ಎಷ್ಟೊಂದು ಚಂದದ ಭಾವಚಿತ್ರಗಳು

ಎಷ್ಟೊಂದು ಚಂದದ ಭಾವಚಿತ್ರಗಳು

ಅನುಭವದಿ ಗಟ್ಟಿಗೊಳ್ಳುತ್ತಾ ನಿಂತ ನೆಲದಲ್ಲೇ ಬೇರು ಬಿಡುತ್ತಾ
ಇನ್ನರ್ಧ ವಯಸ್ಸನ್ನು ಸಾಧನೆಗೆ ಮುಡಿಪಿಡಬೇಕಾಗಿದ್ದ ವಯಸ್ಕರು

ಗಜಲ್

ಗಜಲ್ ಎ . ಹೇಮಗಂಗಾ ರೋಗಿಗಳ ಶುಶ್ರೂಷೆಯಲಿ ನಿರತರಾಗಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟುನಿರೋಗಿಯಾಗಲೆಂದು ಶ್ರಮಿಸುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ನಮಗೂ ಬದುಕಿದೆ ಎಂಬುದನೇ ಮರೆತು ಬದುಕಬೇಕಿದೆ ಇಂದುಹಗಲಿರುಳು ನಿರುತ ದುಡಿಯುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ಕಡುವೈರಿ ವೈರಾಣು ಮಹಾಮಾರಿಯಾಗಿ ಪಂಥಾಹ್ವಾನ ನೀಡಿದೆರಣಕಲಿಯಂತೆ ಹೋರಾಡುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ಸಾವಿನ ಕಬಂಧಬಾಹು ಉಸಿರುಗಟ್ಟಿಸಿದೆ ವಯೋಭೇದವಿಲ್ಲದೇಪಾರಾಗುವ ದಾರಿಯ ಅರಸುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ತೂಗುಗತ್ತಿ ಎಂದು ಬೀಳುವುದೋ ಭಯ ಬೇರೂರಿದೆ ಎದೆಯಲ್ಲಿಜೀವಗಳ ಉಳಿಸಲು ಪಣ ತೊಟ್ಟಿದ್ಧೇವೆ ಪ್ರಾಣವನ್ನು ಪಣಕ್ಕಿಟ್ಟು **************************

ಕಳ್ಳ ಬಂದೂಕು

ಹಳ್ಳಿಗಳಲ್ಲಿ ದೊಡ್ಡಮನುಷ್ಯರ ಹತ್ತಿರ ಕಾಡುತೋಸು ಅಥವಾ ಡಬಲ್ ಬ್ಯಾರಲ್ ಬಂದೂಕು ಇರುವದು ಸಾಮಾನ್ಯವಾಗಿತ್ತು. ಅದನ್ನು ಇಟ್ಟುಕೊಳ್ಳಲು ಪರವಾನಗಿ ಪತ್ರದ ಅವಶ್ಯಕತೆ ಇದ್ದರೂ ‘ದೊಡ್ಡ ಮನುಷ್ಯರಿಗೆ’ ಪರವಾನಗಿ ಪತ್ರ ಪಡೆಯುವದು ಕಷ್ಟವಾಗಿರಲಿಲ್ಲ.

ಸ್ವಾತಂತ್ಯ ಪೂರ್ವದಲ್ಲಿ ಮಾಲೀಕರ ಶೋಷಣೆ ಕೆಲಸ ಮಾಡಿಸಿಕೊಳ್ಳುವ ರೀತಿಯನ್ನು ಮತ್ತು ಕಥಾನಾಯಕನ ಆದರ್ಶಗಳು ಜೊತೆಗೆ ಅಸಹಾಯಕತೆಗಳು ಜೀವನದ ಚಿಕ್ಕ ಆಸೆಗೆ ಪರಿಸ್ಥಿತಿಯೊಡನೆ ಮಣಿಯುವ ಮನಸ್ಸು ಅಂದಿನ ಇಮೇಜಿಗೆ ತಕ್ಕಹಾಗೆ ಚಿತ್ರಿಸಿರುವ ನಿರ್ದೇಶಕ ಪ್ರಿಯದರ್ಶನ ಅವರ ನಿರ್ದೇಶನ ನಮ್ಮನ್ನು ಅಂದಿನ ದಿನಗಳಿಗೆ ಕರೆದೊಯ್ಯುತ್ತದೆ.

