ಮಂಜು

ಮಂಜು

ಕವಿತೆ ಮಂಜು ನಳಿನ ಡಿ ಕಾಡುಮಲ್ಲಿಕಾರ್ಜುನನ ಚರಣ ಸೇರಲು ಹಾಡುಹಗಲೇ ಹಂಬಲಿಸಿ,ಬಿದ್ದ ವರುಣನ ತಿರಸ್ಕರಿಸಿ,ಮಾಟಗಾರ ಮಹಾಮಹಿಮ, ಓಜಸ್ವಿ ಓಡೋಡಿ ಹಿಡಿಯಲಾರೆ,ತಪ್ಪಾದರೂ ತಿರುಗಿ ಬರಲಾರೆ,ಕನವರಿಸಿ ಕಾಡಹಾದಿಯ ತಪ್ಪಿಸಿ,ಊರಿಗೆ ದಾರಿ ಒಪ್ಪಿಸಿ,ಗೂಬೆ ಕೂಗಿಗೆ ಕಾಗೆ ಓಡಿಸಿ,ಮುಸ್ಸಂಜೆ ಕಳೆಯಲು, ಬೆಟ್ಟದ ಬಂಡೆಗೆ ಬೆನ್ನುಹಾಸಿ,ಮರೆತು ಹೋದರೂ ಹುಡುಕಿ ತರುವ ಯಾಚಕ,ಸುಭದ್ರ ಸನಿಹದ ಇಳಿಮುಖ ಪ್ರತಿಫಲನ,ಪ್ರೇಮದ ವಕ್ರೀಭವನ,ಘಟಿಸುವವರೆಗೂ,ಮಂಜು ಅರಸಿ ಹಬ್ಬಿ ಕವಿಯುವವರೆಗೂ,ತಬ್ಬಿಬ್ಬು ಮನಸು…ಮಂಜು ನಗಲಿ,ಮಳೆ ಬರಲಿ..ನನ್ನಿರವು ನಿನ್ನಲ್ಲಿ ಸದಾ ಇರಲಿ.. ***********************************

ಓ.. ಮನಸೇ

ಕವಿತೆ ಓ.. ಮನಸೇ ವಿಭಾ ಪುರೋಹಿತ್ ಕ್ಷಣದ ಏಕಾಂತದಲಿಅಮೂರ್ತವಾಗಿನನ್ನೆದುರಲ್ಲೇಯಿರುವಿಎದೆಯಲ್ಲಿ ಗೆಜ್ಜೆ ಕಟ್ಟಿ ಥಕಥಕಕುಣಿಸಿ ಅಟ್ಟಕ್ಕೇರಿದ ಅತಿರೇಕನಿನ್ನ ನೋಡಬೇಕೆಂಬಉತ್ಕಟತೆ ಜಲಪಾತಕ್ಕೂಜೋರಾಗಿ ಜೀಕಿದೆಹಾರಿದ ಹನಿಗಳುಚಂದಿರನ ಗಲ್ಲಕ್ಕೆ ಸವರಿದ್ದೇ ತಡತಂಪಿನಲ್ಲೇ ತಾಪ ಅನುಭವಿಸಿಧಗಧಗ ಉರಿಯುತ್ತ ಉರುಳಿಅವಳ ಸ್ಪರ್ಶಕ್ಕೆ ಘರ್ಷಕ್ಕೆಆತು ಕೂತಿರುವೆಮರಿ ಭಾಷ್ಪವಾಗಿನುಡಿಯುತಿರೆ ಮಿಡಿಗಾವ್ಯ ಓ… ಮನಸೇ ಅದ್ಭುತ !ಏನೋ ಭೋರ್ಗರೆತಅದರಲ್ಲೊಂದು ಥಳುಕುಸಣ್ಣ ಸೆಳೆತ ದೇದೀಪ್ಯಮಾನಊಹಿಸಿರಲಿಲ್ಲಶಬ್ದಾತೀತ ಅನುಭೂತಿಮನಸ್ಸು ವಿಚಾರಗಳುಆಯಸ್ಸಿನ ಅಂಕೆವಯಸ್ಸಿನ ಶಂಕೆಇವೆರಡನ್ನೂ ಮೀರಿದನಳನಳಿಸುವ ತಾಜಾತನನವೊನವೋನ್ಮೇಶಎಂಥ ವಿಚಿತ್ರ !ಮನಸಿಗೆ ಪ್ರವಾಸ ಪ್ರಯಾಸಇದ್ದಂತಿಲ್ಲಥಟ್ಟಂತ ಪ್ರತ್ಯಕ್ಷಥಟ್ಟಂತ ಅಂತರ್ಧಾನಸೇರದ ದಾರಿಯೇನಲ್ಲಸೇರುವೆ ಎಂದಾದರೊಮ್ಮೆ

