ಶಾಯರಿ

ಶಾಯರಿ

ಶಾಯರಿ ಭಾರತಿ ರವೀಂದ್ರ ಕಾಡಿಗೆ ಕಣ್ಣುಗಳನ್ನಮುದ್ದಿಸಲಿ ಹ್ಯಾಗೆ ಹೇಳು, ನನ್ನೊಡತಿಕರಿ ಮೋಡ ಕೋಪಿಸಿಕೊಂಡುಸುರದಾವ ಪ್ರವಾಹ ಬಂದಾಂಗ. ಬಂದರ ಬರಲೇಳುಸಾವಿರ ಸಂಕಟಗಳಸುರಿ ಮಳಿನಿನ್ನ ಪಿರೂತಿ ಸಾಥ್ಇರುವಾಗ ನಂಗ್ಯಾಕೆ ಭೀತಿ ******************************************

ಸ್ನೇಹ

ವಾರದ ಕಥೆ ಸ್ನೇಹ ಜ್ಯೋತಿ ಡಿ ಭೊಮ್ಮಾ ಮದುವೆಯಾಗಿ ಮುವತೈದು ವಸಂತಗಳನ್ನು ಜೊತೆಯಲ್ಲಿ ಕಳೆದ ನಿರ್ಮಲಾ ಮತ್ತು ಮೂರ್ತಿ ದಂಪತಿಗಳಿಗೆ ಈಗ ಬದುಕಿನ ಎಲ್ಲಾ ಜವಾಬ್ದಾರಿ ಮುಗಿಸಿ ನಿರಮ್ಮಳವಾಗಿ ಬದುಕು ಸಾಗಿಸುವ ಸಮಯ.ಮಗನ ಮತ್ತು ಮಗಳ ಮದುವೆ ಮಾಡಿ ಅವರನ್ನು ಒಂದು ದಡಕ್ಕೆಸೇರಿಸಬೇಕಾದರೆ ಜೀವನದ ಸಮಯವೆಲ್ಲ ಮುಡುಪಾಗಿಡಬೇಕಾಯಿತು. ಈಗ ನಿವೃತ್ತಿ ಜೀವನ ನಡೆಸುತ್ತಿರುವ ಅವರಿಗೆ ಎಲ್ಲವೂ ಒಮ್ಮೆಲೆ ಖಾಲಿಯಾದ ಅನುಭವ,ಯಾವದರಲ್ಲೂ ಉತ್ಸಾಹವಿಲ್ಲ.ಇಷ್ಟು ದಿನ ನೌಕರಿ ಹಣಗಳಿಕೆ ಪ್ರತಿಷ್ಠೆ ಮಕ್ಕಳ ವಿದ್ಯಾಭ್ಯಾಸ ಮದುವೆಗಳ ಜವಾಬ್ದಾರಿಗಳೆಲ್ಲ ಒಂದೋಂದಾಗಿ ಮುಗಿಯುತ್ತಿದ್ದಂತೆ ಜೀವನದಲ್ಲಿ […]

