ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಬೀಳದ ಗಡಿಯಾರ. ಕೃತಿಯ ಹೆಸರು: ಬೀಳದ ಗಡಿಯಾರ.ಪ್ರಕಟಣೆ: 2018ಬೆಲೆ: 90ರೂ.ಪ್ರಕಾಶಕರು: ಪ್ರೇಮ  ಪ್ರಕಾಶನ, ಮೈಸೂರು-570029 ಡಾ. ಬಸು ಬೇವಿನಗಿಡದ ಅವರ “ಬೀಳದ ಗಡಿಯಾರ” ಹಿಂದೆಲ್ಲ ಕೆಲವು ಮನೆಗಳಲ್ಲಿ ಎಷ್ಟು ಗಂಟೆಯಾಗಿದೆಯೋ ಅಷ್ಟುಸಲ ಢಣ್ ಢಣ್ ಎಂದು ಗಂಟೆ ಹೊಡೆಯುವ ಗಡಿಯಾರಗಳಿದ್ದವು. ಅಂತಹ ಗಡಿಯಾರ ಆಗ ಮಕ್ಕಳಾಗಿದ್ದ ನಮಗೆ ಆಕರ್ಷಣೆಯ ಕೇಂದ್ರವಾಗಿತ್ತು. ಹನ್ನೆರಡು ಗಂಟೆಯಾಗುವಾಗ ಅದು ಹನ್ನೆರಡುಸಾರಿ ಗಂಟೆ ಬಾರಿಸುವುದರಿಂದ ಅದನ್ನು ಕೇಳಲು ಗಡಿಯಾರದ ಮುಂದೆ ಕಾತುರದಿಂದ ನಿಂತಿರುತ್ತಿದ್ದುದೂ ಇದೆ. ಆದರೆ ಹಾಗೇ ಮುಂದುವರಿದು ಹದಿಮೂರು, ಹದಿನಾಲ್ಕು ಹೀಗೆ […]

ಕಾವ್ಯಯಾನ

ದೇಶಪ್ರೇಮ ಗೋಪಾಲತ್ರಾಸಿ ದೇಶಎಂದರೆಸೀಮೆಯೊಳಗಿನಬರೇಭೂಭಾಗವಲ್ಲ ದೇಶಪ್ರೇಮಕೋಟೆಯೇರಿಊದುವತುತ್ತೂರಿಯೇನಲ್ಲ ದೇಶಪ್ರೇಮ,ವ್ವವಹಾರ, ರಾಜಕೀಯಧರ್ಮ-ರೀತಿ-ರಿವಾಜುಪೊರೆಕಳಚುವಸಹಜಮಾನವಪಥ ನಮ್ಮಷ್ಟೇ, ನಮ್ಮಂತಹಸಹಜೀವದಕುರಿತಷ್ಟುಕಾಳಜಿ ಸಕಲಜೀವಜಂತುಗಳತೆಕ್ಕೆಯೊಳಗೆಆಹ್ವಾನಿಸಿಕೊಳ್ಳುವಕಾರುಣ್ಯ ದೇಶಪ್ರೇಮಎಂದರೆದೇಶದಕೊನೇಯನಿರ್ಗತಿಕನಯೋಗಕ್ಷೇಮ. ******************

