ಕಾವ್ಯಯಾನ

ಕಾವ್ಯಯಾನ

ಅಂತಿಮಯಾತ್ರೆ ಹರೀಶ ಕೋಳಗುಂದ ಉಸಿರು ಬಿಗಿ ಹಿಡಿದಿದೆ, ಎದೆಬಡಿತ ಕ್ಷೀಣ. ಕೆಲವೇ ಸಮಯ ಬಾಕಿ. ಪಸೆಯಾರಿದ ಗಂಟಲಿಗೆ ಕಡೆಯ ಬಯಕೆ, ಗುಟುಕು ಗಂಗಾಜಲ ಮಾತ್ರ. ಮತ್ತೇನೂ ಬೇಡ. ಉರಿವ ಹಣತೆಯ ಸೊಡರು ಬೀಸುಗಾಳಿಗೆ ತುಯ್ದಾಟ….! ಕಾಲ ಮೀರುತ್ತಿದೆ, ಸಾಸಿವೆಯ ಸಾಲಕ್ಕೆ ಹೋದವಳು ಇನ್ನೂ ಮರಳಿಲ್ಲ, ದಾರಿಯಲಿ ಬುದ್ಧ ಸಿಕ್ಕಿರಬೇಕು. ಕಾಲವಶದಲ್ಲಿ ಸಾವಿತ್ರಿಯೂ ಲೀನ. ಪುರುದೇವನ ವರ್ತಮಾನವೂ ಇಲ್ಲ. ಕಣ್ಣು ಕವಿಯುತ್ತಿದೆ, ಚಾಚಿ ಮಲಗಿದ ದೇಹ ಅಸಾಧ್ಯ ಭಾರ. ಸುತ್ತ ಕತ್ತಲೆಯ ಕೂಪ, ಏಕಾಂಗಿ ಭಾವ, ಹಠಾತ್ತನೆ ಯಾರದೋ […]

ಕಾವ್ಯಯಾನ

ಶಾಯರಿಗಳು ಮರುಳಸಿದ್ದಪ್ಪ ದೊಡ್ಡಮನಿ (ಕೂದಲಾ)                                                                            ನಿನ್ನ ಕೂದಲ ಹಾಂಗ ಹಗೂರಕ ನಿನ್ನ ಗಲ್ಲಕ್ಕ ಹಾರಿಕೊತ ಮುತ್ತಿಡತಾವು ಅವು ಎಷ್ಟು ಪುಣ್ಯಾ ಮಾಡ್ಯಾವು. ನೀ ಬಾಚಿ ಕಟ್ಟಿದ ಮುಡಿ ಬಿಚ್ಚಿ ಜಾಡಿಸಿದರ ಹುಚ್ಚು ಬಿಡಬೇಕು ಅವನ್ನೋಡಿದ ಹರೇದ ಹುಡುಗರಿಗೆ ಹುಚ್ಚು ಹಿಡಿ ಬೇಕು.  ಕಟ್ಟಿದ ಮುಡಿ ಬಿಚ್ಚಿ ಜಾಡಿಸಿದರ ನವಿಲು ಕುಣದಂಗಕ್ಕೈತಿ ನವಿಲಿನ ಕುಣತಕ್ಕ ನನಗರ ಒಂದ್ ನಮೂನಿ ಆಕ್ಕೈತಿ. ನಿನ್ನ ಮುಂಗುರುಳು ಎಷ್ಟು ಚಂದ ಮುಖದ ಮ್ಯಾಗ ಹಾರಾಡತಾವು ಅವುಕ ಸಲಿಗಿ ಕೊಟ್ಟಿ ಅಂತ ಕಾಣತೈತಿ ಎಲ್ಲೆಂದ್ರಲ್ಲಿ […]