ಮೌನದಲ್ಲಿ ಮಾತುಗಳ ಮೆರವಣಿಗೆ…

ಪುಸ್ತಕ ಪರಿಚಯ ಮಾತು ಮೌನದ ನಡುವೆ ಸಾಹಿತ್ಯ ಎನ್ನುವುದು ಮಾನವನ ಪಾರದರ್ಶಕ ಅನುಭವಗಳ ಅನುಪಮ ಅಭಿವ್ಯಕ್ತಿ. ಈ ಅನುಭವ ಅನುಭೂತಿಯ ಮೂಲ ಆಕರವೇ ನಮ್ಮ ಸುಂದರ ಸಮಾಜ. ನಮ್ಮ ಸುತ್ತ ಮುತ್ತಲಿನ ಪರಿಸರ, ಪ್ರಕೃತಿ, ಸನ್ನಿವೇಶ, ಘಟನೆಗಳು ಹಾಗೂ ಮಾನವರ ವ್ಯಕ್ತಿತ್ವವು ಪರಸ್ಪರ ವ್ಯಕ್ತಿಗಳ ಅನುಭವವನ್ನು ರೂಪಿಸುತ್ತವೆ. ವ್ಯಕ್ತಿಯ ಈ ಅನನ್ಯ ಅನುಭವಕ್ಕೆ ರೂಪ ಕೊಡುವ ಸಾಧನವೇ ಭಾಷೆ. ಇದು ನಮ್ಮ ಸಾಮಾಜಿಕ ವ್ಯವಸ್ಥೆಯ ಕೂಸು. ಇದನ್ನು ಬಳಸಿಕೊಂಡೆ ಕವಿಯು ತನ್ನ ಅನುಭವಕ್ಕೆ ಚಿತ್ರ ಬಿಡಿಸುವುದು. ಈ […]

ನೀವು ಎದೆಗೆ ಗುಂಡು ಹೊಡೆದರೆ.

ಕವಿತೆ ನೀವು ಎದೆಗೆ ಗುಂಡು ಹೊಡೆದರೆ ಅಲ್ಲಾಗಿರಿರಾಜ್ ಕನಕಗಿರಿ ನೀವು ಜಲ ಫಿರಂಗಿಸಿಡಿಸಬಹುದು ನಮ್ಮ ಮೈ ಮೇಲೆ.ನಾವು ಮುಂಗಾರು ಮಳೆಯ ಆರ್ಭಟವೆಂದು ಭಾವಿಸುತ್ತೇವೆ.ಏಕೆಂದರೆ ನೀರು ನಮ್ಮ ವೈರಿಯಲ್ಲ. ನೀವು ಲಾಠಿ ಬೂಟುಗಳಿಂದದಾಳಿ ಮಾಡಬಹುದು ನಮ್ಮ ಮೈ ಮೇಲೆ.ನಾವು ನಮ್ಮ ಅನ್ನ ಉಂಡ ಮಕ್ಕಳ ಸಲಿಗೆ,ಪ್ರೀತಿಯೆಂದು ಭಾವಿಸುತ್ತೇವೆ.ಏಕೆಂದರೆ ಮಕ್ಕಳು ನಮ್ಮ ವೈರಿಗಳಲ್ಲ. ನೀವು ಅಶ್ರುವಾಯು ಸಿಡಿಸಿಕಣ್ಣು ಕತ್ತಲು ಮಾಡಬಹುದು ನಮ್ಮ ಕನಸುಗಳ ಮೇಲೆ.ನಾವು ಮಂಜುಕವಿದ ವಾತಾವರಣವೆಂದು ಭಾವಿಸುತ್ತೇವೆ.ಏಕೆಂದರೆ ಪ್ರಕೃತಿ ಎಂದೂ ನಮ್ಮ ವೈರಿಯಲ್ಲ. ಆದರೆ….. ಆದರೆನೀವು ದಲ್ಲಾಳಿಗಳ ಮಾತು […]

