ಭಾವ ಚಿತ್ರ

ಭಾವ ಚಿತ್ರ

ಶಾಂತಾ ಕುಂಟಿನಿ ಮೇಲಿನಿಂದ ನೋಡಿದರೇತಿಳಿದೀತೇ ಅವಗುಣವೂಕೆಳಗಿಳಿದು ನೋಡಿದಾಗಒಳಗೆಲ್ಲ ಅಪಸ್ವರವೂ//೧// ಹೊರಗೆಲ್ಲಾ ನಗುಮೊಗವುಒಳಗೆಲ್ಲಾ ಬೈಗುಳವೂಅರಿತಾಗಲೆ ಮನಸುಗಳಆಂತರ್ಯ ಕಾಣುವವೂ// ಕಣ್ಣಿದ್ದರು ಕುರುಡರಂತೆನಮ್ಮದೆಲ್ಲ ವರ್ತನೆಯೂಇದು ಎಲ್ಲವು ನಮಗೇಕೆಅನ್ನುಂತಹ ಶೈಲಿಯೂ ನಿರ್ಮಲದ ಮನಸುಗಳಹುಡುಕಾಟವು ದುರ್ಲಭವುಏನಿದ್ದರು ಇಲ್ಲಿ ಎಲ್ಲವುಹೊಳಹುಗಳೇ ತೇಲಿದವು// ************* ಅದೆ ಸತ್ಯ ಎಂದಂದೂನಂಬಿರುವಾ ಜನರಿರಹರೂಪರದೆಯನು ನೀ ಸರಿಸಲುಕಂಡಿಹುದೇ ಕೆಸರೂ// ನಾಟಕವನೆ ಮಾಡುತಲೀವೇಷವನ್ನೇ ತೊಡುವರೂನಂಬಿ ನೀನು ಹೋದರಲ್ಲಿಹಳ್ಳವನೇ ತೋಡುವರೂ//

ಒಂದು ಮರ ನೂರು ಸ್ವರ

ಪುಸ್ತಕಸಂಗಾತಿ ಒಂದು ಮರ ನೂರು ಸ್ವರಭಾರತೀಯ ಸಣ್ಣಕಥೆಗಳುಎನ್ ಎಸ್ ಶಾರದಾಪ್ರಸಾದ್ಸಂಚಯ ಪ್ರಕಾಶನ ಈ ಪುಸ್ತಕ ಮುದ್ರಣದ ಹಂತದಲ್ಲಿದ್ದಾಗ ಶಾರದಾಪ್ರಸಾದರು ತೀರಿಕೊಂಡಿದ್ದು ದುಃಖದ ವಿಷಯ. ಅವರು ತಮ್ಮ ಬರವಣಿಗೆಯ ಬದುಕಿನುದ್ದಕ್ಕೂ ಆಯ್ದು ಪೋಣಿಸಿದ ಕಥೆಗಳಿವು. 1981 ರಿಂದ 2014 ರ ತನಕದ ಅವರ ಎಲ್ಲಾ ಅನುವಾದಿತ ಚೆಂದದ ಕತೆಗಳು ಇಲ್ಲಿವೆ. ರಾಜಾಜಿ (ಚಕ್ರವರ್ತಿ ರಾಜಗೋಪಾಲಾಚಾರಿ) ಅವರ, ಲೋಕನಾಯಕ ಜಯಪ್ರಕಾಶ ನಾರಾಯಣ್ ಅವರ ಅಪರೂಪದ ಕತೆಗಳೂ ಇಲ್ಲಿವೆ. ಒಟ್ಟೂ 51 ಕತೆಗಳು ಇಲ್ಲಿ ಕನ್ನಡಿಸಿವೆ‌.ಅಷ್ಟೇನೂ ಪರಿಚಿತರಲ್ಲದವರ ಕತೆಗಳೂ ಇಲ್ಲಿವೆ. ಕಳೆದ […]

