ಕಾವ್ಯಯಾನ

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ಮೌನದ ಮಾತು ಅರ್ಥವಾಯಿತು ನಿನ್ನಿಂದ ಕಾಣದ ಕನಸು ಗೋಚರವಾಯಿತು ನಿನ್ನಿಂದ ಹದವಾದ ಭೂಮಿ ಬಂಜರಾಗಿತ್ತು ನೀನಿಲ್ಲದೆ ಉತ್ತುವ ಕಾರ್ಯ ಅರ್ಥವಾಯಿತು ನಿನ್ನಿಂದ ಪ್ರೀತಿ ಹೃದಯದಿಂದ ಒಸರುತ್ತಿತ್ತು ರಸಜೇನಾಗಿ ಸವಿಯ ಸವಿವುದು ಶುರುವಾಯಿತು ನಿನ್ನಿಂದ ನೆರಳೂ ಹಿಂಬಾಲಿಸಲು ಅದುರುತ್ತಿತ್ತು ನನ್ನನ್ನು ಕಣ್ಣಲ್ಲಿ ಬೆಳಕು ಒಮ್ಮೆಲೇ ಪ್ರಜ್ವಲಿಸಿತು ನಿನ್ನಿಂದ ಕಾಯಕ್ಕೂ ಆತ್ಮಕ್ಕೂ ಹೊಂದಿಕೆ ಇರಲಿಲ್ಲ ಎನ್ನಲ್ಲಿ ಮನದೊಳಗೆ ತೇಜಸ್ಸಿರುವುದು ತಿಳಿಯಿತು ನಿನ್ನಿಂದ *******

Read More
ಅಂಕಣ

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-10 ಆತ್ಮಾವಲೋಕನಕ್ಕಿದು ಸಕಾಲ.. ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ದುಡಿಮೆ ನಿಂತರೂ ಕೃಷಿಕ್ಷೇತ್ರದಲ್ಲಿ ದುಡಿಮೆ ನಿಂತಿಲ್ಲ. ಅದನ್ನು ನಿಲ್ಲಿಸುವಂತಿರುವುದೂ ಇಲ್ಲ.ದಾಸ್ತಾನು ಮಾಡಬಹುದಾದ ಬೆಳೆ ಬೆಳೆಯುವ ರೈತರು ಈಗ ಅಷ್ಟಾಗಿ ಚಿಂತೆ ಮಾಡುತ್ತಿಲ್ಲ. ಈ ಬಿಡುವನ್ನು ಸ್ವಲ್ಪ ರಜೆಮೂಡಿನಲ್ಲಿ ಅನುಭವಿಸುತ್ತಿದ್ದಾರೆ. ತೋಟದ ಕೆಲಸವನ್ನು ನಿರ್ವ ಹಿಸುತ್ತಿದ್ದಾರೆ. ಆದರೆ ತರಕಾರಿ ಹೂವು, ಹಣ್ಣು ಬೆಳೆದವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಅಲ್ಪಾವಧಿಯಲ್ಲಿ ಬರುವ ಬೆಳೆಗೆ ಬೇಸಿಗೆಯಲ್ಲಿ ಉತ್ತಮ ಧಾರಣೆ ದೊರೆಯುತ್ತಿತ್ತು ( ಜಾತ್ರೆ ,ತೇರು […]

Read More
ಕಾವ್ಯಯಾನ

ಕಾವ್ಯಯಾನ

ನನ್ನೂರಿನಲ್ಲಿ ಎಸ್.ಕಲಾಲ್ ನೀ ಬರಲೆಂದೆ ಮರುಭೂಮಿ ಹಸಿರಾಗಿದೆ ನನ್ನೂರಿನಲ್ಲಿ.. ನೀ ನೋಡಲೆಂದೆ ಕಲ್ಲು-ಕಗ್ಗಲ್ಲು ಶಿಲೆಯಾಗಿದೆ ನನ್ನೂರಿನಲ್ಲಿ. ಪಾಳು ಮಸಣದ ಮಲ್ಲಿಗೆಯರಳಿ ಪಾವನವಾಗಿದೆ ನಿನ್ನ ಮುಡಿ ಸೇರಲೆಂದೆ ನನ್ನೂರಿನಲ್ಲಿ.. ಇತಿಹಾಸದ ರಾಜ-ಮಹಾರಾಜರು ಮೆರೆದ ನೆಲ ನಿನ್ನ ಹೆಜ್ಜೆಗೆ ಕಾಯುತ್ತಿದೆ ನನ್ನೂರಿನಲ್ಲಿ.. ಆ ಆಗಸದ ಚಂದಿರನನ್ನು ಗಲ್ಲಿಗೆರಿಸಿದ್ದೇನೆ ನಿನ್ನ ಕದಿಯದಿರಲೆಂದು ನನ್ನೂರಿನಲ್ಲಿ.. ನನ್ನ ಸಾವಿರ ಕನಸಿನ ಹೆಬ್ಬಾಗಿಲು ನೆಟ್ಟಿದ್ದೇನೆ ಬಲಗಾಲಿಟ್ಟು ಬಂದುಬಿಡು ನನ್ನೂರಿನಲ್ಲಿ.. ನೀ ಬರುವ ಹಾದಿಯ ಕಾದು ಕಾದು ಬೀದಿಯಲ್ಲಿ ಹೆಣವಾಗಿವೆ ಮೈಲುಗಲ್ಲುಗಳು ನನ್ನೂರಿನಲ್ಲಿ.. ನಿನ್ನ ಗೆಜ್ಜೆಯ ನಾದವ […]