ಕಾವ್ಯಯಾನ

ಭಾರತ ದರ್ಶನ ಅರುಣಾ ರಾವ್ ದೇಗುಲ ದರ್ಶನ ಮಾಡುವ| ನಾವ್ ದೇಗುಲ ದರ್ಶನ ಮಾಡುವ|ವಿಶ್ವ ಭೂಪಟದೆ ಭಾರತವೆಂಬ| ದೇಗುಲ ದರ್ಶನ ಮಾಡುವ|| ಭವ್ಯ ಹಿಮಾಲಯ ಶಿಖರವೆ ನಿನ್ನ| ಮಂದಿರ ಗೋಪುರವು|ಅರಬ್ಬಿ ಹಿಂದೂ ಬಂಗಾಳ ಕೊಲ್ಲಿ| ಗುಡಿಯ ಪರಿಧಿಗಳು|ಹಿಂದೂ ಮುಸ್ಲಿಂ ಜೈನ ಕೈಸ್ತ| ಆಧಾರ ಸ್ಥಂಭಗಳುಜಯ ಜಯ ಭಾರತ ಎಂಬುದೇ| ಇಲ್ಲಿಯ ಮಂತ್ರದ ಘೋಷಗಳು|| ಭಿತ್ತಿ ಬಿತ್ತಿಗಳು ಸಾರುವವಿಲ್ಲಿ| ಸಾಹಸ ಕಥೆಗಳನು|ಕಲ್ಲು ಕಲ್ಲುಗಳು ಹೇಳುವವಿಲ್ಲಿ| ನಡೆದಿಹ ಹಾದಿಯನು|ಗರ್ಭ ಗುಡಿಯು ನಮ್ಮಯ ಮನಗಳು| ಬಿಡು ಸಂದೇಹವನು|ಜಯ ಜಯ ಭಾರತ ಎನ್ನುತ| […]

ಮಕ್ಕಳ ವಿಭಾಗ

ಬಾವುಟ ಪದ್ಯ ಮಲಿಕಜಾನ ಶೇಖ ಅತ್ತ ನೋಡು ಇತ್ತ ನೋಡು ಸುತ್ತ ನೋಡು ಎತ್ತ ನೋಡುಬೀದಿ ನೋಡು ಕೇರಿ ನೋಡುನೋಡು ನೀನು ಬಾವುಟ ಮಾಡು ನೀನು ಸೆಲ್ಯೂಟ್… ಕೆಸರಿ ಬಿಳಿ ಹಸಿರು ಮೂರು ಬಣ್ಣ ನಡುವೆ ಚಕ್ರ ಒಂದು ನೀಲಿ ನೋಡು ಸತ್ಯ ಶಾಂತಿ ನ್ಯಾಯ ಪ್ರೀತಿತ್ಯಾಗ ಶೌರ್ಯ ನೀತಿ ಮೌಲ್ಯಐಕ್ಯ ಒಂದು ಪ್ರತೀಕ ನೋಡು  ಪರತಂತ್ರವ ಕಳಚಿ ಬಿಟ್ಟುಸ್ವಾತಂತ್ರವ ಮೆರೆಸಿ ಕೊಟ್ಟುದೇಶದೊಂದು ಪ್ರತೀಕ ನೋಡು ಮೆಡಂ ಕಾಮಾ ಹಾರಿಸಿದಭಗತ ಗುರು ಪ್ರೇಮಿಸಿದಗಾಂಧೀನೆಹರು ಪ್ರೀತಿಸಿದ ಪ್ರತೀಕ ನೋಡು ಹಲವು ಭಾವ ಹಲವು ಭಾಷೆಹಲವು […]

ಪುಸ್ತಕ ಸಂಗಾತಿ

ಹುಳುಕ ಹೂರಣದ ಹೋಳಿಗೆ ತೋರಣ ‘ರಾಯಕೊಂಡ’ ಕರಣಂ ಪವನ ಪ್ರಸಾದರ ಬಹುನಿರೀಕ್ಷಿತ ಕಾದಂಬರಿ. ಕಾನ್ಕೇವ್ ಪ್ರಕಾಶನ ಇದನ್ನು ಪ್ರಕಟಿಸಿದೆ. ನನ್ನಿ, ಗ್ರಸ್ತ, ಕರ್ಮ ಕಾದಂಬರಿಗಳನ್ನು, ಕರಣಂ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದವರು. ಅವರೇ ಹೇಳಿಕೊಂಡಂತೆ ಇದು ಡಾರ್ಕ್ ಹ್ಯೂಮರ್ ಪ್ರಕಾರಕ್ಕೆ ಸೇರುವ ಕಾದಂಬರಿ. ಈ ವಿಭಾಗವು ಸಾಮಾನ್ಯವಾಗಿ ನಿಷೇಧವೆಂದು ಭಾವಿಲ್ಪಡುವ ವಿಷಯದ ಬೆಳಕನ್ನು ಚೆಲ್ಲುತ್ತದೆ. ವಿಶೇಷವಾಗಿ ಗಂಭೀರ ಅಥವಾ ವಿಷಾದದಿಂದ ಕೂಡಿದ ವಿಷಯಗಳನ್ನು ಕಪ್ಪು ಹಾಸ್ಯದ ಮಾದರಿಯಲ್ಲಿ ಚರ್ಚಿಸುತ್ತದೆ. ಎಂ. ವ್ಯಾಸರ ಕಪ್ಪು ದರ್ಶನದ ಕಥೆಗಳೇ ಬೇರೆ, […]

