ಆತ್ಮ ಚೈತನ್ಯ

ಆತ್ಮ ಚೈತನ್ಯ

ಕವಿತೆ ಆತ್ಮ ಚೈತನ್ಯ ವಸುಂಧರಾ ಕದಲೂರು ಹೌದು,ಸದಾ ಚೈತನ್ಯಶೀಲರಾಗಿರುವನಾವು ಆಗಾಗ್ಗೆ ಮಂಕಾಗುತ್ತೇವೆ. ಚೈತನ್ಯವು ಬೇರುಬಿಟ್ಟ ಆಲದಮರದ ಬಿಳಲುಗಳೇನಲ್ಲ! ಆಗಸದ ವಿಸ್ತಾರದ ಕ್ಯಾನ್ವಸ್ಸಿನಹಿನ್ನೆಲೆಯಲಿ ರಂಗು ರಂಗಿನೋಕುಳಿಆಡುವ ಚಿತ್ತಾರದ ಮೇಘಮಾಲೆ;ಕ್ಷಣ ಕ್ಷಣವೂ ಬದಲಾಗುವಗಡಿಯಾರದ ಮುಳ್ಳಿನ ಚಲನೆ; ಹಕ್ಕಿ ಗೂಡೊಳಗಿನ ಜೀವಂತಿಕೆಯಕಾವಿಗೆ ಕಾದು ಕೂತ ಪುಟ್ಟ ಮೊಟ್ಟೆ.ರೆಕ್ಕೆ ಬಲಿತ ಮೇಲೆ ಗಗನ ಗಾಮಿ. ಚೈತನ್ಯವು ನಿತ್ಯ ನೂತನವೂ ನಿರಂತರತಾರುಣ್ಯಪೂರ್ಣವೂ ಆಗಿರಲುಸಾಧ್ಯವಿಲ್ಲ. ಸತ್ಯದ ಒಳ ಹೂರಣದಮೇಲೆ ಹುಸಿ ಸುಳ್ಳಿನ ಹೊರಕವಚ. ಚೈತನ್ಯದ ವಾಸ್ತವತೆ ಸಾವಿನಂತೆ.ಮರುಹುಟ್ಟಿನ ನಿರೀಕ್ಷಣೆಯಲ್ಲಿಅಲೆವ ಆತ್ಮಜ್ಯೋತಿ! ಜನ್ಮಾಂತರಗರ್ಭದೊಳಗಿನ ಭ್ರೂಣ ಪ್ರಣತಿ! ******************************************

ಮಕ್ಕಳಿಗಾಗಿ ಅನುಭವ ಕಥನ ಕಾಡಂಚಿನಊರಿನಲ್ಲಿ….. ವಿಜಯಶ್ರೀ ಹಾಲಾಡಿ ವಿಜಿ ಸಣ್ಣವಳಿರುವಾಗ, ಅಜ್ಜಿ ಅಂದಿಗೆ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದೆ (ಅಂದರೆ ಇವತ್ತಿಗೆ ತೊಂಬತ್ತು-ತೊಂಬತ್ತೈದು ವರ್ಷಗಳ ಹಿಂದೆ) ನಡೆದ ಘಟನೆಯನ್ನು ಹೇಳುತ್ತಿದ್ದರು. ಅಜ್ಜಿಯ ಮಾವ ಮುಂತಾದ ಹಿರಿಯರಿದ್ದ ಸಮಯವದು. ಆಗ ನಮ್ಮೂರು `ಮುದೂರಿ’ಯ ಸುತ್ತಲಿನ ಕಾಡುಗಳಲ್ಲಿ ಹುಲಿಯಿತ್ತಂತೆ! ಎಷ್ಟು ಹುಲಿಗಳಿದ್ದವೋ, ತಿಳಿಯದು, ಆದರೆ ಊರಿಗೆ ಬಂದು ದನಗಳನ್ನು ಕೊಂಡೊಯ್ದ ಅನೇಕ ಪ್ರಸಂಗಗಳಿದ್ದವು. ಹಟ್ಟಿಯ ಗೋಡೆಯನ್ನು ಮಣ್ಣಿನಿಂದ ಗಟ್ಟಿಯಾಗಿ ನಿರ್ಮಿಸಿ ಬಂದೋಬಸ್ತು ಮಾಡಿದ್ದರೂ ಬಾಗಿಲು ಸ್ವಲ್ಪ ಸದರ ಇದ್ದರೆ ಅದರ […]