Read More
ಅಂಕಣ

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಗಝಲ್ ಲೋಕ ಐದನೇ ಅದ್ಯಾಯ ಮನಸೂರೆಗೊಳ್ಳುವ ಗಜಲ್ ಗಜಲ್ ಗದ್ಯ ಮಿಶ್ರಿತ ಪದ್ಯವೇ ಗಜಲ್ ಗದ್ಯವೇ, ಪದ್ಯವೇ ಅಥವಾ ಗದ್ಯ ಮಿಶ್ರಿತ ಪದ್ಯವೇ ಎಂಬುದು ಇತ್ತೀಚಿನ ಕನ್ನಡ ಗಜಲಗಳನ್ನು ನೋಡಿದಾಗ ಸಾಕಷ್ಟು ಗೊಂದಲವಾಗುತ್ತದೆ. ಯಾಕೆಂದರೆ ಹೆಚ್ಚಿನ ಗಜಲಗಳು ಗದ್ಯ ಮಿಶ್ರಿತ ಪದ್ಯಗಳಾಗಿ ಕಂಡು ಬರುತ್ತವೆ. ಆದರೆ ಮೂಲತಃ ಗಜಲ್ ಎನ್ನುವುದು ಲಯಬದ್ಧವಾಗಿದ್ದೂ ಗೇಯತೆಯನ್ನು […]

Read More
ಕಾವ್ಯಯಾನ

ಕಾವ್ಯಯಾನ

ನಿಲ್ಲದ ಆಳಲು ಕವಿತಾ ಮಳಗಿ ಎನು ಮಾಡುವುದು.. ನಮ್ಮ್ದು ಬಾಳೆ ಹೀಗೇ ಹೇಗೆ ಸಾಧ್ಯ ನಿಮ್ಮಂತೆ ಇರಲೂ… ಬಿಸಿಲಿರಲಿ ಮಳೆಯಿರಲಿ ಅನುದಿನವು ಹೋರಾಟ ಬಾಳಿಗೆ ಅದುವೇ ಅಭ್ಯಾಸವು.. ಸುಖ ಇಲ್ಲ ಎನ್ನುವ ಮಾತು ನೋವಿನ ಸಂಗತಿ ಇದು ಸತ್ಯ ಎನು ಮಾಡಲು ಸಾಧ್ಯವಿಲ್ಲ…. ನೆಮ್ಮದಿ ಇಲ್ಲ ಕಟಿಬಿಟಿ ಜೀವನ ಕೊನೆ ಇಲ್ಲದ ಭವಣೆಗಳು ಹೇಳಲಿಲ್ಲ ಯಾರಿಗೂ….. ಧನಿಕ ನೀವೆಲ್ಲರೂ ಬದುಕಲ್ಲಿ ಶ್ರೀಮಂತ ನನ್ನ ರಾಜ್ಯದಲ್ಲಿ ನಾನು ನಾವಿಲ್ಲದೆ ಏನೂ ಇಲ್ಲ… ನಮ್ಮಿಂದ ಗುಡಿಗೋಪುರ ನಮ್ಮಿಂದ ಮನೆಮಠ.. ಆದ್ರೂ […]

