ಕಾವ್ಯಯಾನ

ಕಾವ್ಯಯಾನ

ನೀನಿಲ್ಲದ ಈ ಹೊತ್ತು ಬಿದಲೋಟಿ ರಂಗನಾಥ್ ದೇಶ ಸುಡುವ ಕಣ್ಣುಗಳ ನಡುವೆ ನಿನ್ನ ಹೆಜ್ಜೆಗಳ ಸವಾರಿ ಹೋಗುತ್ತಲೇ ಇದೆ ಬಿಸಿಲು ಬೇಗೆಗೆ ಸೊಪ್ಪಾಕದೆ ಬರೆದ ಸಂವಿಧಾನ ಕರುಳು ನೋಯುತ್ತಿದೆ ಸೂಜಿಗೆ ದಾರ ಸೇರಿಸಿ ನಾಟಾಕುವ ಕೈಗಳಿಗೆ ಹೆದರಿ ನಿನ್ನುಸಿರನು ಸೇರಿಸಿ ಬರೆದ ಬೇರು ಸಂವಿಧಾನದಲಿ ನಿನ್ನ ನಿನ್ನವರ ಕನಸುಗಳು ಆಯಾಸವಿಲ್ಲದೆ ಆಡುತ್ತಿದ್ದವು ಆದರೇ ಕತ್ತರಿ ತೋರಿಸುತ್ತಲೇ ಇವೆ ಹಿಡಿಗಾತ್ರದ ಮನಸುಗಳು ಬರೆದ ಸಂವಿಧಾನದ ಪುಟಗಳ ಚೂರು ಮಾಡಲು ಬೆವರಲೇ ಬೆಂದ ನಿನ್ನ ಜನರ ಆಶಾಗೋಪುರಕೆ ನೀನೆ ಬೇಲುದಾರ […]

ಪ್ರಸ್ತುತ

ದಲಿತ ಸೂರ್ಯ ದಲಿತ ಸೂರ್ಯ..ವಿಶ್ವಮಾನವ… ಜೈಭೀಮ….!              ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ ಒಂದು ಗ್ರಂಥಾಲಯ ಕಟ್ಟಿಸಿದರೆ ಲಕ್ಷಾಂತರ ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ.” …………….ಡಾ!!ಬಿ.ಆರ್ ಅಂಬೇಡ್ಕರ್ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ವ್ಯಕ್ತಿತ್ವವಾಗಿ ಪರಿವರ್ತನೆಗೊಳ್ಳುವ ಸಮಯ ಬಹು ಕಷ್ಟದ್ದು.ಜೀವನದ ಪ್ರತಿಕ್ಷಣದಲ್ಲೂ ಏಳುಬೀಳುಗಳನ್ನು ಕಂಡು,ನೋವಿನ ಅಗ್ನಿ ಕುಂಡದಲ್ಲಿ ಬೆಂದರೂ,ಪುಟಕ್ಕಿಟ್ಟ ಚಿನ್ನದಂತೆ ಪ್ರಖರವಾದ ಪ್ರಕಾಶ ಹೊರಹೊಮ್ಮಿಸುತ್ತಿರುವುದು ಪ್ರತಿಭೆಯ ಆಗರದ ಪ್ರತಿಮೆಯೆಂದರೆ ತಪ್ಪಾಗದು.ಇಂದು ನಾವೆಲ್ಲ ಭವ್ಯ ಭಾರತದ ಶ್ರೇಷ್ಠ ನಾಯಕರಲ್ಲಿ ಅಗ್ರಸ್ಥಾನದಲ್ಲಿ  ಶ್ರೀ ಜಗಜ್ಯೋತಿ ಬಸವಣ್ಣನವರು  ಶ್ರೀ ಮಹಾತ್ಮಗಾಂಧೀಜಿ, ಡಾ!!ಬಿ.ಆರ್.ಅಂಬೇಡ್ಕರ್….ತ್ರಿಮೂರ್ತಿಗಳು ….ದೇಶ ವಿದೇಶಗಳಲ್ಲಿ […]

