ಲಿವಿಂಗ್ ಟುಗೆದರ್

ಲಿವಿಂಗ್ ಟುಗೆದರ್

ಲೇಖನ ಲಿವಿಂಗ್ ಟುಗೆದರ್ ಸುಜಾತಾ ರವೀಶ್ ಇಬ್ಬರೂ ಸಮಾನ ಮನಸ್ಕರು ಒಂದೇ ಸೂರಿನಡಿ ವಾಸಿಸುತ್ತಾ ಭಾವನಾತ್ಮಕ ಹಾಗೂ ದೈಹಿಕ ಸಂಬಂಧಗಳನ್ನು ವಿವಾಹ ವ್ಯವಸ್ಥೆ ಇಲ್ಲದೆ ಹೊಂದಿ ಜೀವಿಸುವುದಕ್ಕೆ livein relationship ಅಥವಾ ಸಹಬಾಳ್ವೆ ಪದ್ಧತಿ ಎನ್ನುತ್ತಾರೆ.  ಈಗ ಎರಡು ದಶಕಗಳಿಂದೀಚೆಗೆ ಪ್ರಪಂಚದಲ್ಲಿ ಶುರುವಾಗಿರುವ ಹಾಗೂ ಸಮಾಜಶಾಸ್ತ್ರಜ್ಞರು ಮತ್ತು ಮಾನವ ಶಾಸ್ತ್ರಜ್ಞರ ನಿರೀಕ್ಷೆಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ವ್ಯವಸ್ಥೆ ಇದು ಪ್ರಚಲಿತ ಅಸ್ತಿತ್ವದಲ್ಲಿರುವ ಕುಟುಂಬ ಎಂಬ ಸಾಮಾಜಿಕ ಪರಿಕಲ್ಪನೆಯಿಂದ ಹೊರತಾದ ಹೊಸ ಬದಲಾವಣೆಯ ಅಲೆ ಇದು .  ಮನುಷ್ಯ […]

ನಾಗರೀಕತೆಯನ್ನು ಆರಂಭಿಸಿದ ಮಿತ್ರರು

ಅಂಕಣ ಬರಹ-01 ಶಾಂತಿ ವಾಸು ರೇಡಿಯೋ ಸಾಮ್ರಾಜ್ಯ ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಬೆಂಗಳೂರು ಎಂಬುದು ಬಹು ನೆಮ್ಮದಿಯ ತಾಣವಾಗಿತ್ತು. ಕರ್ನಾಟಕದ ಬೇರೆ ಬೇರೆ ಹಳ್ಳಿಗಳು, ದೇಶದ ನಾನಾ ರಾಜ್ಯಗಳಿಂದ ಉದ್ಯೋಗ, ಜೀವನವನ್ನರಸಿ ಬಂದವರಿಗೆ ಬದುಕು ಸೃಷ್ಟಿಸುತ್ತಾ, ವಿವಿಧ ಸಂಸ್ಕೃತಿಯ ಜೊತೆಗೆ ಎಲೆಕ್ಟ್ರಿಕಲ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಬ ಆಧುನಿಕತೆಯನ್ನು ಅಳವಡಿಸಿಕೊಳ್ಳುತ್ತಿದ್ದ ಬೆಂಗಳೂರಿನಲ್ಲಿ, ಬೆಳಕಿನ ಮೂಲವಾಗಿ ಪರಿಚಯವಾದ ಮನೆಗಳ ಬಲ್ಬುಗಳು, ಬೀದಿ ದೀಪಗಳು, ಸೈಕಲ್ಲಿಗೆ ಡೈನಾಮ ಲೈಟ್, (ಸೈಕಲ್ಲು ತುಳಿಯುವಾಗ ಪುಟ್ಟ ಬಲ್ಬ್ ಹೊತ್ತಿಕೊಳ್ಳುತ್ತಿತ್ತು.) ಈ ಡೈನಾಮ ಲೈಟುಗಳು […]