Read More
ಕಾವ್ಯಯಾನ

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-10 ಅನ್ನದಾತಾ ಸುಖಿಭವ.. ಮನೆಯ ಬಾಗಿಲು ಕಿಟಕಿಗಳನ್ನು ಸದಾ ಮುಚ್ಚಿಟ್ಟರೂ ಅಡುಗೆ ಮನೆಯಲ್ಲಿ ತುಂಬಿಟ್ಟ ಡಬ್ಬಿಗಳು ಖಾಲಿಯಾದಾಗ ಬಾಗಿಲು ತೆಗೆದು ಕಿರಾಣಿ ಅಂಗಡಿಗೆ ಧಾವಿಸುತ್ತೇವೆ. ಸೊಪ್ಪು ತರಕಾರಿ ಎಂಬ ವ್ಯಾಪಾರಿಗಳ ಕೂಗು ಕೇಳುದಾಗ ಕಿಟಕಿ ಬಾಗಿಲನ್ನು ಕೊಂಚ ತೆಗೆದು ಅವರು ತಂದಿರುವ ತರಕಾರಿಯಲ್ಲಿ ನಮಗೆ ಬೇಕಾದದ್ದೇನಾದರೂ ಇದೆಯೇ ನೋಡುತ್ತೇವೆ. ಬೇಕಾದ್ದನ್ನೆಲ್ಲ ಖರೀದಿಸಿ ರುಚಿಕಟ್ಟಾಗಿ ಅಡುಗೆ ಮಾಡಿ ಉಣ್ಣುವಾಗ ನಾವು ಇವುಗಳನ್ನೆಲ್ಲ ಬೆಳೆದ ರೈತರ ಬಾಳು ತಣ್ಣಗಿರಲೆಂದು […]

Read More
ಕಾವ್ಯಯಾನ

ಕಾವ್ಯಯಾನ

ಗಝಲ್ ಎ.ಹೇಮಗಂಗಾ ನಡುರಾತ್ರಿ ಎದ್ದು ಹೋಗುವ ಮುನ್ನ ಒಮ್ಮೆ ಹಿಂತಿರುಗಿ ನೋಡಬೇಕಿತ್ತು ಯಶೋಧರೆಯ ಅಳಲ ಕೊನೆಯ ಬಾರಿಗಾದರೂ ಕೇಳಬೇಕಿತ್ತು ನೀನೇನೋ ಕಷ್ಟ, ಕೋಟಲೆಯ ಸಂಕಟ ಕಳೆಯಲು ಹೊರಟವನು ಸಂಗಾತಿಯಿರದ ಒಂಟಿ ಜೀವದ ನೋವಿಗೆ ಮಿಡಿಯಬೇಕಿತ್ತು ಸಿರಿ ಸಂಕೋಲೆ ಕಳಚಿ ಯಾರ ಗೊಡವೆಯಿರದೇ ನಡೆದುಹೋದೆ ನೀನೇ ಎಲ್ಲವೂ ಎಂದುಕೊಂಡವಳ ಬಾಳು ಬರಡು ಮಾಡಬಾರದಿತ್ತು ಧ್ಯಾನ,. ಚಿಂತನೆಗಳಲ್ಲಿ ತೊಡಗಿದವನಿಗೆ ಸಂಸಾರದ ಬಂಧವೆಲ್ಲಿ ? ನಿನ್ನನೇ ನಂಬಿದ ಜೀವವ ಧಿಕ್ಕರಿಸಿದ ಯಾತನೆ ಅರಿವಾಗಬೇಕಿತ್ತು ಗೌತಮ ಬುದ್ಧನಾಗಿ ಅರಿವಿನ ಗುರುವಾಗಿ ನಂಬಿದವರ ಉದ್ಧರಿಸಿದೆ […]

Read More
ಕಾವ್ಯಯಾನ

ಕಾವ್ಯಯಾನ

ಇಷ್ಟೇ ಸಾಕು! ಮಮತ ಕೆಂಕೆರೆ ಮನೆಯಲ್ಲಿ ಇಲ್ಲದಿದ್ದರೂ ಮನಸಲ್ಲಿ ಇದ್ದರೆ ಸಾಕು ನನಸಲ್ಲಿ ಸಿಗದಿದ್ದರೂ ಕನಸಲ್ಲಿ ಬಂದರೆ ಸಾಕು ಹೆಸರಲ್ಲಿ ಸೇರದಿದ್ದರೂ ಉಸಿರು ಮಿಡಿದರೆ ಸಾಕು ಗಳಿಸಿ ಗೌರವ ತರದಿದ್ದರೂ ಗೆಳೆಯನಾಗಿದ್ದರೆ ಸಾಕು ಇಷ್ಟವೆ ಇಲ್ಲವೆಂದಾದರೂ ಕಷ್ಟ ಕೊಡದಿದ್ದರೆ ಸಾಕು ಅಪ್ಪಿ ಮುದ್ದಾಡದಿದ್ದರೂ ಬೆಪ್ಪಳನ್ನಾಗಿಸದಿದ್ದರೆ ಸಾಕು ಜೊತೆಜೊತೆ ಸಾಗದಿದ್ದರೂ ಹಿತವ ಬಯಸಿದರೆ ಸಾಕು ಹೂನಗೆಯ ತುಳುಕಿಸದಿದ್ದರೂ ಹಗೆಯಾಗದಿದ್ದರೆ ಸಾಕು ದೇಹ-ಮೋಹ ಬೆಸೆಯದಿದ್ದರೂ ಜೀವ-ಭಾವ ಬೆಸೆದರೆ ಸಾಕು ದೂರದಲ್ಲಿ ಎಲ್ಲೋ ನೆಲೆಸಿದರೂ ಎದುರಾದಾಗ ವಾರೆನೋಟ ಸಾಕು ********