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—21 ಆತ್ಮಾನುಸಂಧಾನ ವಿದ್ಯಾರ್ಥಿ ನಿಲಯದಲ್ಲಿ ಪ್ರಪ್ರಥಮ ರಂಗಪ್ರವೇಶ ಅಂಕೋಲೆಯ ಲಕ್ಷ್ಮೇಶ್ವರ ಭಾಗದ ವಿದ್ಯಾರ್ಥಿ ನಿಲಯದಲ್ಲಿ ಮೊದಲ ಮಳೆಗಾಲ ಕಳೆದಿತ್ತು. ನವೆಂಬರ್ ತಿಂಗಳಲ್ಲಿ ವಿದ್ಯಾರ್ಥಿ ನಿಲಯವು ಅಂಬಾರಕೊಡ್ಲ ರಸ್ತೆಗೆ ಹೊಂದಿಕೊಂಡಿದ್ದ ಎರಡಂತಸ್ತಿನ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ವಿಶಾಲವಾದ ಕಂಪೌಂಡಿನಲ್ಲಿರುವ ಕಟ್ಟಡದ ನೆಲ ಅಂತಸ್ತಿನಲ್ಲಿ ಸಾಕಷ್ಟು ವಿಶಾಲವಾದ ಕೋಣೆಗಳು, ಮೊದಲ ಮಹಡಿಯಲ್ಲಿಯೂ ಅಷ್ಟೇ ವಿಶಾಲ ಕೋಣೆಗಳು ತುಂಬಾ ಅನುಕೂಲಕರವಾಗಿದ್ದವು. ಈ ಕಟ್ಟಡದ ಮಾಲಿಕರು ಯಾರೋ ನಮಗೆ ತಿಳಿದಿರಲಿಲ್ಲ. ಆದರೆ ಬಹುಕಾಲದಿಂದ ಈ ಭವ್ಯ […]

ಬೀಜವೊಂದನು ಊರಬೇಕು

ಕವಿತೆ ಬೀಜವೊಂದನು ಊರಬೇಕು ವಿಜಯಶ್ರೀ ಹಾಲಾಡಿ ಕಣ್ಣೀರಿಗೆ ದಂಡೆ ಕಟ್ಟಿಬೀಜವೊಂದನ್ನು ಊರಬೇಕುಬೇರೂರಿ ಮಳೆ ಗಾಳಿ ಬಿಸಿಲಿಗೆಮೈಯ್ಯೊಡ್ಡಿ ಚಿಗುರುವುದಕಾಣುತ್ತ ಮೆಲು ನಗಬೇಕು ಬಿಕ್ಕುಗಳ ಬದಿಗೊತ್ತಿಹಕ್ಕಿ ನಾಯಿ ಬೆಕ್ಕುಗಳಿಗೆತುತ್ತುಣಿಸಿ ಮುದ್ದಿಸಬೇಕುತಿಂದು ತೇಗಿ ಆಕಳಿಸಿನಿದ್ದೆ ತೆಗೆವಾಗ ನೇವರಿಸಿಎದೆಗವಚಿಕೊಳಬೇಕು ನೋವುಂಡ ಜೀವಗಳಕೈ ಹಿಡಿದು ನಡೆಯಬೇಕುಹೆಗಲಿಗೆ ಹೆಗಲಾಗಿ ಕರುಳಾಗಿಮಮತೆ ತೇಯುತ್ತಗಂಧ ಚಂದನವಾಗಬೇಕು ಕಡು ಇರುಳುಗಳ ತೆರೆದಿಡುವಹಿತ ಬೆಳಗುಗಳ ನೇಯುವಬುವಿಗೆ ಮಂಡಿಯೂರಿಹಸಿರಾಗಿ ತರಗೆಲೆಯಾಗಿಮಣ್ಣಾಗಿ ಕೆಸರಾಗಿ ಕರಗಬೇಕುಕೊನೆ ಉಸಿರೆಳೆದ ದೇಹಗೊಬ್ಬರವಾಗಿ ಹೂ ಅರಳಬೇಕು!*********************************************************

