ಕಾವ್ಯಯಾನ

ಕಾವ್ಯಯಾನ

ಲೀನವಾಗುವೆ ಕವಿತೆ ಸರಿತಾ ಮಧು ದಟ್ಟ ಕಾನನದ ನಡುವೆದಿಟ್ಟ ಹೆಜ್ಜೆಯನಿಟ್ಟು ನಡೆವೆಸುತ್ತಲೂ ಜೀಂಗುಡುವ ಸದ್ದು‌ಕತ್ತನೆತ್ತಲು ಕಾರ್ಮೋಡಗಳ ಕತ್ತಲುಅಡಿಇಡಲು ಕಲ್ಲು ಮುಳ್ಳಿನ ಹಾದಿಅಲ್ಲೇ ನಿಂತರೆ ಕ್ರೂರಮೃಗಗಳ ಭೀತಿ ಮುಗಿಲೆತ್ತರದ ಮರಗಳಿಗೆ ಒರಗಲೇ ಸ್ವಲ್ಪಮುಗಿದ ಹಾದಿಗೊಮ್ಮೆ ತಿರುಗಲೇ ಸ್ವಲ್ಪ ಭಯ , ಹಾ ! ಭಯದಣಿವ ಲೆಕ್ಕಿಸದೇ ಓಡಿದೆ ಮತ್ತೆನಾ ಕಳೆದುಕೊಂಡ ನನ್ನ ಸಾಮ್ರಾಜ್ಯಕ್ಕೆಅದು ಮಾತ್ರ ಎಂದಿಗೂ ನನ್ನದೇನಾನಲ್ಲಿ , ನಾನು ನನಗಾಗಿ ಮಾತ್ರಏಕಾಂತತೆಯ ಮೌನದೊಳಗೆಲೀನವಾಗುವುದೆನ್ನ ಮನ.. ******************************

ಪ್ರಶ್ನಿಸು ಪ್ರಶ್ನಿಸುತ್ತಲೇ ಇರು

ಕವಿತೆ ನಾಗರಾಜ ಹರಪನಹಳ್ಳಿ ಮುಗ್ಧತೆ ಸೌಂದರ್ಯವಹಾಗೆಲ್ಲ ಬೀದಿಗಿಡಲಾಗದುಒಲವೇಬೀದಿಯಲ್ಲಿ ಉರಿವ ಕಣ್ಣುಗಳಿವೆ ಹಾದಿ ಬೀದಿಗಳಲ್ಲಿ ಕರೋನಾ ಭಯಅದನ್ನೂ ಮೀರಿದ ಖದೀಮರ‌ ಸಂಚಿದೆಯಿಲ್ಲಿ ;ಸಮಾಜ ಇನ್ನೂ ಬದಲಾಗಿಲ್ಲಬದಲಿಸಲು ಯತ್ನಿಸಿದ ಬುದ್ಧ, ಬಸವ ,ಅಕ್ಕಅಲ್ಲಮ ಸೋತಿದ್ದಾರೆ….ಪುರೋಹಿತಶಾಹಿಯ ಕುತಂತ್ರಕೆ ಆನೆಕಾಲಿನ ಸಂಕೋಲೆಗೆ ಸಿಲುಕಿನೆಲಕೆ ಹತ್ತಿದ ರಕ್ತದ ಕಲೆ ಕಲ್ಯಾಣದ ಬೀದಿ ಬೀದಿಗಳಲಿಮತ್ತೆ ಅರಳಲಿ; ಅವೇ ಕಲ್ಯಾಣದ ಕ್ರಾಂತಿಯ ಹೂಚಿತ್ರಗಳಾಗಲಿ :ಅತ್ತ ಅತ್ತತ್ತ ಒಮ್ಮೆ ಹೊರಳಿ ನೋಡುಯಾವ ಹೆಸರುಗಳ ಇತಿಹಾಸದಲ್ಲಿ ಹೂಳಲಾಗಿದೆಯೋ ಅಲ್ಲಿಂದಲೇ ಕಸುವು ಪಡೆದುಕೊ ಗೆಳತಿ, ಆ ಕನಸುಗಳ ಹಂಚು ಕಲ್ಯಾಣದ ಬೀದಿಗಳಲಿ […]

