ಕಾರ್ಮಿಕ ದಿನದ ವಿಶೇಷ-ಕವಿತೆ

ಕಾರ್ಮಿಕ ದಿನದ ವಿಶೇಷ-ಕವಿತೆ

ಕಾರ್ಮಿಕನೊಬ್ಬ ಚರಿತ್ರೆಯನ್ನು ಓದುತ್ತಾನೆ. ಮೂಲ: ಬರ್ಟೋಲ್ಟ್ ಬ್ರೆಕ್ಟ್ ಕನ್ನಡಕ್ಕೆ: ಮೇಗರವಳ್ಳಿ ರಮೇಶ್ ಕಾರ್ಮಿಕನೊಬ್ಬ ಚರಿತ್ರೆಯನ್ನು ಓದುತ್ತಾನೆ. ಥೀಬ್ಸ್ ನ ಏಳು ಗೇಟುಗಳನ್ನು ಕಟ್ಟಿದವರಾರು?ಪುಸ್ತಕಗಳ ತು೦ಬಾ ರಾಜರುಗಳ ಹೆಸರುಗಳು.ಬ೦ಡೆಗಲ್ಲುಗಳನ್ನು ತ೦ದು ಜೋಡಿಸಿದವರು ದೊರೆಗಳೆ?ಮತ್ತು ಬ್ಯಾಬಿಲೋನ್ ಅದೆಷ್ಟು ಸಲ ನಾಶವಾಯಿತು!ಮತ್ತೆ ಮತ್ತೆ ಯಾರು ಕಟ್ಟಿದರು ಈ ನಗರವನ್ನು?ಚಿನ್ನದ ಹೊಳಪಿನ ನಗರಿಯಲ್ಲಿ ಅದನ್ನು ಕಟ್ಟಿದವರು ವಾಸವಾಗಿದ್ದರೆ?ಚೀನಾದ ಮಹಾಗೊಡೆಯನ್ನು ಕಟ್ಟಿ ಮುಗಿಸಿದ ಸ೦ಜೆಗಾರೆ ಕೆಲಸದವರು ಎಲ್ಲಿಗೆ ಹೋದರು?ರೋಮ್ ಸಾಮ್ರಾಜ್ಯದ ತು೦ಬಾ ವಿಜಯದ ಸ೦ಕೇತದ ಕಮಾನುಗಳು.ಯಾರು ನಿಲ್ಲಿಸಿದರು ಅವುಗಳನು?ಯಾರ ಮೇಲೆ ಸೀಸರ್ ವಿಜಯ ಸಾಧಿಸಿದ?ಹಾಡಿನಲ್ಲಿ […]

ಕಾರ್ಮಿಕ ದಿನದ ವಿಶೇಷ

ಅರಿವು ಬಹು ಮುಖ್ಯ..! ಕೆ.ಶಿವು ಲಕ್ಕಣ್ಣವರ ಅರಿವು ಬಹು ಮುಖ್ಯ..! ಮೇ 1, ವಿಶ್ವ ಕಾರ್ಮಿಕ ದಿನದ ಅರಿವು ಬಹು ಮುಖ್ಯ..! ಮೇ 1, ವಿಶ್ವ ಕಾರ್ಮಿಕರ ದಿನಾಚರಣೆಯ ದಿನ. ಇದು ಮಹತ್ವದ ದಿವಾಗಿದೆ. ಮೇ ದಿನ ಅಥವಾ ವಿಶ್ವ ಕಾರ್ಮಿಕರ ದಿನಾಚರಣೆ ದಿನಕ್ಕೆಂಟು ಗಂಟೆಗಳ ನಿಗದಿತ ಕೆಲಸಕ್ಕಾಗಿ ಆರಂಭವಾದ ಹೋರಾಟವನ್ನು ಸ್ಮರಿಸುವ ಈ ದಿನವನ್ನು ಕಾರ್ಮಿಕರು ಇಡೀ ಜಗತ್ತಿನಾದ್ಯಂತ ತಮ್ಮ ಹಕ್ಕುಗಳಿಗಾಗಿ ನಡೆಸುವ ಹೋರಾಟದ ದಿನವನ್ನಾಗಿ ಆಚರಿಸುತ್ತಾರೆ. ಈ ಆಚರಣೆಗೆ ಒಂದು ಶತಮಾನಕ್ಕೂ ಮೀರಿದ ಸುದೀರ್ಘ […]