ಮೌನದಲಿ ಕವಿತೆಯಾದವಳು

ಕವಿತೆ ಮೌನದಲಿ ಕವಿತೆಯಾದವಳು ವಿದ್ಯಾಶ್ರೀ ಅಡೂರ್ ಕವಿತೆಯಾದಳು ಆಕೆ ತಿಳಿದವರು ತಿಳಿದ ತರಹುಡುಕ ಹೋಗಲು ಬಗೆಯ ಬೇಗೆ ಬೆಂಬತ್ತಿತುಟಿತುದಿಯ ಕಿರುನಗೆಯ ಅರಿತವನ ಮನದ ಸ್ಥರಜಿಗಿವ ಜಿಂಕೆಯಂತೆ ಕವನವನ್ನು ಬಿತ್ತಿ ಹಣೆ ಮೇಲೆ ಆಕೆಯ ಗೆರೆಗಳನು ಕಂಡಾತಬರೆದಿಹನು ಪುಟಪುಟದ ಸಾಲುಗಳ ಹೆಚ್ಚಿತನ್ನನ್ನೇ ಬಣ್ಣಿಪನು, ಬಂದಿಹೆನು ತಾನೆಂದುಆಕೆಯ ಮನದೊಳಗೆ ದೀಪವನು ಹಚ್ಚಿ ಕಣ್ಣಂಚ ಹನಿಗಳನು ಮುತ್ತಂತೆ ಪೋಣಿಸುತರಂಗುಬಳಿದು ಅದಕೆ ಕಟ್ಟಿಹನು ಬೆಲೆಯಹಾದಿಬೀದಿಯ ಜನರು ಕೊಳ್ಳುವ ಸರಕಾಯ್ತುಅಳಿಸದೇ ಹೋಯ್ತವಳ ಕಣ್ಣೀರ ಸೆಲೆಯ ಮಾತಿನ ಪೇಟೆಯಲಿ ಬೆಲೆಯಿಲ್ಲ ಮೌನಕ್ಕೆಕುಗ್ಗಿಹಳು ಸಾಗರದ ಬಿಂದುವಾಗಿಮಾತಿರದ ಮೌನದಲಿ […]

ಗಾಯಗೊಂಡ ಹೃದಯದ ಸ್ವಗತ

ಪುಸ್ತಕ ಸಂಗಾತಿ ಗಾಯಗೊಂಡ ಹೃದಯದ ಸ್ವಗತ ಗಾಯಗೊಂಡ ಹೃದಯದ ಸ್ವಗತತೆಲುಗು ಮೂಲ : ಅಯಿನಂಪೂಡಿ ಶ್ರೀಲಕ್ಷ್ಮಿ ಕನ್ನಡಕ್ಕೆ : ರೋಹಿಣಿ ಸತ್ಯಪ್ರ : ಸ್ನೇಹ ಬುಕ್ ಹೌಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೭೦ಪುಟಗಳು : ೬೪ ಇದು ಒಂದು ನೀಳ್ಗವನ. ತನ್ನ ಗೃಹಕೃತ್ಯದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಶ್ರದ್ಧೆಯಿಂದ ನೆರವೇರಿಸುತ್ತಿದ್ದ ಗೃಹಿಣಿಯೊಬ್ಬಳು ಸ್ತನದ ಕ್ಯಾನ್ಸರಿನಿಂದ ಬಳಲಿ  ಚಿಕಿತ್ಸೆಯ ಅನೇಕ ಯಾತನಾಪೂರ್ಣ ಹಂತಗಳನ್ನು ದಾಟಿ, ಧೈರ್ಯ ಮತ್ತು ಆತ್ಮವಿಶ್ವಾಸಗಳಿಂದ  ಸಾವನ್ನು ಗೆಲ್ಲುವುದು ಈ ಕವಿತೆಯ ವಸ್ತು.  ಇದು ಕವಯಿತ್ರಿ […]