ಹೀಗೊಂದು ವಿರಹ ಗೀತೆ

ಕವಿತೆ ಹೀಗೊಂದು ವಿರಹ ಗೀತೆ ಒತ್ತಿ ಉಕ್ಕುವ ಮನಕೆ ತಂಪೆರೆವ ಬಿಸುಪಿಲ್ಲಎಲ್ಲಿಂದ ಬರಬೇಕು, ನಾನು ಬಡವಿ…..ಬಿಸುಪಿಲ್ಲದಾ ಭಯಕೆ ತೆರೆಯದಾತನ ತೋಳುಅದನರಿತ ಮೇಲೂ.. ಆತ ಬಡವ… ಹರೆಯದಲಿ ಹೀಗಿರಲಿಲ್ಲ, ಚೆನ್ನಿತ್ತು ಚೆಲುವಿತ್ತುಒಲವಿತ್ತು ನಾ -ನೀನು ಬೇಧವಿರದೇನಿನ್ನೊಳಗೆ ನಾನು, ನನ್ನೊಳಗೆ ನೀನೆಂಬುವುದುಮುದವಿತ್ತು ಸಂಗೀತ ಲೋಪವಿರದೇ ಈಗ ನಿಶ್ಶಬ್ದದಲಿ ಈಟಿಯಂತೆಯೆ ಇರಿವನಿನ ಮೌನ ಸಹಿಸುವುದು ಕಷ್ಟ ಎನಗೆಇಷ್ಟ ಇರದಿದ್ದರೂ ನನ ಮಾತು ಜೋರಾಗಿಗುಡುಗು ಸಿಡಿಲುಗಳಂತೆ ಶಬ್ದ ಕೊನೆಗೆ ಕೊಟ್ಟರೆ ಕಳೆದುಬಿಡುವಂತೆಂಬ ನಿನ ಪ್ರೀತಿಇಟ್ಟರೆ ಹಳಸಿಬಿಡುವಂತೆ ನಾನೂಇಟಿಗೆ ಗಾರೆಯ ಹಾಕಿ ಕಟ್ಟುವುದೆ ಗೋಡೆಯನುಈಚೆ […]

ಕವಿಗಿನ್ನೇನು ಬೇಕು?