ಕಾವ್ಯಯಾನ

ಮೂಕ ಭಾರತದ ನಾಯಕ ನಾಗರಾಜ ಹರಪನಹಳ್ಳಿ ಅಂಬೇಡ್ಕರ ಅಂಬೇಡ್ಕರ ದುಡಿವ ಜನಗಳ ಧ್ವನಿಯು ನೀನೋ || ಪಲ್ಲವಿ|| ನನ್ನ ಅವ್ವಂದಿರ ಅಕ್ಷರದ ಬೆಳಕು ನೀನೋ ಬಡ ಭಾರತದ ಬಾಬಾ ಸಾಹೇಬ ನೀನೋ ಜಾತಿವಾದಿಗಳ ಕೈಯ ಬೊಗಸೆ ಕೆಂಡ ನೀನೋ ಮನುಷ್ಯವಾದಿಗಳ ಬದುಕ ಬೆಳದಿಂಗಳೊ ನೀನೋ || ಅಂಬೇಡ್ಕರ ಅಂಬೇಡ್ಕರ ದುಡಿವ ಜನಗಳ ಧ್ವನಿಯು‌‌ ನೀನೋ|| ಬಡವರ ಪಾಲಿನ ಬೆಳಕು ನೀನೋ ಬಹುತ್ವ ಭಾರತವನ್ನು ತಿಳಿದವ ನೀನೋ ಮನುವಾದಿಗಳ ಕಣ್ಣು ತೆರೆಸಿದವ‌ ನೀನೋ ಬ್ರಿಟಿಷರ ಮನಮನ‌ ಗೆದ್ದವ ನೀನೋ […]

ಕಾವ್ಯಯಾನ

ಬಾಬಾಸಾಹೇಬ ತಾವು ದೇವರಾದರೆ! ಡಿ‌. ಎಮ್.ನದಾಫ್. ಗುಲಾಮಗಿರಿಯನ್ನು ಬುಡ ಸಮೇತ ಕಿತ್ತು ಅಜ್ಞಾನ, ಅವಮಾನಗಳನ್ನು ಧೈರ್ಯದಿಂದ ಒದ್ದು ದಿಕ್ಕಿಲ್ಲದವರಿಗೆ ಧವಳ ಕೀರ್ತಿ ತಂದುಕೊಟ್ಟು ಮಾನವತೆಯನ್ನು ಮರಳಿ ಸ್ಥಾಪಿಸಿದ ಅಂಬೇಡ್ಕರ್ ದೇವರಾದಾಗ ನನ್ನೆದೆ ಝಲ್ಲೆನ್ನುತ್ತದೆ. ಯಜ್ಞ-ಯಾಗ ಪ್ರಯಾಗಗಳನ್ನೆಲ್ಲ ಪ್ರಜ್ಞೆ, ಕರುಣೆ ಶೀಲದಲ್ಲಿ ಕಂಡವನೇ ಸ್ವರ್ಗ,ಮುಕ್ತಿ,ಬಂಧನಗಳನ್ನೆಲ್ಲ ಜ್ಞಾನ,ಸಮಾನತೆ,ಸೇವೆಯಲ್ಲಿ ಮಿಂದವನೇ ಮತ್ತೆ ನೀ ದೇವರಾದಾಗ ಬಾಯಿಗೆ ಉಗುಳುಬಟ್ಟಲು,ಬಾರಿಗೆ ನೆನಪಾಗುತ್ತವೆ. ಶಾಸ್ತ್ರ, ಪುರಾಣ ಆಗಮಗಳಿಗೆ ಬೀಗ ಹಾಕಿ ಶತಶತಮಾನಗಳ “ಕರ್ಮಫಲ”ಗಳ ನೊಗ ಕಿತ್ತು ಹಾಕಿ ಪಟ್ಟ ಭದ್ರರಿಗೆ ಬೆಟ್ಟದಂಥ ಸವಾಲಾದವನೇ ನೀ ದೇವರಾಗಬೇಡ […]

ಕಾವ್ಯಯಾನ

ದಲಿತ ಚೇತನ ಮನುಶ್ರೀ ಸಿದ್ದಾಪುರ ಓ ದಲಿತರ ಮಹಾಚೇತನವೇ ಇಗೋ ನಿನಗೆನ್ನಯ ನಮನ ಕಷ್ಟ-ಕಾರ್ಪಣ್ಯಗಳ ಬಳ್ಳಿಯಲಿ ಅರಳಿ ನಗುವ ಚೆಲ್ಲಿದೆ ಗುಲಾಬಿ ಯಂತೆ. ನರನಾಡಿಗಳ ಬತ್ತಿಯಾಗಿ ತಾನುರಿದು ಸುತ್ತಲೂ ಜ್ಞಾನದ ಬೆಳಕು ಹರಡಿದೆ. ಶೋಷಿತರ ದನಿಗೆ ಮೂಕನಾಯಕನಾಗಿ ಸೆಟೆದು ನಿಂತೆ ದೀನ ದಲಿತರ ಬದುಕಿನ ಉದ್ದಾರಕೆ. ಕಗ್ಗಲ್ಲಿನಲಿ ಮೂಡಿದೆ ಉಜ್ವಲ ಮೂರ್ತಿಯಾಗಿ ಕೂಗಿ ಕರೆದು ತೋರಿಸಿದೆ ಮಹಾಮನೆಯ ಬಿರುಕನು ಶಿಕ್ಷಣ ಸಂಘಟನೆ ಹೋರಾಟದ ತ್ರಿಪಟಿಕ ಸೂತ್ರ ದಲಿತರ ಬದುಕಿನ ಪಾವನದಿ ಸಾಗಿಬಂದ ಮಹಾಪಾತ್ರ. ಹೊನ್ನ ಚರಿತೆಯ ಮಹಾಪುರುಷರಲಿ […]

