ಕುರ್ಚಿಗಳು ಅಂಗಿ ತೊಟ್ಟು..

ಕುರ್ಚಿಗಳು ಅಂಗಿ ತೊಟ್ಟು..

ಕವಿತೆ ನೂತನ ದೋಶೆಟ್ಟಿ ಈ ಅಂಗಿಯ ದರ ಸಾವಿರದ ಐದು ನೂರುಕೇಳಿ ನೀನು ಕಣ್ಣರಳಿಸುತ್ತಿಬೆಲೆಯಿಂದೇನಾಗಬೇಕುತೊಟ್ಟವನು ನೀನಲ್ಲವೇ?ಕುರ್ಚಿಯ ಲೆಕ್ಕಾಚಾರ ಅದಲ್ಲ.ನಿನ್ನ ಓಡಾಟದ ಚುರುಕುಮುಟ್ಟಿರುತ್ತದೆ ಆ ಅಂಗಿಗೆಹಕ್ಕನ್ನು ಕೊಡಲಾರೆನಡೆ ನಿಧಾನವಿರಲಿಕುರ್ಚಿಯ ಡೊಳ್ಳು ಹೊಟ್ಟೆ ಕನಲುತ್ತದೆ.ನಿನ್ನದೋ ಯೋಗನಡೆದೀರ್ಘ ಉಸಿರೆಳೆದುತುಂಬಿಕೊಂಡ ಕಸರನ್ನುಹೊರಹಾಕುತ್ತ ನಿಶ್ವಾಸದಲಿಹಗುರವಾಗುವುದ ಕಲಿತಿದ್ದಿ.ಕುರ್ಚಿಗೆ ಧಗೆ ಹತ್ತಿದೆ.ಕುಂತಲ್ಲಿ ಇರುವ ಕುರ್ಚಿಯಬತ್ತಳಿಕೆಯ ತುಂಬಹಸಿರು ಶರಾದ ಬಾಣಗಳುನಿನ್ನೆಡೆಗೆ ತೂರಿ ಬಿಡಲುಕುರ್ಚಿಯೀಗ ಪಣ ತೊಟ್ಟಿದೆ.ಮತ್ತೀಗ ಉಚ್ಛ್ವಾಸದಲಿಎದೆಯ ಹುರಿ ಮಾಡುತ್ತಿನಾಟುವುದು ಅಲ್ಲಿಗೇ ತಾನೇ?ಜಯದ ಬೆನ್ನು ಹತ್ತಿದರೆಅಪಜಯದ ಭಯಕುರ್ಚಿಗೇನು ಗೊತ್ತು ನಿನಗೆ ಸೋಲಿಲ್ಲ.ತಳವೂರಿ ನಿಂತು ಜಯದ ಅಹಂಕಾರತನ್ನ ಸೋಲಿನ ಭಯಕುರ್ಚಿಯ […]

ಆಹ್ಲಾದಕರ ಭಾವನೆಯಲಿ ನಾವು

ಕವಿತೆ ರಾಘವೇಂದ್ರ ದೇಶಪಾಂಡೆ ಗುನುಗುತಿದೆ ಹೆಸರೊಂದು ಹೃದಯ ಶಹನಾಯಿಯೊಳಗೆಬೆಸೆದಾಗಿದೆ ಆ ಹೆಸರಲ್ಲಿ ನನ್ನ ಬಾಳಉಸಿರುರೂಪಿಸಿಹನು ಭಗವಂತ ಪ್ರೀತಿ ಭರಿತ ಸಂಬಂಧವನುಒಳಗೊಂಡಿದೆ ನಮ್ಮೀ ಸಂಬಂಧವುಸೃಷ್ಟಿಕರ್ತನ ಫಲದೊಳಗೆ… ಹೇಳಿಕೊಳ್ಳಲಾಗದ ಏಕಾಂಗಿತನವಿದೆ ಪ್ರೀತಿ ತಿರುವಿನಲಿಒಂಟಿಯಾಗುವೆ…ಕೆಲವೊಮ್ಮೆ ನಾನು ಒಂಟಿತನದಲಿಇಚ್ಛೆಪಟ್ಟಿರುವನೊ ಕರ್ತೃ ಹೀಗೆಯೇ ಇರಬೇಕೆಂದುಆಗುವುದೊಮ್ಮೆ ನಿರ್ಜನ…ಮತ್ತೊಮ್ಮೆ ಸ್ವರ್ಗಲೋಕಆಳವಾದ ಪ್ರೀತಿ ಇದೆಯೆನೋ… ದುಖಃದಲಿ ದುಖಿಃಯಾಗಿರುವೆ ಸುಖಃದಲಿ ಸುಖಿಃನೀಗಿಸಿಕೊಂಡಿರುವೆ ಸಂತಸದ ಹಸಿವನು ನಿನ್ನ ಹಸನ್ಮುಖತೆಯಲಿಎದೆಬಡಿತ ನಿಲ್ಲುವುದು ವ್ಯಾಕುಲತೆಯಲಿ ನೀನಿರುವಾಗಹಂಚಿಕೊಳ್ಳುವ ಪ್ರಣಯಾಮೃತವನು ಜುಮ್ಮೆನ್ನುವ ಮಿಂಚಿನಲಿದಾಂಪತ್ಯ ದೀವಿಗೆಯ ಬೆಳಕಿನಲಿ… ಸುವರ್ಣ ಲೇಖನಗಳಾಗಿವೆ ಚೈತನ್ಯಭರಿತ ಹೆಜ್ಜೆಗಳುಕಥೆಯಾಗಿರುವೆವು ಬದುಕೆಂಬ ಲೇಖನದ ಹೊಳಪಿನಲಿವಿರಹಿಸೋಣ ಭರವಸೆಯ […]

