ಅಂಕಣ ಬರಹ ಹೊಸ ದನಿ ಹೊಸ ಬನಿ-೧೨. ಚದುರಿದ ಚಿತ್ರಗಳಲ್ಲೇ ಅರಳುವ ಹೂವುಗಳಂಥ ನರಸಿಂಹ ವರ್ಮ ಕವಿತೆಗಳು ವಿಟ್ಲದ ನರಸಿಂಹ ವರ್ಮ “ಆಕಾಶದ ಚಿತ್ರಗಳು” ಹೆಸರಿನ ಕವನ ಸಂಕಲನವನ್ನು ೨೦೧೯ರಲ್ಲಿ ಪ್ರಕಟಿಸುವುದರ ಮೂಲಕ ಈಗಾಗಲೇ ಸಾಹಿತ್ಯ ಲೋಕಕ್ಕೆ ಪರಿಚಿತರಾಗಿದ್ದಾರೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾನೂನು ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಅವರ ಕವಿತೆಗಳಲ್ಲಿ ಹುಡುಕಿದರೂ ವಾದ ವಿವಾದಗಳಾಗಲೀ, ವ್ಯವಸ್ಥೆಯ ಪರ ಅಥವ ವಿರೋಧದ ನಿಲುವಾಗಲೀ ಇಲ್ಲದೇ ಇರುವುದು ವಿಶೇಷ. ಜೊತೆಗೇ ವರ್ತಮಾನದ ಸಂಗತಿಗಳಿಗೆ ಥಟ್ಟನೆ ಪ್ರತಿಕ್ರಯಿಸಿ ಪದ್ಯವೊಂದನ್ನು […]

ಮೋಹದ ಕಡಲಲ್ಲಿ…

ಕವಿತೆ ಮೋಹದ ಕಡಲಲ್ಲಿ… ಜಯಲಕ್ಷ್ಮೀ ಎನ್ ಎಸ್ ಕೋಳಗುಂದ ಅಂಗ ಸಂಗವ ಜರೆದುಅರಿವೆ ಹಂಗನು ತೊರೆದುಬೆತ್ತಲಾದ ಅಕ್ಕಯ್ಯನಿಗೂಆತ್ಮ ಸಂಗಾತದ ಮೋಹ..! ಮಾಯೆಯ ಜಗದೊಳಗೆಈಸಿ ಗೆದ್ದ ಅಲ್ಲಮನಿಗೂಲಿಂಗದಾಲಿಂಗನದ ಮೋಹ…! ಕಾನನದ ಕಾರ್ಪಣ್ಯಗಳಅರಿವಿದ್ದೂ ಸೀತೆಯ ಬಿಡದಬಂಗಾರದ ಮೋಹ…! ಬಸುರಿ ಹೆಂಡತಿಯಕಾಡಿಗಟ್ಟಿದ ಪುರುಷೋತ್ತಮನಜನಪದದ ಮೋಹ..! ಮಡದಿಯ ಅಡವಿಟ್ಟೂಮಾತುತಪ್ಪದ ಹರೀಶ್ಚಂದ್ರನಸತ್ಯನಿಷ್ಠೆಯ ಮೋಹ..! ಗೆದ್ದ ರಾಜ್ಯವ ಒದ್ದುತಪೋನಿರತನಾದವನಿಗೂಜಿತನಾಗುವ ಮೋಹ…! ಸಾವಿನ ಬಾಗಿಲಿನಲಿ ನಿಂತಅರಿವಿದ್ದೂ ಫಣಿಕೇತನನಿಗೆಛಲಮೆರೆವ ಮೋಹ..! ತುಂಡು ಅರಿವೆಯ ಮಂಡಿಯ ಮೇಲೆಸುತ್ತಿಕೊಂಡ ಫಕೀರನಿಗೆಮುಕ್ತಿ ಕೊಡಿಸುವ ಮೋಹ…! ಮೋಹವ ಗೆದ್ದೂ ಗೆಲ್ಲದನಿರ್ಮೋಹಿಗಳೂಮೋಹದ ಕಡಲೊಳಗಿನಆಣಿಮುತ್ತುಗಳಾದರು….!! **************************************

