ಕಾವ್ಯಯಾನ

ಕಾವ್ಯಯಾನ

ಗುಳಿಗೆ ಮಾರುವ ಹುಡುಗ ಅರುಣ್ ಕೊಪ್ಪ ಇವನು ಬ್ಯಾಗ್ ಹೊತ್ತು ಬೆವರು ಬಿತ್ತಿ ಜಿಪ್ಪು ಸರಿಸುತ್ತಾ ಸ್ಯಾಂಪಲ್ ಹಂಚುವ ಡಾಕ್ಟರ್ ಛೆಂಬರ್ ಲಿ ದಿನವೂ ಜ್ಞಾನಾರ್ಜನೆಯಂತೆ! ಸರತಿ ಸಾಲಿನಲ್ಲಿ ಮಾತು ಬರದವ ಹೊಡೆಯಲು ಹೋಗುತ್ತಲೇ… ಕಾಲು ಕಿತ್ತು ಬೇರೆ ವೈದ್ಯರ ಭೇಟಿಗೆ ಗೀಳಿಡುತ್ತಾನೆ ಇವ ಗುಳಿಗೆ ಮಾರುವ ಹುಡುಗನಂತೆ ಒಳ ಸೇರಿಸಿದ ಅಂಗಿ, ಕಪ್ಪು ಸೊಂಟದ ಪಟ್ಟಿ ಶೂ ಕೂಡ ಹೊಳೆವ ಹಾಗೇ ರೋಗಿಗಳು ಮತ್ತಷ್ಟು ಹಿಡಿ ಶಾಪ ಹಾಕುವ ಉತ್ತೇಜನ ನೀಡುವ ಹಾಗೇ ಅವನ ಡ್ರೆಸ್ […]

ಅನುವಾದ

ವಸಂತನಾಗಮನ ಮೂಲ ತೆಲುಗು ರಚನೆ: ಗುಂಟೂರು ಶೇಷೇಂದ್ರಶರ್ಮ ಗುಂಟೂರು ಶೇಷೇಂದ್ರ ಶರ್ಮಾ ಬಿ.ಏ.ಬಿ.ಯಲ್ 1927 -2007 ತೆಲುಗು ಸಾಹಿತ್ಯದಲ್ಲಿ ಜನಪ್ರಿಯ ಕವಿ ಯುಗಕವಿ ಎಂದು ಹೆಸರುಗಳಿಸಿದವರು. ಇವರು ಕವಿ, ವಿಮರ್ಶಕ ಹಾಗೂ ಬರಹಗಾರರು.1994 ರಲ್ಲಿ ಇವರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಇವರು ನೋಬಲ್ ಬಹುಮಾನಕ್ಕೂ ಭಾರತದಿಂದ ನಾಮಿನೇಟ್ ಆಗಿದ್ದರು. ಇವರ ಹಲವಾರು ರಚನೆಗಳು ಕನ್ನಡ, ಇಂಗ್ಲೀಷು ಹಿಂದೀ ಉರ್ದೂ ಬೆಂಗಾಲೀ ನೇಪಾಲಿ ಹಾಗೂ ಗ್ರೀಕ್ ಭಾಷೆಗಳಿಗೂ ಅನುವಾದಗೂಂಡಿವೆ ಕನ್ನಡಕ್ಕನುವಾದ: ನಾರಾಯಣ ಮೂರ್ತಿ ಬೂದುಗೂರು ಹೂಗಳು ತುಟಿಯರಳಿಸಿವೆ […]

ಕಾವ್ಯಯಾನ

ಜೀವಾತ್ಮ ಕೊಟ್ರೇಶ್ ಅರಸೀಕೆರೆ ಯಾವುದೋ ಹಕ್ಕಿ ಹಾಕಿರುವ ಈ ಹಿಕ್ಕೆ ಈಗ ಸಸಿಯಾಗಿದೆ! ಉದರಾಂಬರದ ಕಾರಣ ನುಂಗಿ,ನೀರು ಕುಡಿದುದೆಲ್ಲಾ ಏನೆಲ್ಲಾ ಸಕಾರಣಗಳಿಗೆ ಕಾರಣ!! ಜಗಕ್ಕೆ ಬಿದ್ದ ಕಿರಣ,ಮೇಲಿಂದ ಬಿದ್ದ ನೀರ ಬಿಂದು,ಸುಯ್ಯನೇ ಬೀಸುವ ಗಾಳಿ…… ಯಾವ ಯಾವುದಕ್ಕೆ ಸಂಬಂಧ!! ಅಲ್ಲೊಂದು ಜೋಡಿ ಹಕ್ಕಿ, ಇಲ್ಲೊಂದು ಮಿಲನ, ನಳ ನಳಿಸುತ್ತಿರುವ ಹೂ… ಒಂಟಿಯಾಗಿ ಯಾವುದೋ ಶಿಖರ ತೇಲಿ ಹೋಗುತ್ತಿರುವ ಮೋಡಗಳು ಯಾವ ದಂಡಯಾತ್ರೆಗೆ……. ಜೀವ ಇರಲೇಬೇಕಿಲ್ಲ ಚಲನೆಗೆ ಸೃಷ್ಟಿಯ ಸಾರ ಯಾರು ಹೀರಿದ್ದಾರೆ? ಯಾರೋ ಮೇಲೋ ಯಾರ ವಿಜಯ? […]

