ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್

ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್

ವಿಶೇಷ ಲೇಖನ ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್ ಸಿದ್ಧರಾಮ ಹೊನ್ಕಲ್ . ಇತ್ತೀಚಿನ ದಿನಗಳಲ್ಲಿ ನನಗೆ ಬಹುವಾಗಿ ಕಾಡಿ ನನ್ನಿಂದ ಮೂರು ಗಜಲ್ ಕೃತಿಗಳು ಹೊರಬರಲು ಕಾರಣ ಆದ ಗಜಲ್ ಸಾಹಿತ್ಯಕ್ಕೆ ಸಂಬಂಧಿಸಿದ ಗಜಲ್ ಸಾಹಿತ್ಯದ ಮೇರು ಪರ್ವತ  ಗಾಲಿಬ್ ಕುರಿತ ನನ್ನ ಪುಟ್ಟ ಬರಹ. . ಗಾಲಿಬ್ ಹುಟ್ಟಿನಿಂದ  ಸಾವಿನವರೆಗೆ ಆತನ ಬದುಕು ಬರಹ ಹವ್ಯಾಸ ಸುಖ ದುಃಖ ಸಾಲ ಸೋಲ ನೋವು ಅವಮಾನ ಸ್ವಾಭಿಮಾನ ಎಲ್ಲ ತಿಳಿದಾಗ ಅಂತಹ ಮಹತ್ವದ ಕಾವ್ಯ ಹುಟ್ಟಲು […]

‘ಅಮ್ಮನ ನಿರಾಳತೆ’

ವಸುಂಧರಾ ಕದಲೂರು ಬರೆಯುತ್ತಾರೆ

ಒಟ್ಟಿನಲ್ಲಿ ಹೊಟ್ಟೆ ತುಂಬಿದ ಮಗು ಒಂದಷ್ಟು ಹೊತ್ತು ತರಲೆ ಮಾಡದೇ ಆಡಿಕೊಂಡೋ, ಮಲಗಿಕೊಂಡೋ ಇದ್ದರೆ ಅಮ್ಮನಿಗೆ ಸಿಗುವ ನಿರಾಳತೆ ಇದೆಯಲ್ಲಾ ಅದಕ್ಕೆ ಬೆಲೆ ಕಟ್ಟಲಾಗದು.

ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ

ಪ್ರಬಂಧ ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ ಜಯಶ್ರೀ.ಜೆ. ಅಬ್ಬಿಗೇರಿ    ಇಸ್ಲಾಂ ಧರ್ಮದ ಪ್ರಖ್ಯಾತ ಗುರು ‘ಸಾದಿ’ ಸಣ್ಣವರಿದ್ದಾಗ ತನ್ನ ತಂದೆಯೊಂದಿಗೆ ಮಸೀದಿಗೆ ಹೋಗಿದ್ದರು. ತಂದೆ ಮಕ್ಕಳು ಮಸೀದಿಯ ಮೇಲ್ವಿಚಾರಣೆ ನೋಡಿಕೊಳ್ಳಬೇಕಿತ್ತು. ಅಲ್ಲಿ ಪ್ರಾರ್ಥನೆಗೆ ಬಂದವರೆಲ್ಲ ನಿದ್ದೆಗೆ ಜಾರಿದ್ದರು. ಅದನ್ನು ಕಂಡ ಸಾದಿಗೆ ಆಶ್ಚರ್ಯವಾಯಿತು. ಆತ ತಂದೆಗೆ ತಿಳಿಸಿದ. ‘ನಮ್ಮಿಬ್ಬರನ್ನು ಬಿಟ್ಟು ಬಾಕಿಯವರೆಲ್ಲ ಮಲಗಿ ಬಿಟ್ಟಿದ್ದಾರೆ. ಆತನ ತಂದೆಗೆ ಕೋಪ ಬಂದಿತು.’ನಿನ್ನ ಕೆಲಸ ನೀನು ಮಾಡು. ಬೇರೆಯವರು ಏನು ಮಾಡುತ್ತಿದ್ದಾರೆಂದು ನೋಡುವುದು ನಿನ್ನ ಕೆಲಸವಲ್ಲ. ‘ಬೇರೆಯವರಲ್ಲಿ ತಪ್ಪು […]