ಗಜಲ್

ಗಜಲ್ ರವಿ.ವಿಠ್ಠಲ.ಆಲಬಾಳ. ಬರೀ ಬತ್ತಿ ಬೇಕಾಗುವುದಿಲ್ಲ ದೀಪ ಬೆಳಗಲುಬರೀ ನೇಹ ಸಾಕಾಗುವುದಿಲ್ಲ ದೀಪ ಬೆಳಗಲು. ಕಡ್ಡಿ ಗೀರಿ ಸುಮ್ಮನಿರಬೇಡಿ ಒಂದು ದೀಪಕ್ಕೆನಿಮ್ಮ ಕೈಗಳಷ್ಟೇ ಆಸರೆಯಲ್ಲ ದೀಪ ಬೆಳಗಲು. ಉರಿಯುವ ದೀಪಕೂ ಗಾಳಿಯ ಅಗತ್ಯವಿದೆಶ್ವಾಸಕೋಶ ಅದಕ್ಕೂಇದೆಯಲ್ಲ ದೀಪ ಬೆಳಗಲು ಮನಸಿನ ಭಾವಗಳಲ್ಲಿ ತಮವೇ ತುಂಬದಿರಲಿಸಂಬಂಧದ ಕೊಂಡಿ ಬೇಕೇಬೇಕಲ್ಲ ದೀಪ ಬೆಳಗಲು ಸುಮ್ಮನೇ ದೀಪ ಹಚ್ಚಿ ದೀಪಾವಳಿ ಎಂದರಾಯಿತೆ?ಮನೆಮನೆಯಲಿ ಸುಖ ಇರಬೇಕಲ್ಲ ದೀಪ ಬೆಳಗಲು. ರವೀ, ಜೀವನದ ಹೆಜ್ಜೆಗುರುತನೆಂದೂ ಮರೆಯಬೇಡಒಂದಿನವಾದರೂ ನಾವು ಗೆಲ್ಲಲೇಬೇಕಲ್ಲ ದೀಪ ಬೆಳಗಲು *******************

ಗಜಲ್

ಗಜಲ್ ಅರುಣಾ ನರೇಂದ್ರ ಅವನು ನನ್ನದೆಯಲ್ಲಿ ದೀಪ ಹಚ್ಚಿಟ್ಟಿದ್ದಾನೆ ಸಖಿಮುಚ್ಚಿದ ಕದ ತೆರೆದು ಕತ್ತಲೆ ಬಚ್ಚಿಟ್ಟಿದ್ದಾನೆ ಸಖಿ ನಮ್ಮಿಬ್ಬರ ಪ್ರೀತಿಯನು ಮುಗಿಲೆತ್ತರಕ್ಕೆ ಹಿಡಿದಿದ್ದಾನೆತುಟಿದೆರೆಯದೆ ಒಲವಿನ ಮಾತುಗಳ ಬಿಚ್ಚಿಟ್ಟಿದ್ದಾನೆ ಸಖಿ ಮೊಗ್ಗುಗಳಿಗೆ ನಗುವ ಕಲಿಸುವ ಖಯಾಲಿ ಅವನದುಒಡಲ ಹೊದರಿನಲಿ ನೋವುಗಳ ಮುಚ್ಚಿಟ್ಟಿದ್ದಾನೆ ಸಖಿ ಅಂಗಳದ ಹಣತೆಗಳಿಗೆ ಅವನದೇ ಕಣ್ಣ ಹೊಳಪುಚುಚ್ಚುವ ಮುಳ್ಳುಗಳ ಲೆಕ್ಕಿಸದೆ ಹೂವ ಮುತ್ತಿಟ್ಡಿದ್ದಾನೆ ಸಖಿ ಬೆಳ್ಳಗಿರುವ ಬೆಳಕಿಗೂ ಬಣ್ಣ ಬಳಿಯುತ್ತಾರಲ್ಲ ಅರುಣಾಬರುವ ಬೇಸರಿಕೆಗಳನು ತಡೆದು ಅಲ್ಲಲ್ಲೇ ಹತ್ತಿಟ್ಟಿದ್ದಾನೆ ಸಖಿ **************************

