Category: ರಹಮತ್ ತರೀಕೆರೆ ಬರೆಯುತ್ತಾರೆ

ಅಂಕಣ ಬರಹ-14 `ಸಣ್ಣ’ಸಂಗತಿ ನರಸಿಂಹಸ್ವಾಮಿಯವರ ಪುಟ್ಟ ಕವಿತೆಯೊಂದಿದೆ-ಹೆಸರು `ಸಣ್ಣಸಂಗತಿ’. ಅದು ಸಾಹಿತ್ಯ ವಿಮರ್ಶೆಯಲ್ಲಿ ಶ್ರೇಷ್ಠ ಕವನವೆಂದೇನೂ ಚರ್ಚೆಗೊಳಗಾಗಿಲ್ಲ. ಆದರೆ ಮತ್ತೆಮತ್ತೆ ಕಾಡುತ್ತದೆ. ಅದರ ವಸ್ತು ತಾಯೊಬ್ಬಳ ದುಡಿತ. ಅಲ್ಲೊಂದು ಸನ್ನಿವೇಶವಿದೆ: ನಡುರಾತ್ರಿ. ಕುಟುಂಬದ ಸಮಸ್ತ ಸದಸ್ಯರೂ ಗಾಢನಿದ್ದೆಯಲ್ಲಿದ್ದಾರೆ. ಅವರಲ್ಲಿ ಎಳೆಗೂಸಿನ ತಾಯಿಯೂ ಸೇರಿದ್ದಾಳೆ. ಆಕೆಯ ಮಂಚದ ಪಕ್ಕದಲ್ಲಿರುವ ತೊಟ್ಟಿಲಲ್ಲಿ ಕೂಸಿದೆ. ಅದು ಗಾಳಿಯಲ್ಲಿ ಕಾಲು ಅಲುಗಿಸುತ್ತ ಹೊದಿಕೆಯನ್ನು ಕಿತ್ತೆಸೆಯುತ್ತಿದೆ. ಎಲ್ಲರಂತೆ ಆಕೆಯೂ ನಿದ್ದೆಯಲ್ಲಿ ಮುಳುಗಿರುವಳು. ಆದರೆ ಅವಳ ಕೈ ಮಗುವಿನ ಹೊದಿಕೆಯನ್ನು ಸರಿಪಡಿಸುತ್ತಿದೆ. `ನಿದ್ದೆ ಎಚ್ಚರಗಳಲಿ ಪೊರೆವ […]

ಅಂಕಣ ಬರಹ  ದುಗುಡದ ನೆನಪು (ಕಲಬುರ್ಗಿಯವರು ಕೊಲೆಯಾದಾಗ ಬರೆದ ಬರೆಹ) ಕರ್ನಾಟಕ ವಿಶ್ವವಿದ್ಯಾಲಯದ ಶ್ರೇಷ್ಠ ಅಧ್ಯಾಪಕರಲ್ಲಿ ಎಂ.ಎಂ.ಕಲಬುರ್ಗಿಯವರೂ ಒಬ್ಬರೆಂದು ಅವರ ಶಿಷ್ಯರ ಮೂಲಕ ಕೇಳುತ್ತಿದ್ದೆವು. ಅವರ ಸಂಶೋಧನ ಬರೆಹಗಳಲ್ಲಿ ವ್ಯಾಪಕ ಅಧ್ಯಯನ ಮತ್ತು ಆಳವಾದ ವಿದ್ವತ್ತಿರುವುದೂ ತಿಳಿದಿತ್ತು. ಆದರೆ ಅವರ ವೈಯಕ್ತಿಕ ಒಡನಾಟವಿರಲಿಲ್ಲ. ನನಗೆ ಈ ಒಡನಾಟವು ಮೊದಲ ಸಲ ಒದಗಿದ್ದು ನನ್ನ ಪಿಎಚ್.ಡಿ., ಪ್ರಬಂಧದ ಮೌಲ್ಯಮಾಪಕರಾಗಿ ಅವರು ಮೌಖಿಕ ಪರೀಕ್ಷೆಗೆ ಬಂದಾಗ. 1987ರಲ್ಲಿ. ಪ್ರಬಂಧದಲ್ಲಿ ವಚನಸಾಹಿತ್ಯದ ಮೇಲೆ ನಾನು ಮಾಡಿದ್ದ `ಸೋಲು’ ಎಂಬ ಟೀಕೆಯ ವಿಷಯದಲ್ಲಿ […]