ಬಾನ್ಸುರಿ ಮತ್ತು ರಾಧೆ

ಕಬ್ಬಿಗರ ಅಬ್ಬಿ – ಸಂಚಿಕೆ -6 ಭೂಪೇಶ್ವರೀ ರಾಗದ ಆಲಾಪದ ಮಂದ್ರಸ್ಥಾಯಿಯ ಸ್ವರಗಳು, ಸಾಯಂಕಾಲದ ಸಾಂದ್ರತೆಯನ್ನು ಜೇನಿನಂತಾಗಿಸಿ, ಧಾರೆಯೆಷ್ಟು ಎಳೆಯಾದರೂ ಕಡಿಯದಂತೆ, ವಾತಾವರಣವನ್ನು ಆರ್ದ್ರವಾಗಿಸಿತ್ತು. ಗಾಯಕನ ( ಒ ಎಸ್. ಅರುಣ್‌) ನಾಭಿಯಿಂದ ಹೊರಟ ಸ್ವರಕಂಪನದ ತರಂಗ, ಎದೆಯನ್ನು ಹೊಕ್ಕು, ಭಾವ ಹೀರಿ, ಕಂಠದಿಂದ ಹೊರಹರಿಯುವಾಗ,  ಆಗಷ್ಟೇ ಸೋನೆ ಮಳೆ ನಿಂತು, ವಾತಾವರಣದ ತಂಪೊಳಗೂ ಆರ್ದ್ರ ಭಾವ. ಬಾನ್ಸುರಿಯ ದಪ್ಪ ಬಿದಿರಿನ ರಂಧ್ರಗಳಿಂದ ಸ್ವಾತಂತ್ರ್ಯ ಪಡೆದ ನಾದಸೆಲೆ ಅಂತರಂಗದ ಅಂತರ್ನಾದವೇ ಆಗಿತ್ತು. ತಬಲಾದ ಮೇಲೆ ಹೂಪಕಳೆಗಳು ತಡವಿದಂತೆ […]

ಮೂವರು ವೃತ್ತಿ ಕಲಾವಿದರ ಕಣ್ಮರೆ

ಲೇಖನ ಮಲ್ಲಿಕಾರ್ಜುನ ಕಡಕೋಳ ಅಂಜಲಿದೇವಿ ಅವರು ಎಂಟುಮಂದಿ ಅಕ್ಕತಂಗಿಯರು. ಎಂಟೂ ಮಂದಿಯು ವೃತ್ತಿರಂಗಭೂಮಿ ಅಭಿನೇತ್ರಿಯರು. ಆದವಾನಿ ಸುಭದ್ರಮ್ಮ, ಆದವಾನಿ ಸೀತಮ್ಮ, ಆದವಾನಿ ನಾಗರತ್ನಮ್ಮ… ಹೀಗೆ ಗದಗ ಪ್ರಾಂತ್ಯದ ಸಾಂಸ್ಕೃತಿಕ ಲೋಕದಲ್ಲಿ ಆಗ ಆದವಾನಿ ಸೋದರಿಯರದು ಬಲುದೊಡ್ಡ ಐಕಾನ್ ಹವಾ. ಮೊನ್ನೆಯಷ್ಟೇ ಗಂಗಾವತಿಯಲ್ಲಿ ನಿಧನರಾದ ಜಿ.ಎನ್.ಅಂಜಲಿದೇವಿ (೭೨ ) ಆದವಾನಿ ಸೋದರಿಯರ ಬಳಗದ ಕೊನೆಯ ಕೊಂಡಿ. ಇವರ ತಂದೆ ಆ ಕಾಲದ ಸಂಗೀತ ವಿದ್ವಾಂಸ. ಹೆಸರಾಂತ ಮೃದಂಗ ವಾದಕ. ತಂದೆಯಿಂದ ಬಳುವಳಿಯಾಗಿ ಬಂದುದು ಸಂಗೀತ ಮತ್ತು ರಂಗಭೂಮಿ ಅಭಿನಯ […]

