ಅಂಕಣ ಬರಹ ಬೆಳೆದು ದೊಡ್ಡವರಾಗುವುದೆಂದರೆ ಬೆಳೆದು ದೊಡ್ಡವರಾಗುವುದೆಂದರೆ ಪ್ರಜ್ಞೆ ಮತ್ತು ಸೂಕ್ಷ್ಮತೆಗಳನ್ನು ಕಳೆದುಕೊಳ್ಳುವುದಲ್ಲ.ಹದಿಹರೆಯದಲ್ಲಿ ಮಕ್ಕಳು ಬೆಳೆಸಿಕೊಳ್ಳುವ ಮನೋಧೋರಣೆಯನ್ನ ನಂತರ ಬದಲಿಸುವುದು ಬಹಳ ಕಷ್ಟ. ಇದೇ ಕಾರಣಕ್ಕೆ ಹದಿಹರೆಯದ ಮಕ್ಕಳ ತಾಯ್ತಂದೆಯರು ಬಹಳ ವ್ಯಥಿತರಾಗುವುದು.ಮಕ್ಕಳು ಹೇಳುವ ಒಂದು ಸಣ್ಣ ಸುಳ್ಳು , ಅವರು ತೋರುವ ಒಂದು ಸಣ್ಣ ನಿರ್ಲಕ್ಷ್ಯ ತಂದೆ ತಾಯಿಗೆ ಬಹಳ ನೋವನ್ನುಂಟುಮಾಡುತ್ತದೆ. ಮಕ್ಕಳೇ ಅವರ ಜಗತ್ತು.ಮಕ್ಕಳಿಗಾಗೇ ಬದುಕು ಸವೆಸುವ ತಾಯ್ತಂದೆಯರನ್ನ ಮಕ್ಕಳು ಅರ್ಥ ಮಾಡಿಕೊಳ್ಳುವಲ್ಲಿ ಬಹಳಷ್ಟು ಸಲ ಎಲ್ಲೋ ಸೋಲುತ್ತಾರೆ. ಹಾಗೊಮ್ಮೆ ಅರ್ಥ ಮಾಡಿಕೊಂಡರೂ ಕಾಲ […]

ಸ್ವಾರ್ಥ

ಕವಿತೆ ಸ್ವಾರ್ಥ ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಗದ್ದುಗೆಯೇರಲುಹಣವನು ಎಸೆಯಿತುಗಳಿಕೆಯ ತೃಷೆಯಲಿನಶೆಯ ನೀಡಿತುಸ್ವಾರ್ಥದ ಮತವನು ಮುತ್ತಿ ಸಲಿಗೆಯ ಸುಲಿಗೆ ಮಾಡುತಒಸರುವ ಬೆವರಿನಬುತ್ತಿಯ ಕಟ್ಟಿತುನೆತ್ತರು ಹಿಚುಕಿ,ನೆಕ್ಕಿ ಕಾಡಿತುಕತ್ತಲು ಮುಕ್ಕಿ ಅನುದಿನ ಮತ್ತಿನಲಿಅಮೃತ ತುತ್ತಿನಲಿಕಡಲಾದರೂ ಕುಡಿದು,ಗತ್ತಿನಲಿ-ವಿಗತಿಯೆಡೆಗೆಒಂದನ್ಹತ್ತು ಸೇರಿಸಿತು ಸುಖದ ತಿರುಳ ಸವಿಯುತಸೇವಕನೆಂಬುದ ಮರೆಯಿತುಅಡಿಗೊಮ್ಮೆ ಜೊಳ್ಳ ನುಡಿದು,ಪರರ ಬಾದೆಯನರಿಯದೆನ್ಯಾಯ ನೀತಿ ಮಾತಾಡಿತು ಕೃತಕ ಕೀರ್ತಿಯ ಪಡೆಯಿತುವಿಕೃತ ಸೊಗದಲಿ ಹಾಡಿತುಸುಕೃತ ಭಾವವಿರದೆಅಂಬರವೇರಿಕೈ ಬೀಸಿ ಕರಗಿತು ಯಾರೋ ಬಿತ್ತಿದ ಬೀಜಹೂ-ಕಾಯಿಗಳ ಬಿಡದೆ ತಿಂದು,ಒಳಗು ಹೊರಗೂಗಿಡದ ಬುಡದನೆರಳೂ ಬಿಡದೆ,ದೈತ್ಯ ಹುಳುವಾಗಿ ಮೆರೆಯಿತು.……************************