ಅಂಕಣ ಬರಹ ವೃದ್ಧಾಶ್ರಮ ಅಥಶ್ರೀ ಒಮ್ಮೆ ಕನ್ನಡದ ಸುದ್ದಿಮಾಧ್ಯಮಗಳು, ಹಿರಿಯ ರಂಗನಟರೊಬ್ಬರ ಹೆಂಡತಿ ವೃದ್ಧಾಶ್ರಮದಲ್ಲಿದ್ದಾರೆ ಎನ್ನುವುದನ್ನು ದೊಡ್ಡದಾಗಿ ವರದಿ ಮಾಡಿದವು. ಕೆಲವು ವರದಿಗಳಲ್ಲಿ `ಇದೊಂದು ಶೋಚನೀಯ ಸಂಗತಿ’ ಎಂಬ ದನಿಯಿರಲಿಲ್ಲ. ಇದಕ್ಕೆ ತಕ್ಕಂತೆ ಆ ಮಹಿಳೆ ಕೂಡ `ಕುಟುಂಬದವರು ಬೀದಿಪಾಲು ಮಾಡಿದರು’ ಎಂದೂ ಹೇಳಲಿಲ್ಲ. ವೃದ್ಧಾಶ್ರಮಕ್ಕೆ ಬರಲು ಕಾರಣವಾದ ಸನ್ನಿವೇಶವನ್ನು ಯಾರಮೇಲೂ ಆರೋಪ ಮಾಡದಂತೆ ಘನತೆಯಿಂದ ವಿವರಿಸಿದರು. ಆದರೂ ವ್ಯಕ್ತಿಗಳ ಖಾಸಗಿ ಬದುಕಿನ ವಿಷಯವನ್ನು ಮಾಧ್ಯಮಗಳು ನೈತಿಕ ರಕ್ಷಕರಂತೆ ಸಾರ್ವಜನಿಕ ಚರ್ಚೆಯ ವಿಷಯವನ್ನಾಗಿ ಮಾಡುವ ಚಾಳಿ ಹೆಚ್ಚುತ್ತಿದೆ. […]

ಅಂಕಣ ಬರಹ ನೈಸು-ಬಿರುಸು ಒಮ್ಮೆ ತೊಗಲುಬೊಂಬೆ ಕಲಾವಿದರಾದ ಬೆಳಗಲ್ಲು ವೀರಣ್ಣನವರ ಜತೆಗೆ ಮಾತಾಡುತ್ತ ಕುಳಿತಿದ್ದೆ. ಮಾತುಕತೆ ನಡುವೆ ಅವರ ಮನೆಯಿಂದ ಫೋನುಕರೆ ಬಂತು. ಅವರು ಎತ್ತಿಕೊಂಡು ಮರಾಠಿಯಲ್ಲಿ ಮಾತಾಡಿದರು. ಮಾತು ಮುಗಿದ ಬಳಿಕ ನನ್ನತ್ತ ಹುಳ್ಳಗೆ ನೋಡಿ `ನಮ್ಮದು ಒರಟು ಮರಾಠಿ’ ಎಂದರು. ಉತ್ತರ ಕರ್ನಾಟಕದ ತಿರುಗಾಟದಲ್ಲಿ ಕೆಲವರು ನನ್ನ ಕನ್ನಡಕ್ಕೆ `ನಿಮ್ಮ ಮಾತು ನೈಸು. ನಮ್ಮದು ಬಿರುಸು’ ಎಂದು ಪ್ರತಿಕ್ರಿಯಿಸುವುದುಂಟು. ವಿಚಾರಿಸಿ ನೋಡಿದರೆ, ಬಿರುಸೆಂದು ಭಾವಿಸಿದವರ ಮಾತಲ್ಲಿ ಆಡುಮಾತಿನ ಪ್ರಾದೇಶಿಕ ರೂಪಗಳು ಹೆಚ್ಚ್ಚಿರುತ್ತವೆ, ನೈಸೆಂದು ಕರೆಯಲಾಗುವ […]