ಶಾಮ

ಕವಿತೆ ಅರ್ಪಣಾ ಮೂರ್ತಿ ಮರೆತು ಮರೆತುನೆನಪಾಗುವನಿನ್ನ ನೆನಪುಗಳು ನೆನಪಾಗಲೆಂದೆಮರೆವು ಮರೆಸಿನೆನಪಿಸಿದೆ ಈಗ, ಗೋಕುಲದಸಂಜೆಗಳುಹೀಗೆ ನಿನ್ನನೆನಪಿನ ನೆಪದಿಂದಕೆಂಪೇರಿಹಗಲಮರೆಸಿದಾಗೆಲ್ಲನೀನಿಲ್ಲಿ ನನ್ನನೆನಪಿಗಿಳಿದಿರುತ್ತಿನೋಡು, ಬಿಗಿದ ಗಂಟಲಬಿಕ್ಕುನಿನ್ನ ನೆನಪಿಗೆ ನಾನಿಳಿದಿರುವೆನೆಂಬುದ ನೆನಪಿಸಿಬಿಡುವುದುಮರೆಯದಂತೆ, ನೀನೆಂದರೆ ಹೀಗೆನೆನಪಾಗದನೆನಪುಮರೆಯಲಾರದಮರೆವು. *******************************

ನಿನದೇ ನೆನಪು

ಕವಿತೆ ಮಾಲತಿ ಶಶಿಧರ್ ಈಗೀಗ ದಾರಿಯಲಿ ಒಬ್ಬಳೇಸ್ಕೂಟಿ ಬಿಡುವಾಗ ಹಿಂದೆಯಾರೋ ಕೂತು ನನ್ನನೆಚ್ಚಿನ ಗೀತೆ ಗುನುಗಿದಂತೆ,ತಿರುಗಿ ನೋಡಿದರೆ ಖಾಲಿಸೀಟುಕನ್ನಡಿಯ ಸರಿಪಡಿಸಿಗಮನಿಸಿದರೆ ಕಣ್ಮನಸೆಳೆವ ರೂಪವೊಂದುನಸುನಕ್ಕನಂತೆ.. ಇತ್ತ ಮನೆಯ ಮುಂದಿನರಂಗೋಲಿಯ ಚುಕ್ಕಿಯೊಂದುತಪ್ಪಿಸಿಕೊಂಡಂತೆಎಷ್ಟೇ ಗೆರೆ ಎಳೆದರುರಂಗೋಲಿ ಅಪೂರ್ಣವಾದಂತೆ.. ಮನೆಯ ಸೂರಿನ ಮೇಲೆಕಡಜವೊಂದು ಕಟ್ಟಿದ್ದಮಣ್ಣಿನ ಗೂಡು ಕುಸಿದುಬಿದ್ದಂತೆ,ಮನೆಗಾಗಿ ಹುಡುಕಾಡಿಏಕಾಂಗಿಯಾಗಿ ಬಿಕ್ಕಿದಂತೆ.. ಸ್ನೇಹಿತೆ ನೀಡಿದಗಿಳಿಮರಿ ಜೋಡಿಗಳುಪಂಜರದಲ್ಲಿಬಂಧಿಯಾದಂತೆ,ಲೋಕವನೇ ಮರೆತುಕೊಕ್ಕಿಗೆ ಕೊಕ್ಕುಅಂಟಿಸಿಕೊಂಡು ಅದೇನೊಮಾತಾಡಿದಂತೆ ಹಾಡಿನಲ್ಲೂ, ಕನ್ನಡಿಯಲ್ಲೂಅಪೂರ್ಣತೆಯಲ್ಲೂ,ಅಸಹಾಯಕತೆಯಲ್ಲೂ,ಪಂಜರದಲ್ಲೂಮಾತಿನಲ್ಲೂ,ನೋವಲ್ಲು ನಲಿವಿನಲ್ಲೂಬರೀ ನಿನದೇ ನೆನಪು.. ******************************

ಏಕಾಂತದಿಂದ ಲೋಕಾಂತಕ್ಕೆ

ಏಕಾಂತದಿಂದ ಲೋಕಾಂತಕ್ಕೆ –ಲೇಖಿಕಾ ಸಾಹಿತ್ಯ ವೇದಿಕೆ ಪುಸ್ತಕ ಪರಿಚಯ ಸಾರ್ಥ್ಯಕ್ಯ ಡಿ.ಯಶೋದಾ ವಿಶ್ವಕ್ಕೇ ಕೊರೋನ   ಕಾರ್ಮೋಡ ಕವಿದಿರುವ ಇಂತಹ ಕಾಲದಲ್ಲಿ ಎಲ್ಲರೂ ಒಟ್ಟಿಗೆ ಸೇರಿ ತಾಂತ್ರಿಕತೆಯ ಮೂಲಕ ಒಂದು ಗೂಡುವು ದು ವಿಶೇಷ. ಏಕಾಂತದಿಂದ ಲೋಕಾಂತಕ್ಕೆ ಎಂಬಂತೆ ತಂತ್ರ ಜ್ಞಾನದ ಮೂಲಕ ಸಂವಹನ ಮಾಡುವುದು ಇಂದಿಗೆ ಅತಿ ಮುಖ್ಯ ಎಂಬುದು ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅಭಿಮತ.ಲೇಖಿಕಾ ಸಾಹಿತ್ಯ ವೇದಿಕೆ ಯ ನನ್ನ ಮೆಚ್ಚಿನ ಪುಸ್ತಕ ಪರಿಚಯದ ಫೇಸ್‌ಬುಕ್ ಲೈವ್ ಸರಣಿ ಕಾರ್ಯಕ್ರಮದ ಅವಲೋಕನದಲ್ಲಿ ಮಾತನಾಡಿದ ಅವರು, […]

