ಕವಿ-ಪರಿಚಯ

ಕವಿ-ಪರಿಚಯ

ಕಮಲಾದಾಸ್ ಶೀಲ ಮತ್ತು ಅಶ್ಲೀಲ ನಡುವಿನ ಗೋಡೆಯನ್ನು ಕೆಡುವಿದ ವಿವಾದಿತ ಮಲಯಾಳಂ ಮತ್ತು ಇಂಗ್ಲೀಷ್ ಲೇಖಕಿ ಕಮಲಾದಾಸ್..! ಕಮಲಾದಾಸ್ ರೆಂದರೆ ನಮ್ಮ ಕನ್ನಡದ ಲೇಖಕಿ ಕಮಲಾ ಹೆಮ್ಮಿಗೆಯವರಿಗೆ ಅದೆಂತದೋ ಪ್ರೀತಿ. ಈ ಲೇಖಕಿ ಕಮಲಾ ಹೆಮ್ಮಿಗೆಯವರ ಬಹುತೇಕ ಕೃತಿಗಳಲ್ಲಿ ಇದೇ ಕಮಲಾದಾಸ್ ರ ನೆರಳನ್ನು ಕಾಣಬಹುದು ಎಂಬ ಅಭಿಪ್ರಾಯ ನನ್ನದು. ಈ ಕಮಲಾ ಹೆಮ್ಮಿಗೆಯವರ ಪ್ರತಿ ಕೃತಿಗಳಲ್ಲೂ ನಾನು ಇದೇ ಕಮಲಾದಾಸ್ ರ ಛಾಪನ್ನು ಕಂಡಿದ್ದೇನೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಹೀಗೆ ಹೇಳುತ್ತಲೇ ಈ ಕಮಲಾದಾಸ್ […]

ಕಾವ್ಯಯಾನ

ಹಾರು ಗರಿ ಬಿಚ್ಚಿ ಡಾ.ಗೋವಿಂದ ಹೆಗಡೆ ಏನಾದರೂ ಆಗಬೇಕು ಬಾಂಬಿನಂತಹ ಏನೋ ಒಂದು ಸ್ಫೋಟಿಸಿ ಹೊಗೆಯಲ್ಲಿ ಅಥವಾ ಅಗ್ನಿಗೋಲದಲ್ಲಿ ಮರೆಯಾಗಿ ಬೇಡ, ಚಾಚಿದ ಕಾಲಿಗೆ ಅಲ್ಲೆಲ್ಲೋ ಮರಳಲ್ಲಿ ಓಡುವ ಇರುವೆ ಕಚ್ಚಿ ‘ಹ್ಹಾ’ ಎಂದು ಏನಾದರೂ ನಡೆಯಲಿ ಇಲ್ಲಿ ಈ ನಿಷ್ಕ್ರಿಯತೆಯನ್ನು ಹೇಗೆ ಸಹಿಸುವುದು +++ ನಿಷ್ಕ್ರಿಯತೆ ನಿರಾಕರಣೆಯೇ ಅನುಭವವೇ ಆಭಾಸವೇ ಅಲ್ಲೆಲ್ಲೋ ಕೋಗಿಲೆ ಕೂಗಿದೆ ಹಕ್ಕಿ ಜೋಡಿ ಸಂಜೆ ಆಗಸವ ಸೀಳಿ ಹಾರಿವೆ ಎಲೆಯೊಂದು ಟಕ್ಕೆಂದು ತೊಟ್ಟು ಕಳಚಿದೆ ತುಸು ಆಲಿಸಿದರೆ ಕೊಂಬೆಯೊಳಗೆ ಹರಿವ ಜೀವರಸದ […]

