ಅನುವಾದ ಸಂಗಾತಿ

ಅನುವಾದ ಸಂಗಾತಿ

ಛೇ.. ಕನ್ನಡ ಮೂಲ:ದೀಪ್ತಿ ಭದ್ರಾವತಿ. ಇಂಗ್ಲೀಷಿಗೆ:ಸಮತಾ ಆರ್ ಛೇ ಪಕ್ಕದ ಕೋಣೆಯಲ್ಲಿಯೇ ಇದ್ದ ಬಾಡಿಗೆದಾರನೊಬ್ಬಹೇಳದೆ ಕೇಳದೆ ರಾತ್ರಿಹೊರಟು ಹೋಗಿದ್ದಾನೆ ನಾಪತ್ತೆಯಾಗಿದ್ದಾನೆನನ್ನ ಪುಟ್ಟ ಮಗಳಜೀನ್ಸ್ ಪ್ಯಾಂಟನ್ನು ಹರವುವಾಗಲೆಲ್ಲಕೆಂಪು ಕಣ್ಣಿನಲಿ ನೋಡಿ“ಸರಿಯಿಲ್ಲ ಸರಿಯಿಲ್ಲ”ಎನ್ನುತ್ತ ದಢಾರನೆ ಬಾಗಿಲು ಹಾಕಿಶತಪಥ ತಿರುಗುತ್ತಿದ್ದವ ಹಗಲಿರುಳೂ ನಮ್ಮ ಮನೆಯ ಕಡೆಯೇ ದಿಟ್ಟಿಸುತ್ತಬಾಗಿಲಲ್ಲಿ ಕೂತುಅವನ ಸಂಕಟ ನೋಡಲಾಗದೆ” ನಿನಗ್ಯಾಕೊ ನಮ್ಮಗಳ ಉಸಾಬರಿ”ಎಂದಿದ್ದೆದನಿ ಜೋರಾಯಿತೋ ಏನೋಎದೆಯೊಳಗೆ ಅದೆಷ್ಡು ಮಾತುಗಳಿದ್ದವೊಒಂದನ್ನು ಹೇಳಿಕೊಳ್ಳದೆಮನೆಯ ಗೋಡೆಯ ತುಂಬೆಲ್ಲಮಸಿಯಲ್ಲಿ ಗೀಚಿ ಹೋಗಿದ್ದಾನೆ ಅದೆಷ್ಟು ಕೋಪವ ಎದೆಯ ಪುಪ್ಪಸದಲಿಅಡಗಿಸಿಕೊಂಡಿದ್ದನೊಮನೆಯ ಹೆಂಚು ಕಿಟಕಿಬಾಗಿಲುಎಲ್ಲವನ್ನು ಮುರಿದು ಹಾಕಿದ್ದಾನೆಒತ್ತಿ ಹೋಗಿದ್ದಾನೆಸಾಕಷ್ಡು […]

ಅಂಕಣ ಬರಹ ಕಬ್ಬಿಗರ ಅಬ್ಬಿ  ರಾಗದ ಬೆನ್ನೇರಿ ಬಂತು ಭಾವನಾ ವಿಲಾಸ ಕರ್ನಾಟಕ ಸಂಗೀತದಲ್ಲಿ’ ಕದನ ಕುತೂಹಲ’ ಅನ್ನೋ ರಾಗ ಇದೆ. ಈ ರಾಗದ ಸ್ವರಗಳನ್ನು ಸಾಕಷ್ಟು ವೇಗವಾಗಿ ಹಾಡುತ್ತಾರೆ. ಸಮುದ್ರಮಥನದ ಸಮಯದಲ್ಲಿ ಆಕಡೆ ರಾಕ್ಷಸರು,ಈ ಕಡೆ ದೇವತೆಗಳು ಅಮೃತಕ್ಕಾಗಿ ಕಡಲನ್ನು ಕಡೆಯುವಾಗಲೂ, ಎರಡೂ ವಿರುದ್ಧ ಪಂಗಡಗಳ ನಡುವೆ ಕದನವೇ. ಮನಸ್ಸೊಳಗೂ ಅಷ್ಟೇ, ಯಾವುದೇ ಹೊಸ ಆವಿಷ್ಕಾರದ ಬೆಣ್ಣೆ ಮೂಡುವುದು, ವಿರುದ್ಧ ಚಿಂತನೆಗಳ ಮಂಥನದಿಂದಲೇ. ಈ ರಾಗವನ್ನು ನೀವು ಆಲಿಸುವಾಗ ಒಂದು ಮಂಥನದ ಅನುಭವ ಆಗುತ್ತೆ. ರಾಗ […]

ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಅರಳಿದ ಸುಮ ದೇವರಿಗೆ ಅಪಿ೯ತವಾಗಲಿ ಬಾಡುವ ಮುನ್ನವೀಣೆ ತಂತಿ ಮೀಟಿ ಶ್ರುತಿ ಸರಾಗವಾಗಲಿ ಹಾಡುವ ಮುನ್ನ ಜಗದ ನಿಂದೆ ಅಪಹಾಸ್ಯ ಗಳಿಗೆ ನೊಂದು ಅನುಮಾನಿಸದಿರುಜೀವಿಗಳ ಪ್ರೀತಿ ಬೆಸುಗೆ ಗಟ್ಟಿಯಾಗಲಿ ಕೂಡುವ ಮುನ್ನ ನೆರಳಿರದ ಹಾದಿಯಲಿ ಬದುಕಿನ ಬಂಡಿ ಸಾಗಿದೆ ಅನವರತಬಾಳಿನ ಕಹಿ ನೆನಪ ದಿನಗಳು ಮರೆಯಾಗಲಿ ಕಾಡುವ ಮುನ್ನ ವಿರಹ ದಳ್ಳುರಿಯಲಿ ನಿತ್ಯ ದಹಿಸುತಿವೆ ಪ್ರೇಮಿಗಳ ಉಸಿರುಅನುರಾಗ ಚುಂಬನಕೆ ಹೃದಯ ಹಗುರಾಗಲಿ ಬೇಡುವ ಮುನ್ನ ಕೋಶ ಕೀಟಕೆ ರೆಕ್ಕೆಗಳ ಹಚ್ಚಿ ಕೊಂಡು […]

ನನ್ನಮ್ಮ

ಕವಿತೆ ನನ್ನಮ್ಮ ಶೃತಿ ಎಸ್.ಗೌಡ ನನ್ನಮ್ಮ ಸೀತೆಯಲ್ಲ ಸಾವಿತ್ರಿಯಲ್ಲಕೈ ಹಿಡಿದ ಪತಿಯೊಡನೆವನವಾಸಕ್ಕೂ ಹೋಗಲಿಲ್ಲಅವನಿಗಾಗಿ ಯಮನನ್ನು ಅಡ್ಡಗಟ್ಟಲಿಲ್ಲ ಇದ್ದಲ್ಲಿಯೇ ವನವಾಸ ಮಾಡಿದವಳು ಕುಡಿದ ಮತ್ತಿನಲ್ಲಿ ನಡೆಯಲಾರದೆ ಎಡವಿ ಬಿದ್ದ ಅಪ್ಪನಿಗೆ ತನ್ನ ಹೆಗಲನ್ನು ಆಸರೆಯಾಗಿ ನೀಡಿದವಳು ನನ್ನಮ್ಮ ಆಸರೆ ಬಯಸಲಿಲ್ಲಸಂಸಾರದ ನೊಗ ಹೊತ್ತುನಮಗಾಸರೆಯಾದವಳುತಾನು ನಿಂತು ನಮ್ಮ ನಡೆಸಿತಾನು ಹಸಿದು ನಮಗುಣಿಸಿತನ್ನ ಕಣ್ಣುಗಳಲ್ಲಿಅವಳ ಕನಸುಗಳ ಕಂಡವಳುಸಂಸಾರದ ಹಾದಿಯಲ್ಲಿ ನಿಲ್ಲದೆ ನಡೆದವಳು ನನ್ನಮ್ಮ ಹೆಚ್ಚು ಕಲಿಯಲಿಲ್ಲಗುಡಿಗಳ ಗುಂಡಾರವ ಸುತ್ತಲಿಲ್ಲಸ್ವರ್ಗ ನರಕಗಳ ಕಲ್ಪನೆಯೂ ಅವಳಿಗಿಲ್ಲ ಇರುವಷ್ಟು ದಿನಬಾಳ ಕುಲುಮೆಯಲಿ ಬೆಂದವಳು ಕುಡಿತಕ್ಕೆ ಶರಣಾಗಿ […]

