ಕಾರ್ಮಿಕ ದಿನದ ವಿಶೇಷ-ಕವಿತೆ

ಕಾರ್ಮಿಕ ದಿನದ ವಿಶೇಷ-ಕವಿತೆ

ನಾವು ಮತ್ತು ಅವರು ಶೋಭಾ ನಾಯ್ಕ. ಹಿರೇಕೈಕಂಡ್ರಾಜಿ. ನಾವು ಮತ್ತು ಅವರು ಇಲಿ ಕೊರೆದ ಮನೆ ಗೋಡೆಗೆ ಮಣ್ಣ ಮೆತ್ತಿಯೇ ಬಂದಿದ್ದಾರಿಲ್ಲಿ ಮಹಡಿ ಮನೆಗೆರಡು ಕಂಬ ಎಬ್ಬಿಸಲು ಅವರ ಮೈ ಬೆವರಿಗಷ್ಟು ಕೂಡಿಸಿ, ಕಳೆದು ಲೆಕ್ಕಹಾಕಿ ಕೂಲಿ ಕೊಡುವ ನಾವುಗಳು ನಮ್ಮ ಮೈ ಬೆವರನ್ನು ಹೇಳಿದಷ್ಟು ಕಟ್ಟಿ ಇಳಿಸಿ ಬರುತ್ತೇವೆ. ಸಂಜೆ ಮೀನು ಮತ್ತು ಮಾರುದ್ದ ಜಡೆಯ ಮಗಳಿಗೆರಡು ರಿಬ್ಬನ್ನು ಒಯ್ಯುವಾಗ ನಗುತ್ತವೆ ಅವರ ಕೈಯಲ್ಲಿ ನಾವೇ ಕೊಟ್ಟ ನೋಟುಗಳು ಇಲ್ಲಿನ ಬರಕತ್ತಿನ ಬದುಕ ಕಂಡು ಕೊನೆಗೂ […]