ಕಾರ್ಮಿಕ ದಿನದ ವಿಶೇಷ-ಲೇಖನ

ಪ್ರತಿಯೊಬ್ಬರೂ ಕಾರ್ಮಿಕರೇ ಶೃತಿ ಮೇಲುಸೀಮೆ ಪ್ರತಿಯೊಬ್ಬರೂ ಕಾರ್ಮಿಕರೇ ಇಂದು ಮೇ ಒಂದು, ಅಂತಾರಾಷ್ಟ್ರೀಯ ಕಾರ್ಮಿಕ ದಿನ. ಇದನ್ನು 1886, ಮೇ 4 ರಂದು ಚಿಕಾಗೋದಲ್ಲಿ ಕಾರ್ಮಿಕರ ಮೇಲೆ ನಡೆದ ದಮನಕಾರಿ ಘಟನೆಯನ್ನು ಖಂಡಿಸಿದ ಪ್ರತೀಕದ ಕುರುಹುವಾಗಿ ಆಚರಿಸುತ್ತಾ ಬರಲಾಗುತ್ತದೆ. ಈ ಕಾರ್ಮಿಕ ದಿನದ ಮೂಲ ಕುರುಹು ಇರುವುದು ಅಮೆರಿಕದಲ್ಲಿ, ಅಲ್ಲಿ ಕಾಲರಾಡೋ ರಾಜ್ಯ 1887ರಲ್ಲಿ ಮಾರ್ಚ್ 15 ರಂದು ಕಾರ್ಮಿಕ ದಿನ ಆಚರಣೆಗೆ ಕಾನೂನನ್ನು ಮಾನ್ಯ ಮಾಡಿತು. ಭಾರತದಲ್ಲಿ ಈ ದಿನವನ್ನು 1927ರಿಂದ ಆಚರಿಸುತ್ತಾ ಬರಲಾಗುತ್ತಿದೆ. ಇಂದು […]

ಕಾರ್ಮಿಕ ದಿನದ ವಿಶೇಷ-ಕಥೆ

ಕಥೆ ಕರ್ಮ ಮತ್ತು ಕಾರ್ಮಿಕ!  ಪೂರ್ಣಿಮಾ ಮಾಳಗಿಮನಿ ಕರ್ಮ ಮತ್ತು ಕಾರ್ಮಿಕ!  ಎಲ್ಲರ ಮನೆಯ ದೋಸೆಯೂ ತೂತೇ, ಹಾಗಂತ ತೂತಿಲ್ಲದ ದೋಸೆಗಾಗಿ ಹಾತೊರೆಯುವುದನ್ನು ರಾಗಿಣಿ ಬಿಟ್ಟಿರಲಿಲ್ಲ. ಮನೆಯೊಳಗಿನ ಸಣ್ಣ ಪುಟ್ಟ ಜಗಳಗಳಿಗೆ, ಮೂವತ್ತೈದು ವರ್ಷಕ್ಕೇ ಜೀವನವೇ ಸಾಕಾಗಿ ಹೋಗಿದೆ, ಎಂದು ಕೈ ಚೆಲ್ಲಿ ಕುಳಿತ ಹೆಂಡತಿ ರಾಗಿಣಿಯನ್ನು ಮ್ಯಾರೇಜ್ ಕೌನ್ಸಲರ ಬಳಿ ಕರೆದೊಯ್ಯುವ ವಿಚಾರ ಮಾಡಿದ್ದು ಪ್ರಶಾಂತನೇ. ಮಕ್ಕಳೂ ಆಗಿಲ್ಲವೆಂದ ಮೇಲೆ ನಿಮ್ಮ ಹೆಂಡತಿ ಟೈಮ್ ಪಾಸ್ ಮಾಡುವುದಾದರೂ ಹೇಗೆ ಎಂದು  ದಬಾಯಿಸಿ, ಕೌನ್ಸಲರ ಒಂದು ನಾಯಿ ಮರಿ […]

ಕಾರ್ಮಿಕ ದಿನದ ವಿಶೇಷ -ಲೇಖನ

ಲೇಖನ ವಿಶ್ವದ ಕಾರ್ಮಿಕರು ಒಂದಾಗಿ ಎನ್ನುವ ಕಾರ್ಮಿಕ ದಿನಾಚರಣೆ ಚಂದ್ರು ಪಿ ಹಾಸನ್ ವಿಶ್ವದ ಕಾರ್ಮಿಕರು ಒಂದಾಗಿ ಎನ್ನುವ ಕಾರ್ಮಿಕ ದಿನಾಚರಣೆ ಕಾಯಕವೇ ಕೈಲಾಸವೆಂಬ ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರ ರ ಸನ್ನುಡಿ ಗಳಂತೆ ಭೂಮಿಯ ಪ್ರತಿಯೊಂದು ಜೀವಿಯು ಜನಿಸಿದ ಮೇಲೆ ತನ್ನದೇ ಆದ ನಿತ್ಯಕರ್ಮ ಗಳಿಂದ ಜೀವನ ನಡೆಸಬೇಕಾಗುತ್ತದೆ ಕಾರ್ಮಿಕ ಜೀವನಶೈಲಿಯು ಅತ್ಯಂತ ಸುಂದರ ಹಾಗೂ ಸಮಾಧಾನಕರವಾಗಿದೆ . ಕರ್ಮಯೋಗಿ ಕಾರ್ಮಿಕ ಅವನು ಎಲ್ಲ ರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ಕೊಂಡು ತನಗಾಗಿ, ತನ್ನವರಿಗೆ, […]