ಅಂಕಣ ಬರಹ ಡಾ ಶ್ರೀಧರ್ ಗೌಡ ಉಪ್ಪಿನ ಗಣಪತಿ ಲೇಖಕರ ಪರಿಚಯ : ಡಾ ಶ್ರೀಧರ್ ಗೌಡ ಉಪ್ಪಿನ ಗಣಪತಿ ವೃತ್ತಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ.ಸಾಹಿತ್ಯ ಬರಹ ಹವ್ಯಾಸ.“ಕಡಲಿಗರ ಸಂಸ್ಕೃತಿ” ಸಂಶೋಧನ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರ್ ಪ್ರದಾನ ಮಾಡಿದೆ. ಡಾಕ್ಟರ್ ಸೈಯದ್ ಜಮೀರುಲ್ಲಾ ಷರೀಫ್ ಮಾರ್ಗದರ್ಶಕರು.ಸಂಶೋಧನಾ ಮಹಾಪ್ರಬಂಧ ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಕುಮಟಾತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆಮೂರು ತಾಲೂಕು ಸಾಹಿತ್ಯ ಸಮ್ಮೇಳನ ಸಂಘಟನೆಪ್ರತಿ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ಎರಡು ದಿನಗಳ ಕಾಲ ಸಂಘಟಿಸಿ ದ್ದು […]

ಜಾನ್ ಮಿಲ್ಟನ್ ಕವಿತೆಯ ಅನುವಾದ

ಅಂಧಕಾರದೊಳಗಿಂದ ಇಂಗ್ಲೀಷ್ ಮೂಲ: ಜಾನ್ ಮಿಲ್ಟನ್ ಕನ್ನಡಕ್ಕೆ ವಿ.ಗಣೇಶ್ ನನ್ನ ಬದುಕಿನ ಬೆಳಕ ಹೇಗೆ ಸವಿದಿಹೆನೆಂದುಬಾಳ ಪುಟಗಳ ತಿರುವಿದರೆ ಬರಿ ಕತ್ತಲುಬೆಳಕು ಕತ್ತಲೆ ಮಧ್ಯೆ ಕಳೆದ ಬಾಳನು ಈಗಬೆಳಗಿಸಲು ಛಲ ಹೊತ್ತು ನಿಂತೆ ನಾನು ನನ್ನ ಭಕ್ತಿಗೆ ಮೆಚ್ಚಿ ನೀನಿತ್ತ ವರವೆನಗೆಕಾಣಿಕೆಯ ರೂಪದಲಿ ನಾನು ಪಡೆದಿರುವೆಅದನು ಬಳಸುವ ರೀತಿ ನನಗೆ ತಿಳಿದಿದೆ ಗುರುವೆಬೇರೆ ರೂಪದಿ ಕೊಡಲು ಮುಡುಪನಿಡುವೆ. `ಕಷ್ಟವೇನೇ ಇರಲಿ ಕಾಯಕವ ನೀ ಮಾಡುಅದಕೆ ಫಲ ನೀಡುವುದು ನನ್ನ ಇಚ್ಛೆ’ ಎಂದರಿತೂಅದನು ಮರೆತಿಹ ನಾನು ಬರಿದೆ ಕಾಲವ […]