Read More
ಕಾವ್ಯಯಾನ

ಕಾವ್ಯಯಾನ

ಗಝಲ್ ತೇಜಾವತಿ.ಹೆಚ್.ಡಿ ಗರ್ಭದ ಕೊರಳ ಹಿಂಡಿ ಬಸಿದ ದ್ರವದಲ್ಲಿ ತೇಲುತ್ತಾ ಬಂದೆಯಲ್ಲ ನವಮಾಸದ ನೋವ ಒಂದೇ ಅಳುವಲ್ಲಿ ಮಾಯ ಮಾಡಿದೆಯಲ್ಲ ತಾಯ್ತನದ ಸುಖವ ಕ್ಷಣಕ್ಷಣವೂ ಸವಿದು ಪುಳಕಿತಗೊಂಡಿದ್ದೆ ಬಯಸಿದವಳು ಬಗಲಿಗೆ ಬಂದೊಡನೆ ಅಮ್ಮನ ಮಡಿಲು ಮರೆತೆಯಲ್ಲ ವೃದ್ಧಾಪ್ಯದಲಿ ನೆರಳಾಗುವೆಯೆಂದು ನೂರಾರು ಭವಿಷ್ಯದಕನಸು ಕಂಡಿದ್ದೆ ರೆಕ್ಕೆ ಬಲಿತೊಡನೆ ಗುಟುಕುಕೊಟ್ಟ ಗೂಡುತೊರೆದು ಹಾರಿಹೋದೆಯಲ್ಲ ತಾಯ ಹಾಲುಂಡ ಕೂಸಿದು ವಾತ್ಸಲ್ಯದ ಪರ್ವತವೆಂದುಕೊಂಡಿದ್ದೆ ಕರುಳಬಳ್ಳಿ ಹರಿದು ಕಿಂಚಿತ್ತು ಕರುಣೆಯೂ ಇಲ್ಲದಾಯಿತಲ್ಲ ನಿನ್ನ ಪಡೆದ ಈ ಜೀವ ಏಳೇಳು ಜನ್ಮದ ಪುಣ್ಯವೆಂದುಕೊಂಡಿದ್ದೆ ನಿತ್ಯವೂ ಮಾತೃಹೃದಯ […]

Read More
ಕಥಾಗುಚ್ಛ

ಕಥಾಯಾನ

ಈಗೊಂದು ಉತ್ತರ ಸಿಗದಾ ಪ್ರಶ್ನೆ ಸುಮಂತ್ ಎಸ್ ಅದೊಂದು ಸಂಜೆ, ನನ್ನ ಕೈಯಲ್ಲಿ ಆಕೆಯ ಕೈ ಇತ್ತು. ಕಣ್ ಮಿಟುಕಿಸದೆ, ಚಂದ್ರ ನಕ್ಷತ್ರಗಳನು ಎಣಿಸುವ ಹಾಗೆ ಆಕೆ ನನ್ನನ್ನೇ ನೋಡುತ್ತಿದ್ದಳು, ನಾನು ಆಕೆಯನ್ನು.ಸೂರ್ಯಾಸ್ತಮಾನದ  ಮೋಡಗಳಂತಾಗಿದ್ದ ಕಣ್ಣುಗಳು ನನಗೆ ಏನನ್ನೊ ಹೆಳಬೇಕೆಂದು ಚಟಪಡಿಸುತಿದ್ದನ್ನು ಕಂಡೆ. ಇದೇನು ಮೊದಲಬಾರಿಯಲ್ಲ, ಅದೆಷ್ಟೋ ಬಾರಿ ಹೀಗೆ ಏನನ್ನೊ ಹೇಳಬೇಕೆಂದು ಪ್ರಯತ್ನಿಸಿ ಸೂತಿದ್ದು ಗೂತ್ತಿದೆ ನನಗೆ,  ಅದೇ, ಅನಿಶ್ಚಿತತೆ, ನಾಚಿಕೆ,ಭಯ,ಗೂಂದಲ ಇಂದಿಗೂ ಅವಳ ಕಣ್ಣಾ ಪರದೆ ಹಿಂದಿನಿಂದ ಇಣುಕುತ್ತಲೇಯಿತ್ತು. ಎಲ್ಲಾ ನದಿಗಳು ಸೇರಿದರೂ ಒಂದೇತರನಾಗಿರುವ […]

Read More