ಕಾವ್ಯಯಾನ

ಅಂಬೇಡ್ಕರ್ ಸ್ವಗತ ಮಧುಕುಮಾರ ಸಿ ಎಚ್ ಯಾವುದು ಆಗಬಾರದೆಂದು ನಾ ಎಣಿಸಿದೆನೋ ಅದು ಆಗಿಯೇ ತೀರಿದೆ ಅದಕ್ಕಾಗಿ ವಿಷಾದಿಸುತ್ತೇನೆ. ವ್ಯಕ್ತಿಪೂಜೆ ಬೇಡವೆಂದ ಮಾತು ಹಳ್ಳ ಹಿಡಿದು ಇಲ್ಲಿ ಈ ದಿನ ಪ್ರತಿಮೆಗೆ ಹಾರ ತುರಾಯಿ ಹಾಕಿ ಜೈಕಾರ ಮೊಳಗಿಸಿ ಅಭಿಮಾನ ತೋರುವ ಆಚರಣೆ ವಿಜೃಂಭಣೆಯಿಂದಲೇ ನಡೆದಿದೆ. ನಾಲ್ಕು ತಿಂಗಳು ಕಳೆದ ಬಳಿಕ ಅಲ್ಲಲ್ಲಿ ‘ಗಣೇಶನ’ ಕೂರಿಸಿ ಮತ್ತದೇ ಹಾರ ತುರಾಯಿ ಹಾಕಿ ಜೈಕಾರ ಮೊಳಗಿಸಿ ಕುಡಿದು ಕುಣಿದು ಕುಪ್ಪಳಿಸುವುದು ತಪ್ಪದೇ ನಡೆಯುವುದಿದೆ. ಎಡ-ಬಲ ಎರಡೆರಡು ಹೋಳಾಗಿ ಒಳಗೊಳಗೊಂದು […]

ಕಾವ್ಯಯಾನ

ಬಾಬಾರವರ ನೆನಪಲ್ಲಿ ಹೆಚ್ ರಾಠೋಡ ಬಾಬಾ ನಿನ್ನ ನೆರಳಿನಲ್ಲಿಭರತಖಂಡ ನಡೆದಿದೆ ಶ್ರೇಷ್ಠ ಭಾರತದೇಶ ಎಂಬ ಹೆಗ್ಗಳಿಕೆಯು ಪಡೆದಿದೆ ಭರತ ಭೂಮಿ ನಿತ್ಯ ನಿನ್ನ ನೆನೆದು ಹೆಜ್ಜೆ ಇಡುತ್ತಿದೆ ಪ್ರತಿ ಹೆಜ್ಜೆ ಹೆಜ್ಜೆಯಲ್ಲೂ ಧನ್ಯ ಸಾರ್ಥಕತೆ ಮೆರೆದಿದೆ ನೀನುಹಾಕಿಕೊಟ್ಟ ದಾರಿಯಲ್ಲೇ ಇಂದು ದೇಶ ಸಾಗಿದೆ ನಿನ್ನ ಜ್ಞಾನ ಪಾಂಡಿತ್ಯಕ್ಕೆ ವಿಶ್ವವೇ ತಲೆದೂಗಿದೆ ಸಮಾನತೆಯ ಭಾವದಲ್ಲಿ ಸಂವಿಧಾನ ರಚಿಸಿದೆ ಶ್ರೇಷ್ಠ ಸಂವಿಧಾನ ರಚಿಸಿದ ಶಿಲ್ಪಿ ಎಂದೆನಿಸಿದೆ ಭಾರತೀಯರ ಎದೆಯಲ್ಲಿ ನಿನ್ನ ಪ್ರತಿಮೆ ನಿಂತಿದೆ ಅಂಬೇಡ್ಕರ್ ಎಂಬ ನಾಮ ಅಜರಾಮರವಾಗಿದೆ ಭೀಮನೆಂಬ […]

