ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಹಸಿರಿನೆಡೆಗೆ ನಮ್ಮನ್ನು ನಡೆಸುವ ‘ಹೂ ಹಸಿರಿನ ಮಾತು’ ಹೂ ಹಸಿರಿನ ಮಾತುಲೇಖಕಿ : ಡಾ.ಎಲ್.ಸಿ.ಸುಮಿತ್ರಾಪ್ರಕಾಶಕರು : ಅಂಕಿತ ಪುಸ್ತಕ, ಬೆಂಗಳೂರುಪ್ರಕಟಣಾ ವರ್ಷ :೨೦೧೨ಪುಟಗಳು : ೯೬ ಬೆಲೆ : ರೂ.೧೨೦ ಹಿರಿಯ ಲೇಖಕಿ ಡಾ.ಎಲ್.ಸಿ.ಸುಮಿತ್ರಾ ಅವರ ‘ಹೂ ಹಸಿರಿನ ಮಾತು’ ಸಾರ್ವಕಾಲಿಕ ಪ್ರಸ್ತುತಿಯುಳ್ಳ ಒಂದು ಕೃತಿ.  ಎಲ್ಲೆಲ್ಲೂ ಕಾಡು ಕಡಿದು, ಗುಡ್ಡಗಳನ್ನು  ಅಗೆದು, ಗದ್ದೆಗಳನ್ನು ಮುಚ್ಚಿ ಕಾಂಕ್ರೀಟು ಕಾಡುಗಳನ್ನಾಗಿ ಪರಿವರ್ತಿಸಿ ನಾವು ಪ್ರಕೃತಿಯ ಮುನಿಸಿಗೆ  ತುತ್ತಾಗುತ್ತಿರುವ ಇಂದು ಎಚ್ಚೆತ್ತುಕೊಳ್ಳಬೇಕಾದ ಕಾಲ. ಬಂದಿರುವ ಇಂದಿನ ಸಂಧರ್ಭದಲ್ಲಿ ಪರಿಸರದ ಬಗ್ಗೆ […]

ಅನುವಾದ ಸಂಗಾತಿ

ಬಾವಿ ಕಟ್ಟೆ ಕನ್ನಡ ಮೂಲ: ಸ್ಮಿತಾ ಅಮೃತರಾಜ್.ಸಂಪಾಜೆ ಇಂಗ್ಲೀಷಿಗೆ: ಸಮತಾ ಆರ್. ಗುದ್ದಿ ಗುದ್ದಿ ಆಳಕ್ಕೆ ಅಗೆದುಸಿಕ್ಕ ಜೀವ ಜಲಕ್ಕೆಅತ್ತ ಇತ್ತ ಮಿಸುಕಾಡದಂತೆಕಟ್ಟಿದ್ದು ಕಟ್ಟೆ. ನೆಟ್ಟ ದಿಟ್ಟಿಗೆ ಒಂದು ಹಿಡಿಆಗಸ ಬಿಟ್ಟರೆಆಕೆ ತರುವ ಕೊಡದೊಂದಿಗಷ್ಟೇಹೇಗೋ ಬೆಳೆದದ್ದು ನಂಟು. ಅದೆಂತಹ ಆತುರ ಬಿಂದಿಗೆಗೆಕಂಠಕ್ಕೆ ಹಗ್ಗ ಬಿಗಿಸಿಕೊಳ್ಳುತ್ತಾಹಾಗೇ ಇಳಿಬಿಡುವ ಹೊತ್ತಿಗೆ ಕೈಯ ಹಿಡಿತವನ್ನೇ ಸಡಿಲಿಸಿರೊಯ್ಯನೆ ಡುಬುಕಿ ಹೊಡೆದಾಗಕೊಡ ಸೇರಿ ಜಗತ್ತು ನೋಡುವಕಾತರಕ್ಕೆ ಬಾವಿಯ ಮೈ ತುಂಬಾಅಲೆ. ಅನ್ನಕ್ಕೆ ಸಾಂಬಾರಿಗೆ ಕಾಫಿಗೆಚಹಕ್ಕೆ ನೀರು ಸದ್ದಿಲ್ಲದೇಕಲಬೆರಕೆಯಾಗುವ ಸಂಕಟಕ್ಕೆಕುದಿ ಮತ್ತಷ್ಟು ಹೆಚ್ಚುತ್ತಿದೆ. ಖಾಲಿಯಾಗುವ ಖುಷಿಗೆಕೊಡ […]

