ಪ್ರೀತಿಯ ಗೆಳೆಯರೇ ಮೂಗಪ್ಪ ಗಾಳೇರ ಪ್ರೀತಿಯ ಗೆಳೆಯರೇ……. ನಿಮಗೊಂದು ಕತೆ ಹೇಳಬೇಕೆಂದಿರುವೆ ಎರೆಮಣ್ಣ ಕರಿ ಚೆಲುವು ಸುಳಿಗಾಳಿಯ ಅಲೆಮಾರಿಯ ನಡಿಗೆ ಬೈಕೊಂಡು ಹುರ್ಕೊಂಡು ಸರಿಯಾಗಿ ಕೇಳಿ ನಾ ಹೇಳುವ ಕಥೆಯಾ……..! ಪ್ರೀತಿಯ ಗೆಳೆಯರೇ……. ನಿಮಗೊಂದು ಪತ್ರ ಬರೆಯುವೆ ನಿಟ್ಟುಸಿರು ಬಿಡದೆ ಬಿಟ್ಟ ಕಣ್ಣುಗಳ ಮುಚ್ಚದೆ ಓದಿ ಅಲ್ಲಲ್ಲಿ ಹುಡುಕಿ ತಡಕಿ ಭಯಬಿದ್ದ ಮನಸ್ಸುಗಳನ್ನು ಪತ್ರದಲ್ಲಿ ಬಚ್ಚಿಟ್ಟಿರುವೆ……..! ಪ್ರೀತಿಯ ಗೆಳೆಯರೇ…… ನಿಮಗೊಂದು ಗುಟ್ಟು ಹೇಳಬೇಕೆಂದಿರುವೆ ಬಾರದ ದಿನಗಳಲ್ಲಿ ಕಳೆದ ಕಂಬನಿಯ ಕನಸುಗಳು ಚಿರತೆ ನಡಿಗೆ ಕದ್ದ ಪೂರ್ವಜರ ಉಸಿರು […]
Read More
ಮಠದ ಆನೆ ರೇಶ್ಮಾ ಗುಳೇದಗುಡ್ಡಾಕರ್ ಆನೆ ಎಂದರೆ ಸಂಭ್ರಮ, ಸಡಗರ ದೈವೀಕತೆ ಆಶ್ಚರ್ಯ ಹತ್ತು ಹಲವು ಉದ್ಗಾರ. ಊರಿನಲ್ಲಿ ಕಂಡರೆ .ಅದೆ ಆನೆ ಅಚಾನಕ್ ಅಗಿ ನಾವು ಹೋಗುವ ದಾರಿಯಲ್ಲಿ ,ಕಾಡಿನಲ್ಲಿ ಊರ ಬಯಲಿನಲ್ಲಿ ಕಂಡರೆ !!!! ಹೃದಯ ವೇ ಬಾಯಿಗೆ ಬಂದಂತಾಗುತ್ತದೆ . ಅಲ್ಲವೇ ಅದನ್ನು ದೈರ್ಯ ವಾಗಿ ಸ್ವಾಗತಿಸುವರು ಸ್ವಲ್ಪ ಕಡಿಮೆಯೇ . ಆನೆ ಎಂದರೆ ನೆನಪಾಗುವದು ಅದರ ಗಾತ್ರ ಗತ್ತು ರಾಜಗಾಂಭಿರ್ಯ ನಡಿಗೆ ಅದರ ತೊಕದಷ್ಟೇ ಇರುವ ಸಂಮಯಮ .ಆನೆ ಒಂದು […]
Read More