ಅವ್ಯಕ್ತ

ಕವಿತೆ ಅವ್ಯಕ್ತ ಡಾ.ಪ್ರೀತಿ. ಕೆ. ಎ  ಹೇಳಿಬಿಡಬಹುದಿತ್ತು ನಾನುನಿನ್ನ ಪ್ರತಿಯೊಂದು ಮಾತುನನ್ನಲ್ಲಿ ಅನುರಾಗದ ಅಲೆಗಳನ್ನುಎಬ್ಬಿಸುವುದೆಂದು ನಿನ್ನ ಸಾಮೀಪ್ಯವು ನನಗೆಎಷ್ಟೊಂದು ಮುದನೀಡುವುದೆಂದು ಹೇಳಿಬಿಡಬಹುದಿತ್ತು ನಾನುನಿನ್ನ ಹೊಗಳಿಕೆಯೊಂದುಇಂದಿಗೂ ಕೂಡನನ್ನ ಕೆನ್ನೆಯ ರಂಗೇರಿಸುವುದೆಂದು ನನ್ನ ನಗೆಯ ಹಿಂದಿನಕಾರಣವು ನೀನಷ್ಟೇಆಗಿರುವೆಯೆಂದು ಹೇಳಿಬಿಡಬಹುದಿತ್ತು ನಾನುನಿನ್ನ ಒಂದೇ ಒಂದು ಸ್ಪರ್ಶನನ್ನೊಳಗಿನ ಭಾವ ತಂತಿಯನ್ನುಮೀಟುವುದೆಂದು ನಿನ್ನ ಬಾಹುಗಳಲ್ಲಿನನ್ನನ್ನೇ ನಾನುಕಳೆದುಕೊಳ್ಳುತ್ತೇನೆಂದು ಹೇಳಿಬಿಡಬಹುದಿತ್ತು ನಾನುನೀನು ನನ್ನೊಡನಿದ್ದ ಕ್ಷಣನನಗೆ ಮತ್ತೇನೂನೆನಪಾಗುವುದಿಲ್ಲವೆಂದು ಎದೆ ಬಡಿತ ನಿಲ್ಲುವ ತನಕನನ್ನ ಹೃದಯ ನಿನ್ನ ಹೆಸರನ್ನಷ್ಟೇಕೂಗುವುದೆಂದು ಆದರೂ ಹೇಳಲಿಲ್ಲಏಕೆಂದರೆ ನನಗೆ ಗೊತ್ತುನಿನ್ನೆಡೆಗಿನ ನನ್ನ ಪ್ರೀತಿಹೇಳಿದರಷ್ಟೇ ನಿನಗೆ ಗೊತ್ತಾಗುವಷ್ಟುಬಲಹೀನವಲ್ಲವೆಂದು […]

ಅವಲಕ್ಕಿ ಪವಲಕ್ಕಿ

ಮಕ್ಕಳ ಕಥೆ ಅವಲಕ್ಕಿ ಪವಲಕ್ಕಿ ಗಿರೀಶ ಜಕಾಪುರೆ –                       ಅವಲಕ್ಕಿ ಪವಲಕ್ಕಿ             ಕಾಂಚಣ, ಮಿಣಮಿಣ             ಡಾಮ್ ಡೂಮ್ ಟಸ್ ಪುಸ್ಸ             ಕೋಯ್ ಕೊಟಾರ್             ಅವಲಕ್ಕಿ ಪವಲಕ್ಕಿ             ‘ಸಿರಿ ಟೀಚರ್ ಬಹಳ ಚೆಂದ ಹಾಡು ಹೇಳ್ತಾರೆ’ ಎಂದ ಚಿಂಟೂ ರಮಿಯತ್ತ ನೋಡುತ್ತ.             ‘ಅಷ್ಟೇ ಅಲ್ಲ ಮಾರಾಯಾ, ಎಷ್ಟು ಚೆಂದ ಡಾನ್ಸ್ ಹೇಳಿಕೊಡ್ತಾರೆ, ನೋಡು’ ಎಂದ ರಮಿ. ವಿಷಯ ಉತ್ಸಾಹದ್ದಾಗಿದ್ದರೂ ಅವನ ದನಿ ಏಕೋ ಸಪ್ಪಗಿತ್ತು.             ಚಿಂಟೂಗೆ ಅವಲಕ್ಕಿ […]