ಕಾವ್ಯಯಾನ

ನೆನಪುಗಳ ಸುತ್ತ” ರಿತೇಶ್ ಕಿರಣ್ ಕಾಟುಕುಕ್ಕೆ ಅಂದು..,ನನ್ನಪ್ಪ ಸೋರುವಮುಳಿ ಮಾಡಿನೆಡೆಗೆದೃಷ್ಟಿ ನೆಟ್ಟಿದ್ದ.,ನಾವೋ…..ಅಂಗಳದ ಬದಿಯಲ್ಲೋಹರಿವ ತೊರೆಯ ಬದಿಯಲ್ಲೋಉದುರುವ ಮಳೆಹನಿಗಳ ಜೊತೆಹರಿವ ನೀರಿನ ಜೊತೆಮೈ ಮರೆಯುತ್ತಿದ್ದೆವು…… ಅಮ್ಮನೂ..,ಅಷ್ಟೇ., ನೀರು ಹೀರಿದಸೌದೆಯ ಒಲೆಗಿರಿಸಿಕಣ್ಣು ಕೆಂಪಗಾಗಿಸಿಊದಿಸಿಕೊಂಡಿದ್ದಳು..,ಮೂರು ಹೊತ್ತುಹೊಟ್ಟೆ ತಣಿಯದಿದ್ದರೂಒಂದು ಹೊತ್ತಿಗಾದರೂಪಾತ್ರೆ ಪಗಡೆಗಳಸದ್ದಾಗುತಿತ್ತುಹೊಟ್ಟೆ ಸಮಾಧಾನಿಸುತ್ತಿತ್ತು……, ಹರಿದ.,ಅರಿವೆಗೆ ತೇಪೆ ಹಾಕಿಸಿವರುಷವಿಡಿ ಕಳೆದರೂಯಾವುದೇ ಸಂಕೋಚವಿರಲಿಲ್ಲಮನೆಯ ಒಳಗೂಹೊರಗಿನ ಜಗುಲಿಗೂ..,ದಾಟಿದರೆ ಅಂಗಳಕ್ಕೆ ಮಾತ್ರನಮ್ಮ ಮಾತುಗಳು ಕೇಳಿಸುತಿತ್ತು.ನಮ್ಮ ಕನಸುಗಳೂ ಅಷ್ಟೇ..!ಅಷ್ಟಕ್ಕೇ ಸೀಮಿತವೋ..?ತಿಳಿಯೆ ನಾ………., ಅಪ್ಪ ದಿನಾ.,ಮಳೆಯಲ್ಲಿ ತೋಯುತ್ತಿದ್ದಸಂಜೆಗೆ ನಮ್ಮಆತ್ಮೀಯ ಗೆಳೆಯನಾಗುತ್ತಿದ್ದ.ಒದ್ದೆಯಾದ ವಸ್ತ್ರದಅರಿವೂ ಅವನಿಗಿಲ್ಲ.,ಚಳಿಯ ಅನುಭವವೂ ಅವನಿಗಿಲ್ಲ.,ನಮ್ಮ ಮುಖವ ನೋಡಿಎಲ್ಲವ ಮರೆಯುತ್ತಿದ್ದಮುಖವರಳಿಸಿ ನಗುತ್ತಿದ್ದ..‌.‌‌‌….., […]

