Category: ನಿಮ್ಮೊಂದಿಗೆ

ನಿಮ್ಮೊಂದಿಗೆ

ನಿಮ್ಮೊಂದಿಗೆ

ಪ್ರಿಯ ಬರಹಗಾರರಿಗೆ ಪ್ರಿಯರೆ ಆರಂಭದ ಅಡಚಣೆಗಳನ್ನು ದಾಟಿಸಂಗಾತಿ ಬ್ಲಾಗ್ ಐದನೆ ತಿಂಗಳನ್ನು ಪೂರೈಸುತ್ತಿದೆ.ಈ ನಿಟ್ಟಿನಲ್ಲಿ ಬರಹಗಾರರಿಗೆ ಕೆಲವು ಮಾತುಗಳನ್ನುಹೇಳಲೇ ಬೇಕಿದೆ.ಮೊದಲನೆಯದಾಗಿ ಇದುವರೆಗಿನ ನಿಮ್ಮಸಹಕಾರಕ್ಕೆ ದನ್ಯವಾದಗಳು. ಮುಂದೆಯೂತಮ್ಮ ಸಲಹೆ-ಸಹಕಾರಗಳು ಹೀಗೆ ಮುಂದುವರೆಯಲೆಂದು ಬಯಸುತ್ತೇನೆ ದಯಮಾಡಿ ನಿಮ್ಮಬರಹಗಳನ್ನುತಪ್ಪಿರದೆ ಟೈಪ್ ಮಾಡಿ ಕಳಿಸಿ,ಇನ್ನು ಬರಹಗಳಪಿಡಿಎಫ್ ಮತ್ತು ಪೋಟೊಪ್ರತಿಗಳನ್ನು ಕಳಿಸಬೇಡಿ. ಈಗಾಗಲೇ ಫೇಸ್ಬುಕ್ಕಿನಲ್ಲಿ ಹಾಕಿದಬರಹಗಳನ್ನು ಕಳಿಸದೆ,ನಿಮ್ಮಹೊಸ ಬರಹಗಳನ್ನು ಕಳಿಸಿ,ಆದಷ್ಟು ಗುಣ ಮಟ್ಟದ ಬರಹಗಳನ್ನು ಕಳಿಸಿಒಂದು ಬರಹಕ್ಕು ಮತ್ತೊಂದು ಬರಹಕ್ಕು ಕನಿಷ್ಠ  ಒಂದುವಾರ ಅಂತರವಿರಲಿ.ಬರಹದ ಗುಣಮಟ್ಟದ ಬಗ್ಗೆ ನೀವೇ ಮೌಲ್ಯಮಾಪನ ಮಾಡಿಕೊಂಡು  ಪ್ರಕಟಿಸಬಹುದಾದದ್ದು ಅನಿಸಿದರೆ […]

ನಿಮ್ಮೊಂದಿಗೆ

ಕವಿ-ಕವಿತೆ ಕುರಿತು ವಿಜಯಶ್ರೀ ಹಾಲಾಡಿ ಗೆಳೆಯರೆ, ಕವಿತೆಗಳಿಗಿದು ಕಾಲವಲ್ಲವೆಂದು ಹೇಳುತ್ತಲೇ ತಮ್ಮ ಕವಿಪಟ್ಟಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತಿರುವ ಪ್ರಭಾವಿಗಳ ಕಾಲದಲ್ಲಿಯೂ ನಮ್ಮ ಹೊಸ ಕವಿಗಳು ಇನ್ನಿರದ ಉತ್ಸಾಹದಿಂದ ಕವಿತೆಗಳನ್ನುಬರೆಯುತ್ತಲೇ ಇದ್ದಾರೆ. ಬಹುಶ: ಮೂರು ವರ್ಷಗಳ ಹಿಂದೆ ನೆಚ್ಚಿನ ಕವಿಯಿತ್ರಿ ವಿಜಯಶ್ರೀ ಹಾಲಾಡಿಯವರು ಬರೆದ ಈ ಪುಟ್ಟ ಟಿಪ್ಪಣಿ ಇವತ್ತಿಗೂ ಪ್ರಸ್ತುತವಾಗಿದೆ ಹೊಸ ಕವಿಗಳು ಯಾವ ಗೊಂದಲವೂ ಇರದೆ ಬರೆಯಲು ಈ ಮಾತುಗಳು ಸ್ಪೂರ್ತಿಯಾಗಬಹುದೆಂದು ನಾನು ನಂಬಿದ್ದೇನೆ.ಅದಕ್ಕಾಗಿ ಹಾಲಾಡಿಯವರ ಈ ಬರಹ ನಿಮ್ಮ ಓದಿಗಾಗಿ. ಕು.ಸ.ಮದುಸೂದನ ಬರೆಹಗಾರರಲ್ಲಿ ೩ ವರ್ಗ. […]