ಪುಸ್ತಕ ಸಂಗಾತಿ

ಅಪರೂಪದ ಕತೆಗಳು ಕೆ.ವಿ. ತಿರುಮಲೇಶ್ ಅಪರೂಪದ ಕತೆಗಳು ಕಥಾಸಂಕಲನ ಕೆ.ವಿ. ತಿರುಮಲೇಶ್ ಅಭಿನವ ಪ್ರಕಾಶನ. ಇದು ಒಂದು ಅಪೂರ್ವವಾದ ಕಥೆಗಳ ಸಂಕಲನ ಎಂದು ಹೇಳಿದರೆ ತಪ್ಪಾಗಲಾರದು. ಇಲ್ಲಿ ಒಟ್ಟು ಹದಿನಾರು ಕತೆಗಳಿವೆ. ವಿಭಿನ್ನ ಮತ್ತು ವಿಶಿಷ್ಟ ರೀತಿಯಲ್ಲಿ ತಿರುಮಲೇಶರು ಈ ಕತೆಗಳನ್ನು ಹೇಳಿದ್ದಾರೆ. ಅವರ ಕವನ ಸಂಕಲನಗಳು – ಅಕ್ಷಯ ಕಾವ್ಯ,ಅರಬ್ಬಿ, ಅವಧ, ಏನೇನ್ ತುಂಬಿ,ಪಾಪಿಯೂ, ಮಹಾಪ್ರಸ್ಥಾನ, ಮುಖವಾಡಗಳು,ಮುಖಾಮುಖಿ,ವಠಾರ. ಕಥಾಸಂಕಲನಗಳು- ನಾಯಕ ಮತ್ತು ಇತರರು, ಕೆಲವು ಕಥಾನಕಗಳು,ಕಳ್ಳಿ ಗಿಡದ ಹೂ,ಅಪರೂಪದ ಕತೆಗಳು. ಕಾದಂಬರಿಗಳು- ಆರೋಪ, ಮುಸುಗು, ಅನೇಕ. […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-1 ಆಯ್ಕೆ ಬೆಳೆಗಾರರ ಕೈಯಲ್ಲಿಯೇ ಇದೆ ಮೈಸೂರಿನ ನೈಸರ್ಗಿಕ ಕೃಷಿಕ ಕೈಲಾಸಮೂರ್ತಿಯವರು ನಿಸರ್ಗದೊಂದಿಗೆ ಒಡನಾಡುತ್ತ ತಮ್ಮ ಬಾಳ ಇಳಿಸಂಜೆಯನ್ನು ಅರ್ಥಪೂರ್ಣವಾಗಿ ಕಳೆಯುತ್ತಿರುವವರು. ಮನಸೊಬಾ ಪುಕುವೋಕಾ ಅವರ ಪ್ರಭಾವಕ್ಕೊಳಗಾದವರು.. ಬೆಳೆಗಿಂತ ಹೆಚ್ಚು ಕಳೆ ಬಗ್ಗೆ ನಾನು ತಲೆಕೆಡಿಸಿಕೊಳ್ಳುತ್ತೇನೆ ಎಂದು ತಮ್ಮ ಬಗ್ಗೆ ತಾವೇ ತಮಾಷೆ‌ ಮಾಡಿಕೊಳ್ಳುವ ಕೈಲಾಸಮೂರ್ತಿಯವರ ಬಿತ್ತನೆಯಿಂದ ಬೆಳೆದ ಭತ್ತದ ಕೃಷಿ ನೋಡಲು ಕೆಲ ಕಾಲದ ಹಿಂದೆ ಅವರ ಗದ್ದೆಗೆ ಹೋಗಿದ್ದೆ. ‘ಮುಂಗಾರಿನಲ್ಲಿ ಬೆಳೆದ ಭತ್ತದ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾಯಕದ ದಿನ ನಗರ ಸತ್ತು‌ ಹೋಗಿದೆ ನಾಗರಾಜ ಹರಪನಹಳ್ಳಿ ಕಾಯಕದ ದಿನ ನಗರ ಸತ್ತು‌ ಹೋಗಿದೆ ಕಾಯಕ‌ ಜೀವಿಗಳ ದಿನ ನಗರ ಸತ್ತು‌ ಹೋಗಿದೆ ಬೆವರು ಸುರಿಸಿ‌ ಬದುಕುವ ಜನರ‌ ಹೊರದಬ್ಬಿದೆ ಮಹಲುಗಳ ಕಟ್ಟಿ ಗುಡಿಸಲಲಿ ಬದುಕಿದ ಜನ ಗುಳೆಬಂದ ನಾಡಿಗೆ ಹಸಿವು ಹೊತ್ತು ಮರಳಿದ್ದಾರೆ ಮಡಲಲ್ಲಿ ಕಣ್ಣೀರು ನಿಟ್ಟುಸಿರು ತುಂಬಿಕೊಂಡು ಭೂಮಿ ಬಿಟ್ಟು ಬಂದದ್ದಕ್ಕೆ ಪರಿತಪಿಸಿದ್ದಾರೆ ಈ‌ ಬಿಸಿಲಿಗೂ ಕರುಣೆಯಿಲ್ಲ ಕಾಯಕದ ಮಂತ್ರ ಕೊಟ್ಟ ಬಸವಣ್ಣ, ದುಡಿಮೆಯಲ್ಲಿ ಪಾಲು ಕೇಳಿದ ಕಾರ್ಲಮಾರ್ಕ್ಸ ಮಣ್ಣಲ್ಲಿ ಮಣ್ಣಾಗಿ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾರ್ಮಿಕರು ನಾವು ಡಾ.ಪ್ರಸನ್ನ ಹೆಗಡೆ ಕಾರ್ಮಿಕರು ನಾವು ಕಾರ್ಮಿಕರು ನಾವು ಯಂತ್ರದ ವೀಣೆಯ ತಂತಿಯ ಮೀಟುವ ವೈಣಿಕರು ನಾವು ಕಾರ್ಮಿಕರು ನಾವು ಆರ್ಥಿಕ ದೋಣಿಯ ಚಂದದಿ ನಡೆಸುವ ನಾವಿಕರು ನಾವು ಕಾರ್ಮಿಕರು ನಾವು ಒಡೆಯನ ಕನಸಿನ ಬೀಜವ ಬಿತ್ತುವ ಜೀವಿಗಳು ನಾವು ಕಾರ್ಮಿಕರು ನಾವು ಹಗಲಿರುಳೆನ್ನದೆ ನಿಲ್ಲದೆ ನಡೆಯುವ ಕಾಲನ ಕಾಲುಗಳು ನಾವು ಕಾರ್ಮಿಕರು ನಾವು ಮಳೆಬಿಸಿಲೆನ್ನದೆ ಕಾರಣ ಒಡ್ಡದೆ ದುಡಿಯುವ ಜನ ನಾವು ಕಾರ್ಮಿಕರು ನಾವು ಗಣಿಯೊಳಗಿಳಿದು ಕುಲುಮೆಯೊಳ್ಬೆಂದು ಹೊನ್ನಾಗುವ ಜನ ನಾವು ಕಾರ್ಮಿಕರು […]