ಕಾವ್ಯಯಾನ

ಬಡವರ ಆಕರ ರಾಹು ಅಲಂದಾರ ಓ ಬಡವರ ಆಕಾರ ದೀನ ದಲಿತರ ಸಾಹುಕಾರ ಜಗಜ್ಯೋತಿ ಅಂಬೇಡ್ಕರ್ ಹಾಕುವೆ ನಿಮಗೆ ನಮಸ್ಕಾರ ಬಡವರ ಉತ್ತರಕ್ಕಾಗಿ ದುಡಿದೆ ದೀನ ದಲಿತರ ಹಿತಕ್ಕಾಗಿ ನಡೆದೆ ಸಮಾನತೆಯನ್ನೇ ನುಡಿದೆ ಜನತೆಯ ಏಳಿಗೆಗಾಗಿ ಮಡಿದೆ ರಚಿಸಿದೆ ನೀ ಸಂವಿಧಾನ ಆಯಿತು ಸರ್ವರಿಗೂ ಅನುದಾನ ಕನಸಿಟ್ಟೆ ನೀ ಎಲ್ಲರಲ್ಲೂ ಸಮಾನ ನಮಗೆಲ್ಲಾ ನೀ ಆಶಾಕಿರಣ ಉಳಿದೆ ಎಲ್ಲರ ಮನದಲ್ಲಿ ಸಮಾನತೆಯನ್ನೋ ಬೆಳಕು ಚೆಲ್ಲಿ ನೆನಪಿಸುವರು ಜನತೆ ಬಾಳಲ್ಲಿ ಹುಟ್ಟಿ ಬಾ ಇನ್ನೊಮ್ಮೆ ಜಗದಲ್ಲಿ **********

ಪ್ರಸ್ತುತ

ಡಾ.ಬಿ.ಆರ್.ಅಂಬೇಡ್ಕರ್..! ಎಲ್ಲಾ ಜನಾಂಗೀಯ ನಾಯಕ ಮತ್ತು ಸರ್ವರ ಅದರಲ್ಲೂ ದಲಿತರ ಏಳಿಗೆಗಾಗಿ ದುಡಿದ ಡಾ.ಬಿ.ಆರ್.ಅಂಬೇಡ್ಕರ್..! ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ. ಆ ನಿಮಿತ್ತವಾಗಿ ಈ ಪುಟ್ಟ ಲೇಖನ… ಅಂದು ಆ ಬಾಲಕ ಅಸ್ಪೃಶ್ಯತೆ, ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಇವತ್ತು ಈ ಅಖಂಡ ಭಾರತದಲ್ಲಿ ಮರೆಯಲಾರದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲವೇನೋ? ಆ ಬಾಲಕ ಯಾರೆಂದು ಕ್ಷಣಮಾತ್ರದಲ್ಲಿ ಊಹಿಸಬಹುದು. ಅದೇ ಡಾ. ಬಿ.ಆರ್. ಅಂಬೇಡ್ಕರ್. ಈ ಹೆಸರು ಹೇಳುತ್ತಿದ್ದಂತೆಯೇ ಮೈ ರೋಮಾಂಚನಗೊಳ್ಳುತ್ತದೆ… ಭೀಮರಾವ್ ರಾಮ್‍ಜಿ ಅಂಬೇಡ್ಕರ್ […]

ಪುಸ್ತಕ

ಅಸಹಾಯಕ ಆತ್ಮಗಳು ಸಣ್ಣ ಕಥೆಗಳು ವೇಶ್ಯಾವಾಟಿಕೆಯ ನರಕದ ಬದುಕಿಗೆ ಯಾವ ಹೆಣ್ಣು ಮಗಳೂ ಸ್ವಇಚ್ಚೆಯಿಂದ ಅಡಿಯಿಡುವುದಿಲ್ಲ. ಬದುಕಿನ ಹಲವು ಅನಿವಾರ್ಯ ಘಟನೆಗಳು ಮತ್ತು ಅವರುಗಳ ಬದುಕಿನಲ್ಲಿ ಬರುವ ಅನಿರೀಕ್ಷಿತ ವ್ಯಕ್ತಿಗಳು ಅವರನ್ನು ವೇಶ್ಯಾವಾಟಿಕೆಯ ಕೂಪದೊಳಗೆ ಬೀಳುವಂತೆ ಮಾಡುತ್ತಿವೆ. ಇಂತಹ ಹತ್ತಾರು ಹೆಣ್ಣುಮಕ್ಕಳನ್ನು ಲೇಖಕರು ಖುದ್ದಾಗಿ ಭೇಟಿಯಾಗಿ ಅವರ ಬಾಯಿಂದಲೇ ಕೇಳಿ ತಿಳಿದ ಅವರ ಬದುಕಿನ ಕರುಣಾಜನಕ ಕತೆಗಳೇ ಈ ಪುಸ್ತಕದ ಒಳಗಿರುವ ಆತ್ಮಗಳು. ಪ್ರಿಯರೆ,ನನ್ನ ‘ಅಸಹಾಯಕ ಆತ್ಮಗಳು’ my lang ನಲ್ಲಿ e-book ರೂಪದಲ್ಲಿ ಪ್ರಕಟವಾಗಿದೆ.ಬೆಲೆ ಕೇವಲ99=00 […]

Back To Top