ಕಾವ್ಯಯಾನ

ಕಾವ್ಯಯಾನ

ಹಂಬಲಿಸಿರುವೆ ಶಿವಲೀಲಾ ಹುಣಸಗಿ ನಿನ್ನ ಮೇಲೊಂದು ಮುನಿಸಿದೆ ಕಾರಣ ಹೇಳಲ್ಲ ಚಿಂತಿಸೊಮ್ಮೆ.! ಕನಿಕರಿಸದ ಇರುಳುಗಳೆಲ್ಲ ಉರುಳುಗಳಾಗಿ ಬೆಸೆದಿವೆ..! ಮಬ್ಬಿನಲೊಂದು ನಿಟ್ಟುಸಿರು ತುಟಿಯಂಚಿನಲೊಂದು ಹಸಿಯಾದ ಮೌನದುಸಿರು.! ಕಾಡಿಗೆಯ ಕರಿನೆರಳು.. ಕಮರಿದಾ ಪುಷ್ಪದಂತೆ ರತಿ ಉರಿದು ಭಸ್ಮವಾದಂತೆ..! ಕಪ್ಪುಛಾಯೆಯ ಬಿಂಕನಾನೊಲ್ಲೇ ಮಡುಗಟ್ಟಿದ ಒಡಲುನನ್ನಲ್ಲೇ ನಿನ್ನುಸಿರ ಅಪ್ಪುಗೆಯಲಿ ಬಿಗಿದು ಮುತ್ತಿನಾ ಮಳೆಯ ಸುರಿದ ಬಾರದೇ ನನಗಿನ್ನೇನೂ ಬೇಕಿಲ್ಲ..ನಲ್ಲಾ.. ನಿನ್ನ ಹಿಡಿ ಪ್ರೀತಿಯ ಹೊರತು…! ನಿನ್ನೊಟಕೆ ಹುಸಿಗೋಪ ಮರೆವೆನು ಮರುಗಿದಾಗೆಲ್ಲ ಕನವರಿಕೆಗಳು ಮೊಳಕೆಯೋಡಯದ ಕನಸುಗಳು ನಿಟ್ಟೂಸಿರು ಬಿಡದಾ ಕಂಗಳು..! ನೀ ನೀಡಿದ ಉದರಾಗ್ನಿಯಲಿ […]

ಕಾವ್ಯಯಾನ

ಮಕ್ಕಳ ಕವಿತೆ ಆಸೆ ಮಲಿಕಜಾನ ಶೇಖ ಆಕಾಶಕ್ಕೆ ಹಾರುವ ಆಸೆ ರೆಕ್ಕೆಗಳಿಲ್ಲದೆ ಹಾರುವದ್ಹೇಗೆ..? ಗರುಡನೆ ಗರುಡನೆ ಕೇಳಿಲ್ಲಿ ನಿನ್ನಯ ರೆಕ್ಕೆ ಕೊಡು ಎನಗೆ.. ಮುದ್ದಿನ ಬಾಲಕ ಕೇಳಲೆ ನೀನು ರೆಕ್ಕೆಗಳೇನು ಕೊಡುವೆನು ನಾನು ಛಲವಿಲ್ಲದನೆ ಹಾರುವದ್ಹೇಗೆ..? ರೆಕ್ಕೆಗಳಂತು ಚಿಟ್ಟೆಗೆವುಂಟು..! ಸಾಗರದಾಚೆ ಈಜುವ ಆಸೆ ಕಿವಿರುಗಳಿಲ್ಲದೆ ಈಜುವದ್ಹೇಗೆ..? ಮೀನವೆ ಮೀನವೆ ಕೇಳಿಲ್ಲಿ ನಿನ್ನಯ ಕಿವಿರು ಕೊಡು ಎನಗೆ.. ಪುಟ್ಟನೆ ಪುಟಾಣಿ ಕೇಳಲೆ ನೀನು ಕಿವಿರುಗಳೇನು ಕೊಡುವೇನು ನಾನು ತಾಳ್ಮೇಯ ಇಲ್ಲದೆ ಈಜುವದ್ಹೇಗೆ..? ಕಿವಿರುಗಳಂತು ಚಿಪ್ಪೆಗೆವುಂಟು..! ಗುಬ್ಬಿಯ ಗೂಡನು ಕಟ್ಟುವ […]

