ಕಾವ್ಯಯಾನ

ಕಾವ್ಯಯಾನ

ಎರಡರ ನಡುವೆ ವಿಭಾ ಪುರೋಹಿತ ಎಲ್ಲಿ ಹೋದರಲ್ಲಿ ಬೆಂಬತ್ತಿ ತೆರೆದ ಕೋರೆಹಲ್ಲು ಎದೆಗುಂಡಿಗೆ ಇರಿಯುತ್ತದೆ ಎನ್ನೆದೆಗುದಿಗಳನು ದಿಕ್ಕೆಡಿಸಿ ಅಡವಿಗೆ ಕೆಡವುತ್ತದೆ ಏನಿದು, ನನಗೇ ಹೀಗಾ ? ಎಲ್ಲರಿಗೂ ಬೆನ್ನಿಗೊಂದು ಭೂತ ವಕ್ಕರಿಸಿಕೊಂಡಿರುತ್ತಾ ? ಎಡಬಲಗಳ ನಡುವೆ ನಡೆಯುವುದು ದುರ್ಬರ !! ವರ್ತಮಾನದ ಕಾಲಗತಿಯಲಿ ದ್ವಂದ್ವ ಗಳ ಆಂತರ್ಯ ಹೆಜ್ಜೆ ಇಡಿಸುತ್ತದೆ ಭ್ರಮೆ ಬಿಡಿಸುತ್ತದೆ ಸಿಕ್ಕದ ದಕ್ಕದ ದೂರದ ಹಾದಿಗೆ !!! ಓಡುತ್ತಾ ಮುಗ್ಗರಿಸುತ್ತ…… ಸಿಗದ ಆಕಾಶಕ್ಕೆ ಛಂಗನೆ ! ಜಿಗಿಸಿ ಲಗ್ಗೆ ಹಾಕುತ್ತದೆ ಕನಸಿನೊಳಗಿನ ಮನಸು ಅಗೋಚರ […]

ಲಹರಿ

ಅಮ್ಮ,ನಾವೂ ನಾಯಿ ಸಾಕೋಣ ಶೀಲಾ ಭಂಡಾರ್ಕರ್ ನಿನ್ನೆ ರಾತ್ರಿಯಿಂದಲೂ ನಮ್ಮ ಮನೆಯಲ್ಲಿ ಏನೋ ಗುಸುಗುಸು ಪಿಸುಪಿಸು ಕೇಳಿಸುತ್ತಿದೆ. ಇಡೀ ದಿನ ಬಿಡುವಿಲ್ಲದೇ ಮನೆಯ ಸ್ವಚ್ಛತೆಯಲ್ಲಿ ತೊಡಗಿದ್ದುದರಿಂದ ಅದರೆಡೆಗೆ ಅಷ್ಟಾಗಿ ಗಮನ ಕೊಡುವ ‌ಮನಸ್ಸಾಗಲಿಲ್ಲ ನನಗೆ. ಇವತ್ತು ಬೆಳಗಿನಿಂದಲೂ ಅತ್ಯಂತ ಶಾಂತ ವಾತಾವರಣ. ಯಾವುದೇ ಏರು ಧ್ವನಿಯ ಮಾತಿಲ್ಲ, ಜಗಳ ಕದನಗಳಿಲ್ಲ. ಕಿರುಚಾಟಗಳಿಲ್ಲ. ಮದ್ಯಾಹ್ನದವರೆಗೆ ಆರಾಮೋ ಆರಾಮ್. ಮದ್ಯಾಹ್ನ ಊಟದ ಸಮಯದಲ್ಲೂ ಒಬ್ಬರಿಗೊಬ್ಬರು ಸಹಕರಿಸಿಕೊಂಡು, ತಟ್ಟೆ, ನೀರು ಇಡುವುದರಿಂದ ಹಿಡಿದು ಮಾಡಿದ ಅಡುಗೆಯನ್ನು ಒಂದೊಂದಾಗಿ ಬಡಿಸುವಾಗಲೂ ಅದೇನು ಶಿಸ್ತು, […]