ಕಾರ್ಮಿಕ ದಿನದ ವಿಶೇಷ -ಲೇಖನ

ಕಾರ್ಮಿಕರ ದಿನಕ್ಕೊಂದು ಬೆಲೆ ಬರಬೇಕಿದೆ ಶಿವಲೀಲಾ ಹುಣಸಗಿ ಕಾರ್ಮಿಕರ ದಿನಕ್ಕೊಂದು ಬೆಲೆ ಬರಬೇಕಿದೆ ಇಂದು ಸಮಾನತೆ,ಅಸಮಾನತೆಗಳ ನಡುವೆ ತುಟಿಕಚ್ಚಿ ಹಿಡಿದು ಮೌನದೊಳಗೆ ತನ್ನಾತ್ಮವನ್ನು ಬಿಗಿದು ಒಡಲೊಳಗೆ ಅಗ್ನಿಯನ್ನು ಬಚ್ಚಿಟ್ಟು ನಡೆಯುವ ಸಂಸಾರದ ನೋಗವನ್ನು ಎಳೆಯುವ ಜೀವವೆಂದರೆ ಅದು ಹೆಣ್ಣು… ಸಾಧನೆಯ ಮೆಟ್ಟಿಲೇರಿದ ಮಹಿಳೆಯರ ಸಾಲು ಬೆರಳೆನಿಕೆಯಷ್ಟಿದ್ದರೂ,ಅದೇ ಮಹತ್ತರ ಶಿಖರವೆಂಬಂತೆ ಬಿಂಬಿಸಿ, ಮಹಿಳಾ ಸಬಲೀಕರಣವಾಗಿದೆಯೆಂದು ಕಾಣುವ ಪರಂಪರೆ ಭಾರತದ ನಾಗರಿಕ ಸಮಾಜದಲ್ಲಿ ಬೇರೂರಿದೆ..ನಮ್ಮ ದೇಶ ಪುರುಷ ಪ್ರಧಾನ ಸಮಾಜದ ಅಡಿಯಲ್ಲಿ ಮುಂದುವರೆದಿದ್ದಕ್ಕೆ ಇತಿಹಾಸ ಸಾಕ್ಷಿ….ಆದರೆ  ಸಾಧಕರೂ ಇನ್ನೂ ಎಲೆಮರೆಯಕಾಯಿಯಂತೆ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ನಾವು ಕಾರ್ಮಿಕರು ಸಾಯಬಣ್ಣ ಮಾದರ ನಾವು ಕಾರ್ಮಿಕರು ನಮ್ಮಗರಿವಿಲ್ಲದೆ ಹಗಲು ಇರುಳು ಚಲಿಸುತ್ತಿವೆ ಕಷ್ಟಕಾರ್ಪಣ್ಯಕೆ ಬರವಿಲ್ಲದೆ ಚಲಿಸುತ್ತಿದೆ ಜೀವ ಮುಸುಕು ಹೊದ್ದು ಹಸುರನುಟ್ಟು ನಾಳೆ ಎಂಬುವುದು ಭಯವಿಲ್ಲದೆ! ತಲೆಯೊಡೆದು ಬದಕುವವರು ನಾವಲ್ಲ ಬರಿ ದುಡಿದು ತಿನ್ನುವರು ನಾವೆಲ್ಲ ! ನಿಮ್ಮ ಗೋಪುರ ಮೀನಾರಗಳಿಗೆ ನಮ್ಮ ಎಲುಬುಗಳೆ ಹಂದರವಾಗಿ ನಿಮ್ಮ ತೆವಳುವ ಕನಸುಗಳಿಗೆ ನಮ್ಮ ಸ್ವಪ್ನದೆಲೆಗಳಾಗಿ ಚಲಿಸುತ್ತಿದ್ದೇವೆ ಮಾಸಿದ ಬಣ್ಣ ಬಳಿದುಕೊಂಡು ನಿಮ್ಮ ಭಾಷೆ-ಭಾವಗಳು ನುಂಗಿ ಹಾಕಿವೆ ಎಷ್ಟೊಂದು ಜೀವಗಳು ಉಸಿರಿನ ಸಮಾಧಿಗಳ ಮೇಲೆ ಆಕಾಶದಲ್ಲಿ ಹಾರಾಡಿ […]