“ಅನ್ನದಾತನ ಸ್ವಗತ “

“ಅನ್ನದಾತನ ಸ್ವಗತ “ ಗೀತಾ ಅನಘ ಮುನಿನಸ್ಯಾಕೆ ತಾಯಿ ನನ್ನ ಮ್ಯಾಲ,ಕಾರ್ಖಾನೆ ಕಟ್ಟಿ ನಿನ್ನುಸಿರ ಮಲಿನ ಗೊಳಿಸಲಿಲ್ಲ,ರಾಜಕಾರಣಿಗಳಂತೆ ಸುಳ್ಳು ಭರವಸೆನೀಡಲಿಲ್ಲ,ಬ್ಯಾಂಕಿಗೆ ಸಾಲ ಕೇಳಿದೆ ಅಷ್ಟೇ,!!!!!!ಬೆಳೆ ಬಿತ್ತಲು,,,,,,,,,,,,,ಪಚ್ಚೆ ಪೈರು ಗಳಿಂದ ನಿನ್ನೊಡಲ ತುಂಬಲು,ಅದೇಕೋ ಕಾಣೆ ನಿನಗೂ ನನ್ನ ಮೇಲೆ ಮುನಿಸು,ಕೆಲವೊಮ್ಮೆ ಇಳೆಗೆ ಮಳೆಯ ಸುರಿಸದೆ,ನನಗೆಂದು ಮೀಸಲಿಟ್ಟ ನಿನ್ನ ದೇಹದ ಒಂದಿನಿತು ಭಾಗ ಬರಡಾಯಿತು,ಇನ್ನೊಮ್ಮೆ ಬಹಳಷ್ಟು ಮಳೆ ಬಂದು ಇಳೆ ನೆಂದು ನಿನ್ನೊಡಲ ಹಸಿರಾಗಿಸಿ ಫಸಲು ನೋಡಿ,ಸಂಭ್ರಮಿಸುವ ಸಮಯದಿಯಾಕೆ ನಿನ್ನಯ ರುದ್ರನರ್ತನ?! ಬಯಸಿದ್ದಕ್ಕಿಂತ ಹೆಚ್ಚು ಮಳೆರಾಯನ ಆರ್ಭಟ ಹೆಸರೆಂಬುದು ಪ್ರವಾಹ, […]

ಅಂಕಣ ಬರಹ ಬೆಳೆದು ದೊಡ್ಡವರಾಗುವುದೆಂದರೆ ಬೆಳೆದು ದೊಡ್ಡವರಾಗುವುದೆಂದರೆ ಪ್ರಜ್ಞೆ ಮತ್ತು ಸೂಕ್ಷ್ಮತೆಗಳನ್ನು ಕಳೆದುಕೊಳ್ಳುವುದಲ್ಲ.ಹದಿಹರೆಯದಲ್ಲಿ ಮಕ್ಕಳು ಬೆಳೆಸಿಕೊಳ್ಳುವ ಮನೋಧೋರಣೆಯನ್ನ ನಂತರ ಬದಲಿಸುವುದು ಬಹಳ ಕಷ್ಟ. ಇದೇ ಕಾರಣಕ್ಕೆ ಹದಿಹರೆಯದ ಮಕ್ಕಳ ತಾಯ್ತಂದೆಯರು ಬಹಳ ವ್ಯಥಿತರಾಗುವುದು.ಮಕ್ಕಳು ಹೇಳುವ ಒಂದು ಸಣ್ಣ ಸುಳ್ಳು , ಅವರು ತೋರುವ ಒಂದು ಸಣ್ಣ ನಿರ್ಲಕ್ಷ್ಯ ತಂದೆ ತಾಯಿಗೆ ಬಹಳ ನೋವನ್ನುಂಟುಮಾಡುತ್ತದೆ. ಮಕ್ಕಳೇ ಅವರ ಜಗತ್ತು.ಮಕ್ಕಳಿಗಾಗೇ ಬದುಕು ಸವೆಸುವ ತಾಯ್ತಂದೆಯರನ್ನ ಮಕ್ಕಳು ಅರ್ಥ ಮಾಡಿಕೊಳ್ಳುವಲ್ಲಿ ಬಹಳಷ್ಟು ಸಲ ಎಲ್ಲೋ ಸೋಲುತ್ತಾರೆ. ಹಾಗೊಮ್ಮೆ ಅರ್ಥ ಮಾಡಿಕೊಂಡರೂ ಕಾಲ […]

ಸ್ವಾರ್ಥ

ಕವಿತೆ ಸ್ವಾರ್ಥ ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಗದ್ದುಗೆಯೇರಲುಹಣವನು ಎಸೆಯಿತುಗಳಿಕೆಯ ತೃಷೆಯಲಿನಶೆಯ ನೀಡಿತುಸ್ವಾರ್ಥದ ಮತವನು ಮುತ್ತಿ ಸಲಿಗೆಯ ಸುಲಿಗೆ ಮಾಡುತಒಸರುವ ಬೆವರಿನಬುತ್ತಿಯ ಕಟ್ಟಿತುನೆತ್ತರು ಹಿಚುಕಿ,ನೆಕ್ಕಿ ಕಾಡಿತುಕತ್ತಲು ಮುಕ್ಕಿ ಅನುದಿನ ಮತ್ತಿನಲಿಅಮೃತ ತುತ್ತಿನಲಿಕಡಲಾದರೂ ಕುಡಿದು,ಗತ್ತಿನಲಿ-ವಿಗತಿಯೆಡೆಗೆಒಂದನ್ಹತ್ತು ಸೇರಿಸಿತು ಸುಖದ ತಿರುಳ ಸವಿಯುತಸೇವಕನೆಂಬುದ ಮರೆಯಿತುಅಡಿಗೊಮ್ಮೆ ಜೊಳ್ಳ ನುಡಿದು,ಪರರ ಬಾದೆಯನರಿಯದೆನ್ಯಾಯ ನೀತಿ ಮಾತಾಡಿತು ಕೃತಕ ಕೀರ್ತಿಯ ಪಡೆಯಿತುವಿಕೃತ ಸೊಗದಲಿ ಹಾಡಿತುಸುಕೃತ ಭಾವವಿರದೆಅಂಬರವೇರಿಕೈ ಬೀಸಿ ಕರಗಿತು ಯಾರೋ ಬಿತ್ತಿದ ಬೀಜಹೂ-ಕಾಯಿಗಳ ಬಿಡದೆ ತಿಂದು,ಒಳಗು ಹೊರಗೂಗಿಡದ ಬುಡದನೆರಳೂ ಬಿಡದೆ,ದೈತ್ಯ ಹುಳುವಾಗಿ ಮೆರೆಯಿತು.……************************