ನೆನಪುಗಳು

ಹಲಸಿನ ಹಪ್ಪಳ ಸಂಧ್ಯಾಶೆಣೈ ಇವತ್ತು ನಮ್ಮ ಕೆಳಗಿನ ಮನೆಯವರು ಒಂದು ಸಣ್ಣ ತುಂಡು ಹಲಸಿನ ಗುಜ್ಜೆ ಕೊಟ್ಟಿದ್ದರು ..ಅದನ್ನು ಅಕ್ಕಿಯ ಆಳಾವಣದಲ್ಲಿ ಹಾಕಿ ಫ್ರೈ ಮಾಡಿದೆ ..ಆಗ ನನಗೆ ಸೋಮೇಶ್ವರದ ದಿನಗಳು ನೆನಪಾದವು.. ಹೀಗೆ ಬೇಸಿಗೆ ದಿನಗಳಲ್ಲಿ ಮನೆಗೆ ಆಗಾಗ ಹಲಸಿನ ಕಾಯಿ ಬರುತ್ತಿತ್ತು..ಉಪಿಗೆ ಸೋಳೆ ಹಾಕಲು.. ಹಪ್ಪಳ ಮಾಡಲು ಎಂದು.. ಆಗೆಲ್ಲ ಅಮ್ಮ ಹಲಸಿನ ಕಾಯಿಯ ವೈವಿಧ್ಯಮಯ ಪಲ್ಯಗಳನ್ನು ಮಾಡುತ್ತಿದ್ದರು.. ಸೋಳೆ ಹಾಕಲು ತಂದ ಹಲಸಿನ ಕಾಯಿಯ ಉಪಕ್ಕರಿ .ಅದರ ಒಟ್ಟಿಗೆ ಸೌತೆ ಕಾಯಿ ಹಾಕಿ […]

ಅನುವಾದ ಸಂಗಾತಿ

ಪ್ರಭುವೆ ಕನ್ನಡ ಕವಿತೆ:ನಂದಿನಿ ವಿಶ್ವನಾಥ ಹೆದ್ದುರ್ಗ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ನಂದಿನಿ ವಿಶ್ವನಾಥ ಹೆದ್ದುರ್ಗ ನಾಗರೇಖಾ ಗಾಂವಕರ್ ಪ್ರಭುವೆ ಹಚ್ಚಿಕೊಂಡ ನಂಬಿಕೆಯೊಂದು ಕಾಯುವ ಬಯಕೆ ಹುಟ್ಟಿಸುತ್ತದೆ ಪ್ರಭುವೇ. ಕಾಲ ಭಾವಗಳ ಮಾಗಿಸಬಹುದು ಬಾಗಬಹುದು ಬಲು ಗಟ್ಟಿ ಎನಿಸಿದ್ದ ಒಳಗಿನ ಒಣ ಅಹಮ್ಮು. ಬರಡು ಎದೆಯಲ್ಲೂ ಕಳೆಹೂವುಗಳು ಅರಳಿ ಅಸಡ್ಡೆಯಲ್ಲಿ ಬಿಗಿದ ಈ ತುರುಬಿಗಿಡುವ ಆಸೆಯುದಿಸಬಹುದು. ಭೂತದ ಬೇತಾಳ ಈ ಹೆಗಲಿಂದ ಜಿಗಿದು ನೇತಾಡಿದ ಮರದಡಿಯಲ್ಲೇ ಕುಳಿತು ಹೊಸ ಮಾದರಿ ಕನಸ ಹೆಣೆಯಬಹುದು. ಹಿಡಿ ಮಣ್ಣಿನಲ್ಲಿ ಜಗ ಅಡಗಿರುವ […]

ಕಾವ್ಯಯಾನ

ಸ್ಮಿತಾ ಅಮೃತರಾಜ್ ಯಾವುದೋ ಒಂದು ಅದೃಶ್ಯ ಗಳಿಗೆಯಲ್ಲಿ ಹೇಗೋ ಬಂದು ನುಸುಳಿಕೊಂಡಿದೆಯಲ್ಲ ನನ್ನ_ನಿನ್ನ ನಡುವಲ್ಲೊಂದು ತೆಳು ಗೆರೆ. ಎಳೆದದ್ದು ನೀನಲ್ಲವೆಂದೆ ನಾನಂತೂ ಮೊದಲೇ ಅಲ್ಲ ಕಂಡೂ ಕಾಣದಂತಿರುವ ಎಳೆ ಸೂಕ್ಷ್ಮ ಗೆರೆ ಹಾಗಾದರೆ ಬಂದದ್ದಾದರೂ ಎಲ್ಲಿಂದ? ಇಂಚಿಂಚೇ ಬೆಳೆಯುತ್ತಿದೆ ಬಲಿಯುತ್ತಿದೆ. ಇಬ್ಬರಿಗೂ ಅದರ ಮೇಲೆ ಅಸಡ್ಡೆ ಎಳೆಯದ ಗೆರೆಯನ್ನು ಅಳಿಸುವುದೇತಕೆ? ಮಿತಿ ಮೀರಿ ಬೆಳೆದು ಗೆರೆಯೇ ಗೊಡೆಯಾದರೆ ನನಗೆ ನೀನು,ನಿನಗೆ ನಾನು ಕಾಣಿಸುವುದಾದರೂ ಎಂತು? ಗೆರೆಯ ಮೊನಚು ಈಗ ಎದೆಯವರೆಗೂ ಬಂದು ತಾಕಿ ಭಯ ಹುಟ್ಟಿಸುತ್ತಿದೆ. ಗೆರೆಗಳು […]