ಸೂಚನೆ

ಪ್ರಿಯರೆ, ನಮಸ್ಕಾರಗಳು.ಹೊಸ ವರ್ಷದಿಂದ (2020)ಸಂಗಾತಿ ಪತ್ರಿಕೆಯನ್ನು  ಪ್ರತಿ ಬುದವಾರ ಪ್ರಕಟಿಸಲಾಗುವುದು. ಆರಂಭದ ದಿನಗಳ ಅನಿಶ್ಚಿತತೆ ಈಗ ಮುಗಿದಿದ್ದು, ವಿಶೇಷ ಮತ್ತು ಅನಿವಾರ್ಯ ಸಂದರ್ಭ ಹೊರತು ಪಡಿಸಿದಂತೆ, ವಾರಕ್ಕೊಮ್ಮೆ ಪ್ರಕಟಿಸುವ ನಿರ್ದಾರ ಕೈಗೊಳ್ಳಲಾಗಿದೆ. ಪ್ರತಿ ಗುರುವಾರದಿಂದ ಮುಂಗಳವಾರದವರೆಗು ನಮಗೆ ತಲುಪಿದ ಬರಹಗಳನ್ನು ಬುದವಾರ  ಮುಂಜಾನೆ ಪ್ರಕಟಿಸಲಾಗುವುದು-ಅಂಕಣಗಳಿಗು ಇದು ಅನ್ವಯಿಸಲಿದೆ. ಎಂದಿನಂತೆ ಬರಹಗಾರರು ಮತ್ತು ಓದುಗರು ಸಹಕರಿಸಬೇಕಾಗಿ ಕೋರುತ್ತೇವೆ,ಸಂಪಾದಕರು. ಸಂಗಾತಿ ಪತ್ರಿಕೆ

ನಿಮ್ಮೊಂದಿಗೆ

ಸಂಗಾತಿ (ಸಾಹಿತ್ಯದ ಅಂತರ್ಜಾಲ ಬ್ಲಾಗ್) ಶುರು ಮಾಡಿ ಎರಡು ತಿಂಗಳು-ಇವತ್ತಿಗೆ ಅರವತ್ತಾರು ದಿನಗಳಾದವು. ಅಂದಾಜು 40ರಿಂದ 50 ಲೇಖಕರ ಸುಮಾರು238 ಬರಹಗಳನ್ನು ಪ್ರಕಟಿಸಲಾಗಿದೆ. 16 ಸಾವಿರ ಜನ ಈ ದಿನದವರೆಗು ಪತ್ರಿಕೆಯ ಸೈಟಿಗೆ ಬೇಟಿ ನೀಡಿದ್ದಾರೆ. ಪತ್ರಿಕೆಯ ಉದ್ದೇಶ ಈಡೇರುತ್ತಿದೆಯಾ ಇನ್ನೂ ನನಗೆ ಅರ್ಥವಾಗಿಲ್ಲ.ಪತ್ರಿಕೆಯ ಗುಣಮಟ್ಟದ ಬಗ್ಗೆ ಒಂದೆರಡು ಮಾತು ಹೇಳಲೇ ಬೇಕಿದೆ, ಕೆಲವು ಹಿರಿಯ ಬರಹಗಾರರ ಜೊತೆ ಹಲವು ಹೊಸಬರಹಗಾರರೂ ಬರೆಯುತ್ತಿರುವುದರಿಂದ ಪ್ರಕಟವಾದದ್ದೆಲ್ಲ ಶ್ರೇಷ್ಠವೆಂದೊ ಇಲ್ಲ ಕಳಪೆಯೆಂದು ಜನರಲೈಸ್ ಮಾಡಿ ಬಿಡಲಾಗುವುದಿಲ್ಲ. ಇನ್ನು ಈಗಾಗಲೇಬರೆದು ಹೆಸರು […]