ಮುಕ್ತಿ

ನಾಗಶ್ರೀ ಅವರ ‘ ಮುಕ್ತಿ ‘ ಕತೆ ತುಂಬಾ ಸಹನೆಯಿಂದ , ಜೀವನ ಪ್ರೀತಿಯಿಂದ ಬರೆದ ಕತೆ. ಮುಕ್ತಿ ಓದುವಾಗ ಮಾಸ್ತಿಯವರು ನೆನಪಾದರು. ನಾಗಶ್ರೀ ಕತೆ ಹೇಳುವ ಶೈಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ತರಹ. ಕುಟುಂಬ, ಜೀವನ ಪ್ರೀತಿಯ ಆಯಾಮಗಳು ಈ ಕತೆಯಲ್ಲಿವೆ.
ಕಥನ ಕಲೆ ನಾಗಶ್ರೀಗೆ ಸಿದ್ಧಿಸಿದೆ. ಯಾವ ವಸ್ತುವನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದು ಕಲಾತ್ಮಕತೆ ದಕ್ಕಿದೆ ಎನ್ನುತ್ತಾರೆ ಸಹೃದಯಿ ನಾಗರಾಜ್ ಹರಪನಹಳ್ಳಿ.
ಈ ವಾರದ ಸಂಗಾತಿಗಾಗಿ ಈ ಕತೆಯನ್ನು ಆಯ್ಕೆ ಮಾಡಿಕೊಟ್ಟಿದ್ದಾರೆ…

ಎರಡು ವಚನಗಳನ್ನು ಗಮನಿಸಿದರೆ ಎರಡು ತನ್ನ ಭಾಷೆ, ರಾಚನಿಕ ವಿನ್ಯಾಸ ಮತ್ತು ಕೇಳುಗನ ಮೇಲೆ ಬೀರುವ ಪರಣಾಮದಲ್ಲಿ ಭಿನ್ನವಾದ ಮಾರ್ಗಗಳನ್ನು ಹಿಡಿದವುಗಳೇ ಆಗಿವೆ. ಒಂದು ಪ್ರಶ್ನಾರ್ಥಕವಾಗಿ ನಡೆದರೆ, ಮತ್ತೊಂದು ಬದಲಾದ ಕಾಲ, ಸಮಾಜಕ್ಕೆ ಹಿಂದಿನ ಮೌಲ್ಯವೊಂದನ್ನು ಸಾರಿ ಹೇಳಬೇಕಾದಾಗ ಉಂಟಾದ ಖೇಧ, ಸಿಟ್ಟುಗಳು ಕೆಲಸ ಮಾಡಿವೆ. ‘ಅರಿವುಳ್ಳೊಡೆ’ ಎಂಬ ಒಂದು ಪದವನ್ನು ಬಳಸಿ ಅರಿವನ್ನು ಉಂಟುಮಾಡುವುದರ ಕಡೆಗೆ ತನ್ನ ಉದ್ದೇಶವನ್ನು ದಾಸಿಮ್ಮಯ್ಯ ಯಶಸ್ವಿಯಾಗಿ ಹಸ್ತಾಂತರ ಮಾಡಿಬಿಡುತ್ತಾನೆ, ಆದರೆ ಬಸವಣ್ಣನವರಲ್ಲಿ ಸಿಟ್ಟು, ದೋಷಣೆಗಳು ಬಂದಿವೆ

ಜೀವ ಮಿಡಿತದ ಸದ್ದು

ನಮ್ಮ ಫ್ಲಾಟಿನ ಮನೆ; ನೆಲದ ಸ್ಪರ್ಶ ಮಣ್ಣ ಘಮ, ಮರಗಳ ಸ್ನೇಹ, ಬೆಕ್ಕು ನಾಯಿಗಳ ಸಾನಿಧ್ಯ ಇಲ್ಲದ ನೆಲೆಯಾದರೂ ಇಲ್ಲಿಯೂ ಜೀವಮಿಡಿತದ ಸದ್ದಿದೆ. ಮರಗಿಡಗಳ, ತಂಗಾಳಿಯ ಸ್ಪರ್ಶವಿದೆ, ವಿಧ ವಿಧ ಹಕ್ಕಿ ಹಾಡಿನ ನಿನಾದವಿದೆ.

