕೊಂಡರು ಹೋಗಲು ಸಿದ್ಧ ಎಂದು ದಿನಾ ಡೈಲಾಗ್ ಹೇಳುತ್ತಿದ್ದ ಸುತ್ತಮುತ್ತಲ ಮನೆಗಳ ಅಂಕಲ್ ಆಂಟಿಗಳೆಲ್ಲ ನಗು […]

ಪುಸ್ತಕ ಪರಿಚಯ

ಕಾನ್ಮನೆಯ ಕಾಲುದಾರಿ ಪಶ್ಚಿಮ ಘಟ್ಟದೊಳೆಗೇ ಹುದುಗಿರುವ ದಿನೇಶ ಹಲಿಮನೆಯವರ ಸುತ್ತಲಿನ ಪ್ರದೇಶಗಳಲ್ಲೇ ಹರಿದಾಡುವ ‘ಕಾನ್ಮನೆಯ ಕಾಲುದಾರಿ’ ಎಂಬ ಕಾದಂಬರಿಯೂ..! ದಿನೇಶ ಹಲಿಮನೆಯವರು ನನಗೆ ‘ಸಿರ್ವಂತೆ ಕ್ರಾಸ್‌’‌ ಕಥಾಸಂಕಲನ ಮತ್ತು ‘ಕಾನ್ಮನೆಯ ಕಾಲುದಾರಿ’‌ ಕಾದಂಬರಿ ಕಳುಹಿಸಿ ಎರಡು-ಮೂರು ತಿಂಗಳಾಗಿತ್ತು. ಇವುಗಳಲ್ಲಿ ‘ಸಿರ್ವಂತೆ ಕ್ರಾಸ್’ ಕಥಾಸಂಕಲನದ‌ ಬಗೆಗೆ ನನ್ನ ಅನಿಸಿಕೆ ಬರೆದು ಬಹಳ ದಿನವಾಯಿತು.‌ ಆದರೆ ಈ ‘ಕಾನ್ಮನೆಯ ಕಾಲುದಾರಿ’ ಕಾದಂಬರಿ ಬಗೆಗೆ ಇಷ್ಟು ದಿವಸ ನನ್ನ ಅನಿಸಿಕೆ ಬರೆಯಲಾಗಿರಲಿಲ್ಲ. ಈ ಕಾದಂಬರಿ ಓದಿದ್ದೆನಾದರೂ ಈ‌‌‍ ಕುರಿತು ಬರೆಯಲಾಗಿರಲಿಲ್ಲ. ಹಾಗಾಗಿ […]

ಕಾವ್ಯಯಾನ

ಮೌನಗೀತೆ ವಿಶಾಲಾ ಆರಾಧ್ಯ ನೀನಂದು ಬಳಿ ಸರಿದು ಒಲವಿಂದ ನಗು ತಂದು ಬೀಸುವ ಗಾಳಿಯೊಲು ಹಿತವೆನಿಸಿದೇ ನಾನದನು ಹೇಳದಲೆ ಗುಟ್ಟಾಗಿ ಬದಿಗಿಟ್ಟು ಎದೆಯ ಗೂಡಲಿ ಒಂದು ಗುಡಿ ಮಾಡಿದೆ ಗುಡಿಯ ಗರ್ಭದಿ ಅಲ್ಲಿ ಮೂರುತಿಯು ನೀನಾದೆ ಕಣ್ಣ ಭಕುತಿಗೆ ತಾನೇ ಪ್ರತಿಧ್ವನಿಸಿದೆ ವನವೆಲ್ಲಾ ಓಡಾಡಿ ಪತ್ರೆಯದು ಸಿಗದಾಗಿ ಮನದೊಲವ ಪತ್ರೆ ಯನೇ ನಿನಗಿರಿಸಿ ನೀನಾರೋ ನಾನಾರೋ ಒಂದು ನೋಟದಿ ಒಲಿದು ಹೃದಯದಂಗಳವೆಲ್ಲ ಬೆಳಕಾಗಿದೆ ಮತ್ತೊಮ್ಮೆ ನೀ ಸುಳಿದು ಮನದ ಭಾವವ ಉಲಿದು ಚಿತ್ತದಲಿ ದಿಟವನ್ನು ಅನುಗೊಳಿಸಿಡು || […]