ಶರದದ ಹಗಲಲ್ಲಿ ಆಷಾಢದ ಮೋಡಗಳು…

ಶರದದ ಹಗಲಲ್ಲಿ ಆಷಾಢದ ಮೋಡಗಳು… ಎಂ.ಆರ್.ಕಮಲ. ಹೊರಗಿನ ಋತುಮಾನಕ್ಕೂ ಒಳಗಿನ ಋತುಮಾನಕ್ಕೂ ಸಂಬಂಧವಿದೆಯೇ ಎಂದು ಹಲವಷ್ಟು ಬಾರಿ ಯೋಚಿಸಿದ್ದೇನೆ. ಇದೆ ಎನ್ನುವುದು ನಿಜವಾದರೂ ಪೂರ್ಣಸತ್ಯವಲ್ಲ. ಬಯಲು ಸೀಮೆಯ ಬಿರುಬಿಸಿಲಲ್ಲಿ ಬೆಳೆದ ನನ್ನಂಥವರು ಬಾಯಿಯಲ್ಲಿ ಕೆಂಡವನ್ನೇ ಕಾರುತ್ತೇವೆ. ವಿನಾಕಾರಣ ಉದ್ವಿಗ್ನಗೊಂಡು. ಸಣ್ಣ ಸಣ್ಣ ವಿಷಯಕ್ಕೆಲ್ಲ ಜಗಳ ತೆಗೆಯುತ್ತೇವೆ. ಬಯಲು ಸೀಮೆಯ ಹೆಚ್ಚಿನ ಜನರ ಬೆಳಗುಗಳು ಗುದ್ದಾಟಗಳಿಂದಲೇ ಆರಂಭವಾಗುತ್ತದೆ. ವಸಂತನೇ ಬರಲಿ, ಗಿಡಮರಗಳು ಚಿಗುರುತ್ತಲೇ ಇರಲಿ, ಹೂವುಗಳು ತೂಗುತ್ತಲೇ ಇರಲಿ ಬೇಸಗೆಯ ಬಿರುಬಿಸಿಲಂಥ ಚಡಪಡಿಕೆ ಮಾತ್ರ ನಿಲ್ಲುವುದೇ ಇಲ್ಲ. ಆಷಾಢದ […]

ಶರದದ ಹಗಲಲ್ಲಿ ಆಷಾಢದ ಮೋಡಗಳು…

ಶರದದ ಹಗಲಲ್ಲಿ ಆಷಾಢದ ಮೋಡಗಳು… ಎಂ.ಆರ್.ಕಮಲ ಹೊರಗಿನ ಋತುಮಾನಕ್ಕೂ ಒಳಗಿನ ಋತುಮಾನಕ್ಕೂ ಸಂಬಂಧವಿದೆಯೇ ಎಂದು ಹಲವಷ್ಟು ಬಾರಿ ಯೋಚಿಸಿದ್ದೇನೆ. ಇದೆ ಎನ್ನುವುದು ನಿಜವಾದರೂ ಪೂರ್ಣಸತ್ಯವಲ್ಲ. ಬಯಲು ಸೀಮೆಯ ಬಿರುಬಿಸಿಲಲ್ಲಿ ಬೆಳೆದ ನನ್ನಂಥವರು ಬಾಯಿಯಲ್ಲಿ ಕೆಂಡವನ್ನೇ ಕಾರುತ್ತೇವೆ. ವಿನಾಕಾರಣ ಉದ್ವಿಗ್ನಗೊಂಡು. ಸಣ್ಣ ಸಣ್ಣ ವಿಷಯಕ್ಕೆಲ್ಲ ಜಗಳ ತೆಗೆಯುತ್ತೇವೆ. ಬಯಲು ಸೀಮೆಯ ಹೆಚ್ಚಿನ ಜನರ ಬೆಳಗುಗಳು ಗುದ್ದಾಟಗಳಿಂದಲೇ  ಆರಂಭವಾಗುತ್ತದೆ. ವಸಂತನೇ ಬರಲಿ, ಗಿಡಮರಗಳು ಚಿಗುರುತ್ತಲೇ ಇರಲಿ, ಹೂವುಗಳು ತೂಗುತ್ತಲೇ ಇರಲಿ ಬೇಸಗೆಯ ಬಿರುಬಿಸಿಲಂಥ ಚಡಪಡಿಕೆ ಮಾತ್ರ ನಿಲ್ಲುವುದೇ ಇಲ್ಲ. ಆಷಾಢದ […]