ಎರಡು ಕವಿತೆಗಳು

ಕವಿತೆ ಧನಪಾಲ ನಾಗರಾಜಪ್ಪ ಧನ ನಿನ್ನದನಿಕೇಳರಾರೂನಿನ್ನಪಾಡುನೋಡರಾರೂನೆಲ, ಜಲಜನ, ಮನಅಂತೆಲ್ಲಾ ಯಾಕೆ‌ ಬಡಬಡಿಸುವೆ?ಧನವೇ ಇಂಧನಧನವೇ ಪ್ರಧಾನಜಮಾನ ಇದರ ದೀವಾನನಿನಗೆ ಅರ್ಥವಾಗದೆ ಧನು? ಜಾಡ್ಯ ಇಲ್ಲಿಯ ತನಕಏಡ್ಸ್ ಒಂದರ ಹೊರತುಬಹುತೇಕ ಜಾಡ್ಯಗಳಿಗೆಇಲಾಜು ಮಾಡಬಲ್ಲರುಈಗಿನ ವೈದ್ಯರುಶ್ಲಾಘನೀಯ ಸಾಧನೆಯೇ ಸರಿ ಜಾತಿಯ ಅಹಂ ಕೂಡಾಮಾರಕ ಜಾಡ್ಯ ಅಲ್ಲವೆ?ದೂರವಿರಿ ಇದು ಸಾಂಕ್ರಾಮಿಕಮುಂದೆ ಎಂದಾದರೂಏಡ್ಸಿಗೂ ಸಹಔಷಧ ಕಂಡುಹಿಡಿಯಬಹುದೇನೋ!ಆದರೆ ಜಾತಿಯ ಜಾಡ್ಯಕ್ಕೆಮದ್ದು ಅದೆಂದು ಸಿಗುವುದೋ ಧನು? ***************************************