ಜನರನ್ನು ತಲುಪುವ ಮಾರ್ಗ

ಕು.ಸ.ಮಧುಸೂದನ ರಂಗೇನಹಳ್ಳಿ ಸಾಹಿತ್ಯಕ ಪತ್ರಿಕೆಗಳ್ಯಾಕೆ ಜನರನ್ನುತಲುಪುತ್ತಿಲ್ಲ ಮತ್ತು  ದೀರ್ಘಕಾಲ ಬದುಕುತ್ತಿಲ್ಲ?ನನಗನಿಸಿದ್ದು- ನನ್ನ ಮುಂದೆ ಕೆಲವು ಸಾಹಿತ್ಯಕ ಪತ್ರಿಕೆಗಳಿವೆ. ಬಹುತೇಕ ಅವೆಲ್ಲವೂ ಪ್ರಗತಿಪರ ಲೇಖಕರೆನಿಸಿಕೊಂಡವರ ಬರಹಗಳಿಂದಲೇ ತುಂಬಿವೆ. ಹೆಚ್ಚೂಕಡಿಮೆ ಅವವೇ  ಲೇಖಕರೇ ಎನ್ನ ಬಹುದು.ಒಂದಿಷ್ಟಾದರು ಸಾಹಿತ್ಯ ಬಲ್ಲವರಿಗೇನೆ ಅರ್ಥವಾಗದಂತಹ    ಕಠಿಣವಾದ ತೀರಾ ಗಂಭೀರವಾದ ವೈಚಾರಿಕ ಬರಹಗಳು ಅವುಗಳಲ್ಲಿವೆ.ಹಾಗೆ ನೋಡುತ್ತಾ ಹೋದರೆ   ಆ ಸಾಹಿತ್ಯ ಪತ್ರಿಕೆಗಳು ಬರಹಗಾರರು ಮತ್ತವರ ಹಿಂಬಾಲಕರುಗಳ ನಡುವೆಯೇ ಪ್ರಸಾರಗೊಳ್ಳುತ್ತಿವೆ ಎನ್ನ ಬಹುದು. ಸಾಹಿತ್ಯಕ ವಲಯದ ಆಚೆ ಇರುವ ಸಾಮಾನ್ಯ ಓದುಗರನ್ನುಅವು ತಲುಪಿಲ್ಲ ಮತ್ತುತಲುಪಲು ಸಾದ್ಯವೂ ಇಲ್ಲ. ಯಾಕೆಂದರೆ […]

ನಿಮ್ಮೊಂದಿಗೆ ಮಕ್ಕಳ ಬಗ್ಗೆ ಎರಡು ಮಾತು

ಇವತ್ತು ನವೆಂಬರ್ ಹದಿನಾಲ್ಕು ಮಕ್ಕಳದಿನಾಚರಣೆ. ಯಾರ ನೆನಪಿನಲ್ಲಿ  ಆಚರಿಸುತ್ತಿದ್ದೇವೆ ಅನ್ನುವುದಕ್ಕಿಂತ, ಹೇಗೆ ಮತ್ತು ಯಾವ ಉದ್ದೇಶಗಳನ್ನು ಇಟ್ಟುಕೊಂಡು ಆಚರಿಸುತ್ತಿದ್ದೇವೆಂಬುದು ಮಾತ್ರ ನಮಗೆ ಮುಖ್ಯವಾಗಬೇಕಿದೆ. ಮಕ್ಕಳ ದಿನದಂದು ಮಕ್ಕಳಿಂದ ನೃತ್ಯ ಮಾಡಿಸಿ, ಆಟ  ಆಡಿಸಿ, ಸಿಹಿ ಹಂಚಿ ಮಕ್ಕಳ ಬಗ್ಗೆ ಉದ್ದನೆಯ ಬಾಷಣಗಳನ್ನು ಬಿಗಿಯುವಷ್ಟಕ್ಕೆ ಈ ಆಚರಣೆಯನ್ನು ಮುಗಿಸಲಾಗುತ್ತಿದೆ. ಆದರೆ  ಮಕ್ಕಳದಿನದಂದು ಮಾತ್ರವಲ್ಲದೆ ಪ್ರತಿನಿತ್ಯವು ನಮಗೆ ಮಕ್ಕಳ ಬಗ್ಗೆ ಕಾಳಜಿ-ಪ್ರೀತಿಯಿರಬೇಕು. ಯಾಕೆಂದರೆ ಯಾವುದೇ ನಾಡಿನ ಭವಿಷ್ಯ ನಿಂತಿರುವುದು ಆ ನಾಡಿನ ಮಕ್ಕಳು ಹೇಗೆ ಪಾಲಿಸಲ್ಪಡುತ್ತಿದ್ದಾರೆ-ಬೆಳೆಸಲ್ಪಡುತ್ತಿದ್ದಾರೆ  ಎನ್ನುವುದರ ಮೇಲೆ. ಹಾಗಾಗಿ […]