ಕರುಣಾಮಯಿ

ಕವಿತೆ ಪೂಜಾ ನಾರಾಯಣ ನಾಯಕ ಆಸುಪಾಸಿನ ಬೇಲಿಯಲಿದ್ದಕಾಷ್ಟದ ತುಂಡಾಯ್ದುಕಲಬೆರಕೆ ಅಕ್ಕಿಯಲಿ ಬೆರೆತಿರುವ ಕಲ್ಲಾಯ್ದುಹೊಲದಲ್ಲಿ ಬೆಳೆದ ಕಾಯಿಪಲ್ಲೆಯ ಕೊಯ್ದುಹೊತ್ತಿಗೆ ಸರಿಯಾಗಿ ಕೈತುತ್ತು ಉಣಿಸಿದವಳುಕರುಣಾಮಯಿ ನನ್ನಮ್ಮ… ಕಡು ಬಡತನದ ಸಂಕಟದಲ್ಲೂಆಶಾ-ಭರವಸೆಯ ನುಡಿಯಾಡಿಸಾವಿರ ಕಷ್ಟ – ಕಾರ್ಪಣ್ಯಗಳ ನಡುವೆತಾನೊಬ್ಬಳೇ ಹೋರಾಡಿಹರಿದಿರುವ ಹರುಕು ಅಂಗಿಯ ತುಂಡಿಗೂಮೊಂಡಾದ ಸೂಜಿಗೂಮಧುರವಾದ ಬಾಂಧವ್ಯ ಬೆಸೆದವಳುಕರುಣಾಮಯಿ ನನ್ನಮ್ಮ.. ನಾ ಸೋತು ಕೂತಾಗಕರುಳಬಳ್ಳಿಯ ಅಳಲು ತಾ ಮನದಲ್ಲೆ ಅರಿತುನನ್ನಲ್ಲಿ ಕೂಡ ಛಲದ ಬೀಜವನು ಬಿತ್ತಿನನ್ನ ಸಾವಿರ ಕನಸುಗಳನ್ನುನನಸು ಮಾಡಲು ಹೊರಟು ನಿಂತವಳುಕರುಣಾಮಯಿ ನನ್ನಮ್ಮ.. ಕೂಡಿಟ್ಟ ಕಾಸಿನಲಿಶಾಲೆಗೆ ಪೀಜು ತುಂಬಿತನ್ನ ಹರುಕು […]