ಶಿಕ್ಷಣ

ಶಿಕ್ಷಣದ ಸವಾಲುಗಳ ಬೆಟ್ಟು ಯಾರ ಕಡೆಗೆ? ಶೃತಿ ಮೇಲಿಸೀಮೆ ಶಿಕ್ಷಣ ಎನ್ನುವುದು ಸಾಮಾಜಿಕ ಸಂರಚನೆಯಲ್ಲಿ ಮಹತ್ವದ ಪರಿವರ್ತನೆ ತರುವ ದಿವ್ಯಾಸ್ತ್ರವಾಗಿದೆ. ಈ ಶಿಕ್ಷಣವು ಮುಂದಿನ ಪೀಳಿಗೆಗೆ ಹಿಂದಿನ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವಾಸ್ತವಿಕ ಮಾಹಿತಿಗಳನ್ನು ನೀಡುತ್ತಾ, ಯುವ ಪೀಳಿಗೆಯಲ್ಲಿ ಉತ್ತಮ ಆಲೋಚನೆ, ಭಾವನೆ, ನಿರಂತರತೆಯನ್ನು ಬೆಳೆಸುವ ಗುರುತರ ಜವಾಬ್ದಾರಿಯನ್ನು ಹೊತ್ತಿದೆ. ಪೂರ್ವ ಭಾರತದಲ್ಲಿ ವಿದ್ಯಾವಂತರಿಗಿಂತ ಹೆಚ್ಚಾಗಿ ಜ್ಞಾನವಂತರು,ಸುಶಿಕ್ಷಿತರು ಇದ್ದರು. ಪ್ರಸ್ತುತ ಎಷ್ಟೇ ಪದವಿಗಳನ್ನು ಹೊತ್ತಿದ್ದರೂ ಅವರು ಪಡೆದ ವಿದ್ಯೆ ಅವರಿಗೆ ವಿನಯವನ್ನು ನೀಡುತ್ತಿಲ್ಲ . ‘ಶಿಕ್ಷಣ’ ಎಂದರೇನು? […]

ಕಾವ್ಯಯಾನ

ಮಲ್ಲಿಗೆ-ಸಂಪಿಗೆ ಅನು ಮಹಾಲಿಂಗ ಅಂಗಳದಿ ಹರಡಿತ್ತು ಹಸಿರಿನ ಮಲ್ಲಿಗೆ ಚಪ್ಪರ ಮಳೆಹೊಯ್ದು ತಂಪಾಗೆ ಸೊಂಪಾದ ಹಂದರ ಬಳ್ಳಿಯ ತುಂಬೆಲ್ಲ ಮಲ್ಲಿಗೆ ಹೂ ರಾಶಿ ಸಂಜೆಗೆ ಕೊಯ್ದರೆ ಮನೆತುಂಬ ಘಮ ಸೂಸಿ ಮನದೊಡೆಯ ತಂದಿರುವನು ಘಂಗುಡುವ ಮಲ್ಲಿಗೆ ನಾರಿಯ ಮುಡಿಯೇರಿ ನಗುತಿರಲು ಮೆಲ್ಲಗೆ ಹಿತ್ತಲ ಮರದಲ್ಲಿ ಬಿರಿದಾಳು ಸಂಪಿಗೆ ಘಮನವಾ ಸೂಸ್ಯಾಳು ಸುತ್ತೆಲ್ಲಾ ಸುಮ್ಮಗೆ ಬಾಲೆಯ ಮನ ಸೆಳೆಯೊ ಗಗನದ ಸಂಪಿಗೆ ಮುಡಿಸೇರಿಸಲು ಪರದಾಟ ಪಕ್ಕದ ಮನೆ ಕೆಂಪನಿಗೆ ಮಲ್ಲಿಗೆ ಸಂಪಿಗೆ ಪ್ರತ್ಯೇಕ ರಾಣಿಯರುಅವರವರ ಕಕ್ಷೆಯಲಿ ಅವರವರೆ ಬೀಗುವರು. […]