ಅಂಕಣ ಬರಹ ಸಂತೆಯ ಗೌಜು ತರೀಕೆರೆಯಲ್ಲಿ ಸಂತೆ ಸೇರುವ ಜಾಗಕ್ಕೆ ಸಮೀಪದಲ್ಲಿ ನಮ್ಮ ಮನೆಯಿತ್ತು. ಪ್ರತಿ ಶುಕ್ರವಾರ ಎಬ್ಬಿಸುತ್ತಿದ್ದುದು ಮಸೀದಿಯ ಬಾಂಗಲ್ಲ, ಗುಡಿಯ ಸುಪ್ರಭಾತವಲ್ಲ, ಸಂತೆಗೌಜು. ಇಂಪಾದ ಆ ಗುಜುಗುಜು ನಾದ ಭಾವಕೋಶದಲ್ಲಿ ಈಗಲೂ ಉಳಿದಿದೆ. ಎಂತಲೇ ನನಗೆ ‘ಸಂತೆಯೊಳಗೊಂದು ಮನೆಯ ಮಾಡಿ’ ವಚನ ಓದುವಾಗ ಕೆಣಕಿದಂತಾಗುತ್ತದೆ. ಅಕ್ಕ ‘ಶಬ್ದಕ್ಕೆ ನಾಚಿದೊಡೆ ಎಂತಯ್ಯಾ?’ ಎಂದು ಪ್ರಶ್ನಿಸುತ್ತಾಳೆ. ಉತ್ತರ ಪ್ರಶ್ನೆಯೊಳಗೇ ಇದೆ-ನಾವು ಬದುಕುವ ಲೋಕಪರಿಸರ ಸಂತೆಯಂತಿದೆ; ಅಲ್ಲಿ ಸದ್ದಿರುವುದು ಸಹಜವೆಂದು. ಹಾಗಾದರೆ ಈ ಕಿರಿಕಿರಿಗೆ ಪರಿಹಾರ, ಸದ್ದಿರದ ಕಡೆ […]

ಅಂಕಣ ಬರಹ ಗಂಗಾವತಿಯ `ಜಜ್ಬ್’ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಉರ್ದು ಪಂಡಿತರ ಪಡೆಯೊಂದು ಈಚಿನವರೆಗೂ ಇತ್ತು. ನಿಜಾಂ ಸಂಸ್ಥಾನದಲ್ಲಿ ಉರ್ದು ಆಡಳಿತ ಹಾಗೂ ಶಿಕ್ಷಣದ ಭಾಷೆಯಾಗಿದ್ದು, ಸಹಜವಾಗಿಯೇ ಈ ಭಾಗದ ಎಲ್ಲ ಜಾತಿಮತಗಳ ಜನ ಉರ್ದುವಿನಲ್ಲಿ ಶಿಕ್ಷಣ ಪಡೆದರು. ಅವರಲ್ಲಿ ಕೆಲವರು ಆಡಳಿತಾತ್ಮಕ ಉರ್ದುವಿನಲ್ಲಿ ವಿಶೇಷ ಪರಿಣತಿ ಪಡೆದುಕೊಂಡರು. 1948ರಲ್ಲಿ ಸಂಸ್ಥಾನವು ಭಾರತ ಒಕ್ಕೂಟದಲ್ಲಿ ವಿಲೀನಗೊಂಡಿತು. ಹಳೇ ಗುಲಬರ್ಗ ಬೀದರ್ ರಾಯಚೂರು ಜಿಲ್ಲೆಗಳು ಏಕೀಕೃತ ಕರ್ನಾಟಕದ ನಕ್ಷೆಯೊಳಗೆ ಬಂದವು. ಈ ರಾಜಕೀಯ ಪಲ್ಲಟವು ಉರ್ದು ಪಂಡಿತರನ್ನು ಇದ್ದಕ್ಕಿದ್ದಂತೆ […]