ಪ್ರಬಂಧ

ಕರೊನ-ನೆಗಡಿ ಜ್ಯೋತಿ ಡಿ.ಬೊಮ್ಮಾ ಈಗ ಎಲ್ಲರೂ ಅಸ್ಪೃಶ್ಯರೆ ,ಒಬ್ಬರಿಂದ ಒಬ್ಬರು ದೂರ ಇರುವ ಅಸಹಾಯಕತೆ ತಂದೊಡ್ಡಿದ ಆ ಒಂದು ಚಿಕ್ಕ ವೈರಾಣುವಿಗೆ ಇಡೀ ಮನುಕುಲವೇ ಅಂಜಿ ನಡುಗುತ್ತಿದೆ. ಆಪ್ತವಾಗಬೇಕಿದ್ದ ಬಾಂಧವ್ಯಗಳು ಸಂಬಂಧಗಳು ಕರಗುತ್ತಿವೆ.ದೈಹಿಕ ಅಂತರ ಮನದಂತರವನ್ನು ದೂರಗೊಳಿಸುತ್ತಿದೆ ಒಬ್ಬರನ್ನೊಬ್ಬರು ಅನುಮಾನದಿಂದ ನೋಡಿಕೊಳ್ಳುತ್ತ ,ತಮ್ಮವರೊಡನೆಯೂ ಆಗಂತುಕರಂತೆ ಬದುಕುವಂತೆ ಮಾಡಿದ ಈ ಸಂದರ್ಭ ಯಾತಾನಾಮಯವಾಗಿದೆ. ಮನೆಯಲ್ಲಿ ಎಲ್ಲರೊಡನೆ ಬೆರೆತು ಊಟ ತಿಂಡಿ ಮಾಡುತಿದ್ದರೂ ಒಳಗೆಲ್ಲ ಎಕಾಂಗಿ ಭಾವ ,ಎನೋ ತಳಮಳ ಹೇಳಿಕೊಳ್ಳಲಾಗದ ಅಸಹಾಯಕತೆ ,ಹಿಂದೆಂದೂ ಕಾಡಿರದ ಅನಿಶ್ಚಿತತೆ ಮನ ಕೊರೆಯುವಂತೆ […]

ಕಾವ್ಯಯಾನ

ಕ್ವಾರಂಟೈನ್ ದಿನಗಳಿವು ಶಾಲಿನಿ ಆರ್. ಅಮ್ಮನ ಆ ಮೂರು ದಿನ ಕಾಗೆ ಮುಟ್ಟಿದೆ ಮುಟ್ಟ ಬೇಡ ಎಂದು ದೂರ ಕುಳಿತ ಮುಟ್ಟಿನ ಆ ದಿನ, ಇಂದು ನಾನೆ ಯಾರನ್ನು ಮುಟ್ಟಿಸಿಕೊಳದೆ ದೂರದಿ ನಿಂತು  ದಿನ ದೂಡುತಿರು ಕ್ವಾರಂಟೈನ್ ದಿನ, ತರಕಾರಿ ಕೊಳ್ಳುವಾಗ ಮಾರುವವನಿಗಿಂತ ಮಾರು ದೂರ ನಿಂತು ಕೊಳ್ಳುವ ಕ್ವಾರಂಟೈನ್ ದಿನ, ದಿನಸಿ ಸಾಮಾನಿನ ಖರೀದಿಗೂ ಬಂದಿದೆ ಕೊಡುವ ಕೊಳ್ಳುವವನ ಮಧ್ಯೆ ಲಕ್ಣ್ಮಣರೇಖೆಯ ಕ್ವಾರಂಟೈನ್ ದಿನ ಪ್ರತಿಯೊಬ್ಬರ ಮಧ್ಯೆದಲ್ಲೂ ಸಿಲುಕಿ ನಲುಗುತಿದೆ ಮುಗಿಯಲಾರದೆ ನರಳುತಿದೆ ಕ್ವಾರಂಟೈನ್ ದಿನ, […]

