ಪಯಣ

ಪಯಣ

ಕವಿತೆ ಪಾರ್ವತಿ ಸಪ್ನ ಹೊಗಳಿದರೆ ಹಿಗ್ಗದೆತೆಗಳಿದರೆ ಕುಗ್ಗದೆಅಪ್ಪಳಿಸುವ ಮಾತಿನಅಲೆಗಳಿಗೆ ಜಗ್ಗದೆನಿನ್ನ ಹಾದಿಯಲ್ಲೇನಿಲ್ಲದೆ..ನೀ ಸಾಗಿಬಿಡು..!! ಕಾಲಿಗೊಂದು ಮುಳ್ಳುಕೈಯಿಗೊಂದು ಕಲ್ಲುನಾಲಿಗೆಯಲ್ಲಿ ಸುಳ್ಳುಅಚ್ಚರಿಯೇನಿಲ್ಲ..ಲೋಕವೇ ಡೊಂಕುಮಾತೆಲ್ಲಾ ಕೊಂಕುಇರಲಿಬಿಡು.. ನಿನ್ನಷ್ಟಕ್ಕೇನೀ….ಸಾಗಿಬಿಡು…!! ತಪ್ಪು ಹುಡುಕುವಬೆಪ್ಪನಿಗೆ..ತುಪ್ಪ ಸವರಿದರೂಮೊಸರಲ್ಲೂ ಕಲ್ಲಂತೆ,,ಕಾಣದ ಗಾಳಿಯದುಬೊಗಸೆಯಲ್ಲಿ ಹಿಡಿದಂತೆ,,ಸುಮ್ಮನೆ ನಡೆದುಬಿಡುನಿನ್ನ ಹಾದಿಯಲ್ಲಿ ಸಾಗಿಬಿಡು…!! ಎಲ್ಲವೂ ಜಂಜಾಟಪ್ರತಿಕ್ಷಣ ಒಂದು ಪಾಠಸಮಯ ಗುರುವುಕಲಿಸುವುದು ನೋಡುಅವನ ಆಟಕ್ಕೆ ನೀ ಕುಣಿದುಬಿಡುತಿರುಗಿ ಮತ್ತೆ ನೋಡದಿರುವ್ಯಥೆಯನ್ನೆಲ್ಲಾ ತೂರಿಬಿಡುನಿನ್ನ ಗುರಿಯ ಸೇರಿಬಿಡು…!! ********************

ಇಲ್ಲದೆಯೂ ಎಲ್ಲವನ್ನೂ ಬಯಸುತ್ತೇನೆ

ಕವಿತೆ ಸ್ಮಿತಾ ಭಟ್ ಅಬ್ಬರಿಸಿ ಬರುವ ನಿನ್ನ ಮಾತಿನಹೊಡೆತಕ್ಕೆ ಸಿಲುಕಿದ ಒಂಟಿ ದೋಣಿಮತ್ತೊಂದು ಪ್ರಶಾಂತ ನಿಲುವಿಗಾಗಿಯಾಕೋ ಕಾಯಬೇಕೆನಿಸುತ್ತಿಲ್ಲಕೊಚ್ಚಿ ಕಾಣದಾಗಲೆಂದು ಬಯಸುತ್ತೇನೆ ಬುಡಮೇಲಾದ ನಂಬಿಕೆಯಮತ್ತೆ ಊರಿ ಅದಕ್ಕೇ ಚಿಗುರೊಡೆವಸಮಯಕ್ಕಾಗಿಯಾಕೋ ಕಾಯಬೇಕೆನಿಸುತ್ತಿಲ್ಲಕುರುಹೂ ಇಲ್ಲದಂತೆ ನಶಿಸಿ ಹೋಗಲು ಬಯಸುತ್ತೇನೆ. ಹೊಸದೇನೋ ಘಟಿಸುತ್ತದೆ ಎಂಬ ಬಯಕೆಯಲಿಹಳೆಯ ಪೋಷಾಕುಗಳನೇ ಮತ್ತೆ ಮತ್ತೆ ಹೊದ್ದುಅಸತ್ಯದ ನಗುವಿನಲಿ ಯಾಕೋ ಕಾಯಬೇಕೆನಿಸುತ್ತಿಲ್ಲಸಕಲವನೂ ತೊರೆದು ನಿರಾಳವಾಗಲು ಬಯಸುತ್ತೇನೆ. ಯಾವ ಕಿಂಡಿಯೂ ಉಳಿದಿಲ್ಲಕಿರಣದ ಸ್ಪರ್ಶವ ಅನುಭವಿಸಲುಹೊರದಾರಿಗೆ ಯಾರೋ ಬಾಗಿಲು ತರೆಯುವುದಕ್ಕಾಗಿ ಯಾಕೋ ಕಾಯಬೇಕೆನಿಸುತ್ತಿಲ್ಲಗೂಡಿನ ಮಾಡು ಸರಿಸಿ ದಿಗಂತದಲಿಹಂಗು ತೊರೆದು ಹಾರಲು ಬಯಸುತ್ತೇನೆ […]