ಕಾರ್ಮಿಕದಿನದ ವಿಶೇಷ-ಲೇಖನ

ಅರ್ಥ ಕಳೆದುಕೊಳ್ಳುವ ಸಮಯ ಪ್ರಮೀಳಾ .ಎಸ್.ಪಿ.ಜಯಾನಂದ್. ಅರ್ಥ ಕಳೆದುಕೊಳ್ಳುವ ಸಮಯ. “ರೈತ ದೇಶದ ಬೆನ್ನೆಲುಬು” ಎನ್ನುವರು.ಹಸಿವು ಇಂಗಿಸುವ ಕಾಯಕ ಮಾಡುವ ರೈತ ದೇಹದ ಮತ್ತು ದೇಶದ ಆಧಾರ  ವಾಗಿರುವುದು ಸತ್ಯ. ಹಾಗಾಗಿಯೇ ದೇಶದ ಹಲವಾರು ಯೋಜನೆಗಳು ರೈತರ ಪರವಾಗಿ ಬಂದು ನಿಲ್ಲುತ್ತವೆ.ಆದರೆ ಕೃಷಿಭೂಮಿ ಇಲ್ಲದವರು,ಕಾರ್ಖಾನೆ ಗಳಲ್ಲಿ ದುಡಿಯುವ ಮಂದಿ,ಕೂಲಿ ಕಾರ್ಮಿಕರು, ಹಲವಾರು ಸ್ತರಗಳಲ್ಲಿ ದುಡಿದು ದೇಶದ ಅಭಿವೃದ್ಧಿಗೆ ಕರಣರಾಗುತ್ತಾರೆ.ಇವರುಗಳಲ್ಲಿ ಎರಡು ವಿಧ. 1-ಸಂಘಟಿತ ಕಾರ್ಮಿಕರು 2-ಅಸಂಘಟಿತ ಕಾರ್ಮಿಕರು. ಈ ದೇಶದ ಕಾರ್ಮಿಕ ಕಾಯ್ದೆಯು ಹಲವು ಸೌಲಭ್ಯಗಳು ಮತ್ತು […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ನಾಲ್ಕು ಶಬ್ದ ಮರಾಠಿ ಮೂಲ: ನಾರಾಯಣ ಸುರ್ವೆ ಕನ್ನಡಕ್ಕೆ: ಕಮಲಾಕರ ಕಡವೆ ನಾಲ್ಕು ಶಬ್ದ ಪ್ರತಿದಿನದ ರೊಟ್ಟಿಯ ಪ್ರಶ್ನೆ ಪ್ರತಿದಿನದ್ದೂ ಆಗಿದೆ ಒಮ್ಮೊಮ್ಮೆ ಗಿರಣಿ ಹೊರಗೆ, ಒಮ್ಮೊಮ್ಮೆ ಒಳಗೆ ಕಾರ್ಮಿಕನು ನಾನು, ಹರಿತ ಕತ್ತಿಯಂತವನು ಪಂಡಿತರೇ, ಕೊಂಚ ಅಪರಾಧ ಮಾಡಬೇಕಿದೆ ಸ್ವಲ್ಪ ಸಹಿಸಿದೆ, ನೋಡಿದೆ, ಯತ್ನಿಸಿದೆ ನಾನು ನನ್ನ ಜಗತ್ತಿನದೇ ಆದ ಪರಿಮಳವೂ ಅಲ್ಲಿದೆ ಆಗೀಗ ತಪ್ಪಿದೆ, ಸೋತೆ, ಹೊಸತನ್ನು ಕಲಿತೆ ಹೇಗೆ ಬಾಳುತಿರುವೇನೋ ಹಾಗೇ ನನ್ನ ಮಾತಿದೆ ರೊಟ್ಟಿ ಬೇಕು ಸರಿಯೇ, ಮತ್ತೂ ಏನೋ […]

ಕಾರ್ಮಿಕ ದಿನದ ವಿಶೇಷ ಲೇಖನ

ಕಾರ್ಮಿಕರಿಲ್ಲದ  ಕಾರ್ಮಿಕ ದಿನಾಚರಣೆ ಗಣೇಶ್ ಭಟ್ ಶಿರಸಿ ಕಾರ್ಮಿಕರಿಲ್ಲದ  ಕಾರ್ಮಿಕ ದಿನಾಚರಣೆ              ಕೆಂಪು ಧ್ವಜಗಳ ಹಾರಾಟ,  ಜನರ ಮೆರವಣ ಗೆಗಳಿಲ್ಲದ  ಕಾರ್ಮಿಕ ದಿನಾಚರಣೆ  ನಡೆಯುತ್ತಿದೆ. ಎಂದಿನಂತೆ  ಸರ್ಕಾರ ರಜೆ   ಘೋಷಿಸಿದ್ದರೂ, ರಜೆಯನ್ನು  ಅನುಭವಿಸಲಾರದ ಸ್ಥಿತಿಗೆ ಜಗತ್ತಿನಾದ್ಯಂತ ಕಾರ್ಮಿಕರು ತಲ್ಪಿದ್ದಾರೆ.            ಮೇ 1 ನೇ ತಾರೀಕಿನಂದು ಕಾರ್ಮಿಕ ದಿನ ಆಚರಿಸಲು ಕಾರಣವಾದ  ಘಟನೆ ನಡೆದಿದ್ದು 1886 ರಲ್ಲಿ.  ಅಮೇರಿಕಾವು ಅದಾಗಲೇ ಆರ್ಥಿಕ ಹಿಂಜರಿತದಿಂದ ಜರ್ಝರಿತವಾಗಿತ್ತು. 1882 ರಿಂದಲೂ ಮಂದಗತಿಯಲ್ಲಿದ್ದ  ಆರ್ಥಿಕ ಸ್ಥಿತಿಯಿಂದಾಗಿ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದರು.  […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾರ್ಮಿಕರ ಕೂಗು ಈರಪ್ಪ ಬಿಜಲಿ ಕಾರ್ಮಿಕರ ಕೂಗು” ಚೋಟುದ್ದದ ಹೊಟ್ಟೆಚೀಲವ ತುಂಬಿಸಲು ಮನುಜ ಮಾಡುವನು ಕೂಲಿ ಕೆಲಸಗಳನು ಕಟ್ಟಡ,ಬಡಗಿತನ,ವೆಲ್ಡಿಂಗ್ ,ಪೈಪ್ಲೈನಗಳು ಪೇಂಟರ್,ಪೌರ,ಸಿಂಪಿಗಕಮ್ಮಾರಿಕೆ,ಅನೇಕ ಕರ್ಮಗಳು।।1।। ನಮ್ಮಿ ಕಾರ್ಮಿಕರಿಗಿಲ್ಲ ಜೀವನದ ಭದ್ರೆತೆ ಅವರ ಜೀವನವಿರುವುದು ಬಲು ವಿಭಿನ್ನತೆ ಬಂಡ್ವಾಳಷಾಹಿ,ಕಾರ್ಮಿಕರಲ್ಲಿನ ತಾರತಮ್ಯತೆ ದೂರಾಗಿ ಮೂಡಿಬರಲಿ ಎರಡೂಗುಂಪಲಿ ಸರಿಸಮಾತೆ।।2।। ಕಾರ್ಮಿಕರ ಕೂಗು ನೊಂದ ಮನಗಳ ಕೂಗು ಕೇಳುತ ಧನಿಕರು ಹಿಗ್ಗಿಸುವರು ತಮ್ಮಯ ಮೂಗು ಹೃದಯಸಿರಿವಂತಿಕೆಲಿ ಕಾರ್ಮಿಕರ ಮನಸ್ಸದು ಮಗು ವೇತನದ ದಿನದಂದು ಇವರ ಮುಖದಲಿ ಕಿಲಕಿಲ ನಗು।।3।। ಜೀವದ ಅಂಗುತೊರೆದು ಅವಿರತ […]