ಕಾವ್ಯಯಾನ

ಸುರಿಮಳೆ ವೀಣಾ ರಮೇಶ್ ಧೋ ಎಂದಿದೆ ನಗುಮಳೆ ಮನಸಿನ ಸುಂದರ ನಗರಿಯಲಿ ನಿನ್ನ ನಸುನಗುವಿನ ಸಿಹಿ ಸಿಂಚನದ ಕಳೆ ಬಿಸಿಯೇರಿದ ವಿರಹದ ಕಾವಿಗೆ ಒಂದಷ್ಟು ತಂಪು ನೀಡಿದೆ,,ಎಡಬಿಡದೆ ಸುರಿವ ನಿನ್ನ ನಗುವಿನ ನರ್ತನದಲಿ ಮನದ ಇಳೆ ನನ್ನ ಮೈ ಮನಗಳು ಒದ್ದೆಯಾಗಿವೆ ತುಸು ಮೆಲ್ಲ ಬೀಸಿದೆ ನೆನಪಿನ ತಂಗಾಳಿ ಕತ್ತಲೆಯ ಮೌನವಷ್ಟೇ ಸೀಳಿದೆ ತಬ್ಬಿ ಈ ಸುಳಿಗಾಳಿ ಮತ್ತದೇ ಸಿಹಿ ಹನಿಗಳು ಆಳಕೆ ಸುರಿದಿದೆ, ನಾ ತೇಲಿ ಹೋಗುವಷ್ಟು ಹರ್ಷ ಧಾರೆಯಲಿ ನೆನೆಯದಂತೆ ಬಚ್ಚಿಟ್ಟು ಕೊಂಡಿರುವೆ ನೆನಪುಗಳು […]

Back To Top