ಕಾವ್ಯಯಾನ

ಗಝಲ್ ಹೇಮಗಂಗಾ ಸಮ ಸಮಾಜದ ಭವ್ಯ ಮಂಟಪಕೆ ಬುನಾದಿಯಾದವರು ನೀವು ತಮ ತೊಡೆದು ಅಜ್ಞಾನಿಗಳ ಮನ ಬೆಳಗಿಸಿದವರು ನೀವು ಸೃಷ್ಟಿಯಲ್ಲಿರದ ಮೇಲು ಕೀಳೆಂಬ ದೃಷ್ಟಿ ಬೇಕೇಕೆ ಈ ಜಗದಿ? ಅಸ್ಪೃಶ್ಯತೆಯ ಪಿಡುಗ ಹೊಸಕಲು ದಾರಿ ತೋರಿದವರು ನೀವು ಸಮಾನತೆ ಎಂಬುದು ಉಳಿಯಬಾರದು ಬರಿಯ ನಿಘಂಟಿನಲ್ಲಿ ಶೋಷಿತರ ಅಡಗಿಹೋದ ದನಿಗೆ ಕೊರಳಾದವರು ನೀವು ನೆನೆವೆವು ನಿಮ್ಮ ನವರೂಪ ತಳೆದ ಸಂವಿಧಾನದ ಶಿಲ್ಪಿಯೆಂದು ಭವಿಷ್ಯದ ಪುಟಪುಟದಿ ಹೊಸ ಭಾಷ್ಯ ಬರೆದವರು ನೀವು ಭೇದಭಾವವಿಲ್ಲ ಸಾವಿಗೆ ಎಲ್ಲರೊಂದೇ ಮರಳಿ ಮಣ್ಣ ಸೇರಿರೆ […]

ಕಾವ್ಯಯಾನ

ನಿಜ ಜಗಕೆ ಧಾವಂತವಿಲ್ಲ… ದೇವಯಾನಿ ಧಾವಂತವಿರಲಿಲ್ಲ ಬೆಳಗಿಗೆ ಈ ಮೊದಲಿನಿಂದಲೂ ತನ್ನಷ್ಟಕ್ಕೆ ತಾನೇ ಮೂಡುವ ಸೂರ್ಯ ಚೆಂಬೆಳಕ ಚೆಲ್ಲುವುದಕ್ಕೆ ಚುರುಗುಟ್ಟಿಸುವ ಬಿಸಿಲಹೊಗೆ ಚಿಮ್ಮಿಸಲು ಗಡಿಯಾರ ಬೇಕಿರಲೇ ಇಲ್ಲ ಹಕ್ಕಿ ಚಿಲಿಪಿಲಿಯೂ ಹೂ ಹಣ್ಣುಗಳೂ ಎಲ್ಲವೂ ಕಾಯುತ್ತಿದ್ದುದು ಸೂರ್ಯ ತೇಜದ ಗಡಿಯಾರ ತಾನೆ? ಋತುವುರುಳಿ ಋತುವಾಗಮಿಸಿ ನಗುವ ವಸುಂಧರೆಗೆ ಆಗಾಗ ಹೊನ್ನ ಹೊದಿಕೆ , ಶ್ವೇತ ಚಾದರ ಮಳೆಹನಿಯ ತೋರಣ ಎಲ್ಲಕೂ ರವಿಕಿರಣವೇ ಕಾರಣ ಈಗಲೀಗೀಗ ಗಡಿಯಾರದ ಮುಳ್ಳುಗಳನೂ ಮೀರಿಸಿದ್ದಾಯ್ತು ಹುಲುಮಾನವ ಹಾರಾಟ ,ಧಾವಂತ ನಡೆಯದೆಲೆ ಗುರಿ ಸೇರುವ […]

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಮೂರನೆ ಅದ್ಯಾಯ ಗಜಲ್ ಎನ್ನುವ ನಶೆ ಗಜಲ್ ಎನ್ನುವ ನಶೆ ಯಾವುದೇ ಒಂದು ಸಾಹಿತ್ಯ ಪ್ರಕಾರ ಜನಪ್ರಿಯ ಆಗುತ್ತಿದೆ ಅಂದರೆ ಅದು ಜನ ಜೀವನವನ್ನು ಸರಳವಾಗಿ ತನ್ನತ್ತ ಸೆಳೆದುಕೊಂಡು ಒಂದು ಅವಿನಾಭಾವ ಬಂಧ ಬೆಸೆಯುತ್ತಿದೆ ಎಂದೇ ಅರ್ಥ. ಹೌದು ಅರಮನೆಗಳಿಂದ ಕೊಳಚೇರಿಗಳ ಗಲ್ಲಿ ಗಲ್ಲಿ ತಲುಪಿದ ಗಜಲ್ ಬದುಕಿನ ಹೊಸದೊಂದು ಅಭಿವ್ಯಕ್ತಿಯ ತೀವ್ರತೆಯನ್ನು […]