ಭಾವಲಹರಿ

ಲಹರಿ ಭಾವಲಹರಿ ರಶ್ಮಿ.ಎಸ್. ಸೌಹಾರ್ದ, ಸಹಬಾಳ್ವೆ ಮುಂತಾದ ಪದಗಳನ್ನು ನಾವೆಲ್ಲಿಯೂ ಓದಲಿಲ್ಲ. ವಿಶ್ಲೇಷಿಸಲಿಲ್ಲ. ಆದರೆ ಬಾಳಿದೆವು. ಆ ಬದುಕಿನ ಜೀವದ್ರವ್ಯ ಮೊಮ್ಮಾ.. ಜಿಯಾ ಸುಲ್ತಾನಾ. ಅವರ ನೆನಪಿನಲ್ಲಿ ಬರೆದ ಬರಹವಿದು.. ನಿಮ್ಮ ಉಡಿಗೆ.. ನೀವಷ್ಟು ಅವರ ಪ್ರೀತಿ ಉಣ್ಣಲಿ ಎಂದು… …………………………….. ಗಾಬರಿಯಾಗ್ತದ. ನಾವೆಲ್ಲ ಮೊಮ್ಮ ಇಲ್ಲದೇ ಬದುಕುತ್ತ್ದಿದೇವೆ. ಇನಿದನಿಯ, ವಾತ್ಸಲ್ಯ ತುಂಬಿ ಕರೆಯುವ ಮೊಮ್ಮ . ಸಾಯಿರಾಬಾನುವಿನ ಅಕ್ಕನಂತೆ ಕಾಣಿಸುತ್ತ್ದಿದ್ದ… ನಡೆದರೆ ದೇಹವೇ ಭಾರವೆಂದೆನಿಸುತ್ತ್ದಿದ ದೀರ್ಘದೇಹಿ. ಮುಟ್ಟಿದರೆಲ್ಲಿ ಕೊಳೆಯಗುವರೋ ಎಂಬ ದಂತವರ್ಣದವರು. ಮೊಮ್ಮ  ಇಲ್ಲ..!  ನಮ್ಮ […]

ಪಾಠವಷ್ಟೇ ಅಲ್ಲ, ಆಟವೂ ಬದಲಾಗಿದೆ

ಲೇಖನ ಪಾಠವಷ್ಟೇ ಅಲ್ಲ, ಆಟವೂ ಬದಲಾಗಿದೆ ಅಕ್ಷತಾ ರಾಜ್ ಪೆರ್ಲ         “ಆಂಟೀ ಸ್ವಲ್ಪ ನಿಲ್ಲಿ” ಗೇಟಿನ ಬಳಿಯೇ ಪುಟಾಣಿಯೊಬ್ಬಳು ನಿಲ್ಲಿಸಿದಾಗ “ಯಾಕೆ?” ಕೇಳಿದೆ. “ನಿಮ್ದು ಬಿಸಿ ನೋಡ್ಲಿಕ್ಕಿದೆ” ಮುದ್ದಾಗಿ ಹೇಳುತ್ತಾ ಪಟಾಕಿ ಸಿಡಿಸುವ ಪಿಸ್ತೂಲೊಂದನ್ನು ನನ್ನ ಹಣೆಗೆ ತೋರಿಸಿದಳು. “ಬಿಸಿ ಇದ್ರೆ ಏನ್ಮಾಡ್ತೀಯಾ?” ಮತ್ತೆ ಕೇಳಿದೆ. “ಅಲ್ಲಿಗೆ ಹಾಕ್ತೇನೆ” ಅವಳು ತೋರಿಸಿದ ದಿಕ್ಕಿನತ್ತ ನೋಡಿದೆ, ಆಗಷ್ಟೇ ತನ್ನ ಮರಿಗಳೊಡನೆ ಸೇರಿಕೊಂಡ ಕೋಳಿಗೂಡು ಕಂಡಿತು. ಮನದಲ್ಲೇ ನಗುತ್ತಾ “ಅದ್ಯಾಕೆ ಹಾಗೆ?ನನ್ನ ಅಲ್ಲೇ ಯಾಕೆ ಹಾಕ್ಬೇಕು?” ಗಲ್ಲ ಚಿವುಟಿ […]

Back To Top