ಅನುವಾದಿತ ಕವಿತೆ

ಅನುವಾದಿತ ಕವಿತೆ

ರಾಹತ್ ಇಂದೋರಿ ಕನ್ನಡಕ್ಕೆ:ರುಕ್ಮಿಣಿ ನಾಗಣ್ಣವರ ವಿರೋಧವಿದ್ದರೆ ಇರಲಿ ಅದು ಪ್ರಾಣ ಅಲ್ಲವಲ್ಲಇದೆಲ್ಲವೂ ಮುಸುಕು ಹೊಗೆ ಆಕಾಶ ಅಲ್ಲವಲ್ಲ ಬೆಂಕಿ ಹೊತ್ತಿದರೆ ಆಹುತಿ ಆಗುವವು ಬಹಳ ಮನೆಇಲ್ಲಿರುವುದು ಕೇವಲ‌ ನನ್ನ ಮನೆ ಮಾತ್ರ ಅಲ್ಲವಲ್ಲ ನಾನು ಹೇಳಿರುವುದೇ ಇಲ್ಲಿ ಅಂತಿಮಬಾಯೊಳಗೆ ಇರುವುದು ನಿನ್ನ ನಾಲಗೆ ಅಲ್ಲವಲ್ಲ ನನಗೆ ಗೊತ್ತಿದೆ ಅಸಂಖ್ಯ ವೈರಿಗಳು ಇರುವರುನನ್ನ ಹಾಗೆ ಜೀವ ಕೈಯಲ್ಲಿ ಹಿಡಿದವರು ಅಲ್ಲವಲ್ಲ ಇಂದಿನ ಈ ಪಾಳೆಗಾರಿಕೆ ನಾಳೆ ಇರುವುದಿಲ್ಲಅವರು ಬಾಡಿಗೆದಾರರು, ಸ್ವಂತದ ಮನೆ ಅಲ್ಲವಲ್ಲ ಇಲ್ಲಿನ ಮಣ್ಣಲ್ಲಿ ಎಲ್ಲರ ನೆತ್ತರ […]

ಅಂಕಣ

ಆಗದು ಎಂದು ಹೇಳಲು ಕಲಿಯಿರಿ ಕಲಿಸಿರಿ ಎಲ್ಲದಕ್ಕೂ ಹೂಂ ಎನ್ನುವ ಸ್ವಭಾವ ಬಹಳ ಜನರಲ್ಲಿ ಬೇ ರೂರಿದೆ. ಹೀಗಾಗಿ ಅವರೆಲ್ಲ ಹೌದಪ್ಪಗಳಾಗಿದ್ದಾರೆ.ಪ್ರತಿ ಯೊಂದು ಕೆಲಸಕ್ಕೂ ಹೂಂ ಎಂದು ಒತ್ತಡ ಆತಂಕವನ್ನು ಅನಾಯಾಸವಾಗಿ ತಾವೇ ಮೈ ಮೇಲೆ ಎಳೆದು ಕೊಳ್ಳುತ್ತಾ ರೆ.ಯಾವುದಕ್ಕೂ ಇಲ್ಲ ಎಂದು ಹೇಳಿ ರೂಢಿಯೇ ಇಲ್ಲ. ಇಲ್ಲ ಎಂದು ಹೇಳುವುದು ಅಗೌರವ ಎಂದೇ ಭಾವಿಸಿದ್ದೇ ವೆ.ನನಗೀಗ ತಾವು ಹೇಳಿದ ಕೆಲಸ ಮಾಡಲಾಗುವುದಿಲ್ಲ. ನಾನು ಬೇರೊಂದು ಕಾರ್ಯದಲ್ಲಿ ಮಗ್ನನಾಗಿದ್ದೇನೆ ಎಂದು ಎದುರಿಗಿನವರು ನಮ್ಮನ್ನು ತಪ್ಪಾಗಿ ತಿಳಿಯುತ್ತಾರೆಂದು ನಾವೇ […]