ಸತ್ಯಕ್ಕೆ ಸಾಕ್ಷಿ ಬೇಕಾಗಿದೆ

ಕವಿತೆ ಸತ್ಯಕ್ಕೆ ಸಾಕ್ಷಿ ಬೇಕಾಗಿದೆ ಆರ್.ಉಷಾ ಸತ್ಯ ಸುಳ್ಳುಗಳ ಮಧ್ಯೆ ಬೆಸುಗೆ ಬೆಳೆದುಸುಳ್ಳು ಎಲ್ಲೆಲ್ಲೂ ಝೇಂಕರಿಸಿ ವಾಮನನಂತೆ ಬೆಳೆದುಬಲಿಗೊಟ್ಟು ಸತ್ಯವನುಮೋಸದ ಜೊತೆ ಒಡನಾಡಿಯಾಗಿದ್ರೋಹದ ಜೊತೆ ಸ್ನೇಹ ಪಲ್ಲವಿಸಿಅಪನಂಬಿಕೆಯ ಮಿತ್ರನ ನೆರವು ಪಡೆದುದ್ರೋಹದ ಬಲೆಯಲ್ಲಿ ಸತ್ಯವನು ಮೂಲೆಗುಂಪು ಮಾಡಿಕಾರ್ಗತ್ತಲಿನ ಖೋಲಿಯಲ್ಲಿ ಬಂಧಿಯನ್ನಾಗಿಸಿತು ಸುಳ್ಳು ಕಟ್ಟಿದ ಅರಮನೆಯಲ್ಲಿ ಕೂಪಮಂಡೂಕದಂತೆಸೂರ್ಯೋದಯವನ್ನೇ ಕಾಣದ ಸತ್ಯಕತ್ತಲಲ್ಲೇ ಕುರುಡಾಗಿಇರುಳ ಕರುಳ ಬಗೆದುಬಟ್ಟ ಬಯಲಾಗಲಾರದೆಸುಳ್ಳಿನ ವಿದ್ರೋಹದ ಮುಳ್ಳು ಬೇಲಿಯಲಿ ಸಿಲುಕಿನರಳಿ ನರಳಿ ನರ ಸತ್ತು ಗಂಟಲ ಪಸೆ ಆರಿಬೊಬ್ಬಿರಿಯಲಾಗದೆ ಕಗ್ಗತ್ತಲ ಕೂಪದಲಿ ಬೆಂದು ಒಂಟಿಯಾಗಿ ಸಾಕ್ಷಿಯ ಸಹಚರನಿಲ್ಲದ […]

ಪಿಂಜರ್ ಶೋಷಣೆಗೊಳಗಾಗಿ ಅಸ್ಥಿಪಂಜರಗಳಾಗುವ ಹೆಣ್ಣುಮಕ್ಕಳ ಕಥೆ ಅಮೃತಾ ಪ್ರೀತಮ್ ಪಿಂಜರ್ಮೂಲ : ಅಮೃತಾ ಪ್ರೀತಮ್ಕನ್ನಡಕ್ಕೆ : ಎಲ್.ಸಿ.ಸುಮಿತ್ರಾಪ್ರ : ಅಂಕಿತ ಪುಸ್ತಕಪ್ರ.ವರ್ಷ :೨೦೦೬ಬೆಲೆ : ರೂ.೬೦ಪುಟಗಳು : ೧೦೪          ದೇಶ ವಿಭಜನೆಯ ಕಾಲದಲ್ಲಿ  ಶೋಷಣೆಗೊಳಗಾದ ಅಮಾಯಕ ಹೆಣ್ಣು ಮಕ್ಕಳ ಕರುಣ ಕಥೆಯಿದು. ಪೂರೋ ಎನ್ನುವವಳು ಇಲ್ಲಿ ಕಥಾ ನಾಯಕಿ.       ತನ್ನ ಇಬ್ಬರು ಸಹೋದರಿಯರು ಮತ್ತು ಒಬ್ಬ ಸಹೋದರನಿರುವ ಒಂದು ಸುಖಿ ಕುಟುಂಬದಲ್ಲಿ ಹಾಯಾಗಿ ಬೆಳೆದ ಹುಡುಗಿ ಪೂರೊ. ಸೌಮ್ಯ ಸ್ವಭಾವದವಳೂ ವಿಧೇಯಳೂ ಆದ ಅವಳು […]