ಗಝಲ್

ಮಾಲತಿ ಹೆಗಡೆ ಇಳೆಯ ಕೊಳೆಯನು ತೊಳೆದು ಹರಸಿದೆ ಮುಂಗಾರು ಮಳೆಕಂಗೆಟ್ಟ ರೈತರ ಕಣ್ಣಲ್ಲಿ ಕನಸು ಬಿತ್ತುತ್ತದೆ ಮುಂಗಾರು ಮಳೆ‌‌ ಬಿರು ಬಿಸಿಲ ಕಡು ತಾಪದಲಿ ಬೆಂದಿವೆ ಜೀವಕೋಟಿಎಲ್ಲರ ಬಾಳಿಗೆ ಭರವಸೆಯಾಗಿ ಬೀಳುತ್ತದೆ ಮುಂಗಾರು ಮಳೆ ಕಾದು ಕಾದು ಬಿರಿದ ಭುವಿಯ ತಣಿಸಲು ಬೇಕು ವರ್ಷಧಾರೆಮಣ್ಣಿನಲಿ ಅವಿತ ಬೀಜವ ಮೊಳೆಯಿಸುತ್ತದೆ ಮುಂಗಾರು ಮಳೆ ಕರಿಮುಗಿಲು ಕರಕರಗಿ ಹನಿ ಮುತ್ತಾಗಿ ಬೀಳುವುದೇ ಸೊಗಎಷ್ಟೇ ಅಬ್ಬರಿಸಿ ಬೊಬ್ಬಿದರೂ ಹಿತನಿಸುತ್ತದೆ ಮುಂಗಾರು ಮಳೆ ಮಾಲತಿಯ ಮನದಲ್ಲಿ ತುಂಬಿತ್ತು ಸಾವು ನೋವಿನ ಭೀತಿಹೊಸ ಹಸುರ […]

ಜಂಬಿಕೊಳ್ಳಿ ಮತ್ತು ಪುಟ್ಟವಿಜಿ

ಅನುಭವ ಕಥನ ಕಾಡಿನಲ್ಲಿ ಓದು ವಿಜಯಶ್ರೀ ಹಾಲಾಡಿ  ವಿಜಿ ಮತ್ತು ಅವಳಂತಹ ಆಗಿನ ಕಾಲದ ಮಕ್ಕಳು ಸಣ್ಣ ವಯಸ್ಸಿನಲ್ಲಿದ್ದಾಗ ಎದ್ದುಬಿದ್ದು ಓದುವುದೆಲ್ಲ ಏನೂ  ಇರಲಿಲ್ಲ. ಮನೆಕೆಲಸ, ಆಟ, ಹಾಡಿ-ಗುಡ್ಡಗಳ ಸುತ್ತಾಟ,   ಎಲ್ಲದರ ನಡುವೆ ಶಾಲೆಗೂ ಹೋಗಿಬರುತ್ತಿದ್ದರು!  ಪರೀಕ್ಷೆ ಬಂದಾಗ ಅಲ್ಪಸ್ವಲ್ಪ ಓದಿಕೊಳ್ಳುತ್ತಿದ್ದರು. ಹಾಗಂತ ಶಾಲೆಗೆ ಹೋಗುವುದು ಅವರಿಗೆ ಸುಲಭವೇನೂ ಆಗಿರಲಿಲ್ಲ.  ಗದ್ದೆ, ತೋಡು, ಕಾಡುಗಳಲ್ಲಿ ಮೈಲಿಗಟ್ಟಲೆ ನಡೆದು ಹೋಗಿಬರಬೇಕಿತ್ತು . ಆದರೆ ‘ಓದಿ ಓದಿ’ ಎಂದು ಶಾಲೆಯಲ್ಲೂ ಮನೆಯಲ್ಲೂ ಯಾರೂ ಅವರ ತಲೆ ತಿನ್ನುತ್ತಿರಲಿಲ್ಲ. ಹಾಗಾಗಿ ಮನಸ್ಸಾದರೆ […]