ವಿಧಿ

ದೂರ ನಿಂತು ಮಾತುಗಳನ್ನು ನುಂಗಿಕೊಳ್ಳಬೇಕಿದೆ
ನರಕವಾಗಿದ್ದ ನಾಲ್ಕು ಗೋಡೆಗಳೇ ಪರಿಚಿತವಾಗಿವೆ
ಈಗ ಗೋಡೆಗಳಿಗೂ ಮಾತು ಬಂದಿವೆ

ದೀಪ ಮತ್ತೊಂದು ದೀಪವನ್ನು ಹಚ್ಚುತ್ತದೆಯೆ ಹೊರತು ಅಸೂಯೆಯಿಂದ ತಾನೇ ಬೆಳಗಬೇಕೆಂಬ ಸ್ವಾರ್ಥದಿಂದ ಅಥವಾ ಅಹಂನಿಂದ ಇನ್ನೊಂದು ದೀಪವನ್ನು ನಂದಿಸುವುದಿಲ್ಲ. ನಾವುಗಳೂ ದೀಪಗಳಾಗಬೇಕಿದೆ. ಹಿತಶತೃಗಳ ಮುಖವಾಡ ಕಿತ್ತೆಸೆದು ನಿಜ ಮಾನವರಾಗಿ ಬದುಕಬೇಕಿದೆ

ಸೀರೆಯಲ್ಲಿ ಬಂಧಿಯಾದ ಅಮ್ಮನ ಬದುಕು…

ಅಮ್ಮನಿಗೆ “ಸೀರೆ” ಅವಳ ಏಕೈಕ ವ್ಯಕ್ತ ವಾಗಿತ್ತು. ಸೀರೆ ಸೀರೆ ಸೀರೆ, ಎಲ್ಲಿ ಹೋದರೂ ಮನೆಯಲ್ಲಿದ್ದರೂ. ಅವಳಿಗೆ ಅದು ಎಂದೂ ವ್ಯಾಪಾರ ಆಗಿರಲಿಲ್ಲ, ಬದುಕಿನ ಶೈಲಿ ಯಾಗಿತ್ತು. ಅವಳು ಉಡದೆಯೇ ಹೋದ ಹತ್ತಾರು ಬಗೆ ಬಾಕಿ ಇದೇ ನಿಜ, ಆದರೆ ಅವಳಿಂದ ಅದ ಪಡೆಯದೆಯೇ ಉಳಿದ ಹೆಣ್ಣಿಲ್ಲ. ಸೀರೆಯೇ ಅಮ್ಮನಾಗಿದ್ದು ಈಗ ಅರಿವಿಗೆ ಬಂತು ಮಗಳಿಗೂ

ಕೋಳಿ ಕಥೆ ಕೇಳಿ

ಹಾಸ್ಯ ಲೇಖನ ಕೋಳಿ ಕಥೆ ಕೇಳಿ ಶಾಂತಿವಾಸು ನಮ್ಮ ಮನೆಯ ಪಕ್ಕದಲ್ಲಿ ಒಂದು ಸೌದೆ ಡಿಪ್ಪೋ ಇತ್ತು. ಆಗೆಲ್ಲಾ ಮಧ್ಯಾನ್ಹ 3 ಗಂಟೆಗೆ ನಾವು ಸ್ಕೂಲಿನಿಂದ ವಾಪಸ್ ಬರುವಾಗ, ಥೇಟ್ ಈಗಿನ ಲಾಕ್ಡೌನ್ ತರಹದ ನಿಶಬ್ದವೇ ಇರುತ್ತಿತ್ತು. ಅಜ್ಜ ಸೌದೆ ಹೊಡೆಯುವಾಗ ಬಿಡುವ “ಹುಶ್ಸಾ ಹುಶ್ಸಾ” ಉಸಿರಿನ ಶಬ್ದ ಮೂರ್ನಾಲ್ಕು ಮನೆಗಳ ದಾಟಿ ಕೇಳುತ್ತಿತ್ತು. ಉಸಿರಾಡುವುದೇ ಅಷ್ಟು ದೊಡ್ಡ ಶಬ್ದವೆಂದರೆ, ಇನ್ನು ಮಾತಾಡುವಾಗ ಧ್ವನಿ ಹೇಗಿರಬೇಡ? ಅದಕ್ಕಿಂತ ಜಗಳವಾಡುವಾಗ ಇನ್ನೂ ನಾಲ್ಕು ರಸ್ತೆಗೆ ಕೇಳಿಸುವುದಿಲ್ಲವೇ? ಅಜ್ಜನ ಹೆಸರು […]