ಅಂಕ(ಣ)ದ ಪರದೆ ಸರಿಯುವ ಮುನ್ನ.

ಸಂಗಾತಿ ಸಾಹಿತ್ಯ ಪತ್ರಿಕೆಯನ್ನು ಅದರ ನಿಲುವನ್ನೂ ಹಲವು ಗೆಳೆಯರು ಗಮನಿಸಿರಬಹುದು. ಸದಾ ಹೊಸ ಆಲೋಚನೆಗಳಿಗೆ ಮತ್ತು ಆಧುನಿಕ ಕಾಲದ ಸಂವೇದನೆಗೆ ವೇದಿಕೆಯಾಗಿರ ಬಯಸುವ ಸಂಗಾತಿ ಸ್ಥಾಪಿತ ಹಿತಾಸಕ್ತಿಗಳನ್ನು ಮತ್ತು ಬರಿಯ ತೋರಿಕೆಯನ್ನು  ಎಂದಿಗೂ ಎತ್ತಿಹಿಡಿದಿಲ್ಲ. ಅವರು ಇವರು ಎಂದಲ್ಲ. ಫೇಸ್ಬುಕ್ ಈ ನಡುವೆ ಬಹುತೇಕರ ನಿರಂತರ ನಿಲುದಾಣ, ತಂಗುದಾಣ, ಹಾಗೂ ಅಭ್ಯಾಸದ ಮೈದಾನವೂ ಆಗಿದೆ. ಹಲವರನ್ನು  ಫಾಲೋ ಮಾಡುತ್ತ ಅವರ ರಚನೆಗಳನ್ನು ಗಮನಿಸಿದರೆ ದಿನದಿಂದ ದಿನಕ್ಕೆ ಪ್ರಭೃದ್ಧರಾಗುತ್ತಿರುವ ಹಲವರಿದ್ದಾರೆ. ಇನ್ನು ಒಂದೋ ಎರಡೋ ಸಂಕಲನ ತಂದೂ ಫೇಸ್ಬುಕ್ಕಲ್ಲಿ […]