ಮನುಜ ಮತ

ಕವಿತೆ ರೇಶ್ಮಾಗುಳೇದಗುಡ್ಡಾಕರ್ ಗೆಲ್ಲ ಬೇಕಿದೆ ಕ್ಷಣ ಕ್ಷಣಕ್ಷಣಕೂಹೊಸ ಅವತಾರದಿದಂದ ಮರಳುಮಾಡುವಹನಿ ವಿಷಕೂ ಹೆಣದ ಹೊಳೆಹರಿಸುವಅಂತರಂಗದ ಯುದ್ದವ ನೆಡ ಬೇಕಿದ ಮಾನವೀಯತೆ ಸಸಿಯಬೆಳಸಿ ಉಳಿಸ ಬೇಕಿದೆ ಮನದರಹದಾರಿಯತುಂಬಾ ಪ್ರೀತಿಯನೆರಳ ಪಡೆಯಲು ಬದುಕಿನಲ್ಲಿ ಒತ್ತರಿಸಿ ಬರುವ ದುಃಖ ವ ಹತ್ತಿಕುವಬದಲು ಒರೆಸುವ ನೊಂದ ಕಣ್ಣುಗಳನುಮರೆಯುವ ನಮ್ಮೊಡಲ ಬೇನೆಯನುನಿಸ್ವಾರ್ಥ ದ ತೊಡೆತಟ್ಟಿ ಆಖಾಡಕೆಇಳಿಯುವ “ನಾನು “ಎಂಬ ಅಹಂಗೆಲ್ಲುತ ಸಾಗುವ ಬಾಳ ಪಯಣವ ಊರು ಯಾವುದಾದರೇನು ದಾರಿಯಾವುದಾದರೇನು ನಾನು ನನ್ನೋಳಗೆ ಇರುವ ನೀವು ಒಂದೇ ಅಲ್ಲವೇನು?ನಾಲಿಗೆಯ ಬಂದೂಕು ಮಾಡಿಬದುಕಿದರೆ ಮನುಷ್ಯ ತ್ವ ಉಳಿಯುವದೇನು? […]

ಗಝಲ್

ಗಝಲ್ ನೂರ್ ಸಾಘರ್ ಹಾದಿಗಳಿಂದ ಹಾದಿಗಳು ಹಾಯಿದಷ್ಟು ಕೈಮರಗಳಿವೆ ಇಲ್ಲಿ ಸಖಿಬೀದಿಗಳಿಂದ ಬೀದಿಗೆ ಬದುಕುಗಳು ಬೆತ್ತಲಾಗಿವೆ ಇಲ್ಲಿ ಸಖಿ ಜಗದ ಒಡಲು ಮನದ ಕಡಲುತಟ್ಟದಿದ್ದರೂ ಮುಟ್ಟದಿದ್ದರೂ ಔರ್ವ ಸ್ಪರ್ಶದಲೆಗಳಿವೆ ಇಲ್ಲಿ ಸಖಿ ಒಂದೇ ಒಂದು ಮಾತಿನ ಶಬ್ದಗಳು ಬಯಲಲಿ ಬಯಲಾಯಿತುಅರಿತು ಅರಿಯದ ಮರೆತು ಮರೆಯದ ಪುರಾವೆಗಳಿವೆ ಇಲ್ಲಿ ಸಖಿ ಬಾಳು ಬಿಕ್ಕಳಿಕೆಯ ಕಥೆಗಳಿವೆ ನೂರಾರು ಅನಾಥದ್ದು ಅನಾತ್ಮದ್ದು ಇನ್ನು…ತಡೆದರೂ ತಡೆಯದ ಪಡೆದರೂ ಪಡೆಯದ ನೋವುಗಳಿವೆ ಇಲ್ಲಿ ಸಖಿ ಕದವಿಲ್ಲದ ಎದೆಯನು ಪದಗಳಿಂದ ಆವರಿಸಲಾಗದುತಬಿದ ತಬ್ಬದ ಬಾಹುಗಳನು ಕಲ್ಪಿಸಲು […]

ಮುನಿಸು ಸೊಗಸು

ಕವಿತೆ ರೇಖಾ ಭಟ್ ಹೋದವಾರಮೂಲೆ ಮೂಲೆ ಹುಡುಕಿಹೊಸಕಿ ಹೊರಹಾಕಿದ ಮುನಿಸುಅದಾವ ಕಿಂಡಿಯಲ್ಲಿಒಳಸೇರಿತೋಕಾಣೆಈಗ ಮತ್ತೆ ಬಲೆ ಹಬ್ಬುತಿದೆಒಬ್ಬರಿಗೊಬ್ಬರು ಕಾಣದಷ್ಟುದಟ್ಟವಾಗಿ ಎಲ್ಲೆಲ್ಲೂಬೆಳಕಿನ ಹೂಗಳೇ ಅರಳಿದಕನಸು ಕಾಣುತ್ತಕತ್ತಲೆ ಬೇರಿಗೆನೀರೆರೆಯಲು ಮರೆತಾಗಲೇನಗು ಮಾಯಮನದ ಅರಸನಂತಿದ್ದಸರಸ ಸರಿದು ಹೋಗಿ: ಕಿರೀಟವ ಮುನಿಸು ಧರಿಸಿ ನಿಂತಿದ್ದುನಾವು ಅಡಿಯಾಳಾಗಿನಮ್ಮೊಳಗೆ ಅಡಗಿಕೊಂಡಿದ್ದು ಅವನೇ ಮಾತಾಡಲಿ ಎನ್ನುವ ನಾನುನಾನೇ ಏಕೆ ಮೊದಲು ಎಂಬುವ ಆತಇನ್ನೆಷ್ಟು ಹೊತ್ತುಅಹಮ್ಮುಗಳನ್ನೇ ಹೊದ್ದು ಮಲಗುವುದು!? ಆಗಲೇಒಳಸೆಲೆಯ ಒಲುಮೆಯಿಂದಹೊಸ ಸೂತ್ರವೊಂದು ಸಿದ್ಧವಾಗಿಪರದೆ ಸರಿಯುತ್ತದೆಓಡಿಹೋದ ಅರಸ ಮತ್ತೆಸಿಂಹಾಸನ ಏರುತ್ತಾನೆನಾವು ಕಣ್ಣಲ್ಲೇ ನಗುತ್ತೇವೆ *************