ಕಾವ್ಯಯಾನ

‘ಪ್ರಶ್ನೆ ದಾಳ’ ವಸುಂಧರಾ ಕದಲೂರು.  ಎಳೆ ಹುಡುಗನನ್ನು ಮಲೆ ಮೇಲೆ ಕೂರಿಸಿ ಆತ, ಮೊಲೆ ಕಾಣಬಾರದೆಂದು ಬಿಡುತ್ತಾರೆ ! ಹತ್ತಲು ೧೮ ಏಕೆ ..? ಉತ್ತರವಿಲ್ಲದವರ ಬಳಿ ಇಂತಹ ಪ್ರಶ್ನೆ ಕೇಳಬಾರದು. ಎರಡೊಂಬತ್ತಲಿ ಹದಿನೆಂಟೆಂದು ಒಂದು ಗರ್ಭಾವಧಿಯ ಅವಧಿಯ ಮರೆತು ಬಿಡುತ್ತಾರೆ. ಬೀಜ ನಾಟಿ, ಬೇರು ಚಿಗುರಿ ಹೂವೋ ಕಾಯೋ ಅರಳಿಕೊಳಲು ಒಂದ್ಹೊಂಬತ್ತು. ಹೊಟ್ಟೆ ಮಗುಚಿ ಅಂಬೆಗಾಲಿರಿಸಿ, ಬಾಯ ತೊದಲು ಶುರುವಿಗೆ ಇನ್ನೊಂದು ಒಂಬತ್ತು. . ಆಯಿತಲ್ಲ ಹದಿನೆಂಟು..! ಪ್ರತೀ ಪ್ರಶ್ನೆಗೂ ಒಂದು ಉತ್ತರವಿದೆ ಒಪ್ಪಿತವಾದರೆ. ಆದರೂ […]

ಕಾವ್ಯಯಾನ

ವಿಶ್ವಗುರು ಬಸವಣ್ಣ ತೇಜಾವತಿ ಹೆಚ್. ಡಿ ನೀನೇ ಅಲ್ಲವೇ ಮಹಾಮಾನವತಾವಾದಿ ಹನ್ನೆರಡನೆಯ ಶತಮಾನದ ಕ್ರಾಂತಿಯೋಗಿ ಅದೆಷ್ಟೋ ಅಂಧಕಾರದ ಧೂಳುಹಿಡಿದ ಮನಗಳಲಿ ಅರಿವಿನ ಪ್ರಣತಿಯ ಬೆಳಗಿದೆ ! ಹುಟ್ಟುಬ್ರಾಹ್ಮಣ ಸಂಸ್ಕಾರಶರಣ ಅಂಧಶ್ರದ್ಧೆ ಜಡ ಸಂಪ್ರದಾಯ ತೊರೆದು ಸತ್ಯಾನ್ವೇಷಕನಾದೆ ! ಅಂತರ್ಜಾತಿ ವಿವಾಹ ಮಾಡಿಸಿ ಬಿಜ್ಜಳನಾಸ್ಥಾನ ಮಂತ್ರಿ ನೀನು ಗಡೀಪಾರಿಗೀಡಾದೆ! ಸಮಾಜ ಸುಧಾರಕನಾದೆ ಕಾಯಕವೇ ಕೈಲಾಸವೆಂದೆ ನುಡಿದಂತೆ ನಡೆಯೆಂದೆ ಅಂತರಂಗಶುದ್ಧಿಯೇ ಮಿಗಿಲೆಂದೆ ಜ್ಞಾನವೇ ಬಂಢಾರವೆಂದು ನೀ ಭಕ್ತಿ ಬಂಢಾರಿಯಾದೆ ! ಆಚಾರವೇ ಸ್ವರ್ಗವೆಂದೆ ಅನಾಚಾರವೇ ನರಕವೆಂದೆ ಅನುಭವ ಮಂಟಪದೊಳು ಮಹಾಜ್ಞಾನಿಯಾದೆ […]

ಕಾವ್ಯಯಾನ

ಬಸವಣ್ಣ ಡಾ.ಪ್ರಸನ್ನ ಹೆಗಡೆ ಅಣ್ಣ ಬಸವಣ್ಣನೆಂದರೆ ಬಿಜ್ಜಳ ಮಂತ್ರಿಯೊಂದೇ ಅಲ್ಲ ಸಾವಿರದ ಬೀಜ ಬಿತ್ತಿದ ಮಹಾ ಮಂತ್ರ ಮೂರ್ತಿ ಅಣ್ಣ ಬಸವಣ್ಣನೆಂದರೆ ಬರೆ ವಚನಕಾರನಲ್ಲ ಹೊಸ ವಿಚಾರ ಸೃಜಿಸಿದ ವಿವೇಕ ಮೂರ್ತಿ ಅಣ್ಣ ಬಸವಣ್ಣನೆಂದರೆ ಬರೇ ಶಿವಶರಣನಲ್ಲ ಶಿವ ಚರಣ ಮುಟ್ಟದಾ ವಿಶ್ವ ಮೂರ್ತಿ ಅಣ್ಣ ಬಸವಣ್ಣನೆಂದರೆ ವಿಚಾರವಾದಿಯೊಂದೇ ಅಲ್ಲ ಶಿಷ್ಟಾಚಾರ ಪಾಲಿಸಿದ ಇಷ್ಟ ಮೂರ್ತಿ ಅಣ್ಣ ಬಸವಣ್ಣನೆಂದರೆ ಬರೇ ಲಿಂಗ ಪಿಡಿದವನಲ್ಲ ಲಿಂಗವನ್ನೇ ಮೆಚ್ಚಿಸಿದ ಜ್ಞಾನ ಮೂರ್ತಿ ಅಣ್ಣ ಬಸವಣ್ಣನೆಂದರೆ ಜ್ಞಾನ ಸಾಗರವಷ್ಟೇ ಅಲ್ಲ ಸರ್ವರನೂ […]