ಅಂಕಣ ಬರಹ ಕತೆಗಾರ್ತಿ ಆಶಾ ಜಗದೀಶ್ಮುಖಾಮುಖಿಯಲ್ಲಿ “ಹೆಣ್ಣು ನನ್ನ ಬರಹದ ಮೂಲ ಕಾಳಜಿ” ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ಉತ್ತರ: ಕವಿತೆಯನ್ನು ನಾನು ಬರೆಯುತ್ತೇನೆ ಎನ್ನುವುದು ತಪ್ಪಾಗುತ್ತದೆ. ಕವಿತೆಗಳೇ ನನ್ನಿಂದ ಬರೆಸಿಕೊಳ್ಳುತ್ತವೆ ಎನ್ನುವುದು ಸರಿ. ನನ್ನೊಳಗೆ ಅಂತಹುದೊಂದು ತೀವ್ರತೆಯನ್ನು ಇಟ್ಟುಕೊಳ್ಳದೆ ಬರೆಯುವುದು ನನಗೆ ಕಷ್ಟ. ಕವಿತೆ ಹುಟ್ಟುವ ಕ್ಷಣ ಯಾವುದು ? ಉತ್ತರ: ಯಾವ ಕ್ಷಣವಾದರೂ ಸರಿ ಅದು ನನ್ನನ್ನು ಕಾಡಬೇಕು. ಸತಾಯಿಸಬೇಕು. ಇನ್ನು ಬರೆಯದೆ ಉಳಿಯಲಾರೆ ಅನ್ನಿಸುವಂತೆ ಮಾಡಬೇಕು. ಆಗ ಮಾತ್ರ ಕವಿತೆ ಹುಟ್ಟುತ್ತದೆ. ಹಾಗಾಗಿ […]

ಬರಗೂರರೆಂಬ ಬೆರಗು

ಲೇಖನ ಬರಗೂರರೆಂಬ ಬೆರಗು ಮಮತಾ ಅರಸೀಕೆರೆ ಪ್ರೊ.ಬರಗೂರು ರಾಮಚಂದ್ರಪ್ಪನವರ ಬಗ್ಗೆ ಬರೆಯುವುದೆಂದರೆ ಸಾಗರಕ್ಕೆ ಸೇರುವ ನದಿಗಳನ್ನು ಎಲ್ಲೋ ಕುಳಿತು ಎಣಿಸಿದಂತೆ.ಯಾವುದೇ ಉತ್ಪ್ರೇ  ಕ್ಷೆಯಿಲ್ಲದ ಮಾತುಗಳಿವು ಎಂದು ಅವರನ್ನು ಸನಿಹದಿಂದ ಬಲ್ಲವರಿಗೆಲ್ಲಾ ಚಿರಪರಿಚಿತ.ಅವರ ಹತ್ತು ಹಲವು ಮಜಲುಗಳ ವೈವಿಧ್ಯ ಚಟುವಟಿಕೆಗಳನ್ನು ಸಾಮಾನ್ಯವಾಗಿ ಎಲ್ಲರೂ ಬಲ್ಲರು.ನಾನಿಲ್ಲಿ ಬರಗೂರು ಸರ್ ಬಗ್ಗೆ ಅಕಾಡೆಮಿಕ್‌ ಅಲ್ಲದ ಕೆಲವೇ ಸರಳ ಮಾತುಗಳಲ್ಲಿ ಬರೆಯಲು ಪ್ರಯತ್ನಪಡುವೆ. ಬರಗೂರರನ್ನ ಕಂಡಿದ್ದು ಪತ್ರಿಕೆಗಳಲ್ಲಿ ಅಂಕಣಗಳ ಮೂಲಕ.ಸಾಮಾನ್ಯವಾಗಿ ಆಯ್ದ ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಲೇಖನ, ಅಂಕಣಗಳನ್ನು ತಪ್ಪದೇ ಓದುತ್ತಿದ್ದೆ.ಬಿ.ಆರ್.ಬರಹಗಳನ್ನು ಮೆಚ್ಚುತ್ತಿದ್ದೆ.ನಂತರ ಅಲ್ಲಿಲ್ಲಿ […]