ಸಂಪಾದಕರ ಮಾತು

ಕು.ಸ.ಮಧುಸೂದನರಂಗೇನಹಳ್ಳಿ           ಮೊದಲಿಗೆ ನಿಮಗೆಲ್ಲ ಬೆಳಕಿನಹಬ್ಬದ ಶುಭಾಶಯಗಳು.  ಅನಗತ್ಯ  ಖರ್ಚು ಮತ್ತು ಅಪಾಯವನ್ನು ಮೈಮೇಲೇಳೆದುಕೊಳ್ಳದೆ, ಸರಳವಾಗಿ,ಅನ್ಯರಿಗೆ ತೊಂದರೆ ಕೊಡದ ರೀತಿಯಲ್ಲಿ ಹಬ್ಬ ಆಚರಿಸಿ. ಹಬ್ಬದಂದು ಹಚ್ಚುವ ದೀಪದ ಬೆಳಕು ಮನದೊಳಗಿನ ಕತ್ತಲೆಯನ್ನೂ ಕಳೆಯುವಂತಿರ ಬೇಕು.ಆಗಲೇ ಹಬ್ಬಕ್ಕೆ ಸಾರ್ಥಕತೆ ಬರುವುದು    ಇನ್ನು ‘ಸಂಗಾತಿ’ಬಗ್ಗೆ ಏನು ಹೇಳಲಿ?ನಗರದ ಸಾಹಿತ್ಯಕ್ಷೇತ್ರದ ಕಣ್ಣು ಕುಕ್ಕುವ ಬೆಳಕಿನಿಂದ ಬಹುದೂರದಲ್ಲಿರುವ ಹಳ್ಳಿಯೊಂದರಿಂದ ಹೊರಬರುತ್ತಿರುವ  ಪತ್ರಿಕೆಗೆ ನೀವು ತೋರಿಸುತ್ತಿರುವ ಪ್ರೀತಿ ದೊಡ್ಡದೇ ಸರಿ. ಪತ್ರಿಕೆಯ ಬಗ್ಗೆ ಹಲವರ ಮೆಚ್ಚುಗೆಯಜೊತೆಗೆ ಕೆಲವು ದೂರುಗಳೂ ಇವೆ. ಅವನ್ನೂ […]

ಸಂಪಾದಕೀಯ

ಗೆಳೆಯರೆ, ಸಂಗಾತಿ ಪತ್ರಿಕೆಯನ್ನು ಕೇವಲ ರಂಜನೆಗಾಗಿ ರೂಪಿಸಿಲ್ಲ-ಜೊತೆಗೆ ಕೇವಲ ಕತೆ-ಕತೆಗಳಿಗೆ ಮಾತ್ರ ಮೀಸಲಿರಿಸಿಯೂ ಇಲ್ಲ.ಪತ್ರಿಕೆಯಲ್ಲಿ ಪ್ರಖರವಾದ ವೈಚಾರಿಕ ಲೇಖನಗಳನ್ನು,ಸಮಕಾಲೀನ ಸಮಸ್ಯೆಗಳ ಬಗ್ಗೆ ವಸ್ತುನಿಷ್ಠ ವಿಮರ್ಶಾತ್ಮಕ, ಬರಹಗಳನ್ನು ಪ್ರಕಟಿಸಬೇಕೆಂಬುದು ನಮ್ಮಬಯಕೆ. ಈ ವಿಷಯಗಳಬಗ್ಗೆ ಬರೆಯುವವರು ಸಾಕಷ್ಟು ಜನ ಲೇಖಕರಿದ್ದರೂ ಅವರಿನ್ನೂ ನಮ್ಮ ಪತ್ರಿಕೆಗೆ ಬರೆಯುವ ಮನಸ್ಸು ಮಾಡಿಲ್ಲ. ಬಹುಶ: ಪತ್ರಿಕೆಯ ನಡೆಯನ್ನು ಕಾದುನೋಡುವ ಉದ್ದೇಶವಿದ್ದರೂ ಇರಬಹುದೇನೊ. ಈ ದಿಸೆಯಲ್ಲಿ ಬಹಳಷ್ಟು ಲೇಖಕರನ್ನು ಈಗಾಗಲೇ ಸಂಪರ್ಕಿಸಿ ಬರೆಯಲು ಕೋರಿದ್ದೇನೆ.ಜನಪ್ರಿಯತೆಗಾಗಿ ಸಂಗಾತಿ ತನ್ನಗುಣಮಟ್ಟ ಮತ್ತು ಸ್ವಂತಿಕೆಯನ್ನುಯಾವತ್ತಿಗೂ ಬಿಟ್ಟು ಕೊಡುವುದಿಲ್ಲೆಂದು ಈ ಮೂಲಕ […]