ಕಾವ್ಯಯಾನ

ಕರೋನ ಕರೋನಾ.. ವಾಣಿ ಮಹೇಶ್ ಅತ್ತ ಹೋಗ್ ಬ್ಯಾಡಿ ಕರೋನಾ ಐತೆ ಇತ್ತ ಬರ್ ಬ್ಯಾಡಿ ಕರೋನಾ ಐತೆ ಎತ್ತಾ ಹೋದ್ರೂನೂ ಪೋಲೀಸು ಕಾಟ ಎತ್ತಾ ಬಂದ್ರೂನೂ ವೈದ್ಯರಾ ಕಾಟ ಏನು ಮಾಡೋದಪ್ಪ… ಹೆಂಗಿರೋದಪ್ಪಾ..? ಮನೆಯಲ್ಲಿ ಕುಂತೂ.. ನಿಂತೂ.. ಸಾಕಾಗೋಗೈತೆ.. ಅಯ್ಯೋ ಸಾಕಾಗೋಗೈತೆ // ಪಕ್ಕದಾ ಮನೆಯಾ ಇಣುಕಿ ನೋಡಲೂ ಭಯವಾಗುತೈತೆ ಯಾಕೋ.. ಏನೋ.. ಬಂದಾ.. ಕೆಮ್ಮು ನೋಡಿದಾ ಜನ ದೂರ ಸರಿಸಿಯೇ ಬಿಟ್ಟರಲ್ಲ!!! ಅಯ್ಯೋ ಓಡಾಡ್ಸಿ ಬಿಟ್ಟರಲ್ಲ..!! ಬೆಳಗಿಂದಾ.. ಮೈ ಬೆಚ್ಗೆ.. ಊರೆಲ್ಲಾ ಸುತ್ತೋಕೆ ಹೋಗಿದ್ನಲ್ಲ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-7 ಸಮಾನತೆಯೋ ಸಹಬಾಳ್ವೆಯೋ? ಲಾಕ್ ಡೌನ್ ಶುರುವಾದಾಗಿನಿಂದ ಕಿಟಕಿ ಬಾಗಿಲುಗಳು ಸದಾ ಮುಚ್ಚಿಯೇ ಇದ್ದರೂ ಅದೆಲ್ಲಿಂದ ಬರುತ್ತದೆಯೋ ಇಷ್ಟೊಂದು ಧೂಳು ಎನ್ನುತ್ತಾ ಗೊಣಗಾಡಿಕೊಂಡು ಸ್ವಚ್ಛತಾ ಕಾರ್ಯ ಶುರು ಮಾಡಿದೆ.  ಅಷ್ಟರಲ್ಲಿ ಒಬ್ಬ ಗೆಳತಿ ಪೋನ್ ಮಾಡಿದಳು. ಬೆಳಿಗ್ಗೆ ಹತ್ತು ಗಂಟೆಯ ಒಳಗೆ ಮನೆಯ ಎಲ್ಲಾ ಕೆಲಸ ಮುಗಿದು ಹೋಗುತ್ತದೆಯೆ ಈಗ. ನನ್ನ ಗಂಡನೂ ಮನೆಯಲ್ಲಿಯೇ ಇರುವುದರಿಂದ  ಅರ್ಧ ಮನೆಕೆಲಸ ಅವನಿಗೆ ತಗುಲಿ ಹಾಕ್ತೇನೆ… ನೀನೂ ಹಾಗೇ […]