ಕವಿತೆ

ಜೀವನ್ಮರಣ ಯಾತನೆ ಕರುಳತುಂಬ
ಹೊರಗೋ ಭೀಕರ ಮೌನ ರುದ್ರತಾಂಡವ ಒಳಗೆ
ಜಗದ ಹೊರ ಮೈಯ್ಯನು ಗಾಳಿ ಚೂರು ಬಿಡದೆ ನೆಕ್ಕುತ್ತಿತ್ತು ಎಂಜಲಾಗದಂತೆ

‘ಅಲ್ಲಾ ಗುರೂಜಿ, ಇದೇನಿದು..? ಇಷ್ಟು ವರ್ಷಗಳ ಕಾಲ ಬೊಂಬೈಯಲ್ಲಿದ್ದು ಬಂದವರು ನೀವು ಏನೂ ಮಾಡಲಿಲ್ಲವಾ!?’ ಎಂದು ಬಾಯಿ ತಪ್ಪಿ ಅಂದವನು ತಕ್ಷಣ ನಾಲಗೆ ಕಚ್ಚಿಕೊಂಡ. ಆದರೆ ಬಳಿಕ ಅದನ್ನೇ ಸಮರ್ಥಿಸಿಕೊಂಡಂತೆ ಅವರನ್ನು ದಿಟ್ಟಿಸಿದ. ಅಷ್ಟು ಕೇಳಿದ ಏಕನಾಥರಿಗೆ ಅಲ್ಲೇ ಸತ್ತವಷ್ಟು ಹಿಂಸೆಯಾಯಿತು.

ಹೊಸ ಬಿಳಲು….!!

ಕಥೆ ಹೊಸ ಬಿಳಲು….!! ಯಮುನಾ.ಕಂಬಾರ ಚೆನ್ನವ್ವಳ ಕೈಗೆ ಹಚ್ಚಿದ BP ಮೀಟರ ತೆಗೆದು , ನರ್ಸಮ್ಮನಿಗೆ ಸುಗರ ಚೆಕ್ಕ ಮಾಡಲು  ಡಾಕ್ಟರ ‘ಕಿರಣ ‘    ಹೇಳಿದ.  ಚೆನ್ನವ್ವ ಬೆಡ್ಡ ಮೇ ಲಿಂದ ಗಡಬಡಿಸಿ ಎದ್ದು ನರ್ಸ್ಸಮ್ಮ ನನ್ನೇ ನೋಡತೊಡಗಿದಳು. ನರ್ಸ್ಸ ಕೈಯಲ್ಲಿ  ಚಿಕ್ಕದೊಂದು ಸೂಜಿಯಿತ್ತು ಅದರ ಮೇಲೆ ಅಂಟಿಸಿದ ಹಾಳೆ ಮಾಸಿತ್ತು. ಅದರ ಮೇಲೆ  ಅಲ್ಲಲ್ಲಿ ಕಂದು ಕಪ್ಪು ಕಲೆಗಳೂ ಇದ್ದವು . ಚೆನ್ನವ್ವ ತನ್ನ  ಮೈಯ ಶಕ್ತಿಯನ್ನೆಲ್ಲಾ ಒಂದುಗೂಡಿಸಿಕೊಂಡು   ” ಸೂಜಿ,  ಹೊಸದಿದ್ದ್ರ ಚುಚ್ಚರಿ …..” […]

ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ದಿನಾರಾತ್ರಿ ನೆನಪುಗಳ ಕಾಡಾಟ ಅತಿಯಾಗಿ ನಾಳೆಯಿಂದವಳ ಮರೆಯಬೇಕು ಅನ್ಕೋತೇನೆಇವಳಿಂದೆನಾಗಬೇಕಿದೆ ಈ ಮನಸಿಗರಾಯಳ ಸಹವಾಸವೇ ಬಿಟ್ಟು ಬಿಡಬೇಕು ಅನ್ಕೋತೇನೆ ಸಿಟ್ಟು ಸೆಡವು ದು:ಖ ಸೊಕ್ಕು ಸ್ವಾಭಿಮಾನ ನೆನಪಾಗಿ ಕ್ಷಣ ಹೀಗಂದುಕೊಂಡಿರುತ್ತೇನೆಅವಳು ಕೊಟ್ಟ ಕಂಫರ್ಟಲಿ ಶುಭರಾತ್ರಿ ಹೇಳಿ ಮನಸಾರೆ ಮರೆಯದಿರಬೇಕು ಅನ್ಕೋತೇನೆ ಬೆಳಿಗ್ಗೆ ಎದ್ದೊಡನೆ ಹಿಂದಿನದೇನು ನೆನಪಿಡದೆ ಹೃದಯದಿ ಶುಭೋದಯ ಹೇಳಿರುತ್ತೇನೆಮಾತು ಕಥೆ ಯಥಾ ರೀತಿ ಪ್ರೀತಿ ಮೂಗಿನ ತುದಿಯ ಕೋಪವಿರಬೇಕು ಅನ್ಕೋತೇನೆ ಅನುನಯದ ಮಾತಿಗಿಂತ ಕೋಪತಾಪದ ಮಾತು ತುಸು ಜಾಸ್ತಿ ಆಗಿದೆಯೇನೋಆದರೇಕೋ ಬಿಟ್ಟೆನೆಂದರೂ ಬಿಡದೀ […]

Back To Top