ಬಸವ ಜಯಂತಿ

ಬಸವ ಜಯಂತಿ ಜಾತಿಯನ್ನು ೧೨ ನೆಯ ಶತಮಾನದಲ್ಲಿಯೇ ಕಾಯಕ ಸೂಚಕವಾಗಿಸಿದ ಬಸವಣ್ಣ..! ನಾಳೆ ದಿನಾಂಕ ೨೬ ರಂದು ಬಸವಣ್ಣನವರ ಜಯಂತಿ. ಆ ನೆಪದಲ್ಲಿ ಈ ಲೇಖನ… ಬಸವೇಶ್ವರ ( ಬಸವ ಅಥವಾ ಬಸವಣ್ಣನವರು) ಲಿಂಗಾಯತ ಧರ್ಮದ ಸ್ಥಾಪಕರು. ಬಸವಣ್ಣನವರು ೧೨ ನೆಯ ಶತಮಾನದ ಭಕ್ತಿ ಪಂಥದ ಪ್ರಮುಖರಲ್ಲಿ ಒಬ್ಬರು. ಬಸವಣ್ಣನವರು ಮತ್ತು ಶಿವಶರಣರಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಚೆನ್ನಬಸವಣ್ಣ ಮೊದಲಾದ ನೂರಾರು ಶರಣರು ವಚನಗಳ ಮೂಲಕ ಭಕ್ತಿಪಥ ಮತ್ತು ಜೀವನದ ಬಗ್ಗೆ ಹೊಸ ದೃಷ್ಟಿ ಬೀರಿದರು… ಬಸವಣ್ಣನವರು ೧೧೩೪ […]

ಅನುವಾದ ಸಂಗಾತಿ

ಇನ್ನಿಲ್ಲ ಕ್ಲೀಷೆಗಳು ಮೂಲ: ಆಕ್ತೇವಿಯೋ ಪಾಜ಼್  ಕನ್ನಡಕ್ಕೆ: ಮೇಗರವಳ್ಳಿ ರಮೇಶ್ ಸು೦ದರ ಮುಖಸೂರ್ಯನಿಗೆ ದಳ ಬಿಚ್ಚಿ ಕೊಳ್ಳುವ ಡೈಸಿ ಹೂವಿನ ಹಾಗೆನೀನೂ ತೆರೆ ನಿನ್ನ ಮುಖವನ್ನು ನನಗೆಪುಟಗಳನು ತೆರೆದ೦ತೆ ಪತ್ರಿಕೆಯ ಒಳಗೆ. ಸಮ್ಮೋಹಕ ಮುಗುಳು ನಗೆಯಓ, ನಿಯತಕಾಲಿಕೆಯ ಸು೦ದರಿಮರುಳಾಗಿ ಬಿಡುವರು ಮ೦ದಿ ನಿನ್ನ ಮೋಡಿಗೆ. ಎಷ್ಟು ಕವನಗಳು ಹುಟ್ಟಿಕೊ೦ಡಿಹವು ನಿನಗಾಗಿ?ಎಷ್ಟು ಜನ “ಡಾ೦ಟೆ” ಗಳು ಬರೆದಿಹರು ನಿನಗಾಗಿ?ಓ, ಬಿಯಾಟ್ರಿಸ್,ಕಾಡುವ ನಿನ್ನ ಮಾಯೆಸೃಜಿಸುವುದು ಭ್ರಮೆ. ಆದರಿ೦ದು, ಮತ್ತೊ೦ದು ಕ್ಲೀಷೆಯಲಿಬರೆಯುವುದಿಲ್ಲ ಈ ಕವಿತೆ ನಿನಗಾಗಿಇಲ್ಲ, ಇನ್ನಿಲ್ಲ ಕ್ಲೀಷೆ. ಯಾರ ಸೌ೦ದರ್ಯಅವರ […]