ಮನೆಖರೀದಿ ಪತ್ರ 2009ನೇ ಇಸವಿ. ಹೆಸರಾಂತ ರಿವಾಯತ್ ಗಾಯಕರಾದ ಕದರಮಂಡಲಗಿ ಅಲ್ಲಾಬಕ್ಷರ ಭೇಟಿ ಮುಗಿಸಿಕೊಂಡು, ಬ್ಯಾಡಗಿಯಿಂದ ಹಂಪಿಗೆ ಹಿಂತಿರುಗುತ್ತಿದ್ದೆ. ದಾರಿಯಲ್ಲಿ ಬಳ್ಳಾರಿ ಜಿಲ್ಲೆ ಪ್ರವೇಶಿಸುವಾಗ ಹಾವೇರಿ ಜಿಲ್ಲೆಯ ಕೊನೆಯ ಊರು ಗುತ್ತಲ ಸಿಕ್ಕಿತು. ಅಲ್ಲೊಬ್ಬ ಗಾಯಕ ಇದ್ದಾನೆಂದು ತಿಳಿದು ಹುಡುಕಿಕೊಂಡು ಹೊರಟೆ. ಹೆಸರು ಗೌಸ್‍ಸಾಬ್ ಹಾಲಗಿ. ಗೌಸ್‍ಸಾಬರು ಮನೆಯೊಂದರ ಜಗುಲಿಕಟ್ಟೆಯ ಮೇಲೆ ಕುಳಿತು ಮನೆಖರೀದಿ ಪತ್ರ ಬರೆಯುತ್ತಿದ್ದರು. ಈ ಕೆಲಸಕ್ಕೆ ರೆವಿನ್ಯೊ ಇಲಾಖೆಯಲ್ಲಿ `ಬಿಕ್ಕಲಂ’ ಎನ್ನುವರು. ಪ್ರಾಮಿಸರಿ ನೋಟಿನ ಬರೆಹ ಮುಗಿದ ಬಳಿಕ ಅವರಿಂದ ರಿವಾಯತ್ ಹಾಡನ್ನೂ […]

ಅಂಕಣ ಬರಹ ಸಂಗಾತಿಯ ಮೌನ ಪಂಡಿತ್ ರವಿಶಂಕರ್ ನಿಧನರಾದಾಗ ಅವರ ಸಂಗೀತ ಪ್ರತಿಭೆ, ಪ್ರಯೋಗಶೀಲತೆ, ಪ್ರಶಸ್ತಿಗಳನ್ನು ಮೆಚ್ಚುವ ಬರೆಹಗಳು ಪ್ರಕಟವಾದವು. ಕೆಲವು ಪತ್ರಿಕೆಗಳು ಮಾತ್ರ ಅವರ ಖಾಸಗಿ ಬದುಕಿನ ಬಗ್ಗೆ ಬರೆದವು. ಅಲ್ಲಿ ಅವರ ಪ್ರೇಯಸಿಯರ, ಮಡದಿಯರ ಹಾಗೂ ವಿಚ್ಛೇದನಗಳನ್ನು ಕುರಿತ ಮಾಹಿತಿಯಿತ್ತು. ಈ ಲೇಖನಗಳಿಗೆ ರವಿಶಂಕರ್ ಅವರನ್ನು ಬದನಾಮಿ ಮಾಡುವ ಇರಾದೆ ಏನಿರಲಿಲ್ಲ. ಹೆಸರಾಂತ ಕಲಾವಿದರು ವೈಯಕ್ತಿಕ ಜೀವನದಲ್ಲಿ ತಮ್ಮ ಸಂಗಾತಿಗಳನ್ನು ನಡೆಸಿಕೊಂಡ ವಿಶ್ಲೇಷಣೆಯಿತ್ತು. ಇವುಗಳಲ್ಲಿ ರವಿಶಂಕರರ ಮೊದಲ ಪತ್ನಿಯೂ ಗುರು ಉಸ್ತಾದ್ ಅಲ್ಲಾವುದ್ದೀನಖಾನರ ಪುತ್ರಿಯೂ […]