ಕಾವ್ಯಯಾನ

ಮೂರು ಸಂಜೆ ಫಾಲ್ಗುಣ ಗೌಡ ಅಚವೆ. ಮೋತಿ ಗುಡ್ಡದ ಬಂಡೆಗಳ ಮೇಲೆಕುಳಿತ ಮೋಡಗಳು ಎಂಥದೋಪಿಸುಮಾತನಾಡುತ್ತ ಅಲ್ಲೇ ಕೆಳಗೆಹೈಗರ ಹುಡುಗಿಯರು ಅಬ್ಬಿಯ ನೀರು ಬೆರೆಸಿ ಮೀಯುವ ಚಂದನೋಡುತ್ತಿವೆ. ಸದಾ ವಿಪ್ರಲಂಭ ಶ್ರಂಗಾರದ ಕೊಮಣೆ ಮಾಡುತ್ತಮಂಗಟ್ಟೆ ಹಕ್ಕಿಗಳು ಆಕಾಶದೆತ್ತರಕ್ಕೆ ಹಾರುತ್ತ ಹಾರುತ್ತ ಹನಿಮೂನು ಮೂಡಿನಲ್ಲಿ ಸುಖದ ಮೂರೇ ಗೇಣು ಬಾಕಿ. ಗುಮ್ಲೆಗದ್ದೆಯಿಂದಿಳಿದು ಬರುವ ವಿಭೂತಿಯಾಣದ ಭೈರವೇಶ್ವರನ ಬೂದಿ ತೊಳೆದು ರಾಶಿ ರಾಶಿ ಕಟ್ಟಿಗೆಗಳ ಮೇಲೇರಿ ಗಂಗಾವಳಿಯ ಸಮುದ್ರದಲಿಮೀಯುತ್ತದೆ. ಅಶ್ಲೇಷಾ ಮಳೆಗೆ ಹುತ್ತದಿಂದೆದ್ದಅಣಬೆಗಳ ಕೊಡೆ ಹಿಡಿದು ಇರುವೆಗಳು ಮೊಟ್ಟೆಯನ್ನು ಹೊಟ್ಟೆಯಡಿ ಹೊತ್ತು […]

ಗಝಲ್

ಗಝಲ್ ರತ್ನರಾಯಮಲ್ಲ ಆ ಕಡೆ ಭಜನೆಯ ನಾದವು ಜಿನುಗುತಿದೆಈ ಕಡೆ ಆಕ್ರಂದನ ಮುಗಿಲು ಮುಟ್ಟುತಿದೆ ಕಣ್ಣೀರ ಕೋಡಿ ಹರಿಯುತಿದೆ ಸದ್ದಿಲ್ಲದೆ ಇಲ್ಲಿಅಲ್ಲಿ ಹೆಂಡದ ನಶೆ ನೆಲವು ಚುಂಬಿಸುತಿದೆ ಸಂಬಂಧಗಳು ಗೋಳಾಡುತಿವೆ ನೆನೆ ನೆನೆದುಹಲಗೆಯ ಸದ್ದಿಗೆ ಹೆಜ್ಜೆಯು ಕುಣಿಯುತಿದೆ ಗುಲಾಬಿ ಹೂ ಕಸವಾಗಿ ಬಿದ್ದಿದೆ ಬೀದಿಯಲ್ಲಿಗಡಿಯಾರದ ಮುಳ್ಳು ಹೆಣವನ್ನು ಎತ್ತುತಿದೆ ದರುಶನಕ್ಕೆಂದು ಜನ ಸಾಲುಗಟ್ಟಿಹರು ಮಲ್ಲಿಕುಣಿಯ ಮುಖ ಕಾಣದೆ ಗುಂಪು ಚದುರುತಿದೆ **********************

