Category: ಕಥಾಗುಚ್ಛ

ಕಥಾಗುಚ್ಛ

ನೀನಾರಿಗಾದೆಯೋ

ಸಣ್ಣ ಕಥೆ ನೀನಾರಿಗಾದೆಯೋ ನಾಗರತ್ನ ಎಂ.ಜಿ. ಕಾವ್ ಕಾವ್ ಕಾವ್ ಒಂದೇ ಸಮನೇ ಅರಚುತ್ತಿದ್ದ ಕಾಗೆಗಳ ಕರ್ಕಶ ಕೂಗಿಗೆ ಬೆಳಗಿನ ಝಾವದ ನನ್ನ ಸಕ್ಕರೆ ನಿದ್ದೆಗೆ ಭಂಗ ಬಂತು. ಹೊದಿಕೆಯನ್ನು ಮತ್ತಷ್ಟು ಬಿಗಿಯಾಗಿ ಹೊದ್ದು ಕಿವಿ ಮುಚ್ಚಿ ಮಲಗಲು ಪ್ರಯತ್ನಿಸಿದೆ. ಕಾವ್.. ಕಾವ್…ಇಲ್ಲ ಮಲಗಲು ಬಿಡಲಿಲ್ಲ. ಛೇ ಏನು ಬಂತು ಈ ದರಿದ್ರ ಕಾಗೆಗಳಿಗೆ ಬೆಳ್ಳಂಬೆಳಿಗ್ಗೆ ರೋಗ..ಭಾನುವಾರದ ನಿದ್ದೆ ಹಾಳಾದ ಸಿಟ್ಟಿಗೆ ಹೊದಿಕೆ ಕಿತ್ತು ಬಿಸುಟು ಬಿರ ಬಿರ ಬಾಗಿಲಿಗೆ ಬಂದು ಚಿಲಕ ತೆಗೆದು ಅಂಗಳದಲ್ಲಿ ಕತ್ತು […]

ನಿರಾಕರಣ

ಕಥೆ ನಿರಾಕರಣ ಎಸ್.ನಾಗಶ್ರೀ ರಾಮಕ್ಕನವರು ಅವರ ರೇಷ್ಮೆಸೀರೆಗಳನ್ನೆಲ್ಲಾ ನೆಂಟರಿಷ್ಟರಿಗೆ, ಆಪ್ತರಿಗೆ ಹಂಚಿ ಇನ್ನು ಮೇಲೇನಿದ್ದರೂ ಹತ್ತಿ ಸೀರೆಯಷ್ಟೇ ಉಡುವುದೆಂಬ ನಿರ್ಧಾರ ಪ್ರಕಟಿಸಿದಾಗ ಅವರಿಗೆ ಎಪ್ಪತ್ತೈದಾಗಿತ್ತು. ಹಾಲಿಗೆ ಅರಿಶಿನ ಬೆರೆಸಿದಂತಹ ಮೈಬಣ್ಣ, ಕಡುಗಪ್ಪು ಕಣ್ಣು, ತುಸು ಉದ್ದವಾದ ಮೂಗು, ತುಂಬುದುಟಿ, ಪುಟ್ಟ ಚೆಂಡಿನ ಗಾತ್ರದ ತುರುಬಿನ ರಾಮಕ್ಕ ನೋಡಿದರೆ, ಮತ್ತೆ ತಿರುಗಿ ನೋಡಬೇಕೆನ್ನಿಸುವ ಲಕ್ಷಣವಂತೆ. ಮುತ್ತೈದೆಯಾಗಿದ್ದಾಗಿನ ಕಾಲದಲ್ಲಿ ಮಹಾಲಕ್ಷ್ಮಿಯೇ ಎಂದು ಜನ ಕೈಯೆತ್ತಿ ಮುಗಿಯುತ್ತಿದ್ದರಂತೆ. ಕರಿಮಣಿ ಸರ, ಕಾಲುಂಗುರ ತೆಗೆದರೂ ಚಿನ್ನದ ಸರ, ವಜ್ರದ ಮೂಗುತಿ, ಚಿನ್ನದ ಎರಡೆರಡು […]