ಬಾಗಿಲನ್ನು ತೆರೆದಿಡಿ

ಕವಿತೆ ಬಾಗಿಲನ್ನು ತೆರೆದಿಡಿ ವಿಶ್ವನಾಥ ಎನ್ ನೇರಳಕಟ್ಟೆ ಬಾಗಿಲನ್ನು ತೆರೆದಿಡಿತುಸು ಗಾಳಿಯಾಡಲಿಬರಿಯ ಕಿಟಕಿಸಾಲುವುದಿಲ್ಲ ಈ ಕಾಲಕ್ಕೆಎದೆಯುರಿಯ ಆರುವಿಕೆಗೆಹಿರಿದು ಗಾಳಿಯ ಸಹಕಾರವಿರಲಿ ಬಿಸಿಲ ಝಳಕ್ಕೆ ಬಳಲಿದ ಪಕ್ಷಿಗಳುಬರಲಿ ಒಳಕ್ಕೆವಿರಮಿಸಲಿ ತುಸು ಹೊತ್ತುಪ್ರಣಯನಾದದ ಕೇಕೆಅನುರಣಿಸಲಿ ಭಿತ್ತಿಗಳಲಿ ಮನೆಯೊಳಗೆ ಮುತ್ತಿರುವ ಕತ್ತಲುಕಣಕಣವಾಗಿ ಕಡಿದುಹೋಗಲಿಹೊರಗಿನ ಬೆಳಕಿನಲ್ಲಿಕಣ್ಣ ದೃಷ್ಟಿ ಸೂಕ್ಷ್ಮವಾಗಲಿ ಬಾಗಿಲನ್ನು ತೆರೆದಿಡಿ ಎದೆಯ ಕವಾಟಗಳಲ್ಲಿಸಾಮರಸ್ಯದ ಗಾಳಿಯಾಡಲಿ

ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ಏಳು ದಶಕಗಳೇ ಕಳೆದವು ಹೊಸ ಮಳೆಯು ಸುರಿಯಲಿಲ್ಲ ನೋಡು ಸಾಕಿಭೂತಾಯಿ ಮಕ್ಕಳ ಬಂಜೆತನ ಹಿಂಗಲೇಯಿಲ್ಲ ನೋಡು ಸಾಕಿ ದುಡಿ ದುಡಿದು ನೊಂದ ರೈತನ ಮುಖದಲ್ಲಿ ನಗೆಯು ಅರಳಲಿಲ್ಲಜಗಕೆ ಅನ್ನ ಹಾಕುವವರ ಬಾಯಿಯೇ ಸಿಹಿಯಾಗಲಿಲ್ಲ ನೋಡು ಸಾಕಿ ಗಾಂಧಿ ಕಂಡ ಗ್ರಾಮೀಣ ಭಾರತದ ಕನಸುಗಳೆಲ್ಲ ಜಾರಿ ಕಡಲ ಪಾಲಾದವು ಈ ಮಣ್ಣಲಿಹಳ್ಳಿ ಹಳ್ಳಿಗಳೆಲ್ಲ ಗುಳೇ ಎದ್ದು ಹೋಗಿ ಸುಖವೆಂಬುದೇ ಸುಳಿಯಲಿಲ್ಲ ನೋಡು ಸಾಕಿ ಕುರ್ಚಿಯ ಕನಸಿನಲಿ ಸ್ವಾರ್ಥದ ಸೆಳವಿನಲಿ ದೇಶ ನಮ್ಮ ನಮ್ಮವರಲ್ಲಿಯೇಹರಾಜಾಯಿತುಅಧಿಕಾರದ ಅಮಲಿನಲ್ಲಿ […]

Back To Top