ಕಾವ್ಯಯಾನ

ದಾರಿಯುದ್ದಕ್ಕೂ…… ಮುಗಿಲಕಾವ್ಯ ನೀ ಬರುವ ದಾರಿ ಉದ್ದಕ್ಕೂ ಒಲವಿನ ಹೂ ಹಾಸಿ ಗರಿಗೆದರಿದ ನನ್ನೊಳಗಿನ ಹೃದಯದ ಭಾವಗಳನ್ನು,,, ಒಪ್ಪವಾಗಿ ಜೋಡಿಸಿಕೊಳ್ಳುತ್ತಾ ಕಣ್ಣು ಕೀಲಿಸುತ್ತೇನೆ,, ಹಾದಿಯೂ ಒಮ್ಮೊಮ್ಮೆ ಸಿಟ್ಟಿಗೇಳುತ್ತದೆ ಅಲ್ಲಲ್ಲ ಕರುಬುತ್ತದೆ ನಿನ್ನ ಮೇಲಿನ ನನ್ನೊಲವಿನ ಕಂಡು ಇದರ ಮತ್ಸರ ಎಷ್ಟಿದೆ ಗೊತ್ತಾ? ಬೇಕೆಂತಲೇ ಭಾರವಾಗಿ ದೂರವಾಗಿ ಕ್ಷಣಗಳನ್ನು ಯುಗಗಳಾಗಿ ಮಾಡುತ್ತಾ,,, ಮತ್ತಷ್ಟು ನನ್ನ ಕಾಯಿಸಲು ಶುರುವಿಟ್ಟುಕೊಳ್ಳುತ್ತದೆ ಮೊದಮೊದಲಿಗೆ ನಾನು ಜಿದ್ದಿಗಿಳಿಯುತ್ತೇನೆ ಸೋಲಲಾರೆ ಎಂದೂ ನಿನ್ನ ಕಾಣುವ ತವಕ ಮೂಡಿದಂತೆಲ್ಲಾ ನಾನೇ ನಾನಾಗಿ ಸೋತುಬಿಡುತ್ತೇನೆ; ನಿನ್ನ ಸಂಧಿಸುವ ಗಳಿಗೆಯ […]

ಅನುವಾದ

ಮೂರು ಅನುವಾದಿತ ಗಜಲುಗಳು. ಉತ್ತಮ ಯಲಿಗಾರ ಗಜಲ್-ಒಂದು ಹೆಜ್ಜೆ ಶಬ್ದವೊಂದು ಕೇಳಿಸಿದರೆ ಅನಿಸುವದು ನೀನೆಂದು ನೆರಳೊಂದು ಬಳಿ ಸುಳಿದರೆ ಅನಿಸುವದು ನೀನೆಂದು ಹೂದೋಟದಲಿ ರೆಂಬೆಯೊಂದನು ಮುಟ್ಟಲು ನಾಚಿ ನಲಿದಾಡಿದರೆ ಅನಿಸುವದು ನೀನೆಂದು ಚಂದನದಿ ಸುವಾಸಿತ ಮದಭರಿತ ಗಾಳಿಯು ಅನಂದದಿ ಮೈಸೋಕಲು ಅನಿಸುವದು ನೀನೆಂದು ತಾರೆಗಳ ಮಿನುಗುವ ಹೊದಿಕೆ ಹೊದ್ದುಕೊಂಡು ನದಿಯೊಂದು ಹರಿದಾಡಿದರೆ ಅನಿಸುವದು ನೀನೆಂದು ಸರಿರಾತ್ರಿಯಲಿ ಬಂದು ಒಂದು ಹೊನ್ನ ರಶ್ಮಿ ನನ್ನೊಂದಿಗೆ ಉರುಳಾಡಿದರೆ ಅನಿಸುವದು ನೀನೆಂದು. ಮೂಲ: ಜಾನ್ ನಿಸ್ಸಾರ್ ಅಖತರ್ (ಉರ್ದು) ============================== ಗಜಲ್ […]

Back To Top