ನಿರ್ಧಾರ

ದಿನಗಳೆದಂತೆ ಯೋಗಿಯೊಂದಿಗಿನ ಆತ್ಮೀಯತೆ ವಿನುತಳಲ್ಲಿ ಹೊಸ ಹುರುಪು ಮೂಡಿಸಿತ್ತು.ಯೋಗಿಯು ವಿನುತಳನ್ನು ಅನುರಾಗದ ಭಾವದಿಂದ ನೋಡುತಿದ್ದ.ಇಬ್ಬರಲ್ಲಿ ಮೂಡಿದ ಪ್ರೀತಿ ತೋರ್ಪಡಿಸದಿರಲು ಇಬ್ಬರು ಹೆಣಗುತಿದ್ದರು .ಆದರೆ ಇದರ ಅರಿವು ಮೋದಲಾದದ್ದು ಸುಮಿತ್ರಳಿಗೆ. ವಿನುತ ಜೀವನದಲ್ಲಿ ಮುಂದುವರೆಯುವದು ಸುಮಿತ್ರಳಿಗೆ ಖುಷಿಯ ವಿಷಯವಾಗಿತ್ತು.

ಶಾಂಭವಿ, ಬಣ್ಣ, ಜಾತಿ ಮುಂತಾಗಿ..

ಸಣ್ಣಕಥೆ ಶಾಂಭವಿ, ಬಣ್ಣ, ಜಾತಿ ಮುಂತಾಗಿ.. ಡಾ. ಅರಕಲಗೂಡು ನೀಲಕಂಠ ಮೂರ್ತಿ –01– ಮೊಬೈಲ್  ವಾಟ್ಸ್ಯಾಪ್ ರಿಂಗಾದಾಗ ಸುಮಾರು ರಾತ್ರಿ ಹತ್ತು ಗಂಟೆಯ ಸಮಯ. ಊಟ ಮುಗಿಸಿ, ಪಾತ್ರೆ ತೊಳೆಯುವುದು ಇನ್ನೂ ಬಾಕಿ. ಅಷ್ಟರಲ್ಲಿ ಫೋನ್. ಉದ್ದ ರಿಂಗ್ ಆದಾಗಲೇ ಬಹುಶಃ ಇದು ಭಾರತದ್ದಲ್ಲ ಅನ್ನಿಸಿತು. ನಿರಂಜನ್ ತಮ್ಮ ಆಫೀಸಿನ ಫೈಲ್ ಹಿಡಿದು ಮಗ್ನರಾಗಿದ್ದರು. ಇಂತಹ ಫೋನ್ ಕಾಲ್ ಗಳು ಬರುವುದೇ ಅವರಿಗೆ. ಹಾಗಿದ್ದರೂ ಸುಮ್ಮನೆ ಫೈಲೊಳಗೇ ಇಳಿದಿದ್ದಾರೆ. ನಾನು ಕಿಚನ್ನಿನಲ್ಲಿದ್ದೇನೆ, ಹಾಲ್ನಲ್ಲಲ್ಲ, ಅಂತ ಅರಿತೂ ಸಹ. […]

ಜೂನಿಯರ್ಸ್

ತಾಯಿಯ ಅನಾರೋಗ್ಯದ ಆತಂಕ, ಅನುಭವೀ ಗುಮಾಸ್ತರ ಅಮಾನುಷ ವರ್ತನೆಯಿ೦ದ ರೋಷಗೊಂಡ ನಾನು ಬದಲು ಮಾತನಾಡದೆ ಅರ್ಜಿಯನ್ನು ಅವರ ಮುಂದಿಟ್ಟು ನಿರ್ಗಮಿಸಬೇಕೆನ್ನುವಾಗ ಇಲಾಖೆಯಲ್ಲಿ ೧೫ ವರ್ಷ ಹಳಬರಾದ ಮಹಿಳೆಯೊಬ್ಬರು ರಜಾ ಅರ್ಜಿಯೊಂದಿಗೆ ಹಾಜರಾದರು. ಅವರನ್ನು ಕಂಡ ಕೂಡಲೇ ನಾಟಕೀಯ ವಾಗಿ ನಗುತ್ತ “ಏನ್ ಮೇಡಂ ಏನಾಗಬೇಕಿತ್ತು’ ಎಂದು ವಿನೀತನಾಗಿ ಕೇಳಿದ ಅವರನ್ನು ನೋಡಿ ಈಗ ತಾನೇ ಮಾನವೀಯತೆ ಇಲ್ಲದ ಗುರುಗುಟ್ಟಿದ ಮನುಷ್ಯ ಈತನೇನ ಅನ್ನಿಸಿತು.