ಮುಖಾಮುಖಿ

ಅಂಕಣ ಬರಹ ಮುಖಾಮುಖಿಯಲ್ಲಿ ರೇಖಾಭಟ್ ನಮ್ಮೊಳಗಿನ ಪ್ರೀತಿ, ಕರುಣೆ, ಮಮತೆಗಳೇ ದೇವರು ರೇಖಾ ಗಜಾನನ ಭಟ್ಟ ವಜ್ರಳ್ಳಿ ಹತ್ತಿರದ ಹೊನ್ನಗದ್ದೆಯವರು. ಯಲ್ಲಾಪುರದ ಕುಂದೂರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಇವರ ಪತಿ ಹೈಸ್ಕೂಲ್ ಶಿಕ್ಷಕರು. ಗಾಯನ ಮತ್ತು ಬರವಣಿಗೆ ಇವರ ಹವ್ಯಾಸಗಳು. ಗಜಲ್ ಬರೆಯುವುದರ ಮೂಲಕ ಕನ್ನಡ ಸಾಹಿತ್ಯವನ್ನು ಪ್ರವೇಶಿಸಿದ್ದಾರೆ. ಇವರ ಚೊಚ್ಚಿಲ ಕೃತಿಯನ್ನು ಮಡಿಲ ನಕ್ಷತ್ರವನ್ನು ಅದಿತಿ ಪ್ರಕಾಶನ ಪ್ರಕಟಿಸಿದೆ. ಈ ಕೃತಿಯ ಪ್ರಕಟಣೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಧನ ಸಹಾಯ ಮಾಡಿದೆ. ಕನ್ನಡದಲ್ಲಿ ಯುವ ಬರಹಗಾರರನ್ನು […]

ರಾಧಾ ಕೃಷ್ಣ

ಕವಿತೆ ರಾಧಾ ಕೃಷ್ಣ ಲಕ್ಷ್ಮೀ ಪಾಟೀಲ್ ಕೃಷ್ಣನ ಅಷ್ಟ ಮಹಿಷಿಯರಿಗಿಂತಲೂಹದಿನಾರು ಸಾವಿರ ನೂರುಭಕ್ತಪ್ರೇಮಿಗಳಿಗಿಂತಲೂ ಆತನ ಏಕೈಕ ಜೀವರಾಧೆಯೇ ಆತನಿಗಿಷ್ಟಗಂಡಿನಂತೆ ಸ್ವಾತಂತ್ರವನ್ನು ಉಸಿರಾಡಿದಳುಪ್ರೀತಿಗೆ ಭಾಷ್ಯ ಬರೆದಂತೆ ಬದುಕಿದಳು ಅಷ್ಟ ಮಹಿಷಿಯರು ಹದಿನಾರು ಸಾವಿರ ನೂರುಭಕ್ತ ಹೆಂಗಳೆಯರೆಲ್ಲ ಕೃಷ್ಣನ ಬರುವಿಕೆಗೆಕಾದು ಸೋತು ಹಿಡಿ ಶಾಪ ಹಾಕಿ ಮಲಗುತ್ತಿದ್ದರುಕನಸಿನಲ್ಲಿ ಸುಳಿದಂತೆ ಸುಳಿದರೆ ಬರೀ ಆತದೇಹವಾಗಿ ಜಡವಾಗುತಿದ್ದ ಮುಟ್ಟಾದುದನುಹಾಡಿರೇ ನೀವೆಲ್ಲ ಸೇರಿ ಎಂದು ಗೋಗರೆದುಬೇಡಿ ಸರಕ್ಕನೆ ಸರಿಸಿ ರಾಧೆಯ ಕೂಗಿಗೆಹಾತೊರೆದು ಓಡುತ್ತಿದ್ದ ಮನಬಿಟ್ಟು ಕದಲದೆಆತ್ಮವಾಗಿ ಅರಳುತ್ತಿದ್ದ ರಾಧೆ ಕಾಯಿಸಿ ಮಜಾ ಉಡಾಯಿಸಿದಾಗಲೆಲ್ಲಪುಟಿವ ಚೆಂಡಾಗಿ […]