ಪ್ರಕೃತಿ

ಕವಿತೆ ಪ್ರಕೃತಿ ಭಾಗ್ಯ ಸಿ ಮನುಜ ಜೀವನದ ಅವಿಭಾಜ್ಯ ಅಂಗ ಪ್ರಕೃತಿಜತನದಲಿ ಕಾಪಾಡಿಕೊಳ್ಳುವುದಾಗಬೇಕು ನಮ್ಮ ಪ್ರವೃತ್ತಿಗಾಳಿ,ಬೆಳಕು,ನೀರು ಎಲ್ಲಾ ಪ್ರಕೃತಿಯ ಒಡಲಲಿ ನಗುತಿರೆಮನುಜನ ಜೀವನವು ವಜ್ರದಂತೆ ಹೊಳೆಯುತ್ತಿರೆ ವಿಪರೀತ ಬಯಕೆಗೆ ಪರಿಸರ ಬಲಿಪ್ರಾಣಿ ಪಕ್ಷಿಗಳ ಆಸರೆಗಿಟ್ಟ ಕೊಡಲಿಸಣ್ಣ ಮಳೆಗೂ ಕುಸಿಯುತ್ತಿದೆ ಬೆಟ್ಟ ಗುಡ್ಡಜಲಪ್ರಳಯ, ಚಂಡಮಾರುತ ಸೀಳಿದೆ ಅಡ್ಡಡ್ಡ ಬಳಲಿಕೆ ನಿವಾರಣೆಗೆ ಬೇಕು ನೀರುಪಂಚಭೂತಗಳ ನಿರ್ವಹಣೆ ಹೊತ್ತವರಾರುಪ್ರಕೃತಿಯ ಒಡಲ ಸೀಳಿ ತಲೆಯೆತ್ತಿವೆ ಕಟ್ಟಡಗಳುಅವೈಜ್ಞಾನದ ಫಲವಾಗಿ ಉರುಳುತ್ತಿವೆ ತಲೆಗಳು ಅಪ್ಪಿಕೋ ಚಳುವಳಿಯ ರೂವಾರಿ ತಾಯಿಹದಿನೇಳನೆ ಶತಮಾನದ ಅಮೃತಾದೇವಿ ಬಿಷ್ಣೋಯಿಅಧಿಕಾರವಲ್ಲ ಅಸ್ತಿತ್ವವಿದೆ ನಮಗೆ […]

ನಕ್ಷತ್ರ ನೆಲಹಾಸು

ಕವಿತೆ ನಕ್ಷತ್ರ ನೆಲಹಾಸು ಸ್ವಭಾವ ಕೋಳಗುಂದ ನಕ್ಷತ್ರಗಳ ಹಾದಿಗುಂಟ ಹಾಸಿಸಿಂಗರಿಸಿ ನಿನ್ನ ಕೊಳಲ ಪಾದನೆನಪಿನೆದೆಯ ತುಳಿಯಲಾಶಿಸಿದೆ ಅರ್ಧ ಕತ್ತಲಲಿ ಎದ್ದು ಹೊರಟುನಿನ್ನ ತಬ್ಬಲಿ ಮಾಡಿನಾ ಬುದ್ಧನಾಗಲಾರೆ ಈ ಹಾದಿಗಳೆಲ್ಲಾಎಷ್ಟೊಂದು ಆಮಿಷ ಒಡ್ಡುತ್ತಿವೆಹೃದಯ ಬಂಧಿಯ ಮುಕ್ತಿಗಾಗಿ ನನ್ನೊಳಗಿನ ಸೀತಾಮೀನ ಮೊಟ್ಟೆಯ ಕಾವಲಲಿಸಾವಿರ ಸಂತತಿಯ ಬೆಳಕು ನನ್ನ ಅಸ್ತಿತ್ವದ ಬಿಂದುವಿಗೆನಿನ್ನೊಲವಿನ ಮೊಲೆಹಾಲ ಸ್ಪುರಣಭರವಸೆಯ ಮುತ್ತ ಮಣಿಹಾರ ಹಿಮ ಮಣಿಯ ಮರಳಿನಮರೀಚಿಕೆಯ ಸಾಗರಪಾರಿಜಾತದ ಪರಿಮಳದ ಸಂದೇಶ ಹನಿ ಬೀಜಕ್ಕೆ ಸಾವಿರ ಸಂತಾನನೆಲದ ನಾಲಗೆಯಲಿಸಾವಿನ ಸಂಚಾರಿ ಹಸಿ ಮಣ್ಣ ಮೈಯೊಳಗೆಕನಸ ಕಲ್ಪನೆಯ ಕೂಸುಬಿತ್ತಿ […]

ಹೀಗೇಕೆ ನನ್ನವ್ವ ?