ಕವಿತೆ ಕವಿಗಿನ್ನೇನು ಬೇಕು? ಮಾಲತಿ ಶಶಿಧರ್ ಕವಿತೆಯೊಳಗೊಂದು ಭಾವಬೆರೆತು ಹಾಲಿನಲ್ಲಿ ಲೀನವಾದಜೇನಿನಂತೆ ಸವಿಯಾಗಿರಲುಕವಿಗಿನ್ನೇನು ಬೇಕು? ಭಾವ ಭಾಷೆಗಳ ಮಿಲನಪ್ರಸವವಾಗಲು ಕವಿತೆಮಡಿಲಲ್ಲಿ ಕಣ್ದೆರೆಡುನಗುವ ಹಾಲುಗಲ್ಲದಕೂಸಿನಂತೆಕವಿಗಿನ್ನೇನು ಬೇಕು? ಮನ ಭಾವಗಳ ಬಂಧವದುಅರಿವಿನೊಳಗಿಟ್ಟ ಗಂಧದ ಕೊರಡುಸುಗಂಧ ಎಲ್ಲೆಡೆ ಹಬ್ಬಿಮುದವ ಹಂಚುತಿರಲುಕವಿಗಿನ್ನೇನು ಬೇಕು? ಎದೆಯೊಳಗಿನ ತದ್ಭವಗಳೆಲ್ಲಾಹೆಣೆದುಕೊಂಡು ತತ್ಸಮಗಳಪಂಕ್ತಿಗಳಾಗಿ ಅರಳಿದರೆಮೊಗ್ಗೊಂದು ಬಿರಿದು ಮುಗುಳುನಗುವಂತೆಕವಿಗಿನ್ನೇನು ಬೇಕು?? ಕವಿತೆ ಲೋಕದ ಕನ್ನಡಿಎಡಬಲಗಳಾಚೆ ಚಂದ ತೋರುವಪದ ಲಾಸ್ಯ ಮೃದು ಹಾಸ್ಯಜೀವ ಭಾವಗಳ ಜಲದೋಟನಿಲದೆ ಓಡುತ ಲೋಕವ ಶುದ್ಧಿಮಾಡಲುಕವಿಗಿನ್ನೇನು ಬೇಕು??ಕವಿತೆ ಇದ್ದರೆ ಸಾಕು… ***********************

ಹೆಣ್ಣೊಡಲಾಳದ ನೋವಿನ ದನಿಗಳು ಅಂಕಣ ಬರಹ ಊರ ಒಳಗಣ ಬಯಲುಲೇಖಕಿ-ವಿನಯಾಪ್ರಕಾಶಕರು- ಛಂದ ಪುಸ್ತಕಬೆಲೆ-೪೦/-              ನಮ್ಮ ಮನೆಯಿಂದ ಒಂದುವರೆ ಕಿ.ಮಿ ಹೋದರೆ ಗಂಗಾವಳಿ ನದಿ ಸಮುದ್ರಕ್ಕೆ ಸೇರುವ ಸ್ಥಳ ಬರುತ್ತದೆ. ಅಲ್ಲಿಯೇ ಸ್ವಲ್ಪ ಹಿಂದೆ ಗಂಗಾವಳಿ ನದಿಯನ್ನು ದಾಟಿಸುವ ಸ್ಥಳವಿದೆ. ಮೊದಲೆಲ್ಲ ದೋಣಿಯಲ್ಲಿ ದಾಟಿಸುತ್ತಿದ್ದರು. ಈಗ ದೊಡ್ಡದೊಂದು ಬಾರ್ಜು ಬಂದಿದೆ. ಮಕ್ಕಳಿಗೆ ಒಂದು ಚಂದದ ಅನುಭವವಾಗಲೆಂದು ಕೆಲವೊಮ್ಮೆ ಅಲ್ಲಿಂದ ಬಾರ್ಜಿನಲ್ಲಿ ದಾಟಿ ಸಮೀಪದ ಮಾಸ್ಕೇರಿ ಎಂಬ ಊರಿಗೆ ಹೋಗಿ ಬರುವುದೂ […]