ಇಳಿ ಸಂಜೆ

ಕಲ್ಲ ಬೆಂಚಿನ ಮೇಲೆ ಕೂತು ಪಾರ್ಕ್ ನಲ್ಲಿ ಆಡುತ್ತಿದ್ದ ಮಕ್ಕಳತ್ತ ನೋಡುತ್ತಿದ್ದರು. ಆ ಮಕ್ಕಳು ತಮ್ಮ ಅಜ್ಜ – ಅಜ್ಜಿಯರೊಂದಿಗೆ ಅಲ್ಲಿಗೆ ಬರುತ್ತಿದ್ದರು. ಅವರೆಲ್ಲರ ಇಳಿ ವಯಸ್ಸಿಗೆ ಮೊಮ್ಮಕ್ಕಳು ಮುಲಾಮುಗಳಾದರೆ, ನನಗೆ ಪಾರ್ವತಿ-ಪಾರ್ವತಿಗೆ ನಾನು ಔಷಧಿ ಎಂದುಕೊಂಡು ತಣ್ಣಗೆ ನಕ್ಕರು ರಾಯರು.

“ತುಂಡು ಭೂಮಿ ಮತ್ತು ಬುದ್ಧ”

ಶ್ಯಾಮೇಗೌಡರು ಮನೆಯ ಚಾವಡಿ ತಲುಪಿದಾಗ ಅವರ ದೊಡ್ಡ ಮೊಮ್ಮಗ ಶಾಲೆಯ ಪಠ್ಯಪುಸ್ತಕ ಹಿಡಿದುಕೊಂಡು ಬುದ್ಧನ ಬೋಧನೆಗಳನ್ನು ಜೋರಾಗಿ ಉರುಹೊಡೆಯುತ್ತಿದ್ದ- “ಇತರರನ್ನು ಕ್ಷಮಿಸಬೇಕಾದದ್ದು ಅವರು ಕ್ಷಮೆಗೆ ಅರ್ಹರೆಂಬ ಕಾರಣಕ್ಕಾಗಿ ಅಲ್ಲ; ನೀವು ಶಾಂತಿಗೆ ಅರ್ಹರೆಂಬ ಕಾರಣಕ್ಕಾಗಿ…..”

ಸಭೆಯಿಂದ ಹೊರಹೋಗುತ್ತಿದ್ದ ಹೆಂಗಸರಿಬ್ಬರು ” ಗಂಡ, ಮನೆ,ಮಕ್ಕಳು, ಸಂಸಾರ ಅಂತ ಕಟ್ಟಿಕೊಂಡು ನಮ್ಮ ಹಾಗೆ ಏಗುವವರಿಗೆ ಕಥೆಕವಿತೆ ಬರೆಯುವ ಪುರುಸೊತ್ತಾದ್ರೂ ಎಲ್ಲಿರುತ್ತೆ? ಬಣ್ಣದ ಬೀಸಣಿಕೆಯಂತೆ ಬಳುಕುತ್ತಾ, ಅತ್ತೆ ಮಾವನಿಗೆ ಮನೆ ಚಾಕರಿ ಹಚ್ಚಿ ಝಂ ಅಂತ ಓಡಾಡಿಕೊಂಡಿರೋವ್ರು ಒಂದಲ್ಲ ನೂರು ಪುಸ್ತಕ ಬರೀತಾರೆ…

ಚೇರ್ಮನ್ ಸೋಮಯ್ಯ

ಯಾರು ಏನೇ ಹೇಳಲಿ ಸೋಮಯ್ಯ ಪಕ್ಷಾತೀತ ರಾಜಕಾರಣಿ. ಅವನಿಗೆ ಪಕ್ಷರಾಜಕಾರಣದಲ್ಲಿ ನಂಬಿಕೆ ಇಲ್ಲ. ಯಾವುದೋ ಪಕ್ಷದವರು ಸೇರಿಸಿಕೊಂಡರೆ ನಂಬಿಕೆ ಬರುತ್ತಿತ್ತೋ ಏನೋ. ಪಾಪ ಇವನದೇನು ತಪ್ಪು. ಇವನ ಮೇಲೆ ವಿಶ್ವಾಸ ಇಡುವ ಅರ್ಹತೆ ಯಾವ ಪಕ್ಷದವರಿಗಿದೆ? ಮತ್ತೊಂದು, ಇವನಿಂದ ಆಗುವ ಲಾಭವಾದರೂ ಏನು?

ರಾಧೆಗೆ

ಆದರೆ ಹೃದಯದ ಈ ಕುದಿತದೊಂದಿಗೆ ಏಕಾಂಗಿಯಾಗಿರುವ ನನಗೆ ಈ ಒತ್ತಡವನ್ನು ಹಂಚಿಕೊಳ್ಳಬಲ್ಲ ಸಖಿ, ಸಂಗಾತಿ ನೀನಲ್ಲದೇ ಇನ್ನಾರಾಗಲು ಸಾಧ್ಯ ?

Back To Top