ಒಮ್ಮೆ ಪೌರ್ಣಿಮೆಯಾಗಬೇಕಿದೆ ನನಗೆ

ಕವಿತೆ ವಿದ್ಯಾ ಕುಂದರಗಿ ನಿರ್ಬಂಧಗಳ ಜಡಿದು ಬಂಧಿಸಲಾಗಿದೆ ಇಲ್ಲಿರೆಕ್ಕೆ ಬಡಿದು ಬಾನಿಗೆ ಹಾರಬೇಕಿದೆ ನನಗೆ ಕಣ್ಕಟ್ಟಿದ ಖುರಪುಟಕೆ ಒಂದೇ ಗುರಿಯುದೆಸೆದೆಸೆಗೆ ಕಣ್ಣಗಲಿಸಿ ನೋಡಬೇಕಿದೆ ನನಗೆ ಗೊರಕೆಯ ಸದ್ದಿಗೆ ಗೋಡೆಯಾಗುತ್ತಿದೆ ಪಟಲಗಾಳಿಪಟವಾಗಿ ಆಕಾಶ ಚುಂಬಿಸಬೇಕಿದೆ ನನಗೆ ರಾತ್ರಿಕನಸು, ಭಾವಗಳಿಗೆ ಕೊಡಲಾಗದ ಕಾವುಸಂಜೆ ಮುಂಜಾವಿಗೆ ಚಿಂವ್‌ಗುಟ್ಟಬೇಕಿದೆ ನನಗೆ ಚಿವುಟಿ ಚಿಮ್ಮಿದರೂ ಟಿಸಿಲೊಡೆಯುವ ಪಸೆಹಬ್ಬಿ ಆಕಾಶದೆತ್ತರಕೆ ಕೈ ಚಾಚಬೇಕಿದೆ ನನಗೆ ‘ಸಖಿ’ ನಿಸ್ಸಂಗವಾಗಿ ಕಳೆದ ಮಾಸಗಳೇಷ್ಟೋಒಮ್ಮೆ ಚಿತ್ತಪೌರ್ಣಿಮೆ ಆಗಬೇಕಿದೆ ನನಗೆ *******************

ಗಝಲ ಧರ್ಮ..

ಗಝಲ ಗಳಲ್ಲಿ ಬಳಸುವ ಪಾರಂಪರಿಕ ಪಾರಿಭಾಷಿಕ ಪದಗಳು ಹಾಗೂ ಅವುಗಳ ಅರ್ಥ ಗಝಲ…. ಒಂದೇ ಪದ ಬಳಕೆಯ ಸಮ ಅಂತ್ಯವುಳ್ಳ ರದೀಫ್ ಮತ್ತು ಅನುಪ್ರಾಸ ದಿಂದ ಕೂಡಿದ ಕ಼ವಾಫಿ಼ ಯುಳ್ಳ ಒಂದೇ ವಜ಼್ನ ಅಥವಾ ಬಹರ್ ನಲ್ಲಿ ಬರೆದ ಅಶಾಅರ(ಶೇರ್ ನ ಬಹುವಚನ)ಗಳ ಸಮೂಹ. ಶಾಯಿರ್/ಸುಖನವರ…ಕವಿಶಾಯಿರಿ…. ಕಾವ್ಯಗಜ಼ಲ ಗೋ…ಗಝಲ್ ಗಾರಗಜ಼ಲ್ ಗೋಯೀ… ಗಝಲ್ ಬರೆಯುವ ಕ್ರಮ ಶೇರ… ಸಮಾನ ರದೀಪ್ ಮತ್ತು ವಿಭಿನ್ನ ಕ಼ವಾಫಿ಼ಯಿಂದ ಒಂದೇ ವಜ಼್ನ ಅಥವಾ ಬಹರ್ ಬಳಸಿ ಬರೆದ ದ್ವಿಪದಿಗಳು… ಅಶಆರ್….ಶೇರ್ ನ […]

ಆಯ್ಕೆ

ಕವಿತೆ ಮಾಲತಿಹೆಗಡೆ ಹೆತ್ತವರ ಹುಟ್ಟೂರವ್ಯಾಮೋಹ ಬಿಟ್ಟವರು..ಕತ್ತರಿಸಿ ನೆಟ್ಟ ಗಿಡದಂಥವರುನಗರವಾಸಿಗಳಿಗೊಲಿದವರುಹೋದೆಡೆಯೆಲ್ಲ ಚಿಗುರುವಹಟದಲ್ಲಿ ಬೇರು ಬೆಳೆಸಿಕೊಂಡವರಲ್ಲವೇ ನಾವು ? ಅಂಗೈ ಗೆರೆ ಮಾಸುವಷ್ಟುಪಾತ್ರೆ ಬಟ್ಟೆ ಉಜ್ಜಿ ಉಜ್ಜಿಮುಂಬಾಗಿಲು ತೊಳೆದುರಂಗೋಲಿಯಿಕ್ಕಿಕಟ್ಟಡವನ್ನುಮನೆಯಾಗಿಸಿಯೂತವರು ಮನೆ ಯಾವೂರು?ಗಂಡನ ಮನಿ ಯಾವೂರು?ಪ್ರಶ್ನೆ ಎದುರಿಸುತ್ತಅಡುಗೆಮನೆ ಸಾಮ್ರಾಜ್ಯದಲಿಹೊಗೆಯಾಡುವ ಮನಕ್ಕೆತಣ್ಣೀರೆರೆಚಿ ಹೂನಗೆ ಬೀರುವವರಲ್ಲವೇನಾವು? ತೊಟ್ಟಿಲು ತೂಗಿ,ಹೆಮ್ಮೆಯಲಿ ಬೀಗಿವಿರಮಿಸಲೂ ಬಿಡುವಿರದೇಸಂಸಾರ ಸಾವರಿಸಿಹೀಗೆಯೇ ಸಾಗುವುದುಹಣೆಬರಹ ಎನ್ನುತ್ತಬದುಕುವ‌ ನಗರವಾಸಿ ನಾರಿಯರಲ್ಲವೇ ನಾವು? *************