ಗಜಲ್

ಗಜಲ್ ವಿ.ಹುಸೇನಿ ವಲ್ಲೂರು ಜಿಂದಗಿ ತುಂಬಾ ಬರಿ ಇರುಳ ತುಂಬಿದೆ ನಿನ್ನ ಬಿಟ್ಟು ಹೇಗೆ ಇರಲಿ ಸಖಿ!ಮೊಹಬತ್ತಿನ ತುಂಬಾ ಅರಳಿದ ಇರಳು ಓಡಿಸಬೇಕು ಇಲಾಲು ಹಿಡಿದು ಬಾ ಸಖಿ!! ಹಗಲು ನಾಚಿತು ಮೈ ಬಾಚಿತು ಸೆರಗ ತುಂಬ ಗಂಟು ಕಟ್ಟಿಕೊಂಡು!ಜೀವದೊಳಗ ಜೀವ ನೀನು ಹುಡುಕುತ್ತಿದೆ ಮನಸು ಸನಿಹಕ್ಕೆ ಬಾ ಸಖಿ!! ತುಟಿ ಕಚ್ಚಿ ಹೇಳಬೇಕೆಂದ ಒಂದು ಮಾತು ನನ್ನ ಮನಸಲ್ಲೇ ಉಳಿಯಿತು!ನಾ ಹೋದರು ಮಸಣದ ಗೋರಿ ಮೇಲಿನ ಮರಕ್ಕೊಂದು ಹಾಡು ಕಲಿಸು ಬಾ ಸಖಿ!! ಎಷ್ಟೊಂದು ಆಶೆಗಳು […]

ಬಿಕ್ಕಳಿಸಿದ ಅವ್ವ

ಕವಿತೆ ಬಿಕ್ಕಳಿಸಿದ ಅವ್ವ ಡಾ.ಸುಜಾತಾ.ಸಿ ನವ ಮಾಸ ಹೊತ್ತುರಕ್ತ ಮಾಂಸ ತುಂಬಿಆಕಾರ ಕೊಟ್ಟಗರ್ಭಕ್ಕೆ ಕಪ್ಪನೆಕಾರ್ಮೊಡ ಕವಿದುಬದುಕಿನ ಕ್ಷಣ ಕ್ಷಣವುದುರ್ರಗಮನವಾಗಿಸಂಚಾರಿಸುತ್ತಿರಲುಬೇಡಾ ತಾಯಿಸಾಕು ಮಾಡುಗರ್ಭಧರಿಸಿಧರೆಯನ್ನು ಕಾಣಿಸುವುದು ಹಾಲುಣಿಸುವಾಗಕಚ್ಚಿ ಕಚ್ಚಿ ಹೀರಿದ ಮೊಲೆ ತೊಟ್ಟುಆಕಾಶಕ್ಕೆ ಬಾಯ್‌ತೆರೆದುನಿಂತರು ಹಸಿದ ಹೊಟ್ಟೆಗೆಮಾಂಸದ ಹಾಲುಣಿಸಿನಗುವ ಹಾಗೆ ಮಾಡಿದನಿನಗೆ ಇವತ್ತು ಬೀದಿಗೆತಂದಿಕ್ಕಿದ್ದಾರೆ ಮರುಳರು ನೆತ್ತಿಯ ಬಡಿತ ಹೆಚ್ಚಸಬಾರದೆಂದುಗAಧ ಮಿಶ್ರಿತ ದ್ರವ್ಯವನ್ನುಸವರಿ ಮುದ್ದಗಿ ತಿಡಿದನಿನ್ನ ಕೊಮಲ ಬೆರಳಿಗೆಹಾದಿ ಬೀದಿ ಕಸಗುಡಿಸಲುಹಚ್ಚಿ ಮೆರೆಯುತ್ತಿದ್ದಾರೆಸಾಕು ತಾಯಿ ಧರೆಗೆಎಂದು ಕರೆಯಬೇಡ ಮೆತ್ತನೆಯ ಹಾಸಿಗೆ ಹೊದಿಕೆ ಮಾಡಿಮಲಗಲೆಂದು ಕೈಯನ್ನೆ ದಿಂಬವಾಗಿಸಿಪಕ್ಕಕ್ಕೆ ಜಾರಿ ನಿದ್ರೆ ಮಾಡಿದ […]