ಅನುವಾದ ಸಂಗಾತಿ

ನಿನ್ನ ಹಾಡು ಮೂಲ: ರಬೀಂದ್ರ ನಾಥ ಟಾಗೋರ್ ಕನ್ನಡಕ್ಕೆ: ಡಾ.ಪ್ರಸನ್ನ ಹೆಗಡೆ ನೀ ಹಾಡುವಾ ಪರಿಯ ನಾನರಿಯೆ ನನ್ನೊಡೆಯಾ ಬೆರಗಿನಿಂ ನಾ ಕುಳಿತು ಪೇಳ್ವೆ ಜಿಯಾ,,,ಪೇಳ್ವೆ ಜಿಯಾ ನಿನ್ನ ಹಾಡಿನಾ ಕಿರಣ ಬೆಳಗುತಿದೆ ಜಗವನ್ನು ಬಾನಿನಿಂ ಬಾನಿಗೆ ಹರಿಸಿ ಉಸಿರು ಆ ಹಾಡಜೀವಸೆಲೆ ಅಡೆತಡೆಯ ಪುಡಿಮಾಡಿ ದೈರ್ಯದಿಂ ಮುಂದಕ್ಕೆ ನುಗ್ಗುತಿಹುದು….ನುಗ್ಗುತಿಹುದು ನಿನ್ನ ಹಾಡಕೂಡೆಂದು ಕೂಗುತಿದೆ ಎನ್ನೆದೆಯು ಆದರದು ಬರಿವ್ಯರ್ಥ ದ್ವನಿಗಾಗಿ ನಾನು ಒರಲುತಿಹೆನು ನಾ ನುಡಿವೆ ಬರಿನುಡಿಯ ಹಾಡಾಗ ಆ ನುಡಿಯು ಕೈಚೆಲ್ಲಿ ಕಣ್ಣೀರ ಸುರಿಸುತಿಹೆನು…ಸುರಿಸುತಿಹೆನು ಅಹ! […]

ಕಾವ್ಯಯಾನ

ಗಝಲ್ ಎ. ಹೇಮಗಂಗಾ ಸ್ಫಟಿಕದಂತೆ ಸದಾ ನಿರ್ಮಲ ಹೃದಯದವನು ನನ್ನ ರಾಜಕುಮಾರ ಕನಕದಂತೆ ಸದಾ ಹೊಳೆಯುವ ರೂಪದವನು ನನ್ನ ರಾಜಕುಮಾರ ಸವಿಮಾತಿನಲಿ ಮೊಗ್ಗು ಮನಸ ಅರಳಿಸಿದವನು ನನ್ನ ರಾಜಕುಮಾರ ಕಿರುನಗೆಯಲಿ ಮೋಡಿ ಮಾಡುತ ಚಿತ್ತ ಕಲಕಿದವನು ನನ್ನ ರಾಜಕುಮಾರ ಬೆಂಗಾಡಾದ ಬಾಳಲಿ ಚೈತ್ರ ಮೂಡಿಸಿದವನು ನನ್ನ ರಾಜಕುಮಾರ ಒಲವಿನಾರಾಧನೆಯೇ ತಪವೆಂದು ತೋರಿದವನು ನನ್ನ ರಾಜಕುಮಾರ ಸಪ್ತಪದಿಯಲಿ ಒಂದಾಗಿ ಸಗ್ಗವನೇ ಸೃಜಿಸಿದವನು ನನ್ನ ರಾಜಕುಮಾರ ಮಧುರ ಮಿಲನದ ನಶೆಯಲಿ ಮೈ ಮರೆಸಿದವನು ನನ್ನ ರಾಜಕುಮಾರ ತೋಳಬಂಧನದಿ ಪಿಸುಮಾತುಗಳ ಉಸುರಿದವನು […]