ಅಂಕಣ ಬರಹ ಹೂವು ಹೊರಳುವ ಹಾದಿ ಬಾಲ್ಕನಿ ಎಂದಾಗಲೆಲ್ಲ ನನಗೆ ಹೂವಿನ ಕುಂಡಗಳು ನೆನಪಾಗುತ್ತವೆ. ಪುಟ್ಟಪುಟ್ಟ ಕುಂಡಗಳ ಕೆಂಪು ಗುಲಾಬಿ, ಗುಲಾಬಿ ಬಣ್ಣದ ನುಣುಪಾದ ಕುಂಡಗಳಲ್ಲರಳಿದ ದುಂಡು ಮಲ್ಲಿಗೆ, ದುಂಡನೆಯ ಕುಂಡದಲ್ಲೊಂದು ಹಸುಗೂಸಿನಂಥ ಮೊಳಕೆ, ಮೊಳಕೆಯೊಂದು ಮೊಗ್ಗಾಗುವ ಪ್ರಕ್ರಿಯೆ ಹೀಗೆ ಹೂಗಳ ದೊಡ್ಡದೊಂದು ಪ್ರಪಂಚವೇ ಪುಟ್ಟ ಬಾಲ್ಕನಿಯಲ್ಲಿ ಎದುರಾಗುತ್ತದೆ. ಅರಳಿಯೂ ಅರಳದಂತಿರುವ ಕೆಂಪು ದಾಸವಾಳ ಬೆಳಗನ್ನು ಸ್ವಾಗತಿಸಿದರೆ, ಮುಳುಗುವ ಸೂರ್ಯನನ್ನು ಮಲ್ಲಿಗೆಯ ಪರಿಮಳ ಬೀಳ್ಕೊಡುತ್ತದೆ; ಮಧ್ಯರಾತ್ರಿಯಲ್ಲಿ ಅರಳಿದ ಬ್ರಹ್ಮಕಮಲಗಳೆಲ್ಲ ಚಂದಿರನಿಗೆ ಜೊತೆಯಾಗುತ್ತವೆ. ಸಮಯ ಸಿಕ್ಕಾಗ ಹೂಬಿಡುವ ನಾಗದಾಳಿ, […]

ಸ್ವಾತಂತ್ರ್ರ್ಯೋತ್ಸವ ಆಚರಿಸುವ ಹೊತ್ತಿನಲ್ಲಿ.

ಲೇಖನ ಸ್ವಾತಂತ್ರ್ರ್ಯೋತ್ಸವ ಆಚರಿಸುವ ಹೊತ್ತಿನಲ್ಲಿ. ಸುನೀತಾ ಕುಶಾಲನಗರ ಶಾಲೆ ಸೇರಿದಾಗಿನಿಂದ ಈವರೆಗೂ ಪ್ರತಿವರ್ಷ ಆಗಸ್ಟ್ ಬಂತೆಂದರೆ ಅದೇನೋ ಸಂಭ್ರಮ.ವಿದ್ಯಾರ್ಥಿ ಜೀವನದಲ್ಲಿ ಅನುಭವಿಸಿದ ಸ್ವಾತಂತ್ರೋತ್ಸವದ ಸಡಗರ ಅದು ಹಾಗೆಯೇ ಉಳಿಯಲು  ಮತ್ತು ಬೆಳೆಸಲು ಶಿಕ್ಷಕ ವೃತ್ತಿಯಲ್ಲಿರುವುದರಿಂದ ಮತ್ತಷ್ಟು ಉತ್ಸಾಹಿಯಾಗಿ ನಿರ್ವಹಿಸುವ ಅವಕಾಶ. ವಿದ್ಯಾರ್ಥಿಗಳಾಗಿದ್ದಾಗ  ದೇಶಭಕ್ತಿ ಮೈಗೂಡಿಸುವ ಭಾಷಣದ  ಬಾಯಿಪಾಠ,ದೇಶಭಕ್ತಿ ಗೀತೆ ಹಾಡಿ ನಲಿದು  ಶಿಕ್ಷಕರು ಕೊಡುವ ಮಿಠಾಯಿ ಚೀಪುತ್ತಾ ಕೇಕೆ ಹಾಕಿ  ಆ ದಿನ ಸವಿದ ಖುಷಿಯನ್ನು ಮೆಲುಕಿಸುತ್ತಾ ಮನೆಗೆ ತೆರಳುತಿದ್ದ ನೆನಪು ಮೊನ್ನೆ ಮೊನ್ನೆಯೆಂಬಂತೆ.  ಸ್ವತಃ  ಶಿಕ್ಷಕಿಯಾಗಿರುವುದರಿಂದ […]

Back To Top