ಕಾವ್ಯಯಾನ

ಅಂತಿಮಯಾತ್ರೆ ಹರೀಶ ಕೋಳಗುಂದ ಉಸಿರು ಬಿಗಿ ಹಿಡಿದಿದೆ, ಎದೆಬಡಿತ ಕ್ಷೀಣ. ಕೆಲವೇ ಸಮಯ ಬಾಕಿ. ಪಸೆಯಾರಿದ ಗಂಟಲಿಗೆ ಕಡೆಯ ಬಯಕೆ, ಗುಟುಕು ಗಂಗಾಜಲ ಮಾತ್ರ. ಮತ್ತೇನೂ ಬೇಡ. ಉರಿವ ಹಣತೆಯ ಸೊಡರು ಬೀಸುಗಾಳಿಗೆ ತುಯ್ದಾಟ….! ಕಾಲ ಮೀರುತ್ತಿದೆ, ಸಾಸಿವೆಯ ಸಾಲಕ್ಕೆ ಹೋದವಳು ಇನ್ನೂ ಮರಳಿಲ್ಲ, ದಾರಿಯಲಿ ಬುದ್ಧ ಸಿಕ್ಕಿರಬೇಕು. ಕಾಲವಶದಲ್ಲಿ ಸಾವಿತ್ರಿಯೂ ಲೀನ. ಪುರುದೇವನ ವರ್ತಮಾನವೂ ಇಲ್ಲ. ಕಣ್ಣು ಕವಿಯುತ್ತಿದೆ, ಚಾಚಿ ಮಲಗಿದ ದೇಹ ಅಸಾಧ್ಯ ಭಾರ. ಸುತ್ತ ಕತ್ತಲೆಯ ಕೂಪ, ಏಕಾಂಗಿ ಭಾವ, ಹಠಾತ್ತನೆ ಯಾರದೋ […]

ಕಾವ್ಯಯಾನ

ಶಾಯರಿಗಳು ಮರುಳಸಿದ್ದಪ್ಪ ದೊಡ್ಡಮನಿ (ಕೂದಲಾ)                                                                            ನಿನ್ನ ಕೂದಲ ಹಾಂಗ ಹಗೂರಕ ನಿನ್ನ ಗಲ್ಲಕ್ಕ ಹಾರಿಕೊತ ಮುತ್ತಿಡತಾವು ಅವು ಎಷ್ಟು ಪುಣ್ಯಾ ಮಾಡ್ಯಾವು. ನೀ ಬಾಚಿ ಕಟ್ಟಿದ ಮುಡಿ ಬಿಚ್ಚಿ ಜಾಡಿಸಿದರ ಹುಚ್ಚು ಬಿಡಬೇಕು ಅವನ್ನೋಡಿದ ಹರೇದ ಹುಡುಗರಿಗೆ ಹುಚ್ಚು ಹಿಡಿ ಬೇಕು.  ಕಟ್ಟಿದ ಮುಡಿ ಬಿಚ್ಚಿ ಜಾಡಿಸಿದರ ನವಿಲು ಕುಣದಂಗಕ್ಕೈತಿ ನವಿಲಿನ ಕುಣತಕ್ಕ ನನಗರ ಒಂದ್ ನಮೂನಿ ಆಕ್ಕೈತಿ. ನಿನ್ನ ಮುಂಗುರುಳು ಎಷ್ಟು ಚಂದ ಮುಖದ ಮ್ಯಾಗ ಹಾರಾಡತಾವು ಅವುಕ ಸಲಿಗಿ ಕೊಟ್ಟಿ ಅಂತ ಕಾಣತೈತಿ ಎಲ್ಲೆಂದ್ರಲ್ಲಿ […]

ಬಸವ ಜಯಂತಿ

ಬಸವ ಜಯಂತಿ ಜಾತಿಯನ್ನು ೧೨ ನೆಯ ಶತಮಾನದಲ್ಲಿಯೇ ಕಾಯಕ ಸೂಚಕವಾಗಿಸಿದ ಬಸವಣ್ಣ..! ನಾಳೆ ದಿನಾಂಕ ೨೬ ರಂದು ಬಸವಣ್ಣನವರ ಜಯಂತಿ. ಆ ನೆಪದಲ್ಲಿ ಈ ಲೇಖನ… ಬಸವೇಶ್ವರ ( ಬಸವ ಅಥವಾ ಬಸವಣ್ಣನವರು) ಲಿಂಗಾಯತ ಧರ್ಮದ ಸ್ಥಾಪಕರು. ಬಸವಣ್ಣನವರು ೧೨ ನೆಯ ಶತಮಾನದ ಭಕ್ತಿ ಪಂಥದ ಪ್ರಮುಖರಲ್ಲಿ ಒಬ್ಬರು. ಬಸವಣ್ಣನವರು ಮತ್ತು ಶಿವಶರಣರಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಚೆನ್ನಬಸವಣ್ಣ ಮೊದಲಾದ ನೂರಾರು ಶರಣರು ವಚನಗಳ ಮೂಲಕ ಭಕ್ತಿಪಥ ಮತ್ತು ಜೀವನದ ಬಗ್ಗೆ ಹೊಸ ದೃಷ್ಟಿ ಬೀರಿದರು… ಬಸವಣ್ಣನವರು ೧೧೩೪ […]

Back To Top