ಅನುವಾದ ಸಂಗಾತಿ

ಮೂಲ: ನಿಝಾರ್ ಖಬ್ಬಾನಿ ಕನ್ನಡಕ್ಕೆ: ಡಾ.ಗೋವಿಂದ ಹೆಗಡೆ ಆ ಮೀನಿನಂತೆ ನಾನು ಚುರುಕು ಮತ್ತು ಹೇಡಿ ಪ್ರೇಮದಲ್ಲಿ ನೀನು ನನ್ನಲ್ಲಿನ ಸಾವಿರ ಹೆಣ್ಣುಗಳ ಸಾಯಿಸಿದೆ ಮತ್ತು-ರಾಣಿಯಾದೆ ಚಿಂತಿಸಬೇಡ ನನ್ನ ಮಧು ಖನಿಯೇ ನೀನಿದ್ದೀ ನನ್ನ ಕವಿತೆಗಳಲ್ಲಿ ನನ್ನ ಪದಗಳಲ್ಲಿ ವರುಷಗಳು ಉರುಳಿ ಮುದಿಯಾಗಬಹುದು ಆದರೆ ನನ್ನ ಪುಟಗಳಲ್ಲಿ ನೀನು ಚಿರ ಯೌವನೆ ಈಗಲೂ ನೀನು ನಾನು ಹುಟ್ಟಿದ ದಿನವನ್ನು ಕೇಳುವೆ ಹಾಗಿದ್ದರೆ ಬರೆದುಕೋ-ನಿನಗೆ ಗೊತ್ತಿಲ್ಲದಿರುವುದನ್ನು ಎಂದು ನೀನು ಪ್ರೇಮವನ್ನು ಅರುಹಿದೆಯೋ ಅಂದೇ ನನ್ನ ಜನ್ಮದಿನ! ***********

ಅಪ್ಪಟ ಕನ್ನಡದ ವಿನಯ

ಅಪ್ಪಟ ಕನ್ನಡದ ವಿನಯ ಮಲ್ಲಿಕಾರ್ಜುನ ಕಡಕೋಳ . ನಿನ್ನೆ ವರನಟ ಡಾ. ರಾಜಕುಮಾರ ಜನುಮದಿನ (೨೪.೦೪.೧೯೨೯). ಅಕ್ಷರಶಃ ಅವರು ಕನ್ನಡ ರಂಗಭೂಮಿಯ ಪ್ರಾತಃಸ್ಮರಣೀಯರು. ಅದರಲ್ಲೂ ಕನ್ನಡ ವೃತ್ತಿರಂಗಭೂಮಿಯ ಅನನ್ಯ ಕಾಣ್ಕೆ. ಕನ್ನಡ ಹೇಗೆ ಮಾತಾಡಬೇಕು, ಪದ – ಅಕ್ಷರ ಹೇಗೆ ಉಚ್ಛರಿಸಬೇಕು, ಮಾತೆಂಬುದು ಜೋತಿರ್ಲಿಂಗ, ಮುತ್ತಿನಹಾರ, ಎಂಬ ಕಸ್ತೂರಿಕನ್ನಡ ಬಾಳಿದವರು. ಅಷ್ಟುಮಾತ್ರವಲ್ಲ ಅಭಿನಯವೆಂದರೆ, ನಟನಾಗುವುದೆಂದರೆ ವಿನಯಶೀಲ ನಾಗುವುದೆಂಬುದನ್ನು ಬದುಕಿ ತೋರಿದವರು. ತೋರಿಕೆಯ ಬದುಕಲ್ಲ. ಓದಿದ್ದು ನಾಲ್ಕನೇ ಈಯತ್ತೆ. ರಂಗಬದುಕಿನ ಓದು ಸಾಗರೋಪಾದಿ. ಬಾಲ್ಯದಲ್ಲಿ ಉಂಡುಡಲು ಅವರಿಗೆ ಯಥೇಚ್ಛವಾಗಿದ್ದುದು […]