ಲೆಕ್ಕಕ್ಕೊಂದು ಸೇರ್ಪಡೆ

ಲೇಖನ ಲೆಕ್ಕಕ್ಕೊಂದು ಸೇರ್ಪಡೆ ಶಾಂತಿ ವಾಸು ಚೀನಿಯರ ಕೆಟ್ಟ ಮನಸ್ಥಿತಿಯ ಕನ್ನಡಿ ಕೊರೊನ, ಭಾರತವನ್ನು ಪ್ರವೇಶಿಸುವ ಮೊದಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ, ಸಂಪೂರ್ಣ ದೇಹವನ್ನು ಅದೇನೋ ಹೊಸತರಹದ ದಿರಿಸಿನಿಂದ ಮುಖಸಹಿತ ಮುಚ್ಚಿಕೊಂಡ ಜನರು ಪ್ಲಾಸ್ಟಿಕ್ ಚೀಲದಲ್ಲಿ ಬಿಗಿಯಾಗಿ ಸುತ್ತಿದ ನೂರಾರು ಜನರ ಮೃತದೇಹಗಳನ್ನು ಒಟ್ಟೊಟ್ಟಿಗೇ, ಆಳವಾದ ಒಂದೇ ಹಳ್ಳದಲ್ಲಿ ಹಾಕಿ ಮಣ್ಣು ಮುಚ್ಚುವುದು ಹಾಗೂ ಪೆಟ್ರೋಲ್ ಸುರಿದು ಸಾಮೂಹಿಕವಾಗಿ ಸುಡುವುದನ್ನು ನೋಡಿಯೇ ಪ್ರಪಂಚವು ನಡುಗಿಹೋಗಿತ್ತು. ಇದೇನು?? ಹೊಸದಾಗಿ ನಡೆದದ್ದೇ? ಅಥವಾ ಯಾವುದಾದರೂ ಸಿನಿಮಾಗಾಗಿ ಇರಬಹುದೇನೋ ಎಂದು ಗೊಂದಲಗೊಂಡ ಕೋಟ್ಯಂತರ […]

ಬೊಗಸೆ ತುಂಬಾ ಕನಸು

ಪುಸ್ತಕ ಪರಿಚಯ ಬೊಗಸೆ ತುಂಬಾ ಕನಸು ಬೊಗಸೆ ತುಂಬಾ ಕನಸುಲೇಖಕರು: ಡಾ. ಬಿ. ಪ್ರಭಾಕರ ಶಿಶಿಲ ಸುಳ್ಯ)ಪ್ರಕಾಶಕರು: ರಾಜ್ ಪ್ರಕಾಶನ, ಮೈಸೂರುಪುಟಗಳು: 688ಬೆಲೆ: 650 ರೂಪಾಯಿಗಳು ಸ್ವಾತಂತ್ರ್ಯ ಎಂಬುದು ದೇವರಿಗಿಂತ ದೊಡ್ಡ ಮೌಲ್ಯ! –  ಡಾ| ಪ್ರಭಾಕರ ಶಿಶಿಲ ಒಂದಾನೊಂದು ಕಾಲದಲ್ಲಿ ಚಂದ್ರಾವತಿ. ಬಿ ಆಗಿ ಬದುಕುತ್ತಿದ್ದ ನನ್ನನ್ನು ಚಂದ್ರಾವತಿ ಬಡ್ಡಡ್ಕ ಆಗಿಸಿದ್ದು ನಮ್ಮ ಅರ್ಥಶಾಸ್ತ್ರ ಉಪನ್ಯಾಸಕರಾದ ಮಾನ್ಯ ಡಾ| ಪ್ರಭಾಕರ ಶಿಶಿಲ ಸರ್. ನಮ್ಮ ಕಾಲೇಜು ದಿನಗಳ ವೇಳೆಯಲ್ಲಿ, ಸ್ವಂತಿಕಾ ಪ್ರಕಾಶನದಿಂದ ಪುಸ್ತಕ ಪ್ರಕಟವಾಗುವ ವೇಳೆ, […]

ನಂಬಿಕೆ

ಕವಿತೆ ನಂಬಿಕೆ ರೇಷ್ಮಾ ಕಂದಕೂರು ಮನುಜತೆಯ ಸಾಕಾರ ರೂಪಅರಿವಿನ ಮಹಾಪೂರಅವಿನಾಭಾವದ ಸರದಿ ಶುದ್ಧ ಮನದ ರಿಂಗಣಅಭಿಮಾನದ ಗೂಡುಒಲುಮೆಯ ಹರಕೆ ಕಾರುಣ್ಯದ ಬದುಕುಸತ್ವರಜದ ತೇಜಸ್ಸುಪರಿಪೂರ್ಣ ಬಂಧುತ್ವ ವಿಶ್ವಾಸದ ಹೊನಲುಆಸರೆಯ ತೋರಣನೆರಳು ಬೆಳಕಿಗೆ ಸಮಸ್ಥಿತಿ ***************************

ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು….