ಊರುಗೋಲು ಕಾಫಿ ಮತ್ತು ಅಪ್ಪ

ಕವಿತೆ ವಿಭಾ ಪುರೋಹಿತ್ ಚತುರ್ಮುಖ ಬ್ರಹ್ಮಅವನೊಳಗೊಂದು ಕಾಣ್ದಅಗೋಚರ ಮೈವೆತ್ತ ಹಾಗೆಅವನಿಯೊಳಗಿನ ಜ್ಞಾನಕಣ್ತೆರೆದಂತೆಸುಡುವ ನೋವಿದ್ದರೂ ಎದೆಯೊಳಗೆಉತ್ಸಾಹ ಉತ್ತುವದು ನಗೆಯ ಬಿತ್ತುವುದುಮಹಾತ್ಮ ನ ಲೀಲೆನಾರಾಯಣನಿಲ್ಲದೇ ಅವನಿಯುಂಟೇ?ಅದೃಶ್ಯದಲ್ಲಿ ಸದೃಶನಾಗಿಸೋಫಾಮೇಲೆ ಕುಳಿತಿದ್ದಾನೆರೇಡಿಯೋ ಕೇಳುತ್ತಿದ್ದಾನೆಎರಡುತಾಸಿಗೊಮ್ಮೆ ಕಪ್ಪು ಕಾಫಿಸೋಮರಸ ಸದಾ ಥರ್ಮಾಸಿನೊಳಗೆಕಾಲುಮೇಲೆಕಾಲಿಟ್ಟುಅನುಭವದ ರೇಖೆಗಳನ್ನೆಲ್ಲ ಒತ್ತಿಹಿಡಿದ ಹಸ್ತ ಊರುಗೋಲಿನ ಮೇಲೆಊರಿನ ತಗಾದೆಗೆಲ್ಲ ಕಿವಿಗೊಟ್ಟುಎದೆಗವುಚಿ ಎಲ್ಲರಿಗೂಬೀರಬಲ್ಲನ ಪರಿಹಾರ ಮಂತ್ರರೆಡಿಯಾಗುತಿತ್ತು.ಊರುಗೋಲಿನ ಸುತ್ತ ಫಿರ್ಯಾದಿಗಳುವಿನಂತಿಗಳು ಅಹವಾಲುಗಳಿಗೆಹೊಸದಾಗಿ ತಂದ ಕಂಪ್ಯೂಟರ್ಕೀಲಿಮಣೆ ಕಿಲಕಿಲನೆ ಬಡಿದುಬರೆದುಕೊಂಡೇ ಮತ್ತೆ ಕಾಫಿಗೆಕೈಚಾಚುತ್ತಿತ್ತುಯಾರೇ ಬಂದರೂ ಯಾವಾಗ ಬಂದರೂಬಿಸಿಕಾಫಿ ಜೊತೆ ಆತ್ಮೀಯತೆ ಬಿಸ್ಕತ್ತು ಗಳುಮನದಾಳದಿಂದ ಸಮಸ್ಯೆಗಳನುಹೊತ್ತು ತಂದವರ ಪಾತಾಳಗರಡಿಯಾಗುತ್ತಿತ್ತುನೆನಪಿನಲ್ಲಿ ಮುಳುಗಿದರೆಏನೋ ಗೊತ್ತಿರದ […]

ನೂತನ ನೋಡಿದ ಸಿನೆಮಾ

ವಿದ್ಯಾ ಕಸಂ ಶಕುಂತಲಾ ದೇವಿ ನೂತನ ದೋಶೆಟ್ಟಿ ವಿದ್ಯಾ ಕಸಂ ಈ ಶಬ್ದಗಳು , ಇತ್ತೀಚೆಗೆ ಬಿಡುಗಡೆಯಾದ, ಖ್ಯಾತ ಗಣಿತಜ್ಞೆ , ಸಂಖ್ಯಾ ನಿಪುಣೆ, ಮಾನವ ಕಂಪ್ಯೂಟರ್ ಎಂದೇ ಹೆಸರಾಗಿದ್ದ ಶಕುಂತಲಾ ದೇವಿ ಅವರ ಜೀವನಾಧಾರಿತ ಹಿಂದಿ ಚಲನಚಿತ್ರದಲ್ಲಿ ಬಹಳ ವಿಶೇಷವಾಗಿ ಉಪಯೋಗಿಸಲ್ಪಡುತ್ತವೆ. ಈ ವಿದ್ಯಾ ಕಸಂ ಎಂಬ ಆಣೆ- ಪ್ರಮಾಣ ಚಿತ್ರದುದ್ದಕ್ಕೂ ಬೇರೆ ಬೇರೆ ಸಂದರ್ಭಗಳಲ್ಲಿ ಹೊಸ ತಿರುವನ್ನು ಕೊಡುತ್ತ ಹೋಗುತ್ತದೆ. ಅಮೇಜಾನ್ ಪ್ರೈಂನಲ್ಲಿ ಜುಲೈ 31 ರಂದು ಬಿಡುಗಡೆಯಾದ ಈ ಚಿತ್ರವನ್ನು ನಾನು ನೋಡಿದ್ದು ವಿದ್ಯಾ […]