ಮುಕ್ತಿ

ನಾಗಶ್ರೀ ಅವರ ‘ ಮುಕ್ತಿ ‘ ಕತೆ ತುಂಬಾ ಸಹನೆಯಿಂದ , ಜೀವನ ಪ್ರೀತಿಯಿಂದ ಬರೆದ ಕತೆ. ಮುಕ್ತಿ ಓದುವಾಗ ಮಾಸ್ತಿಯವರು ನೆನಪಾದರು. ನಾಗಶ್ರೀ ಕತೆ ಹೇಳುವ ಶೈಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ತರಹ. ಕುಟುಂಬ, ಜೀವನ ಪ್ರೀತಿಯ ಆಯಾಮಗಳು ಈ ಕತೆಯಲ್ಲಿವೆ.
ಕಥನ ಕಲೆ ನಾಗಶ್ರೀಗೆ ಸಿದ್ಧಿಸಿದೆ. ಯಾವ ವಸ್ತುವನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದು ಕಲಾತ್ಮಕತೆ ದಕ್ಕಿದೆ ಎನ್ನುತ್ತಾರೆ ಸಹೃದಯಿ ನಾಗರಾಜ್ ಹರಪನಹಳ್ಳಿ.
ಈ ವಾರದ ಸಂಗಾತಿಗಾಗಿ ಈ ಕತೆಯನ್ನು ಆಯ್ಕೆ ಮಾಡಿಕೊಟ್ಟಿದ್ದಾರೆ…

ಎರಡು ವಚನಗಳನ್ನು ಗಮನಿಸಿದರೆ ಎರಡು ತನ್ನ ಭಾಷೆ, ರಾಚನಿಕ ವಿನ್ಯಾಸ ಮತ್ತು ಕೇಳುಗನ ಮೇಲೆ ಬೀರುವ ಪರಣಾಮದಲ್ಲಿ ಭಿನ್ನವಾದ ಮಾರ್ಗಗಳನ್ನು ಹಿಡಿದವುಗಳೇ ಆಗಿವೆ. ಒಂದು ಪ್ರಶ್ನಾರ್ಥಕವಾಗಿ ನಡೆದರೆ, ಮತ್ತೊಂದು ಬದಲಾದ ಕಾಲ, ಸಮಾಜಕ್ಕೆ ಹಿಂದಿನ ಮೌಲ್ಯವೊಂದನ್ನು ಸಾರಿ ಹೇಳಬೇಕಾದಾಗ ಉಂಟಾದ ಖೇಧ, ಸಿಟ್ಟುಗಳು ಕೆಲಸ ಮಾಡಿವೆ. ‘ಅರಿವುಳ್ಳೊಡೆ’ ಎಂಬ ಒಂದು ಪದವನ್ನು ಬಳಸಿ ಅರಿವನ್ನು ಉಂಟುಮಾಡುವುದರ ಕಡೆಗೆ ತನ್ನ ಉದ್ದೇಶವನ್ನು ದಾಸಿಮ್ಮಯ್ಯ ಯಶಸ್ವಿಯಾಗಿ ಹಸ್ತಾಂತರ ಮಾಡಿಬಿಡುತ್ತಾನೆ, ಆದರೆ ಬಸವಣ್ಣನವರಲ್ಲಿ ಸಿಟ್ಟು, ದೋಷಣೆಗಳು ಬಂದಿವೆ

ಜೀವ ಮಿಡಿತದ ಸದ್ದು

ನಮ್ಮ ಫ್ಲಾಟಿನ ಮನೆ; ನೆಲದ ಸ್ಪರ್ಶ ಮಣ್ಣ ಘಮ, ಮರಗಳ ಸ್ನೇಹ, ಬೆಕ್ಕು ನಾಯಿಗಳ ಸಾನಿಧ್ಯ ಇಲ್ಲದ ನೆಲೆಯಾದರೂ ಇಲ್ಲಿಯೂ ಜೀವಮಿಡಿತದ ಸದ್ದಿದೆ. ಮರಗಿಡಗಳ, ತಂಗಾಳಿಯ ಸ್ಪರ್ಶವಿದೆ, ವಿಧ ವಿಧ ಹಕ್ಕಿ ಹಾಡಿನ ನಿನಾದವಿದೆ.

Back To Top