ಗಾಂಧಿ ವಿಶೇಷ  ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ  ಗಾಂಧಿ  ಬಂದು ಹೋಗಿದ್ದರು…. ಗಾಂಧಿಜೀ ಉತ್ತರ ಕನ್ನಡ ಜಿಲ್ಲೆಯ ಪ್ರವಾದ ನನಗೆ  ಮುಖ್ಯವಾಗುವುದು ಮೂರು ಕಾರಣಗಳಿಗೆ. ಒಂದನೇ ಕಾರಣ ಗಾಂಧಿಜೀ ಅಸ್ಪೃಶ್ಯತೆಯನ್ನು ಜನರ ಮನದಿಂದ ಕಿತ್ತೊಗೆಯಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಎರಡನೇ ಕಾರಣ ದೇವಸ್ಥಾನದಲ್ಲಿನ ಪ್ರಾಣಿ ಬಲಿ ನಿಲ್ಲಿಸಲು ಯತ್ನಿಸಿದರು ಹಾಗೂ ಇದರಲ್ಲಿ ಯಶಸ್ವಿಯಾದರು. ಮೂರನೇ ಕಾರಣ  ಬಾಲವಿಧವೆಯರ ಕೇಶ ಮುಂಡನೆಯಂಥ ಸಂಪ್ರದಾಯವನ್ನು ನಿಲ್ಲಿಸಿದರು. ವಿಶೇಷವೆಂದರೆ ಈ ಮೂರು ಘಟನೆಗಳು ನಡೆದದ್ದು ೧೯೩೪ ರಲ್ಲಿ ಉತ್ತರ ಕನ್ನಡ ಜಿಲ್ಲೆಯ […]

ಅಸಹನೆ

ಕವಿತೆ ಅಸಹನೆ ಭಾಗ್ಯ ಸಿ. ಯಾರೊಂದಿಗೆ ಅಸಹನೆ ಏತಕ್ಕಾಗಿಬೂದಿ ಮುಚ್ಚಿದ ಕೆಡದಂತೆ ಕೋಪಸ್ಥಾನಪಲ್ಲಟವಾಗಿವೆ ಜಡ ವಸ್ತುಗಳುಮನಸ್ಸಿನ ತುಂಬೆಲ್ಲ ಅಶಾಂತತೆಯ ಛಾಯೆ ಸಾಗುತ್ತಿರುವ ದಾರಿ‌ ಮುಟ್ಟುವುದೆಲ್ಲಿಗೆಪರಿಶ್ರಮವಿಲ್ಲದೆ ಯಶಸ್ಸಿನ ಬಯಕೆ ಏಕೆ?ಅಂಧರೇನಲ್ಲ ಬಿದ್ದರು ಮೇಲೆಳಬಹುದುಸ್ವಚ್ಛಂದವಾಗಬೇಕು ಜಿಗುಟುತನ ತೊರೆದು ಬಿರುಗಾಳಿ ಯಿಂದ ಅಸ್ತವ್ಯಸ್ತ ಜೀವನವಿವೇಚನೆಯಿಲ್ಲದ ಹುಚ್ಚು ನಿರ್ಧಾರವೈರುಧ್ಯಗಳ ನಡುವೆ ಋಣಾತ್ಮಕತೆಜಂಟಿ ಹೋರಾಟ, ಹೊರನಡೆ ಶೀಘ್ರದಲಿ ತಲೆಹರಟೆ ಪ್ರಕ್ರಿಯೆಗಳ ತೊರೆದುಭ್ರಮಾ ಲೋಕ ಬಿಟ್ಟು ವಾಸ್ತವದೆಡೆಗೆನಡೆ ತನ್ನ ಉಳಿವಿನ ಬೆಳಕಿನೆಡೆಗೆಅಸಹನೆ ತೊರೆದು ಮಿನುಗುವ ನಕ್ಷತ್ರವಾಗಿ **********************************************

Back To Top