ಸಾವಿನ ಆರ್ಭಟ

ಕವಿತೆ ಸಾವಿನ ಆರ್ಭಟ ಡಾ.ಜಿ.ಪಿ.ಕುಸುಮ ನಮ್ಮಮುಂಬಯಿ ಆಸ್ಪತ್ರೆಗಳುಮತ್ತೆ ಮತ್ತೆಸಾವಿನ ಮಾರಕ ತುಳಿತಗಳನ್ನುಸದ್ದು ಗದ್ದಲವಿಲ್ಲದೆಸ್ವೀಕರಿಸುತ್ತಿವೆ.ಅಂಬುಲೆನ್ಸ್ ಗಳ ಚೀತ್ಕಾರಕ್ಕೆನಡುಗುತಿಹ ನಗರದೊಳಗೆನಿಗಿನಿಗಿ ಕೆಂಡದೊಳು ಬೇಯುವಸ್ಮಶಾನಗಳುಮೂಕವಾಗಿವೆ. ಬೆಡ್ಡುಗಳ ತೆರೆದೊಡಲಲಿಉಸಿರಿಲ್ಲದವರಲ್ಲಲ್ಲಿಹೂಡಿದ್ದಾರೆ ಡೇರೆ.ಗೋಡೆಗಳನ್ನು ಕಟ್ಟಿದವರೆಲ್ಲಕೆಡವುವ ಮುನ್ನವೇಮಣ್ಣಲ್ಲಿ ಮಣ್ಣಾಗಲೂಸಾಲಲಿ ಸರಿಯುತ ತೆರಳುತಿಹರುಸುಟ್ಟು ಸುಟ್ಟುಬೆಂಕಿಯೂ ಸೋತಿದೆ.ಸಾಲು ಕೊನೆಯಿಲ್ಲದೆ ಕೊರಗಿದೆ. ಜೀವಿತದ ಕೊನೆಯ ಕ್ರಿಯೆಕ್ರಿಯೆಯಾಗದೆಮನುಷ್ಯನು ಮನುಷ್ಯನ ಕೆಲಸಕ್ಕೆಬಾರದೆಸಂಸ್ಕೃತಿ, ಸಂಸ್ಕಾರಗಳ ಕೈ ಹಿಡಿಯಲೂಆಗದೆಹೊರಡುತ್ತವೆ ಹೃದಯಗಳುಮಾತೂ ಆಡದೆ.ಚಕಾರವೆತ್ತದೆ ಸಾಗಿದೆಆಸ್ಪತ್ರೆಯ ಹೊರಗೆ ಕಂಬನಿಯ ನದಿಒಳಗೆ ಹೆಣಗಣತಿಯ ತರಾತುರಿ. *******************************

ಗಜಲ್

ಗಜಲ್ ಸುಜಾತ ಲಕ್ಷ್ಮೀಪುರ. ಕಳಚಿಕೊಂಡು ಸೋಗು ಅಹಂಕಾರ ಮಗುವಾಗಿದ್ದರೂ ನನ್ನ ಬಳಿ ಬರಲಿಲ್ಲ ನನ್ನ ದೇವರುಮನದಲಿ ಭಯ ಆತಂಕ ನೋವು ಪರಿತಾಪವಿದ್ದರೂನನ್ನ ಬಳಿ ಬರಲಿಲ್ಲ ನನ್ನ ದೇವರು ಮಂಜಾನೆ ನೇಸರ ಇರುಳು ಚುಕ್ಕಿ ಚಂದ್ರಮ ನಡುವೆ ಬೀಸುವಗಾಳಿಯೂ ಅವನ ನೆನಪಿಸಿದೆಹಸಿವು ನಿದಿರೆ ಸನಿಹ ಸುಳಿಯದೆ ಧ್ಯಾನದಲ್ಲಿದ್ದರೂ ನನ್ನ ಬಳಿ ಬರಲಿಲ್ಲ‌ ನನ್ನ ದೇವರು ಋತುಮಾನಗಳು ಉರುಳುತ್ತಿವೆ ಚಳಿಗೆ ಚಳಿ ಕಾಣದೆ ಬೇಸಿಗೆ ಸುಡುದೆ ಕೊರಡಾಗಿದೆ ಬದುಕುಕಾಯ ಕರಗಿ ಚಿತ್ತ ಮಾಗಿ ತಾನಳಿದು ಶೂನ್ಯವಾದರೂನನ್ನ ಬಳಿ ಬರಲಿಲ್ಲ ನನ್ನ […]