ದೇವರು

ಕವಿತೆ ದೇವರು ಮಾಲತಿ ಶಶಿಧರ್ ನಿನ್ನ ಮೆಚ್ಚಿಸಲೇಬೇಕೆಂಬಇರಾದೆಯೇನಿಲ್ಲ ಹುಡುಗ,ಸೊಡರ ಹೊತ್ತಿಸುವುದುದೇವರ ಮೆಚ್ಚಿಸುವುದಕ್ಕಲ್ಲಮನವ ಒಪ್ಪಿಸಲು… ನಿನ್ನ ಒಲಿಸಿಕೊಳ್ಳಲೇಬೇಕೆಂಬಹಠವೇನಿಲ್ಲ ಹುಡುಗ,ಹೂವ ಅರ್ಪಿಸುವುದುದೇವರ ಒಲಿಸಲಲ್ಲಭಕ್ತಿ ತೋರಿಸಲು… ನಿನ್ನ ಪಡೆಯಲೇಬೇಕೆಂಬಸಂಕಲ್ಪವೇನಿಲ್ಲ ಹುಡುಗ,ನೈವೇದ್ಯೆ ಕೊಡುವುದುದೇವರು ಪ್ರತ್ಯಕ್ಷವಾಗಲಿ ಎಂದಲ್ಲಪ್ರೀತಿ ಸಮರ್ಪಿಸಲು… ನಿನ್ನ ಮೆಚ್ಚಿಸಿ, ಒಲಿಸಿ, ಪಡೆದುಬಿಟ್ಟರೆಎಲ್ಲರಂತೆ ಕೇವಲಮನುಜನಾಗಿಬಿಡುವೆ,ನೀನೆಂದಿಗೂ ಮನದ ಗುಡಿಯೊಳಗೆನೆಲೆಸಿರುವ ನನ್ನ ದೇವರಾಗೆ ಉಳಿದುಬಿಡು **********************

ಕವಿತೆ

ನೀನಿರಬೇಕು ಎಚ್. ಕೆ. ನಟರಾಜ ಇಳಿಸಂಜೆ ನಾನು ಮುಳುಗುವ ಸೂರ್ಯ..ನೀನೋ ರಾತ್ರೀ ಪ್ರೀತಿಸುವ ಆಗಸದ ಚಂದ್ರಮ.ಆದರೂ ಸೂರ್ಯ ಬೆಳಗುತ್ತಲೇಇರುತ್ತಾನೆ..ಚಂದ್ರ ನೀರಂತರ..ಮುದ ಕೊಡುತ್ತಿರುತ್ತಾನೆ.ನಿನ್ನಂತೆ ನಿನ್ನ ನಗುವಿನಂತೆಈ ಕತ್ತಲೆ ಬೆಳದಿಂಗಳಾಟದ ಗೊಂಬೆ ನಾನು.ಕತ್ತಲೆಯ ನಿಶೆತುಂಬಿದ ಮರುಳಹಗಲಿನಲ್ಲಿ ಬದುಕಿನ ಬಯಲಾಟದಪಾತ್ರವಾದರೂ ಆರ್ಭಟಿಸುವುದು ಇರುಳ ಬೆಳಕಿನಾಟದಲೆ..ಒಡ್ಡೋಲಗ ಪ್ರಭುಗಳು.ನೀನೆಂದರೆ ನೀನೇ ಒಡಲಾಳದ ಕರುಣೆಉಕ್ಕಿ ಬರಲು ಒಲುಮೆಯ ಚಿಲುಮೆ ಕನಸುಕಂಗಳಿಗೆ ಕಾರಿರುಳ ರಾತ್ರಿಯಲಿದೀಪ ದೀವಿಗೆಯಾಗಿ ಕಾಡುವ ನಿನನಗುವಿನಂದದಿ..ಮಲ್ಲಿಗೆ ಚಫ್ಪರಕಟ್ಟುವ ಬಯಕೆಯ ತಿರುಕ ನಾನು..ಪ್ರೇಮತಪೋವನದ ಸಂತನೂ ನಾನುನಕ್ಕು ಬಿಡೆ ಒಮ್ಮೆ.. ಕೇಕೇ ಹಾಕಿ.. ಹಸಿಇನಾಳಕೆ ಇಳಿಯಲೀ ಭೀಬತ್ಸ.. […]