ಶಿಕಾರಿ

ಕವಿತೆ ಫಾಲ್ಗುಣ ಗೌಡ ಅಚವೆ ಚಂದ್ರ ಎಷ್ಟೇ ಕಣ್ಣು ತೆರೆಯಲುಪ್ರಯತ್ನಿಸಿದರೂಕಿಕ್ಕಿರಿದ ಮೋಡಗಳು ಮರ ಮರಗಳ ಕತ್ತಲನ್ನೂಹೊಸಕಿ ಹಾಕುತ್ತವೆಇಂತಹ ಅಪರಾತ್ರಿಯಂತಹಕತ್ತಲನ್ನು ನೋಡಿದರೆಶಂಕ್ರ ಕೋವಿ ಹೆಗಲಿಗೆ ಹಾಕಿಶಿಕಾರಿ ಹೋದನೆಂದೆ ತಿಳಿಯಬೇಕುಹೋಗುವುದು ದೂರವೇನಲ್ಲಒಂದು ಬರ್ಕ ಹೊಡೆದೂ ಗೊತ್ತಿಲ್ಲಕಳ್ಳರಗದ್ದೆ ಸುಕ್ರು ಮನೆ ಬೇಲಿ ಆಚೆ ಒಂದು ಹತ್ತು ಮಾರು ಅಷ್ಟೇಹಂದಿ ಮಲಗಿದೆಯೆಂದುಥರಗುಟ್ಟಿದವನು ಅದರ ತಲೆಗೆಗುಂಡು ಹೊಡೆದೇ ಬಿಟ್ಟವಅದೆಂಗೆ ಮನೆಗೆ ಬಂದನೋಮಲಗಿದನೊ ಗೊತ್ತಿಲ್ಲ ಮರುದಿನ ಮಾದೊಡ್ ಈಡಾಗಿದೆಂದು ನಮ್ಮೂರ ಪೆಕರನಂತ ಪೊರಗೋಳುಹುಡುಕಾಡಿ ಏನೂ ಕಾಣದೇತಿರುಗಿ ಬಂದರುಮುಚ್ಚಾಕಿ ಮಲಗಿದ ಶಂಕ್ರಒಂಬತ್ತಾಸಾದರೂ ಎದ್ದೇ ಇರಲಿಲ್ಲಭಯ ಒದ್ದುಕೊಂಡು ಬಂದುಎದೆ […]

ಯಡ್ರಾಮಿಯ ಉಡುಪಿ ಹೋಟೆಲ್

ಪ್ರಬಂಧ ಮಲ್ಲಿಕಾರ್ಜುನ ಕಡಕೋಳ   ಹಾಗೆ ನೋಡಿದರೆ ನಮ್ಮ ಯಡ್ರಾಮಿಗೆ  ಬೆಳ್ಮಣ್ಣು ಶಂಕರಭಟ್ಟರ ಉಡುಪಿ ಹೋಟೆಲ್ ಬರುವ ಪೂರ್ವದಲ್ಲೇ ನಿಯತ್ತಿನ ನಾಯಿಗುರುತು ಬ್ಯಾಂಕ್ ಬಂದಿತ್ತು. ಸುಂಬಡ ಹಾದಿಬದಿಯ ಬಹುಪಾಲು ಬೆಳಕಿಲ್ಲದ ಬ್ಯಾಂಕಿಗೂ ಭಟ್ಟರ ಹೋಟೆಲಿಗೂ ಕೂಗಳತೆ ದೂರ.  ಅಜಮಾಸು ಮುವತ್ತು ವರ್ಷಗಳ ಹಿಂದಿನ ಮಜಕೂರವಿದು. ಹಣಮಂದೇವರ ಗುಡಿ ಬಳಿಯ ಹಳೆಯ ಬಸ್ ನಿಲ್ದಾಣದಲ್ಲಿ ಉಡುಪಿ ಹೋಟೆಲ್. ಆಗೆಲ್ಲ ರುದ್ರಯ್ಯ ಮುತ್ಯಾನ ಹೋಟೆಲ್ ಹಾಗೂ ಹಲಕರ್ಟಿ ಶಿವಣ್ಣನವರ ಹೋಟೆಲಗಳದ್ದೇ ಸ್ಟಾರ್ ಹೋಟೆಲ್ ಹವಾ. ಯಥೇಚ್ಛ ಹೊಗೆಯುಂಡು ಮಸಿಬಟ್ಟೆ ಬಣ್ಣಕ್ಕಿಳಿದ […]