ಕನಸುಗಳ ಕಮರಿಸುವವರಿಗೆ

ಕವಿತೆ ಕನಸುಗಳ ಕಮರಿಸುವವರಿಗೆ ಡಾ.ಸುರೇಖಾ ರಾಠೋಡ ಕೊಡಬೇಡಿ ಮಗಳಹಣವ ಕೇಳುವಹಣವಂತರಿಗೆ… ಕೊಡಬೇಡಿಬಂಗಾರದಂತಹ ಮಗಳಬಂಗಾರವ ಕೇಳುವವರಿಗೆ… ಕೊಡಬೇಡಿಅಧಿಕಾರಿಯಾಗುವ ಮಗಳ ;ಅಧಿಕಾರಿಗಳಾದವರಿಗೆ ಕೊಟ್ಟು ,ಅವಳು ಅಧಿಕಾರಿಯಾಗುವಅವಕಾಶವನ್ನೆಕಿತ್ತುಕೊಳ್ಳುವವರಿಗೆ…. ಕೊಡಬೇಡಿಶಿಕ್ಷಣ ಪಡೆಯುವ ಮಗಳನ್ನು ;ಅವಳಿಗೆ ಶಿಕ್ಷಣವನ್ನು ನೀಡಲುನಿರಾಕರಿಸುವವರಿಗೆ…. ಕೊಡಬೇಡಿಕನಸು ಕಾಣುವ ನಿಮ್ಮ ಮಗಳನ್ನು ;ಅವಳ ಕನಸುಗಳನ್ನೆಕಮರಿಸುವವರಿಗೆ …. ಕೊಡಬೇಡಿಹಕ್ಕಿಯಂತೆ ಹಾರ ಬಯಸುವ ಮಗಳನ್ನು ;ಅವಳ ರಕ್ಕೆಯನ್ನೆಕತ್ತರಿಸುವವರಿಗೆ… ಕೊಡಬೇಡಿಜನ್ಮ ನೀಡುವ ಮಗಳನ್ನು ;ಅವಳ ಜೀವವನ್ನೇತಗೆಯುವವರಿಗೆ…. ಕೊಡಬೇಡಿಜಗವ ರಕ್ಷಿಸುವ ಮಗಳಿಗೆಅವಳ ಜಗತ್ತನ್ನೇಕಸಿದುಕೊಳ್ಳುವವರಿಗೆ… ಕೊಡಬೇಡಿನಿಮ್ಮ ಗೌರವ,ಅಂತಸ್ತಿಗೆದಕ್ಕೆ ತರುವವರಿಗೆಹಾಗೂಅವಳ ಗೌರವವನ್ನೇನಾಶಪಡಿಸುವವರಿಗೆ… ಕೊಡಬೇಡಿ ಮಗಳಿಗೆವಿವಾಹದ ಹೆಸರಿನಲ್ಲಿಬೇರೆಯವರಿಗೆಮಾರುವವರಿಗೆ….*************************************

