ಕಥಾಗುಚ್ಛ

ಕಥಾಯಾನ

ಮೇರಿಯ ಮಕರಸಂಕ್ರಮಣ ವೇಣುಗೋಪಾಲ್ ಸ್ನಾನ ಮುಗಿಸಿ ಉದ್ದ ಕೂದಲಿಗೆ ಟವಲ್ ಸುತ್ತುಕಟ್ಟಿ ಕನ್ನಡಿಯ ಎದುರು ಬೆತ್ತಲೆ ನಿಂತವಳಿಗೆ ನವಯೌವನದ ಉಮ್ಮಸ್ಸೊಂದು ದೇಹದ ಪ್ರತಿ ಅಂಗಗಳಲ್ಲೂ ಹೊಮ್ಮಿದಂತೆ ಕಾಣುತಿತ್ತು. ಆ ಅನಿರೀಕ್ಷಿತ ಮಿಲನದ ಘಳಿಗೆಯನ್ನು ಮೆಲುಕು ಹಾಕುತ್ತ ನಿಂತುಬಿಟ್ಟಳು, ಕೆಲವು ವರ್ಷಗಳೇ ಕಳೆದಿದ್ದೋ ಗಂಡನ ಅಗಲಿಕೆಯ ನಂತರ ದೇಹ ಸುಖ ಕಂಡು.! ಅನಿರೀಕ್ಷಿತವೆಂಬಂತೆ ವಾರಪೂರ್ತಿ ಸುರಿದ ಇಳೆ ಮಳೆಯಾಟದೊಳಗೆ ಅವರಿಬ್ಬರ ರತಿಕಾಮದಾಟವೂ ಮುಗಿದಿತ್ತು..! ಅವನು ಎಂದಿನಂತೆ ಸಂಜೆಯ ನಾಲ್ಕು ಘಂಟೆಗೆ ಬರುತ್ತಿದ್ದವನು ಸ್ವಲ್ಪತಡವಾಗಿ ಬಂದಿದ್ದ..! ಮೊಗವೇಕೋ ಬಾಡಿದಂತಿತ್ತು.! ಹೊರಗೆ […]

Read More
ಕಥಾಗುಚ್ಛ

ಕಥಾಯಾನ

ರಾಮರಾಯರು ಜಿ. ಹರೀಶ್ ಬೇದ್ರೆ  ರಾಮರಾಯರು ರಾಮರಾವ್ ಹಾಗೂ ಸುಲೋಚನ ರವರಿಗೆ ಮೂರು ಹೆಣ್ಣು, ಒಂದು ಗಂಡು ಮಗು. ಹೆಣ್ಣುಮಕ್ಕಳೇ ಹಿರಿಯರು, ಮಗ ಕೊನೆಯವನು. ರಾಯರು ಅತ್ಯಂತ ನೇರ ನುಡಿಯ ವ್ಯಕ್ತಿ. ಸರಿ ಇದ್ದರೆ ಸರಿ, ತಪ್ಪಾಗಿದ್ದರೆ ಅವರು ಎಷ್ಟೇ ದೊಡ್ಡ ವ್ಯಕ್ತಿ ಆಗಿದ್ದರು ಮುಲಾಜು ನೋಡದೆ ತಪ್ಪನ್ನು ಹೇಳಿ ನೀರಿಳಿಸುತ್ತಿದ್ದರು. ರಾಯರದು ಖಾಸಗಿಯವರ ಬಳಿ ಕೆಲಸ, ಆದಾಯ ಕಡಿಮೆ. ಆದರೂ ನಾಲ್ಕು ಮಕ್ಕಳನ್ನು ಚೆನ್ನಾಗಿಯೇ ಓದಿಸಿದ್ದರು.  ಮೂರನೆಯವಳ  ಮದುವೆಯಾಗಲಿಕ್ಕೂ  ಇವರ ಆರೋಗ್ಯ ಕೈಕೊಟ್ಟು ಮನೆಯಲ್ಲೇ ಉಳಿದರು. ಮಗನ […]

Read More
ಅಂಕಣ

ಅವ್ಯಕ್ತಳ ಅಂಗಳದಿಂದ

ಅವ್ಯಕ್ತಳ ಅಂಗಳದಿಂದ ಅವ್ಯಕ್ತ ಎಲ್ಲಾ ಮಕ್ಕಳ ರಿಸಲ್ಟ್ ಗಳು ಒಂದಾದಮೇಲೊಂದು ಮೆಸೇಜ್ ಗಳಾಗಿ ನನ್ನ ಬಳಿ ಬರುತ್ತಿವೆ, ಕೆಲವು ಮೆಸೇಜ್ ಗಳು, ಕೆಲವು ಮುಖಗಳು, ಪ್ರಸನ್ನತೆಯ ಅಲೆಗಳು, ಸ್ವೀಟಿನ ಡಬ್ಬಗಳು, ಕೃತಜ್ಞತೆಗಳು,ಕಥೆಗಳು ಒಂದಾದಮೇಲೊಂದು ಸಿಹಿ ಸುದ್ದಿಗಳು ಎಳೆ ಎಳೆಯಾಗಿ ಹರಿದುಬಂದರೆ ನನಗೆ ಮಾತ್ರ ಮನಸ್ಸಿನಲ್ಲೊಂದು ಆತಂಕ! ಮುಖದಲ್ಲಿ ನಗುವಿದ್ದರೂ ಬಾಯಿ ತುಂಬಾ ಆಶೀರ್ವಾದಗಳಿದ್ದರೂ ಅವಳ ರಿಸಲ್ಟ್ ಏನಾಯ್ತು?! ಇನ್ನೂ ವಿಷಯ ಬರಲಿಲ್ಲವಲ್ಲ ಎಂಬುದು ಮಾತ್ರ ಮನಸಲ್ಲಿ ಬೇರೂರಿತ್ತು. ಬರುವ ಮಕ್ಕಳನ್ನೆಲ್ಲಾ ಕೇಳುವುದು “ಅವಳ ರಿಸಲ್ಟ್ ಏನಾಯ್ತು?” “ಯಾರಿಗಾದರೂ […]

Read More
ಕವಿತೆ ಕಾರ್ನರ್

ಕವಿತೆ ಕಾರ್ನರ್

ಮೂರ್ಖರು ಕು.ಸ.ಮಧುಸೂದನ ಮೂರ್ಖರುಕೋವಿಯಿಂದ ಕ್ರಾಂತಿ ಮಾಡುತ್ತೇವೆಂದು ಹೊರಟಮೂರ್ಖ ನಕ್ಸಲರು! ಧರ್ಮದಆಧಾರದ ಮೇಲೆದೇಶ ಕಟ್ಟುತ್ತೇವೆಂದು ಹೊರಟಮೂರ್ಖಮತಾಂಧರು! ಜಾತ್ಯಾತೀತಅಂತ ಹೇಳುತ್ತಾ ಜನಗಳ ಒಡೆಯುತ್ತಿರುವ ಹುಸಿಕ್ರಾಂತಿಕಾರಿಗಳು! ಇವರುಗಳ ನಡುವೆಇದ್ಯಾವ ಶಬ್ದಗಳನ್ನೂ ಕೇಳಿರದಬಡವರುತಣ್ಣಗೆಹೊಲಗದ್ದೆಗಳಲ್ಲಿಕಾರ್ಖಾನೆಗಳಲ್ಲಿಕೆಲಸ ಮಾಡುತ್ತಾದೇಶ ಕಟ್ಟುತ್ತಿದ್ದಾರೆ ಭಾಷಣಗಳ ಬೀಕರತೆಯಿಂದ ದೂರವುಳಿದು! *********

Read More
ಕಾವ್ಯಯಾನ

ಕಾವ್ಯಯಾನ

ಮಾಗಿಯ ಪದ್ಯ ಮಾಗಿಯ ಪದ್ಯ ಮಾಗಿಯ ಪದ್ಯ ಕೌದಿ ಕವುಚಿ ಕಂಬಳಿ ಹುಳುವಾದರೂ ಅಡಗಲೊಲ್ಲದ ಚಳಿ ಬೆಳಗಾಗ ಬರುವ ಚುರುಕು ಬಿಸಿಲಿನ ನೆನಪೇ ಬಿಸಿ ಹುಟ್ಟಿಸ ಬಲ್ಲದು ಒಳಗೆ ಉರಿ ಮುಖದ ಸೂರ್ಯ, ನಿನ್ನ ಆಗಮನ ಅದೆಷ್ಟು ಬೆಚ್ಚಗೆ , ಜಡ ಮಾಗಿಗೆ!!! *******************