ನಿನ್ನನಾ ಹೋಲಿಸಲೆ ಮಧುವಸಂತ ಬೇಸಿಗೆಗೆ?

ಅನುವಾದಿತ ಕವಿತೆ ಮೂಲ: ವಿಲಿಯಂ ಷೇಕ್ಸ್ ಪಿಯರ್ ಕನ್ನಡಕ್ಕೆ:ವಿ.ಗಣೇಶ್ ನಿನ್ನನಾ ಹೋಲಿಸಲೆ ಮಧು ವಸಂತ ಬೇಸಿಗೆಗೆ? ಅದಕಿಂತ ಮಿಗಿಲಾದ ಸ್ಥಿತಪ್ರಜ್ಞ ಸುಂದರನು ನೀನು ಬೇಸಿಗೆಯ ಬಿರುಗಾಳಿಗೆ ಮೊಗ್ಗು ಮುದುಡಬಹುದು ಮಳೆಗಾಲದ ಆರ್ಭಟಕೆ ವಸಂತ ನಾಶಿಸಬಹುದು ಕೆಲವೊಮ್ಮೆ ಸೂರ್ಯನೂ ಉರಿಗಣ್ಣ ಬಿಡಬಹುದು ಬಂಗಾರದ ಕಾಂತಿಯು ಮಸುಕು ಮಸುಕಾಗಬಹುದು  ಆ ಪ್ರಕೃತಿಯ ಕೋಪಕ್ಕೆ ಕಾಲಚಕ್ರದ ಏರಿಳಿತಗಳಿಗೆ ಚೆಲುವರಲಿ ಚೆಲುವನೂ ಸಹ ಕಳೆಗುಂದಬಹುದು. ಆದರೆ ಚೆಲುವರಲಿ ಚೆಲುವಾದ ಈ ನಿನ್ನ ಚೆಲುವು ಎಂದೆಂದೂ ಮಾಸದೆ ಚಿರವಾಗಿ ಉಳಿಯುವುದು  ನಾಶವಾಗದೆ ಅದು ಚಿಗುರೊಡೆದು […]