ಕಾವ್ಯಯಾನ

ಸಂವಿಧಾನ ಶಿಲ್ಪಿ ತೇಜಾವತಿ ಹೆಚ್. ಡಿ ರಾಮಜಿ ಭೀಮಾಬಾಯಿಯ ಹದಿನಾಲ್ಕನೆಯ ಪುತ್ರರತ್ನವಾಗಿ ಬೆಳಗುಬೈಗು ಧೋಹೆ ರಾಮಾಯಣ ಮಹಾಭಾರತ ಸಂಸ್ಕಾರವಾಗಿ ಹೋದಲ್ಲೆಲ್ಲಾ ಅಸ್ಪೃಶ್ಯತೆಯ ಬಿಸಿಯನ್ನೇ ನೀನುಂಡೆ ಸಹಪಾಠಿಗಳೆದುರು ದಲಿತನೆಂದು ಅವಮಾನಕ್ಕೀಡಾದೆ! ಫೆಂಡೆಸೆ ಅಂಬೇಡ್ಕರರ ಪ್ರೀತಿಯ ತುತ್ತಿಗೆ ಪಾತ್ರರಾಗಿ ಗುರುಗಳ ಕೈಯಲಿ ಭೀಮರಾವ್ ಅಂಬೇಡ್ಕರ್ ಆಗಿ ಅಸ್ಪೃಶ್ಯರ ವರ್ಗದಲ್ಲೇ ಮೊದಲು ಸನ್ಮಾನಕ್ಕೆ ಪಾತ್ರನಾದೆ ಭಗವಾನ್ ಬುದ್ಧನ ಚರಿತ್ರೆಯ ಹೊತ್ತಗೆಗೆ ಆಕರ್ಷಿತನಾದೆ ! ಹೆಜ್ಜೆ ಹೆಜ್ಜೆಗೂ ತಿರಸ್ಕಾರದ ಉರಿಯಲ್ಲಿ ಹೊಗೆಯಾಗಿ ಪಣತೊಟ್ಟೆ ದಲಿತವರ್ಗದವರ ಪಾಲಿಗೆ ಜಾಗೃತಿಯಾಗಿ ಬಹಿಷ್ಕೃತ ಭಾರತ ಪತ್ರಿಕೆಗೆ ಸಾಮಾಜಿಕ […]

ಕಾವ್ಯಯಾನ

ಭೀಮ ದೀಪ ಎ ಎಸ್. ಮಕಾನದಾರ ಸಮ ಸಮಾಜದ ಕನಸುಗಾರ ಭಾರತ ಮಾತೆಯ ಕುವರ ಡಾ. ಬಿ ಆರ್. ಅಂಬೇಡ್ಕರ್ ! ಕಪ್ಪು ನೆಲದ ಕೆಂಪುಗಣ್ಣಿನ ಪಾರಿವಾಳ ಗುಣದ ಭೀಮ ! ಕೋಮುವಾದ ಬ್ರಾಮಣ್ಯ ಬಂಡವಾಳಶಾಹಿಗಳ ಬಣ್ಣ ಬಯಲು ಮಾಡಿದ ಸಮಾನತೆಯ ಮಂತ್ರ ಜಪಿಸಿ ಕಪ್ಪು ಜನರ ಸೂರ್ಯನಾದ ಬಿಳಿ ಕರಿಯರ ನಡುವಿನ ಅಡ್ಡಗೋಡೆಯ ಕೆಡವಿದ ಅಪ್ರತಿಮ ಚಿಂತಕ ದ್ವೀಪಗಳಾಗಿದ್ದ ಕೇರಿ ಮೊಹಲ್ಲಾ ಬಡಾವಣೆಗಳಲ್ಲಿ ಚೈತನ್ಯ ದೀಪ ಬೆಳಗಿಸಿದ ವರ್ಗ ವರ್ಣದ ವಿಷದ ಹಾವಿಗೆ ಹೆಡಮುರಿಗೆ ಕಟ್ಟಿದ […]

Back To Top