ಅಂಕಣ ಬರಹ ಸರಳತೆಯ ಘನತೆ ನಾನು ಭೇಟಿಮಾಡಿದ ಅಪರೂಪದ ವ್ಯಕ್ತಿಗಳಲ್ಲಿ ಬನ್ನೂರು ನಿವಾಸಿ ಅದೀಬ್ ಅಖ್ತರ್ ಅವರೂ ಒಬ್ಬರು. ಅದೀಬರ ಲಘು ಬರೆಹಗಳನ್ನು ಪತ್ರಿಕೆಗಳಲ್ಲಿ ಓದಿದ್ದೆ. ಒಂದು ಲೇಖನದಲ್ಲಿ ಅವರು ತಾನೊಬ್ಬ ಉರ್ದು ಮಾಧ್ಯಮದ ವಿದ್ಯಾರ್ಥಿಯೆಂದೂ, ನಡುಪ್ರಾಯದಲ್ಲಿ ಕನ್ನಡ ಕಲಿತು ಬರೆಯಲು ಆರಂಭಿಸಿದವನೆಂದೂ ಹೇಳಿಕೊಂಡಿದ್ದರು. ಇದು ಕುತೂಹಲ ಹುಟ್ಟಿಸಿತು. ಅವರೂ ನನ್ನನ್ನು ನೋಡಬಯಸಿ ಪತ್ರ ಬರೆದರು. ಅಂಗಡಿ ಬಿಟ್ಟು ಹೋಗಲು ಸಾಧ್ಯವಾಗದೆ ಇರುವುದರಿಂದ ನಾನೇ ಬರಬೇಕೆಂದು ತಿಳಿಸಿದ್ದರು. ಬನ್ನೂರಿಗೆ ಹೋದೆ. ಅದೀಬರ ವಿಳಾಸ ಬಹಳ ಸುಲಭ- ಬಸ್ಸುನಿಲ್ದಾಣ […]

ಯಾಕೀ ಪುನರುಕ್ತಿ? ಅಭಿಮಾನಿ ಓದುಗರೊಬ್ಬರು ಪತ್ರ ಬರೆದು ತಮ್ಮ ಪ್ರತಿಕ್ರಿಯೆ ತಿಳಿಸಲು ನನ್ನ ಫೋನ್ ನಂಬರ್ ಕೇಳಿದರು. ಕೊಟ್ಟದ್ದು ತಪ್ಪಾಯಿತು. ಅವರು ಯಾವಾಗೆಂದರೆ ಆವಾಗ ಸಣ್ಣಸಣ್ಣ ವಿಚಾರಕ್ಕೆಲ್ಲ ಕರೆಯಲಾರಂಭಿಸಿದರು. ಪ್ರತಿಸಲವೂ ಅರ್ಧ ತಾಸು ಕಮ್ಮಿಯಿಲ್ಲದ ಮಾತು. ನಿಜವಾದ ಸಮಸ್ಯೆ ಸಮಯದ್ದಾಗಿರಲಿಲ್ಲ. ಅವರು ಒಂದೇ ಅಭಿಪ್ರಾಯವನ್ನು ಬೇರೆಬೇರೆ ಮಾತುಗಳಲ್ಲಿ ಹೇಳುತ್ತಿದ್ದರು. ಸೂಚ್ಯವಾಗಿ ಹೇಳಿನೋಡಿದೆ. ಮುಟ್ಟಿದಂತೆ ಕಾಣಲಿಲ್ಲ. ಫೋನು ಎತ್ತಿಕೊಳ್ಳುವುದನ್ನು ನಿಲ್ಲಿಸಿದೆ. ಕಡೆಗೆ ನಂಬರ್ ಬ್ಲಾಕ್ ಮಾಡಬೇಕಾಯಿತು. ಮತ್ತೊಬ್ಬ ನಿವೃತ್ತ ಶಿಕ್ಷಕರು ಸಜ್ಜನರು ಹಾಗೂ ಶಿಷ್ಯವತ್ಸಲರು. ಹಿಂದೆಂದೊ ನಡೆದದ್ದನ್ನು ಇಸವಿ […]

Back To Top