ಅನುವಾದ ಸಂಗಾತಿ

ಕವಿತೆ ಧ್ಯಾನ ಕನ್ನಡಮೂಲ: ಸುನೀತಾ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಧ್ಯಾನ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು ಕೂಸುಗಳ ಕೇಕೆಜತೆಯಾದ ಕ್ಷಣ ಕ್ಷಣವೂಕಣ ಕಣಕೂ ಹಿತಮತ್ತೊಮ್ಮೆ ಬದುಕಿಬಿಡೆಂದುಚಾಚುವ ಕೈಕಣ್ಣ ಸುತ್ತಿದ ಬಳೆಯಾಕಾರದಕಪ್ಪನೂ ನೇವರಿಸುವಕೂದಲ ಬಣ್ಣದ ಲೇಪನಕೆಹೊಸ ಹೊಳಪುಭೂತ ಭವಿಷ್ಯದಹಂಗ ತೊರೆವ ವರ್ತಮಾನತೀರಾ ಖಾಸಗಿ ಬದುಕೇಆದರೂ ಸದ್ದಿಲ್ಲದೆಮುಟ್ಟುಗೋಲಾಗುವ ಮುಟ್ಟಿಗೂಹುಟ್ಟುತ್ತಿದೆ ಹೊಸಹುರುಪುದಿನ,ದಿನಾಂಕಗಳಗಡಿದಾಟಿ ಬರುವಲವಲವಿಕೆಯ ಮತ್ತು. A Musing.. ‌‌Far and wide surrounded by gloom,‌But still have some […]

ಕವಿತೆ

ಹಿರಿಯ ಕವಿಗಳ ಹಳೆಯ ಕವಿತೆಗಳು ಹೊಸ ಪೀಳಿಗೆಯ ಓದುಗರಿಗಾಗಿಹಿರಿಯಕವಿಗಳಕವಿತೆಯೊಂದನ್ನು ನಿತ್ಯ ನೀಡಲಾಗುವುದು ಅವ್ವ ನನ್ನವ್ವ ಫಲವತ್ತಾದ ಕಪ್ಪು ನೆಲಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ;ಸುಟ್ಟಷ್ಟು ಕಸುವು, ನೊಂದಷ್ಟು ಹೂ ಹಣ್ಣುಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ;ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ. ಪಲ್ಲ ಜೋಳವ ಎತ್ತಿ ಅಪ್ಪನ್ನ ಮೆಚ್ಚಿಸಿ ತೋಳಬಂದಿಯ ಗೆದ್ದು,ಹೆಂಟೆಗೊಂದು ಮೊಗೆ ನೀರು ಹಿಗ್ಗಿ;ಮೆಣಸು, ಅವರೆ, ಜೋಳ, ತೊಗರಿಯ ಹೊಲವ ಕೈಯಲ್ಲಿ ಉತ್ತು,ಹೂವಲ್ಲಿ ಹೂವಾಗಿ ಕಾಯಲ್ಲಿ ಕಾಯಾಗಿಹೆಸರು ಗದ್ದೆಯ ನೋಡಿಕೊಂಡು,ಯೌವನವ ಕಳೆದವಳು […]

ಕವಿತೆ

ಕವಿತೆ ಹಾಳೆ ತಿರುವಿದರೆ ಅಧ್ಯಾಯ ಮುಗಿಯದುಧರ್ಮಸ್ಥಾಪನೆಗೆ ಮತ್ತೆ ಮತ್ತೆ ಬರುತ್ತೇನೆಂದವಹೇಳಿದ್ದೂ ಅದನ್ನೇಎಲ್ಲವೂ ಮುಗಿಯದ ಅಧ್ಯಾಯ ದಾರಿಗಳು ಎಂದೋ ಕವಲೊಡೆದವುಎಲ್ಲ ಮರೆತಂತೆ ಹೆಜ್ಜೆಗಳೂ ನಡೆದವುಉಸಿರು ಭಾರದ ಜೋಕಾಲಿಜೀಕಿದಷ್ಟೂ ಎಳೆದಾಡುತ್ತಿತ್ತು ಕಟಕಟೆಯ ತೀರ್ಪಿನಲ್ಲಿಇವರು ಬೇರೆ ಬೇರೆಉಳಿಯುವುದು ಏನಿದ್ದರೂ ಲೆಕ್ಕಾಚಾರಉತ್ತರ ಹುಡುಕುವ ಪುಟ್ಟ ಕಂಗಳಲ್ಲಿಪ್ರಶ್ನೆಗಳ ಮಹಾಪೂರ ಹಾಳೆಗಳೂ ನಾಳೆಗಳಂತೆಕರೆದಷ್ಟೂ ತೆರೆಯುತ್ತವೆಚುಕ್ಕೆಯಿಡುವ ಮುನ್ನ ಅಲ್ಪವಿರಾಮಮುಗಿಸಲು ಮನಸ್ಸಿಲ್ಲಹೇಗೆಂದರೂಇದು ಮುಗಿಯದ ಅಧ್ಯಾಯ.

Back To Top