ಪ್ರೀತಿಯ ಸಾಲುಗಳು

ಕವಿತೆ ಬಾಲಕೃಷ್ಣ ದೇವನಮನೆ ಮುಗುಳು ನಗೆಯಲ್ಲಿಹದಗೊಳಿಸಿದಎದೆಯ ಹೊಲದಲ್ಲಿಒಂದೊಂದೇವಾರೆ ನೋಟದಲಿನಾಟಿ ಮಾಡಿದ ಪೈರುತೊನೆದಾಡಿದ ಮಧುರ ಕ್ಷಣ..! ಪ್ರೀತಿಯನ್ನುಮುಲಾಜಿಲ್ಲದ ಹಾಗೆಅವಳು ಒದ್ದು-ಹೋದ ಎದೆಯ ದಾರಿಯಲ್ಲಿಮೂಡಿದ ನೋವಿನ ಹೆಜ್ಜೆಗಳುಯಾವ ಮುಲಾಮಿಗೂಅಳಿಸಲಾಗದೇ ಸೋತರೂಮತ್ತೆ ಮತ್ತೆ ನೆನಪ ಲೇಪಿಸಿಕೊಂಡುಸುಖಿಸುವ ವ್ಯಸನಿ ನಾನು. ಮನಸ್ಸುಗಳು ಉರಿಯುವಈ ರಾತ್ರಿಯಲ್ಲಿಬೀಸುವ ಗಾಳಿಯೂಬೆಂಕಿ ನಾಲಿಗೆ ಸವರುವಾಗಇಷ್ಟಿಷ್ಟೇ… ಇಷ್ಟಿಷ್ಟೇ…ಜಾರಿದ ಗಳಿಗೆಸುಟ್ಟ ನಿದಿರೆಯನ್ನೆಲ್ಲಾಹಗಲಿಗೆ ಗುಡ್ಡೆ ಹಾಕಿದಎಚ್ಚರದ ಬೂದಿಯಲ್ಲಿರೆಪ್ಪೆ ಮುಚ್ಚದ ಇರುಳುಉದುರಿಸಿದ ಕಂಬನಿಒದ್ದೆ ಮಾಡಿದಎದೆಯ ರಂಗಸ್ಥಳದಲ್ಲಿನಿನ್ನ ನೆನಪುಗಳ ಹೆಜ್ಜೆ ಹೂತುಚುಚ್ಚಿ ಚುಚ್ಚಿ ಕೊಲ್ಲುವ ಸಂತಾಪ…!! ನೀನುಹುಕ್ಕುಂ ಕೊಟ್ಟ ಮೇಲೇನಾನುನಿನ್ನೊಲವ ಗದ್ದೆಯಲಿ ಹೆಜ್ಜೆ ಊರಿದ್ದುಮತ್ಯಾಕೆ ಸುಳ್ಳು […]

ನನಗೂ ನಿನ್ನಂತಾಗ ಬೇಕಿತ್ತು!

ಕವಿತೆ ಅನಿತಾ ಪಿ. ತಾಕೊಡೆ ನನಗೂ ನಿನ್ನಂತಾಗಬೇಕಿತ್ತುಅದೆಷ್ಟೋ ಸಲ ನಾನೂ ನಿನ್ನಂತಾಗಲು…ಎದೆಯಾಳದ ಕನಸಿನ ಕಣ್ಣಿಗೆಕಪ್ಪು ಪಟ್ಟಿ ಬಿಗಿಯುತಿದ್ದೆತೀವ್ರವಾದ ಭಾವಗಳು ಎಲ್ಲೆ ಮೀರದಂತೆಇತಿಮಿತಿಯ ರೇಖೆಯನೆಳೆಯುತಿದ್ದೆ ಕೆಲವೊಮ್ಮೆ ಮಾತುಗಳು ಹಳಿ ತಪ್ಪಿದಾಗಕರಾಳ ಮೌನ ಎದೆಯನ್ನು ಸುಡುತಿತ್ತುಅಭದ್ರತೆಯ ನೆಲೆಯೊಳಗೆ ಓಲಾಡಿಸುತಿತ್ತು ಅಂದುಕೊಂಡಂತೆ ಇರಲಾಗದೆಸಣ್ಣ ತಪ್ಪು ವಿರಾಟ ರೂಪ ತಳೆದುಮೂರ್ತರೂಪಕ್ಕಿಳಿಸುವ ಛಲದಿನಕಳೆದಂತೆ ಇಳಿಯುತ್ತಲೇ ಇತ್ತು ನಿನ್ನ ಸಖ್ಯವಾದ ಮೇಲೆನಾನೆನುವ ಅಹಂಭಾವ ಬಿಗುಮಾನಎಲ್ಲವೂ ದೂರ ಸರಿದುನಿನ್ನ ಅನುನಯದೊಳು ಹೂವಾಗಿದ್ದು ಸುಳ್ಳಲ್ಲ ಬೇಕು ಬೇಡಗಳ ನಡುವಿನ ಒಳಪಂಥದಲಿಅದೆಷ್ಟೋ ಬಾರಿ ನಾನೂ ನೀನೂಸೋತು ಗೆಲ್ಲುತಿದ್ದೆವು ಕೆಲವೊಮ್ಮೆ ಮಾತು […]

Back To Top