ಅನುವಾದ ಸಂಗಾತಿ

ಒಂದೇ ಬಾಗಿಲು ಕನ್ನಡ ಮೂಲ: – ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಇಂಗ್ಲೀಷಿಗೆ:- ಡಾ.ಎನ್. ತಿರುಮಲೇಶ್ ಭಟ್ ಒಂದೇ ಬಾಗಿಲು ಕತ್ತಲು ಕವಿದಿದೆನನ್ನ ಬಾಳಮನೆಗೆ ಮಾತ್ರಒಂದೇ ಬಾಗಿಲುಒಳ ಬರುವುದೂ ಅಲ್ಲಿಂದಲೇಹೊರ ಹೋಗುವುದೂ ಅಲ್ಲಿಂದಲೇ… ಅವನು ಕರೆಯುತ್ತಿದ್ದಾನೆಅವನ ಮನೆಗೆ ಗೋಡೆ ಬಾಗಿಲುಗಳೇ ಇಲ್ಲನನ್ನ ಬಾಳಮನೆಗೆ ಮಾತ್ರ ಒಂದೇ ಬಾಗಿಲುಈ ಇಹ ಹೇಗೆ ನಿಂತಿದೆಬೆಳಕು ಬಾಗಿಲಿಗೆ ಅಡ್ಡಲಾಗಿ !ಒಳಗೆ ಕತ್ತಲು ಕವಿದಿದೆ. ಅವನೋ ಕಿಂಡಿಯಲೇಕೈತೂರಿ ಕರೆಯುತ್ತಿದ್ದಾನೆಹೊರಗೆ ಬಾ ಬಾನನ್ನ ಮಗುವೇ ಎಂದುಹೇಗೆ ಬರಲಿ ಹೇಳುಈ ಇಹದ ಕಣ್ಣು ತಪ್ಪಿಸಿಕೊಂಡು ? ಬೆಳಕು ಬಾಗಿಲ […]

ಪ್ರಶ್ನೆಗಳು

ಪ್ರಶ್ನೆಗಳು ಭಾಗ್ಯ ಸಿ. ಕಾಣದ ವಿಧಿಯು ಸೂತ್ರದಾರನಾಗಿಹಿಡಿದಿಟ್ಟಿರುವನು ಜೀವನವನು ಎನ್ನುವರುಯೋಜನೆ ಮೇಲೊಂದು ಯೋಜನೆ ಮಾಡಿದರೂಅಣತಿಯಂತೆ ಸಾಗಿತ್ತಿಲ್ಲ ಬದುಕು ಕ್ರಮಿಸಬೇಕಾದ ಹಾದಿ ಬಹಳ ದೂರವಿದೆಏಕಾಂಗಿಯಾಗಿ ದಾರಿ ಸವಿಸಬೇಕಿದೆಕಿತ್ತೆಸೆಯಬೇಕಿದೆ ಸುತ್ತಲಿನ ಮುಳ್ಳನುಇರಿಸಬೇಕಿದೆ ಅಂತರಾಳದಲಿ ಕಲ್ಲನುನೊಯದಿರಲಿ ಅಪಹಾಸ್ಯದಿಂದಲಿ ಒಂದು ಹೆಜ್ಜೆ ಗುರಿಯಡೆಗೆಜಗ್ಗುತ್ತಿದೆ ಎರಡೆಜ್ಜೆ ಹಿಂದುಗಡೆಗೆಹಿಡಿದೆಳೆಯುತ್ತಿರುವವರ ನಾ ಅರಿಯೆವಿಧಿಯಾಟವೆನ್ನುತ್ತಿದೆ ಪ್ರಪಂಚಶಿಕ್ಷೆಯಾಗಬೇಕು ತಪ್ಪಿಗೆ ಅರಿವಿದೆತಿಳಿಯದೆ ಪ್ರತಿಕೂಲ ಪರಿಣಾಮವೇಕೆ? ಶಿಸ್ತಿನ ಯೋಜನೆಗೆ ಜಯ ಬೇಕಿದೆಪ್ರಶ್ನೆ ಎದ್ದಿದೆ ಮನಸ್ಸಿನಲಿಕಾಣದ ವಿಧಿಯೇಕೆ ಅಡ್ಡಗಾಲುಭವಿಷ್ಯ ನಿರ್ಮಾಣದಲಿ *********************

Back To Top