ನಾನು ಓದಿದ ಪುಸ್ತಕ

ನಕ್ಷತ್ರ ಸೂಕ್ತ  ಡಾಕ್ಟರ್ ಅನಸೂಯಾದೇವಿ  ನಕ್ಷತ್ರ ಸೂಕ್ತ  ಲೇಖಕಿ ಡಾಕ್ಟರ್ ಅನಸೂಯಾದೇವಿ  ಪ್ರಕಾಶಕರು ಶ್ರೀ ಅನ್ನಪೂರ್ಣ ಪ್ರಕಾಶನ ಅಗ್ರಹಾರ ದಾಸರಹಳ್ಳಿ ಬೆಂಗಳೂರು ೫೦೦೦೭೯  ಮೊದಲ ಮುದ್ರಣ ೨೦೧೪ ಬೆಲೆ ರೂ.೧೫೦/ ಮೂರು ಪ್ರಬುದ್ಧ ಮುಖ್ಯಪಾತ್ರಗಳ ಸುತ್ತ ತಿರುಗುವ ಕಥೆ .ಅಡಿ ಟಿಪ್ಪಣಿ ಹೇಳುತ್ತದೆ “ನನಗೊಂದು ಮಗು ಬೇಕು” ನಾಯಕಿ ಮಾರ್ದವಿ ಸಂಗೀತಗಾರಳು ವಿದ್ಯಾವಂತೆ ಹಾಗೂ ಸೌಮ್ಯ ಸ್ವಭಾವದ ರೂಪಸಿ .ಅವಳ ಪ್ರತಿ ಮಧುಕರ ಕಾಲೇಜು ಉಪನ್ಯಾಸಕನಾಗಿದ್ದವನು  ಹಾಗೂ ದೇವಾಲಯದ ಅರ್ಚಕ ಸಂಸ್ಕೃತ ವಿದ್ವಾಂಸ ಹಾಗೂ ಪಿ.ಎಚ್.ಡಿ. ಬರೆಯುತ್ತಿರುವ […]

ಕಾವ್ಯಯಾನ

ಮುಗಿಯದ ಹಾಡು ಎನ್.ಶೈಲಜಾ ಹಾಸನ ಇಡುವ ಹೆಜ್ಜೆ ಜೊತೆ ಜೊತೆಹೆಜ್ಜೆ ಕೂಡಿದ ಪಲುಕುಪರಿ ಪರಿಯ ಕುಲುಕುನಾನೆಂತು ಬಣ್ಣಿಸಲಿನೀ ಒಲಿದೆ,ನನ್ನ ಒಲಿಸಿದೆಬೆಸೆದಿದೆ ಬಂಧನಮನವೀಗ ಹೂ ನಂದನ  ಒಲವ ಬಂಧನದಿ ಸುಖವಿದೆಸಿರಿಯಿದೆ,ಮಧುವಿದೆ,ಸವಿಯಿದೆನಡೆದ ಹಾದಿಯಲ್ಲಿಬಣ್ಣಗಳ ಚೆಲುವಿದೆ ಮೌನದ ಹಾಡಲಿನೂರು ಕವಿತೆಕಣ್ಣ ಬೆಳಕಲಿ ಪ್ರೇಮದಣತೆನೋಟದಂಚಿನಲಿಕೋರೈಸುವ ಮಿಂಚುನೋಟದಾಳದಲಿ ನಲ್ಮೆಯ ಜಲಪಾತತುಂಟ ನಗೆಯಲಿಸಾವಿರ ಪುಳಕ ಕನಸುಗಳ ಸಾಕಾರಎದೆಯ ಗೂಡಲಿನಿನ್ನೊಲುಮೆಯಹುಚ್ಚು ನದಿಯಲಿಕೊಚ್ಚಿ ಹೋದವಳುತೇಲಿ ತೇಲಿ ತೇಲುತಲಿಇರುವ ಹುಚ್ಚು ಖೋಡಿಮನಸ್ಸು ನನ್ನದು ಮುಟ್ಟಲಾಗದು,ತಟ್ಟಲಾಗದುಮೆಟ್ಟಲಾಗದುಮುಪ್ಪಾನು ಮುಪ್ಪಿಗೆಒಲುಮೆಯ ಮನಸಿಗೆಗೆಲುವಿನ ಸೊಗಸು ದಾಂಪತ್ಯ ಗೀತೆಗೆಅನುರಾಗದ ಪಲ್ಲವಿಶೃಂಗಾರದ   ಅನುಪಲ್ಲವಿಮುಗಿಯದ ಹಾಡು ಇದು *******