ಕಾವ್ಯಯಾನ

ನಾವು ಕಾರ್ಮಿಕರು ರಾಜು ದರ್ಗಾದವರ ಕಲ್ಲುಬಂಡೆ ತಲೆ ಮೇಲೆ ಹೊತ್ತು ಆಗಸದಗಲ ನಗುವ ಬಯಸಿ ಕಷ್ಟನಸ್ಟ ಪಕ್ಕಕ್ಕಿಟ್ಟು ಜೋಳಿಗೆಯಲ್ಲಿ ಕೂಸುಬಿಟ್ಟು ದೂರದ ಬೆಟ್ಟಕ್ಕೆ ಲಗ್ಗೆ ಜಡಿದು ಹಗಲುಗನಸು ಅದರೊಂದಿಗೆ ಬೆಸೆದು ಇರುಳು ಕಳೆದು, ಹಗಲು ಬರುವ ದಿಕ್ಕಿನಡಿಗೆ ಬಿಸಿಲುಬಾಗಿಲ ಬಡಿದು, ಗಟ-ಗಟ ಗಂಟಲ ಸಪ್ಪಳದಿ ಹೊಟ್ಟೆಯ ಹಸಿವನ್ನು ತಳಕು ಹಾಕಿದವರು ನಾವು ಕಾರ್ಮಿಕರು,ನಾವು ಕಾರ್ಮಿಕರು ಕೊಳಕುಬಟ್ಟೆ ಮೈಮೇಲೆ ಉಟ್ಟು ಮನದ ತುಂಬ ಪಿರುತಿ ಹೊಯ್ದು ಉಪ್ಪುನೀರು ಹರಿಯಲುಬಿಟ್ಟು ಎಚ್ಚತ್ತ ಕಣ್ಣು ಮಲಗದಂತೆ,ಬೆಚ್ಚನೆ ಕಣ್ಣೀರಿಗೆ ಕರಿಗಲ್ಲ ತೊಯ್ದು ಕಾರು,ಬಂಗ್ಲೆ […]

ಕಾವ್ಯಯಾನ

ಖಾಲಿಯಾಗುಳಿಸಿದವನು ಶಿವಲೀಲಾ ಹುಣಸಗಿ ಈಗೆಲ್ಲಿ ಮಾಯವಾದೆ ನಿನ್ನೊಡನಾಟದ ಬಿಸಿಯೊಳಗೆ ಬೀಸಿದಬ್ಬರದ ಬಿರುಗಾಳಿಯಲಿ ಸಿಲುಕಿ ಹೊಯ್ದಾಡುತಿಹೆ ದೇಹದ ಕಣಕಣದಲೂ ಬೆರೆತ ನೀನು ಬಯಸಿದಾಗ ಕೈ ಜಾರುವ ಮೀನು ಹೆಪ್ಪುಗಟ್ಟಿದ ನರಗಳಲಿ ನೆತ್ತರು ಹರಿಸಿ ನೀನಪ್ಪಿದಾಗ ಬಯಕೆ ಕಾಡಿತ್ತು ನಿನ್ನೊಳಗೊಂದಾಗುವ  ಕ್ಷಣದೆ  ಬಟಾಬಯಲು ಗಾಳಿಯ ಹುಯಿಲು ಮರುಚಣ ಮುತ್ತಿದ ಮೌನದ ಹೊರತಾಗೇನು ಉಳಿದಿಲ್ಲವಿಲ್ಲಿ ಕನಸಿಗೆ ಮುನ್ನುಡಿಯಾದವನು ಬೆನ್ನುಡಿಯಾಗಲಿಲ್ಲ ನನಸಿಗೆ ಇಲ್ಲೀಗ ಅದೇ ಕೋಣೆ ಅದೇ ಕನಸುಗಳು ಅದೇ ಹಾಸಿಗೆದಿಂಬುಗಳು ಮತ್ತೆ ಮರಳುವೆಯೇನು ಹಸಿವಾದಾಗ? ಎದೆಗೊರಗಿ ಮಲಗಿದವ ಹೇಳಿ ಹೋಗಬಾರದಿತ್ತೇನು ಪಿಸುಮಾತಿನಲಾದರೂ! […]