ಶ್ರಾವಣಕ್ಕೊಂದು ತೋರಣ

ಲಹರಿ ಪ್ರಜ್ಞಾ ಮತ್ತಿಹಳ್ಳಿ ಭರ‍್ರೋ…. ಎಂದು ಬೀಸುತ್ತಿದೆ ಗಾಳಿ. ಅನಾದಿ ಸೇಡೊಂದು ಹೂಂಕರಿಸಿ ಬಂದಂತೆ ಉರುಳಿ ಬೀಳುತ್ತಿವೆ ಹಳೆ ಮರದ ಗೆಲ್ಲುಗಳು. ನಡುಹಗಲೆ ಕತ್ತಲಾಗಿದೆ ಕರೆಂಟಿಲ್ಲದ ಒಳಮನೆಯಲ್ಲಿ. ತೌರಿಗೆ ಹೋದ ಹೊಸ ಸೊಸೆಯ ಕೋಣೆಯಲ್ಲಿ ಕಪಾಟಿನೊಳಖಾನೆಯಲ್ಲಿ ಮಡಿಸಿಟ್ಟ ರೇಷ್ಮೆ ಸೀರೆ ಅಸಹನೆಯಿಂದ ಮೈ ಕೊಡವಿ ಕೇಳುತ್ತಿದೆ ಎಂದು ಬರುತ್ತಾಳೆ? ಒಮ್ಮಲೆ ರಪರಪ ರಾಚಲಾರಂಭಿಸುತ್ತದೆ ಮಳೆ ಎಲ್ಲವನ್ನೂ ನೆನಪಿಸುವಂತೆ ಮತ್ತೆ ಎಲ್ಲವನ್ನೂ ಮರೆಸುವಂತೆ. ಕನ್ನಡಿಗಂಟಿಸಿದ ಬಿಂದಿಯೊಂದು ಗೋಡೆಯ ಕ್ಯಾಲಂಡರಿನತ್ತ ನೋಡಿ ಸಣ್ಣಗೆ ಕಣ್ಣು ಅರಳಿಸುತ್ತದೆ. ಸೋಮವಾರವೇ ಅಮಾವಾಸ್ಯೆ. ಅಂದರೆ […]

ಹೇಳಲೇನಿದೆ

ಕವಿತೆ ಡಾ.ಗೋವಿಂದಹೆಗಡೆ ಇಲ್ಲ, ನಿಮ್ಮೆದುರು ಏನನ್ನೂಹೇಳುವುದಿಲ್ಲ ಹೇಳಿದಷ್ಟೂ ಬೆತ್ತಲಾಗುತ್ತೇನೆಮತ್ತೆ ಬಿತ್ತಿಕೊಳ್ಳಲು ಏನುಉಳಿಯುತ್ತದೆಹೇಳಿದಷ್ಟು ಜೊಳ್ಳಾಗುತ್ತೇನೆಮೊಳೆಯಲು ಮತ್ತೆಉಳಿಯುವುದೇನು ಖರೇ ಅಂದರೆನಿಮಗೆ ಏನನ್ನೂ ಹೇಳುವಅಗತ್ಯವೇ ಇಲ್ಲ ಕಣ್ಣುಗಳಲ್ಲೇ ಸೆರೆಹಿಡಿದುದೋಷಾರೋಪಪಟ್ಟಿ ಸಲ್ಲಿಸಿಯಾವ ಪಾಟೀಸವಾಲೂಇಲ್ಲದೇಶಿಕ್ಷೆ ವಿಧಿಸಿ… ಹೇಳಲೇನಿದೆ? ***********

ಹಿ ಈಸ್ ಅನ್ಲೈನ್..ಬಟ್ ನಾಟ್ ಫಾರ್ ಯೂ. …..