ಕುದಿವೆಸರ ಅಗುಳಾಗಬೇಕು

ಕವಿತೆ ಪ್ರೇಮಾ ಟಿ ಎಮ್ ಆರ್ ತನ್ನ ಹೀಗಿಟ್ಟವರನ್ನೆಲ್ಲಶಾಪ ಹಾಕಬೇಕೆಂದುಕೊಂಡಿದ್ದುಅದೆಷ್ಟುಬಾರಿಯೋತನಗಿಷ್ಟಬಂದಂತೆಇರಬಹುದಾಗಿದ್ದರೂಅವರಿಟ್ಟ ಪಾತ್ರೆಯೊಳಗೇತುಂಬಿಕೊಂಡಂತೆಬದುಕಿದ್ದು ತನ್ನದೂತಪ್ಪಲ್ಲವಾ?ಮತ್ತೆ ಈ ಮನೆಅಪ್ಪ ಅಮ್ಮ ಅತ್ತೆಮಾವಈ ಮಗಳ ಅಪ್ಪಎಲ್ಲರೂ ತನ್ನವರಲ್ಲವೇಎಂದುಕೊಳ್ಳುತ್ತಲೇಅವಳು ಅವಳಂತಿರದೇಅಮ್ಮನಂತೆ ಅಕ್ಕನಂತೆಬದುಕ ಬದುಕುತ್ತಲೇಇದ್ದಾಳೆ ಎಗರಿಬೀಳಬೇಕಾದಲ್ಲೆಲ್ಲತಣ್ಣೆ ಅಂಬಲಿಯಂತೆಹಳ್ಳೆಣ್ಣೆಯಂತೆಹಂದಾಡುತ್ತಾಳೆ ಮಂದಮಂದವಾಗಿಮನೆಮುಂದೆ ಬಿದ್ದುಕೊಂಡಪೆದ್ದಮುಂಡೆಯಂಥಕಾಲ್ದಾರಿಯೇ ತಾನೆಂದುಕೊಂಡಿದ್ದುಅದೆಷ್ಟು ಬಾರಿಯೋಉಗುಳಿ ಉಚ್ಚೆ ಹೊಯ್ದರೂಹೊದ್ದು ಮಲಗಿಕೊಂಡ ಬೀದಿ ತಡೆಯಲಾರದೇ ಗುಡಗುಡಿಸಿದ್ದೂಇದೆಯಾದರೂ ಮತ್ತೆಪಶ್ಚಾತ್ತಾಪದ ಉರಿಯೂಅವಳ ಉಡಿಗೇಕುದಿವೆಸರೊಳಗಿನ ಅಗುಳಾಗಿಮುಚ್ಚಳ ಕೊಡವಿ ಉಕ್ಕಬೇಕುಸಿಡಿಯಬೇಕು ಬಿಡಿಯಾಗಿ ಹಿಡಿಯಾಗಿಒಟ್ಟಿದ ಒಲೆ ಆರುವ ತನಕಹುದುಗದೇ ಬುದುಗಬೇಕುಒಮ್ಮೆಗಾದರೂ ಅಂದುಕೊಳ್ಳುತ್ತಾಳೆ

ರಣ ಹಸಿವಿನಿಂದ!