ಭಯದ ಬಗ್ಗೆ ಭಯ ಬೇಡ

ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ  ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.         ಮಕ್ಕಳು ಯಾವ ಯಾವುದೋ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ ಮಾನಸಿಕ ಸಮಸ್ಯೆ. ಭಯ ಅಂದರೇನು? ಅದು ಏಕೆ […]

ಶಾಂತಿ ಬೀಜಗಳ ಜತನ’

ಸಾಹಿತ್ಯದ ಬರವಣಿಗೆ ಗಂಭೀರವಾದಂತೆಲ್ಲಾ ಲೇಖಕರ ಜವಾಬ್ದಾರಿ ಹೆಚ್ಚುತ್ತದೆ  ಡಾ. ಪ್ರಕಾಶ ಗ. ಖಾಡೆ  ಬಾಗಲಕೋಟೆಯಲ್ಲಿ ಅಧ್ಯಾಪಕರಾಗಿರುವ ಡಾ. ಪ್ರಕಾಶ ಗಣಪತಿ ಖಾಡೆ ಅವರು ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ೧೦-೦೬-೧೯೬೫ ರಂದು ಜನಿಸಿದರು. ಓದಿದ್ದು ತೊದಲಬಾಗಿ, ಕೆರೂರ (ಬದಾಮಿ), ಇಳಕಲ್ಲ ಹಾಗೂ ಧಾರವಾಡಗಳಲ್ಲಿ, ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾಗಿ , ೨೦೦೫ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ “ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ” ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು. ಬೈಲಹೊಂಗಲ,ಚಂದರಗಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ,ಬಾಗಲಕೋಟ […]

ಕರೋನ ಮುಕ್ತ ಶಾಲೆ

ಸರಿತಾಮಧು ಎಂದಿಗೆ ಬರಲಿದೆಯೋ ಶಾಲೆಗೆ ಹೋಗಿ ನಲಿಯುವ ದಿನಗಳು ಎಂದು ಕಾತರಿಸುವ ಮಕ್ಕಳಿಗೆ ಅಪ್ಪ ಅಮ್ಮ ಇಬ್ಬರೂ ಕೆಲಸಕ್ಕೆ ಹೊರಟಾಗ ಮನೆಯಲ್ಲಿ ತಾವಷ್ಟೇ ಇರಬೇಕಾ ಎನ್ನುವ ಭಯ. ಹಾಗೆ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗುವ ಪೋಷಕರಿಗೂ ಇದೇ ಚಿಂತೆಯಾಗಿದೆ. ಬದಲಾದ ಪರಿಸ್ಥಿತಿಯಲ್ಲಿ ಶಾಲೆಗಳು ತೆರೆಯುವ ಸೂಚನೆ ಸದ್ಯಕ್ಕೆ ಇಲ್ಲವೇನೋ? ಹೀಗಿರುವಾಗ ಮಕ್ಕಳ ಕಲಿಕೆ ಹೇಗೆ ಎಂದು ಚಿಂತಿಸಿ ಆನ್ಲೈನ್ ಮೂಲಕ ಶಿಕ್ಷಣ ನೀಡುವುದು ಒಳಿತೋ ಕೆಡುಕೋ ಎಂಬ ಜಿಜ್ಞಾಸೆ ಎಲ್ಲರ ಮನದಲ್ಲೂ ಮೂಡಿದೆ.ಪ್ರಾಥಮಿಕ ಹಂತದಿಂದಲೇ ಈ […]

Back To Top