ಕಥೆ ನಂದಿನಿ ವಿಶ್ವನಾಥ ಹೆದ್ದುರ್ಗ. “ನಾಡಿದ್ದು ಒಂದು ಇಂಟರವ್ಯೂ ಮಾಡೋಕಿದೆ.ಅವರ ಫೋನ್ ನಂಬರ್ ಜೊತೆಗೆ ಉಳಿದ ಡೀಟೈಲ್ಸ್ ಕಳಿಸ್ತಿನಿ.ಪ್ಲಾಂಟೇಷನ್ ನಲ್ಲಿ ಅವರು ಮಾಡಿರೋ ಸಾಧನೆಯ ಸಣ್ಣ ವಿವರವನ್ನೂ ಕಳಿಸ್ತೀನಿ.ಡೇಟ್ ನೆನಪಿರ್ಲಿ” ಅಂತ ಒಂದೇ ಉಸುರಿಗೆ ಹೇಳಬೇಕಾದ್ದನ್ನೆಲ್ಲಾ ಹೇಳಿ ಮುಗಿಸಿದ. ಅವನ ಸಮಯ ಅವನಿಗೆ ಬಹಳ ಮಹತ್ವದಂತೆ.ಹಾಗಂತ  ಪದೇಪದೇ ಹೇಳ್ತಾನೆ ಇರ್ತಾನೆ. ಅದೂ ಇತ್ತೀಚಿಗೆ. ಅವನ ಜೊತೆಗೆ  ಮಾತಾಡುವಾಗ ಸ್ವರ ಆದಷ್ಟೂ ಸಹಜವಾಗಿರೋದಿಕ್ಕೆ ಪ್ರಯತ್ನಿಸ್ತೀನಿ. ಅವನಿಗೆ ಕಾಲ್ ಮಾಡಿ ಆ ಕಡೆಯಿಂದ ಬರುವ ಮೊದಲ ಹಲೋಗೆ ಎದೆ ಮೂರು […]

ಬೊಗಸೆಯೊಡ್ಡುವ

ಕವಿತೆ ಗೋಪಾಲ ತ್ರಾಸಿ ಅಹೋರಾತ್ರಿಬಾನು ಭುವಿಯ ನಡುವೆ ಚಲನಶೀಲ ಶಿಖರದಂದದಿ ಉದ್ದಾನುದ್ದಕೆರಾಶಿರಾಶಿ ಮೋಡಗಳ ಜಂಬೂಸವಾರಿ,ಕಾರಿರುಳ ದಿಬ್ಬಣಕೆ,ಅಲ್ಲೊಂದು ಇಲ್ಲೊಂದುಅಂಜುತ್ತಂಜುತ್ತ ಇಣುಕುವಮಿಣುಕು ನಕ್ಷತ್ರಗಳು, ಸಾಕ್ಷಿ. ಮೈಭಾರವಿಳಿಸಿಕೊಳ್ಳಲೇನೊ, ತಾನೇತಾನು ಮೈತುಂಬ ಕನ್ನಕೊರೆದುನಸುಕಿನಿಂದಲೆ, ಧಸಧಸ ಸುರಿದುಕೊಂಡಮೋಡ;ರ್ರೊಯ್ಯನೆ ಹೊಯಿಲೆಬ್ಬಿಸುವ ಗಾಳಿಗೌಜು,ಧಡಾಂಧುಡೂಂ, ಛಟ್ ಛಟ್ ಛಟೀಲ್ಗುಡುಗು ಮಿಂಚಿನ ಜುಗಲ್ಬಂಧಿಏರುಮಧ್ಯಾಹ್ನವೇ ಸಂಜೆಗತ್ತಲ ಭ್ರಾಂತಿ;ಹೊರಗೆ. ಆಯಾಸದಿಂದ ಕಿಟಕಿಬಾಗಿಲು ಸಂದಿತೂರಿಸುಯ್ಯನೆ ಒಳಸುಳಿದುಅಪ್ಯಾಯಮಾನವಾಗಿ ಕಚಗುಳಿಯಿಡುವಒದ್ದೆಗಾಳಿಗರಿಗರಿಯಾಗಿ ಮೈಮನಸ್ಸು ಬೆಚ್ಚಗೆಗರಿಗೆದರಬೇಕಿತ್ತು ; ಒಳಗೆ. ಮಾಗಿಯ ಚುಮುಚುಮು ಚಳಿಯ ಜೊತೆ ಅನಾಯಾಸ ಬೆವರಿಳಿಸುವನಿರ್ಜೀವ ಜಡ ಜಂತುಭೂಮ್ಯಾಕಾಶ ಬಾಹು ಚಾಚಿಕೊಳ್ಳುತ್ತಲೆ, ಎಲ್ಲೋ ಕ್ಷಿತಿಜದಂಚಿಂದದಿಢೀರನೆ, ಹೊಸ್ತಿಲಲಿ ಹೊಂಚು ! […]

Back To Top