ಗಝಲ್

ಗಝಲ್ ಆಸೀಫಾ ಬೇವು ಬೆಲ್ಲದೊಳಿಟ್ಟು ಕಷ್ಟ ಸುಖದ ಸಾಂಗತ್ಯ ಸಾರುತಿದೆ ಯುಗಾದಿಅಭ್ಯಂಜನವ ಮಾಡಿಸಿ ನವಚೈತನ್ಯ ಚೆಲ್ಲುತಿದೆ ಯುಗಾದಿ. ಹೊಸ ಚಿಗುರಿನ ಹೊದಿಕೆಯಲಿ ಕಂಗೊಳಿಸುತಿವೆ ಗಿಡಮರಗಳುಯುಗದ ಆದಿಯ ನೆನಪಿಸಿ ಹರ್ಷ ಹಂಚುತಿದೆ ಯುಗಾದಿ ಮೈಮರೆತ ದುಂಬಿಗಳ ಝೇಂಕಾರ ಹೊಂಗೆ ಬೇವು ಮಾಮರದ ತುಂಬಾಸವಿಜೇನಿನೊಲವು ಮನದ ಗೂಡುಗಳಲಿ ತುಂಬುತಿದೆ ಯುಗಾದಿ ತಳಿರು ತೋರಣ ಚೈತ್ರದಾಗಮನಕೆ ಸೂಚನೆಯನಿತ್ತು ನಗುತಿದೆಬ್ರಹ್ಮ ಸೃಷ್ಟಿಗೆ ಶಿರಬಾಗಿ ಶತಕೋಟಿ ನಮನ ಹೇಳುತಿದೆ ಯುಗಾದಿ ಹಳೆಯ ಹಗೆಯ ಕಳಚಿ ನಿಲ್ಲೋಣ ವಸಂತನಾಗಮನಕೆ ಎಲ್ಲಾಹೊಸ ವರುಷಕೆ ಕೈಬೀಸಿ ಆಸೀಯ ಕರೆಯುತಿದೆ […]

ಅಂಬೇಡ್ಕರ್ ವಿಶೇಷ ಬರಹ ಭಾರತದ ಸಂವಿಧಾನದ ಪೀಠಿಕೆಯೂ..! ಭಾರತದ ಸಂವಿಧಾನದ ಪೀಠಿಕೆಯೂ..! ಭಾರತ ವಾಸಿಗಳಾದ ನಾವು, ಭಾರತವನ್ನು ಸಾರ್ವಭೌಮ ಸಮಾಜವಾದಿ ಜಾತ್ಯಾತೀತ (೧೯೭೬ರಲ್ಲಿ ಇಂದಿರಾಗಾಂಧಿಯವರಿಂದ ಸೇರಿಸಲ್ಪಟ್ಟದ್ದು). ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ ಈ ಕೆಳಗಿನ ಹಕ್ಕುಗಳಾದ– ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ; ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ; ಗಳನ್ನು ದೊರಕಿಸಿ, ವೈಯುಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ […]

ಅಂಬೇಡ್ಕರ್ ಜಯಂತಿ ವಿಶೇಷ ಬರಹ ಅಸ್ಪೃಶ್ಯತೆಯ ವಿರುದ್ದ ಅಂಬೇಡ್ಕರ್ ರವರ ಹೋರಾಟ ೧೯೨೭ರಿಂದ ೧೯೩೨ರವರೆಗೆ, ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ಇತ್ಯಾದಿಗಳಿಗಾಗಿ ಹೋರಾಡಿದರು. ಇವುಗಳಲ್ಲಿ ನಾಸಿಕದಲ್ಲಿಯ ಕಾಳ ರಾಮನ ದೇವಸ್ಥಾನ ಮತ್ತು ಮಹಾಡದ ಚೌಡಾರ್ ಕೆರೆಯ ವಿಷಯವಾಗಿ ಅಸ್ಪೃಶ್ಯರನ್ನು ಹೊರಗಿಟ್ಟಿರುವರ ವಿರುದ್ಧ ಮಾಡಿದ ಆಂದೋಲನಗಳು ಗಮನಾರ್ಹವಾಗಿವೆ. ಸಹಸ್ರಾರು ಅಸ್ಪೃಶ್ಯ ಸತ್ಯಾಗ್ರಹಿಗಳು ಭಾಗವಹಿಸಿದ ಈ ಅಹಿಂಸಾತ್ಮಕ ಚಳುವಳಿಗಳಿಗೆ ಸವರ್ಣೀಯರು ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದರು. ನ್ಯಾಯಾಲಯದ ಕಟ್ಟೆ […]

Back To Top