ಕವಿತೆ ಮೊನ್ನೆ ಇವರೂಹಲವು ಯುದ್ದಗಳ ಗೆದ್ದಿದ್ದರುಗೆದ್ದ ರಾಜ್ಯದ ಹೆಣ್ನುಗಳಬೇಟೆಯಾಡಿದ್ದರುಇದೀಗ ಸಾಂತ್ವಾನ ಕೇಂದ್ರಗಳತೆರೆದು ಕೂತಿದ್ದಾರೆ! ಮೊನ್ನೆ ಇವರೂಊರೂರುಗಳಿಗೆ ಬೆಂಕಿಹಚ್ಚಿದ್ದರುಉರಿದ ಮನೆಗಳಲ್ಲಿ ಹೆಂಗಸರುಮಕ್ಕಳೆನ್ನದೆ ತಲೆ ತರೆದಿದ್ದರುಇದೀಗ ಆನಾಥಾಶ್ರಮಗಳತೆರೆದು ಕೂತಿದ್ದಾರೆ! ಮೊನ್ನೆ ಇವರೂಕೋವಿ ಖಡ್ಘಗಳ ಹಿಡಿದಿದ್ದರುಇದೀಗ ಧರ್ಮಗ್ರಂಥಗಳಪಾರಾಯಣ ಮಾಡುತ್ತಿದ್ದಾರೆ! ಮೊನ್ನೆಮೊನ್ನೆಯವರೆಗೂ ನಡೆದಅಕಾರಣ ಯುದ್ದಗಳಿಗೀಗಸಕಾರಣಗಳ ಪಟ್ಟಿಮಾಡುತ್ತ ಕೂತಿದ್ದಾರೆ ತರಿದ ತಲೆಗಳಭೋಗಿಸಿದ ಯೋನಿಗಳಕಚ್ಚಿದ ಮೊಲೆಗಳಕಲಸಿಹಾಕಿದ ಭ್ರೂಣಗಳನಿಖರ ಅಂಕಿಅಂಶಗಳಿಗಾಗಿತಲೆ ಕೆರೆದುಕೊಳ್ಳುತ್ತಿದ್ದಾರೆ ಪ್ರತಿ ಮನುಷ್ಯನಿಗೂ ಇರಬಹುದಾದಮೃಗದ ಮುಖವಾಡವಕಳಚಲೆತ್ನಿಸಿದಷ್ಟೂಗೊಂದಲವಾಗುವುದು ಖಚಿತ ನೋಡು ಬರೆಯುವಾಗಲೂ ಇದನುಕೆಕ್ಕರಿಸಿ ನೋಡುತಿದೆ ಮೃಗವೊಂದುರಣಹಸಿವಿನಿಂದ!————————————– ಕು.ಸ.ಮದುಸೂದನ ರಂಗೇನಹಳ್ಳಿ(ದುರಿತಕಾಲದ ದನಿ)

ಆಕಾಶಯಾನವೂ ಆಧ್ಯಾತ್ಮಿಕ ಚಿಂತನೆಯೂ

ಲೇಖನ ಚಂದಕಚರ್ಲ ರಮೇಶ ಬಾಬು ತಲೆಬರಹ ನೋಡಿಯೇ ಇದೇನಪ್ಪ ಇವನು ಯಾವುದನ್ನ ಯಾವುದಕ್ಕೋ ಜೋಡಿಸ ತೊಡಗಿದ್ದಾನೆ ಎನ್ನುತ್ತೀರಾ ! ಕರ್ಮಸಿದ್ಧಾಂತಕ್ಕೂ ನಾವು ಕೈಗೊಳ್ಳುವ ವಿಮಾನಯಾನಕ್ಕೂ ಎಲ್ಲಿಯ ಸಾಪತ್ಯ ವೆನ್ನುತ್ತೀರಾ !. ಏನೋ ಹೇಳಲು ಹೋಗಿ ಏನೋ ಹೇಳ್ತಿದೀನಿ ಅಂತ ಅನ್ನಿಸ್ತಿದೆಯಾ ? ಅದೇನೂ ಅಲ್ಲ. ನಾನು ನಿಮಗೆ ಅನುಭವಗಳ ದೃಷ್ಟಾಂತಗಳನ್ನು ಕೊಡುತ್ತಾ ಹೋದಾಗ ನೀವೇ ಒಪ್ತೀರಾ ! ಆದ್ರೆ ಒಂದು. ಇದು ಹೊಂದೋದು ವಿದೇಶೀ ವಿಮಾನಯಾನಕ್ಕೆ ಮಾತ್ರ.  ಈಗ ನಾವು ಇದರ ಚರ್ಚೆಗೆ ಬರೋಣ. ನೀವು ನಮ್ಮ […]

Back To Top