ಕಾವ್ಯಯಾನ

ಪ್ರಶ್ನೋತ್ತರ ರತ್ನನಂದಿನಿ (ಲತಾ ಆಚಾರ್ಯ) ಪ್ರೀತಿ ಅಂದರೇನು ಕೇಳಿದಳು ಅವಳು ಉತ್ತರಿಸದೆ ನಾನು ಸೊಸೆಯ ಕಡೆಗೊಮ್ಮೆ ಕೈಯ ತೋರಿಸುತ ಮುಗುಳ್ನಗೆಯ ಬೀರಿದೆ ಅರ್ಥವಾಗಿರಬೇಕು ಈಗ  ಆಕೆಗೆ  ಅಮ್ಮ ಮಗುವಿಗೆ ತುತ್ತು ಉಣ್ಣಿಸುತ್ತಿದ್ದಳು. ಸ್ನೇಹವೆಂದರೇನು ಮತ್ತೊಂದು ಪ್ರಶ್ನೆ ಈಗಲೂ ನಾನು ಮೌನ ದಿಟ್ಟಿಸಿದಳು ನನ್ನ  ಗೆಳೆಯನೋರ್ವನು ಬಂದು ಹೇಗಿರುವೆ ಎಂದನು ಮತ್ತದೇ ಅಸೌಖ್ಯ ತೋರಿದರೆ ಹೆದರದಿರು ನಾನಿರುವೆ ಜೊತೆಯಲ್ಲಿ ಎಂದಾಗ ಆಕೆ ಮೌನವಾಗಿದ್ದಳು. ಬೆಸುಗೆ ಎಂದರೇನು ಕೇಳಿದಳು ಈ ಬಾರಿ ಏನು ಹೇಳಲಿ ನಾನು ಮಾತು ಬಾರದು ನನಗೆ […]

ಭಾಷೆ

ಮರಳಿ ಮರಳಿ ಬರಲಿದೆ  ರಾಜ್ಯೋತ್ಸವ…… ಗಣೇಶ  ಭಟ್ಟ ಶಿರಸಿ ಪ್ರತಿ ವರ್ಷವೂ ನವೆಂಬರ್  ಮೊದಲನೇ ತಾರೀಕಿಗೆ  ಕನ್ನಡಿಗರಿಗೆ  ಸಂಭ್ರಮ. ಕನ್ನಡ ಭಾಷಿಕ  ಪ್ರದೇಶಗಳೆಲ್ಲವೂ ಸೇರಿ ಒಂದೇ ರಾಜ್ಯವಾದ  ದಿನ- ಕನ್ನಡದ ಹಬ್ಬವನ್ನು  ಅದ್ಧೂರಿಯಾಗಿ  ಆಚರಿಸುವ  ಹೊಸ ಹೊಸ  ವಿಧಾನಗಳನ್ನು  ಕನ್ನಡ  ಪ್ರೇಮಿಗಳು ಆವಿಷ್ಕರಿಸುತ್ತಿದ್ದಾರೆ.  ಕಿಲೋ ಮೀಟರ್‌ಗಳಷ್ಟು  ಉದ್ದದ ಕನ್ನಡ ಧ್ವಜದ ಮೆರವಣಿಗೆ , ಕನ್ನಡ ಪರ ಹಾಡುಗಳ  ಹಿನ್ನೆಲೆಯಲ್ಲಿ  ಕುಣಿತ, ಸ್ತಬ್ಧ ಚಿತ್ರಗಳ ಮೆರವಣಿಗೆ  ಇತ್ಯಾದಿ ಇತ್ಯಾದಿ…  ಆದರೆ  ಕನ್ನಡಿಗರ ಪಾಡು ಅಮಾಯಕತೆ, ಬಡತನ, ಶೋಷಣೆ,   […]