Read More
ಕಾವ್ಯಯಾನ

ಕಾವ್ಯಯಾನ

ಸೋತ ಪ್ರೇಮಿ ಪ್ಯಾರಿಸುತ ಸೋತಪ್ರೇಮಿ ನಾನು ಸಹಿಸಲಾರದ ಸೋಲಿನೊಂದಿಗೆ ನಿಂತಿದ್ದೇನೆ. ನೀ ಬಿಟ್ಟು ಹೋದ ದಾರಿಯಲಿ ಒಬ್ಬಂಟಿಯಾಗಿ ಅಷ್ಟೇ…! ಇನ್ನೆಷ್ಟು ಬದುಕು ಉಳಿದಿದೆ ಕಾಲಮಾನ ದೂಡಲು…! ನಾವಿಬ್ಬರು ಕೂಡಿ ತೆಗಿಸಿದ ಫೋಟೋವನ್ನ ಕಟ್ಟಾಕಿಸಿ ಜೋಪಾನವಾಗಿ ಇಡಬಲ್ಲೆ…! ಆದರೆ ..? ನಿನ್ನ ಮೇಲಿರುವ ಪ್ರೀತಿ ಯಾವುದರಲ್ಲಿ ಇಡಲಿ…? ಇದ್ದೊಂದು ಹೃದಯ ಚುಚ್ಚಿ ನೀನೇ ಹಾಳು ಮಾಡಿದ್ದು ಆಗಿದೆ… ನಿನ್ನೆಲ್ಲ ಸೌಂದರ್ಯವನ್ನ ಕಣ್ಣಲ್ಲಿ ಜೋಪನವಾಗಿಸಿದ್ದೆ. ನೀ ಕೊಟ್ಟ ನೋವಿಗೆ ಕಣ್ಣೀರಾಗಿ ಹರಿದು ಹೋಗಿದೆ. ಹೇಳಿಹೋಗಬೇಕಿತ್ತು. ಇಲ್ಲವೇ …? ಮುನ್ಸೂಚನೆ ಕೊಟ್ಟಿದ್ದರೆ..? […]

Read More
ಅಂಕಣ

ಸ್ವಾತ್ಮಗತ

ಕನ್ನಡದ ಪ್ರಸಿದ್ಧ ಗಜಲ್ ಕೃತಿಕಾರ ಶಾಂತರಸ ಹೆಂಬೆರಳುರರೂ..! ಕೆ.ಶಿವು ಲಕ್ಕಣ್ಣವರ ಕನ್ನಡದ ಪ್ರಸಿದ್ಧ ಗಜಲ್ ಕೃತಿಕಾರ ಶಾಂತರಸ ಹೆಂಬೆರಳುರರೂ..! ಹಾಗೂ ಅಪ್ಪನ ಕುರಿತ ಇವರ ಮಗಳು ಭಾರತಿ ಮೋಹನ ಕೋಟಿಯವರ ಆಲಾಪನೆಯೂ..!! ಕನ್ನಡದ ಪ್ರಸಿದ್ಧ ಗಜಲ್ ಕವಿ. ಇವರು ಕನ್ನಡದ ಹೆಸರಾಂತ ಸಾಹಿತಿ. ಇವರು ೧೯೯೨ರಲ್ಲಿ ತಮಗೆ ನೀಡಲಾಗಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಭ್ರಷ್ಟ ಸರಕಾರ, ಜನೋಪಯೋಗಿಯಗಿಲ್ಲದ ಸರಕಾರದಿಂದ ಪ್ರಶಸ್ತಿ ಪಡೆಯುವುದಿಲ್ಲವೆಂದು ಹೇಳಿ ತಿರಸ್ಕರಿಸಿದ್ದರು. ಇವರು ೨೦೦೬ರಲ್ಲಿ ಬೀದರದಲ್ಲಿ ಜರುಗಿದ ೭೩ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. […]