ನಾನು ಓದಿದ ಪುಸ್ತಕ

ನೂರ್ ಇನಾಯತ್ ಖಾನ್ ಚಂದ್ರಶೇಖರ್ ಮಂಡೆಕೋಲು ಮೂರು ದಿನಗಳ ಕಾಲ ನನ್ನನು ಈ ಕೊರೋನಾ ರಜೆ ‘ನೂರ್ ಇನಾಯತ್ ಖಾನ್’ ನಾಝಿ ಹೋರಾಟದ ಆರ್ದ್ರ ಕಾವ್ಯವನ್ನು ಓದಲು ಹಚ್ಚಿತು. ನನ್ನ ಓದಿನ ಮಿತಿಯಲ್ಲಿ ನಾನು ಗ್ರಹಿಸಿದ ಕಿರು ಬರಹವಿದು.      ಧರ್ಮ ಹಾಗೂ ಜನಾಂಗ ಶ್ರೇಷ್ಠತೆಯ ಭ್ರಷ್ಠ ಸಿಂಡ್ರೋಮ್ ಇಂದು ನಿನ್ನೆಯದಲ್ಲ.ನಾಳೆ ಹೋಗುತ್ತದೆಂಬ ಖಾತ್ರಿಯೂ ಇಲ್ಲ;ಆ ಮಾತು ಬೇರೆ.ಎರಡನೇ ಜಾಗತಿಕ ಮಹಾಯುದ್ಧದಲ್ಲಿ ನಾಝಿಗಳ ನಡೆಸಿದ  ಮಾರಣ ಹೋಮಕ್ಕೆ ಯಾವತ್ತೂ ಕ್ಷಮೆ ಇಲ್ಲ.ಅತ್ಯಾಚಾರಕ್ಕೊಳಪಡಿಸಿ ಸಜೀವ ದಹಿಸುವ ಅವರ ಕ್ರೌರ್ಯವೊಂದು […]

ನಾ ಮೆಚ್ಚಿದ ಪುಸ್ತಕ

ಯಾದ್ ವಶೇಮ್ ನೇಮಿಚಂದ್ರ ನಾ ಮೆಚ್ಚಿದ ಪುಸ್ತಕ, ಶ್ರೀಮತಿ ನೇಮಿಚಂದ್ರ ಅವರು ಬರೆದ ಯಾದ ವಶೇಮ್’. ಈ ಪುಸ್ತಕ ಕನ್ನಡ ಸಾಪ್ತಾಹಿಕದಲ್ಲಿ ಧಾರಾವಾಹಿಯಾಗಿ ಬಂದಾಗ ಇದರ ಹೆಸರು ‘ನೂರು ಸಾವಿರ ಸಾವಿನ ನೆನಪು’ ಆಗಿತ್ತು. ಹಿಟ್ಲರನ ರಕ್ತದಾಹದ, ಅಶಾಂತಿಯ ನೆಲದಿಂದ ಗಾಂಧಿಯ ಅಹಿಂಸೆಯ ನೆಲಕ್ಕೆ ರಕ್ಷಣೆ ಮತ್ತು ಶಾಂತಿಯನ್ನು ಅರಸಿ ಬಂದ ಪುಟ್ಟ ಯಹೂದಿ ಬಾಲೆಯ ನೈಜ ಕತೆಯಿದು. ನಾನು ಈ ಪುಸ್ತಕವನ್ನು ಮೆಚ್ಚಿಕೊಳ್ಳಲು ಮೂಲ ಕಾರಣ ಕೆಳಗೆ ಬರೆದ ಐದು ಅಂಶಗಳು. ಇವು ಯಾವುದೇ ಶ್ರೇಷ್ಠ […]