ಕಾರ್ಮಿಕ ದಿನದ ವಿಶೇಷ-ಲೇಖನ

ನಾವು ಬಾಲ ಕಾರ್ಮಿಕರು.  ಗೌರಿ.ಚಂದ್ರಕೇಸರಿ ನಾವು ಬಾಲ ಕಾರ್ಮಿಕರು.  ಹೌದು. ನಾವು ಕೂಲಿ ಮಾಡುವ ಮಕ್ಕಳು. ನಮ್ಮನ್ನು ಬಾಲ ಕಾರ್ಮಿಕರು ಎಂದು ಕರೆಯುತ್ತಾರೆ. ನಮ್ಮೆಲ್ಲರ ಕನಸುಗಳು ಹೆಚ್ಚೂ ಕಮ್ಮಿ ಒಂದೇ ತೆರನಾಗಿರುತ್ತವೆ. ಬೇರೆ ಬೇರೆ ಬಣ್ಣದ ಬಟ್ಟೆ ತೊಟ್ಟಿರುತ್ತವೆ. ಆದರೆ ಕನಸಿನ ಪರಿಧಿ ಭಿನ್ನ. ಅವು ಕೈಗೂಡಲಾರದ ಕನಸುಗಳೆಂದು ನಮಗೆ ಗೊತ್ತು. ಆದರೆ ಕನಸುಕಾಣಲು ಹಣವನ್ನೇನೂ ಕೊಡಬೇಕಿಲ್ಲವಲ್ಲ.ಸೈಕಲ್ ಶಾಪ್ ಒಂದರಲ್ಲಿ ಪಂಕ್ಚರ್ ಹಾಕುತ್ತ ನಾನೊಬ್ಬಸೈಕ್ಲಿಸ್ಟ್ ಆಗಬೇಕೆಂದೋ, ಹೋಟೆಲ್ ಒಂದರಲ್ಲಿ ಎಂಜಲುಹೊದ್ದು ಮಲಗಿದ ಟೇಬಲ್‌ನ್ನು ಶುಚಿಗೊಳಿಸುತ್ತ, ಗ್ರಾಹಕರ ಜೊತೆ […]