ಲೇಖನ ಹೀಗೇಕೆ ನನ್ನವ್ವ ? ಸುಮಾ ಆನಂದರಾವ್       ಇಂದೇಕೆ ನನ್ನವ್ವ ಪದೇ ಪದೇ ನೆನಪಾಗುತ್ತಿದ್ದಾಳೆ? ಅವಳೇಕೆ ಹಾಗಿದ್ದಳು?                  ಜೆರ್ಮನಿಯಲ್ಲಿ  ಒಬ್ಬ  ವಯೋ ವೃದ್ಧೆಯ ಪರಿಚಯವಾದಂದಿನಿಂದ ಗಮನಿಸುತ್ತಿದ್ದೇನೆ.  ಅವಳ ದಿಟ್ಟತನ ಅಚ್ಚರಿ ಉಂಟುಮಾಡುತ್ತಿದೆ. ಅವಳು ತನ್ನೆಲ್ಲಾ  ಕರ್ತವ್ಯ ಮುಗಿಸಿದ್ದಳು, ಮಕ್ಕಳನ್ನು ಓದಿಸಿ ಅವರ ಕಾಲಮೇಲೆ ಅವರು ನಿಲ್ಲುವ ಹಾಗೆ ಮಾಡಿದ್ದಾಳೆ. ಆಗಾಗ ಮಕ್ಕಳು ಬಂದು ಹೋಗುತ್ತಿರುತ್ತಾರೆ. ತೊಂಬತ್ತು ವರ್ಷಆದರೂ ತನ್ನ ಕೆಲಸ ತಾನೇ ಮಾಡಿಕೊಳ್ಳುತ್ತಾಳೆ, ಕೈಯಲ್ಲಿ ಕೋಲು  ಹಿಡಿದು ಸಣ್ಣ ನೂಕುವ ಗಾಡಿಯಲ್ಲಿ ಅಗತ್ಯ ವಸ್ತುಗಳನ್ನು […]

ಅಂಕಣ ಬರಹ ಅಲೆಯ ಮೊರೆತ ಅಲೆಯ ಮೊರೆತ( ಕಾದಂಬರಿ)ತಮಿಳು ಮೂಲ : ಕಲ್ಕಿಅನುವಾದ : ಶಶಿಕಲಾ ರಾಜಪ್ರ : ಸಾಹಿತ್ಯ ಅಕಾಡೆಮಿಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೪೨೦ಪುಟಗಳು : ೬೯೨ ವಾಸ್ತವವಾದಿ ಶೈಲಿಯಲ್ಲಿರುವ ಈ ಕಾದಂಬರಿಯು ಒಂದು ಕಾಲ್ಪನಿಕ ಕಥೆಯನ್ನು ವಸ್ತುವಾಗಿ ಹೊಂದಿದ್ದರೂ  ಭಾರತಕ್ಕೆ ಸ್ವಾತಂತ್ರ್ಯ   ಸಿಗುವ ಮೊದಲು ನಡೆದ ಎಲ್ಲ ಸಂಗತಿಗಳನ್ನೂ ಐತಿಹಾಸಿಕ ಸತ್ಯಗಳೊಂದಿಗೆ ಯಥಾವತ್ತಾಗಿ ನಿರೂಪಿಸುತ್ತದೆ.         ಪಟ್ಟಾಮಣಿಯಮ್ ಕಿಟ್ಟಾವಯ್ಯರ್, ಸರಸ್ವತಿ ಅಮ್ಮಾಳ್, ಪದ್ಮಾಚಲ ಶಾಸ್ತಿç ಅಯ್ಯರ್, ಕಾಮಾಕ್ಷಿ ಅಮ್ಮಾಳ್, ದೊರೆಸ್ವಾಮಿ […]

Back To Top