ಭಾಷೆ

ಭಾಷಾ ಮಾಧ್ಯಮವಲ್ಲ, ಶೈಕ್ಷಣಿಕ ವ್ಯವಸ್ಥೆಯೇ ಬದಲಾಗಬೇಕು! ಡಿ.ಎಸ್.ರಾಮಸ್ವಾಮಿ ಕರ್ನಾಟಕವನ್ನು ಕಾಡುತ್ತಿರುವ ಹಲವು ಸಮಸ್ಯೆಗಳ ನಡುವೆ ಭಾಷೆ, ಭಾಷಾ ಮಾಧ್ಯಮ, ಭಾಷೆಯ ಬಳಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಯ ಮಾತುಗಳ ಸುತ್ತ ಹಬ್ಬಿಕೊಂಡಿರುವುದು ಭಾವನಾತ್ಮಕ ಅಂಶಗಳಾಗಿರುವುದರಿಂದ ಈ ವಿಷಯವನ್ನು ಕುರಿತಂತೆ ಹೊಸ ಚಿಂತನೆಗಳೇ ಸಾಧ್ಯವಾಗದ ಸ್ಥಿತಿಯಲ್ಲಿ ನಾವಿದ್ದೇವೆ. ನಮ್ಮನ್ನು ಕಾಡುತ್ತಿರುವ ನದಿ ನೀರಿನ ವಿಚಾರವೂ ಭಾವನಾತ್ಮಕವಾಗಿಯೇ ನಮ್ಮನ್ನು ಇಕ್ಕಟ್ಟಿಗೆ ತಳ್ಳಿರುವ ಸತ್ಯ ನಮ್ಮ ಮುಂದೆ ಢಾಳಾಗಿಯೇ ಇದೆ. ಈ ನೆಲದಲ್ಲಿ ತೀವ್ರ ಸ್ವರೂಪದ ಆಂದೋಲನಗಳೇನಾದರೂ ನಡೆಯುವುದಾದರೆ ಅದು ಕನ್ನಡ-ಕನ್ನಡತನ […]

ಕಥಾಗುಚ್ಛ

ವೃದ್ದಾಶ್ರಮ ಎಂಬ ಬೆಳಕು. ಸುಮಾ ಉಮೇಶ್ ಗೌಡ ಮೊಮ್ಮಕ್ಕಳು  ಶಾಲೆಗೆ ಹೋದ್ರು,  ಮಗ ಸೊಸೆ ಕೆಲಸಕ್ಕೆ ಹೋದ್ರು, ಬಾಗಿಲು ಭದ್ರ  ಪಡಿಸಿದ  ರಾಯರು ಪತ್ನಿಯ ಫೊಟೋ ನೋಡುತ್ತಾ  ಕುಳಿತರು  ಏಕಾಂಗಿ ಆಗಿ…    ಗಂಡು ಎಷ್ಟೆ ದರ್ಪದಿಂದ ಇದ್ರು ಪತ್ನಿ  ಮರಣಿಸಿದ ಮೇಲೆ ಹಲ್ಲು ಕಿತ್ತ ಹಾವಿನಂತೆ,  ಯಾರಿಗೆ ಬುಸುಗುಡಿದ್ರು  ಹೇದರಿಕೊಳ್ಳೊರು ಯಾರು..? ರಾಯರ ಬದುಕು ಇದಕ್ಕೆ ಹೊರತಾಗಿರಲಿಲ್ಲ…    ಸದಾ ಚಟುವಟಿಕೆ  ಇಂದ ಇರುವ ರಾಯರಿಗೆ, ನಿವೃತ್ತಿ ಅನ್ನೋದೇ  ಶಾಪವಾದ್ರು,  ಪತ್ನಿಯ ನಗು ಮುಖ,  ಹುಸಿ […]

ಕಾರ್ಟೂನ್ ಕೋಲ್ಮಿಂಚು

ಡಾ.ಎನ್.ಸುಧೀಂದ್ರ ಪರಿಚಯ: ಕನ್ನಡ  ಸ್ನಾತಕೋತ್ತರ ಪದವಿ. .”ಕನ್ನಡ ರೇಡಿಯೋ ನಾಟಕಗಳು” ವಿಷಯದಲ್ಲಿ ಕುವೆಂಪುವಿ,ವಿ ಯಿಂದ ಡಾಕ್ಟರೇಟ್. ಆಕಾಶವಾಣಿಯಲ್ಲಿ ಕಾರ್ಯಕ್ರಮ ಅಧಿಕಾರಿ ಯಾಗಿ ಸೇವೆ. ಈಗ ವಿಶ್ರಾಂತ ಸ್ಪಂದನಟೀವಿಚಾನಲ್ ಶಿವಮೊಗ್ಗ ,ಇದರಲ್ಲಿ ಕಾರ್ಯಕ್ರಮ ಮುಖ್ಯಸ್ಥರಾಗಿ  ಸೇವೆ. ಮಲೆನಾಡು ಮೀಡಿಯ ವೆಬ್ ಪೋರ್ಟಲ್ ಸಂಪಾದಕರಾಗಿ ಸೇವೆ

Back To Top