ಯೋಗ್ಯತೆಯಲ್ಲ ಯೋಗ ಬೇಕು

ಲೇಖನ ಯೋಗ್ಯತೆಯಲ್ಲ ಯೋಗ ಬೇಕು ಜ್ಯೋತಿ ಬಾಳಿಗಾ “ಯಾಕೆ ಒಳ್ಳೆ ಇಡ್ಲಿ ಹಿಟ್ಟು ಊದಿಕೊಂಡಹಾಗೆ ಮುಖ ಮಾಡಿ ಕೂತಿದ್ದೀಯಾ… ಏನಾಯಿತು ?” ಎಂದು ನನ್ನವರು ಕೇಳಿದಾಗ “ಯಾಕೋ ಮನಸ್ಸು ಸರಿಯಿಲ್ಲ ಕಣ್ರಿ.. ಅಳು ಬರುವ ಹಾಗಿದೆ…” ಎಂದು ನನ್ನ ಮನದ ಬೇಗುದಿಯನ್ನು ತಿಳಿಸದೇ ಮಾತನ್ನು ತಳ್ಳಿ ಹಾಕಿದೆ. “ವಿಷಯ ಏನೂಂತ ಹೇಳಿದ್ರೆ ನನಗೂ ಗೊತ್ತಾಗುತ್ತದೆ, ಅದು ಬಿಟ್ಟು ಮನಸ್ಸು ಸರಿಯಿಲ್ಲಾಂತ ಹೇಳಿದ್ರೆ ಹೇಗೆ …? ಇಡೀ ದಿನ ಓದುವುದು, ಬರೆಯೋದೆ ಆಯಿತು. ಯೋಚನೆ ಮಾಡಿ ಮಾಡಿ ತಲೆ ಹಾಳು ಮಾಡಿಕೊಳ್ಳೋದು […]

ನೀನೊಂದು ಕಾವ್ಯ

ಕವಿತೆ ನೀನೊಂದು ಕಾವ್ಯ ಆನಂದ ಆರ್.ಗೌಡ ತಾಳೇಬೈಲ್ ನೀನೊಂದು ಕಾವ್ಯಭಾವ ಮನದ ಧರೆಯಲಿನಿನ್ನ ನಡಿಗೆಯೊಳಗಿನ ಮಿಲನತೆನಿಗೂಢ ಬೆಳಕು ಬೀರಿದೆ ನಗುವಿನ ಕೆನ್ನೆ ಗುಳಿ ನಕ್ಷತ್ರ ಕಡ್ಡಿಯಹೊಳಪಿನ ವದನ ಆಗಾಗ ಸಹನೆಯಿಂದಜಾರುವ ಕಣ್ಣಹನಿ ಆರಾಧನೆಯ ಹೃನ್ಮನತಬ್ಬಿಕೊಂಡಾಗಿನ ಧನ್ಯತೆನನ್ನ ತೆಕ್ಕೆಯಲ್ಲಿ ಹಾಗೇಹುದುಗುವ ಪರಿ ಎಲ್ಲವೂ ಮೊದಲಿನಂತೆ ಮಧ್ಯಾಹ್ನದ ನೆರಳಿನಂತೆನನ್ನೊಳಗೆ ನೀನಿದ್ದೆಬೆವೆತ ಎದೆ ಮೇಲಿನ ನಿನ್ನ ಮೊಗನನ್ನ ನಿದಿರೆ ಕದ್ದು ಮೆರೆಯುತ್ತಿದ್ದುಮೊದಲ ಸಲುಗೆ ಅಪ್ಪುಗೆಯ ದಾಹಎಲ್ಲವನ್ನೂ ತಣಿಸಿದ ಪರಿಒಲುಮೆಯ ಕಾವ್ಯದಂತೆ ನಿನ್ನ ಮುನಿಸಿನ ಸನಿಹದಸ್ಪರ್ಶದಲಿ ಯಾವುದೇ ಗಾಯವಿಲ್ಲಮಡಿಕೆಯಲಿ ತುಂಬಾನೇಬೇಸಿ ಉಂಡ ನೆನಪು […]

Back To Top