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಗಝಲ್ ಲೋಕ ಏಳನೇ ಅದ್ಯಾಯ ಕನ್ನಡ ಗಜಲ್ ಅಲ್ಲಿ ಉರ್ದು ಪದ ಬಳಕೆ ಕೆಲವೊಂದು ಗಜಲಗಳನ್ನು ಓದಿರುತ್ತೀರಿ… ಅವು ಹೇಗಿರುತ್ತವೆ ಎಂದರೆ ಮೊಹಬ್ಬತ್ತ, ಗೋರಿ, ಜಿಂದಾ,ಜಿಂದಗಿ, ಇಷ್ಕ, ಅವಾಜ್, ಪಿರ್, ಮುದ್ದಾಮ, ಖುದಾ, ಹಕಿಕತ್ ಮೊದಲಾದ ಉರ್ದು ಪದಗಳು ಆ ಕನ್ನಡದ ಗಜಲ್ ಅಲ್ಲಿ ಅಲ್ಲಲ್ಲಿ ನುಸುಳಿರುತ್ತವೆ. ಹೀಗೆ ಉರ್ದು ಮಿಶ್ರಿತ ಗಜಲ್ […]

ಕಥಾಯಾನ

ಮಧುವಂತಿ ಅಂಜನಾ ಹೆಗಡೆ “ನೀನ್ಯಾಕೆ ಮದ್ವೆ ಆದೆ?” ರಜನಿ ಅವಿನಾಶನನ್ನು ಭೇಟಿಯಾದಾಗ ಕೇಳಿದ ಮೊದಲನೇ ಪ್ರಶ್ನೆ ಇದು. ಬೆಂಗಳೂರಿನ ಲಾ ಕಾಲೇಜೊಂದರ ಉಪನ್ಯಾಸಕ ಅವಿನಾಶ ಅವನ ಅಸಂಬದ್ಧ ಮಾತುಕತೆಗಳಿಂದ, ನಡೆವಳಿಕೆಯಿಂದ ರಜನಿಗೆ ಉಪನ್ಯಾಸಕ ಅಂತ ಅನ್ನಿಸುತ್ತಲೇ ಇರಲಿಲ್ಲ. ವಾರದ ಐದೂ ದಿನ ಬೆಳಗಿನ ಕ್ಲಾಸು ಮುಗಿಸಿ, ಊಟ ಮಾಡಿ ಮಲಗಿ ಎದ್ದವ ರಜನಿಗೊಂದು ಫೋನ್ ಮಾಡುವುದು ಅವಿನಾಶನ ದಿನಚರಿಗಳಲ್ಲೊಂದು. ಇವತ್ತು ಕ್ಲಾಸಲ್ಲಿ ಹಾಗಾಯ್ತು ಹೀಗಾಯ್ತು , ಹುಡುಗಿಯೊಬ್ಬಳು ಪಾಠ ಮಾಡುವಾಗ ನನ್ನನ್ನೇ ನೋಡ್ತಾ ಇದ್ಲು ಅಂತೆಲ್ಲ ಅವಿನಾಶ […]

ಸಿನಿಮಾ

ಥಪ್ಪಡ್ ಮಡದೀಯ ಬಡಿದಾನ…   ಮಡದೀಯ ಬಡಿದಾನ…  ಈಚೆಗೆ ‘ಥಪ್ಪಡ್’ ಎಂಬ ಹಿಂದಿ ಸಿನೆಮಾ ನೋಡಿದೆ. ಕೇವಲ ‘ಒಂದು ಏಟು’ ಎಂದು ನಿರ್ಲಕ್ಷ್ಯ ತೋರಿ ಮರೆತುಬಿಡುವ ಪ್ರಸಂಗವನ್ನು ‘ಹೆಣ್ಣಿನ ಆತ್ಮಗೌರವ’ದ ಹೆಸರಿನಲ್ಲಿ ತೆರೆಯ ಮೇಲೆ ತೋರಿಸಿರುವ ರೀತಿ ಸ್ತ್ರೀಕುಲದ ಆತ್ಮಸಾಕ್ಷಿಯಂತಿದೆ. ಸಂಕುಚಿತ ಸಮಾಜಕ್ಕೆ ಮಾಡಿದ ಕಪಾಳಮೋಕ್ಷವಾಗಿದೆ. ನಿಜಕ್ಕೂ ಈ ಸಿನೆಮಾ ಸೂಕ್ಷ್ಮವಾಗಿ ಸಮುದಾಯಕ್ಕೆ ದಾಟಿಸುವ ಸಂದೇಶ ಇದೆಯಲ್ಲಾ ಅದು ಅದ್ಭುತ..!   ಜನಪದ ಗೀತೆಯೊಂದಿದೆ,    “ಮಡದೀಯ ಬಡಿದಾನ ಮನದೊಳಗೆ   ಮರುಗ್ಯಾನ, ಒಳಹೋಗಿ ಸೆರಗ ಹಿಡಿದು   ತಾ ಕೇಳಾನ ನಾ ಹೆಚ್ಚೋ […]

Back To Top