ಅನುವಾದ ಬರಹ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕವಿತೆ ರಘುಪತಿಸಹಾಯ್ ಫಿರಾಖ್ ಗೋರಖ್ಪುರಿ ಇವರು ಪ್ರಮುಖ ಉರ್ದುಕವಿಗಳು. ಸಾಹಿರ್ಲೂದಿಯಾನ್ವಿ,ಮಹಮ್ಮದ್ಇಕ್ಬಾಲ್‍‍ರಂತಹ ಅನೇಕ ಹೆಸರಾಂತ ಉರ್ದುಕವಿಗಳಿದ್ದ ಕಾಲದಲ್ಲಿಇವರುಉತ್ತಮಉರ್ದುಕವಿಗಳಾಗಿಪ್ರಸಿದ್ಧಿಪಡೆದರು. ಇವರ ಬೃಹತ್ಕವನಸಂಕಲನ ಗುಲ್-ಏ-ನಗ್ಮಾಕ್ಕೆ ಜ್ಞಾನಪೀಠಪ್ರಶಸ್ತಿಯುದೊರೆಯಿತು. ಇಲ್ಲಿಅನುವಾದಗೊಂಡ ಕವಿತೆಗಳು ಗಜಲುಗಳಂತೆ ಕಂಡರೂ ಗಜಲುಗಳಲ್ಲ. ಇವುಕಾವ್ಯಕಾರಣದಲ್ಲಿಬಂದವು ಕನ್ನಡಕ್ಕೆ ಅನುವಾದಿಸಿದವರು: ಆರ್.ವಿಜಯರಾಘವನ್ ಇಂದು ಸಹ ಪ್ರೀತಿಯ ಕಾರವಾನ್ ಇಂದೂ ಈಪ್ರೀತಿಯ ಕಾರವಾನ್ ಹಾದುಹೋಗುತ್ತಿದೆಈ ಮೈಲು ಮತ್ತು ಈ ಮೈಲಿಗಲ್ಲನ್ನು ಯಾವತ್ತಿನಂತೆ ನಿಮ್ಮ ದುಃಖ ಈ ಜಗತ್ತಿನಲ್ಲಿದ್ದ ಎಂದಿನ ದುಷ್ಟ ವಿಷಯವಾಗಿದೆನಮ್ಮ ಕಥೆಯನ್ನು ಇತರರು ಹೇಳುತ್ತಿದ್ದಾರೆಅದೇ […]

ಅಂಕಣ ಬರಹ ಬಸ್ ಸ್ಟ್ಯಾಂಡೆನ್ನುವ ಮಾಯಾಲೋಕ ಚಲನೆ ಎನ್ನುವ ಪದದ ನಿಜವಾದ ಅರ್ಥವೇನೆಂದು ತಿಳಿಯಬೇಕಾದರೆ ಈ ಬಸ್ ಸ್ಟ್ಯಾಂಡಿನಲ್ಲಿ ಅರ್ಧ ಗಂಟೆ ಸುಮ್ಮನೆ ನಿಂತುಬಿಡಬೇಕು; ಅವಸರದಲ್ಲಿ ಅತ್ತಿತ್ತ ಓಡಾಡುತ್ತ ಬೋರ್ಡು ಹುಡುಕುವವರನ್ನು, ಕಂಟ್ರೋಲ್ ರೂಮಿನಿಂದ ಅಶರೀರವಾಣಿಯಂತೆ ಮೊಳಗುವ ಅನೌನ್ಸ್‌ಮೆಂಟಿಗೆ ಬ್ಯಾಗನ್ನೆತ್ತಿಕೊಂಡು ಬಸ್ಸಿನೆಡೆಗೆ ಓಡುವವರನ್ನು, ಒಂದು ನಿಮಿಷವೂ ಆಚೀಚೆಯಾಗದಂತೆ ಅದೆಲ್ಲಿಂದಲೋ ಓಡಿಬಂದು ಹೊರಡುತ್ತಿರುವ ಬಸ್ಸನ್ನು ಹತ್ತಿಕೊಳ್ಳುವವರನ್ನು ಸಹನೆಯಿಂದ ಗಮನಿಸಬೇಕು! ಬಸ್ಸಿನ ಹಾಗೂ ಅದರ ಚಲನೆಯ ಹೊರತಾಗಿ ಬೇರಾವ ವಿಷಯಗಳೂ ಆ ಕ್ಷಣದ ಅಲ್ಲಿನ ಬದುಕುಗಳ ಎಣಿಕೆಗೆ ಸಿಕ್ಕುವುದಿಲ್ಲ. ಭೂಮಿ […]