ಕಾವ್ಯಯಾನ

ಶಂಕಿತರು-ಸೊಂಕಿತರು ನಾಗರಾಜ ಮಸೂತಿ.. ಹೆಜ್ಜೆ ಗುರುತುಗಳು ಮಾಯವಾಗಿ ಕಂಗಾಲದ ರಸ್ತೆಗಳು, ಮೇಲ್ಮುಖವಾಗಿ ಮುಗಿಲನ್ನೆ ದಿಟ್ಟಿಸುವ ಗಿಡಮರಗಳು, ಗಿಜಗೂಡುವ ಸರಕಾರಿ ಕಛೇರಿಗಳ ಖಾಲಿ ಮನಸ್ಥಿತಿಯ ಗೋಡೆಗಳು, ಬೆಳಕು ಕಾಣದೆ ಕತ್ತಲಾವರಿಸಿದ ದವಾಖಾನ ಕೋಣಿಗಳು, ಫಿನಾಯಿಲ್ ವಾಸನೆ ಆವರಿಸಿಕೊಂಡು ತಳತಳ ಅನ್ನುತ್ತಿವೆ ಅಮವಾಸ್ಯೆ ಪೂಜೆಗೆ ಸಿದ್ಧವಾದಂತೆ, ಓಣಿಯ ಬೀದಿಗಳೆಲ್ಲ ಲೊಚುಗುಟ್ಟುತ್ತಿವೆ ಸಿಂಗಾರಗೊಂಡು, ಗಟಾರಗಳೆಲ್ಲ ಕಂದಮ್ಮಗಳಂತೆ ಪೌಡರ್ ಬಳಿದುಕೊಂಡು ವಧು ವರರ ವೇದಿಕೆಗೆ ಸಿದ್ಧವಾದಂತಿವೆ ಸಂಜೆ ಹೊತ್ತಿಗೆ ಕತ್ತಲೆ ಮೆತ್ತಿಕೊಂಡ ಆವರಣಕ್ಕೆಲ್ಲ ಬೀದಿ ದೀಪಗಳು ಬೆಳಕು ಹರಿಸಿ, ಕಛೇರಿ ಕಟ್ಟಡಗಳು, ಲೈಟ್ […]

ಕಾವ್ಯಯಾನ

ಯಾತ್ರಿಕ ವಿಭಾ ಪುರೋಹಿತ್ ಜಗದೆದೆಯ ತುಂಬ ಹತ್ತಿ ಉರಿಯುತ್ತಿದೆ ಬತ್ತಲಾರದ ಜ್ವಾಲೆ. ಹಾದಿ ಮುಗಿಯುವುದಿಲ್ಲ ಮುಗಿದರದು ಹಾದಿಯಲ್ಲ ! ಯಾತ್ರೆ ಮುಂದುವರೆದಿದೆ ಹೊಸ ಹೊಸ ದೇಶ ಪ್ರದೇಶವನು ತೆಕ್ಕೆಯೊಳಗೆ ನುಂಗಿದೆ. ನೂರು,ಸಾವಿರ,ಲಕ್ಷಗಳ ದಾಟುತ್ತಲಿದೆ ರಕ್ತಬೀಜಾಸುರನ ನೆತ್ತರಿನ ಹನಿಗಳಿಗಿಂತ ವಿಷಾಣು ಹರಡುತ್ತ,ಹಬ್ಬುತ್ತ ರಕ್ಕಸನಂತೆ ಮೀರಿ ಬೆಳೆಯುತ್ತಲಿದೆ ಮನುಕುಲವ ಕಂಗೆಡಿಸುತ್ತಿದೆ. ಹೊರಗಿಂದ ಬಂದವರು ಸುಮ್ಮನೆ ಬರಲಿಲ್ಲ ಇಂದಿಗೂ ಹಂಚುತ್ತಲೇ ಇರುವರು ಬೆನ್ನು ಹಿಂದೆ ನಿಂತು ಚೂರಿ ಹಾಕಿದರು ಕಾಡುಪಾಪದ ರುಚಿಗೆ ಸೋತವರು ಸಂಜೆ ಹಕ್ಕಿಯ ದನಿಗೆ ಕಿವುಡರಾದವರು ನೋವು ಕೇಕೆ […]

Back To Top