ನಾನು ಓದಿದ ಕಾದಂಬರಿ

ಮಲೆಗಳಲ್ಲಿ ಮದುಮಗಳು ಕುವೆಂಪು ಇದು ಬರಿ ಅನಿಸಿಕೆ ಅಷ್ಟೇ ವಿಮರ್ಶೆ ನನಗೆ ತಿಳಿಯದು. ನಾನು ಇತ್ತೀಚಿಗೆ ಓದಲ್ಪಟ್ಟ ಮತ್ತು ಮೊದಲ ಕಾದಂಬರಿ ಕನ್ನಡದ ಮನೆ ಮಾತಾಗಿರುವ, ಕನ್ನಡ ಸಾಹಿತ್ಯ ಲೋಕದಲ್ಲೇ ತನ್ನದೇ ಆದ ಛಾಪನ್ನು ಮೂಡಿಸಿರುವ ಅದ್ಬುತವಾದ, ಸುದೀರ್ಘವಾದ ಕಾದಂಬರಿ “ಮಲೆಗಳಲ್ಲಿ ಮದುಮಗಳು” ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರವರ ಕನಸಿನ ಕೂಸುಮಗಳು ಈ ಮಲೆಗಳಲ್ಲಿ ಮದುಮಗಳ ಓದಿದ ನಂತರ ನನ್ನ ಮನಸಲ್ಲಿ ಅಳಿಯದೆ ಉಳಿದ ವಿಷಯಗಳ ಬಗ್ಗೆ ಬರೆಯುತ್ತೇನೆ “ಮಲೆಗಳಲ್ಲಿ ಮದುಮಗಳು” ಸುದೀರ್ಘವಾದ, ಹೆಚ್ಚು ದೃಶ್ಯಗಳಿರುವ, ಹತ್ತಾರು […]

ಕಾವ್ಯಯಾನ

ಕನಸಿನೂರಿನ ಅಪ್ಪ ಐಶ್ವರ್ಯ ಎಲ್.. ಬೆಳಕ ಹೊತ್ತು ಬಂದ ಸೂರ್ಯನೂ ಹೋಗುವ ಹೊತ್ತಾಯಿತು ಹೊರಗೆ ಹೋದ ಅಪ್ಪನು ಬಂದಾನೂ, ಕೈ ತುಂಬ ಬೊಂಬೆ ತಿಂಡಿಗಳ ತಂದಾನೂ ಅವರಿವರ ಮನೆಯ ಅಪ್ಪಂದಿರಂತೆಯೇ ನನ್ನಪ್ಪನೆಂದು ಕಣ್ಣಳತೆಗೆ ಎಟುಕುವವರೆಗೂ ಮನೆಯ ಮುಂದಿನ ಕಂಬವನೇರಿ ಕಾದು ಕುಳಿತೆ, ಬೆಳೆದು ಬುದ್ದಿಬರುವವರೆಗೆ…… ಏರಿದ ಕಂಬಕ್ಕಾದರೂ ಅರಿವಾಗಿರಬಹುದು ಅಪ್ಪನೆಂಬ ಕನಸು ಬೇರೂರಿದ್ದು ನನ್ನೊಳಗೆ, ಅರಿವಾಗಲೇ ಇಲ್ಲ ದೇವರಿಗೆ, ಅಪ್ಪನ ಕರೆದೊಯ್ದೆಬಿಟ್ಟಿದ್ದನು ನಂಗೆ ಬುದ್ದಿಬರುವುದರೊಳಗೆ………. ಜಡಕು ಕೂದಲಿಗೆ ಜುಟ್ಟುಕಟ್ಟಿ, ಕಪ್ಪು ಕಾಡಿಗೆಯಲಿ ಕಾಸಗಲದ ಬೊಟ್ಟಿಟ್ಟು ನನ್ನಿಷ್ಟದ ಫ್ರಾಕನ್ನೆ […]

Back To Top