Read More
ಅಂಕಣ

ನಾನು ಕಂಡ ಹಿರಿಯರು

ನಂಜುಂಡು ನಗು ಹಂಚಿದ ಪರಮೇಶ್ವರ: ಎಸ್. ವಿ. ಪಿ. ಡಾ.ಗೋವಿಂದ ಹೆಗಡೆ ಇಂದು ಫೆಬ್ರವರಿ ೮, ಹಲವು ರೀತಿಗಳಲ್ಲಿ ಕನ್ನಡದ ತೇರನ್ನು ಕಟ್ಟಿದ ಪ್ರೊ ಎಸ್ ವಿ ಪರಮೇಶ್ವರ ಭಟ್ಟರ ಜನ್ಮದಿನ. ಆ ಪ್ರಯುಕ್ತ ಕನ್ನಡದ ಕಟ್ಟಾಳುವಿಗೆ ನಮನಗಳನ್ನು ಸಲ್ಲಿಸುತ್ತ ಅವರ ನೆನಪಿನ ಈ ಬರಹ. ನಂಜುಂಡು ನಗು ಹಂಚಿದ ಪರಮೇಶ್ವರ: ಎಸ್. ವಿ. ಪಿ. (೧೯೧೪-೨೦೦೦) ೧೯೮೫-೮೯ರವರೆಗೆ , ಮೈಸೂರಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದಾಗ ಅಲ್ಲಿನ ತಾತಯ್ಯನವರ ವಿದ್ಯಾರ್ಥಿನಿಲಯ ‘ಅನಾಥಾಲಯ’ದಲ್ಲಿ ವಾಸವಾಗಿದ್ದೆ. ಆರ್ಥಿಕವಾಗಿ […]

Read More
ಇತರೆ

ಲಹರಿ

ಗುಬ್ಬಿಯ ಅಳಲು ತಾರಾ ಸತ್ಯನಾರಾಯಣ “ಗುಬ್ಬಿಯ ಅಳಲು”                ನನ್ನ ಸಂಸಾರದ ಹೊಟ್ಟೆ ತುಂಬಿಸಲು ನಾನು ದೂರ ಬಹುದೂರ ಬಂದರೂ ……ಎಲ್ಲಿಯೂ ನನಗೆ ಹಣ್ಣುಗಳಿರುವ ಮರಗಳೇ ಕಾಣುತ್ತಿಲ್ಲ.ಎಲ್ಲಿ ನೋಡಿದರೂ ಬರೀ ಕಟ್ಟಡ ಕೆಲವಂತೂ ಗಗನಚುಂಬಿ ಕಟ್ಟಡಗಳು ಕೆಳಗಡೆ ನೋಡಿದರೆ ಟಾರಿನ ರಸ್ತೆಗಳು ಹೋಗಲಿ ಮನೆಗಳಿರುವ ಕಡೆಯೇ ಹೋಗೋಣವೆಂದರೆ ಅಲ್ಲೂ ಕೂಡ ಮನೆಯ ಸುತ್ತ ಮುತ್ತ ಸಿಮೆಂಟಿನಿಂದ ಕೂಡಿದ ನೆಲ. ಮನೆಯ ಮುಂಭಾಗದಲ್ಲಿ ಮನೆಯ ಹಿಂಭಾಗದಲ್ಲಿ ಗಿಡಮರಗಳಿಲ್ಲ. ಎರಡು  ಮೂರು […]

Read More
ಕಾವ್ಯಯಾನ

ಕಾವ್ಯಯಾನ

ಏಕೆ ಕಾಡುವೆ ಶಾಂತಾ ಜೆ ಅಳದಂಗಡಿ ಏಕೆ ಕಾಡುವೆ ಮಾರುದ್ದ ಒಲವಿನೋಲೆ ಬರೆದು ಹೃದಯದೊಳಗೆ ನನ್ನ ಸೆಳೆದು ತಡವಿಲ್ಲದೆ ತಾಳಿಯ ಬಿಗಿದು ದೂರವಾದೆ ಬಾಳಿಗಂತ್ಯ ಬರೆದು ಮುಗ್ಗರಿಸಿ ಸಾಗಿದೆ ನನ್ನ ಬದುಕಿಂದು ಗಾಲಿಕಳಚಿದ ಗಾಡಿ ಈ ಬಾಳು ಕಣ್ಣೆವೆಯಲೆ ಕುಳಿತು ಕಾಡುವೆ ನನ್ನ ಅಳಿಸಲಾಗದ ಪ್ರೇಮಬರಹ ಬರೆದು ಹೂ ದುಂಬಿಗಳ ಒಲವಿನಾಟದಿ ಕಾಣುವೆ ನನ್ನ ನಿನ್ನ ಅನುಬಂಧ ಏಕೆ ಸರಿದೆ ನೇಪಥ್ಯಕೆ ಅವಸರದೆ ಮನೋಮಂದಿರಕೆ ಒಡೆಯನಾಗಿದ್ದೆ ದಿಗಂತದಾಚೆಗಿರುವೆ ನನ್ನ ನಿರೀಕ್ಷೆಯಲ್ಲಿ ಬಂದೇ ಬರುವೆ ಅತಿಶೀಘ್ರದಲ್ಲಿ ರಕ್ತಧಮನಿಗಳೆ ಬಿರಿವಂಥ […]

Read More