ಕಾರ್ಮಿಕ ದಿನದ ವಿಶೇಷ -ಕವಿತೆ

ಕವಿತೆ ಬಿಸಿಲ ಹೂಗಳ ಬದುಕು ಲಕ್ಷ್ಮಿ ಪಾಟೀಲ್ ಬಿಸಿಲ ಹೂಗಳ ಬದುಕು ನನಗೆ ನೆರಳಿಗಿಂತಲೂ ಬಿಸಿಲೇ ಇಷ್ಟ ಒಳಗಿನ ಬೆಂಕಿ ಹೊರಗೆ ನೀರಾಗಿ ಹರಿಯುವ ವಿಸ್ಮಯಕ್ಕೆ ಕಾವುಗಳನ್ನೆಲ್ಲ ಕರಗಿಸಿ ನೀರಾಗುವುದನ್ನು ಕಲಿಸುತ್ತವಲ್ಲ ಅದೆಷ್ಟು ಸಲೀಸು… ಬಿಸಿಲನ್ನು ಹಾಸಿ ಹೊದೆದು, ಶ್ರಮದಲ್ಲಿ ಬೆವರಿಳಿಸಿ ಬಿಸಿಲ ಹಾಡುಗಳನ್ನು ಕಟ್ಟಿ ಜೀವನೋತ್ಸಾಹ ಹೇರಿಕೊಂಡು ಹೊರಟವರನ್ನು ಕಂಡು ನಾನೀಗ ದುಃಖಿಸುವುದಿಲ್ಲ ಭಾವಕೋಶಗಳನು ಅರಳಿಸಿ ಬಿಡುವ ಬಾಡದ ಹೂವಾಗಿ ಉಳಿದು ಬಿಡುವ ಬದುಕಿನರ್ಥಗಳನ್ನು ಹಿಗ್ಗಿಸುವ ಇವರನ್ನು ಕಂಡು ಹಿಗ್ಗುತ್ತೇನೆ ಬೆವೆರಿಳಿಸುವ ಕಸಬಿಗೆ ಜೀವ ತುಂಬುತ್ತೇನೆ… […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಇದ್ದಲ್ಲೆ ಇದ್ದು ಬಿಡಿ. ಜ್ಯೋತಿ ಡಿ.ಬೊಮ್ಮಾ. ಇದ್ದಲ್ಲೆ ಇದ್ದು ಬಿಡಿ. ಇದ್ದಲ್ಲೆ ಇದ್ದು ಬಿಡಿ ನೀವು ಆರಾಮವಾಗಿ ನಿಮ್ಮೂರಿಗೆ ನಿಮ್ಮ ಮನೆಗೆ ಕರೆಸಿಕೊಳ್ಳಲು ಸರ್ಕಾರದ ಬಳಿ ಸೌಲಬ್ಯಗಳಿಲ್ಲ. ವಿದೇಶದಿಂದ ಮರಳುವವರಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುತ್ತಿರುವವರಿಗೆ ಬಸ್ ,ಏರೋಪ್ಲೇನ್ ಗಳೆಲ್ಲ ಮೀಸಲಾಗಿವೆ. ನೀವು ಇದ್ದಲ್ಲೆ ಇದ್ದುಬಿಡಿ ಕಾರು ಜೀಪುಗಳಿದ್ದವರು ಬರಲಿ ಅವರವರ ಊರಿಗೆ ಚೆಕ್ ಪೋಸ್ಟ್ ನಲ್ಲಿರುವವರಿಗೆ ಚಳ್ಳೆಹಣ್ಣು ತಿನ್ನಿಸಿ ಹೊತ್ತು ಹರಿಯುವ ಮೊದಲು. ನೀವು ಇದ್ದಲ್ಲೆ ಇದ್ದು ಬಿಡಿ ಕೆಲಸವಿಲ್ಲ ,ತಿನ್ನಲು ಆಹಾರವಿಲ್ಲದಿದ್ದರೂ ಹಿಡಿ ಅನ್ನಕೊಟ್ಟು […]

Back To Top