ಅನ್ವೇಷಾ ರಶ್ಮಿ ಕಬ್ಬಗಾರ ಅನ್ವೇಷಾ ೧ ಮತ್ತೆ ಹೊಸದಾಗಿ ನಿನ್ನ ಪ್ರೀತಿಸ ಬೇಕೆಂದಿದ್ದೇನೆ ನೀ ನನ್ನ ಮಹತ್ವಾಕಾಂಕ್ಷೆಯೋ ಹಳೇ ಪ್ರೇಮಿಯೋ ಪತ್ತೆ ಮಾಡಬೇಕಿದೆ ೨ ಇಲ್ಲ ಮತ್ತೆ ಮತ್ತೆ ನಿನ್ನ ಕಾಯಿಸುವ ಇರಾದೆಯಿಲ್ಲ ಸೀದ ಇಳಿದು ಮನವೊಲಿದಲ್ಲಿ ಮಳೆ ಕರೆದು ಮೊಳೆವೆ ೩ ರಾಗ ರಂಜನೆ ಧ್ಯಾನ ಸಾಧನೆಗೆಲ್ಲ ವ್ಯವಧಾನವಿಲ್ಲೀಗ ಇದು ಕವಿ ಹುಟ್ಟುವ ಪದ ಪಾದ ನಾಭಿಯೊಳ್ ಮುಟ್ಟುವ ಖುಷಿ ಋಷಿ ಮೊಟ್ಟೆಯೊಡೆದುಟ್ಟುವ ಮುಂಜಾವು ಮತ್ತೀಗ ಗಾಳಿಗೆ ಬೆಂಕಿ ಎದುರಾದಂತೆ ಎದು […]
Read More
ಪ್ರಭುಲಿಂಗ ಲೀಲೆ ಚಾಮರಸ ಚಾಮರಸನ ಮಹಾಕಾವ್ಯ ‘ಪ್ರಭುಲಂಗಲೀಲೆ’ಯೂ..! ಚಾಮರಸನು ಕನ್ನಡದ ಪ್ರಸಿದ್ಧ ಕವಿ. ಇವರು ‘ಪ್ರಭುಲಿಂಗ ಲೀಲೆ’ಯು ಭಾಮಿನಿ ಷಟ್ಪದಿಯಲ್ಲಿ ಬರೆಯಲಾದ ಈತನ ಪ್ರಸಿದ್ಧ ಕಾವ್ಯವಾಗಿದೆ. ಇವರು ಇಮ್ಮಡಿ ಪ್ರೌಢದೇವರಾಯನ ರಾಜಾಶ್ರಯದಲಿದ್ದವನು. ಅನ್ಯಮತ ಕೋಳಾಹಲ, ವೀರಶೈವಾಚಾರ ಮಾರ್ಗ ಸಾರೋದ್ಧಾರ ಇವನಿಗೆ ಸಂದಿದ ಬಿರುದುಗಳು… ನಡುಗನ್ನಡದ ಶ್ರೇಷ್ಠ ಕಾವ್ಯ ಎಂದು ಪ್ರಸಿದ್ಧವಾಗಿರುವ ‘ಪ್ರಭುಲಿಂಗಲೀಲೆ’ಯ ಕರ್ತೃ ಈತ. ವೀರಶೈವ ಕವಿ. ವಿಜಯನಗರದ ಪ್ರೌಢ ದೇವರಾಯನ ಕಾಲದ ನೂರೊಂದು ವಿರಕ್ತರಲ್ಲಿ ಗಣನೆಯಾಗಿದ್ದಾನೆ. ವೀರಶೈವಾಚಾರ ಮಾರ್ಗಸಾರೋದ್ಧಾರ, ಅನ್ಯಮತ ಕೋಳಾಹಳ ಎಂಬ ಬಿರುದುಗಳನ್ನು ಪಡೆದಿದ್ದ […]
Read More
ಗಝಲ್ ರೇಮಾಸಂ ಡಾ.ರೇಣುಕಾತಾಯಿ.ಎಂ.ಸಂತಬಾ ಸುಳ್ಳು ಶಬ್ದಗಳ ಪೋಣಿಸಿ ಸರಮಾಲೆ ಹಾಕದಿರು ಗೆಳೆಯ/ ಪೊಳ್ಳು ಮಾತಿನಲಿ ಸಿಲುಕಿಸಿ ಬಲೆಯ ಬೀಸದಿರು ಗೆಳೆಯ// ಚಂದಿರ ನಕ್ಕಾನು ನಕ್ಷತ್ರಗಳನು ಪಿಡಿದು ಮುಡಿಸುವ ಪರಿಗೆ/ ವಾಸ್ತವಕ್ಕೆ ಮರಳು ಹಗಲುಗನಸು ಕಾಣದಿರು ಗೆಳೆಯ// ಎದೆಯ ಹೊಲದಲಿ ಪ್ರೀತಿ ಬಿತ್ತಲು ಬೇಕೆನು ಕಾಣಿಕೆ/ ಧನವೇ ಮನವನು ಗೆಲ್ಲುವದೆಂದು ತಿಳಿಯದಿರು ಗೆಳೆಯ// ವಾಸ್ತವಿಕತೆ ಕನ್ನಡಿಯನು ಗಮನಿಸಿ ನೋಡಲಾರೆಯೇನು/ ಪ್ರೇಮದಲಿ ಮಿಂದ ಕಣ್ಣ ದೃಷ್ಟಿ ಬದಲಿಸಿದಿರು ಗೆಳೆಯ// ಉಷೆಯಿಂದ ನಿಶೆಯವರೆಗೆ ನಿನ್ನ ನೆನೆಯುವಳು ನೆನಪಿಲ್ಲವೇ/ ಪರರ ನಶೆಯಲಿ ರೇಮಾಸಂನು […]
Read More
ಜ್ಯೋತಿಬಾ ಫುಲೆಯವರ ಜಯಂತಿ “ಜ್ಯೋತಿ ಬೆಳಗೋಣ ಬನ್ನಿ” ಏಪ್ರೀಲ ತಿಂಗಳು ನಿಜಕ್ಕೂ ಭಾರತ ದೇಶಕ್ಕೆ ಎರಡು ತಾರೆ ನೀಡಿತು. ಒಬ್ಬರು ಮಹಾಮಾನವ ಬಾಬಾಸಾಹೇಬ ಅಂಬೇಡ್ಕರರು ಮತ್ತು ಇನ್ನೊಬ್ಬರು ಕ್ರಾಂತಿಜ್ಯೋತಿ ಮಹಾತ್ಮಾ ಜ್ಯೋತಿಭಾ ಫುಲೆ. ಜ್ಯೋತಿರಾವರು ಹುಟ್ಟಿದ್ದು ೧೧ ಏಪ್ರೀಲ ಮತ್ತು ಅಂಬೇಡ್ಕರರು ಹುಟ್ಟಿದ್ದು ೧೪ ಏಪ್ರೀಲ. ದಮನಿತ ಮತ್ತು ಶೋಷಿತ ಸಮಾಜದ ಏಳಿಗೆಗೆ ಶ್ರಮಿಸಿ, ಅಂಧಕಾರವನ್ನು ಹೋಗಲಾಡಿಸಿ, ದೇಶದ ಆಂತರಿಕ ಸ್ವಾತಂತ್ರö್ಯ ಮತ್ತು ಸಾತ್ವಿಕ ಸ್ವಾತಂತ್ರಕ್ಕೆ ಹೋರಾಡಿದ ಇರ್ವರೂ ತಾರೆಗೆ ಸಮಾನರು. ಅಂಬೇಡ್ಕರರಿಗೆ ಆದರ್ಶರಾದ ಜ್ಯೋತಿರಾವರು […]
Read More
ಕಾಡಿನಿಂದ ನಾಡ ಪ್ರವಾಸ. ಸುಜಾತಾ ಗುಪ್ತ ಜಿಂಕೆ ಮರಿ ಜಿಂಕೆ ಮರಿ ನೀ ನನ್ನ ಮುದ್ದು ಮರಿ ನಾಡಿಗೋಗೋಣ ಬರ್ತೀಯಾ ನಾವ್ ನಾಡಿಗೋಗೋಣ ಬರ್ತೀಯಾ ಆನೆ ಮರಿ ಆನೆ ಮರಿ ನೀ ನಾಡಿಗೇಕ್ ಹೋಗ್ತೀಯ ನಾಡಿಗೋಗಿ ಏನ್ಮಾಡೋದು ನಾವ್ ಏನ್ಮಾಡೋದು.. ಶಸ್ತ್ರಧಾರಿಯಾಗಿ ಬರಲು ಮನುಜನಂದು ಹೆದರಿ ಬೆದರಿ ಪೊದೆಗಳಲ್ಲಿ ಅಡಗಿದೆವು ಸ್ವಚ್ಛಂದದೆ ಇಂದು ನಾಡು ಸುತ್ತೋಣ ನಾವ್ ನಾಡು ಸುತ್ತೋಣ.. ನಾ ಬರಲ್ಲಪ್ಪ, ಅಮ್ಮ ಕಳಿಸಲ್ಲ ಬಾಣಧಾರಿ ಬೇಟೆಗಾರ ಇಹನಲ್ಲಿ ನಂಗ್ ಭಯ ನಾ ಬರಲ್ಲ ನಾಡಿಗೆ […]