ಅಂಕಣ ಬರಹ ಹಲವು ಬಣ್ಣಗಳನ್ನು ಹೊತ್ತ ಭಾವನೆಗಳ ಕೋಲಾಜ್ ಆಕಾಶಕ್ಕೆ ಹಲವು ಬಣ್ಣಗಳು (ಗಜಲ್ ಸಂಕಲನ)ಕವಿ- ಸಿದ್ಧರಾಮ ಹೊನ್ಕಲ್ಬೆಲೆ-೧೩೦/-ಪ್ರಕಾಶನ- ಸಿದ್ಧಾರ್ಥ ಎಂಟರ್‍ಪ್ರೈಸಸ್              ಇಲ್ಲಿ ಕತ್ತಲೆ ಕಳೆದು ಬೆಳಕು ಮೂಡಿಸಿದವರೆ ಸಂತ ಸೂಫಿಗಳು ಬಸವಾದಿ ಶರಣರು ಸಾಕಿ ಎನ್ನುತ್ತ ತಮ್ಮ ನೆಲದ ಗಟ್ಟಿ ದನಿಗಳನ್ನು ಉಲ್ಲೇಖಿಸಿ ಗಜಲ್‌ಲೋಕಕ್ಕೆ ಬಂದಿರುವ ಕವಿ ಸಿದ್ಧರಾಮ ಹೊನ್ಕಲ್ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಾ ಹಳಬರು. ಕಥೆ, ಕವನ, ಪ್ರವಾಸ ಕಥನ, ಪ್ರಬಂಧಗಳು ಹೀಗೆ ಹತ್ತಾರು […]

ತಲೆದಿಂಬಿನೊಳಗೆ ಅವಿತ ನಾ

ಕವಿತೆ ತಲೆದಿಂಬಿನೊಳಗೆ ಅವಿತ ನಾ ಡಾ. ರೇಣುಕಾ ಅರುಣ ಕಠಾರಿ ಈಗೀಗ ಸಾಕ್ಷಿಯ ಪ್ರಜ್ಞೆ ಮರೆತ ನಾಸದ್ದಿಲ್ಲದೆ ತಲೆದಿಂಬಿನೊಳಗಿನಿಂದಎದ್ದು ಎದ್ದು ಬರುವ ಕನಸಗಳಿಗೆ ಉತ್ತರ ಕೊಡಬೇಕಿದೆಪ್ರತಿ ಪ್ರಶ್ನೆಗೂ ಅದೇ ಉತ್ತರವೆಂದು ಹೇಳಿದಾಗಲೂ.ಮತ್ತೆ ಅಂತರಾತ್ಮದ ಹೊನಲು ಕೇಕೆ ಹಾಕುತ್ತದೆ. ಕಾಡುವ ಕನಸುಗಳು ಘಳಿಗೆಗೆ ಒಮ್ಮೆನೆನಪಿನ ನೀರುಣಿಸಿ ಈಗೀಗ ಸಾಕುತ್ತಿದ್ದೇನೆ.ಹರಿದು ಬರುವ ನೀರಿಗೆ ಆಣೆಕಟ್ಟು ಕಟ್ಟಿದಂತೆ,ನದಿಯನ್ನು ದಾಟಲು ಸೇತುವೆಯಂತೆ,ಕ್ಷಣಕ್ಷಣವೂ ಉಸಿರು ನುಂಗಿ, ಜೀವಿಸಿ.ಮೊಳಕೆ ಒಡೆದ ಸಸಿಯಂತೆ, ಹೂವು ಅರಳಿಸುವಂತೆಮತ್ತೆ ನನಗೆ ನಾನೇ ಸಾಕ್ಷಿ ರೂಪವಾಗಿ ಬದುಕುತ್ತಿದ್ದೇನೆ ಕನಸಿಗಾಗಿ. ಜೊತೆಯಾಗಿ ಬರುತ್ತೇನೆ,ಉಸಿರಿಗೆ […]