Read More
ಚರಿತ್ರೆ ಚಿರನಿದ್ರೆ ದೇವು ಮಾಕೊಂಡ ಜಗದ ಬಲೆ ಬಲೆಯೊಳಗಿನ ಮುಸುಕು ಸಿಕ್ಕಿಸಿಕೊಂಡ ಬದುಕ ಕೊಂಡಿ ಕಳಚಲು ಯತ್ನಿಸುವ ವೈರಾಗಿ ರಾತ್ರಿ ಹೆದರುತ್ತದೆ ಹೊರಬರಲು ಹಗಲ ಬಯಲು ನರ್ತನಕ್ಕೆ ಅನುಗಮನ ನಿಗಮನದರಿವು ಏಕಮುಖಗೊಂಡಿದೆ ಗೊಂದಲ ಜಗದಿ ದಿನ ದಿನ ನಂಬಿಕೆಗಳೆ ಬೋಣಿಗೆ ಮಾಡುವಾಗ ಬೋದಿಗೆ ಶಾಸನ ಮೌನ ಮಾತಾಗಿದೆ ಮಹಾಸತಿ ಕಲ್ಲುಗಳು ಮನಸು ತೇವ ಮಾಡಿ ನಕ್ಕು ಮತ್ತೆ ಮತ್ತೆ ಶರಣಾಗುತ್ತಿವೆ ಅಂಧಗೋಪುರಕ್ಕೆದರಿ ನೀರವರಾತ್ರಿ ದಮನಿತ ದೀಪಗಳುರಿಸುವಾಗ ವಿಲೋಮಗಾಳಿ ಜನಜನಿತ ಅವಮಾನಿತ ! ತನ್ನೊಳಗಿನ ತನ್ನದರಿವು ಹುಡುಕುವ ಆಗುಂತಕನೊಬ್ಬ […]
Read More
ಗಝಲ್ ಎ ಎಸ್ ಮಕಾನದಾರ. ಗಲ್ ಗಲ್ ಗಜ್ಜೆಯ ನಾದ ಹೊಮ್ಮಿಸುತ ಮನದ ಅಂಗಳದಲಿ ಒಮ್ಮೆ ಓಡಾಡಿ ಬಿಡು ಕತ್ತಲು ತುಂಬಿದ ಮನೆಯ ಮೂಲೆ ಮೂಲೆಯಲೂ ನಗುವ ತೂರಾಡಿ ಬಿಡು ಸೂರ್ಯ ಚಂದ್ರ ನಕ್ಷತ್ರಗಳ ಬೆಳಕೇಕೆ ನಿನ್ನ ಕಣ್ಣ ಬೆಳದಿಂಗಳು ಸಾಕು ಬೆಳಕ ಹಬ್ಬಕೆ ಬಾಗಿಲು ಕಿಟಕಿಗಳಾಚೆ ಇರಲಿ ಆ ಮುಗಿಲ ತಾರೆಯರು ಬಾಚಿಕೊಳ್ಳುತ್ತೇನೆ ಒಲವನ್ನೊಮ್ಮೆ ತೂರಾಡಿ ಬಿಡು ಬಾಳನಂದನಕ್ಕಿಗ ಚೈತ್ರ ಬಂದಾಗಿದೆ ಹಸಿರು ಬಳ್ಳಿಯ ತುಂಬ ಆಸೆಗಳ ಒಸಗೆ ಮೊಗ್ಗು ಹೂವಾಗಿ ಅರಳಿ ನಲಿಯುವ ಕಾಲ […]
Read More| Powered by WordPress | Theme by TheBootstrapThemes