ಮರ್ದಿನಿ ಆಗಲಿಲ್ಲ

ಕವಿತೆ ಮರ್ದಿನಿ ಆಗಲಿಲ್ಲ ಡಾ.ಶಿವಕುಮಾರ್ ಮಾಲಿಪಾಟೀಲ ನಾಲ್ಕಾರು ಜನರು ಅತ್ಯಾಚಾರಕ್ಕೆ ಮುಂದಾದಾಗಮನಿಷಾ,ಮಹಿಷಾಸುರ ಮರ್ದಿನಿ ಆಗಲಿಲ್ಲ ನಿನ್ನ ಗರ್ಭದಲ್ಲಿ ಹುಟ್ಟಿದರೂನಿನ್ನನ್ನು ಗರ್ಭಗುಡಿಗೆ ನಿಷೇಧಿಸಿದಾಗ ಹೆಣ್ಣುಕಾಳಿಯಾಗಲಿಲ್ಲ ವರದಕ್ಷಿಣೆಗಾಗಿ ಅವಮಾನಿಸಿಹಿಂಸೆ ಕೊಟ್ಟುಕೊಲೆ ಮಾಡುವಾಗ ಹೆಣ್ಣುದುರ್ಗೆ ಆಗಲಿಲ್ಲ ಹೆಣ್ಣು ಬೇಡವೆಂದುಭ್ರೂಣವನ್ನು ಗರ್ಭದಲ್ಲೇಕತ್ತರಿಸಲು ಬಂದಾಗ ಹೆಣ್ಣು ಚಾಮುಂಡಿ ಆಗಲಿಲ್ಲ ಮಹಾ ಗ್ರಂಥಗಳಲ್ಲಿ ಮರುಳಾಗಿಕಲೆ ,ಶಿಲೆಗಳಲ್ಲಿ ಗೊಂಬೆಯಾಗಿಗುಡಿ ಗುಂಡಾರದಲ್ಲಿ ಕುಂಕುಮ ಭಂಡಾರವಾಗಿ ಹೆಸರಿಗೆಅರ್ಧ ನಾರೇಶ್ವರಿ…ಆಗಿದ್ದು ಮಾತ್ರ ದೇವದಾಸಿ. ಕಾಡು ಮೇಡುಗಳಲ್ಲಿಚೆಲ್ಲಿದ ಹೆಣ್ಣಿನ ರಕ್ತದ ಕಲೆಗಳನ್ನು ನೋಡಿಭೂ ತಾಯಿ ಬಿರುಕೊಡೆಯಲಿಲ್ಲಗಂಗೆ,ತುಂಗೆ,ಕಾವೇರಿ,ಗೋದಾವರಿ ಎಲ್ಲಾ ಹೆಣ್ಣುಹೆಸರಿನ ನದಿಗಳು ಬರಿದಾಗಲಿಲ್ಲ ಸಾಕ್ಷಿಗಳಿದ್ದರೂಅಪರಾಧಿಗಳಿಗೆ […]

‘ಜೈ ಜವಾನ್, ಜೈ ಕಿಸಾನ್’

ಲೇಖನ ‘ಜೈ ಜವಾನ್, ಜೈ ಕಿಸಾನ್’ ಜಯಘೋಷದ ಲಾಲ್ ಬಹಾದ್ದೂರ್ ಶಾಸ್ತ್ರಿ ಇಂದು ಮಹಾತ್ಮ ಗಾಂಧಿ ಹುಟ್ಟಿದ ದಿನವೂ ಹೌದು. ಹಾಗೆಯೇ ಲಾಲ್ ಬಹಾದ್ದೂರ್ ಶಾಸ್ತ್ರೀಯ ಹುಟ್ಟು ಹಬ್ಬವೂ ಹೌದು. ಗಾಂಧಿ ಸ್ಮರೀಸಿ, ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಸ್ಮರಣೆ ಮಾಡದೇ ಬಿಟ್ಟರೆ ಅದು ಮಹಾ ತಪ್ಪಾಗುತ್ತದೆ. ಇಬ್ಬರೂ ರಾಷ್ಟ್ರದ ಹಿತ ಚಿಂತಕರು, ಆ ಕಾರಣಕ್ಕೆ ಈ ಇಬ್ಬರ ಒಂದೇ ದಿನದ ಹುಟ್ಟು ಹಬ್ಬದ ಸ್ಮರಣೆಯನ್ನು ಮಾಡೋಣ… ಇತರರಿಗೆ ಹೋಲಿಸಿದರೆ, ರಾಷ್ಟ್ರದ ಅತ್ಯುನ್ನತ ಹುದ್ದೆಗೆ ಹೊಸಬರಾಗಿದ್ದರೂ ಸಹ, 1965ರಲ್ಲಿ […]

Back To Top